• About
  • Advertise
  • Careers
  • Contact
Saturday, May 17, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ರಕ್ಷಾ ರಾಮಯ್ಯಗೆ ಟಿಕೆಟ್ ಸಿಕ್ಕಿದ್ದು ಹೇಗೆ? ಮೊಯಿಲಿಗೆ ತಪ್ಪಿದ್ದು ಯಾಕೆ?

cknewsnow desk by cknewsnow desk
March 31, 2024
in EDITORS'S PICKS, ELECTION, ELECTION2024, NATION, STATE
Reading Time: 3 mins read
0
ರಕ್ಷಾ ರಾಮಯ್ಯಗೆ ಟಿಕೆಟ್ ಸಿಕ್ಕಿದ್ದು ಹೇಗೆ? ಮೊಯಿಲಿಗೆ ತಪ್ಪಿದ್ದು ಯಾಕೆ?
1.2k
VIEWS
FacebookTwitterWhatsuplinkedinEmail

ಎಲ್ಲರಿಗಿಂತ ರಕ್ಷಾಗೇ ಟಿಕೆಟ್ ಗ್ಯಾರಂಟಿ ಎಂದು ಬರೆದಿತ್ತು ಸಿಕೆನ್ಯೂಸ್ ನೌ

ಬೆಂಗಳೂರು/ನವದೆಹಲಿ: ಕೊನೆಗೂ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಘೋಷಣೆ ಆಗಿದ್ದು, ಮಾಜಿ ಶಾಸಕ ಎಂ.ಆರ್.ಸೀತಾರಾಂ ಅವರ ಪುತ್ರ ರಕ್ಷಾ ರಾಮಯ್ಯ ಅವರನ್ನು ಅಭ್ಯರ್ಥಿ ಮಾಡಿದೆ.

ಬಲಿಜಿಗ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್ ಕೊಟ್ಟಿದ್ದು, ಬಿಜೆಪಿ ಒಕ್ಕಲಿಗ ಸಮುದಾಯದ ಡಾ.ಕೆ.ಸುಧಾಕರ್ ಅವರನ್ನು ಕಣಕ್ಕೆ ಇಳಿಸಿದೆ.

ಸೆಪ್ಟೆಂಬರ್ 16ರಂದೇ ಸಿಕೆನ್ಯೂಸ್ ನೌ ವರದಿ ಮಾಡಿ, ರಕ್ಷಾ ರಾಮಯ್ಯ ಅವರಿಗೆ ಕಾಂಗ್ರೆಸ್ ಟಿಕೆಟ್ ಗ್ಯಾರಂಟಿ ಎಂದು ವರದಿ ಮಾಡಿತ್ತು.

ಲೋಕಸಭೆ ಚುನಾವಣೆ; ಚಿಕ್ಕಬಳ್ಳಾಪುರಕ್ಕೆ ರಕ್ಷಾ ರಾಮಯ್ಯ ಗ್ಯಾರಂಟಿ

ಕೊನೆ ಕ್ಷಣದವರೆಗೂ ಟಿಕೆಟ್ ಗಾಗಿ ಶತಾಯ ಗತಾಯ ಪ್ರಯತ್ನ ಮಾಡಿದ್ದ ಕೇಂದ್ರದ ಮಾಜಿ ಸಚಿವರು, ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿ ಅವರಿಗೆ ಅವಕಾಶ ಸಿಕ್ಕಿಲ್ಲ.

ಸ್ಥಳೀಯ ನಾಯಕರ ತೀವ್ರ ವಿರೋಧದ ನಡುವೆಯೂ ರಕ್ಷಾ ರಾಮಯ್ಯ ಅವರನ್ನು ಕಾಂಗ್ರೆಸ್ ಕಣಕ್ಕೆ ಇಳಿಸುತ್ತಿದ್ದು, ಮಾಜಿ ಸಚಿವ ಡಾ.ಕೆ.ಸುಧಾಕರ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದೆ.

ಕ್ಷೇತ್ರದಲ್ಲಿರುವ 1.80 ಲಕ್ಷಕ್ಕೂ ಹೆಚ್ಚು ಬಲಜಿಗ ಸಮುದಾಯದ ಮತಗಳನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಕಾಂಗ್ರೆಸ್ ಪಕ್ಷವು ರಕ್ಷಾ ರಾಮಯ್ಯ ಅವರನ್ನು ಹುರಿಯಾಳು ಮಾಡಿದೆ.

ಈ ನಡುವೆ ವೀರಪ್ಪ ಮೊಯಿಲಿ ಅವರಿಗೆ ಟಿಕೆಟ್ ತಪ್ಪಿದ್ದು ಏಕೆ ಎಂಬ ಬಗ್ಗೆ ಕ್ಷೇತ್ರದಲ್ಲಿ ವ್ಯಾಪಕ ಚರ್ಚೆ ಆಗುತ್ತಿದ್ದು, ಮೊಯಿಲಿ ಬೆಂಬಲಿಗರು ನೇರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕಡೆ ಬೊಟ್ಟು ಮಾಡುತ್ತಿದ್ದಾರೆ. ಇವರಿಬ್ಬರೇ ಮೊಯಿಲಿ ಅವರಿಗೆ ಟಿಕೆಟ್ ತಪ್ಪಲು ಕಾರಣ ಎಂದು ಅವರು ದೂರುತ್ತಿದ್ದಾರೆ.

ಹೈಕಮಾಂಡ್ ವಲಯದಲ್ಲಿ ಭಾರೀ ಪ್ರಭಾವಿ ಆಗಿರುವ ಮೊಯಿಲಿ ಅವರಿಗೆ ಟಿಕೆಟ್ ತಪ್ಪಿದ್ದು ಕೆಪಿಸಿಸಿ ಕಡೆಯೂ ಅಚ್ಚರಿ ಉಂಟಾಗಿದೆ. ಆದರೆ, ಕ್ಷೇತ್ರಕ್ಕೆ ಸಂಸದರಾಗಿ, ಕೇಂದ್ರ ಸಚಿವರಾಗಿ ಅವರು ಕೊಟ್ಟ ಕೊಡುಗೆ ಶೂನ್ಯ ಎಂದು ಕ್ಷೇತ್ರದ ಜನರಷ್ಟೇ ಅಲ್ಲ, ಕಾಂಗ್ರೆಸ್ ನಾಯಕರು ಕೂಡ ಹೇಳುವ ಮಾತು.

ಚಿಕ್ಕಬಳ್ಳಾಪುರ ಟಿಕೆಟ್ ಫೈನಲ್ ಮಾಡಿರುವ ಕಾಂಗ್ರೆಸ್, ನೆರೆಯ ಕೋಲಾರ ಕ್ಷೇತ್ರದ ಅಭ್ಯರ್ಥಿಯನ್ನು ಬಾಕಿ ಇಟ್ಟುಕೊಂಡಿದೆ. ಮೀಸಲು ಕ್ಷೇತ್ರವಾದ ಕೋಲಾರದಲ್ಲಿ ಎಡ ಬಲದ ಸುಳಿಗೆ ಸಿಕ್ಕಿಬಿದ್ದಿರುವ ಕೈ ಪಕ್ಷ, ಯಾರಿಗೆ ಟಿಕೆಟ್ ಎನ್ನುವುದನ್ನು ಇನ್ನೂ ಅಂತಿಮಗೊಳಿಸಿಲ್ಲ.

ಅದರೆ, ನಿನ್ನೆ ತಡರಾತ್ರಿ ಬಂದ ಪಟ್ಟಿಯಲ್ಲಿ ಬಳ್ಳಾರಿ ಮೀಸಲು ಕ್ಷೇತ್ರಕ್ಕೆ ಇ.ತುಕಾರಾಂ ಅವರಿಗೆ, ಚಾಮರಾಜನಗರ ಮೀಸಲು ಕ್ಷೇತ್ರಕ್ಕೆ ಸಚಿವ ಹೆಚ್.ಸಿ.ಮಹಾದೇವಪ್ಪ ಅವರ ಪುತ್ರ ಸುನೀಲ್ ಬೋಸ್ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ.

ಮೀಸಲು ಕ್ಷೇತ್ರಗಳೇ ಕಾಂಗ್ರೆಸ್ ಗೆ ಕಗ್ಗಂಟು

ರಾಜ್ಯದ ಮೀಸಲು ಕ್ಷೇತ್ರಗಳೇ ಕಾಂಗ್ರೆಸ್ ಪಕ್ಷಕ್ಕೆ ಕಗ್ಗಂಟಾಗಿದ್ದು ವಿಪರ್ಯಾಸ. ಕಳೆದ ಎಪ್ಪತ್ತೈದು ವರ್ಷಗಳಿಂದ ದಲಿತರನ್ನು ಕೂಡ ಮತ ಬ್ಯಾಂಕ್ ಮಾಡಿಕೊಂಡಿರುವ ಆ ಪಕ್ಷಕ್ಕೆ ಈಗ ಮೀಸಲು ಕ್ಷೇತ್ರಗಳೇ ಸಮಸ್ಯೆ ಆಗಿದ್ದು ವಿಪರ್ಯಾಸ.

ಕೋಲಾರ ಕ್ಷೇತ್ರದ ಅಭ್ಯರ್ಥಿ ಕಗ್ಗಂಟು ಕಾಂಗ್ರೆಸ್ ಪಕ್ಷವನ್ನು ಬೀದಿಗೆ ತಂದು ನಿಲ್ಲಿಸಿದೆ. ಅಲ್ಲಿನ ಬಣಗಳ ರಾಜಕೀಯ ವರಿಷ್ಠರಿಗೆ ಬಿಡಿಸಲಾಗದ ಕಗ್ಗಂಟಾಗಿದೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಸಚಿವ ಕೆ.ಹೆಚ್.ಮುನಿಯಪ್ಪ ಅವರ ನಡುವಿನ ಜಿದ್ದಾಜಿದ್ದಿ ಜಿಲ್ಲಾ ಕಾಂಗ್ರೆಸ್ ಅನ್ನು ವಿಭಜನೆ ಮಾಡಿದೆ.

ಚಾಮರಾಜನಗರ ಮೀಸಲು (ಎಸ್ಸಿ) ಕ್ಷೇತ್ರವು ಟಿಕೆಟ್ ಜಿದ್ದಾಜಿದ್ದಿಗೆ ಸಾಕ್ಷಿ ಆಗಿತ್ತು. ಸಚಿವ ಮಹದೇವಪ್ಪ ಅವರನ್ನೇ ಕಣಕ್ಕೆ ಇಳಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿಕೆಶಿ ಅವರು ಶತಾಯ ಗತಾಯ ಪ್ರಯತ್ನ ಮಾಡಿದ್ದರು. ಆದರೆ, ಡಿಸಿಎಂ ಅವರಿಗೇ ಟಕ್ಕರ್ ಕೊಟ್ಟ ಅವರು ತಮ್ಮ ಮಗನಿಗೆ ಟಿಕೆಟ್ ಪಡೆಯುವಲ್ಲಿ ಯಶಸ್ಸು ಸಾಧಿಸಿದ್ದಾರೆ.

27 ಕಾಂಗ್ರೆಸ್‌ ಅಭ್ಯರ್ಥಿಗಳು

  • ಧಾರವಾಡ – ವಿನೋದ್‌ ಅಸುಟಿ
  • ಬಾಗಲಕೋಟೆ: ಸಂಯುಕ್ತಾ ಪಾಟೀಲ್‌
  • ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ
  • ಕೊಪ್ಪಳ – ರಾಜಶೇಖರ ಹಿಟ್ನಾಳ್‌
  • ಕಲಬುರಗಿ – ರಾಧಾಕೃಷ್ಣ ದೊಡ್ಡಮನಿ
  • ಬೀದರ್‌ – ರಾಜಶೇಖರ್‌ ಪಾಟೀಲ್‌
  • ಚಿತ್ರದುರ್ಗ -ಬಿ.ಎನ್‌.ಚಂದ್ರಪ್ಪ
  • ಬೆಳಗಾವಿ – ಮೃಣಾಲ್‌ ಹೆಬ್ಬಾಳಕರ್‌
  • ಚಿಕ್ಕೋಡಿ – ಪ್ರಿಯಾಂಕಾ ಜಾರಕಿಹೊಳಿ
  • ದಕ್ಷಿಣ ಕನ್ನಡ – ಪದ್ಮರಾಜ್‌
  • ಮೈಸೂರು -ಎಂ.ಲಕ್ಷ್ಮಣ್‌
  • ರಾಯಚೂರು -ಜಿ.ಕುಮಾರ ನಾಯಕ್‌
  • ಬಳ್ಳಾರಿ – ಇ ತುಕಾರಾಂ
  • ಉಡುಪಿ -ಚಿಕ್ಕಮಗಳೂರು -ಜಯಪ್ರಕಾಶ್‌ ಹೆಗ್ಡೆ
  • ಚಿಕ್ಕಬಳ್ಳಾಪುರ – ರಕ್ಷಾ ರಾಮಯ್ಯ
  • ಚಾಮರಾಜನಗರ – ಸುನೀಲ್‌ ಬೋಸ್‌
  • ಬೆಂಗಳೂರು ಉತ್ತರ -ಪ್ರೊ.ರಾಜೀವ್‌ ಗೌಡ
  • ಬೆಂಗಳೂರು ದಕ್ಷಿಣ – ಸೌಮ್ಯ ರೆಡ್ಡಿ
  • ಬೆಂಗಳೂರು ಸೆಂಟ್ರಲ್‌ -ಮನ್ಸೂರ್‌ ಅಲಿಖಾನ್‌
  • ಬೆಂಗಳೂರು ಗ್ರಾಮಾಂತರ – ಡಿ.ಕೆ.ಸುರೇಶ್
  • ಉತ್ತರ ಕನ್ನಡ -ಡಾ.ಅಂಜಲಿ ನಿಂಬಾಳ್ಕರ್‌
  • ಶಿವಮೊಗ್ಗ – ಗೀತಾ ಶಿವಕುಮಾರ್‌
  • ತುಮಕೂರು – ಮುದ್ದಹನುಮೇಗೌಡ
  • ಹಾಸನ – ಶ್ರೇಯಸ್‌ ಪಟೇಲ್‌
  • ಮಂಡ್ಯ – ವೆಂಕಟರಾಮೇಗೌಡ (ಸ್ಟಾರ್‌ ಚಂದ್ರು)
  • ವಿಜಯಪುರ – ರಾಜು ಅಲಗೂರು
  • ಹಾವೇರಿ – ಅನಂತ ಸ್ವಾಮಿ ಗಡ್ಡೇವರ ಮಠ
Tags: 2024chikkaballapurckcknewsnowCongressElectionkolarraksha ramaiahVeerappa molily
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಕೋಲಾರದ ಕಾಂಗ್ರೆಸ್‌ ಅಭ್ಯರ್ಥಿ ಗೌತಮ್‌ ವಿರುದ್ಧ Go Back ಚಳವಳಿ!

ಕೋಲಾರದ ಕಾಂಗ್ರೆಸ್‌ ಅಭ್ಯರ್ಥಿ ಗೌತಮ್‌ ವಿರುದ್ಧ Go Back ಚಳವಳಿ!

Leave a Reply Cancel reply

Your email address will not be published. Required fields are marked *

Recommended

ಲಸಿಕೆ: ಗುಜರಾತ್‌ಗೆ ಬೆಣ್ಣೆ! ಕರ್ನಾಟಕಕ್ಕೆ ಸುಣ್ಣ!!

ಡಿಕೆಶಿ ಸಂಪರ್ಕದಲ್ಲಿ ಇರೋರು ಯಾರು?

4 years ago
ಪ್ರಕ್ಷಬ್ಧ ಮನಸ್ಸನ್ನು ತಿಳಿಗೊಳಿಸಿ ಮರಗಟ್ಟಿ ಕೂತ ಅಹಂ ನಾಶ ಮಾಡಿ ನಮ್ಮೊಳಗೇ ನಡೆಯುತ್ತಿರುವ ಯುದ್ಧಗಳಿಗೆ ಇತಿಶ್ರೀ ಹಾಡುವ ಶ್ರೀರಾಮನವಮಿ

ಪ್ರಕ್ಷಬ್ಧ ಮನಸ್ಸನ್ನು ತಿಳಿಗೊಳಿಸಿ ಮರಗಟ್ಟಿ ಕೂತ ಅಹಂ ನಾಶ ಮಾಡಿ ನಮ್ಮೊಳಗೇ ನಡೆಯುತ್ತಿರುವ ಯುದ್ಧಗಳಿಗೆ ಇತಿಶ್ರೀ ಹಾಡುವ ಶ್ರೀರಾಮನವಮಿ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ