• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home ELECTION

ಕಾಂಗ್ರೆಸ್‌ ಚೊಂಬು ಜಾಹೀರಾತು; ಚಿಕ್ಕಬಳ್ಳಾಪುರದಲ್ಲಿ ಬೆಂಕಿ ಮಳೆ ಸುರಿಸಿದ ಹೆಚ್.ಡಿ.ದೇವೇಗೌಡರು

cknewsnow desk by cknewsnow desk
April 20, 2024
in ELECTION, ELECTION2024, NATION, POLITICS, STATE
Reading Time: 1 min read
0
ಕಾಂಗ್ರೆಸ್‌ ಚೊಂಬು ಜಾಹೀರಾತು; ಚಿಕ್ಕಬಳ್ಳಾಪುರದಲ್ಲಿ ಬೆಂಕಿ ಮಳೆ ಸುರಿಸಿದ ಹೆಚ್.ಡಿ.ದೇವೇಗೌಡರು
1.1k
VIEWS
FacebookTwitterWhatsuplinkedinEmail

ಪ್ರಧಾನಿ ನರೇಂದ್ರ ಮೋದಿ ಪ್ರಚಾರ, ವೇದಿಕೆ ಹಂಚಿಕೊಂಡ ಮಾಜಿ ಪ್ರಧಾನಿ; ಡಾ.ಕೆ.ಸುಧಾಕರ್‌, ಎಂ.ಮಲ್ಲೇಶ್‌ ಬಾಬು ಅವರ ಪರವಾಗಿ ಪ್ರಚಾರ

ಚಿಕ್ಕಬಳ್ಳಾಪುರ: ರಾಜ್ಯ ಕಾಂಗ್ರೆಸ್‌ ಸರಕಾರ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರದ ಬಗ್ಗೆ ಪತ್ರಿಕೆಗಳಿಗೆ ನೀಡಿದ್ದ ಚೊಂಬಿನ ಜಾಹೀರಾತಿನ ಬಗ್ಗೆ ಬೆಂಕಿ ಉಗುಳಿದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು; ಹತ್ತು ವರ್ಷ ಆಡಳಿತ ನಡೆಸಿ ತಮ್ಮ ಕೈಗೆ ಕೊಟ್ಟ ಖಾಲಿ ಚೊಂಬನ್ನು ಮೋದಿ ಅವರು ಅಕ್ಷಯ ಪಾತ್ರೆ ಮಾಡಿದರು ಎಂದು ಗುಡುಗಿದರು.

ಚಿಕ್ಕಬಳ್ಳಾಪುರದಲ್ಲಿ ಶನಿವಾರ ಬಿಜೆಪಿ-ಜೆಡಿಎಸ್‌ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಧಾನಿಗಳಾದ ನರೇಂದ್ರ ಮೋದಿ ಅವರೊಂದಿಗೆ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್‌, ಕೋಲಾರದ ಅಭ್ಯರ್ಥಿ ಎಂ.ಮಲ್ಲೇಶ್‌ ಬಾಬು ಅವರ ಪರವಾಗಿ ಪ್ರಚಾರ ಭಾಷಣ ಮಾಡಿದ ಅವರು; ಹತ್ತು ವರ್ಷಗಳ ಆಡಳಿತದಲ್ಲಿ ಅನೇಕ ಹಗರಣಗಳನ್ನು ನಡೆಸಿ ಮೋದಿ ಅವರ ಕೈಗೆ ಕಾಂಗ್ರೆಸ್‌ ಖಾಲಿ ಬೊಂಬನ್ನೇ ಕೊಟ್ಟಿತ್ತು. ಅದನ್ನು ತಮ್ಮ ಸಮರ್ಥ ನಾಯಕತ್ವದ ಮೂಲಕ ಅವರು ಅಕ್ಷಯ ಪಾತ್ರೆ ಮಾಡಿದ್ದಾರೆಂದು ಹೇಳಿದರು.

ಹತ್ತು ವರ್ಷಗಳಲ್ಲಿ ಖಾಲಿ ಚೊಂಬಿಗೆ ಸಂಪತ್ತು ತುಂಬಿ ದೇಶವನ್ನು ಸರಿಯಾದ ದಿಕ್ಕಿನತ್ತ ಕೊಂಡೊಯ್ಯುತ್ತಿರುವ ಪ್ರಧಾನಿಗಳ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಕ್ಷುಲ್ಲಕವಾಗಿ ಮಾತನಾಡುತ್ತಿರುವುದು ಅಕ್ಷಮ್ಯ ಎಂದು ಮಾಜಿ ಪ್ರಧಾನಿಗಳು ಕುಟವಾಗಿ ಟೀಕಿಸಿದರು.

ಯುಪಿಎ ಸರಕಾರ ದೇಶವನ್ನು ಲೂಟಿ ಮಾಡಿ,ಹಲವು ಯೋಜನೆಗಳಲ್ಲಿ ಭಾರೀ ಭ್ರಷ್ಟಾಚಾರ ಮಾಡಿ ದೇಶದ ಖಜಾನೆ ಲೂಟಿ ಮಾಡಿ ೨೦೧೪ರಲ್ಲಿ ಪ್ರಧಾನಿ ಆಗಿದ್ದ ನರೇಂದ್ರ ಮೋದಿ ಕೈಗೆ ಖಾಲಿ ಚೊಂಬನ್ನು ಕೊಟ್ಟಿದ್ದರು. ಅಂತಹ ಕಾಂಗ್ರೆಸ್ ಪಕ್ಷದವರು ಯಾವ ಉದ್ದೇಶಕ್ಕೆ ಚೊಂಬನ್ನು ಜಾಹೀರಾತಿನಂತೆ ಬಳಸಿದ್ದಾರೋ ಅದನ್ನೇ ನಾವು ಮೋದಿ ನೇತೃತ್ವದಲ್ಲಿ ಅಕ್ಷಯ ಪಾತ್ರೆ ಮಾಡುತ್ತೇವೆ ಎಂದು ಅವರು ಘೋಷಿಸಿದರು.

ದೇಶದ ಪ್ರಧಾನಿಯ ಬಗ್ಗೆ ಸಿದ್ದರಾಮಯ್ಯ ಅವರು ಸೇರಿದಂತೆ ಕಾಂಗ್ರೆಸ್‌ ನಾಯಕರು ಕೀಳು ಅಭಿರುಚಿಯ ಟೀಕೆಗಳನ್ನು ಮಾಡುತ್ತಿರುವುದು ಸರಿಯಲ್ಲ. ಇದಕ್ಕೆ ನಾಡಿನ ಜನರು ಚುನಾವಣೆಯಲ್ಲಿ ತಕ್ಕ ಉತ್ತರ ಕೊಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ 28 ಲೋಕಸಭೆ ಸ್ಥಾನಗಳಲ್ಲಿ ೨೮ರಲ್ಲಿ ಎನ್‌ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಇದು ಸತ್ಯ ಎಂದರು. ಚಿಕ್ಕಬಳ್ಳಾಪುರ ಕೋಲಾರದ ಅಭ್ಯರ್ಥಿಗಳಾದ ಡಾ.ಕೆ.ಸುಧಾಕರ್, ಮಲ್ಲೇಶ್‌ಬಾಬು ಗೆಲ್ಲಿಸುವ ಮೂಲಕ ಮೋದಿ ಕೈ ಬಲಪಡಿಸಿ ಎಂದು ಅವರು ಮನವಿ ಮಾಡಿದರು.

ಕಳೆದ 10 ವರ್ಷಗಳಲ್ಲಿ ದೇಶದ ಪ್ರಾಚೀನ ರಾಷ್ಟೀಯ ಪಕ್ಷವಾಗಿದ್ದ ಕಾಂಗ್ರೆಸ್‌ಗೆ ವಿರೋಧಿ ಪಕ್ಷದ ನಾಯಕನ ಸ್ಥಾನ ಪಡೆಯುವ ಯೋಗ್ಯತೆ ಇಲ್ಲ.400 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ ಎಂದು ಘೋಷಣೆ ಮಾಡಿರುವ ಮೋದಿ ತಾಕತ್ತು ಅರ್ಥ ಮಾಡಿಕೊಳ್ಳಿ. ಎರಡೂ ಕ್ಷೇತ್ರದಲ್ಲಿ ಗೆಲುವು ತಂದು ಕೊಟ್ಟರೆ ಕೃಷ್ಣಾ ನದಿ ನೀರು ಜಿಲ್ಲೆಗೆ ಹರಿಸಲು ಪ್ರಧಾನಿಗಳನ್ನು ನಾನು ಒಪ್ಪಿಸುತ್ತೇನೆ ಎಂದು ಮತದಾರರಲ್ಲಿ ಮನವಿ ಮಾಡಿದರು.

Tags: chikkaballapurckcknewsnowelection 2024hd devegowdakarnatakaLok Sabha electionpolitcsprime minister narendra modi
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್

ಹಾಸನ ಪ್ರಕರಣ: ಉಪ್ಪು ತಿಂದವರು ನೀರು ಕುಡಿಯುತ್ತಾರೆ ಎಂದ ಹೆಚ್.ಡಿ.ಕುಮಾರಸ್ವಾಮಿ

Leave a Reply Cancel reply

Your email address will not be published. Required fields are marked *

Recommended

ಕೆಪಿಎಸ್‍ಸಿ ಸದಸ್ಯರಾಗಿ ನೇಮಕಗೊಂಡ ಡಾ.ಬಿ.ಪ್ರಭುದೇವ್; ಅಪ್ಪಟ ಮಣ್ಣಿನ ಮಗನ ಚಿನ್ನದಂಥ ಸಾಧನೆ

ಕೆಪಿಎಸ್‍ಸಿ ಸದಸ್ಯರಾಗಿ ನೇಮಕಗೊಂಡ ಡಾ.ಬಿ.ಪ್ರಭುದೇವ್; ಅಪ್ಪಟ ಮಣ್ಣಿನ ಮಗನ ಚಿನ್ನದಂಥ ಸಾಧನೆ

4 years ago
ಬೈ ಎಲೆಕ್ಷನ್‌ನಲ್ಲಿ ಬಿಜೆಪಿ ಭರಾಟೆ; ಮುನಿರತ್ನ ಹ್ಯಾಟ್ರಿಕ್‌, 70 ವರ್ಷಕ್ಕೆ ಶಿರಾದಲ್ಲಿ ಅರಳಿದ ಕಮಲ

ಬೈ ಎಲೆಕ್ಷನ್‌ನಲ್ಲಿ ಬಿಜೆಪಿ ಭರಾಟೆ; ಮುನಿರತ್ನ ಹ್ಯಾಟ್ರಿಕ್‌, 70 ವರ್ಷಕ್ಕೆ ಶಿರಾದಲ್ಲಿ ಅರಳಿದ ಕಮಲ

5 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ