• About
  • Advertise
  • Careers
  • Contact
Saturday, May 17, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS CRIME

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

cknewsnow desk by cknewsnow desk
May 6, 2024
in CRIME, EDITORS'S PICKS, NATION, POLITICS, STATE
Reading Time: 2 mins read
0
ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ
994
VIEWS
FacebookTwitterWhatsuplinkedinEmail

ವಕೀಲ ದೇವರಾಜೇಗೌಡ ಗಂಭೀರ ಆರೋಪ; ಕೈ ಮಿಲಾಯಿಸಿದರೆ ಕ್ಯಾಬಿನೇಟ್‌ ದರ್ಜೆ ಹುದ್ದೆ ಆಫರ್‌

ನಾಗಮಂಗಲದ ಎಲ್.‌ಆರ್.‌ಶಿವರಾಮೇಗೌಡ ಮಧ್ಯಸ್ಥಿಕೆ; ಮೊಬೈಲ್‌ ಸಂಭಾಷಣೆ ಆಡಿಯೋ ಬಿಡುಗಡೆ; ಸಿಬಿಐ ತನಿಖೆಯಾದರೆ ಎಲ್ಲಾ ದಾಖಲೆಗಳನ್ನೂ ಕೊಡುತ್ತೇನೆ ಎಂದ ಲಾಯರ್

ಬೆಂಗಳೂರು: ಹಾಸನ ಪೆನ್‍ಡ್ರೈವ್ ಪ್ರಕರಣದಲ್ಲಿ ನೊಂದ ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಹರಿಯಬಿಟ್ಟ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೇ ಕಥಾನಾಯಕ ಎಂದು ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಸಂಜೆ ತಮ್ಮ ಸಂಗಡಿಗ ವಕೀಲರ ಜತೆಗೂಡಿ ಮಾಧ್ಯಮಗೋಷ್ಠಿ ನಡೆಸಿದ ಅವರು; ವಿಡಿಯೋಗಳನ್ನು ಲೀಕ್‌ ಮಾಡಿರುವ ಪ್ರಕರಣದಲ್ಲಿ ರಾಜ್ಯ ಕಾಂಗ್ರೆಸ್‌ ಸರಕಾರವೇ ಶಾಮೀಲಾಗಿದೆ. ಸ್ವತಃ ಉಪ ಮುಖ್ಯಮಂತ್ರಿಯೇ ನೇರ ಪಾತ್ರ ವಹಿಸಿದ್ದಾರೆ. ಹೀಗಾಗಿ ವಿಶೇಷ ತನಿಖಾದಳ –ಎಸ್‌ʼಐಟಿ ಯಿಂದ ಸತ್ಯಾಂಶ ಹೊರಬರಲು ಸಾಧ್ಯವಿಲ್ಲ. ಆದ್ದರಿಂದ ಇಡೀ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ದೇವರಾಜೇಗೌಡ ಒತ್ತಾಯಿಸಿದರು.

ನಾಗಮಂಗಲದ ಮಾಜಿ ಶಾಸಕ ಎಲ್.ಆರ್.‌ಶಿವರಾಮೇಗೌಡ ಅವರನ್ನು ಹತ್ತು ಬಾರಿ ನನ್ನ ಬಳಿಗೆ ಸಂಧಾನಕ್ಕೆ ಕಳಿಸಿ ಮಹಿಳೆಯರ ವಿಡಿಯೋಗಳ ಬಿಡುಗಡೆ ಮಾಡಿ ಜೆಡಿಎಸ್-ಬಿಜೆಪಿ ಮೈತ್ರಿ ಹಾಳುಗೆಡವಲು ಕೈಜೋಡಿಸುವಂತೆ ಕೇಳಿದ್ದರು. ಸ್ವತಃ ಡಿ.ಕೆ.ಶಿವಕುಮಾರ್ ಅವರೇ ಮೊಬೈಲ್‌ ಕರೆ ಮಾಡಿ ನನಗೆ ಸರಕಾರದಲ್ಲಿ ಸಂಪುಟ ದರ್ಜೆ ಹುದ್ದೆಯ ಆಮಿಷ ಒಡ್ಡಿದರು ಎಂದು ಆರೋಪ ಮಾಡಿದರು. ಅದಕ್ಕೆ ಪೂರಕವಾದ ಆಡಿಯೋ ಕ್ಲಿಪ್‌ ಅನ್ನು ಕೂಡ ಅವರು ಮಾಧ್ಯಮಗೋಷ್ಠಿಯಲ್ಲಿ ಬಿಡುಗಡೆ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಟ್ಟ ಹೆಸರು ತರಲು, ಬಿಜೆಪಿ-ಜೆಡಿಎಸ್‌ ಮೈತ್ರಿ ಮುರಿದು ಹೋಗುವಂತೆ ಮಾಡಲು ಕಾಂಗ್ರೆಸ್‌ ಪಕ್ಷ ಹಾಗೂ ಡಿ.ಕೆ.ಶಿವಕುಮಾರ್‌ ಮಹಿಳೆಯ ಮಾನವನ್ನು ದುರ್ಬಳಕೆ ಮಾಡಿಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದ್ದಾರೆ. ಇದಕ್ಕೆ ಪೊಲೀಸ್‌ ಇಲಾಖೆಯ ಉನ್ನತ ಅಧಿಕಾರಿಗಳು, ಎಸ್‌ಐಟಿ ಅಧಿಕಾರಿಗಳ ಮೇಲೆ ಭಾರೀ ಒತ್ತಡವಿದೆ ಎಂದು ಅವರು ದೂರಿದರು.

ರಹಸ್ಯ ಸಭೆ ನಡೆಸಿದ್ದ ಸಿಎಂ, ಡಿಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆಶಿ ಅವರ ನೇತೃತ್ವದಲ್ಲಿ ಪೊಲೀಸ್‌ ಇಲಾಖೆಯ ಉನ್ನತಾಧಿಕಾರಿಗಳ ಸಭೆಯನ್ನು ಗೌಪ್ಯವಾಗಿ ನಡೆಸಲಾಗಿದೆ. ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಯಾರನ್ನು ಆರೋಪಿಗಳನ್ನಾಗಿ ಮಾಡಬೇಕು, ಮಾಡಬಾರದು ಎಂಬ ಬಗ್ಗೆ ಸುದೀರ್ಘವಾಗಿ ಚರ್ಚೆಯಾಗಿದೆ. ಅವರ ಆಮಿಷಕ್ಕೆ ಬಲಿಯಾಗದ ನನ್ನನ್ನು ವಿಡಿಯೋ ಲೀಕ್‌ ಪ್ರಕರಣದಲ್ಲಿ ಮೊದಲ ಆರೋಪಿಯನ್ನಾಗಿ ಮಾಡಲು ಎಸ್‌ ಐಟಿ ಹುನ್ನಾರ ನಡೆಸಿದೆ ಎಂದು ದೇವರಾಜೇಗೌಡರು ಗಂಭೀರ ಆರೋಪ ಮಾಡಿದರು.

ಡಿ.ಕೆ.ಶಿವಕುಮಾರ್‌ ಅವರು ನನಗೆ ಹತ್ತು ಹಲವು ಆಮಿಷಗಳನ್ನು ಒಡ್ಡಿದ್ದರು. ಶಿವರಾಮೇಗೌಡರನ್ನು ನನ್ನ ಜತೆ ಮಾತುಕತೆಗೆ ಕಳಿಸಿದ್ದರು. ತಾರಾ ಹೋಟೆಲ್‌ ಗಳಲ್ಲಿ ನನ್ನ ಹಾಗೂ ಶಿವರಾಮೇಗೌಡರ ಭೇಟಿ ಹತ್ತು ಬಾರಿ ನಡೆದಿದೆ. ಸರಕಾರಕ್ಕೆ ವಿರುದ್ಧವಾದ ಯಾವುದೇ ಹೆಜ್ಜೆ ಇಡಬಾರದು ಎಂದು ನನ್ನ ಮೇಲೆ ಒತ್ತಡ ಹಾಕಿದರು ಎಂದು ಅವರು ತಿಳಿಸಿದರು. ಇದಕ್ಕೆ ಪೂರಕವಾಗಿ ಶಿವರಾಮೇಗೌಡರು ಡಿಸಿಎಂ ಡಿಕೆಶಿಯ ಒಡ್ಡಿರುವ ಆಮಿಷವನ್ನು ಉಲ್ಲೇಖಿಸಿ ಮಾತನಾಡಿರುವ ಮೊಬೈಲ್‌ ಸಂಭಾಷಣೆಯನ್ನು ಇದೇ ವೇಳೆ ಬಿಡುಗಡೆ ಮಾಡಿದರು.   

ಡಿ.ಕೆ.ಶಿವಕುಮಾರ್‌ ಅವರೇ ನನ್ನನ್ನು ನೇರವಾಗಿ ಕರೆಸಿಕೊಂಡಿದ್ದರು. ಎಲ್.ಆರ್.ಶಿವರಾಮೇಗೌಡ ಹಾಗೂ ಡಿ.ಕೆ.ಶಿವಕುಮಾರ್ ಈ ಕೇಸ್ ವಿಚಾರವಾಗಿ ನನ್ನ ಬಳಿ ಪದೇಪದೆ ಚರ್ಚೆ ನಡೆಸಿದರು. ಸಂತ್ರಸ್ಥರು ಬಂದು ದೂರು ಕೊಡುತ್ತಾರಾ? ಅಥವಾ ಅವರಿಗೆ ನ್ಯಾಯ ಕೊಡಿಸೋದು ಹೇಗೆ ಎನ್ನುವ ಬಗ್ಗೆ ಅವರು ಚರ್ಚೆ ನಡೆಸಲಿಲ್ಲ. ಆದರೆ, ಪೆನ್ ಡ್ರೈವ್ ಲೀಕ್‌ ಮಾಡುವ ಬಗ್ಗೆ ಬಹಳ ಮುತುವರ್ಜಿಯಿಂದ ಮಾತನಾಡಿದರು. ಈಗ ನೋಡಿದರೆ ನನ್ನನ್ನೇ ಕೇಸ್‌ ನಲ್ಲಿ ಸಿಲುಕಿಸಲು ನೋಡುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

ಡಿಕೆಶಿ ಹೆಸರು ತೆಗೆಯುವಂತೆ ಎಸ್‌ಐಟಿ ಒತ್ತಡ

ಎಸ್ಐಟಿ ಎಸ್‍ಪಿ ಒಬ್ಬರು (ಸುಮಾ ಡಿ.ಪೆನ್ನೇಕರ್) ಡಿಕೆಶಿ ಹೆಸರು ಡಿಲಿಟ್‌ ಮಾಡಿ ಎಂದು ಒತ್ತಡ ಹೇರಿದರು. ನಾನು ಒಪ್ಪಲಿಲ್ಲ. ನಿಮಗೆ ತೊಂದರೆ ಆಗುತ್ತದೆ ಎಂದು ಹೆದರಿಸಿದರು. ನಾನು ಕೇರ್‌ ಮಾಡಲಿಲ್ಲ ಎಂದ ಅವರು; ಎಲ್.ಆರ್.ಶಿವರಾಮೇಗೌಡ ಅವರು, “ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಡ. ಡಿಕೆಶಿ, ಸಿದ್ದರಾಮಯ್ಯರನ್ನು  ಸಿಲುಕಿಸಬೇಡ” ಎಂದರು. ಕಾರು ಚಾಲಕನನ್ನು ನಾವೇ ವಿದೇಶಕ್ಕೆ ಕಳುಹಿಸಿದ್ದೇವೆ ಎಂದು ಶಿವರಾಮೇಗೌಡ ಮಾತಾಡಿರುವ ಮೊಬೈಲ್‌ ಆಡಿಯೋವನ್ನು ದೇವ ಬಿಡುಗಡೆ ಮಾಡಿದ ದೇವರಾಜೇಗೌಡ; ಶಿವರಾಮೇಗೌಡ ಮಧ್ಯವರ್ತಿಯಾಗಿ 10ಕ್ಕೂ ಹೆಚ್ಚು ಬಾರಿ ಭೇಟಿ ಮಾಡಿದ್ದಾರೆ. ಪೆನ್ ಡ್ರೈವ್ ಹಂಚಿರುವ ವ್ಯಕ್ತಿಗಳನ್ನ ಪತ್ತೆ ಮಾಡಲೇ ಇಲ್ಲ ಇವರು. ಅವರ ಲೊಕೇಷನ್, ಫೋನ್ ನಂಬರ್ ಕೊಟ್ಟರೂ ಪತ್ತೆ ಮಾಡಲೇ ಇಲ್ಲ. ಹಾಸನದಲ್ಲಿ ದಾಖಲಾಗಿರುವ ಎಫ್ಐಆರ್ ಕೈ ಬಿಟ್ಟರು. ಇದೆಲ್ಲದರ ಸೂತ್ರಧಾರ ರಾಜ್ಯ ಸರಕಾರವೇ ಆಗಿದೆ ಎಂದು ದೇವರಾಜೇಗೌಡ ಗಂಭೀರ ಆರೋಪ ಮಾಡಿದರು.

ವಿಡಿಯೋಗಳನ್ನು ಲೀಕ್‌ ಮಾಡಿರುವ ಚಾಲಕ ಕಾರ್ತಿಕ್‌ ವಿರುದ್ಧ ಹಾಸನದಲ್ಲಿ ಎಫ್‌ ಐಆರ್‌ ದಾಖಲಾಗಿದೆ. ಆದರೆ, ಅವನನ್ನು ಈವರೆಗೆ ಬಂಧಿಸಿ ಕ್ರಮ ಜರುಗಿಸಲಿಲ್ಲ. ಅವನು ಎಲ್ಲಿದ್ದಾನೆ? ಏನಾಗಿದ್ದಾನೆ? ಎನ್ನುವುದಕ್ಕೆ ಸರಕಾರ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು ಅವರು.

ನನ್ನ ಜೀವನದ ಹೋರಾಟ ಇದ್ದದ್ದೇ ಹೆಚ್.ಡಿ.ರೇವಣ್ಣ ಅವರ ವಿರುದ್ಧ. ನನ್ನ ಹೋರಾಟಕ್ಕೆ ನಿಜವಾದ ನ್ಯಾಯ ಸಿಕ್ಕಿದೆ ಎಂದುಕೊಂಡಿದ್ದೆ. ಇದನ್ನೇ ಕೆಲ ಕಿಡಿಗೇಡಿ ರಾಜಕಾರಣಿಗಳು ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು; ಎಸ್ ಐಟಿ ಮುಖ್ಯಸ್ಥರು ಹಾಗೂ ತನಿಖಾಧಿಕಾರಿಗಳನ್ನ ಎರಡು ಸಲ ಭೇಟಿಯಾಗಿದ್ದೇನೆ. ಸಾಕ್ಷಿಯನ್ನಾಗಿ ನನ್ನ ಹೇಳಿಕೆ ಪಡೆದಿದ್ದಾರೆ. ಆದರೆ, ಕೆಲ ಕಹಿ ಸತ್ಯಗಳನ್ನು ಹೇಳಲೇಬೇಕಿದೆ. ತಡೆಯಾಜ್ಞೆ ಇದ್ದರೂ ಅಶ್ಲೀಲ ವೀಡಿಯೋಗಳಿದ್ದ ಪೆನ್ ಡ್ರೈವ್ ಗಳನ್ನು ಹಂಚಿರುವ ಬಗ್ಗೆ ಹಾಸನದಲ್ಲಿ ಎಫ್ʼಐಆರ್ ಆಗಿದೆ. ಅಶ್ಲೀಲ ವೀಡಿಯೋ ಆಗಿದ್ದರೂ ಹೆಣ್ಣು ಮಕ್ಕಳ ಮುಖವನ್ನು ಮರೆಮಾಚಿಲ್ಲ ಎಂದು ಅವರು ಕಿಡಿಕಾರಿದರು.

ಪ್ರಜ್ವಲ್‌ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ನನ್ನ ಕಚೇರಿಗೆ ಬಂದು ನನ್ನ ಕೈಗೆ ಕಾಪಿ ಕೊಟ್ಟಿದ್ದ. ಇದರ ಜತೆಗೆ ಒಂದು ಪೆನ್ ಡ್ರೈವ್ ಸಹಾ ಕೊಟ್ಟಿದ್ದ. ನಾನು ವಿಚಾರಣೆಗೆ ಹೋದಾಗ ಎಸ್‌ ಐಟಿ ಅಧಿಕಾರಿಗಳು ನನ್ನ ಹೇಳಿಕೆ ಪಡೆದಿದ್ದಾರೆ. ನನ್ನ ಬಳಿ ಇದ್ದ ದಾಖಲೆಗಳನ್ನು ನೀಡಿದ್ದೇನೆ. ನಾನು ಹೇಳಿಕೆಯಲ್ಲಿ ಬಹಳ ಪ್ರಮುಖ ಅಂಶಗಳನ್ನೇ ಉಲ್ಲೇಖ ಮಾಡಿದ್ದೇನೆ ಎಂದು ಅವರು ಮಾಹಿತಿ ನೀಡಿದರು.

ಪುಟ್ಟರಾಜು ಅಲಿಯಾಸ್ ಪುಟ್ಟಿ ಎನ್ನುವವರ ಮೂಲಕ ಪೆನ್ʼಡ್ರೈವ್ ಬೆಂಗಳೂರಿಗೆ ತಲುಪಿತು. ಮುಖ್ಯಮಂತ್ರಿಗಳು ರಹಸ್ಯ ಸ್ಥಳವೊಂದರಲ್ಲಿ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ ಎಂದು ಆರೋಪ ಮಾಡಿದ ದೇವರಾಜೇಗೌಡರು, ಇಡೀ ಪ್ರಸಂಗದ ಕಥಾನಾಯಕರೇ ಡಿಸಿಎಂ ಡಿಕೆಶಿ ಮತ್ತು ಸಿಎಂ ಸಿದ್ದರಾಮಯ್ಯ ಹಾಗೂ ಮತ್ತೋರ್ವ ಮಧ್ಯವರ್ತಿ (ಎಲ್.‌ಆರ್.‌ಶಿವರಾಮೇಗೌಡರು). ಆದರೆ, ನೊಂದ ಮಹಿಳೆಯರಿಗೆ ನ್ಯಾಯ ಕೊಡಸುವುದು ಬಿಟ್ಟು ರಾಜಕೀಯ ಸ್ವಾರ್ಥಕ್ಕಾಗಿ ಇವರು ಷಡ್ಯಂತ್ರ ನಡೆಸಿದ್ದಾರೆ. ಅಲ್ಲದೆ, ಈ ಪ್ರಕರಣದವನ್ನು ಬಿಜೆಪಿಗೆ ಮೆತ್ತಲು ಪ್ರಯತ್ನ ಮಾಡಿದ್ದಾರೆ. ಅದಕ್ಕೆ ಬೇಸತ್ತು ನಾನು ಮಾಧ್ಯಮಗಳ ಮುಂದೆ ಸತ್ಯ ಹೇಳಿದ್ದೇನೆ ಎಂದು ಅವರು ತಿಳಿಸಿದರು.

ಕರೆ ಮಾಡಿ ಆಮಿಷ ಒಡ್ಡಿದ್ದ ಡಿಕೆಶಿ

ಭಾನುವಾರ ಸಂಜೆವರೆಗೂ ನನ್ನ ಜತೆ ಡಿ.ಕೆ.ಶಿವಕುಮಾರ್‌, ಎಲ್.‌ಆರ್.ಶಿವರಾಮೇಗೌಡರು ಸಂಧಾನ ನಡೆಸಿದರು. ನಾನು ಒಪ್ಪದೇ ಹೋದಾಗ ಆ ದಿನವೇ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಮೂರು ದಿನಗಳ ಹಿಂದೆ ರಾತ್ರಿ 12.48 ಗಂಟೆ ವೇಳೆಗೆ ಡಿ.ಕೆ.ಶಿವಕುಮಾರ್‌ ಅವರೇ ಫೋನ್ ಕರೆ ಮಾಡಿದರು. ಜೆಡಿಎಸ್-ಬಿಜೆಪಿ ಜತೆ ಕೈ ಜೋಡಿಸಿರುವುದರಿಂದ ಮೋದಿ ಅವರನ್ನು ಟಾರ್ಗೆಟ್ ಮಾಡಿ ಇಷ್ಟೆಲ್ಲ ಮಾಡಬೇಕಾಯಿತು. ಅದಕ್ಕೆ ನನ್ನ ಜೊತೆಯಲ್ಲಿ ಬರುವಂತೆ ಕರೆದರು. ಮೇ 29ನೇ ತಾರೀಖು ರಾತ್ರಿ ಡಿ.ಕೆ.ಶಿವಕುಮಾರ್ ಅವರು ನನ್ನ ಬಳಿ ಮಾತನಾಡಿದ್ದಾರೆ. ಇವತ್ತು ನನ್ನ ಬಳಿ ಇರುವ ಪೆನ್ ಡ್ರೈವ್ ನಲ್ಲಿ ಇದ್ಯಾವ ವಿಡಿಯೋ ಇಲ್ಲ. ಈಗ ನೋಡಿದರೆ ಬೇರೆ ವಿಡಿಯೋಗಳು ಬರುತ್ತಿವೆ. ಕಾರು ಚಾಲಕ ಬಹಳ ಟೆಕ್ನಾಲಜಿ ಇಟ್ಟುಕೊಂಡಿದ್ದಾನೆ ಎಂದರು ದೇವರಾಜೇಗೌಡ.

ಪ್ರಜ್ವಲ್ ರೇವಣ್ಣ ವಿಡಿಯೋದಲ್ಲಿ ಮಿಕ್ಸಿಂಗ್ ಆಗಿದೆ. ಅದಕ್ಕೆ ನನ್ನಲ್ಲಿರುವ ದಾಖಲೆಗಳನ್ನು ಸಿಬಿಐಗೆ ಕೊಡುತ್ತಿದ್ದೇನೆ. 2 ಗಂಟೆ 31 ನಿಮಿಷ ನನ್ನ‌ಜತೆ ಮಾತನಾಡಿರುವ ಆಡಿಯೋ ನನ್ನ ಬಳಿಯೇ ಇದೆ. ಇದನ್ನು ಈಗಲೇ ಬಿಡುಗಡೆ ಮಾಡಿದರೆ ಆಡಿಯೋ ಎಲ್ಲವೂ ತಿರುಚುತ್ತಾರೆ. ಹೀಗಾಗಿ ನಾನು ಬಿಡುಗಡೆ ಮಾಡಲ್ಲ. ಸಿಬಿಐ ತನಿಖೆಗೆ ಎಲ್ಲ ದಾಖಲೆ ಕೊಡುತ್ತೇನೆ. ನಮ್ಮ ಸಂಸ್ಕೃತಿ ಹೆಣ್ಣು ಮಕ್ಕಳ ಮಾನ ಹರಾಜು ಹಾಕೋದಲ್ಲ, ಮೈತ್ರಿ ಮಾಡಿಕೊಂಡಿರುವ ಬಿಜೆಪಿಯನ್ನು ಹಣಿಯಲು ಈ ರೀತಿ ಮಾಡಿದ್ದಾರೆ ಎಂದು ಅವರು ದೂರಿದರು.

ಮುಖ್ಯಮಂತ್ರಿಗಳೇ ಈ ಪ್ರಕರಣವನ್ನು ಸಿಬಿಐಗೆ ಕೊಡಿ. ಇಲ್ಲವಾದಲ್ಲಿ ನಾವೇ ವಕೀಲರು ಹೋರಾಟ ಮಾಡಿ ಸಿಬಿಐಗೆ ಕೊಡಿಸುತ್ತೇವೆ ಎಂದು ದೇವಾರಾಜೇಗೌಡ ಸವಾಲು ಹಾಕಿದರು.

ವಕೀಲ ವಿವೇಕ್‌ ಸುಬ್ಬಾರೆಡ್ಡಿ ಸೇರಿದಂತೆ ಹಲವಾರು ವಕೀಲರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Tags: advocate devarajegowdackcknewsnowDK ShivakumarHassankarnatakaPrajwal revannasiddaramaih
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಪೆನ್ ಡ್ರೈ ಪ್ರಕರಣ: HDK ಹೆಸರು ಹೇಳಲು ₹100 ಕೋಟಿ ಆಫರ್ ಕೊಟ್ಟ ಡಿಕೆಶಿ!

ಪೆನ್ ಡ್ರೈ ಪ್ರಕರಣ: HDK ಹೆಸರು ಹೇಳಲು ₹100 ಕೋಟಿ ಆಫರ್ ಕೊಟ್ಟ ಡಿಕೆಶಿ!

Leave a Reply Cancel reply

Your email address will not be published. Required fields are marked *

Recommended

ನವೆಂಬರ್‌ನಿಂದಲೇ ಕದ ತೆರೆಯಲಿದೆ  ಡಿಗ್ರಿ ಕಾಲೇಜ್; ಕೊನೆಗೂ ಡಿಸೈಡ್‌ ಮಾಡಿದ ಸರಕಾರ

ಡಿಗ್ರಿ, ಡಿಪ್ಲೊಮಾ, ಎಂಜಿನಿಯರಿಂಗ್ ಕಾಲೇಜು ಆರಂಭಕ್ಕೆ ಡೇಟ್‌ ಫಿಕ್ಸ್; ಶಿಫ್ಟ್ ಪ್ರಕಾರ ಕ್ಲಾಸ್

5 years ago
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ಬಿಗಿ ಲಾಕ್‌ಡೌನ್‌ ಇದ್ದರೂ 8 ಜಿಲ್ಲೆಗಳಲ್ಲಿ ಕೊರೋನಾ ಸೋಂಕು ಇಳಿದಿಲ್ಲ!! ಜಿಲ್ಲಾಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ