• About
  • Advertise
  • Careers
  • Contact
Saturday, May 17, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

BJP-JDS ಸದಸ್ಯರಿಂದ ವಿಧಾನಮಂಡಲದ ಉಭಯ ಸದನಗಳಲ್ಲಿ ಅಹೋರಾತ್ರಿ ಧರಣಿ

cknewsnow desk by cknewsnow desk
July 24, 2024
in NATION, POLITICS, STATE
Reading Time: 2 mins read
0
BJP-JDS ಸದಸ್ಯರಿಂದ ವಿಧಾನಮಂಡಲದ ಉಭಯ ಸದನಗಳಲ್ಲಿ ಅಹೋರಾತ್ರಿ ಧರಣಿ
916
VIEWS
FacebookTwitterWhatsuplinkedinEmail

ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ರಾತ್ರಿ ಧರಣಿ, ದಲಿತರ ಹಣ ವಾಪಸ್ ಬರಬೇಕು, ದಲಿತರಿಗೆ ನ್ಯಾಯ ದೊರೆಯಬೇಕು ಎಂದು ಪ್ರತಿಪಕ್ಷಗಳ ಪಟ್ಟು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಹಾಗೂ ಮುಡಾ ಹಗರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಅಹೋರಾತ್ರಿ ಧರಣಿಗೆ ಮುಂದಾಗಿದ್ದಾರೆ ಬಿಜೆಪಿ ಮತ್ತು ಜೆಡಿಎಸ್‌ ಸದಸ್ಯರು.

ದಲಿತರ ಹಣ ವಾಪಸ್ ಬರಬೇಕು, ದಲಿತರಿಗೆ ನ್ಯಾಯ ದೊರೆಯಬೇಕು. ಅಲ್ಲಿಯವರೆಗೂ ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದ್ದಾರೆ.

ಲೂಟಿಯಾದ ಹಣ ಮರಳಿ ಸರ್ಕಾರದ ಖಜಾನೆಗೆ ಬರಬೇಕು. ಇದಕ್ಕಾಗಿ ಹಗಲು ರಾತ್ರಿ ಧರಣಿ ಮಾಡಿ ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನೆ ಮಾಡುತ್ತೇವೆ. ರಾತ್ರಿ ಧರಣಿ ಮಾಡುವವರಿಗೆ ಊಟ ಬೇಕಾ ಎಂದು ಸ್ಪೀಕರ್ ಕೇಳಿದ್ದಾರೆ. ಮಾತನಾಡಲು ಅವಕಾಶ ನೀಡದವರ ಊಟ, ದಲಿತರ ಹಣ ಕೊಳ್ಳೆ ಹೊಡೆದವರ ಊಟ ಬೇಡ ಎಂದು ತಿರಸ್ಕಾರ ಮಾಡಿದ್ದೇವೆ. ರಾತ್ರಿ ಪೂರ್ತಿ ವಿಧಾನಸಭೆ ಹಾಗೂ ವಿಧಾನಪರಿಷತ್ ನಲ್ಲಿ ಧರಣಿ ಮಾಡುತ್ತೇವೆ. ನಾಳೆ ಕೂಡ ಧರಣಿ ಮುಂದುವರಿಯಲಿದೆ. ಎರಡೂ ಹಗರಣಗಳಲ್ಲಿ ಭಾಗಿಯಾದ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಧರಣಿ ಮಾಡಲಾಗುವುದು ಎಂದು ಮೈತ್ರಿ ಪಕ್ಷಗಳ ಮುಖಂಡರು ಪಟ್ಟು ಹಿಡಿದಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎರಡು ದೊಡ್ಡ ಹಗರಣ ನಡೆದಿದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುಟುಂಬ 14 ಸೈಟು ಹಾಗೂ ಅವರ ಬೆಂಬಲಿಗರು ನೂರಾರು ಸೈಟು ಕೊಳ್ಳೆ ಹೊಡೆದಿದ್ದಾರೆ. ಮುಡಾದಲ್ಲಿ 1 ಲಕ್ಷಕ್ಕೂ ಅಧಿಕ ಚದರಡಿಯ ಹಾಗೂ 3-4 ಸಾವಿರ ಕೋಟಿ ರೂ. ಬೆಲೆಯ ಪ್ರಮುಖ ನಿವೇಶನಗಳನ್ನು ಲೂಟಿ ಮಾಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಸಂವಿಧಾನ ಕಾಯಲಿ ಎಂದು ಜನರು ಅಧಿಕಾರ ಕೊಟ್ಟರೆ ಆ ವ್ಯಕ್ತಿ ಸ್ವಜನಪಕ್ಷಪಾತದಿಂದ ನಿವೇಶನಗಳನ್ನು ತನ್ನ ಹೆಸರಿಗೆ ಮಾಡಿಕೊಂಡಿದ್ದಾರೆ ಎಂದು ಅಶೋಕ್ ದೂರಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣ ಕೂಡ ಮುಖ್ಯಮಂತ್ರಿಯ ಹೆಗಲಿಗೆ ಬರುವ ಲಕ್ಷಣ ಕಂಡುಬಂದಿದೆ. ಮುಡಾದಲ್ಲಿ ದಲಿತರ ಜಮೀನು ಲೂಟಿ ಮಾಡಿದರೆ, ನಿಗಮದಲ್ಲಿ ದಲಿತರ ಹಣ ಲೂಟಿಯಾಗಿದೆ. ಜೊತೆಗೆ ದಲಿತರ ಹಣವನ್ನು ಬೇರೆ ಯೋಜನೆಗಳಿಗೆ ವರ್ಗಾಯಿಸಲಾಗಿದೆ. ತಾವೇನೂ ಅಕ್ರಮ ಮಾಡಿಲ್ಲವೆಂದರೆ ಅಧಿವೇಶನದಲ್ಲಿ ಚರ್ಚಿಸಲು ಭಯ ಏಕೆ? ಇಡೀ ಕಾಂಗ್ರೆಸ್ ತಂಡ ಸದನದಲ್ಲಿ ಉತ್ತರಿಸಲು ಸಾಧ್ಯವಾಗದೆ ಓಡುತ್ತಿದ್ದಾರೆ ಎಂದಿದ್ದಾರೆ ಅವರು.

ಮುಡಾ ಮತ್ತು ವಾಲ್ಮೀಕಿ ಹಗರಣಗಳ ತನಿಖೆಗೆ ಆಗ್ರಹಿಸಿ @BJP4Karnataka ಮತ್ತು @JanataDal_S ಸದಸ್ಯರು ವಿಧಾನಮಂಡಲದಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಅಹೋರಾತ್ರಿ ಧರಣಿಯ ಒಂದು ದೃಶ್ಯ.#KarnatakaAssembly pic.twitter.com/S2Mc8eLe6O

— cknewsnow.com (@cknewsnow) July 24, 2024

ಹಗರಣದ ತನಿಖೆಗೆ ನ್ಯಾಯಮೂರ್ತಿಗಳ ನೇತೃತ್ವದ ತಂಡ ರಚಿಸಲಾಗಿದೆ. ಆದರೆ ಮುಖ್ಯಮಂತ್ರಿಯೇ ತನಿಖೆಗೆ ಆದೇಶ ಮಾಡಿದರೆ ನ್ಯಾಯ ಹೇಗೆ ಸಿಗಲಿದೆ? ಸ್ಪೀಕರ್ ಕೂಡ ಚರ್ಚೆಗೆ ಅವಕಾಶ ನೀಡುತ್ತಿಲ್ಲ. ಭೋವಿ ನಿಗಮದ ಹಗರಣ ಚರ್ಚಿಸಲು ಅವಕಾಶ ನೀಡುತ್ತಾರೆ, ಆದರೆ ವಾಲ್ಮೀಕಿ ನಿಗಮದ ಹಗರಣ ಚರ್ಚೆಗೆ ಅವಕಾಶ ನೀಡುತ್ತಿಲ್ಲ. ಸ್ಪೀಕರ್ ನಡೆ ಕೂಡ ಪ್ರಶ್ನಾರ್ಹವಾಗಿದೆ.

ಪ್ರತಿಪಕ್ಷ ನಾಯಕ ಆರ್.ಅಶೋಕ

ಬೆಳಗ್ಗೆಯಿಂದಲೇ ಎರಡೂ ಸದನಗಳಲ್ಲಿ ಮುಡಾ, ವಾಲ್ಮೀಕಿ ಹಗರಣ ಪ್ರತಿಧ್ವನಿಸಿತು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಬಿಡಿ ನಿವೇಶನಗಳ ಹಂಚಿಕೆ ಭಾರೀ ಕೋಲಾಹಲಕ್ಕೆ ಕಾರಣವಾಯಿತು. ಚರ್ಚೆಗೆ ಅವಕಾಶ ನೀಡಲಿಲ್ಲವೆಂದು ಬಿಜೆಪಿ ಸದಸ್ಯರು ಎರಡೂ ಸದನಗಳಲ್ಲಿ ಅಹೋರಾತ್ರಿ ಧರಣಿಗೆ ಮುಂದಾದರು.

ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಈ ಬಗ್ಗೆ ಭಾರೀ ವಾಕ್ ಸಮರ ನಡೆದು ಸಭಾಧ್ಯಕ್ಷರು ಎರಡು ಬಾರಿ ಸದನ ಮುಂದೂಡಿದರಾದರೂ ಈ ವಿಷಯನ್ನು ನಿಲುವಳಿ ಸೂಚನೆಯಡಿ ಚರ್ಚೆಗೆ ತೆಗೆದುಕೊಳ್ಳಲು ನಿರಾಕರಿಸಿ ಪ್ರತಿಪಕ್ಷಗಳ ಮನವಿಯನ್ನು ತಳ್ಳಿಹಾಕಿದರು.

ಬೆಳಗ್ಗೆ ಸದನ ಆರಂಭಗೊಳ್ಳುತ್ತಿದ್ದಂತೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಬಿಜೆಪಿ ಸದಸ್ಯರು, ಮುಡಾದಲ್ಲಿ ಕೋಟ್ಯಂತರ ರೂ. ಹಗರಣ ನಡೆದಿದೆ, ಇದರಲ್ಲಿ ಮುಖ್ಯಮಂತ್ರಿ ಅವರೂ ಶಾಮೀಲಾಗಿದ್ದಾರೆ.

ನಿಲುವಳಿ ಸೂಚನೆಯಡಿ ಚರ್ಚೆಗೆ ಪಟ್ಟು

ಈ ಬಗ್ಗೆ ವಿಸ್ತೃತ ಚರ್ಚೆ ನಡೆಸಲು ಪ್ರಶ್ನೋತ್ತರ ಅವಧಿ ಬದಿಗಿಟ್ಟು ನಿಲುವಳಿ ಸೂಚನೆಯಡಿ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು. ಪ್ರಶ್ನೋತ್ತರ ಅವಧಿ ಮುಗಿಯುತ್ತಿದ್ದಂತೆ ನಿಮ್ಮ ನಿಲುವಳಿ ಸೂಚನೆ ಕುರಿತು ತೀರ್ಮಾನ ಕೈಗೊಳ್ಳುತ್ತೇನೆ, ಮೊದಲು ಪ್ರಶ್ನೋತ್ತರ ತೆಗೆದುಕೊಳ್ಳೋಣ ಎಂದರು.

ಪ್ರಶ್ನೋತ್ತರ ಮತ್ತು ಶೂನ್ಯ ವೇಳೆ ಮುಗಿಯುತ್ತಿದ್ದಂತೆ ಪ್ರತಿಪಕ್ಷ ಸದಸ್ಯರು ಮುಡಾ ಹಗರಣ ಚರ್ಚೆಗೆ ಅವಕಾಶ ನೀಡುವಂತೆ ಸಭಾಧ್ಯಕ್ಷರಲ್ಲಿ ಮನವಿ ಮಾಡಿದರು.

ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಮುಡಾ ಹಗರಣ ಇಡೀ ದೇಶದಲ್ಲಿ ಭಾರೀ ಸದ್ದು ಮಾಡುತ್ತಿದೆ, ಈ ಹಗರಣದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್‌ನ ಸದಸ್ಯರೂ, ಮುಖಂಡರೂ ಇದ್ದಾರೆ ಎಂಬ ಮಾಹಿತಿ ಇದೆ, ಎಲ್ಲರ ಬಣ್ಣ ಬಯಲಾಗಲಿ, ಚರ್ಚೆಗೆ ಅವಕಾಶ ಕೊಡಿ, ಆರೋಪಿಗಳ ಬಣ್ಣ ಬಯಲಾದರೆ ಮುಂದೆ ಒಳ್ಳೆಯವರು ಬರುತ್ತಾರೆ ಎಂದರು.

ಬಿಜೆಪಿ ಅನಾಚಾರದ ಸಾಕ್ಷಿ

ಈ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಸದನದಲ್ಲಿ ಕೆಲವು ದಾಖಲೆಗಳನ್ನು ಪ್ರದರ್ಶಿಸಿ, ಬಿಜೆಪಿಯವರು ಮಾಡಿರುವ ಅನಾಚಾರದ ಸಾಕ್ಷಿ ಇಲ್ಲಿದೆ, ಒಂದು ಬಂಡಿಯಷ್ಟು ಭ್ರಷ್ಟಾಚಾರ ಇದೆ, ಅವೆಲ್ಲವನ್ನೂ ನಾವು ಬಿಚ್ಚಿಡುತ್ತೇವೆ ಎಂದರು.

ಆಗ ಮತ್ತೆ ಯತ್ನಾಳ್ ಮಾತನಾಡಿ, ಯಾರೆಲ್ಲಾ ಲೂಟಿ ಮಾಡಿದ್ದಾರೆ ಎಂಬ ಸತ್ಯ ಹೊರಬರಲಿ, ಪಕ್ಷಾತೀತವಾಗಿ ಭ್ರಷ್ಟಾಚಾರ ಹೊರಗೆ ಬರಬೇಕು, ತಪ್ಪು ಮಾಡಿದವರನ್ನು ಮನೆಗೆ ಕಳುಹಿಸಿ, ಪ್ರಾಮಾಣಿಕರನ್ನು ಇಲ್ಲಿ ಉಳಿಸೋಣ ಎಂದರು. ಮಾತು ಮುಂದುವರೆಸಿದ ಬೈರತಿ ಸುರೇಶ್, ಬಿಜೆಪಿಯವರು ನಕಲಿ ದಾಖಲೆ ಕೊಟ್ಟು ಎಕರೆಗಟ್ಟಲೆ ತೆಗೆದುಕೊಂಡಿದ್ದಾರೆ, ಅವೆಲ್ಲವನ್ನೂ ನಾವು ಬಿಚ್ಚಿಡುತ್ತೇವೆ ಎಂದು ಪ್ರತಿಪಕ್ಷ ಸದಸ್ಯರಿಗೆ ತಿರುಗೇಟು ನೀಡಿದರು.

ಭಾರೀ ವಾಕ್ ಸಮರ

ಈ ಸಂದರ್ಭದಲ್ಲಿ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಭಾರೀ ವಾಕ್ ಸಮರ ನಡೆದಾಗ ಸಭಾಧ್ಯಕ್ಷರು ಸದನ ಕಲಾಪವನ್ನು ಎರಡು ಗಂಟೆಗಳ ಕಾಲ ಮುಂದೂಡಿದರು. ಸದನ ಮುಂದೂಡುವುದಕ್ಕೂ ಮುನ್ನ ಪ್ರತಿಪಕ್ಷ ಸದಸ್ಯರು ತಂದಿದ್ದ ನಿಲುವಳಿಸೂಚನೆ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನ್ಯಾಯಾಂಗ ತನಿಖೆ ಆರಂಭಗೊಂಡಿದೆ, ಈ ಕಾರಣದಿಂದ ಸದನದಲ್ಲಿ ಚರ್ಚೆಗೆ ಅವಕಾಶ ಸಾಧ್ಯವಿಲ್ಲ ಎಂದು ರೂಲಿಂಗ್ ನೀಡಿದರು.

ಬೋಜನ ವಿರಾಮದ ನಂತರ ಮತ್ತೆ ಸದನ ಸಮಾವೇಶಗೊಂಡಾಗ, ಪ್ರತಿಪಕ್ಷ ಸುನೀಲ್‌ಕುಮಾರ್ ಮಾತನಾಡಿ, ಮುಡಾ ಹಗರಣದ ಮೇಲಿನ ನಿಲುವಳಿಸೂಚನೆಗೆ ನೀವು ನೀಡಿರುವ ರೂಲಿಂಗ್ ಅನ್ನು ಮರುಪರಿಶೀಲಿಸಬೇಕೆಂದು ಮನವಿ ಮಾಡಿದರು.

ಮುಖ್ಯಮಂತ್ರಿ ಅವರೇ ಹಗರಣದಲ್ಲಿ ಆರೋಪಿಯಾಗಿದ್ದಾರೆ, ಕೋಟ್ಯಂತರ ರೂ. ಹಗರಣ ನಡೆದಿದೆ, ಚರ್ಚೆಗೆ ಅವಕಾಶ ಮಾಡಿಕೊಂಡುವಂತೆ ಮಾಡಿದ ಮನವಿಗೆ ಸಭಾಧ್ಯಕ್ಷರು, ಈಗ ಮಸೂದೆಗಳನ್ನು ತೆಗೆದುಕೊಳ್ಳೋಣ, ನಿಮ್ಮ ಕೋರಿಕೆಯನ್ನು ನಂತರ ಪರಿಶೀಲಿಸುತ್ತೇನೆ ಎಂದರು.

ರೂಲಿಂಗ್ ನಂತರ ಮತ್ತೆ ಅವಕಾಶ ಸಾಧ್ಯವಿಲ್ಲ

ತಕ್ಷಣವೇ ಮುಖ್ಯಮಂತ್ರಿ ಎದ್ದು ನಿಂತು, ಒಂದು ಬಾರಿ ರೂಲಿಂಗ್ ನೀಡಿದ ನಂತರ ಮತ್ತೆದೇ ವಿಷಯ ಪ್ರಸ್ತಾವಕ್ಕೆ ಅವಕಾಶ ಸಾಧ್ಯವಿಲ್ಲ ಎಂದು ಸಭಾಧ್ಯಕ್ಷರಿಗೆ ಹೇಳಿದರು. ಸಭಾಧ್ಯಕ್ಷರು ಮಾತನಾಡಿ, ಎರಡು ವರ್ಷಗಳ ಹಿಂದಿನ ಹಗರಣವನ್ನು ಇಲ್ಲಿ ಪ್ರಸ್ತಾಪ ಮಾಡುತ್ತಿದ್ದೀರಿ, ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ನಡೆಯುತ್ತಿದೆ, ಅದರ ಮುಂದೆ ನಿಮ್ಮ ದಾಖಲೆಗಳನ್ನು ನೀಡಿ ಎಂದು ವಿಷಯಕ್ಕೆ ತೆರೆ ಎಳೆದು ಮಸೂದೆಗಳ ಮಂಡನೆಗೆ ಅವಕಾಶ ಮಾಡಿದರು.

ಇದನ್ನು ಬಲವಾಗಿ ವಿರೋಧಿಸಿದ ಪ್ರತಿಪಕ್ಷ ಸದಸ್ಯರು, ಸಭಾಧ್ಯಕ್ಷರ ವಿರುದ್ಧವೇ ತಿರುಗಿಬಿದ್ದರಲ್ಲದೆ, ಮುಡಾ ಹಗರಣ ಬಗ್ಗೆ ಎಳೆ ಎಳೆಯಾಗಿ ಬಿಡಿಸಿಟ್ಟು ಭಾರೀ ಗದ್ದಲ ಎಬ್ಬಿಸಿ ಜೆಡಿಎಸ್ ಸದಸ್ಯರ ಜೊತೆಗೂಡಿ ಅಹೋರಾತ್ರಿ ಧರಣಿ ಆರಂಭಿಸಿದರು. ಗದ್ದಲದ ನಡುವೆಯೇ ಮಸೂದೆಗಳಿಗೆ ಅಂಗೀಕಾರ ಪಡೆದ ಸಭಾಧ್ಯಕ್ಷರು ಕಲಾಪವನ್ನು ಮುಂದೂಡಿದರು.

Tags: bjpckcknewsnowjdskarnatakaMuda scamPoliticssiddaramaiahValmiki corporation scam
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

ರಾಮನಗರದಿಂದ ರಾಮನ ಹೆಸರು ಬೇರ್ಪಡಿಸಿದವರು ಸರ್ವನಾಶ ಆಗಲಿದ್ದಾರೆ!

Leave a Reply Cancel reply

Your email address will not be published. Required fields are marked *

Recommended

ಇತಿ ನಮಸ್ಕಾರ.. ಎನ್ನುತ್ತಲೇ ಕರ್ಮಭೂಮಿ ಬೆಳಗಾವಿಗೆ ಬದಲು ದಿಲ್ಲಿಯಲ್ಲೇ ಚಿರನಿದ್ರೆಗೆ ಜಾರಿದರು ಸುರೇಶ್‌ ಅಂಗಡಿ

ಇತಿ ನಮಸ್ಕಾರ.. ಎನ್ನುತ್ತಲೇ ಕರ್ಮಭೂಮಿ ಬೆಳಗಾವಿಗೆ ಬದಲು ದಿಲ್ಲಿಯಲ್ಲೇ ಚಿರನಿದ್ರೆಗೆ ಜಾರಿದರು ಸುರೇಶ್‌ ಅಂಗಡಿ

5 years ago
ಗುಡಿಬಂಡೆ ಪ.ಪಂ.ಚುನಾವಣೆಯಲ್ಲಿ ಮಟ್ಕ, ಬೆಟ್ಟಿಂಗ್‌ ನಡೆಸುವ ವ್ಯಕ್ತಿಗೆ ಮತ ಹಾಕಿ ಗೆಲ್ಲಿಸಿದರಾ ಮತದಾರರು? 3ನೇ ವಾರ್ಡ್‌ ಎಲೆಕ್ಷನ್‌ ಕಥೆ ಬಿಚ್ಚಿಟ್ಟ ಆಶಾ ಜಯಪ್ಪ

ಗುಡಿಬಂಡೆ ಪ.ಪಂ.ಚುನಾವಣೆಯಲ್ಲಿ ಮಟ್ಕ, ಬೆಟ್ಟಿಂಗ್‌ ನಡೆಸುವ ವ್ಯಕ್ತಿಗೆ ಮತ ಹಾಕಿ ಗೆಲ್ಲಿಸಿದರಾ ಮತದಾರರು? 3ನೇ ವಾರ್ಡ್‌ ಎಲೆಕ್ಷನ್‌ ಕಥೆ ಬಿಚ್ಚಿಟ್ಟ ಆಶಾ ಜಯಪ್ಪ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ