• About
  • Advertise
  • Careers
  • Contact
Wednesday, May 14, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

cknewsnow desk by cknewsnow desk
May 8, 2025
in NATION, POLITICS, STATE, WORLD
Reading Time: 1 min read
0
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ
915
VIEWS
FacebookTwitterWhatsuplinkedinEmail

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಭಾರತದ್ದು ಪ್ರಬುದ್ಧ, ಸಂಯಮದ ಮಿಲಿಟರಿ ಪ್ರತಿಕ್ರಿಯೆ ಎಂದ ಜೆಡಿಎಸ್ ರಾಷ್ಟ್ರಾಧ್ಯಕ್ಷರು

ಬೆಂಗಳೂರು: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ಮಿಲಿಟರಿ ಕಾರ್ಯಾಚರಣೆ ನಡೆಸಿರುವ ಭಾರತ ಸರ್ಕಾರದ ಕ್ರಮವನ್ನು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಮುಕ್ತಕಂಠದಿಂದ ಸ್ವಾಗತಿಸಿದ್ದಾರೆ.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗುರುವಾರ ಪತ್ರ ಬರೆದಿರುವ ದೇವೇಗೌಡರು; ಮೇ 7ರಂದು ಪಹಲ್ಗಾಮ್ ನಲ್ಲಿ ನಡೆದಿರುವ ಭಯೋತ್ಪಾದಕ ದಾಳಿಗೆ ಭಾರತದ ಪ್ರಬುದ್ಧ ಮತ್ತು ಸಂಯಮದ ಮಿಲಿಟರಿ ಪ್ರತಿಕ್ರಿಯೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ನಾನು ನಿಮ್ಮನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.

“ಸೌದಿ ಅರೇಬಿಯಾ ಭೇಟಿಯಲ್ಲಿದ್ದ ನೀವು ಭಯೋತ್ಪಾದಕ ದಾಳಿ ವಿಷಯ ಗೊತ್ತಾಗುತ್ತದ್ದಂತೆಯೇ ಭೇಟಿಯನ್ನು ಮೊಟಕುಗೊಳಿಸಿ ಕೂಡಲೇ ಸ್ವದೇಶಕ್ಕೆ ವಾಪಸ್ ಬಂದಿರಿ. ತಕ್ಷಣದಿಂದಲೇ ದೇಶದಲ್ಲಿ ಸೃಷ್ಟಿಯಾಗಿದ್ದ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುವುದರ ಜೊತೆಗೆ, ವ್ಯೂಹಾತ್ಮಕ ಸಭೆಗಳನ್ನು ನಡೆಸಿ ಜಾಗತಿಕ ಬೆಂಬಲವನ್ನು ಸಜ್ಜುಗೊಳಿಸಲು ಮಹತ್ವದ ಪಾತ್ರ ವಹಿಸಿದಿರಿ. ಸಶಸ್ತ್ರ ಪಡೆಗಳಿಗೆ ಸ್ಫೂರ್ತಿ ನೀಡಲು ತಾವು ಮೊದಲ ದಿನದಿಂದಲೇ ನೀವು ತೆಗೆದುಕೊಂಡ ದೃಢ ನಿರ್ಧಾರದ ಕ್ರಮಗಳನ್ನು ನಾನು ಗಮನಿಸುತ್ತಿದ್ದೇನೆ. ನಂತರ ನೀವು ಎಲ್ಲಾ ತುರ್ತು ಪರಿಸ್ಥಿತಿಗಳ ಮೇಲ್ವಿಚಾರಣೆ ನಡೆಸಲು ಯುರೋಪ್ ಪ್ರವಾಸವನ್ನು ರದ್ದುಗೊಳಿಸಿದ್ದೀರಿ” ಎಂದು ಮಾಜಿ ಪ್ರಧಾನಿಗಳು ಮೋದಿ ಅವರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಳೆದ ಎರಡು ವಾರಗಳಿಂದ ನೀವು ಬಹಳ ಒತ್ತಡ ಮತ್ತು ಸಂಯಮದಿಂದ ಕರ್ತವ್ಯ ನಿರ್ವಹಿಸುತ್ತಿದ್ದೀರಿ. ದೇವರು ನಿಮಗೆ ದುಷ್ಟರನ್ನು ಹತ್ತಿಕ್ಕುವ ಸರ್ವಶಕ್ತಿಯನ್ನು ನೀಡಲಿ. ದೇಶ ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳನ್ನೂ ನಿವಾರಿಸುವ ಶಕ್ತಿಯೂ ನಿಮಗೆ ಸಿಗಲಿ. ಕಠಿಣ ಸಂದರ್ಭದಲ್ಲಿ ದೇಶದ ನಾಯಕತ್ವ ವಹಿಸಿರುವ ನಿಮ್ಮ ಹೆಸರು ಇತಿಹಾಸದಲ್ಲಿ ಪ್ರಕಾಶಮಾನವಾಗಿ ದಾಖಲಾಗಲಿದೆ ಎಂದು ದೇವೇಗೌಡರು ಪ್ರಧಾನಿಗಳಿಗೆ ಪತ್ರದಲ್ಲಿ ಹೇಳಿದ್ದಾರೆ.

ಆಧ್ಯಾತ್ಮಿಕ ಪ್ರಜ್ಞೆ, ಆಳವಾದ ಚಿಂತನೆ ಮತ್ತು ನಿರಂತರ ಪ್ರಾರ್ಥನೆ ಇಲ್ಲದೆ ಸಮತೋಲನ ಮತ್ತು ಸಮಚಿತ್ತತೆಯನ್ನು ಕಂಡುಕೊಳ್ಳುವುದು ಸುಲಭವಲ್ಲ ಎಂದು ನನಗೆ ತಿಳಿದಿದೆ. ಕಳೆದ ಕೆಲವು ದಿನಗಳಲ್ಲಿ ನೀವು ಎಲ್ಲವನ್ನೂ ಉತ್ತಮ ರೀತಿಯಲ್ಲಿ ಸಾಧಿಸಿದ್ದೀರಿ. ನಿಮ್ಮ ಇಚ್ಛಾಶಕ್ತಿಯನ್ನು ಸಶಕ್ತವಾಗಿ ಪ್ರದರ್ಶಿಸಿದ್ದೀರಿ. ಹಿಂದೆಯೂ ಹಲವಾರು ಸಂದರ್ಭಗಳಲ್ಲಿ ನಿಮ್ಮ ಈ ರೀತಿಯ ನಾಯಕತ್ವ ಗುಣ ಸ್ಪಷ್ಟವಾಗಿ ಗೋಚರಿಸಿದೆ ಎಂದು ಮಾಜಿ ಪ್ರಧಾನಿಗಳು ಪತ್ರದಲ್ಲಿ ತಿಳಿಸಿದ್ದಾರೆ.

ಭಯೋತ್ಪಾದನೆಯಂತಹ ಅಧರ್ಮದ ವಿರುದ್ಧ ನಾವು ಈ ಧರ್ಮದ ಯುದ್ಧವನ್ನು ನಡೆಸುತ್ತಿರುವಾಗ ದೇವರು ನಿಮ್ಮ ಜೊತೆಯಲ್ಲಿಯೇ ಇರಲಿ. ನಮ್ಮ ಮಹಾನ್ ರಾಷ್ಟ್ರವನ್ನು ರಕ್ಷಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಭಾರತವು ಶಾಂತಿಪ್ರಿಯ ರಾಷ್ಟ್ರವಾಗಿದೆ ಮತ್ತು ಯಾವಾಗಲೂ ಜಗತ್ತಿನಲ್ಲಿ ಸಕಾರಾತ್ಮಕತೆಯ ಬೆಳಕನ್ನು ಹರಡಿದೆ. ಆದರೆ ಯಾರಾದರೂ ರಾಷ್ಟದ ಶಾಂತಿಪ್ರಿಯತೆಯನ್ನೇ ನಮ್ಮ ದೌರ್ಬಲ್ಯವೆಂದು ನೋಡಿದರೆ, ನಾವು ಎಂತಹ ಸಮರ್ಥರು ಎಂಬುದನ್ನು ಅವರಿಗೆ ತೋರಿಸಿ ಕೊಟ್ಟಿದ್ದೀರಿ ಎಂದು ಮಾಜಿ ಪ್ರಧಾನಿಗಳು ಮೋದಿ ಅವರನ್ನು ಕೊಂಡಾಡಿದ್ದಾರೆ.

ನಾವು ಎದುರಿಸುತ್ತಿರುವ ಸವಾಲುಗಳು ಖಂಡಿತವಾಗಿಯೂ ಇಲ್ಲಿಗೆ ಕೊನೆಗೊಳ್ಳದಿರಬಹುದು, ಆದರೆ ನಾವು ಒಂದು ರಾಷ್ಟ್ರವಾಗಿ ಒಗ್ಗಟ್ಟಿನಿಂದ ಇರುವುದರಲ್ಲಿ ಅಪಾರ ಸಮಾಧಾನವಿದೆ. ನಾವು ಒಟ್ಟಿಗೆ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ ಹಾಗೂ ಒಂದು ರಾಷ್ಟ್ರವಾಗಿ ಮುನ್ನಡೆಯುತ್ತೇವೆ ಎಂದು ಮಾಜಿ ಪ್ರಧಾನಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Tags: airstrikehd devegowdaindiaIndian Armed Forcesnarendra modioperation sindoorPahalgam Terrorist Attack
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

ರಾಜ್ಯದಲ್ಲಿ ಕಾಂಗ್ರೆಸ್‌ ಅಲೆ ಎದ್ದಿದೆ ಎಂದ ಸಿದ್ದು

ರಾಜ್ಯದಲ್ಲಿ HMPV ವೈರಸ್ಸಿನ ಎರಡು ಪ್ರಕರಣ ಪತ್ತೆ

by cknewsnow desk
January 6, 2025
0

ಸೋಂಕು ಹರಡದಂತೆ ಸರ್ಕಾರದಿಂದ ಸೂಕ್ತ ಮುಂಜಾಗ್ರತಾ ಕ್ರಮ; ಮುಖ್ಯಮಂತ್ರಿ ಸಿದ್ದರಾಮಯ್ಯ

Next Post
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

Leave a Reply Cancel reply

Your email address will not be published. Required fields are marked *

Recommended

‌ರಾಜ್ಯದಲ್ಲಿ ಖಾಸಗಿ ಶಾಲೆ ಮತ್ತು ಪೋಷಕರ ನಡುವೆ ʼಫೀಸ್ ಫೈಟ್ʼ ಖಂಡಿತಾ ಒಳ್ಳೆಯದಲ್ಲ ಎಂದ ಸಚಿವ‌ ಎಸ್.ಸುರೇಶ್ ಕುಮಾರ್

ಮಾಜಿ ಸಚಿವ ಸುರೇಶ್‌ ಕುಮಾರ್‌ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಅಕೌಂಟ್‌

4 years ago
ಚಿಕ್ಕಬಳ್ಳಾಪುರ ಜಿಲ್ಲೆಯನ್ನು ನಡುಗಿಸಿದ ಆಲಿಕಲ್ಲು ಮಳೆ; ಶಿಡ್ಲಘಟ್ಟದಲ್ಲಿ ಸೈಜು ಕಲ್ಲುಗಳಂತೆ ಆಕಾಶದಿಂದ ನೆಲಕ್ಕೆ ದಬದಬನೇ ಬಿದ್ದ ಆಲಿಕಲ್ಲು! ಬೆಚ್ಚಿಬಿದ್ದ ಜನ, ನೆಲಕ್ಕುರಳಿದ ದ್ರಾಕ್ಷಿ ಚಪ್ಪರಗಳು

ಚಿಕ್ಕಬಳ್ಳಾಪುರ ಜಿಲ್ಲೆಯನ್ನು ನಡುಗಿಸಿದ ಆಲಿಕಲ್ಲು ಮಳೆ; ಶಿಡ್ಲಘಟ್ಟದಲ್ಲಿ ಸೈಜು ಕಲ್ಲುಗಳಂತೆ ಆಕಾಶದಿಂದ ನೆಲಕ್ಕೆ ದಬದಬನೇ ಬಿದ್ದ ಆಲಿಕಲ್ಲು! ಬೆಚ್ಚಿಬಿದ್ದ ಜನ, ನೆಲಕ್ಕುರಳಿದ ದ್ರಾಕ್ಷಿ ಚಪ್ಪರಗಳು

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ