• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಹೈ ಕ್ವಾಲಿಟಿ ಶಿಕ್ಷಣ; ಟಾರ್ಗೆಟ್ 2030

cknewsnow desk by cknewsnow desk
August 17, 2020
in NEWS IN USE, STATE
Reading Time: 1 min read
0
ಹೈ ಕ್ವಾಲಿಟಿ ಶಿಕ್ಷಣ; ಟಾರ್ಗೆಟ್ 2030
916
VIEWS
FacebookTwitterWhatsuplinkedinEmail

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಮಹತ್ವದ ಹೆಜ್ಜೆ ಇಟ್ಟ ಸರಕಾರ; 3 ವರ್ಷಗಳಲ್ಲಿ ಸಂಶೋಧನೆಗೆ 6, ಬೋಧನೆಗೆ 10 ಪ್ರತ್ಯೇಕ ವಿವಿ; ಜಿಲ್ಲೆಗೊಂದು ಸ್ವಾಯತ್ತ ಶಿಕ್ಷಣ ಸಂಸ್ಥೆ

ಬೆಂಗಳೂರು: 30 ರಾಜ್ಯಗಳ ಪೈಕಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಲಿದೆ. ಅದಕ್ಕಾಗಿ ಸರಕಾರವು ವೇಗಗತಿಯಲ್ಲಿ ಹೆಜ್ಜೆಗಳನ್ನು ಹಾಕುತ್ತಿದ್ದು, ಹಂತ ಹಂತಾಗಿ ಜಾರಿ ಮಾಡಲು ಪಕ್ಕಾ ಪ್ಲಾನ್ ಮಾಡಿಕೊಳ್ಳುತ್ತಿದೆ.

ಕೇಂದ್ರ ಸರಕಾರವು ಶಿಕ್ಷಣವನ್ನು ಕೇಸರೀಕರಣ ಮಾಡುತ್ತಿದೆ ಎಂದು ಕೆಲವರು ಹುಯಿಲೆಬ್ಬಿಸುತ್ತಿರುವ ಬೆನ್ನಲ್ಲಿಯೇ, ಸರಕಾರ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನೂ ವಹಿಸುತ್ತಿದ್ದು, ಯಾವುದೇ ವಿವಾದಕ್ಕೆ ಆಸ್ಪದವಿಲ್ಲದೆ ಶಿಕ್ಷಣ ನೀತಿಯನ್ನು ಆನಾಯಾಸವಾಗಿ ಜಾರಿ ಮಾಡಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಜತೆಗೆ, ಇದಕ್ಕಾಗಿ ಎದುರಾಗುವ ಎಲ್ಲ ಕಾನೂನು ಅಡೆತಡೆಗಳನ್ನು ನಿವಾರಿಸುವುದೂ ಸೇರಿದಂತೆ, ಕೆಲ ಕಾಯ್ದೆಗಳಿಗೆ ತಿದ್ದುಪಡಿ ಮಾಡುವುದು, ಆಡಳಿತಕ್ಕೆ ಸಂಬಂಧಪಟ್ಟ ಬದಲಾವಣೆಗಳನ್ನು ಮಾಡಿಕೊಳ್ಳುವುದು ಸೇರಿದಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸರಕಾರ ಮುಂದಾಗಿದೆ.

ಪ್ರತ್ಯೇಕ ವಿವಿಗಳು:

ಇದಕ್ಕಾಗಿ 2030ರ ವೇಳೆಗೆ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ನಿಗದಿ ಮಾಡಲಾಗಿರುವ ಎಲ್ಲ ಗುರಿಗಳನ್ನು ಸಂಪೂರ್ಣವಾಗಿ ಸಾಧಿಸುವ ನಿಟ್ಟಿನಲ್ಲಿ ಸರಕಾರ ಸರ್ವ ಪ್ರಯತ್ನಗಳಿಗೂ ಮುಂದಾಗಿದ್ದು, ಮುಂದಿನ ಮೂರು ವರ್ಷಗಳಲ್ಲಿ 6 ಸಂಶೋಧನಾ ಕೇಂದ್ರಿತ ವಿಶ್ವವಿದ್ಯಾಲಯ, 10 ಬೋಧನಾ ಕೇಂದ್ರಿತ ವಿಶ್ವವಿದ್ಯಾಲಯ ಹಾಗೂ 34 ಸ್ವಾಯತ್ತ ಶಿಕ್ಷಣ ಸಂಸ್ಥೆಗಳನ್ನು ತೆರೆಯಲಿದೆ.

ಬೆಂಗಳೂರಿನಲ್ಲಿ ಸೋಮವಾರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ಕುರಿತು ರಚಿಸಲಾಗಿರುವ ಕಾರ್ಯಪಡೆಯ ಜತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.‌ ಸುರೇಶ್‌ ಕುಮಾರ್‌ ಜತೆ ಸೇರಿ ಮಹತ್ವದ ಮಾತುಕತೆ ನಡೆಸಿದ ನಂತರ ಮಾತನಾಡಿದ ಉನ್ನತ ಶಿಕ್ಷಣ ಸಚಿವರೂ ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ ಅಶ್ವತ್ಥನಾರಾಯಣ, ʼಹೊಸದಾಗಿ ಆರಂಭವಾಗುವ ಈ ಸಂಸ್ಥೆಗಳ ಮೂಲಕ ಪ್ರತಿ ಜಿಲ್ಲೆಯಲ್ಲೂ ಗುಣಮಟ್ಟದ ಶಿಕ್ಷಣ, ಬೋಧನೆ ಹಾಗೂ ಸಂಶೋಧನೆಗೆ ಪೂರಕವಾದ ಮುಕ್ತ ಅವಕಾಶ ಕಲ್ಪಿಸಲಾಗುವುದುʼ ಎಂದರು.

ಮುಂದಿನ ನಾಲ್ಕೈದು ದಿನಗಳಲ್ಲಿ ಈ ಕಾರ್ಯಪಡೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಬಗ್ಗೆ ಒಂದು ಕರಡು ಪ್ರತಿಯನ್ನು ಸರಕಾರಕ್ಕೆ ನೀಡಲಿದೆ. ಈ ತಿಂಗಳ 29ರೊಳಗೆ ನೀತಿಯ ಸಮಗ್ರ ಜಾರಿಯ ಬಗ್ಗೆ ಪರಿಪೂರ್ಣ ನೀಲನಕ್ಷೆ (ರೋಡ್‌ಮ್ಯಾಪ್)‌ ಯನ್ನು ಸಲ್ಲಿಸಲಿದೆ. ಸಮಾಜದ ಎಲ್ಲ ಸಮಸ್ಯೆಗಳಿಗೂ ಶಿಕ್ಷಣವೇ ಸಂಜೀವಿನಿ ಎಂಬುದು ಸರಕಾರದ ಬಲವಾದ ನಂಬಿಕೆ. ಈ ನಿಟ್ಟಿನಲ್ಲಿ ಪ್ರಾಥಮಿಕ, ಪ್ರೌಢ ಮತ್ತು ಉನ್ನತ ಶಿಕ್ಷಣದ ಎಲ್ಲ ಹಂತಗಳಲ್ಲಿಯೂ ಏನೆಲ್ಲ ಬದಲಾವಣೆ ತರಬೇಕು ಎಂಬುದನ್ನು ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಆಮೂಲಾಗ್ರವಾಗಿ ತಿಳಿಸಲಾಗಿದೆ. ಈ ನಿಟ್ಟಿನಲ್ಲಿ ಕಾರ್ಯಪಡೆ ಜತೆ ಮಹತ್ವದ ಸಮಾಲೋಚನೆ ನಡೆಸಿ ಮುಂದಿನ ಕಾರ್ಯಕ್ರಮಗಳ ದಿಕ್ಸೂಚಿಯನ್ನು ಅಂತಿಮಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಮಾಹಿತಿ ನೀಡಿದರು.

ಕ್ಷಿಪ್ರಗತಿಯಲ್ಲಿ ಕ್ರಮ:

ಕಾರ್ಯಪಡೆ ನೀಲನಕ್ಷೆಯನ್ನು ಸಲ್ಲಿಸಿದ ಕೂಡಲೇ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರನ್ನೊಳಗೊಂಡು ಮುಖ್ಯಮಂತ್ರಿಗಳ ಜತೆ ಸಮಾಲೋಚನೆ ನಡೆಸಲಾಗುವುದು. ನೀತಿಯ ಜಾರಿಗೆ ಅಗತ್ಯವಾಗಿರುವ ಕಾನೂನು ತಿದ್ದುಪಡಿ, ಆಡಳಿತ ಸುಧಾರಣೆ ಮತ್ತು ಸಂಪನ್ಮೂಲ ಕ್ರೋಢೀಕರಣದ ಬಗ್ಗೆ ಕ್ಷಿಪ್ರಗತಿಯಲ್ಲಿ ನಿರ್ಧಾರಗಳನ್ನು ಕೈಗೊಳ್ಳಲಾಗುವುದು. ಬಲವಾದ ರಾಜಕೀಯ ಇಚ್ಛಾಶಕ್ತಿ ಮತ್ತು ಬದ್ಧತೆಯಿಂದ ಈ ನೀತಿಯನ್ನು ಜಾರಿ ಮಾಡಲಾಗುವುದು. ಕರ್ನಾಟಕಕ್ಕೆ ಮಾತ್ರವಲ್ಲ ಇಡೀ ದೇಶಕ್ಕೆ ಹೊಸ ದಿಕ್ಸೂಚಿಯನ್ನು ನೀಡಬಲ್ಲ ಶಕ್ತಿ ಇದಕ್ಕಿದೆ ಎಂದು ಅವರು ತಿಳಿಸಿದರು.

10 ವರ್ಷಗಳ ಗುರಿ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಂಪೂರ್ಣವಾಗಿ ಜಾರಿ ಮಾಡಿ ಅದರ ಎಲ್ಲ ಗುರಿಗಳನ್ನು ತಲುಪಲು ಮುಂದಿನ 10 ವರ್ಷಗಳ ಗುರಿಯನ್ನು ಹಾಕಿಕೊಳ್ಳಲಾಗಿದೆ. ಅದನ್ನು ಟಾರ್ಗೆಟ್‌ 2030 ಎಂದು ಪರಿಗಣಿಸಿದ್ದೇವೆ. ನೀತಿಯ ಅನುಷ್ಟಾನದ ಎಲ್ಲ ಫಲಿತಾಂಶಗಳು ಈ ಅವಧಿಯಲ್ಲಿ ಗೋಚರವಾಗಲೇಬೇಕು. ಆ ನಿಟ್ಟಿನಲ್ಲಿ ಸರಕಾರ ಎಲ್ಲ ಕಾರ್ಯಸೂಚಿಯನ್ನು ಹಾಕಿಕೊಳ್ಳುತ್ತಿದೆ. ಸದ್ಯಕ್ಕೆ ರಾಜ್ಯವು ನೆರೆ ಮತ್ತು ಕೋವಿಡ್‌ ಬಿಕ್ಕಟ್ಟಿಗೆ ಗುರಿಯಾಗಿದೆ. ಅದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಮುಂದಡಿ ಇಡಲಾಗುವುದು. ಆ ದಾರಿಯಲ್ಲಿ ಸರಕಾರಕ್ಕೆ ನಮ್ಮ ಕಾರ್ಯಪಡೆಯು ನೆರೆವಾಗಲಿದೆ ಎಂದು ಡಾ. ಅಶ್ವತ್ಥನಾರಾಯಣ ಹೇಳಿದರು.

ರಾಜ್ಯವ್ಯಾಪಿ ಆಂದೋಲನ:

ಇನ್ನು ಮುಂದಿನ ಒಂದು ವರ್ಷ ರಾಜ್ಯದೆಲ್ಲೆಡೆ ಶಿಕ್ಷಣ ನೀತಿಯದ್ದೇ ಧ್ಯಾನ, ಚರ್ಚೆ ನಡೆಯಬೇಕು. ಎಲ್ಲ ರಾಜಕೀಯ ಮುಖಂಡರು, ಸಂಘ- ಸಂಸ್ಥೆಗಳು ಹಾಗೂ ಸಮಾಜದ ಪ್ರತಿಯೊಬ್ಬರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡಲಾಗುವುದು. ಅದಕ್ಕಾಗಿ ರಾಜ್ಯವ್ಯಾಪಿ ದೊಡ್ಡ ಆಂದೋಲನವನ್ನೇ ಹಮ್ಮಿಕೊಳ್ಳಲಾಗುವುದು. ಈ ಆಂದೋಲನದಲ್ಲಿ ಇಡೀ ಸರಕಾರವೇ ಭಾಗಿಯಾಗಲಿದ್ದು, ಜೊತೆಯಲ್ಲಿ ಶಿಕ್ಷಣ ತಜ್ಞರು ಮತ್ತು ಕಾರ್ಯಪಡೆ ಸದಸ್ಯರೆಲ್ಲರೂ ಇರುತ್ತಾರೆ. ಕಾರ್ಯಪಡೆಯ ರೋಡ್‌ಮ್ಯಾಪ್‌ ಕೈಗೆ ಸಿಕ್ಕ ಕೂಡಲೇ ಈ ಆಂದೋಲನವನ್ನು ಆರಂಭಿಸಲಾಗುವುದು. ಎಲ್ಲ ತಯಾರಿ ಮತ್ತು ಪೂರ್ವಸಿದ್ಧತೆಯನ್ನು ಮಾಡಿಕೊಂಡೇ ಮುಂದಿನ ಹೆಜ್ಜೆ ಇರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿ ಸಮಿತಿ ಸದಸ್ಯ ಪ್ರೊ. ಎಂ.ಕೆ. ಶ್ರೀಧರ್ ಅವರೊಂದಿಗೆ ಡಿಸಿಎಂ ಡಾ. ಅಶ್ವತ್ಥನಾರಾಯಣ, ಸಚಿವ ಸುರೇಶ್ ಕುಮಾರ್ ಇತರರು.

ಹೈ ಕ್ವಾಲಿಟಿ ಶಿಕ್ಷಣ:

ಇನ್ನು ಕಾರ್ಯಪಡೆ ಸಭೆಯಲ್ಲಿ ತಮ್ಮ ವಾದವನ್ನು ಮಂಡಿಸಿದ ಕಾರ್ಯಪಡೆ ಸದಸ್ಯರು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ಕೊಡುವ ಎಲ್ಲ ವ್ಯವಸ್ಥೆಯೂ ಆಗಬೇಕು. ಅದಕ್ಕಾಗಿ ದಕ್ಷತೆಯುಳ್ಳ, ಉತ್ತಮ ಗುಣಮಟ್ಟದ ಹಾಗೂ ಬಹುಶಿಸ್ತಿನ ಶಿಕ್ಷಣ ಸಂಸ್ಥೆಗಳು ಬರುವಂತೆ ನೋಡಿಕೊಳ್ಳಬೇಕು. ಹಾಲಿ ಇರುವ ಶಿಕ್ಷಣ ಸಂಸ್ಥೆಗಳನ್ನು ಆ ಮಟ್ಟಕ್ಕೆ ಎತ್ತರಿಸಬೇಕು. ಅದೇ ಕಾಲೇಜುಗಳನ್ನು ಈಗಿನ ಸ್ಥಿತಿಯಿಂದ ಮೇಲೆತ್ತಿ ಸುಧಾರಿಸಬೇಕು. ಅತ್ಯಂತ ಗುಣಮಟ್ಟದ ಸಂಶೋಧನೆ ಮತ್ತು ಬೋಧನೆಗೆ ವ್ಯವಸ್ಥೆ ಮಾಡಬೇಕು ಎಂದು ಕಾರ್ಯಪಡೆಯ ಸದಸ್ಯರು ಸರಕಾರಕ್ಕೆ ಸಲಹೆ ಮಾಡಿದರು ಎಂಬುದಾಗಿ ಉಪ ಮುಖ್ಯಮಂತ್ರಿ ತಿಳಿಸಿದರು.

ಶಾಸಕ ಅರುಣ ಶಹಾಪುರ, ರಾಷ್ಟ್ರೀಯ ಶಿಕ್ಷಣ ನೀತಿ ಸಮಿತಿ ಸದಸ್ಯ ಕಟ್ಟಿಮನಿ, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ರಚಿಸಿರುವ ಕಾರ್ಯಪಡೆ ಅಧ್ಯಕ್ಷ ಎಸ್‌.ವಿ.ರಂಗನಾಥ, ಸದಸ್ಯರಾದ ವಿಶ್ರಾಂತ ಕುಲಪತಿ ಪ್ರೊ ಬಿ.ತಿಮ್ಮೇಗೌಡ, ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ ಅನುರಾಗ್‌ ಬೆಹರ್‌, ಬೆಂಗಳೂರು ವಿವಿ ಕುಲಪತಿ ಪ್ರೊ ವೇಣುಗೋಪಾಲ್‌, ಸೃಷ್ಟಿ ಸಂಸ್ಥೆ ನಿರ್ದೇಶಕಿ ಡಾ.ಗೀತಾ ನಾರಾಯಣನ್‌, ಪದವಿ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್‌ ಮತ್ತಿತರ ಪ್ರಮುಖರು ಸಭೆಯಲ್ಲಿ ಹಾಜರಿದ್ದರು.

ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ ಅವರು ವರ್ಚುಯಲ್‌ ಮೂಲಕ ಸಭೆಗೆ ಹಾಜರಾಗಿದ್ದರು.

ಯುಜಿಸಿ ಸದಸ್ಯರಾಗಿ ನೇಮಕವಾದ ರಾಷ್ಟ್ರೀಯ ಶಿಕ್ಷಣ ನೀತಿ ಸಮಿತಿಯ ಸದಸ್ಯರೂ ಪ್ರೊ. ಎಂ.ಕೆ. ಶ್ರೀಧರ್‌ ಹಾಗೂ ಅನಂತಪುರ ಸೆಂಟ್ರಲ್‌ ವಿವಿ ಕುಲಪತಿಯಾಗಿ ನೇಮಕವಾಗಿರುವ ಉನ್ನತ ಶಿಕ್ಷಣ ಪರಿಷತ್ತಿನ ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ. ಎಸ್‌.ಎ.ಕೋರಿ ಅವರನ್ನು ಇದೇ ವೇಳೆ ಉಪ ಮುಖ್ಯಮಂತ್ರಿ ಸರ್ಕಾರದ ಪರವಾಗಿ ಗೌರವಿಸಿದರು.


lead Photo: City engineering college, Dodkalsandra banglore

Tags: dr cn ashwath narayankarnataka educationneps suresh kumar
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
20ರಂದೇ ಸಿಇಟಿ ಫಲಿತಾಂಶ; ಶುಲ್ಕ, ಸೀಟು ಹಂಚಿಕೆಯಲ್ಲಿ ಬದಲಿಲ್ಲ

20ರಂದೇ ಸಿಇಟಿ ಫಲಿತಾಂಶ; ಶುಲ್ಕ, ಸೀಟು ಹಂಚಿಕೆಯಲ್ಲಿ ಬದಲಿಲ್ಲ

Leave a Reply Cancel reply

Your email address will not be published. Required fields are marked *

Recommended

ಗಾಂಧಿ ಜಯಂತಿಗೂ ಮುನ್ನವೇ ಪಬ್ ಒಪೆನ್!

ಶಿಕ್ಷಣ ಇಲಾಖೆಯಲ್ಲಿ ಲಂಚಾವತಾರ

3 years ago
ಬಾಗೇಪಲ್ಲಿ ನಂತರ ಗುಡಿಬಂಡೆಯಲ್ಲಿ ನಾಳೆ ಶಾಸಕರಿಂದ 35,000 ಫುಡ್‌ ಕಿಟ್‌ ವಿತರಣೆ

ಬಾಗೇಪಲ್ಲಿ ನಂತರ ಗುಡಿಬಂಡೆಯಲ್ಲಿ ನಾಳೆ ಶಾಸಕರಿಂದ 35,000 ಫುಡ್‌ ಕಿಟ್‌ ವಿತರಣೆ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ