• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಜ್ಞಾನ ಆರ್ಥಿಕತೆ ಮತ್ತು ಆತ್ಮನಿರ್ಭರತೆ; ನೂತನ ಶಿಕ್ಷಣ ನೀತಿಗೆ ಹೊಸ ಆಯಾಮ ಕೊಡಲು ಮೋದಿ ಹೆಜ್ಜೆ

cknewsnow desk by cknewsnow desk
September 7, 2020
in NATION, NEWS & VIEWS, STATE
Reading Time: 3 mins read
0
ಜ್ಞಾನ ಆರ್ಥಿಕತೆ ಮತ್ತು ಆತ್ಮನಿರ್ಭರತೆ; ನೂತನ ಶಿಕ್ಷಣ ನೀತಿಗೆ ಹೊಸ ಆಯಾಮ ಕೊಡಲು ಮೋದಿ ಹೆಜ್ಜೆ
968
VIEWS
FacebookTwitterWhatsuplinkedinEmail

ಬೆಂಗಳೂರು/ನವದೆಹಲಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಗೆ ಕೇಂದ್ರ ಸರಕಾರವು ವೇಗ ನೀಡಿದೆ. ‌ದೇಶದ ಪ್ರತಿಷ್ಠಿತ ಬಾಹ್ಯಾಕಾಶ ವಿಜ್ಞಾನಿ, ಇಸ್ತ್ರೋ ಮಾಜಿ ಅಧ್ಯಕ್ಷ, ಮಿಗಿಲಾಗಿ ಕನ್ನಡಿಗ ಡಾ.ಕಸ್ತೂರಿ ರಂಗನ್‌ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಸಮಿತಿ ನೀಡಿರುವ ವರದಿಯನ್ನು ಹಂತ ಹಂತವಾಗಿ ಜಾರಿ ಮಾಡಲು ನರೇಂದ್ರ ಮೋದಿ ಆಡಳಿತ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ.

2020 ಜುಲೈ 29ರಂದು ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿತ್ತು. ಅದಾದ ಮೇಲೆ ಆ ನೀತಿಯನ್ನು ಪ್ರಕಟಿಸಲಾಗಿತ್ತಲ್ಲದೆ, ಕೇಂದ್ರದ ಮಾನವ ಸಂಪನ್ಮೂಲ ಖಾತೆಗೆ ಶಿಕ್ಷಣ ಸಚಿವಾಲಯವೆಂದೂ ಮರುನಾಮಕರಣ ಮಾಡುವ ಹೆಜ್ಜೆಯನ್ನೂ ಕೇಂದ್ರ ಇಟ್ಟಿತ್ತು. ಇದರಿಂದ ಆಡಳಿತಾತ್ಮಕವಾಗಿ ಸರಕಾರವು ಕೆಲ ದಿನಗಳಿಂದಲೇ ವೇಗಗತಿಯಲ್ಲಿ ಹೆಜ್ಜೆಗಳನ್ನು ಇಡುತ್ತಾ ಬಂದಿದೆ ಎಂಬುದು ಇದರಿಂದ ಅರ್ಥವಾಗುತ್ತಿದೆ.

ಹಾಗೆ ನೋಡೊದರೆ 2019ರಲ್ಲಿಯೇ ಕೇಂದ್ರವು ರಾಷ್ಟ್ರೀಯ ಶಿಕ್ಷಣ ನೀತಿ (NEP: National Education Policy ) ಕರಡನ್ನು ಎಲ್ಲ ರಾಜ್ಯಗಳಿಗೆ ಒದಗಿಸಿತ್ತು. ಆದು ಕೈಗೆ ಸಿಕ್ಕ ಕೂಡಲೇ ರಾಜ್ಯ ಸರಕಾರವು ಮಾಜಿ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ್‌ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ ರಚನೆ ಮಾಡಿತ್ತಲ್ಲದೆ, ಅದರ ಜಾರಿಯ ದಿಕ್ಕಿನಲ್ಲಿ ಉಳಿದೆಲ್ಲ ರಾಜ್ಯಗಳಿಗಿಂತ ವೇಗವಾಗಿ ಹೆಜ್ಜೆಗಳನ್ನು ಇಟ್ಟಿತ್ತು. ಮುಖ್ಯವಾಗಿ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಅವರಂತೂ, ಎಲ್ಲ ರಾಜ್ಯಗಳಿಗಿಂತ ಮೊದಲೇ ನಮ್ಮ ರಾಜ್ಯದಲ್ಲಿ ಈ ನೀತಿಯನ್ನು ಮೊದಲು ಜಾರಿ ಮಾಡುವ ಉಮೇದಿನಲ್ಲಿದ್ದಾರೆ. ಅದಕ್ಕಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಇದರ ಜತೆಯಲ್ಲೇ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್.‌ ಸುರೇಶ್‌ ಕುಮಾರ್‌ ಕೂಡ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ವ್ಯಾಪ್ತಿಯಲ್ಲಿ ಈ ನೀತಿಯನ್ನು ಅನುಷ್ಟಾನಕ್ಕೆ ತರಲು ಯತ್ನಿಸುತ್ತಿದ್ದಾರೆ.

1986ರಲ್ಲಿ ಪ್ರಧಾನಮಂತ್ರಿ ರಾಜೀವ್ ಗಾಂಧಿ ಅವರು ಶಿಕ್ಷಣ ನೀತಿಯ ಬಗ್ಗೆ ಗಂಭೀರವಾಗಿ ಆಲೋಚನೆ ಮಾಡಿದ್ದರು. ಅವರಿಂದ ಎರಡನೇ ಬಾರಿಗೆ ಶಿಕ್ಷಣ ನೀತಿಯನ್ನು ಪ್ರಕಟಿಸಿದ್ದರು. ಆದರೆ 86ರ ಶಿಕ್ಷಣ ನೀತಿಗಿಂತ ಹೊಸ ಶಿಕ್ಷಣ ನೀತಿ ಪರಿಣಾಮಕಾರಿಯಾಗಿದೆ ಹಾಗೂ ಪ್ರಚಲಿತವಾಗಿದೆ. 2017ರಲ್ಲಿಯೇ ಮೋದಿ ಸರಕಾರವು ಕಸ್ತೂರಿ ರಂಗನ್ ಅವರ ನೇತೃತ್ವದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಗಾಗಿ ಕರಡು ಸಿದ್ಧತೆಗಾಗಿ ಹೊಸ ಸಮಿತಿಯನ್ನು ರಚನೆ ಮಾಡಿತ್ತು. ಅದನ್ನೀಗ ದೇಶಾದ್ಯಂತ ಉತ್ತಮ ರೀತಿಯಲ್ಲಿ ಜಾರಿ ಮಾಡಲು ನರೇಂದ್ರ ಮೋದಿ ಸರಕಾರ ಸರ್ವ ಪ್ರಯತ್ನಗಳನ್ನೂ ಮಾಡುತ್ತಿದೆ.

ಜ್ಞಾನ ಆರ್ಥಿಕತೆ (Knowledge Economy)

ನೂತನ ಶಿಕ್ಷಣ ನೀತಿಯಿಂದ ೨೧ನೇ ಶತಮಾನದಲ್ಲಿ ಭಾರತವು ಜ್ಞಾನ ಆರ್ಥಿಕತೆಯಲ್ಲಿ ಜಗತ್ತಿನಲ್ಲಿಯೇ ಮುಂಚೂಣಿ ರಾಷ್ಟ್ರವಾಗಿ ಹೊರಹೊಮ್ಮಲಿದೆ. ಇದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕನಸು. ಹಿಂದಿನ ರಾಷ್ಟ್ರಪತಿ ಅಬ್ದುಲ್‌ ಕಲಾಂ ಅವರು, ಭಾರತದಲ್ಲಿ ಜ್ಞಾನಯುಗ ಉದಯವಾಗಲಿ ಎಂದು ಹಾರೈಸಿದ್ದರಲ್ಲದೆ, ಅಂತಹ ದಿನ ಬಂದೇಬರುತ್ತದೆ ಎಂದು ಭವಿಷ್ಯ ನುಡಿದಿದ್ದರು. ಅದು ನಿಜವಾಗುವತ್ತ ಭಾರತ ಹೆಜ್ಜೆ ಹಾಕುತ್ತಿದೆ.

ಈ ನಿಟ್ಟಿನಲ್ಲಿಯೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ಹಿನ್ನೆಲೆಯಲ್ಲಿ ಸೋಮವಾರ ನವದೆಹಲಿಯಿಂದಲೇ ದೇಶದ ಎಲ್ಲ ರಾಜ್ಯಪಾಲರು ಮತ್ತು ಶಿಕ್ಷಣ ಸಚಿವರ ಎರಡು ದಿನಗಳ ಆನ್‌ಲೈನ್‌ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರೊಂದಿಗೆ ಸಂವಾದ ನಡೆಸಿದರು ಮೋದಿ. “ಶಿಕ್ಷಣ ಕ್ಷೇತ್ರದಲ್ಲಿ ಭಾರತಕ್ಕೆ ಉಜ್ವಲ ಭವಿಷ್ಯವಿದೆ. ಆ ನಿಟ್ಟಿನಲ್ಲಿ ಶಿಕ್ಷಣ ನೀತಿ ಹೆಚ್ಚು ಸಹಕಾರಿಯಾಗಲಿದೆ” ಎಂದು ಅವರು ಹೇಳಿದರು.

ಮೋದಿ ಮಾತುಗಳು…

*ಶಿಕ್ಷಣ ನೀತಿಯಲ್ಲಿ ಸರಕಾರದ ಪ್ರಭಾವ ಕಡಿಮೆ ಇರಬೇಕು, ಏಕೆಂದರೆ ಇದು ಸರಕಾರದ ಶಿಕ್ಷಣ ನೀತಿಯಲ್ಲ, ದೇಶದ ಶಿಕ್ಷಣ ನೀತಿ. ವಿದೇಶ, ರಕ್ಷಣಾ ನೀತಿ ಹೇಗೆ ದೇಶದ್ದು ಆಗುತ್ತದೆಯೋ ಹಾಗೆಯೇ ಶಿಕ್ಷಣ ನೀತಿ ದೇಶದ್ದು.

*ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಯುವಕರಿಗೆ ಅಗತ್ಯ ಕೌಶಲ್ಯಗಳು ಬೇಕು. ಅದಕ್ಕೆ ಪ್ರಾಯೋಗಿಕ ಕಲಿಕೆಯ ಅಗತ್ಯವಿದೆ. ರಾಷ್ಟ್ರೀಯ ಶಿಕ್ಷಣ ನೀತಿ 2020 ಇದಕ್ಕೆ ಅವಕಾಶ ಕಲ್ಪಿಸಲಿದೆ ಎಂದ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯು ಭಾರತವನ್ನು ಸಮಾನ, ಸ್ಪರ್ಧಾತ್ಮಕ ಮತ್ತು ಕ್ರಿಯಾಶೀಲ ಜ್ಞಾನದ ಸಮಾಜವನ್ನಾಗಿ ರೂಪಿಸಲಿದೆ.

ಶಿಕ್ಷಣ ನೀತಿ ಓದು, ಬರೆಯುವುದರ ಮೇಲೆ ನಿಂತಿಲ್ಲ. ಇದು ದೇಶದ ಆರ್ಥಿಕ ಮತ್ತು ಸಾಮಾಜಿಕ ಪರಿಸ್ಥಿತಿಯ ಮೇಲೆ ಪ್ರಭಾವ ಬೀರಲಿದೆ. ವಿದ್ಯಾರ್ಥಿಗಳ ಕಲಿಕೆ ಪುಸ್ತಕಕ್ಕೆ ಮಾತ್ರ ಸೀಮಿತ ಆಗಬಾರದು. ಇದು ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯ.

*ಉದ್ಯೋಗ ಮಾರುಕಟ್ಟೆಯ ಅಗತ್ಯಗಳಿಗೆ ತಕ್ಕಂತೆ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಬದಲಿಸಿಕೊಳ್ಳಬೇಕಾದ ಅಗತ್ಯವಿದೆ. ಅದಕ್ಕೆ ಪೂರಕವಾದ ಎಲ್ಲ ಅಂಶಗಳೂ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಇವೆ ಹಾಗೂ ದೇಶದ ನಿರೀಕ್ಷೆಗಳನ್ನು ಈಡೇರಿಸುವ ಶಕ್ತಿಯನ್ನು ನೀತಿ ಹೊಂದಿದೆ.

*ಶಿಕ್ಷಣ ನೀತಿ ಇಡೀ ದೇಶಕ್ಕೆ ಹೊಸ ದಿಕ್ಸೂಚಿ ನೀಡುವ ಶಕ್ತಿ ಹೊಂದಿದೆ. ವಿವಿಧ ಕ್ಷೇತ್ರಗಳೂ ಸೇರಿ ಜಾಗತಿಕವಾಗಿ ಆಗುತ್ತಿರುವ ಬದಲಾವಣೆಗಳ ಹಿನ್ನೆಲೆಯಲ್ಲಿ ಉದ್ಯೋಗ ಮಾರುಕಟ್ಟೆಯಲ್ಲಿ ಎದುರಾಗುತ್ತಿರುವ ಸವಾಲುಗಳಿಗೆ ದೇಶದ ಯುವಜನತೆಯನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಶಿಕ್ಷಣ ನೀತಿ ದಾರಿ ತೋರಿಸುತ್ತದೆ.

*ದೇಶಾದ್ಯಂತ ಶಿಕ್ಷಣ ನೀತಿಗೆ ಉತ್ತಮ ಪ್ರತಿಕ್ರಿಯೆ ಹಾಗೂ ಸ್ವಾಗತ ವ್ಯಕ್ತವಾಗಿದೆ ಎಂಬುದನ್ನು ನಾನು ಬಲ್ಲೆ. ಹೀಗಾಗಿ ದೇಶದ ಎಲ್ಲ ನಿರೀಕ್ಷೆಗಳಿಗೆ ಶಿಕ್ಷಣ ನೀತಿಯಲ್ಲಿ ಉತ್ತರವಿದೆ. ಆದ್ದರಿಂದ ಈ ನೀತಿಯನ್ನು ಅತ್ಯಂತ ಪರಿಣಾಮಕಾರಿ ಹಾಗೂ ರಚನಾತ್ಮಕವಾಗಿ ಕಟಿಬದ್ಧವಾಗಿ ಎಲ್ಲ ರಾಜ್ಯಗಳು ಜಾರಿ ಮಾಡಬೇಕು.

*ಶಿಕ್ಷಣ ನೀತಿಯೂ ವಿದ್ಯಾರ್ಥಿಗಳಲ್ಲಿ ಕಲಿಕೆಯ ಬಗ್ಗೆ ಹೊಸ ಜೋಶ್‌ ಸೃಷ್ಟಿಸಲಿದೆ. ಪ್ರಾಯೋಗಿಕವಾಗಿ ಮಕ್ಕಳು ಮುಂದಿನ ಹೆಜ್ಜೆ ಇಡಲು ಸಹಕಾರಿಯಾಗುತ್ತದೆ. ಜತೆಗೆ, ತಮ್ಮ ಪ್ರತಿಭೆಯನ್ನು ವ್ಯಕ್ತಪಡಿಸಲು ಅತ್ಯಂತ ಪರಿಣಾಮಕಾರಿಯಾಗಿ ನೆರವಿಗೆ ಬರುತ್ತದೆ. ಮುಂದಿನ ದಿನಗಳಲ್ಲಿ ಭಾರತದ ಶೈಕ್ಷಣಿಕ ಗುಣಮಟ್ಟ ಮತ್ತಷ್ಟು ಉನ್ನತಮಟ್ಟವನ್ನು ಮುಟ್ಟಲಿದೆ.

ರಾಷ್ಟ್ರಪತಿ ರಾಮನಾಥ ಕೋವಿಂದ್‌

ರಾಷ್ಟ್ರಪತಿಗಳ ನಿರೀಕ್ಷೆ

ವರ್ಚುಯಲ್‌ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯು ಇವತ್ತಿನ ಮಹತ್ತ್ವದ ಅಗತ್ಯ. ದೇಶಾದ್ಯಂತ ನೀತಿಯು ಆದ್ಯತೆಯ ಮೇರೆಗೆ ಜಾರಿಯಾಗಬೇಕಿದೆ ಎಂದು ಕರೆ ನೀಡಿದರು.

ಒಮ್ಮೆ ನೀತಿ ಎಲ್ಲ ಹಂತಗಳಲ್ಲೂ ಅನುಷ್ಟಾನಗೊಂಡರೆ ಪ್ರಸಕ್ತ ಶಿಕ್ಷಣ ನೀತಿಯ ಸ್ವರೂಪವೇ ಬದಲಾಗಲಿದೆ. ಬೋಧನೆಯಲ್ಲಿ ಗುಣಮಟ್ಟ ಹಾಗೂ ಸಂಶೋಧನೆಯಲ್ಲಿ ಉತ್ತಮ ಸಾಧನೆಗೆ ಅದು ಸಹಕಾರಿಯಾಗಲಿದೆ. ಬಹುವಿಷಯಗಳ ಬೋಧನೆಯ ಜತೆಗೆ, ತಮಗೆ ಅಗತ್ಯವಾದ ವಿಷಯಗಳ ಕಲಿಯಲು ವಿದ್ಯಾರ್ಥಿಗಳಿಗೆ ಮುಕ್ತ ಅವಕಾಶ ಇರುತ್ತದೆ. ಹೀಗಾಗಿ ಭಾರತದ ಮುಂದಿನ ಬೆಳವಣಿಗೆಗೆ ನೂತನ ಶಿಕ್ಷಣ ನೀತಿಯು ಮಹತ್ತ್ವದ ಕಾಣಿಕೆ ನೀಡಲಿದೆ ಎಂಬುದು ತಮ್ಮ ಅಚಲ ನಂಬಕೆ ಎಂದು ರಾಷ್ಟ್ರಪತಿಗಳು  ಹೇಳಿದರು.

ರಾಜ್ಯಪಾಲ ವಜೂಭಾಯಿ ವಾಲ & ಡಾ. ಸಿ.ಎನ್.‌ ಅಶ್ವತ್ಥನಾರಾಯಣ

ಕೇಂದ್ರದ ಮಾನವ ಸಂಪನ್ಮೂಲ ಖಾತೆ ಸಚಿವ ರಮೇಶ್‌ ಪೋಖ್ರಿಯಾಲ್‌ ಸೇರಿದಂತೆ ಎಲ್ಲ ರಾಜ್ಯಗಳು ರಾಲ್ಯಪಾಲರು ಹಾಗೂ ಶಿಕ್ಷಣ ಸಚಿವರು ಸಮ್ಮೇಳನದಲ್ಲಿ ಭಾಗಿಯಾಗಿದ್ದರು. ರಾಜ್ಯದ ವತಿಯಿಯಿಂದ ರಾಜ್ಯಪಾಲ ವಜೂಭಾಯಿ ವಾಲ, ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ ಅಶ್ವತ್ಥನಾರಾಯಣ, ಬೆಂಗಳೂರು ವಿವಿ ಉಪ ಕುಲಪತಿ ಕೆ.‌ ವೇಣುಗೋಪಾಲ್, ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ರಾಷ್ಟ್ರೀಯ ಶಿಕ್ಷಣ ನೀತಿ ಸಮಿತಿ ಮುಖ್ಯಸ್ಥ ಕಸ್ತೂರಿ ರಂಗನ್ , ಸಮಿತಿ ಸದಸ್ಯ ಪ್ರೊ. ಎಂ.ಕೆ.ಶ್ರೀಧರ್‌ ಸೇರಿದಂತೆ ಅನೇಕ ಗಣ್ಯರು ವರ್ಚುವಲ್‌ ಸಮ್ಮೇಳನದಲ್ಲಿ ಭಾಗಿಯಾಗಿದ್ದರು.

lead photo: wikipedia

ಈ ಸುದ್ದಿಯನ್ನೂ ಓದಿ…
ಪಠ್ಯದಲ್ಲೇ ಬರುತ್ತಂತೆ ಕೌಶಲ್ಯ ತರಬೇತಿ; ಓದು ಮುಗಿದ ಮೇಲೆ ಕೆಲಸವೇ ಹುಡುಕಿಕೊಂಡು ಬರುತ್ತದೆ!!

ಗುರುವಾರದ ಹೊತ್ತಿಗೆ ಕಾರ್ಯಪಡೆ ವರದಿ

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಹಿನ್ನೆಲೆಯಲ್ಲಿ ರಚಿಸಲಾಗಿರುವ ಕಾರ್ಯಪಡೆ ಇನ್ನು ನಾಲ್ಕು ದಿನಗಳಲ್ಲಿ (ಗುರುವಾರದೊಳಗೆ) ಅಂತಿಮ ವರದಿ ನೀಡಲಿದ್ದು, ಅದು ಕೈಸೇರಿದ ಕೂಡಲೇ ರಾಜ್ಯದಲ್ಲಿ ಶಿಕ್ಷಣ ನೀತಿ ಅನುಷ್ಟಾನದತ್ತ ಸರಕಾರ ಹೆಜ್ಜೆ ಇಡಲಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಕೇಂದ್ರ ಸರಕಾರ ಹಾಗೂ ಬಿಜೆಪಿಯ ಕೇಂದ್ರ ಘಟಕಕ್ಕೆ ಮಾಹಿತಿ ನೀಡಿದ್ದರು.

ಭಾನುವಾರ ಬೆಂಗಳೂರಿನಿಂದಲೇ ಕೇಂದ್ರದ ಮಾನವ ಸಂಪನ್ಮೂಲ ಖಾತೆ ಮಂತ್ರಿ ರಮೇಶ್ ಪೋಖ್ರಿಯಾಲ್ ಹಾಗೂ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಕಾರ್ಯಪಡೆಯು ಶಿಕ್ಷಣ ನೀತಿಯನ್ನು ಹೇಗೆ ಜಾರಿ ಮಾಡಬೇಕು ಎಂಬ ಬಗ್ಗೆ ಅತ್ಯಂತ ಪರಿಣಾಮಕಾರಿ ಹಾಗೂ ರಚನಾತ್ಮಕವಾದ ವರದಿಯನ್ನು ನೀಡುವ ವಿಶ್ವಾಸವಿದೆ. ಇಡೀ ನೀತಿಯನ್ನು ಎಷ್ಟು ಹಂತಗಳಲ್ಲಿ ಹಾಗೂ ಯಾವ ಯಾವ ದಿಕ್ಕಿನಲ್ಲಿ ಜಾರಿ ಮಾಡಬೇಕೆಂಬ ಮಾಹಿತಿ ವರದಿಯಿಂದ ತಿಳಿಯಲಿದೆ. ಆ ವರದಿ ಸಿಕ್ಕ ಕೂಡಲೇ ನೀತಿಯ ಜಾರಿಯತ್ತ ದೃಢವಾದ ಹೆಜ್ಜೆಗಳನ್ನು ಇಡಲಾಗುವುದು. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದರು.

ಸೋಮವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶಿಕ್ಷಣ ನೀತಿ ಜಾರಿಯ ಬಗ್ಗೆ ಎಲ್ಲ ರಾಜ್ಯಪಾಲರುಗಳ ಜತೆ ದಿಲ್ಲಿಯಿಂದಲೇ ಆನ್ಲೈನ್ ಸಂವಾದ ನಡೆಸಲಿದ್ದು, ಅದಕ್ಕೆ ಪೂರ್ವಭಾವಿಯಾಗಿ ಭಾನುವಾರ ಬಿ.ಎಲ್. ಸಂತೋಷ್ ಮತ್ತು ಸಚಿವ ರಮೇಶ್ ಪೋಖ್ರಿಯಾಲ್ ಅವರು ಡಾ. ಅಶ್ವತ್ಥನಾರಾಯಣ ಜತೆ ಮಾತುಕತೆ ನಡೆಸಿದ್ದರು.

ಜಾರಿಗೆ ಸರ್ವಸಿದ್ಧತೆ

ಶಿಕ್ಷಣ ನೀತಿಯಲ್ಲಿರುವ ಅಂಶಗಳ ಬಗ್ಗೆ ಸರಕಾರಕ್ಕೆ ಸ್ಪಷ್ಟ ಮಾಹಿತಿ ಇದೆ. ಹಾಗಾಗಿ ಈಗಾಗಲೇ ಸರಕಾರವು ಕಾರ್ಯಪಡೆ ಜತೆ ಹಲವು ಸುತ್ತಿನ ಮಾತುಕತೆ ನಡೆಸಿದೆ. ಜತೆಗೆ, ಎಲ್ಲ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳ ಜತೆಯಲ್ಲೂ ಸಮಾಲೋಚನೆ ನಡೆಸಲಾಗಿದೆ, ಹಲವಾರು ವೆಬಿನಾರ್ಗಳನ್ನು ಆಯೋಜಿಸಲಾಗಿದೆ. ವಿವಿಧ ಕ್ಷೇತ್ರಗಳ ತಜ್ಞರ ಜತೆಯಲ್ಲೂ ಚರ್ಚಿಸಲಾಗಿದೆ. ಸಮಾಜದ ಎಲ್ಲ ವರ್ಗದ ಜನರಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶಿಕ್ಷಣ ನೀತಿಯ ಬಗ್ಗೆ ವ್ಯಾಪಕ ಸ್ವಾಗತ ವ್ಯಕ್ತವಾಗಿದೆ. ಹೀಗಾಗಿ ಇಡೀ ನೀತಿಯನ್ನು ಅತ್ಯಂತ ರಚನಾತ್ಮಕವಾಗಿ ಜಾರಿ ಮಾಡಲು ಸರ್ವರೀತಿಯಲ್ಲೂ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಡಾ. ಅಶ್ವತ್ಥನಾರಾಯಣ ತಿಳಿಸಿದ್ದರು.

ಇದರ ಜತೆಜತೆಯಲ್ಲಿ ನೀತಿಯ ಜಾರಿಯ ಬಗ್ಗೆ ಆಡಳಿತಾತ್ಮಕ ಮತ್ತು ಕಾನೂನಾತ್ಮಕ ಬದಲಾವಣೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಆಡಳಿತ ಯಂತ್ರವನ್ನು ಎಲ್ಲ ರೀತಿಯಲ್ಲೂ ಸಜ್ಜುಗೊಳಿಸಲಾಗಿದೆ. ಹಾಗೆಯೇ, ಶಿಕ್ಷಣ ನೀತಿ ಜಾರಿಗೆ ಬಂದ ನಂತರ ಶೈಕ್ಷಣಿಕ ಸಾಂಸ್ಥಿಕ ರಚನೆಯಲ್ಲಿ ಸಾಕಷ್ಟು ಬದಲಾವಣೆಗಳಾಗಲಿವೆ. ಅಧಿಕಾರ ವಿಕೇಂದ್ರೀಕರಣವಾಗಿ ಶಿಕ್ಷಣ ಸಂಸ್ಥೆಗಳಿಗೆ ಹೆಚ್ಚು ಅಧಿಕಾರ ಸಿಗಲಿದೆ. ಇದರಿಂದ ಮುಂದಿನ ದಿನಗಳಲ್ಲಿ ಬೋಧನೆ ಮತ್ತು ಸಂಶೋಧನೆ ದಿಕ್ಕಿನಲ್ಲಿ ಹೆಚ್ಚು ಅಭಿವೃದ್ಧಿಯನ್ನು ಕಾಣಬಹುದಾಗಿದೆ. ಜತೆಗೆ, ವಿವಿಗಳಲ್ಲಿ ವಿದ್ಯಾರ್ಥಿಗಳಿಗೆ ಬಹು ವಿಷಯಗಳ ಕಲಿಕೆ ಹಾಗೂ ವಿಷಯಗಳ ಆಯ್ಕೆಯ ಬಗ್ಗೆ ಹೆಚ್ಚು ಅವಕಾಶಗಳು ಇರುತ್ತವೆ. ಕರ್ನಾಟಕ ರಾಜ್ಯಕ್ಕೆ ಇದರಿಂದ ಹೆಚ್ಚೆಚ್ಚು ಪ್ರಯೋಜನ ಆಗಲಿದೆ ಎಂದು ಉಪ ಮುಖ್ಯಮಂತ್ರಿ ಕೇಂದ್ರ ಸಚಿವರಿಗೆ ಮಾಹಿತಿ ನೀಡಿದ್ದರು.

***

ಶಿಕ್ಷಣ ನೀತಿಯ ಕಾಲಕ್ಕೆ ಓಶೋ ಶಿಕ್ಷಣ ಸಿದ್ಧಾಂತ, ತಪ್ಪದೇ ಓದಬೇಕಾದ ಲೇಖನ..
ಶಿಕ್ಷಣ, ಶಿಕ್ಷಕ ಮತ್ತು ಬದಲಾವಣೆ; ನೂತನ ಶಿಕ್ಷಣ ನೀತಿಯ ಹೊತ್ತಿನಲ್ಲಿ ಓಶೋ ಜೋಶ್..
Tags: educationkarnataka educationnarendra modiNational policy on educationnepPresident of India
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post

ಐದು ತಿಂಗಳ ನಂತರ ಹಳಿಹತ್ತಿ 'ನಡುವೆ ಅಂತರ ಇರಲಿ' ಎಂದ ನಮ್ಮ ಮೆಟ್ರೋ

Leave a Reply Cancel reply

Your email address will not be published. Required fields are marked *

Recommended

ಬೈ ಎಲೆಕ್ಷನ್‌ನಲ್ಲಿ ಬಿಜೆಪಿ ಭರಾಟೆ; ಮುನಿರತ್ನ ಹ್ಯಾಟ್ರಿಕ್‌, 70 ವರ್ಷಕ್ಕೆ ಶಿರಾದಲ್ಲಿ ಅರಳಿದ ಕಮಲ

ಬೈ ಎಲೆಕ್ಷನ್‌ನಲ್ಲಿ ಬಿಜೆಪಿ ಭರಾಟೆ; ಮುನಿರತ್ನ ಹ್ಯಾಟ್ರಿಕ್‌, 70 ವರ್ಷಕ್ಕೆ ಶಿರಾದಲ್ಲಿ ಅರಳಿದ ಕಮಲ

5 years ago
ರೆಬೆಲ್‌ಸ್ಟಾರ್‌ ಅಂಬಿ, ಶೆಟ್ಟರಿಗೆಷ್ಟು ಖಾಸಾ ದೋಸ್ತ್?‌

ರೆಬೆಲ್‌ಸ್ಟಾರ್‌ ಅಂಬಿ, ಶೆಟ್ಟರಿಗೆಷ್ಟು ಖಾಸಾ ದೋಸ್ತ್?‌

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ