• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CKPLUS

ಗ್ರೆಟಾ ಥನ್​ಬರ್ಗ್ʼಗೆ ತಪ್ಪಿದ ಶಾಂತಿ ನೊಬೆಲ್ 2020;‌ ವಿಶ್ವಸಂಸ್ಥೆಯ ಆಹಾರ ಕಾರ್ಯಕ್ರಮದ ಪಾಲಾಯಿತು ಪ್ರಶಸ್ತಿ

cknewsnow desk by cknewsnow desk
October 9, 2020
in CKPLUS, WORLD
Reading Time: 1 min read
0
ಗ್ರೆಟಾ ಥನ್​ಬರ್ಗ್ʼಗೆ ತಪ್ಪಿದ ಶಾಂತಿ ನೊಬೆಲ್ 2020;‌ ವಿಶ್ವಸಂಸ್ಥೆಯ ಆಹಾರ ಕಾರ್ಯಕ್ರಮದ ಪಾಲಾಯಿತು ಪ್ರಶಸ್ತಿ
916
VIEWS
FacebookTwitterWhatsuplinkedinEmail
PHOTO COURTESY: WIKIPEDIA

ಸ್ಟಾಕ್ಹೋಮ್:‌ ಜಾಗತಿಕ ಪರಿಸರಕ್ಕಾಗಿ ನಿರಂತರ ಹೋರಾಟ ಮಾಡುತ್ತ ಅದಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸೇರಿ ಕೆಲ ಜಾಗತಿಕ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ಅದೇ ಸ್ವೀಡನ್ ದೇಶದ ಗ್ರೆಟಾ ಥನ್​ಬರ್ಗ್ ಅವರಿಗೆ ಈ ವರ್ಷದ ಶಾಂತಿ ನೊಬೆಲ್‌ ತಪ್ಪಿದೆ. ತಪ್ಪಿಸಲಾಗಿದೆ ಎಂಬ ಕೂಗೂ ಎದ್ದಿದೆ.

2020ರ ನೊಬೆಲ್ ಶಾಂತಿ ಪುರಸ್ಕಾರ ವಿಶ್ವಸಂಸ್ಥೆಯ ಆಹಾರ ವಿಭಾಗಕ್ಕೆ (World Food Programme ) ಸಂದಿದ್ದು, ಯುದ್ಧ ಮತ್ತು ಪ್ರಕೃತಿ ವಿಕೋಪದಂಥ ಸಂಕಷ್ಟದ ಕಾಲದಲ್ಲಿ ಕಷ್ಟಕ್ಕೆ ಸಿಲುಕಿದ ಜನರ ಹಸಿವು ನೀಗಿಸಿದ ಮಾನವೀಯ ಕಾರಣಕ್ಕೆ ಆಯ್ಕೆ ಮಾಡಲಾಗಿದೆ ಎಂದು ಶುಕ್ರವಾರ ಸ್ವೀಡಿಷ್‌ ಅಕಾಡೆಮಿ ಘೋಷಿಸಿದೆ.

“ಜಗತ್ತಿನಲ್ಲಿ ಹಸಿವನ್ನು ನಿವಾರಿಸಲು ಮಾಡಿರುವ ಆ ಕಾರ್ಯಕ್ರಮದ ಪ್ರಯತ್ನಗಳು, ಯುದ್ಧ ಮತ್ತು ಸಂಘರ್ಷಕ್ಕೀಡಾದ ದೇಶಗಳಲ್ಲಿ ಶಾಂತಿಗೆ ಅನುಕೂಲವಾಗುವ ವಾತಾವರಣವನ್ನು ನಿರ್ಮಿಸಲು ಮಾಡಿರುವ ಗಟ್ಟಿ ಪ್ರಯತ್ನಗಳು, ಜತೆಗೆ, ಯುದ್ಧ ಹಾಗೂ ಸಂಘರ್ಷದ ಹೊತ್ತಿನಲ್ಲಿ ಹಸಿವನ್ನೇ ಸೇಡಿನ ಆಯುಧವನ್ನಾಗಿ ಮಾಡಿಕೊಳ್ಳುವ ಅಪಾಯಕಾರಿ ಕೃತ್ಯಗಳನ್ನು ತಪ್ಪಿಸಲು ಆ ಕಾರ್ಯಕ್ರಮದ ಪರಿಶ್ರಮವನ್ನು ಗುರುತಿಸಿ ಈ ವರ್ಷದ ಶಾಂತಿ ನೊಬೆಲ್‌ ಪುರಸ್ಕಾರವನ್ನು ನೀಡಿ ಗೌರವಿಸಲಾಗುತ್ತಿದೆ” ಎಂದು ನೊಬೆಲ್ ಪುರಸ್ಕಾರ ಆಯ್ಕೆ ಸಮಿತಿ ಅಧ್ಯಕ್ಷೆ ಬೆರಿಟ್ ರೀಸ್ ಆಂಡರ್‌ʼಸನ್‌ ಹೇಳಿದ್ದಾರೆ.

ಜಗತ್ತಿನಾದ್ಯಂತ ಕೋವಿಡ್-‌19 ಪಿಡುಗು ಹಬ್ಬಿದ ನಂತರ ಎಲ್ಲೆಡೆ ಹಸಿವಿನ ತೀವ್ರತೆ ಹೆಚ್ಚಿದೆ. ಹಸಿವಿನಿಂದ ಬಳಲುತ್ತಿರುವ ಜನರ ಪ್ರಮಾಣವೂ ಹೆಚ್ಚಾಗಿದೆ. ಇವರೆಲ್ಲರಿಗೂ ಡಬ್ಲ್ಯೂಎಫ್​ಪಿ ನೆರವಾಗಿದೆ ಎಂದು ಅವರು ಹೇಳಿದರು.

ಅಂದಹಾಗೆ, ಈ ಪುರಸ್ಕಾರವು ದೊಡ್ಡ ಮೊತ್ತದ ನಗದು ಬಹುಮಾನವನ್ನು ಹೊಂದಿದೆ. ಪ್ರಶಸ್ತಿ 10 ಮಿಲಿಯನ್ ಸ್ವೀಡನ್ ಕ್ರೋನಾ; ಅಂದರೆ, 8 ಕೋಟಿ ರೂಪಾಯಿಗೂ ಹೆಚ್ಚು ನಗದು ಮೊತ್ತದ ಬಹುಮಾನ, ಚಿನ್ನದ ಪಧಕ ಒಳಗೊಂಡಿದೆ.

17 ವರ್ಷಕ್ಕೇ ಮಲಾಲಾಗೆ ಸಿಕ್ಕಿತ್ತು!

PHOTO COURTESY: Malala@Malala

ಈ ವರ್ಷದ ಶಾಂತಿ ನೊಬೆಲ್ ಪುರಸ್ಕಾರಕ್ಕೆ 211 ವ್ಯಕ್ತಿಗಳು, 107 ಸಂಘ-ಸಂಸ್ಥೆಗಳನ್ನು ನಾಮಿನೇಟ್‌ ಮಾಡಲಾಗಿತ್ತು. ಈ ಪೈಕಿ ಈ ಪ್ರಶಸ್ತಿಯ ತವರು ದೇಶವಾದ ಸ್ವೀಡನ್ʼನ ಪರಿಸರ ಹೋರಾಟಗಾರ್ತಿ, ಹದಿನೇಳು ವರ್ಷದ ಗ್ರೆಟಾ ಥನ್​ಬರ್ಗ್ ಅವರಿಗೆ ಫೀಸ್‌ ನೊಬೆಲ್ ಸಿಗಬಹುದು ಎಂಬ ನಿರೀಕ್ಷೆ ಇತ್ತು. ಆದರೆ, ಯಾರೂ ನಿರೀಕ್ಷಿಸದಂತೆ ವಿಶ್ವಸಂಸ್ಥೆಯ ಆಹಾರ ಸಂಸ್ಥೆಗೆ ನೊಬೆಲ್ ಪ್ರಶಸ್ತಿ ಸಿಕ್ಕಿದೆ. ಪಾಕಿಸ್ತಾನದ ಶಾಲೆಯಲ್ಲಿ ಓದುತ್ತಿದ್ದ, ಬಳಿಕ ತಾಲಿಬಾನ್‌ ಭಯೋತ್ಪಾದಕರ ದಾಳಿಗೊಳಗಾಗಿದ್ದ ಯೂಸಫ್‌ ಮಲಾಲ ಅವರಿಗೂ 2014ರಲ್ಲಿ ಶಾಂತಿ ನೊಬೆಲ್‌ ನೀಡಲಾಗಿತ್ತು. ಆಗ ಅವರಿಗೂ 17 ವರ್ಷ ವಯಸ್ಸಾಗಿತ್ತು. ಮಲಾಲ ಅವರಂತೆ ಗ್ರೆಟಾ ಕೂಡ ಪರಿಸರಕ್ಕಾಗಿ ನಡೆಸುತ್ತಿರುವ ಹೋರಾಟ ಇಡೀ ಜಗತ್ತಿನಾದ್ಯಂತ ಗಮನ ಸೆಳೆದಿರುವುದು ಮಾತ್ರವಲ್ಲದೆ, ಮೂಲೆಮೂಲೆಯಲ್ಲೂ ಗ್ರೆಟಾದಂಥ ಯುವತಿಯರು ಹಸಿರು ಜಗತ್ತಿಗಾಗಿ ಟೊಂಕ ಕಟ್ಟಿದ್ದಾರೆ. ಆ ಮಟ್ಟಿಗೆ ಗ್ರೆಟಾ ಹೋರಾಟ ಜಗತ್ತಿನ ಮೇಲೆ ಪ್ರಭಾವ ಬೀರಿದೆ.

ಟ್ರಂಪ್‌ ಹೆಸರೂ ಇತ್ತು

PHOTO COURTESY: Wikipedia

ಇದೇ ವೇಳೆ ಡೊನಾಲ್ಡ್‌ ಟ್ರಂಪ್‌ ಕೂಡ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದರು. ಹಿಂದೆ ಬರಾಕ್‌ ಒಬಾಮಾ ಅವರನ್ನು ಆಯ್ಕೆ ಮಾಡಿ ಜಗತ್ತಿಗೆ ಶಾಕ್‌ ಕೊಟ್ಟಿದ್ದ ಆಯ್ಕೆ ಸಮಿತಿ ಅದೃಷ್ಟಕ್ಕೆ ಟ್ರಂಪ್‌ ಅವರನ್ನು ಆಯ್ಕೆ ಮಾಡಲಿಲ್ಲ. ಅರಬ್‌ ಜಗತ್ತಿನಲ್ಲಿ ಶಾಂತಿ ನೆಲೆಸಲು, ಕೊರಿಯಾ ದೇಶಗಳ ನಡುವೆ ಶಾಂತಿ ಪ್ರಕ್ರಿಯೆ ಇತ್ಯಾದಿ ನೆಪಗಳನ್ನೊಡ್ಡಿ ಅವರನ್ನು ನಾಮಿನೇಟ್‌ ಮಾಡಲಾಗಿತ್ತು. ಕೆಲ ಮಾಧ್ಯಮಗಳಂತೂ ಗ್ರೆಟಾ ಥನ್​ಬರ್ಗ್ ಅವರನ್ನು ಹಿಂದಿಕ್ಕಿ ಪ್ರಶಸ್ತಿ ಗೆದ್ದೇಬಿಡುತ್ತಾರೆ ಎಂದು ಪ್ರಚಾರ ಮಾಡಿದ್ದವು.

ಅರ್ಥಶಾಸ್ತ್ರ ಪ್ರಶಸ್ತಿ ಬಾಕಿ

ಈಗಾಗಲೇ ವೈದ್ಯಕೀಯ, ಭೌತಶಾಸ್ತ್ರ, ರಸಾಯನಶಾಸ್ತ್ರ, ಸಾಹಿತ್ಯ ಕ್ಷೇತ್ರಗಳಲ್ಲಿ ನೊಬೆಲ್ ಪ್ರಶಸ್ತಿ ಘೋಷಿಸಲಾಗಿದೆ. ಇನ್ನು ಅರ್ಥಶಾಸ್ತ್ರದ ಬಹುಮಾನವಷ್ಟೇ ಬಾಕಿ ಇದೆ. ಬಹುಶಃ ನಾಳೆ ಆ ಪ್ರಶಸ್ತಿ ಘೋಷಣೆ ಆಗಬಹುದು.

Tags: donald trumpGreta Thunbergnobel peace prize 2020wfpworld food programme
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಶ್ರೀರಾಮ ನವಮಿ ದಿನ ಅಯೋಧ್ಯೆಯ ಬಾಲ ರಾಮನಿಗೆ ಸೂರ್ಯ ತಿಲಕ

ಶ್ರೀರಾಮ ನವಮಿ ದಿನ ಅಯೋಧ್ಯೆಯ ಬಾಲ ರಾಮನಿಗೆ ಸೂರ್ಯ ತಿಲಕ

by cknewsnow desk
April 17, 2024
0

ಭಕ್ತಿ ಪರವಶತೆಯಿಂದ ಈ ದಿವ್ಯಕ್ಷಣವನ್ನು ಕಣ್ತುಂಬಿಕೊಂಡ ಅಸಂಖ್ಯಾತ ಭಕ್ತರು

Next Post
ಅನ್ನದಾತರನ್ನು ಭಯೋತ್ಪಾದಕರೆಂದ ಬಾಲಿವುಡ್‌ ನಟಿ ಕಂಗನಾ ರಣಾವತ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲು ಆದೇಶಿಸಿದ ತುಮಕೂರು ಕೋರ್ಟ್‌

ಅನ್ನದಾತರನ್ನು ಭಯೋತ್ಪಾದಕರೆಂದ ಬಾಲಿವುಡ್‌ ನಟಿ ಕಂಗನಾ ರಣಾವತ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲು ಆದೇಶಿಸಿದ ತುಮಕೂರು ಕೋರ್ಟ್‌

Leave a Reply Cancel reply

Your email address will not be published. Required fields are marked *

Recommended

ಡಿಪ್ಲೊಮೋ ಪಠ್ಯಕ್ಕೆ ಟ್ರೀಟ್‌ಮೆಂಟ್; 40,000 ವಿದ್ಯಾರ್ಥಿಗಳು ಪಾಸಾದರೆ, ಕೇವಲ 20% ಅಭ್ಯರ್ಥಿಗಳಿಗೂ ಕೆಲಸ ಸಿಗುತ್ತಿಲ್ಲ!

ಡಿಪ್ಲೊಮೋ ಪಠ್ಯಕ್ಕೆ ಟ್ರೀಟ್‌ಮೆಂಟ್; 40,000 ವಿದ್ಯಾರ್ಥಿಗಳು ಪಾಸಾದರೆ, ಕೇವಲ 20% ಅಭ್ಯರ್ಥಿಗಳಿಗೂ ಕೆಲಸ ಸಿಗುತ್ತಿಲ್ಲ!

4 years ago
ಅಖಂಡ ಭಾರತದ ಅಷ್ಟದಿಕ್ಕುಗಳ ಆಮೂಲಾಗ್ರ ಅಭಿವೃದ್ಧಿಗೆ ಸುವರ್ಣ ಅಧ್ಯಾಯ ಬರೆದವರೇ ಅಜಾತಶತ್ರು ಅಟಲ್‌ ಬಿಹಾರಿ ವಾಜಪೇಯಿ

ಅಟಲ್ ಎಂದರೆ ಅಜಾತಶತ್ರು

1 year ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ