• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಕೋವಿಡ್‌ ಎದುರಿಸಲು ಹಳ್ಳಿಹಳ್ಳಿಗೂ ಟೆಲಿಮೆಡಿಸನ್‌ ; ಪ್ರಥಮ ಹೆಜ್ಜೆಇಟ್ಟ ಸರಕಾರ

cknewsnow desk by cknewsnow desk
October 19, 2020
in COVID-19, STATE
Reading Time: 1 min read
0
ಕೋವಿಡ್‌ ಎದುರಿಸಲು ಹಳ್ಳಿಹಳ್ಳಿಗೂ ಟೆಲಿಮೆಡಿಸನ್‌ ; ಪ್ರಥಮ ಹೆಜ್ಜೆಇಟ್ಟ ಸರಕಾರ
912
VIEWS
FacebookTwitterWhatsuplinkedinEmail
lead Photo by bongkarn thanyakij from Pexels

ಮೈಸೂರು: ಕೋವಿಡ್‌ ಸಂಕಷ್ಟದ ಕಾಲದಲ್ಲಿ ಹಳ್ಳಿಗಳಿಗೂ ಟೆಲಿಮೆಡಿಸನ್‌ ವ್ಯವಸ್ಥೆ ಒದಗಿಸುವ ತಂತ್ರಜ್ಞಾನ ಆಧಾರಿತ ತಜ್ಞವೈದ್ಯ ಸೇವೆಗೆ ಬೆಂಬಲ ನೀಡುವಂತೆ ಮೈಸೂರಿನ ಸ್ಕ್ಯಾನ್ ರೇ ಸಂಸ್ಥೆ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದು, ಅದಕ್ಕೆ ಸರಕಾರವೂ ಸಕಾರಾತ್ಮಕವಾಗಿ ಸ್ಪಂದಿಸಿದೆ. ಈ ನಿಟ್ಟಿನಲ್ಲಿ ನೋಡಿದರೆ ಹಳ್ಳಿಹಳ್ಳಿಗೂ ತೆರಳಿ ಮನೆ ಬಾಗಿಲಲ್ಲೇ ಅತ್ಯುತ್ತಮ ಚಿಕಿತ್ಸೆ ಕೊಡಲಿ ಇಟ್ಟ ಮೊದಲ ಹೆಜ್ಜೆ ಇದೆನ್ನಬಹುದು.

ಸೋಮವಾರ ಈ ಸಂಸ್ಥೆಗೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಅಲ್ಲಿನ ಉನ್ನತ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರಲ್ಲದೆ, ತಂತ್ರಜ್ಞಾನ ಆಧಾರಿತ ಟೆಲಿ ಮೆಡಿಸನ್‌ ಸೇವೆಯನ್ನು ಜನಸಾಮಾನ್ಯರಿಗೂ ಒದಗಿಸುವ ನಿಟ್ಟಿನಲ್ಲಿ ಸರಕಾರವೂ ಉತ್ಸುಕವಾಗಿದೆ. ಐಟಿ ಇಲಾಖೆಯ ಸಹಯೋಗದೊಂದಿಗೆ ಈ ಕಾರ್ಯಕ್ರಮ ಜಾರಿ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಡಿಸಿಎಂ ಅವರು, ಕೋವಿಡ್‌ ಈಗ ಎಲ್ಲ ವ್ಯವಸ್ಥೆಗಳನ್ನೂ ಅಸ್ತವ್ಯಸ್ತವಾಗಿಸಿದೆ. ಅದು ಆರೋಗ್ಯ ಕ್ಷೇತ್ರದಲ್ಲೂ ಹೆಚ್ಚು ಪ್ರಮಾಣದಲ್ಲೇ ಆಗಿದೆ. ಕಿಯೋನಿಕ್ಸ್‌ (KEONICS ) ಸಹಭಾಗಿತ್ವದಲ್ಲಿ ತಂತ್ರಜ್ಞಾನಯುಕ್ತ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಹಾಗೂ ಟೆಲಿ ಕಮಾಂಡ್‌ ಕೇಂದ್ರವನ್ನು (Tele-command Centre) ತೆರೆಯುವ ಯೋಜನೆಗೆ ಸಂಸ್ಥೆಯು ಸರಕಾರದ ಬೆಂಬಲವನ್ನು ಕೇಳಿದೆ. ಸರಕಾರದಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ನಾನು ಭರವಸೆ ನೀಡಿದ್ದೇನೆ. ರಾಜ್ಯದ ಪ್ರತಿಹಳ್ಳಿಗೂ ಟೆಲಿ ಮೆಡಿಸನ್‌ ವ್ಯವಸ್ಥೆಯನ್ನು ತಲುಪಿಸಲು ಈ ಸಂಸ್ಥೆ ಮುಂದೆ ಬಂದಿರುವುದು ಸಂತೋಷ ತಂದಿದೆ ಎಂದು ಉಪ ಮುಖ್ಯಮಂತ್ರಿ ಮಾಹಿತಿ ನೀಡಿದರು.

ಪ್ರಸಕ್ತ ದಿನಗಳಲ್ಲಿ ವೈದ್ಯಕೀಯ ನಿಪುಣತೆಯ ಜತೆಗೆ, ಅದಕ್ಕೆ ಪೂರಕವಾಗಿ ತಂತ್ರಜ್ಞಾನವನ್ನೂ ಬಳಕೆ ಮಾಡಿಕೊಳ್ಳಬೇಕಾಗಿದೆ. ಆ ನಿಟ್ಟಿನಲ್ಲಿ ಸ್ಕ್ಯಾನ್ ರೇ ಕೆಲಸ ಮಾಡುತ್ತಿದೆ. ನೆರೆ ಸೇರಿದಂತೆ ಯಾವುದೇ ರೀತಿಯ ಪ್ರಕೃತಿ ವಿಕೋಪ, ಕೋವಿಡ್‌ನಂಥ ಸೋಂಕು ಬಂದಾಗಲೂ ಇಂಥ ಟೆಲಿ ಮೆಡಿಸನ್‌ ವ್ಯವಸ್ಥೆ ಪರಿಣಾಮಕಾರಿಯಾಗಿ ನೆರವಿಗೆ ಬರುತ್ತದೆ ಎಂದು ಡಿಸಿಎಂ ಹೇಳಿದರು.

ಆತ್ಮನಿರ್ಭರತೆಯ ಸ್ಫೂರ್ತಿ

ಸ್ಕ್ಯಾನ್ ರೇ ಸಂಸ್ಥೆಯಲ್ಲಿ ಡಾ.ಸಿ.ಎನ್.ಅಶ್ವತ್ಥನಾರಾಯಣ.

ಈ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೋವಿಡ್‌ ಮಾರಿಯನ್ನು ಇವತ್ತು ರಾಜ್ಯವು ಸಮರ್ಥವಾಗಿ ಎದುರಿಸುತ್ತಿದೆ. ಯಾವುದೇ ಕೊರತೆಯೂ ನಮ್ಮಲ್ಲಿ ಇಲ್ಲ. ಮಾಸ್ಕ್‌, ಸ್ಯಾನಿಟೈಸರ್‌, ವೆಂಟಿಲೇಟರ್‌, ಪರೀಕ್ಷಾ ಕಿಟ್‌, ಪಿಪಿಇ ಕಿಟ್‌ ಸೇರಿದಂತೆ ಯಾವುದೂ ಕೊರತೆ ಇಲ್ಲ. ಪ್ರಧಾನಮಂತ್ರಿಗಳ ಆತ್ಮನಿರ್ಭರ ಕಾರ್ಯಕ್ರಮದಡಿ ಎಲ್ಲವನ್ನೂ ನಾವೇ ತಯಾರು ಮಾಡಿಕೊಳ್ಳುತ್ತಿದ್ದೇವೆ ಎಂದರು.

ಸ್ಕ್ಯಾನ್ ರೇ ಸಂಸ್ಥೆಯು ಹೆಲ್ತ್‌ ಟೆಕ್ನಾಲಜಿಯಲ್ಲಿ ಮುಂಚೂಣಿ ಸಂಸ್ಥೆಯಾಗಿದ್ದು, ಉತ್ತಮ ಗುಣಮಟ್ಟದ ವೆಂಟಿಲೇಟರ್‌ಗಳನ್ನು ತಯಾರು ಮಾಡುವ ಬಹುಮುಖ್ಯ ಸಂಸ್ಥೆಯಾಗಿದೆ. ಈ ಮೊದಲು ಒಂದು ಲಕ್ಷ ವೆಂಟಿಲೇಟರ್‌ಗಳ ಬೇಡಿಕೆಯನ್ನು ಈ ಸಂಸ್ಥೆಗೆ ಸಲ್ಲಿಸಲಾಗಿತ್ತು. ಆದರೆ, ನಿಗದಿತ ದಿನಕ್ಕಿಂತ ಮೊದಲೇ 30,000 ವೆಂಟಿಲೇಟರ್‌ಗಳನ್ನು ಸಂಸ್ಥೆ ಪೂರೈಕೆ ಮಾಡಿದೆ. ಉಳಿದ ವೆಂಟಿಲೇಟರ್‌ಗಳನ್ನು ಶೀಘ್ರವೇ ಪೂರೈಕೆ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಮಾಹಿತಿ ನೀಡಿದರು.

ಇಷ್ಟು ಅಲ್ಪಾವಧಿಯಲ್ಲಿ 30,000 ವೆಂಟಿಲೇಟರ್‌ಗಳನ್ನು ಪೂರೈಕೆ ಮಾಡುವುದು ಸುಲಭದ ಮಾತಲ್ಲ. ಅಮರಿಕ ಚೀನಾದಂಥ ದೇಶಗಳಿಗೆ ಇದು ಸಾಧ್ಯವಾಗಿಲ್ಲ. ಅಂತಹ ಸವಾಲನ್ನು ಸ್ವೀಕರಿಸಿ ಸ್ಕ್ಯಾನ್ ರೇ ಕೆಲಸ ಮಾಡಿದೆ. ಅದಕ್ಕಾಗಿ ನನ್ನ ಮೆಚ್ಚುಗೆ ಇದೆ. ಜತೆಗೆ, ಇತರೆ ಅನೇಕ ದೇಶಗಳಿಗೆ ಕೋವಿಡ್‌ ಪರಿಹಾರೋಪಾಯಗಳಲ್ಲಿ ಎಂಟು ತಿಂಗಳಾದರೂ ಸ್ವಾವಲಂಭನೆ ಸಾಧಿಸಲು ಸಾಧ್ಯವಾಗಿಲ್ಲ. ಆದರೆ, ಭಾರತಕ್ಕೆ ಇದು ಸಾಧ್ಯವಾಗಿದೆ. ಆತ್ಮನಿರ್ಭರ ಅಭಿಯಾನಕ್ಕೆ ಪೂರಕವಾಗಿ ಇಲ್ಲಿ ಉತ್ಪನ್ನವಾಗುವ ದೇಶೀಯ ಉತ್ಪನ್ನಗಳು ವಿದೇಶಿ ಮಾರುಕಟ್ಟೆಗೆ ಕೂಡಾ ತಲುಪುತ್ತಿವೆ ಎಂಬುದು ನಮ್ಮ ಹೆಮ್ಮೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಸ್ಕ್ಯಾನ್ ರೇ ತಯಾರಿಸಿರುವ 50ಕ್ಕೂ ಹೆಚ್ಚು ವೈದ್ಯಕೀಯ ಉತ್ಪನ್ನಗಳನ್ನು ಡಿಸಿಎಂ ವೀಕ್ಷಿಸಿದರು. ಜತೆಗೆ ʼಸ್ಕ್ಯಾನ್ ಲೈಫ್‌ʼ ಎಂಬ ನೂತನ ಉಪಕರಣವನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಒಂದೇ ಯಂತ್ರದ ಮೂಲಕ ಒಬ್ಬ ವ್ಯಕ್ತಿಯು ಎಲ್ಲ ರೀತಿಯ ಪರೀಕ್ಷೆಗಳನ್ನು ಸುಲಭವಾಗಿ ಮಾಡಿಸಿಕೊಳ್ಳಬಹುದಾಗಿದೆ. ಅದನ್ನು ಮನೆಯಲ್ಲೇ ಇಟ್ಟುಕೊಳ್ಳುವಷ್ಟು ಸರಳ ಮತ್ತು ಸುಲಭವಾಗಿದೆ. ಆ ಉಪಕರಣ ಇನ್ನಷ್ಟೇ ಮಾರುಕಟ್ಟೆಗೆ ಬರಬೇಕಿದೆ.

ಈ ಸಂದರ್ಭದಲ್ಲಿ ಸ್ಕ್ಯಾನ್‌ ರೇ ಸಂಸ್ಥೆಯ ಸಹ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ವಿಶ್ವಪ್ರಸಾದ್‌ ಆಳ್ವ ಮತ್ತಿತರೆ ತಜ್ಞರು, ಅಧಿಕಾರಿಗಳು ಜತೆಗೆ ಐಟಿ ಇಲಾಖೆ ನಿರ್ದೇಶಕಿ ಮೀನಾ ನಾಗರಾಜ, ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕ ಎಸ್.ಎನ್.ಸಿದ್ದರಾಮಪ್ಪ ಹಾಜರಿದ್ದರು.

Tags: covid-19 karnatakadr cn ashwath narayantelemedicine
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಅತಿವೃಷ್ಟಿ ಹಾಹಾಕಾರ; ಬೆಳಗಾವಿಯಲ್ಲಿ ಕಂದಾಯ ಸಚಿವರ ರೌಂಡ್ಸ್‌

ಅತಿವೃಷ್ಟಿ ಹಾಹಾಕಾರ; ಬೆಳಗಾವಿಯಲ್ಲಿ ಕಂದಾಯ ಸಚಿವರ ರೌಂಡ್ಸ್‌

Leave a Reply Cancel reply

Your email address will not be published. Required fields are marked *

Recommended

ಕೆಸಿಇಟಿ-24 ಪರೀಕ್ಷೆ: ಜನವರಿ 10ರಿಂದ online ಅರ್ಜಿ ಸಲ್ಲಿಕೆಗೆ ಅವಕಾಶ

ಕೆಸಿಇಟಿ-24 ಪರೀಕ್ಷೆ: ಜನವರಿ 10ರಿಂದ online ಅರ್ಜಿ ಸಲ್ಲಿಕೆಗೆ ಅವಕಾಶ

1 year ago
ರಾಜ್ಯದಲ್ಲಿ ದಿನೇದಿನೆ ಹೆಚ್ಚುತ್ತಿರುವ ಡಿಮಾಂಡ್: 2 ಕೋಟಿ ಕೋವಿಡ್ ಲಸಿಕೆ ಖರೀದಿಗೆ ಜಾಗತಿಕ ಟೆಂಡರ್‌,  ಈ ಮೊದಲೇ 3 ಕೋಟಿ ಡೋಸ್‌ಗೆ ಸರಕಾರದಿಂದ ಆರ್ಡರ್

ಸೆ.17ಕ್ಕೆ ಬೃಹತ್ ಕೋವಿಡ್ ಲಸಿಕೆ ಅಭಿಯಾನ: 30 ಲಕ್ಷ ವ್ಯಾಕ್ಸಿನ್ ಗುರಿ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ