• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಅಭಿವೃದ್ಧಿಯತ್ತ ಭಾರತದ ಮಿಂಚಿನ ಓಟ; ಭಯದಿಂದ ಚಡಪಡಿಸುತ್ತಿದೆಯಾ ಚೀನಾ

cknewsnow desk by cknewsnow desk
November 19, 2020
in STATE, WORLD
Reading Time: 1 min read
0
ಅಭಿವೃದ್ಧಿಯತ್ತ ಭಾರತದ ಮಿಂಚಿನ ಓಟ; ಭಯದಿಂದ ಚಡಪಡಿಸುತ್ತಿದೆಯಾ ಚೀನಾ
914
VIEWS
FacebookTwitterWhatsuplinkedinEmail

ಕೋವಿಡ್‌ ಪೀಡೆಯನ್ನು ಸಮರ್ಥವಾಗಿ ಎದುರಿಸಲಾಗದೆ ಮುಗ್ಗರಿಸಿ ತನ್ನ ಮುಂದೆ ಮಂಡಿಯೂರುತ್ತದೆ ಎಂದು ಭಾರತದ ಬಗ್ಗೆ ಕೇವಲವಾಗಿ ಲೆಕ್ಕಾಚಾರ ಹಾಕಿದ್ದ ಚೀನಾ, ಈಗಷ್ಟೇ ಅಲ್ಲ; ಹಿಂದಿನಿಂದಲೂ ಇಂಡಿಯಾ ಬಗ್ಗೆ ಹೆದರಿಕೊಳ್ಳುತ್ತಿದೆ ಎಂದ ಸಂಗತಿ ಇದೀಗ ಬೆಳಕಿಗೆ ಬಂದಿದೆ.

ಅಮೆರಿಕ ವಿದೇಶಾಂಗ ಇಲಾಖೆಯ ಇತ್ತೀಚೆಗಿನ ವರದಿಯೊಂದು ಈ ಅಂಶವನ್ನು ಪುಷ್ಠೀಕರಿಸಿದ್ದು, ಆದಿಯಿಂದಲೂ ಭಾರತದ ಬಗ್ಗೆ ಚೀನಾ ಆತಂಕ, ಭೀತಿ ಹಾಗೂ ಅಸೂಯೆಯಿಂದ ಒದ್ದಾಡುತ್ತಿದೆ ಎಂಬ ಮಾಹಿತಿ ಸಿಕ್ಕಿದೆ.

ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿರುವ ಭಾರತದ ವರ್ಚಸ್ಸು, ನಿರಂತರ ಬೆಳವಣಿಗೆ ಬಗ್ಗೆ ಚೀನಾ ಚಿಂತಿತವಾಗಿದೆ. ಮುಖ್ಯವಾಗಿ ಅಮೆರಿಕ, ಆಸ್ಟ್ರೇಲಿಯಾ, ಬ್ರಿಟನ್‌ ಹಾಗೂ ಯುರೋಪಿನ ಎಲ್ಲ ಪ್ರಜಾಪ್ರಭುತ್ವ ದೇಶಗಳ ಜತೆ ಗಾಢವಾಗುತ್ತಿರುವ ರಾಜತಾಂತ್ರಿಕ ಮತ್ತು ವ್ಯೂಹಾತ್ಮಕ ಸಂಬಂಧಗಳು ಬೀಜಿಂಗ್‌ ತಲೆ ಕೆಡುವಂತೆ ಮಾಡಿದೆ. ಈ ದೇಶಗಳ ಜತೆಗಿನ ಭಾರತ ಸಂಬಂಧವನ್ನು ಹಾಳುಗೆಡವಲು ಚೀನಾ ಷಡ್ಯಂತ್ರಗಳನ್ನು ಹೂಡುತ್ತಲೇ ಇದೆ ಎಂದು ಆ ವರದಿಯಲ್ಲಿ ಹೇಳಲಾಗಿದೆ.

ಕೆಲ ವರ್ಷಗಳ ಹಿಂದೆ ಜಗತ್ತಿನ ಆರ್ಥಿಕ ಶಕ್ತಿಗಳಲ್ಲಿ 5ನೇ ಸ್ಥಾನದಲ್ಲಿದ್ದ ಭಾರತವು ಇದೀಗ 3ನೇ ಸ್ಥಾನಕ್ಕೆ ಜಿಗಿದಿದೆ. ಅಲ್ಲದೇ, ಆರ್ಥಿಕವಾಗಿ ಚೀನಾವನ್ನು ಸರಿಗಟ್ಟುವ ಶಕ್ತಿ ಭಾರತಕ್ಕೇ ಇದೆ. ಅದೂ ಸಾಲದೇ ಉತ್ಪಾದನೆ ಹಾಗೂ ಸೇವಾರಂಗ ಸೇರಿ ಎಲ್ಲ ಕ್ಷೇತ್ರಗಳಲ್ಲೂ ತನಗೆ ಅಮೆರಿಕ ನಂತರ ಪ್ರಬಲ ಪೈಪೋಟಿ ನೀಡುತ್ತಿರುವ ಏಕೈಕ ದೇಶವಾಗಿ ಭಾರತ ಹೊರಹೊಮ್ಮಿದೆ. ಹೀಗಾಗಿ ಗಡಿ ಪ್ರದೇಶದಲ್ಲಿ ಭಾರತವನ್ನು ಕೆಣಕುತ್ತಾ ಪಾಕಿಸ್ತಾನದಂಥ ದೇಶಗಳನ್ನು ಎತ್ತಿ ಕಟ್ಟುತ್ತಾ ದಿಲ್ಲಿಯ ಆರ್ಥಿಕತೆಗೆ ಹೊಡೆತ ನೀಡಲು ಚೀನಾ ಯತ್ನಸುತ್ತಲೇ ಇದೆ ಎಂದು ಅಮೆರಿಕದ ಆ ವರದಿಯಲ್ಲಿ ತಿಳಿಸಲಾಗಿದೆ.

ಒನ್‌ ಬೆಲ್ಟ್‌ ಒನ್‌ ರೋಡ್‌, ಆಸಿಯಾ ವಾಣಿಜ್ಯ ಕಾರಿಡಾರ್‌ ಸೇರಿ ಜಾಗತಿಕವಾಗಿ ತಾನು ಫಿಕ್ಸ್‌ ಮಾಡಿಕೊಂಡಿರುವ ಮಹತ್ವಾಕಾಂಕ್ಷೆಯ ಟಾರ್ಗೆಟ್ಟುಗಳಿಗೆ ಭಾರತ ದೊಡ್ಡ ಅಡ್ಡಿಯಾಗಿದೆ. ಏಷ್ಯಾದಲ್ಲಿ ಅನಭಿಶಕ್ತ ಸೂಪರ್‌ ಪವರ್‌ ಆಗಲು ದಿಲ್ಲಿಯ ಅಡ್ಡಿ ಹೆಚ್ಚುತ್ತಲೇ ಇದೆ. ಅದೂ ಸಾಲದೆ ತನಗೆ ಆಗದ ಅಮೆರಿಕ, ಆಸ್ಟ್ರೇಲಿಯಾ ಹಾಗೂ ಜಪಾನ್‌ ಜತೆ ಗಾಢವಾದ ವ್ಯೂಹಾತ್ಮಕ ಸಂಬಂಧವನ್ನು ಹೊಂದಿದೆ. ಹಾಗೆಯೇ ದಕ್ಷಿಣ ಏಷ್ಯಾ ಸಮುದ್ರ ಭಾಗದಲ್ಲಿಯೂ ಪ್ರಭಾವ ಬೀರುತ್ತಿದೆ ಎಂದು ಚೀನಾ ಚಡಪಡಿಸುತ್ತಿದೆ.

ದಕ್ಷಿಣ ಏಷ್ಯಾದಲ್ಲಿ ಅಮೆರಿಕ ಪ್ರಭಾವವನ್ನು ತಗ್ಗಿಸಿ ಭಾರತವನ್ನು ಏಕಾಂಗಿಯನ್ನಾಗಿ ಮಾಡುವುದಲ್ಲದೆ, ಅದರ ಅಕ್ಕಪಕ್ಕದ ದೇಶಗಳನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದೆ ಚೀನಾ. ಮೊದಲು ಏಷ್ಯಾದಲ್ಲಿ ತಾನು ದೊಡ್ಡಣ್ಣನಾಗಿ ತದನಂತರ ಅಮೆರಿಕವನ್ನು ಸರಿಗಟ್ಟಬೇಕೆಂಬ ಅತೀ ಮಹತ್ವಾಕಾಂಕ್ಷೆಯನ್ನು ಚೀನಾ ಹೊಂದಿದೆ ಎಂದ ಅಂಶವೂ ಆ ವರದಿಯಲ್ಲಿದೆಯಂತೆ.

ಕೆಲ ದಿನಗಳ ಹಿಂದೆ ಗಡಿಯಲ್ಲಿ ಭಾರತ-ಚೀನಾ ಬಿಕ್ಕಟ್ಟಿನ ಬಗ್ಗೆಯೂ ಈ ವರದಿಯಲ್ಲಿ ಪ್ರಸ್ತಾಪ ಮಾಡಲಾಗಿದೆ. ವಿವಾದಿತ ಗಡಿ ಪ್ರದೇಶಗಳಲ್ಲಿ ಭಾರತವನ್ನು ಕೆಣುಕುವುದರ ಜತೆಗೆ; ತೈವಾನ್‌, ಜಪಾನ್‌, ಆಸ್ಟ್ರೇಲಿಯಾ ಜತೆಗೂ ಕಾಲುಕೆರೆದು ಜಗಳಕ್ಕೆ ಹೋಗುತ್ತಿದೆ. ಇನ್ನು ಕೋವಿಡ್‌ ಜಗತ್ತಿನಾದ್ಯಂತ ಹರಡಲು ಚೀನಾ ದೇಶವೇ ಮುಖ್ಯ ಕಾರಣ ಎಂದು ಆ ವರದಿಯಲ್ಲಿ ದೂರಲಾಗಿದೆ.

  • ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ…
ವಿನಾಶಕಾರಿ ಚೀನಾ ಕಕ್ಕುತ್ತಿರುವ ವಿಷ; ಅದು ಐದು ಸಾವಿರ ವರ್ಷಗಳ ದ್ವೇಷ
  • ವಿವಿಧ ಮೂಲಗಳಿಂದ
  • lead photo from Narendra Modi Facebook

Tags: americaindia-china
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಬಲವಿದ್ದರೂ ಸೋತ ಕಾಂಗ್ರೆಸ್; ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷಗಿರಿ ಬಿಜೆಪಿ ಪಾಲು

ಹೋಮಿಯೋಪತಿ ಬಗ್ಗೆ ನಿರ್ಲಕ್ಷ್ಯ ಬೇಡ; ಹೆಚ್ಚು ಸಂಶೋಧನೆಗಳು ನಡೆಯಲಿ ಎಂದ ಡಾ.ಕೆ.ಸುಧಾಕರ್

Leave a Reply Cancel reply

Your email address will not be published. Required fields are marked *

Recommended

ಹುಸಿಯಾದ ಎಸ್‌ಟಿ ಮೀಸಲು ನಿರೀಕ್ಷೆ, ರಾಜಕಾರಣದಿಂದ ಹೆಚ್ಚಿದ ಗೋಜಲು; ಬಜೆಟ್‌ನಲ್ಲಿ ಹಣ ಹಂಚಿಕೆಯಲ್ಲೂ ಲೆಕ್ಕಾಚಾರ! ವಿಜೃಂಭಿಸಿದ ಹಿತಾಸಕ್ತಿಗಳು!!

ಹುಸಿಯಾದ ಎಸ್‌ಟಿ ಮೀಸಲು ನಿರೀಕ್ಷೆ, ರಾಜಕಾರಣದಿಂದ ಹೆಚ್ಚಿದ ಗೋಜಲು; ಬಜೆಟ್‌ನಲ್ಲಿ ಹಣ ಹಂಚಿಕೆಯಲ್ಲೂ ಲೆಕ್ಕಾಚಾರ! ವಿಜೃಂಭಿಸಿದ ಹಿತಾಸಕ್ತಿಗಳು!!

4 years ago
ಸರಕಾರಕ್ಕೆ ಸಂಚಕಾರ; ಹೆಚ್.ಡಿ.ಕುಮಾರಸ್ವಾಮಿ, ಯೋಗಿ ಹೇಳಿಕೆಯಿಂದ ಕಾಂಗ್ರೆಸ್‌ನಲ್ಲಿ ತಳಮಳ

ಲೋಕಸಭೆ ಚುನಾವಣೆ: ಕಾಂಗ್ರೆಸ್ ನಿಂದ ಮಹಿಳೆಯರಿಗೆ 33% ಟಿಕೆಟ್

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ