• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಅಂಬೇಡ್ಕರ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್ ಬೋಧಕರಿಗೆ ಊಹೆಗೂ ನಿಲುಕದ ವೇತನ ಶ್ರೇಣಿ

cknewsnow desk by cknewsnow desk
November 23, 2020
in NEWS IN USE, STATE
Reading Time: 1 min read
0
ಅಂಬೇಡ್ಕರ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್ ಬೋಧಕರಿಗೆ ಊಹೆಗೂ ನಿಲುಕದ ವೇತನ ಶ್ರೇಣಿ
912
VIEWS
FacebookTwitterWhatsuplinkedinEmail

ಅಂಬೇಡ್ಕರ್‌ ಜಯಂತಿ ದಿನ ಪ್ರಧಾನಿಯಿಂದ ನೂತನ ಕ್ಯಾಂಪಸ್‌ ಉದ್ಘಾಟನೆ: ಡಿಸಿಎಂ ನೇತೃತ್ವದ ಆಡಳಿತ ಮಂಡಳಿ ಸಭೆ ನಿರ್ಧಾರ


ಬೆಂಗಳೂರು: ನಗರದ ನಾಗರಬಾವಿಯಲ್ಲಿ ನಿರ್ಮಾಣವಾಗುತ್ತಿರುವ ಪ್ರತಿಷ್ಠಿತ ಅಂಬೇಡ್ಕರ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್ʼನ ನೂತನ ಕ್ಯಾಂಪಸ್‌ ಮುಂದಿನ ಅಂಬೇಡ್ಕರ್‌ ಜಯಂತಿಯಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆ, ಈ ಸಂಸ್ಥೆಯ ಬೋಧಕರಿಗೆ ಯುಜಿಸಿ ವೇತನ ಶ್ರೇಣಿ ಬದಲಿಗೆ ಐಜಿಐಡಿಆರ್‌ ವೇತನ ಶ್ರೇಣಿ..

ಬೆಂಗಳೂರಿನಲ್ಲಿ ಸೋಮವಾರ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಸ್ಥೆಯ ಆಡಳಿತ ಮಂಡಳಿಯ 9ನೇ ಸಭೆಯಲ್ಲಿ ಕೈಗೊಳ್ಳಲಾದ ಮಹತ್ವದ ನಿರ್ಧಾರಗಳಿವು.

ಇನ್ಪೋಸಿಸ್‌ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ, ಕೇಂದ್ರ ಸರಕಾರದ ಪ್ರಧಾನ ಆರ್ಥಿಕ ಸಲಹೆಗಾರ ಡಾ.ಸಂಜೀವ್‌ ಸನ್ಯಾಲ್‌ ಮುಂತಾದವರು ಪಾಲ್ಗೊಂಡಿದ್ದ ಈ ಸಭೆಯಲ್ಲಿ ಇನ್ನು ಹಲವಾರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಅವು ಹೀಗಿವೆ.

ಬೆಂಗಳೂರು ಡಾ. ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನ ಆಡಳಿತ ಮಂಡಳಿಯ ಸಭೆಯಲ್ಲಿ ಪಾಲ್ಗೊಂಡೆ.

ಸಂಸ್ಥೆಯ ಪ್ರಗತಿಗೆ ಸಂಬಂಧಪಟ್ಟ ವಿಚಾರಗಳು ಸೇರಿದಂತೆ, ಇಲ್ಲಿನ ನೂತನ ಕಟ್ಟಡಗಳ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವ ಕುರಿತು ಕೂಡಾ ಚರ್ಚಿಸಲಾಗಿದೆ.@CMofKarnataka pic.twitter.com/YKAaDum5o7

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) November 23, 2020
  • *2021 ಏಪ್ರಿಲ್‌ 14ರಂದು ಅಂಬೇಡ್ಕರ್‌ ಅವರ ಜಯಂತಿ ಕಾರ್ಯಕ್ರಮವಿದ್ದು, ಆ ದಿನವೇ ಹೊಸ ಕ್ಯಾಂಪಸ್‌ ಅನ್ನು ಪ್ರಧಾನಿ ಮೋದಿ ಅವರಿಂದ ಉದ್ಘಾಟಿಸುವುದು.
  • ಜಾಗತಿಕ ಗುಣಮಟ್ಟದ ಬೋಧನೆಗೆ ಪೂರಕವಾಗಿ ಅತ್ಯುತ್ತಮ ಅಧ್ಯಾಪಕರನ್ನು ಆಕರ್ಷಿಸುವ ಸಲುವಾಗಿ ಯುಜಿಸಿ ಶ್ರೇಣಿಗೆ ಬದಲಾಗಿ ಇಂದಿರಾಗಾಂಧಿ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆಗೆ (ಐಜಿಐಡಿಆರ್‌) ವಿಸ್ತರಿಸಲಾದ ವೇತನ ಮಾಪಕಗಳು ಮತ್ತು ಭತ್ಯೆಗಳನ್ನು ಈ ಸಂಸ್ಥೆ ಬೋಧಕರಿಗೆ ನೀಡುವುದು. (ಈ ವೇತನ ಶ್ರೇಣಿಯು ಹೆಚ್ಚು ವೇತನವನ್ನು ಒಳಗೊಂಡಿರುತ್ತದೆ. ಪ್ರೊಫೆಸರ್‌ ಒಬ್ಬರಿಗೆ ಮಾಸಿಕ; ಯುಜಿಸಿ ಶ್ರೇಣಿಯಲ್ಲಿ 2,97,352 ರೂ. ಇದ್ದರೆ, ಐಜಿಐಡಿಆರ್‌ ಶ್ವೇಣಿಯಲ್ಲಿ 3,50,376 ರೂ. ಇರುತ್ತದೆ. ಸಹಾಯಕ ಪ್ರಾಧ್ಯಾಪಕರಿಗೆ ಮಾಸಿಕ ಯುಜಿಸಿ ಶ್ರೇಣಿಯಲ್ಲಿ 1,79,304 ರೂ. ಇದ್ದರೆ, ಐಜಿಐಡಿಆರ್‌ ಶ್ರೇಣಿಯಲ್ಲಿ 1,90,456 ರೂ. ಇರುತ್ತದೆ. ಇನ್ನು ಹೊಸದಾಗಿ ಸೇರುವ ಪ್ರೊಫೆಸರುಗಳಿಗೆ ಮಾಸಿಕ ಯುಜಿಸಿಯಲ್ಲಿ 1,09,128 ರೂ. ವೇತನವಿದ್ದರೆ, ಐಜಿಐಡಿಆರ್‌ನಲ್ಲಿ 1,38,640 ರೂ. ಇರುತ್ತದೆ.)
  • ಕ್ಯಾಂಪಸ್ಸಿನಲ್ಲಿ ಲಭ್ಯವಿರುವ ಎಲ್ಲ ಮೂಲಸೌಕರ್ಯಗಳ ಸಂಪೂರ್ಣ ಬಳಕೆ.
  • ಬಾಬಾಸಾಹೇಬ್‌ ಅಂಬೇಡ್ಕರ್‌ ಅವರ ಪ್ರತಿಮೆಯನ್ನು ಆಡಳಿತ ವಿಭಾಗದ ಮುಂದೆ ಸ್ಥಾಪಿಸುವುದು.
  • ಅಧ್ಯಾಪಕರ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಕೈಗೆತ್ತಿಕೊಳ್ಳಬೇಕು ಮತ್ತು ವಿಶ್ವವಿದ್ಯಾಲಯ ಧನಸಹಾಯ ಆಯೋಗದಿಂದ ನೆರವು ಪಡೆಯಲು ಕ್ರಮ.
  • ಈಗಾಗಲೇ ಬಾಬಾಸಾಹೇಬ್‌ ಅವರ ಆಲೋಚನೆಗಳನ್ನು ಅರ್ಥಶಾಸ್ತ್ರ ಮತ್ತು ಸಾಮಾಜಿಕ ಚಿಂತನೆಗಳನ್ನು ಪಠ್ಯದ ಭಾಗವನ್ನಾಗಿ ಮಾಡಲಾಗಿದೆ. ಆದರೆ, ಈ ಅಂಬೇಡ್ಕರ್‌ ಅವರ ಇನ್ನು ಹೆಚ್ಚಿ ವಿಚಾರಗಳನ್ನು ಸೇರಿಸುವುದು.
  • ಪರಿಷ್ಕೃತ ಪಠ್ಯಕ್ರಮದ ವಿಷಯಗಳನ್ನು ಆಡಳಿತ ಮಂಡಳಿಯ ಸದಸ್ಯರೊಂದಿಗೆ ಹಂಚಿಕೊಳ್ಳಬೇಕು ಮತ್ತು ಅಂತಿಮಗೊಳಿಸುವ ಮೊದಲು ಮಂಡಳಿಯ ಅಭಿಪ್ರಾಯಗಳನ್ನು ಪಡೆದುಕೊಳ್ಳಬೇಕು.
  • ಕೋರ್ಸ್‌ಗಳ ಮಹತ್ವದ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಜಾಹೀರಾತು ಮತ್ತಿತರೆ ಮಾರ್ಗಗಳಲ್ಲಿ ಪೂರ್ಣ ಮಾಹಿತಿ ನೀಡುವುದು.
  • ಎನ್‌ಆರ್‌ಐ ಮತ್ತು ಪಿಐಒ ವಿದ್ಯಾರ್ಥಿಗಳಿಗೆ ಕೆಲ ಸೀಟುಗಳನ್ನು ಕಾಯ್ದಿರಿಸಬೇಕು.
  • ಜರ್ಮನ್‌, ಫ್ರೆಂಚ್‌ ಸೇರಿದಂತೆ ಕೆಲ ವಿದೇಶಿ ಭಾಷೆಗಳನ್ನು ಬೋಧನೆ ಮಾಡಬೇಕು
  • ಸಂಶೋಧನಾ ಕಾರ್ಯಕ್ರಮಗಳಿಗೆ ಧನಸಹಾಯಕ್ಕಾಗಿ ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳು ಹಾಗೂ ನಗರಗಳ ಸ್ಥಳೀಯ ಸಂಸ್ಥೆಗಳ ನೆರವು ಪಡೆಯುವುದು.
  • ಸಂಸ್ಥೆಯ ಎಲ್ಲ ಪ್ರಾಧಿಕಾರಗಳು, ಸಮಿತಿಗಳು ಅಂಬೇಡ್ಕರ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್ʼನ 2018ರ ಕಾಯ್ದೆಯಂತೆ ಕೆಲಸ ಮಾಡಬೇಕು.
  • ಸಂಸ್ಥೆಯಲ್ಲಿರುವ ಕೋರ್ಸ್‌ಗಳಲ್ಲಿ ಸೀಟುಗಳನ್ನು ಕಾಯ್ದಿರಿಸುವುದು ಮತ್ತು ಬೋಧನೆ ಮತ್ತು ಬೋಧಕೇತರ ಸಿಬ್ಬಂದಿಯನ್ನು ನೇಮಕ ಮಾಡುವುದು ಕುರಿತು ಸರಕಾರದ ನೀತಿ ರೂಪಿಸುವುದು.
  • ಬಹುಮುಖಿ ಕೋರ್ಸುಗಳನ್ನು ಆರಂಭಿಸುವುದು ಮತ್ತು ಎರಡನೇ ಹಂತದ ಎಲ್ಲ ಕೆಲಸಗಳನ್ನು ಆರಂಭಿಸುವುದು.
  • ಜಾಗತಿಕ ಮಟ್ಟದ ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದ ಮಾಡಿಕೊಳ್ಳುವುದು.
  • ಹಂತ 1 ಮತ್ತು ಹಂತ 2ರ ಸಿವಿಲ್ ಕಾಮಗಾರಿಗಳು ಮತ್ತು ಒಳಾಂಗಣಗಳನ್ನು ಪೂರ್ಣಗೊಳಿಸಲು ಅಗತ್ಯವಾದ ಹಣವನ್ನು ಬಿಡುಗಡೆ ಮಾಡುವುದು.

ಮಂಡಳಿ ಸಭೆಯಲ್ಲಿ ಸುಧಾಮೂರ್ತಿ, ಡಾ.ಸಂಜೀವ್‌ ಸನ್ಯಾಲ್‌ ಜತೆಗೆ ಡಾ.ಆರ್.ಬಾಲಸುಬ್ರಹ್ಮಣ್ಯಂ, ಡಾ.ಕೆ.ಪಿ.ಗೋಪಾಲಕೃಷ್ಣ, ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐಎನ್‌ಎಸ್‌ ಪ್ರಸಾದ್‌, ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ್‌, ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕ ಪ್ರದೀಪ್‌, ಸಮಾಜ ಕಲ್ಯಾಣ ಮುಖ್ಯ ಕಾರ್ಯದರ್ಶಿ ಕಾರ್ಯದರ್ಶಿ ನಾಗಲಾಂಬಿಕಾ ದೇವಿ, ಅಂಬೇಡ್ಕರ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್ʼನ ಕುಲಪತಿ ಡಾ. ಎನ್.ಆರ್.ಭಾನುಮೂರ್ತಿ, ವಿಶ್ರಾಂತ ಕುಲಪತಿ ಪ್ರೊ.ಎಸ್.ಬಿಸಲಯ್ಯ ಇನ್ನೂ ಅನೇಕರು ಭಾಗಿಯಾಗಿದ್ದರು.

Tags: ambedkar school of economicsBengalurukarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್‌, ಆಟೋಗಳಿಗೆ ಮೀಟರ್;‌ ಡಿ.1ರಿಂದ ಕೋಲಾರದಲ್ಲಿ ಕಡ್ಡಾಯ

ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್‌, ಆಟೋಗಳಿಗೆ ಮೀಟರ್;‌ ಡಿ.1ರಿಂದ ಕೋಲಾರದಲ್ಲಿ ಕಡ್ಡಾಯ

Leave a Reply Cancel reply

Your email address will not be published. Required fields are marked *

Recommended

ಎತ್ತಿನಹೊಳೆ ಎತ್ತ? ಈವರೆಗೆ 9003.86 ಕೋಟಿ ರೂ. ಖರ್ಚು!!

ಎತ್ತಿನಹೊಳೆ: ಬಿಜೆಪಿ ಹೈಕಮಾಂಡ್‌ ಅಲರ್ಟ್‌

4 years ago
ಪಿಯುಸಿ ಉತ್ತೀರ್ಣರಾದ ಎಲ್ಲರಿಗೂ ಪದವಿಗೆ ಅವಕಾಶ: ಸಚಿವ ಸುರೇಶ್ ಕುಮಾರ್

ಪಿಯುಸಿ ಉತ್ತೀರ್ಣರಾದ ಎಲ್ಲರಿಗೂ ಪದವಿಗೆ ಅವಕಾಶ: ಸಚಿವ ಸುರೇಶ್ ಕುಮಾರ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ