• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಗುಡಿಬಂಡೆ ಅಮಾನಿಭೈರ ಸಾಗರ ತಪೋವನದಲ್ಲಿ ಮತ್ತೆ ನೆಲೆನಿಂತ ಶ್ರೀ ವೈದ್ಯನಾಥೇಶ್ವರ

cknewsnow desk by cknewsnow desk
November 24, 2020
in CHIKKABALLAPUR, STATE
Reading Time: 2 mins read
0
ಗುಡಿಬಂಡೆ ಅಮಾನಿಭೈರ ಸಾಗರ ತಪೋವನದಲ್ಲಿ ಮತ್ತೆ ನೆಲೆನಿಂತ ಶ್ರೀ ವೈದ್ಯನಾಥೇಶ್ವರ
972
VIEWS
FacebookTwitterWhatsuplinkedinEmail

ಜೀರ್ಣೋದ್ಧಾರ, ಪ್ರತಿಷ್ಠಾಪನೆ ಕಾರ್ಯ ಸಂಪನ್ನ

ಗುಡಿಬಂಡೆ: ಐತಿಹಾಸಿಕ ಪಟ್ಟಣ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಅಮಾನಿಭೈರ ಸಾಗರದ ಎದುರಿನ ತಪೋವನದಲ್ಲಿ ಜೀರ್ಣೋದ್ಧಾರ ಮಾಡಲಾಗಿರುವ ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಾಲಯವು ಲೋಕಾರ್ಪಣೆಯಾಗಿದ್ದು, ಹರಿಧ್ವಾರದಿಂದ ತರಿಸಲಾಗಿರುವ ಅಮೃತಶಿಲೆಯ ಶಿವಲಿಂಗ ಹಾಗೂ ನಂದಿಯನ್ನು ಪ್ರತಿಷ್ಠಾಪನೆ ಮಾಡುವ ಪುಣ್ಯಕಾರ್ಯವು ಸೋಮವಾರ ಸಂಪನ್ನಗೊಂಡಿತು.

ಇದೇ ನವೆಂಬರ್‌ 21ರಿಂದ 23ರವರೆಗೆ ಮೂರು ದಿನ ನಡೆದ ಈ ಕಾರ್ಯಕ್ರಮದಲ್ಲಿ ದೇವಾಲಯದ ಜೀರ್ಣೋದ್ಧಾರ ಮತ್ತು ಪ್ರತಿಷ್ಠಾಪನಾ ಕಾರ್ಯವು ಗುಡಿಬಂಡೆಯ ಜನರ ಪಾಲ್ಗೊಳ್ಳುವಿಕೆಯೊಂದಿಗೆ ಶ್ರದ್ಧಾಭಕ್ತಿಯಿಂದ ನೆರೆವೇರಿತು. ವೇದ ಪಂಡಿತ ಸ.ನಾ.ನಾಗೇಂದ್ರ ನೇತೃತ್ವದ ತಂಡವು ಪ್ರತಿಷ್ಠಾಪನೆಯ ಎಲ್ಲ ಧಾರ್ಮಿಕ ಕಾರ್ಯಗಳನ್ನು ನಡೆಸಿಕೊಟ್ಟಿತು.

ಮೊದಲ ದಿನ ಯಮುನಾ ಪೂಜೆಯೊಂದಿಗೆ (ಗಂಗೆಯ ಪೂಜೆ), ಕಲಶ ಪ್ರತಿಷ್ಠಾಪನೆ ನೆರವೇರಿತು. ಭಾನುವಾರ ಗೋಪುರ ಕಳಶ ಪೂಜೆ, ನವಗ್ರಹ ಪೂಜೆ, ರುದ್ರ ಹೋಮ, ಗಣಪತಿ-ನವಗ್ರಹ ಹೋಮ, ಶಾಂತಿ ಹೋಮ ನಡೆಯಿತು. ಸಂಜೆ ಅದಿವಾಸಿ ಪೂಜೆಯ ನಿಮಿತ್ತ ಜಲ, ಕ್ಷೀರ, ಫಲ, ಪುಷ್ಪ, ನವರತ್ನ, ಶೈನವಾಸ ಪೂಜಾ ಕಾರ್ಯಕ್ರಮಗಳು ನಡೆದವು.

ಸೋಮವಾರ ಬೆಳಗ್ಗೆ ಪುಣ್ಯ ಮಹೂರ್ತದಲ್ಲಿ ಭಕ್ತಾಧಿಗಳ ಸಮ್ಮುಖದಲ್ಲಿ ಶಿವ, ನಂದಿಯ ಪ್ರತಿಷ್ಠಾಪನಾ ಕಾರ್ಯವನ್ನು ನೆರೆವೇರಿಸಲಾಯಿತು. ಜತೆಗೆ, ದೇನು (ಗೋವು) ದರ್ಶನ, ನೇತ್ರೋನ್ಮಿಲನ ಕಾರ್ಯಕ್ರಮಗಳು ನೆರೆವೇರಿದವು. ಅದಾದ ಮೇಲೆ, ಕುಂಭಾಭಿಷೇಕ ಪೂರ್ಣಗೊಂಡ ನಂತರ ಸ್ವಾಮಿಯನ್ನು ಭಕ್ತರ ದರ್ಶನಕ್ಕೆ ಮುಕ್ತಗೊಳಿಸಲಾಯಿತು.

https://www.youtube.com/watch?v=zEZ8sMxwJgw
48 ದಿನ ಮಂಡಲಪೂಜೆ

ವೈದ್ಯನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾಪನೆಯ ದಿನದಿಂದ ನಲವತ್ತೆಂಟು ದಿನಗಳ ಕಾಲ ಮಂಡಲ ಪೂಜೆ ನಡೆಯಲಿದೆ. ಈ ಪೂಜೆಯ ಕೊನೆಯ ದಿನ ಹೋಮ ಇತ್ಯಾದಿ ದೈವ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಭಾರತೀಯ ಸೇನಾಪಡೆಯ ಯೋಧ ವಿ.ಲಕ್ಷ್ಮೀನಾರಾಯಣ ಅವರು ಸಿಕೆನ್ಯೂಸ್‌ ನೌ ಜತೆ ಮಾತನಾಡುತ್ತಾ ತಿಳಿಸಿದರು.

ಜೀರ್ಣೋದ್ಧಾರ, ಸ್ವಾಮಿಯ ಪ್ರತಿಷ್ಠಾಪನೆಯ ಕಾರ್ಯಕ್ರಮವೂ ಲವಲೇಶವೂ ಸಮಸ್ಯೆ ಇಲ್ಲದೆ ನಿರ್ವಿಘ್ನವಾಗಿ ನೆರವೇರಿತು. ಗುಡಿಬಂಡೆ ಪಟ್ಟಣ ಮಾತ್ರವಲ್ಲದೆ, ತಾಲ್ಲೂಕಿನ ಭಕ್ತಾದಿಗಳೂ ಪಾಲ್ಗೊಂಡಿದ್ದರು. ಶಿರಸಿಯ ಚಿತ್ರದುರ್ಗ ಮುರುಘಾಮಠದ ಶಾಖಾ ಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಎತ್ತಿನಹೊಳೆ ಯೋಜನೆಯ ಮುಖ್ಯ ಎಂಜಿನೀಯರ್‌ ರಂಗನಾಥ್‌ ಮುಂತಾದ ಪ್ರಮುಖರು ಭಾಗಿಯಾಗಿದ್ದರು. ಈ ಪೈಕಿ ರಂಗನಾಥ್‌ ಅವರು ದೇಗುಲದ ಮತ್ತಷ್ಟು ಅಭಿವೃದ್ಧಿಗೆ ಒಂದು ಲಕ್ಷ ರೂ. ದೇಣಿಗೆ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದರು.

ಕಾರ್ತಿಕ ಪೂಜೆ ಹಾಗೂ ಗಂಗಾ ಆರತಿ

ಕಾರ್ತೀಕ ಮಾಸದಲ್ಲಿ ಸ್ವಾಮಿಯ ಪ್ರತಿಷ್ಠಾಪನೆ ಕಾರ್ಯ ನಡೆದಿರುವುದರಿಂದ ಪ್ರತೀವರ್ಷ ಈ ಮಾಸದಲ್ಲಿ ವಿಶೇಷ ಪೂಜೆಗಳು, ಕಾರ್ಯಕ್ರಮಗಳು ನಡೆಯಲಿವೆ. ಹಾಗೆಯೇ, ಕಾಶಿ ಮತ್ತು ಪ್ರಯಾಗದ ತ್ರಿವೇಣಿ ಸಂಗಮದಲ್ಲಿ ನಡೆಯುವ ಗಂಗಾ ಆರತಿಯಂತೆ ಇಲ್ಲೂ ನಡೆಸಲಾಗುವುದು. ಸದಾ ಕಾಲ ಈ ದೇಗುಲದಲ್ಲಿ ಒಂದಿಲ್ಲೊಂದು ಧಾರ್ಮಿಕ ಕಾರ್ಯಗಳು ನಡೆಯುತ್ತಲೇ ಇರುತ್ತವೆ ಎಂದು ಲಕ್ಷ್ಮೀನಾರಾಯಣ್‌ ಮಾಹಿತಿ ನೀಡಿದರು.

ವೈದ್ಯನಾಗಿ ಬಂದಿದ್ದ ಪರಮಶಿವ

ಇದೇ ವೇಳೆ ಸಿಕೆನ್ಯೂಸ್‌ ನೌ ಜತೆ ಮಾತನಾಡಿದ ಗುಡಿಬಂಡೆಯ ವೇದ ಪಂಡಿತ ಸ.ನಾ. ನಾಗೇಂದ್ರ ಅವರು, “16ನೇ ಶತಮಾನದಲ್ಲಿ ಪಾಳೇಯಗಾರರಾದ ಭೈರೇಗೌಡರು ಇಲ್ಲಿನ ಕೆರೆಯನ್ನು ಕಟ್ಟಿಸುತ್ತಿರುವಾಗ ಈಗಿನ ಕೊರೊನಾದಂತೆ ಒಂದು ಮಾರಕ ವೈರಸ್‌ ಬಂದಿತ್ತೆಂದು, ಆಗ ಕೆರೆ ಕಟ್ಟುತ್ತಿದ್ದ ಕಾರ್ಮಿಕರೆಲ್ಲ ಸಾಯುತ್ತಿದ್ದರಂತೆ. ಅಂಥ ವಿಷಮ ವೇಳೆಯಲ್ಲಿ ಸಾಕ್ಷಾತ್‌ ಆ ಪರಮಶಿವನೇ ವೈದ್ಯನಾಗಿ ಬಂದು ಆ ಕಾರ್ಮಿಕರಿಗೆ ಚಿಕಿತ್ಸೆ ನೀಡಿ ಕಾಯಿಲೆ ಗುಣಪಡಿಸಿದನಂತೆ. ಈ ಕಾರಣಕ್ಕಾಗಿಯೇ ಪಾಳೇಯಗಾರರು ಇಲ್ಲಿ ವೈದ್ಯನಾಥೇಶ್ವರ ದೇಗುಲವನ್ನು ಕಟ್ಟಿಸಿದ್ದರು. ಕಾಲಕ್ರಮೇಣ ಅದು ಶಿಥಿಲವಾಗಿ ಪಾಳುಬಿದ್ದಿತ್ತು. ಇದೀಗ ಜೀರ್ನೋದ್ಧಾರವಾಗಿ ಇಡೀ ದೇಗುಲಕ್ಕೆ ಮತ್ತು ಗುಡಿಬಂಡೆಗೆ ಪೂರ್ವವೈಭವ ಬಂದಂತೆ ಆಗಿದೆ” ಎನ್ನುತ್ತಾರೆ.

https://www.youtube.com/watch?v=Owlx666Y-Rg
  • ಕೆಳಗಿನ ಸುದ್ದಿ ಓದಲು ಈ ಲಿಂಕ್‌ ಕ್ಲಿಕ್‌ ಮಾಡಿ..
ಲೋಕ ಚಿಕಿತ್ಸಕ ವೈದ್ಯನಾಥೇಶ್ವರನ ಗುಡಿಗೇ ಶಸ್ತ್ರಚಿಕಿತ್ಸೆ; ಅಮಾನಿ ಭೈರಸಾಗರದೆದುರು ಶಿವಸನ್ನಿಧಿ
Tags: chikkaballapurgudibandevaidyanatheshwara temple
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕಲಿಯುಗ ಪ್ರತ್ಯಕ್ಷ ದೈವ ಶ್ರೀ ವೆಂಕಟೇಶ್ವರ ಸ್ವಾಮಿ ನೆಲೆಸಿರುವ ಆಂಧ್ರಪ್ರದೇಶ ಆಗುತ್ತಿದೆಯಾ ಕ್ರೈಸ್ತಪ್ರದೇಶ !?

ತಿರುಮಲದಲ್ಲಿ ನಿವಾರ್‌ ಅಬ್ಬರಕ್ಕೆ ಭಕ್ತರು ತತ್ತರ; ಇನ್ನೂ 3 ದಿನ ತಮಿಳುನಾಡು ಕಡೆ ಹೋಗಲೇಬೇಡಿ

Leave a Reply Cancel reply

Your email address will not be published. Required fields are marked *

Recommended

ಧ್ವಂಸವಾಗಿರುವ ವಿಸ್ಟ್ರಾನ್‌ ಕಾರ್ಖಾನೆ, ಪುಡಿ ಪುಡಿಯಾಗಿರುವ ಗಾಜುಗಳ ದೃಶ್ಯ.

ಆಪಲ್‌ ಐಫೋನ್-‌12 ತಯಾರಿಸುತ್ತಿದ್ದ ಕೋಲಾರದ ವಿಸ್ಟ್ರಾನ್‌ ಕಂಪನಿಯಲ್ಲಿ ದಂಗೆ ಎದ್ದ 8,000 ಕಾರ್ಮಿಕರು; ವಾಹನಗಳಿಗೆ ಬೆಂಕಿ, ಕಾರ್ಖಾನೆ ಧ್ವಂಸ

5 years ago
ಉತ್ತರ ಕರ್ನಾಟಕ ಶಾಸಕರ ಆವಾಜ್‌ಗೆ ಪತರಗುಟ್ಟಿದ ಸರಕಾರ

ಉತ್ತರ ಕರ್ನಾಟಕ ಶಾಸಕರ ಆವಾಜ್‌ಗೆ ಪತರಗುಟ್ಟಿದ ಸರಕಾರ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ