• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಚಿಕ್ಕಬಳ್ಳಾಪುರದಲ್ಲಿ ಕೈಗಾರಿಕೀಕರಣ: ಜಿಲ್ಲೆಯ 100 ಎಕರೆಯಲ್ಲಿ ಬರಲಿದೆ ಎಲೆಕ್ಟ್ರಿಕ್‌ ಬೈಕ್‌ ಕಾರ್ಖಾನೆ; ಕೃಷಿ ಉತ್ಪನ್ನ ಕೈಗಾರಿಕೆಗಳಿಗೆ 300 ಎಕರೆ ಭೂಮಿ ಬೇಕು ಎಂದ ಡಾ.ಕೆ.ಸುಧಾಕರ್

cknewsnow desk by cknewsnow desk
January 9, 2021
in CHIKKABALLAPUR, STATE
Reading Time: 1 min read
0
ಚಿಕ್ಕಬಳ್ಳಾಪುರದಲ್ಲಿ ಕೈಗಾರಿಕೀಕರಣ: ಜಿಲ್ಲೆಯ 100 ಎಕರೆಯಲ್ಲಿ ಬರಲಿದೆ ಎಲೆಕ್ಟ್ರಿಕ್‌ ಬೈಕ್‌ ಕಾರ್ಖಾನೆ; ಕೃಷಿ ಉತ್ಪನ್ನ ಕೈಗಾರಿಕೆಗಳಿಗೆ 300 ಎಕರೆ ಭೂಮಿ ಬೇಕು ಎಂದ ಡಾ.ಕೆ.ಸುಧಾಕರ್
914
VIEWS
FacebookTwitterWhatsuplinkedinEmail
  • ಎಂ.ಕೃಷ್ಣಪ್ಪ ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: ಕೆಲ ದಿನಗಳ ಹಿಂದೆ ಜಿಲ್ಲೆಯಲ್ಲಿ ಲೀಥಿಯಂ ಕಾರ್ಖಾನೆ ಸ್ಥಾಪಿಸಲು ರಾಜ್ಯ ಸರಕಾರದ ಉನ್ನತ ಮಟ್ಟದ ಸಮಿತಿ ಒಪ್ಪಿಗೆ ನೀಡಿದ ಬೆನ್ನಲ್ಲೇ ಇನ್ನೊಂದು ಸಿಹಿ ಸುದ್ದಿ ಹೊರಬಿದ್ದಿದೆ.

ಜಿಲ್ಲೆಯಲ್ಲಿ ಎಲೆಕ್ಟ್ರಿಕ್ ಬೈಕ್ ತಯಾರಿಕೆ ಮಾಡುವ ಕೈಗಾರಿಕೆ ಸ್ಥಾಪನೆಗೆ ಕಂಪನಿಯೊಂದು ಮುಂದೆ ಬಂದಿದ್ದು, ಇನ್ನಷ್ಟು ಕೈಗಾರಿಕೆಗಳು ಈ ಭಾಗಕ್ಕೆ ಬರಲು ಉತ್ಸುಕತೆ ತೋರಿವೆ ಎಂದು ಜಿಲ್ಲಾ ಉಸ್ತುವಾರಿಯೂ ಆಗಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ಹೊಸ ತಲೆಮಾರಿನಲ್ಲಿ ಪೆಟ್ರೋಲ್‌, ಡೀಸೆಲ್‌ ರಹಿತ ವಾಹನಗಳಿಗೆ ಹೆಚ್ಚು ಬೇಡಿಕೆ ಬರಲಿದೆ. ಹೀಗಾಗಿ ಎಲೆಕ್ಟ್ರಿಕಲ್‌ ಬೈಕ್‌ ತಯಾರಿಕಾ ಕಂಪನಿಗೆ ಎಲ್ಲ ಸೌಕರ್ಯಗಳನ್ನು ಕಲ್ಪಿಸಿಕೊಡಲಾಗುವುದು ಎಂದು ಅವರು ತಿಳಿಸಿದರು

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಕಂಪನಿ ಉನ್ನತ ಮಟ್ಟದ ಅಧಿಕಾರಿಗಳು ತಮ್ಮ ಜತೆ ಮಾತನಾಡಿದ್ದಾರೆ. ಅವರಿಗೆ ನೂರು ಎಕರೆ ಭೂಮಿ ಬೇಕಾಗಿದೆ. ಈ ಕೈಗಾರಿಕೆಯ ಜತೆಗೆ, ಕೃಷಿ ಉತ್ಪನ್ನ ಆಧಾರಿತ ಕೈಗಾರಿಕೆಗಳ ಸ್ಥಾಪನೆಗೆ ಕನಿಷ್ಠ ಮುನ್ನೂರು ಎಕರೆ ಭೂಮಿ ಸಿದ್ಧಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಕೆಲ ಫಾರ್ಮಾ ಕಂಪನಿಗಳು ಮಾತುಕತೆ ನಡೆಸುತ್ತಿವೆ. ಈ ವರ್ಷ ಶತಾಯ-ಗತಾಯ ಕೈಗಾರಿಕೆಗಳನ್ನು ತರಲೇಬೇಕು ಎಂಬ ಗುರಿ ಹಾಕಿಕೊಳ್ಳಲಾಗಿದೆ ಎಂದರು.

ಕೆಆರ್‌ಐಡಿಎಲ್ ಅಧಿಕಾರಿಗಳಿಗೆ ತರಾಟೆ

ಜಿಲ್ಲೆಯಲ್ಲಿ ನಡೆಯುತ್ತಿರುವ ಬಹುತೇಕ ಕಟ್ಟಡ ಕಾಮಗಾರಿಗಳು ಪೂರ್ಣಗೊಳಿಸುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ಕೆಆರ್‌ಐಡಿಎಲ್ ಅಧಿಕಾರಿಗಳ ವರ್ತನೆ ಬಗ್ಗೆ ಸಿಟ್ಟಾದ ಸಚಿವರು, ಆ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರಲ್ಲದೆ ಮಾರ್ಚ್ ಅಂತ್ಯದೊಳಗೆ ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಲೇಬೇಕು. ಇಲ್ಲವಾದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಗ್ರಾಮ ವಿಕಾಸ ಯೋಜನೆಯಡಿ 51 ಕಾಮಗಾರಿಗಳ ಯೋಜನೆ ಬದಲಾವಣೆ ಮಾಡಬೇಕಿದೆ ಎಂಬ ಉತ್ತರದಿಂದ ಕೆಂಡಾಮಂಡಲರಾದ ಸಚಿವರು‌, ಈಗಾಗಲೇ ಸೂಚನೆ ನೀಡಿರುವಂತೆ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು. ಸಣ್ಣ ನೀರಾವರಿ ಇಲಾಖೆಯಡಿ ಅಮಾನಿಕೆರೆ ತುಂಬಿಸುವ ಯೋಜನೆ ಮಂದಗತಿಯಲ್ಲಿ ಸಾಗಿದೆ. ಕಲ್ವರ್ಟ್ ಕೆಲಸ ಬೇಗ ಮುಗಿಸಿ ತ್ವರಿತಗತಿಯಲ್ಲಿ ಕೆರೆ ತುಂಬಿಸಬೇಕು ಎಂದು ಸಚಿವರು ತಾಕೀತು ಮಾಡಿದರು.

ಅನುಷ್ಠಾನದಲ್ಲಿ 9 ಮಾನದಂಡಗಳ ಆಧಾರದಲ್ಲಿ ಜಿಲ್ಲೆ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿರುವುದಕ್ಕೆ ಸಚಿವರು ಹರ್ಷ ವ್ಯಕ್ತಪಡಿಸಿದರು. ಮುಂದಿನ ತ್ರೈಮಾಸಿಕದಲ್ಲಿ ಮೊದಲ ಸ್ಥಾನಕ್ಕೆ ಬರುವಂತೆ ಕೆಲಸ ಮಾಡಬೇಕು. ಹಿಂದೆ ಜಿಲ್ಲೆಯಲ್ಲಿ ನರೇಗಾ ಯೋಜನೆಗೆ ಒತ್ತು ನೀಡಿರಲಿಲ್ಲ. ಆ ಧೋರಣೆ ಬದಲಾಗಬೇಕು. ಮುಂದೆ 90 ಲಕ್ಷ ಮಾನವದಿನಗಳ ಸೃಜನೆಗೆ ಯೋಜನೆ ರೂಪಿಸುವ ಮೂಲಕ ಮೊದಲ ಸ್ಥಾನ ಪಡೆಯಬೇಕು ಎಂದು ಸೂಚನೆ ನೀಡಿದರು.

ಈಗಲೂ ಕುಡಿಯುವ ನೀರು ಪೂರೈಕೆಗೆ ಚಿಂತಾಮಣಿ, ಶಿಡ್ಲಘಟ್ಟ ಮತ್ತು ಚಿಕ್ಕಬಳ್ಳಾಪುರ ತಾಲ್ಲೂಕಿನ ಅನೇಕ ಕಡೆ ಖಾಸಗಿ ಕೊಳವೆ ಬಾವಿ ಮತ್ತು ಟ್ಯಾಂಕರ್ ಅನ್ನು ಅವಲಂಬಿಸಲಾಗಿದೆ. ಟಾಸ್ಕ್ ಪೋರ್ಸ್ ನಿರ್ದೇಶನದಂತೆ ಕೈಗೊಂಡ ಕೆಲಸಗಳಿಗೆ ಬಾಕಿಯಿರುವ ಹಣವನ್ನು ಬಿಡುಗಡೆ ಮಾಡಿಸುವುದಾಗಿ ಭರವಸೆ ನೀಡಿದರು.

ನಿಯಮಿತವಾಗಿ ಕುಡಿಯುವ ನೀರಿನ ಪರೀಕ್ಷೆ ಮಾಡಬೇಕು. ಅದರ ವರದಿಯನ್ನು ವೆಬ್ ಸೈಟ್ ಗೆ ಅಪ್ ಲೋಡ್ ಮಾಡಬೇಕು. ಎಲ್ಲಾ ಸರಕಾರಿ ಕೊಳವೆ ಬಾವಿಗಳಿಗೆ ಇಂಗುಗುಂಡಿ ನಿರ್ಮಿಸಬೇಕು. ನಂತರ ಖಾಸಗಿ ಕೊಳವೆಬಾವಿಗಳಿಗೆ ಇಂಗುಗುಂಡಿ ನಿರ್ಮಿಸುವ ಕೆಲಸ ಆಗಬೇಕು ಎಂದು ನಿರ್ದೇಶನ ನೀಡಿದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅಡಿ ಮಂಡಿಕಲ್ಲು ಯೋಜನೆ ಡಿಪಿಆರ್ ಸಿದ್ಧಪಡಿಸುವ ಅಂತಿಮ ಹಂತದಲ್ಲಿದೆ. ಉಳಿದ ಮೂರು ಯೋಜನೆಗಳು ನಾನಾ ಹಂತದಲ್ಲಿದ್ದು ಜೂನ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು. ಜಿಲ್ಲೆಯ ಐದು ನದಿಗಳ ಪುನರುಜ್ಜೀವನ ಯೋಜನೆಯನ್ನು ನರೇಗಾ ಅಡಿ ತೆಗೆದುಕೊಳ್ಳುವ ಸಾಧ್ಯತೆಗಳ ಬಗ್ಗೆ ಪರಿಶೀಲಿಸಲು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರಿಗೆ ಸೂಚನೆ ನೀಡಿದರು.

  • ಕೆಡಿಪಿ ಸಭೆಯಲ್ಲಿ ಸಚಿವ ಡಾ.ಸುಧಾಕರ್‌, ಜಿಲ್ಲಾಧಿಕಾರಿ ಆರ್.ಲತಾ, ಶಾಸಕ ಎಸ್.ಎನ್.ಸುಬ್ಬಾರೆಡ್ಡಿ.

ಚಿಂತಾಮಣಿಗೆ ಕುಡಿಯುವ ನೀರು

ಚಿಂತಾಮಣಿಗೆ ಕುಡಿಯುವ ನೀರು ಒದಗಿಸುವ ಪೈಪ್ ಮೂಲಕ ನೀರು ಒದಗಿಸುವ ಯೋಜನೆಗೆ ಯಾರಾದರೂ ಅಡ್ಡಿ ಮಾಡಿದರೆ ಕಾನೂನು ಕ್ರಮ ಜರುಗಿಸಬೇಕು. ಮೊದಲ ಹಂತದಲ್ಲಿ ಸಾಧ್ಯವಾದಷ್ಟು ಗ್ರಾಮಗಳಿಗೆ ನೀರು ಪೂರೈಸಲಾಗುವುದು. ಈ ವಿಷಯದಲ್ಲಿ ರಾಜಕೀಯ ಬೆರೆಸಬಾರದು ಎಂದು ಮನವಿ ಮಾಡಿದರು.

ವಾಡಿಕೆಗಿಂತ ಶೇಕಡಾ 31ರಷ್ಟು ಹೆಚ್ಚು ಮಳೆಯಾಗಿದೆ. ರಸಗೊಬ್ಬರ ಕೊರತೆ ಎದುರಾಗದಂತೆ ನೋಡಿಕೊಳ್ಳಬೇಕು. 1.15 ಲಕ್ಷ ರೈತ ಕುಟುಂಬಗಳಿಗೆ ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ಬ್ಯಾಂಕ್ ಖಾತೆಗಳಿಗೆ ಹಣ ತುಂಬಲಾಗಿದೆ. ಕಂದಾಯ ಮತ್ತು ಕೃಷಿ ಇಲಾಖೆ ನಡುವೆ ಸಮನ್ವಯ ಕೊರತೆಯಿಂದ ಪೌತಿ ಖಾತೆಗಳ ವಿಲೇವಾರಿ ಕೊರತೆಯಿಂದ ಇನ್ನೂ ಅರ್ಧದಷ್ಟು ರೈತರಿಗೆ ಯೋಜನೆ ಲಾಭ ಸಿಗದಂತಾಗಿದೆ. ಇದನ್ನು ಶೀಘ್ರವಾಗಿ ಸರಿಪಡಿಸಬೇಕು ಎಂದು ಸೂಚನೆ ನೀಡಿದರು.

ಈ ವೇಳೆ ಶಾಸಕ ಜೆ. ಕೃಷ್ಣಾರೆಡ್ಡಿ, ಎಸ್.ಎನ್. ಸುಬ್ಬಾರೆಡ್ಡಿ, ವಿಧಾನಪರಿಷತ್ ಸದಸ್ಯ ಚಿದಾನಂದ ಎಂ ಗೌಡ, ಜಿಲ್ಲಾಪಂಚಾಯಿತಿ ಅಧ್ಯಕ್ಷ ಚಿಕ್ಕನರಸಿಂಹಯ್ಯ, ಜಿಲ್ಲಾಧಿಕಾರಿ ಆರ್. ಲತಾ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಿವಶಂಕರ್, ಎಸ್ಪಿ ಮಿಥುನ್ ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.

Tags: chikkaballapurdr k sudhakarelectric bikeInvestment
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಕರ್ನಾಟಕದೊಳಗೆ ಆಂಧ್ರ ರಾಜಕೀಯ; ಚಕ್ರ ತಿರುಗಿಸುತ್ತಿದೆ ತೆಲುಗು ವೋಟ್‌ ಬ್ಯಾಂಕ್‌ !

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವಿದ್ಯಾಗಮ ಸುಲಲಿತ; ಶೇ.80ರಷ್ಟು ಹಾಜರಾತಿ, ಸೋಂಕಿನಿಂದ ಶಿಕ್ಷಕರು ಸುರಕ್ಷಿತ ಎಂದ ಆರೋಗ್ಯ ಮಂತ್ರಿ

Leave a Reply Cancel reply

Your email address will not be published. Required fields are marked *

Recommended

ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲಿ ಅಂಬ್ಯುಲೆನ್ಸ್ ನೌಕರರು ಅತಂತ್ರ, ಆಶಾ ಕಾರ್ಯಕರ್ತೆಯರ ಪರಿಸ್ಥಿತಿ ಆಯೋಮಯ

ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲಿ ಅಂಬ್ಯುಲೆನ್ಸ್ ನೌಕರರು ಅತಂತ್ರ, ಆಶಾ ಕಾರ್ಯಕರ್ತೆಯರ ಪರಿಸ್ಥಿತಿ ಆಯೋಮಯ

4 years ago
ರಾಜ್ಯ ಬಿಜೆಪಿಗೆ ಯಡಿಯೂರಪ್ಪ ಅವರೇ ಬಾಹುಬಲಿ; ಆದರೆ, ಕಟ್ಟಪ್ಪ ಯಾರೆಂಬುದೇ ಪ್ರಶ್ನೆ!!

ರಾಜ್ಯ ಬಿಜೆಪಿಗೆ ಯಡಿಯೂರಪ್ಪ ಅವರೇ ಬಾಹುಬಲಿ; ಆದರೆ, ಕಟ್ಟಪ್ಪ ಯಾರೆಂಬುದೇ ಪ್ರಶ್ನೆ!!

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ