• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

cknewsnow desk by cknewsnow desk
January 9, 2021
in CHIKKABALLAPUR, COVID-19, STATE
Reading Time: 1 min read
0
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!
920
VIEWS
FacebookTwitterWhatsuplinkedinEmail
  • ಕೃಷ್ಣಪ್ಪ ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: ಕೋವಿಡ್‌ ಎರಡನೇ ಅಲೆ ಭೀತಿ ನಡುವೆಯೂ ಜಿಲ್ಲಾ ಮಟ್ಟದಲ್ಲಿ ನಡೆಯುತ್ತಿರುವ ವಿವಿಧ ಸಭೆಗಳು, ಕಾರ್ಯಕ್ರಮಗಳಲ್ಲಿ ದೈಹಿಕ ಅಂತರ, ಮಾಸ್ಕ್‌ ಧರಿಸುವುದನ್ನು ಗಾಳಿಗೆ ತೂರಲಾಗಿದ್ದು, ಇದೇ ದೃಶ್ಯ ನಗರಸಭೆಯ ಪ್ರಥಮ ಸಾಮಾನ್ಯ ಸಭೆಯಲ್ಲೂ ಕಂಡು ಬಂದಿತು.

ನಗರಸಭೆಯ ಅಧ್ಯಕ್ಷ ಆನಂದರೆಡ್ಡಿ (ಬಾಬು) ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಭೆ ನಡೆಯಿತಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವರೂ ಆದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಸಮ್ಮುಖದಲ್ಲಿ ನಗರಸಭೆಯ ಕೆಲ ಸದಸ್ಯರು ಕೊನೆಪಕ್ಷ ಮಾಸ್ಕ್ ಧರಿಸದೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಈ ಚುನಾಯಿತ ಪ್ರತಿನಿಧಿಗಳು ಜನರಿಗೆ ನೀಡಿದ ಸಂದೇಶವಾದರೂ ಏನು ಎಂಬ ಪ್ರಶ್ನೆ ಎದ್ದಿದೆ.

ಒಂದೆಡೆ ಆರೋಗ್ಯ ಸಚಿವರು ಜಿಲ್ಲೆಯು ಸೇರಿದಂತೆ ರಾಜ್ಯಾದ್ಯಂತ ವೈರಸ್‌ ನಿವಾರಣೆಗೆ ಇನ್ನಿಲ್ಲದ ಶ್ರಮ ಹಾಕುತ್ತಿದ್ದರೆ, ಅವರ ಸ್ವಕ್ಷೇತ್ರ ಚಿಕ್ಕಬಳ್ಳಾಪುರದ ನಗರಸಭೆಯ ಸಭೆಯಲ್ಲಿ ಸದಸ್ಯರು ಕೋವಿಡ್‌ ಮಾರ್ಗಸೂಚಿ ಉಲ್ಲಂಘಿಸಿದ್ದು ಎಲ್ಲರ ಹುಬ್ಬೇರಿಸಿದೆ.

  • ಮಾಸ್ಕ್‌ ಧರಿಸದೆ, ದೈಹಿಕ ಅಂತರವಿಲ್ಲದೆ ಸಭೆಯಲ್ಲಿ ಭಾಗವಹಿಸಿದ್ದ ನಗರಸಭೆ ಸದಸ್ಯರು.

ತಿನ್ನುವುದು ಬದನೇಕಾಯಿ, ಹೇಳುವುದು ನೀತಿ ಪಾಠ ಎಂಬ ಹಿರಿಯರ ಗಾದೆಯಂತೆ ನಾಗರಿಕರಿಗೆ ಕೊರೊನ ನಿಯಂತ್ರಣ ಬಗ್ಗೆ ಜನ ಜಾಗೃತಿ ಮೂಡಿಸಬೇಕಾದ ಕೆಲ ಸದಸ್ಯರು ಅವರೇ ಮಾಸ್ಕ್ ಹಾಕದೇ ಸಭೆಯಲ್ಲಿ ಭಾಗಿಯಾಗಿದ್ದು ಸರಿಯಲ್ಲ. ಈ ಸಂಗತಿಯನ್ನು ಸಚಿವರು ಗಮನಕ್ಕೆ ಬಾರದಿರುವುದು ಬೇಸರದ ಸಂಗತಿ ಎನ್ನುತ್ತಾರೆ ಚಿಕ್ಕಬಳ್ಳಾಪುರದ ನಿವಾಸಿ ಜಿ.ಎನ್.ಚಂದ್ರಶೇಖರ್.‌

ಮೌನವಾಗಿದ್ದರು ಮಹಿಳೆಯರು

ಇದೇ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಗಮನ ಸೆಳೆದ ಮತ್ತೊಂದು ಸಂಗತಿ ಎಂದರೆ, ಮಹಿಳಾ ಮೀಸಲು ಸೌಲಭ್ಯ ಪಡೆದು ಚುನಾಯಿತರಾದ ಓರ್ವ ಮಹಿಳಾ ಸದಸ್ಯೆಯೊಬ್ಬರನ್ನು ಹೊರತುಪಡಿಸಿ ಪುರುಷ ಸದಸ್ಯರಷ್ಟೇ ಸರಿಸಮರಾದ ಮಹಿಳಾ ಸದಸ್ಯರೂ ಯಾವ ವಿಷಯದ ಬಗ್ಗೆ ತುಟಿಬಿಚ್ಚದೆ ಮೌನವಾಗಿದ್ದರು. ಈ ಪೈಕಿ ಕೆಲ ಸದಸ್ಯೆಯರ ಪತಿರಾಯರು ನಗರಸಭೆ ಪ್ರಾಂಗಣದಚಲ್ಲಿ ಠಳಾಯಿಸಿದ್ದು ಕಂಡುಬಂದಿತು..

ನಗರದಲ್ಲಿ ಮಹಿಳೆಯರಿಗೇ ಸಂಬಂಧಿಸಿದ ಪ್ರತ್ಯೇಕ ಶೌಚಾಲಯ, ನೌರ್ಮಲ್ಯ ಕೊರತೆ ಸೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಒಳಗೊಂಡಂತೆ ಅವರವರ ವಾರ್ಡುಗಳಲ್ಲಿ ಜನಸಾಮಾನ್ಯರ ಸಮಸ್ಯೆ ಹೇರಳವಾಗಿದ್ದರೂ ಯಾವೊಬ್ಬ ಸದಸ್ಯರೂ ಪ್ರಥಮ ಸಭೆಯಲ್ಲೇ ತುಟಿ ಬಿಚ್ಚದೆ ಮೌನವಾಗಿದ್ದರು.

ಪ್ರತಿಪಕ್ಷದ ಸದಸ್ಯರೊಬ್ಬರು ನಗರದಲ್ಲಿ ಪ್ರಮುಖ ರಸ್ತೆಗಳ ಅಗಲೀಕರಣದ ವಿಷಯವನ್ನು ಪ್ರಸ್ತಾಪ ಮಾಡಿದರು. ಇದಕ್ಕೆ ಉತ್ತರಿಸಿದ ಸಚಿವ ಸುಧಾಕರ್ ಅವರು; ನಗರ ವ್ಯಾಪ್ತಿಯ ರಸ್ತೆಗಳ ಅಗಲೀಕರಣಕ್ಕೆ ಕೈ ಹಾಕಿದರೆ ಜೇನು ಗೂಡಿಗೆ ಕಲ್ಲು ಹೊಡೆದಂತೆ ಎಂದರಲ್ಲದೆ ನಗರದ ವರ್ತಕರಿಗೆ ಸಚಿವರು ಪರೋಕ್ಷ ವರ ನೀಡಿದರೇ ಎಂಬ ಮಾತು ಸಭೆಯಲ್ಲೇ ಕೇಳಿಬಂತು.

ಚಿಕ್ಕಬಳ್ಳಾಪುರ ನಗರಸಭೆಯ ಸಭಾಂಗಣದಲ್ಲಿ ಇಂದು ನಡೆದ ನಗರಸಭೆಯ ಸರ್ವ ಸದಸ್ಯರ ಸಭೆಯಲ್ಲಿ ಪಾಲ್ಗೊಂಡು ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚಿಸಲಾಯಿತು. ನಗರಸಭೆ ಅಧ್ಯಕ್ಷ ಶ್ರೀ ಡಿ.ಎಸ್.ಆನಂದರೆಡ್ಡಿ, ಉಪಾಧ್ಯಕ್ಷೆ ಶ್ರೀಮತಿ ವೀಣಾರಾಮ್, ಆಯುಕ್ತ ಲೋಹಿತ್ ಹಾಗೂ ಸದಸ್ಯರು ಉಪಸ್ಥಿತರಿದ್ದರು. pic.twitter.com/c9YIIhm2al

— Dr Sudhakar K (Modi ka Parivar) (@DrSudhakar_) January 8, 2021

ನಗರಸಭೆಗೆ ತುಂಬಾ ನಿರೀಕ್ಷೆ ಇಟ್ಟುಕೊಂಡು ಜನರು ಸದಸ್ಯರನ್ನು ಆಯ್ಕೆ ಮಾಡಿರುತ್ತಾರೆ. ಆದರೆ ಆ ಸದಸ್ಯರು ಪ್ರಥಮ ಸಾಮಾನ್ಯ ಸಭೆಯಲ್ಲಿ ಮಾಡಿದ್ದೇನು? ಅಲ್ಲಿ ಅಲಂಕಾರಕ್ಕೆ ಕೂರಲು ಅವರನ್ನು ಆಯ್ಕೆ ಮಾಡಲಾಗಿದೆಯೇ? ಮಾಸ್ಕ್‌ ಧರಿಸಬೇಕು, ದೈಹಿಕ ಅಂತರ ಪಾಲಿಸಬೇಕು ಎಂಬ ಸಾಮಾನ್ಯ ಸಂಗತಿಯತ್ತಲೂ ಇವರು ಗಮನ ಕೊಡದಿದ್ದರೆ, ನಗರದ ಅಭಿವೃದ್ಧಿ ಇವರಿಂದ ಸಾಧ್ಯವಾಗುತ್ತದೆಯೇ?


-ಮಂಜುನಾಥ ರೆಡ್ಡಿ, ಚಿಕ್ಕಬಳ್ಳಾಪುರ

Tags: chikkaballapurcovid19mask
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
13ರಂದು ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಜನಸೇವಕ ಸಮಾವೇಶ; ಇಬ್ಬರು ಡಿಸಿಎಂಗಳು, ಇಬ್ಬರು ಸಚಿವರ ಆಗಮನ, ಜಿಲ್ಲಾ ಘಟಕದಿಂದ ಪೂರ್ವಸಿದ್ಧತೆ

13ರಂದು ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಜನಸೇವಕ ಸಮಾವೇಶ; ಇಬ್ಬರು ಡಿಸಿಎಂಗಳು, ಇಬ್ಬರು ಸಚಿವರ ಆಗಮನ, ಜಿಲ್ಲಾ ಘಟಕದಿಂದ ಪೂರ್ವಸಿದ್ಧತೆ

Leave a Reply Cancel reply

Your email address will not be published. Required fields are marked *

Recommended

ತ್ಯಾಜ್ಯ ವಸ್ತುಗಳಲ್ಲಿ ಅರಳಿದ ಕಲೆ

ತ್ಯಾಜ್ಯ ವಸ್ತುಗಳಲ್ಲಿ ಅರಳಿದ ಕಲೆ

5 years ago
ಶೇ.10ರಷ್ಟು ವೇತನ ಪರಿಷ್ಕರಣೆಗೆ ಸಿದ್ದ; ಆದರೆ, 6ನೇ ವೇತನ ಆಯೋಗದ ಸಂಬಳ ಮಾತ್ರ ಸಾಧ್ಯವಿಲ್ಲ ಎಂದುಬಿಟ್ಟ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್

ಶೇ.10ರಷ್ಟು ವೇತನ ಪರಿಷ್ಕರಣೆಗೆ ಸಿದ್ದ; ಆದರೆ, 6ನೇ ವೇತನ ಆಯೋಗದ ಸಂಬಳ ಮಾತ್ರ ಸಾಧ್ಯವಿಲ್ಲ ಎಂದುಬಿಟ್ಟ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ