• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 9 ಕೇಂದ್ರಗಳಲ್ಲಿ 853 ಜನರಿಗೆ ಕೋವಿಡ್‌ ವ್ಯಾಕ್ಸಿನೇಷನ್; ಲೋಪದೋಷ ಇರಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ ಜಿಲ್ಲಾಧಿಕಾರಿ

cknewsnow desk by cknewsnow desk
January 15, 2021
in CHIKKABALLAPUR, COVID-19
Reading Time: 1 min read
0
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 9 ಕೇಂದ್ರಗಳಲ್ಲಿ 853 ಜನರಿಗೆ ಕೋವಿಡ್‌ ವ್ಯಾಕ್ಸಿನೇಷನ್; ಲೋಪದೋಷ ಇರಬಾರದು ಎಂದು  ಕಟ್ಟುನಿಟ್ಟಿನ ಸೂಚನೆ ನೀಡಿದ ಜಿಲ್ಲಾಧಿಕಾರಿ
922
VIEWS
FacebookTwitterWhatsuplinkedinEmail
  • ಮೇಲಿನ ಚಿತ್ರ: ಜಿಲ್ಲಾಧಿಕಾರಿ ಆರ್.ಲತಾ ಅವರು ಶುಕ್ರವಾರ ಚಿಕ್ಕಬಳ್ಳಾಪುರದಲ್ಲಿ ಕೋವಿಡ್‌ ಲಸಿಕೆ ವಿತರಣೆ ಕುರಿತ ಅಂತಿಮ ಹಂತದ ಸಭೆ ನಡೆಸಿದರು.

ಚಿಕ್ಕಬಳ್ಳಾಪುರ: ನಗರದ ಸರಕಾರಿ ಜಿಲ್ಲಾ ಆಸ್ಪತ್ರೆ ಸೇರಿದಂತೆ ಜಿಲ್ಲೆಯಾದ್ಯಂತ 9 ಕೇಂದ್ರಗಳಲ್ಲಿ ಶನಿವಾರ ಮೊದಲ ಹಂತದ ಕೋವಿಡ್-19 ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು, ಜಿಲ್ಲೆಯಲ್ಲಿ ಯಾವುದೇ ಲೋಪ ದೋಷಗಳಿಲ್ಲದೆ ಲಸಿಕೆ ನೀಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಸಂಬಂಧಿತ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಕೋವಿಡ್-19 ವ್ಯಾಕ್ಸಿನೇಷನ್ ಉದ್ಘಾಟನಾ ಕಾರ್ಯಕ್ರಮ ಅಂಗವಾಗಿ ಶುಕ್ರವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್ ಅವರೊಂದಿಗೆ ವಿಡಿಯೋ ಸಂವಾದ ನಡೆಸಿದ ಬಳಿಕ ಅಧಿಕಾರಿಗಳೊಂದಿಗೆ ನಡೆಸಿದ ಪೂರ್ವಭಾವಿ ಸಭೆ ನಡೆಇಸಿದ ಅವರು, ಚಿಕ್ಕಬಳ್ಳಾಪುರ ನಗರದ ಸರಕಾರಿ ಜಿಲ್ಲಾ ಆಸ್ಪತ್ರೆ, ಸಿಎಸ್‌ಐ ಆಸ್ಪತ್ರೆ, ಚಿಕ್ಕಬಳ್ಳಾಪುರದ ಯುಪಿಎಚ್‌ಸಿ, ಪೆರೇಸಂದ್ರದ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ, ಗುಡಿಬಂಡೆ, ಶಿಡ್ಲಘಟ್ಟ, ಚಿಂತಾಮಣಿ, ಬಾಗೇಪಲ್ಲಿ ತಾಲೂಕು ಆಸ್ಪತ್ರೆಗಳು, ಗೌರಿಬಿದನೂರಿನ ಎಂಸಿಎಚ್‌ ಕೇಂದ್ರ ಸೇರಿ ಜಿಲ್ಲೆಯ 9 ಕೇಂದ್ರಗಳಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಲಸಿಕೆ ನೀಡಲು ಕ್ರಮಕೈಗೊಳ್ಳಲಾಗಿದೆ. ಈಗಾಗಲೇ ನಿಗದಿಪಡಿಸಿದ ಕೊರೊನಾ ಯೋಧರಿಗೆ ಮಾತ್ರವೇ ಮೊದಲ ಹಂತದ ಲಸಿಕೆಯನ್ನು ಹಾಕಬೇಕು. ಈ ಸಂಬಂಧ ಜಿಲ್ಲೆಯಲ್ಲಿ ಡ್ರೈರನ್ ಕಾರ್ಯಕ್ರಮದ ಮೂಲಕ ಲಸಿಕಾ ಸಿಬ್ಬಂದಿಗೆ ಈಗಾಗಲೇ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು.

ಮೊದಲ ಹಂತದಲ್ಲಿ ಜಿಲ್ಲೆಯಲ್ಲಿ ಒಟ್ಟು 853 ಮಂದಿ ಜನರಿಗೆ ಲಸಿಕೆ ಹಾಕಲಾಗುತ್ತದೆ. ಯಾರಿಗೆ ಲಸಿಕೆ ಹಾಕಲಾಗುತ್ತದೆ ಎಂಬುದನ್ನು ಲಸಿಕೆ ಹಾಕುವ ಒಂದು ದಿನದ ಮುಂಚೆಯೇ ಮೊಬೈಲ್‌ಗೆ ಮೇಸೇಜ್ ಮೂಲಕ ಮಾಹಿತಿ ನೀಡಲಾಗುತ್ತದೆ. ಅಂತಹವರು ಮಾತ್ರ ಆಧಾರ್ ಕಾರ್ಡ್ ಜತೆಗೆ ಯಾವುದಾದರೂ ಒಂದು ಗುರುತಿನ ಚೀಟಿಯೊಂದಿಗೆ ಕೋವಿಡ್ ಲಸಿಕಾ ಕೇಂದ್ರಕ್ಕೆ ಬರುವಂತೆ ನೋಡಿಕೊಳ್ಳಬೇಕು. ಲಸಿಕಾ ಕೇಂದ್ರದಲ್ಲಿ ಸ್ವಚ್ಛತೆ, ಕುಡಿಯುವ ನೀರು, ಸ್ಯಾನಿಟೈಜ್, ಚೇರು, ಟೇಬಲ್ ವ್ಯವಸ್ಥೆ ಇರಬೇಕು ಎಂದು ಸೂಚಿಸಿದರು.

ಲಸಿಕೆ ಹಾಕುವ ಸಂದರ್ಭದಲ್ಲಿ ಅಗತ್ಯ ತುರ್ತು ಸೇವೆಗಾಗಿ ಪ್ರತಿ ಲಸಿಕಾ ಕೇಂದ್ರಕ್ಕೆ ಒಂದರಂತೆ ಆಂಬ್ಯುಲೆನ್ಸ್ ವಾಹನದ ವ್ಯವಸ್ಥೆ ಕಡ್ಡಾಯವಾಗಿ ಇರಬೇಕು. 9 ಕೇಂದ್ರಗಳ ಪ್ರತಿ ಕ್ಷಣದ ಮಾಹಿತಿಯನ್ನು ಆಯಾ ಕೇಂದ್ರಗಳ ನೋಡಲ್ ಅಧಿಕಾರಿಗಳು ಜಿಲ್ಲಾ ಕಂಟ್ರೋಲ್ ರೂಂಗೆ ನೀಡಬೇಕು.

ಲಸಿಕೆ ಸರಬರಾಜು ವಾಹನಕ್ಕೆ ಚಾಲನೆ, ಪೊಲೀಸ್ ಭದ್ರತೆ

ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆ (ಲಸಿಕಾ ಕೇಂದ್ರ)ಗಳಿಗೆ ಕೋವಿಡ್-19 ಲಸಿಕೆ ಸರಬರಾಜು ಮಾಡುವ ವಾಹನಗಳಿಗೆ ಮಾನ್ಯ ಜಿಲ್ಲಾಧಿಕಾರಿ ಆರ್.ಲತಾ ಅವರು ಜಿಲ್ಲಾಡಳಿತ ಭವನದ ಆವರಣದಲ್ಲಿ ಶುಕ್ರವಾರ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶುಕ್ರವಾರದಿಂದ ಕೋವಿಡ್-19 ಲಸಿಕೆ ಹಾಕಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಟ್ಟು 9 ಕೇಂದ್ರಗಳಲ್ಲಿ ವ್ಯಾಕ್ಸಿನ್ ನೀಡಲಾಗುತ್ತಿದ್ದು, ಮೊದಲ ಹಂತದಲ್ಲಿ ಜಿಲ್ಲೆಯಾದ್ಯಂತ ಒಟ್ಟು 853 ಆರೋಗ್ಯ ಇಲಾಖೆ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದೆ. ಬೆಳಗ್ಗೆ 10.30ಕ್ಕೆ ಮೊದಲಿಗೆ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಚಾಲನೆ ನೀಡಿದ ಬಳಿಕ, ಜಿಲ್ಲೆಯಲ್ಲಿ ಲಸಿಕೆ ವಿತರಣೆಗೆ ಚಾಲನೆ ದೊರೆಯಲಿದೆ. ಜಿಲ್ಲೆಗೆ ಈಗಾಗಲೇ 5,000 ಮಂದಿಗೆ ಆಗುವಂತೆ ಲಸಿಕೆ ಸರಬರಾಜು ಆಗಿದೆ. ಶನಿವಾರಕ್ಕೆ ಸಾಕಾಗುವಷ್ಟು ಲಸಿಕೆಯನ್ನು ಪ್ರಸ್ತುತ ಎಲ್ಲಾ ಲಸಿಕಾ ಕೇಂದ್ರಗಳಿಗೆ ರವಾನಿಸಲಾಗಿದೆ. ಲಸಿಕೆ ದಾಸ್ತಾನು ಮಾಡುವ ಎಲ್ಲಾ ಕೇಂದ್ರಗಳಿಗೂ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಯಾವುದೇ ತೊಂದರೆ, ಸಮಸ್ಯೆ ಆಗದಂತೆ ಸುಗಮವಾಗಿ ಹಾಗೂ ಯಶಸ್ವಿಯಾಗಿ ಮಾಡಲು ಜಿಲ್ಲಾಡಳಿತ ಎಲ್ಲಾ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಜಿ.ಕೆ.ಮಿಥುನ್‌ಕುಮಾರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾದ ನೋಮೇಶ್‌ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಇಂದಿರಾ ಆರ್.ಕಬಾಡೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಮಾಧ್ಯಮಗಳಿಗೆ ನೋ ಎಂಟ್ರಿ

ಕೋವಿಡ್ ವ್ಯಾಕ್ಸಿನೇಷನ್‌ ಕೇಂದ್ರದ ಒಳಗೆ ಮಾಧ್ಯಮ ಪ್ರತಿನಿಧಿಗಳ ಪ್ರವೇಶಕ್ಕೆ ಅವಕಾಶವಿರುವುದಿಲ್ಲ. ಮಾಧ್ಯಮ ಪ್ರತಿನಿಧಿಗಳಿಗೆ ಕ್ಷಣ ಕ್ಷಣದ ಮಾಹಿತಿ ಜೊತೆಗೆ ವೀಡಿಯೋ ಮತ್ತು ಫೋಟೋಗಳನ್ನು ಇಲಾಖೆ ವತಿಯಿಂದ ಸಕಾಲಕ್ಕೆ ಒದಗಿಸಲಾಗುವುದು. ವ್ಯಾಕ್ಸಿನೇಷನ್‌ ವರದಿಗಾಗಿ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಮಾಧ್ಯಮ ಕೇಂದ್ರವನ್ನು ತೆರೆಯಲಾಗಿದ್ದು, ಇಲ್ಲಿ ಅಗತ್ಯ ಮಾಹಿತಿ ಪಡೆಯಬಹುದು ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಲಾಗಿದೆ.

Tags: chikkaballapurcovid19covid19 vaccination
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

by cknewsnow desk
April 14, 2024
0

ಎನ್'ಡಿಎ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆಲ್ಲಿಸುವುದೇ ನಮ್ಮ ಗುರಿ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

by cknewsnow desk
April 10, 2024
0

ವಿಜ್ಞಾನ ವಿಭಾಗದಲ್ಲಿ ಶೇ.79 ಫಲಿತಾಂಶ

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

by cknewsnow desk
April 9, 2024
0

ರಣಬಿಸಿಲನ್ನು ತಡೆಯುವ ಶಕ್ತಿ ಕೇವಲ ಮರಗಿಡಗಳಿಗೆ ಮಾತ್ರ ಇದೆ

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

by cknewsnow desk
March 6, 2024
0

ಸ್ಥಳಕ್ಕೆ ದಿಢೀರ್ ಭೇಟಿ ನೀಡಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

Next Post
ಕೊಲಾರ ಜಿಲ್ಲೆಯಲ್ಲಿ ಆರು ಕಡೆ ಕೋವಿಡ್‌ ಲಸಿಕೆ ವಿತರಣೆ; ಮೊದಲ ಹಂತದಲ್ಲಿ 700 ಜನ ಕೋವಿಡ್‌ ಯೋಧರಿಗೆ ಮಾತ್ರ ವ್ಯಾಕ್ಸಿನೇಶನ್‌ ಎಂದ ಜಿಲ್ಲಾಧಿಕಾರಿ

ಕೊಲಾರ ಜಿಲ್ಲೆಯಲ್ಲಿ ಆರು ಕಡೆ ಕೋವಿಡ್‌ ಲಸಿಕೆ ವಿತರಣೆ; ಮೊದಲ ಹಂತದಲ್ಲಿ 700 ಜನ ಕೋವಿಡ್‌ ಯೋಧರಿಗೆ ಮಾತ್ರ ವ್ಯಾಕ್ಸಿನೇಶನ್‌ ಎಂದ ಜಿಲ್ಲಾಧಿಕಾರಿ

Leave a Reply Cancel reply

Your email address will not be published. Required fields are marked *

Recommended

ಬಿಲ್ಡರುಗಳಿಂದ ₹2,000 ಕೋಟಿ ಸುಲಿಗೆ;‌ ಕಾಂಗ್ರೆಸ್‌ ಸರಕಾರದ ಟಾರ್ಗೆಟ್

ಬಿಲ್ಡರುಗಳಿಂದ ₹2,000 ಕೋಟಿ ಸುಲಿಗೆ;‌ ಕಾಂಗ್ರೆಸ್‌ ಸರಕಾರದ ಟಾರ್ಗೆಟ್

2 years ago
ನಾನೇ ಒರಿಜಿನಲ್‌ ಎಂದಿದ್ದ ಸಿ.ಎಂ.ಇಬ್ರಾಹಿಂ ಅವರಿಗೆ ಅಡ್ರೆಸ್‌ ಇಲ್ಲದಂತೆ ಮಾಡಿದ ಜೆಡಿಎಸ್!

ನಾನೇ ಒರಿಜಿನಲ್‌ ಎಂದಿದ್ದ ಸಿ.ಎಂ.ಇಬ್ರಾಹಿಂ ಅವರಿಗೆ ಅಡ್ರೆಸ್‌ ಇಲ್ಲದಂತೆ ಮಾಡಿದ ಜೆಡಿಎಸ್!

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ