• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಕರೆಸ್ಪಾಂಡೆನ್ಸ್‌ಗೆ ಮೈಸೂರು ಮಾತ್ರ, ಇನ್ನು ಮುಂದೆ ದೂರಶಿಕ್ಷಣಕ್ಕೆ ಡಿಮಾಂಡ್‌ ಜಾಸ್ತಿ ಎಂದ ಡಿಸಿಎಂ; ಕರ್ನಾಟಕ ಮುಕ್ತ ವಿಶ್ವವಿದ್ಯಾಲಯಕ್ಕೆ ಬಿಗ್ ಟಾರ್ಗೆಟ್‌ ಫಿಕ್ಸ್‌

cknewsnow desk by cknewsnow desk
January 18, 2021
in NEWS IN USE
Reading Time: 1 min read
0
ಕರೆಸ್ಪಾಂಡೆನ್ಸ್‌ಗೆ ಮೈಸೂರು ಮಾತ್ರ, ಇನ್ನು ಮುಂದೆ ದೂರಶಿಕ್ಷಣಕ್ಕೆ ಡಿಮಾಂಡ್‌ ಜಾಸ್ತಿ ಎಂದ ಡಿಸಿಎಂ; ಕರ್ನಾಟಕ ಮುಕ್ತ ವಿಶ್ವವಿದ್ಯಾಲಯಕ್ಕೆ ಬಿಗ್ ಟಾರ್ಗೆಟ್‌ ಫಿಕ್ಸ್‌
912
VIEWS
FacebookTwitterWhatsuplinkedinEmail

ಎಲ್ಲೆ ಮೀರಿ ಬೆಳೆಯಲಿದೆ ದೂರಶಿಕ್ಷಣ; ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ನಂತರ ಈ ಶಿಕ್ಷಣ ಇನ್ನಷ್ಟು ಜನಪ್ರಿಯವಾಗಲಿದೆ ಎಂದ ಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು/ಮೈಸೂರು: ಶೈಕ್ಷಣಿಕವಾಗಿ ಇಡೀ ದೇಶದಲ್ಲಿಯೇ ಮುಂಚೂಣಿಯಲ್ಲಿರುವ ಕರ್ನಾಟಕವು ಇದೀಗ ದೂರ ಶಿಕ್ಷಣದಲ್ಲೂ ಆಮೂಲಾಗ್ರ ಬದಲಾವಣೆಗಳನ್ನು ತಂದಿದ್ದು, ಇನ್ನು ಮುಂದೆ ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಮೂಲಕವೇ ದೂರ ಶಿಕ್ಷಣವನ್ನು ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ವಿಶ್ವವಿದ್ಯಾಲಯದ ಭೌತಿಕ ತರಗತಿಗಳ ಆರಂಭಕ್ಕೆ ವರ್ಚಯಲ್‌ ವೇದಿಕೆ ಮೂಲಕ ಬೆಂಗಳೂರಿನಿಂದಲೇ ಚಾಲನೆ ನೀಡಿ ಮಾತನಾಡಿದ ಡಿಸಿಎಂ, ಮುಂದಿನ ದಿನಗಳಲ್ಲಿ ಆನ್‌ಲೈನ್‌ ಹಾಗೂ ದೂರಶಿಕ್ಷಣ ವ್ಯವಸ್ಥೆಗೆ ಹೆಚ್ಚೆಚ್ಚು ಬೇಡಿಕೆ ಬರಲಿದೆ. ಬದಲಾವಣೆ ಹಾಗೂ ವಿದ್ಯಾರ್ಥಿಗಳ ಅಪೇಕ್ಷೆ ಮೇರೆಗೆ ಶಿಕ್ಷಣ ನೀಡುವುದು ಸರಕಾರದ ಕರ್ತವ್ಯವೂ ಹೌದು. ಈ ಹಿನ್ನೆಲೆಯಲ್ಲಿ ಮೈಸೂರು ಮುಕ್ತ ವಿಶ್ವವಿದ್ಯಾಲಯಕ್ಕೆ ಇನ್ನಷ್ಟು ಶಕ್ತಿ ತುಂಬಲಾಗುವುದು. ತಾಂತ್ರಿಕವಾಗಿ ವಿವಿಯನ್ನು ಮೇಲ್ದರ್ಜೆಗೇರಿಸಲಾಗುವುದು ಎಂದರು.

ಈಗಾಗಲೇ ದೂರಶಿಕ್ಷಣವನ್ನು ಮೈಸೂರು ಮುಕ್ತ ವಿಶ್ವವಿದ್ಯಾಲಯ ಮಾತ್ರ ನೀಡಬೇಕು ಎಂಬ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಈ ಶಿಕ್ಷಣ ಕಾಟಾಚಾರಕ್ಕಲ್ಲ, ಗಂಭೀರವಾಗಿ ಕಲಿಯಬೇಕು. ಯಾವ ಉದ್ದೇಶಕ್ಕಾಗಿ ಈ ವಿವಿ ಸ್ಥಾಪನೆಯಾಗಿತ್ತೋ ಅದೇ ದಿಕ್ಕಿನಲ್ಲಿ ಮುನ್ನಡೆಸಲಾಗುವುದು. ಅದಕ್ಕಾಗಿ ಸರಕಾರ ಎಲ್ಲ ಸಹಕಾರ ನೀಡಲಿದೆ ಎಂದರು ಉಪ ಮುಖ್ಯಮಂತ್ರಿ.

ಹಾಜರಾತಿ ಕಡ್ಡಾಯ

ಕೋವಿಡ್‌ ಬಂದ ಮೇಲೆ ಸಾಂಪ್ರದಾಯಿಕ ಶಿಕ್ಷಣ ಪದ್ಧತಿಯಲ್ಲಿ ಅನೇಕ ಬದಲಾವಣೆಗಳು ಆಗಿವೆ. ತಂತ್ರಜ್ಞಾನವನ್ನು ಬಳಸಿಕೊಂಡು ಎಲ್ಲಿದ್ದರೂ ಕಲಿಯುವ ವ್ಯವಸ್ಥೆ (ಲರ್ನ್‌ ಫ್ರಂ ಎನಿವೇರ್) ಜನಪ್ರಿಯವಾಗುತ್ತಿದೆ. ಅದಕ್ಕೆ ಪೂರಕವಾಗಿ ಈಗಾಗಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತರಗತಿಗಳನ್ನು ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಆನ್‌ಲೈನ್‌ ಕ್ಲಾಸುಗಳ ಮೂಲಕವಾದರೂ ಕಲಿಯಬಹುದು ಅಥವಾ ಆಪ್‌ಲೈನ್‌ ತರಗತಿಗಳ ಮೂಲಕವಾದರೂ ಕಲಿಯಬಹುದು. ಯಾವುದೇ ಆದರೂ ವಿದ್ಯಾರ್ಥಿಯ ಹಾಜರಾತಿ ಮಾತ್ರ ಕಡ್ಡಾಯ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಬೇಕು

17,244 ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡಲು ಮುಕ್ತ ವಿವಿಯಲ್ಲಿ ಪ್ರವೇಶಾತಿ ಪಡೆದಿದ್ದಾರೆ. ಇದು ನಿಜಕ್ಕೂ ಒಳ್ಳೆಯ ಪ್ರಮಾಣ, ಶ್ಲಾಘನೀಯ ಕೂಡ. ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬಂದ ಮೇಲೆ ದೂರಶಿಕ್ಷಣಕ್ಕೆ ಯಾವುದೇ ರೀತಿಯ ಗಡಿಗಳು ಇರುವುದಿಲ್ಲ. ಈ ವಿವಿ ರಾಷ್ಟ್ರಮಟ್ಟದಲ್ಲೂ ಬೆಳೆಯಲು ಅವಕಾಶವಿದೆ, ವ್ಯಾಪ್ತಿಯೂ ವಿಸ್ತರಿಸಲಿದೆ. 2022ಕ್ಕೆ ಸಾಲಿನಿಂದ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆ 50,000 ಹಾಗೂ 2023ನೇ ಸಾಲಿಗೆ 1 ಲಕ್ಷ ದಾಟಬೇಕು. ಪ್ರತಿ ವರ್ಷ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಲೇ ಇರಬೇಕು. ಈ ನಿಟ್ಟಿನಲ್ಲಿ ವಿವಿ ಎಲ್ಲ ಉಪಕ್ರಮಗಳನ್ನು ಕೈಗೊಳ್ಳಬೇಕು ಎಂದು ಕುಲಪತಿ ಡಾ.ವಿದ್ಯಾಶಂಕರ್ ಅವರಿಗೆ ಡಿಸಿಎಂ ಸೂಚನೆ ನೀಡಿದರು.

ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ವ್ಯಾಪಕವಾದ ಪ್ರಚಾರವನ್ನು ಕೈಗೊಳ್ಳಿ. ಸಾಧ್ಯವಾದರೆ ಪ್ರತಿಷ್ಠಿತ ಅಥವಾ ಜನಪ್ರಿಯ ಸಿಲೆಬ್ರಿಟಿಯೊಬ್ಬರಿಂದ ದೃಶ್ಯ ರೂಪದ ಜಾಹೀರಾತನ್ನು ಸಿದ್ಧಪಡಿಸಿ ಪ್ರಚಾರ ಮಾಡಿ. ವಿಶೇಷ ಅಭಿಯಾನವನ್ನು ಮಾಡಿ. ಆ ಮೂಲಕ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯವೂ ಒಳ್ಳೆಯ ಶೈಕ್ಷಣಿಕ ಬ್ರ್ಯಾಂಡ್‌ ಆಗಿ ಹೊರಹೊಮ್ಮಲಿ. ಸಾಮಾಜಿಕ ಮಾಧ್ಯಮಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಿ ಎಂದು ಡಾ.ಅಶ್ವತ್ಥನಾರಾಯಣ ಸಲಹೆ ಮಾಡಿದರು.

ಅಷ್ಟೇ ಅಲ್ಲದೆ, ಇತರೆ ವಿವಿಗಳು, ಜಿಟಿಟಿಸಿ ಮುಂತಾದ ಶೈಕ್ಷಣಿಕ ಸಂಸ್ಥೆಗಳ ಜತೆ ಒಡಂಬಡಿಕೆ ಮಾಡಿಕೊಳ್ಳಿ ಎಂದೂ ಡಿಸಿಎಂ ಹೇಳಿದರು.

ವಿವಿ ಕುಲಪತಿ ಡಾ.ವಿದ್ಯಾಶಂಕರ್‌, ಕುಲಸಚಿವ ಡಾ.ಲಿಂಗರಾಜ ಗಾಂಧಿ, ಮೌಲ್ಯಮಾಪನ ಕುಲಸಚಿವ ಅಶೋಕ ಕಾಂಬ್ಳೆ ಸೇರಿದಂತೆ ವಿವಿಯ ಉನ್ನತ ಅಧಿಕಾರಿಗಳು ಮೈಸೂರಿನಿಂದಲೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Tags: distance educationkarnataka state open university ksou
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಮಾರ್ಚ್‌ 1ರಿಂದ ದ್ವಿತೀಯ ಪಿಯು, 20ರಿಂದ sslc ಪರೀಕ್ಷೆ

by cknewsnow desk
December 3, 2024
0

ಎಲ್ಲ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

by cknewsnow desk
August 12, 2024
0

1,000 ಗ್ರಾಮ ಲೆಕ್ಕಿಗರು, 750 ಸರ್ವೇಯರ‍್ಸ್, 36 ಎಡಿಎಲ್‌ಆರ್‌ಗಳ ನೇಮಕ

kptclನಲ್ಲಿ 902 ಹುದ್ದೆಗೆ ನೇಮಕ

kptclನಲ್ಲಿ 902 ಹುದ್ದೆಗೆ ನೇಮಕ

by cknewsnow desk
May 24, 2024
0

ನೇಮಕಾತಿ ಆದೇಶ ನೀಡಿದ ಸರಕಾರ

ಕೆಸಿಇಟಿ-24 ಪರೀಕ್ಷೆ: ಜನವರಿ 10ರಿಂದ online ಅರ್ಜಿ ಸಲ್ಲಿಕೆಗೆ ಅವಕಾಶ

CET EXAM; ಔಟ್ ಆಫ್ ಸಿಲೆಬಸ್ ಪ್ರಶ್ನೆ ಕೈಬಿಟ್ಟು ಮೌಲ್ಯಮಾಪನ; ವಿದ್ಯಾರ್ಥಿಗಳಿಗೆ ನಿರಾಳ

by cknewsnow desk
April 28, 2024
0

ತಜ್ಞರ ಶಿಫಾರಸು ಒಪ್ಪಿಕೊಂಡ ರಾಜ್ಯ ಸರಕಾರ

ದ್ವಿತೀಯ ಪಿಯುಸಿ ಫಲಿತಾಂಶ: ಧೂಳೆಬ್ಬಿಸಿದ ಬಾಲಕಿಯರು

ದ್ವಿತೀಯ ಪಿಯುಸಿ ಫಲಿತಾಂಶ: ಧೂಳೆಬ್ಬಿಸಿದ ಬಾಲಕಿಯರು

by cknewsnow desk
April 11, 2024
0

ವಿಜ್ಞಾನದಲ್ಲಿ ವಿದ್ಯಾಲಕ್ಷ್ಮಿ ಪ್ರಥಮ

ಬೆಳಗ್ಗೆ 10.15 ಗಂಟೆಗೆ ದ್ವಿತೀಯ PUC ಪರೀಕ್ಷೆ; ಶುಭವಾಗಲಿ ವಿದ್ಯಾರ್ಥಿಗಳೇ

ನಾಳೆ ಬೆಳಗ್ಗೆ 10 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ

by cknewsnow desk
April 9, 2024
0

11 ಗಂಟೆ ನಂತರ ಅಂತರ್ಜಾಲದಲ್ಲಿ ಫಲಿತಾಂಶ ನೋಡಬಹುದು

Next Post
ಜಗನ್ನಾಥನ ನೆಲದಲ್ಲಿ ಶಿಕ್ಷಣಕಾಶಿ ಕಟ್ಟಿದರು, ಕಂದಮಲ್‌ ಕಲ್ಯಾಣಕ್ಕೆ ಸಂಸತ್ತಿಗೆ ಹೋದರು, ‌ಅಳಿವಿನ ಅಂಚಿನಲ್ಲಿದ್ದ ನೇಕಾರಿಕೆಗೆ ಶಕ್ತಿ ತುಂಬಲು ದುರ್ಬಲರ ಚಾಕರಿಗೂ ನಿಂತರು!!

ಜಗನ್ನಾಥನ ನೆಲದಲ್ಲಿ ಶಿಕ್ಷಣಕಾಶಿ ಕಟ್ಟಿದರು, ಕಂದಮಲ್‌ ಕಲ್ಯಾಣಕ್ಕೆ ಸಂಸತ್ತಿಗೆ ಹೋದರು, ‌ಅಳಿವಿನ ಅಂಚಿನಲ್ಲಿದ್ದ ನೇಕಾರಿಕೆಗೆ ಶಕ್ತಿ ತುಂಬಲು ದುರ್ಬಲರ ಚಾಕರಿಗೂ ನಿಂತರು!!

Leave a Reply Cancel reply

Your email address will not be published. Required fields are marked *

Recommended

ಹೆತ್ತ ಮಗುವನ್ನೇ ಕೊಂದ ಖಾಸಗಿ ಕಂಪನಿ ಸಿಇಒ!

ಹೆತ್ತ ಮಗುವನ್ನೇ ಕೊಂದ ಖಾಸಗಿ ಕಂಪನಿ ಸಿಇಒ!

1 year ago
ಬಾಗೇಪಲ್ಲಿಯಲ್ಲಿ ಎಚ್ಐವಿ ಸೋಂಕಿತರಿಗೆ ದಿನಸಿ ಕಿಟ್ ವಿತರಣೆ

ಬಾಗೇಪಲ್ಲಿಯಲ್ಲಿ ಎಚ್ಐವಿ ಸೋಂಕಿತರಿಗೆ ದಿನಸಿ ಕಿಟ್ ವಿತರಣೆ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ