• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

Budget 2021: ಉದ್ಯೋಗ ರಹಿತ ಆರ್ಥಿಕ ವ್ಯವಸ್ಥೆ ಮತ್ತು ಸರಕು ರಹಿತ ಕೈಗಾರಿಕಾ ವ್ಯವಸ್ಥೆಗಳು ಯಾವುದೇ ದೇಶವನ್ನು ಹೆಚ್ಚು ಕಾಲ ಸುಭದ್ರವಾಗಿ ಉಳಿಸುವುದಿಲ್ಲ: ಜಿ.ವಿ.ಶ್ರೀರಾಮರೆಡ್ಡಿ

cknewsnow desk by cknewsnow desk
February 4, 2021
in CHIKKABALLAPUR, STATE
Reading Time: 2 mins read
0
ಕ್ಷಮಿಸಿ! ಕಾಮ್ರೇಡ್ ಜಿ.ವಿ. ಶ್ರೀರಾಮ ರೆಡ್ಡಿ ಅವರನ್ನು ಪಕ್ಷ ಹೊರಹಾಕಿದೆ!!
917
VIEWS
FacebookTwitterWhatsuplinkedinEmail

ಬಾಗೇಪಲ್ಲಿ: ಉದ್ಯೋಗ ರಹಿತ ಆರ್ಥಿಕ ವ್ಯವಸ್ಥೆ ಹಾಗೂ ಸರಕು ರಹಿತ ಕೈಗಾರಿಕಾ ವ್ಯವಸ್ಥೆಗಳೂ ಬಾಳೆಗಿಡ ಇದ್ದಂತೆ. ಅದು ಒಂದು ದೇಶವನ್ನು ಹೆಚ್ಚು ಕಾಲ ಭದ್ರವಾಗಿ ಉಳಿಸುವುದಿಲ್ಲ. ಈ ಬಾರಿಯ ಬಜೆಟ್‌ ಪೂರ್ವದಲ್ಲಿ ಕೇಂದ್ರ ಸರ್ಕಾರದ ಬಗ್ಗೆ ಮೂಡಿದ್ದ ಸಾಮಾನ್ಯ ಜನರ ಭರವಸೆಗಳು ನೀರಿನ ಮೇಲಿನ ಗುಳ್ಳೆಯಂತೆ ಒಡೆದು ಹೋಗಿವೆ ಎಂದು ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ವಿಶ್ಲೇಷಿಸಿದರು.

ಗುರುವಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಹಾಗೂ ಐಕ್ಯುಎಸಿ ಜಂಟಿಯಾಗಿ ಹಮ್ಮಿಕೊಂಡಿದ್ದ ‘ಭಾತರದ ಬಜೆಟ್ 2021-22 ಒಂದು ಅವಲೋಕನ’ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಅವರು, ನಿರೀಕ್ಷೆಗಳೆ ಎಲ್ಲವೂ ಹುಸಿಯಾಗಿ ದೇಶದ ಸಾಮಾನ್ಯ ನಾಗರೀಕ ಭ್ರಮನಿರಸಗೊಂಡಿದ್ದಾನೆ ಎಂದು ಎಂದರು.

ಕೊರೋನಾದಂತಹ ಅತ್ಯಂತ ಸಂಕಷ್ಟದ ಕಾಲಘಟ್ಟದಲ್ಲಿ ದೇಶದಲ್ಲಿ ಲಕ್ಷಾಂತರ ಜನರು, ಕಾರ್ಮಿಕರು, ದುಡಿಯುವ ಕೈಗಳು ಉದ್ಯೋಗವನ್ನು ಕಳೆದುಕೊಂಡರು. ಅವರಿಗೆ ಪರ್ಯಾಯವಾಗಿ ಉದ್ಯೋಗಗಳನ್ನು ಸೃಷ್ಟಿ ಮಾಡಿ ಬದುಕನ್ನು ರೂಪಿಸಿಕೊಳ್ಳುವ ಅವಕಾಶವನ್ನು ಕೇಂದ್ರ ಸರ್ಕಾರ ಮಾಡಬೇಕಿತ್ತು. ಈ ಕಾರ್ಯ ಪ್ರಾಮಾಣಿಕವಾಗಿಯೇ ಆಗಬೇಕಿತ್ತು. ಆದರೆ ಅದು ಆಗಲಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಭಾರತದಲ್ಲಿ ಶೇ.32ರಷ್ಟು ನಿರುದ್ಯೋಗ

ಜಾಗತಿಕ ಮಟ್ಟದಲ್ಲಿ ಹೋಲಿಸಿಕೊಂಡರೆ ಈ ದೇಶದಲ್ಲಿ ಶೇ.32ರಷ್ಟು ನಿರುದ್ಯೋಗ ಸಮಸ್ಯೆಯಿದೆ. ವಿದೇಶಿ ಕಂಪನಿಗಳೂ ಭಾರತಕ್ಕೆ ಬಂದು ಕಾರ್ಖಾನೆಗಳನ್ನು ಸ್ಥಾಪನೆ ಮಾಡುತ್ತಿದ್ದಾರೆ. ಆದರೂ ಇಲ್ಲಿ ಉದ್ಯೋಗಗಳು ಸೃಷ್ಟಿಯಾಗುತ್ತಿಲ್ಲ. ಅಂದರೆ ಈ ಕಂಪನಿಗಳು ಸರಕು ರಹಿತ ವ್ಯವಸ್ಥೆಯನ್ನು ಹೊಂದಿವೆ. ಇದರಿಂದ ದೇಶದ ಆರ್ಥಿಕ ವ್ಯವಸ್ಥೆ ಅಭಿವೃದ್ಧಿಯಾದರೂ ಉದ್ಯೋಗ ರಹಿತದ ಕಾರಣದಿಂದ ಈ ಚೇತರಿಕೆಗೆ ಬೆಲೆಯಿಲ್ಲ ಎಂದು ಪ್ರತಿಪಾದಿಸಿದರು.

ದೇಶದ ಸಂಪತ್ತು ಕೆಲವೇ ಕೆಲವರು ಜನರ ಬಳಿ ಸೇರುವುದು ಯಾವುದೇ ದೇಶಕ್ಕೆ ಅಪಾಯಕಾರಿ ಬೆಳವಣಿಗೆ. ಇದರಿಂಧ ಜನಸಾಮಾನ್ಯರ ಆರ್ಥಿಕ ಸ್ಥಿತಿ ಹದಗೆಡುತ್ತದೆ. ಬಹುಸಂಖ್ಯಾತ ಜನರ ಬಳಿ ಹಣಕಾಸಿನ ವ್ಯವಹಾರ ಕ್ಷೀಣವಾಗುತ್ತದೆ. ಇದರಿಂದಾಗಿಯೇ ಒಂದು ದೇಶದ ಕರೆನ್ಸಿ ಮೌಲ್ಯ ಕುಸಿಯತೊಡಗುತ್ತದೆ. ಈ ದೇಶದ ಆರ್ಥಿಕ ವ್ಯವಸ್ಥೆಯೂ ಅದೇ ರೀತಿ ಆಗುತ್ತಿದೆ.

-ಜಿ.ವಿ.ಶ್ರೀರಾಮರೆಡ್ಡಿ

ಜನಸಂಖ್ಯೆಗೆ ತಕ್ಕ ಬಜೆಟ್‌ ಅಲ್ಲ

ದೇಶದಲ್ಲಿ ಇಂದಿನ ಜನಸಂಖ್ಯೆ 130 ರೂ. ಕೋಟಿ ಇದೆ. ಆದರೆ ಅಷ್ಟು ಪ್ರಮಾಣದ ಜನಸಂಖ್ಯೆಯ ಅಭಿವೃದ್ಧಿಗೆ ಅತ್ಯಂತ ಪ್ರಾಮಾಣಿಕವಾಗಿ ಬೇಕಿದ್ದ ಶಿಕ್ಷಣ, ಆರೋಗ್ಯ, ಕೃಷಿ ಹಾಗೂ ಕೈಗಾರಿಕೆಗಳಿಗೆ ಹೆಚ್ಚು ಅನುದಾನ ನೀಡಬೇಕಿತ್ತು. ಈ ರಂಗಗಳು ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಆಧರೆ ಶಿಕ್ಷಣಕ್ಕೆ ಕೇವಲ ಶೇ.2.5, ಆರೋಗ್ಯ ಕ್ಷೇತ್ರಕ್ಕೆ ಶೇ.3.22, ಕೃಷಿ ಹಾಗೂ ಕೈಗಾರಿಕೆಗಳಿಗೆ ಶೇ.4ರಷ್ಟು ನೀಡಿದೆ ಎಂದರು ಶ್ರೀರಾಮರೆಡ್ಡಿ.

ಇಷ್ಟು ಕಡಿಮೆ ಶೇಕಡಾವಾರು ಹಣದಲ್ಲಿ ದೇಶದಲ್ಲಿ ಶಿಕ್ಷಣ, ಆರೋಗ್ಯ, ಕೃಷಿ ಹಾಗೂ ಕೈಗಾರಿಕೆಗಳ ಆಮೂಲಾಗ್ರ ಬದಲಾವಣೆಗಳು ಅಸಾಧ್ಯ. ಯಾವುದೇ ನೂತನ ಯೋಜನೆಗಳು ಪ್ರಾರಂಭ ಮಾಡಲು ಆಗುವುದಿಲ್ಲ. ಬದಲಿಗೆ ಹಿಂದಿನ ವರ್ಷಗಳಲ್ಲಿ ನಡೆದಿರಬಹುದಾದ ಕಾಮಗಾರಿಗಳಿಗೆ ಅಲ್ಪ ಪ್ರಮಾಣದಲ್ಲಿ ಸಾಲ ತೀರಿಸಬಹುದು ಎಂದು ಬಜೆಟ್‌ ಕುರಿತ ನೈಜ ಚಿತ್ರಣವನ್ನು ಬಿಡಿಸಿಟ್ಟರು ಅವರು.

ಶೇ.13ರಷ್ಟು ಮಾತ್ರ ನೀರು ಮಾತ್ರ ಬಳಕೆ

ದೇಶದಲ್ಲಿ ಶೇ.13ರಷ್ಟು ಮಾತ್ರ ನೀರು ಮಾತ್ರ ಸಮರ್ಥವಾಗಿ ಬಳಕೆಯಾಗುತ್ತಿದೆ. ಉಳಿದ ಶೇ.87ರಷ್ಟು ನೀರನ್ನು ವ್ಯರ್ಥವಾಘಿ ಸಮುದ್ರ ಸೇರುತ್ತಿದೆ. ಈ ನೀರನ್ನು ಬಳೆಸಿಕೊಂಡು ಶಾಶ್ವತ ನೀರಾವರಿ ವ್ಯವಸ್ಥೆ ಕಲ್ಪಿಸಿ ಶೇ. 70ರಷ್ಟು ಜನರ ಜೀವನಾಡಿಯಾಗಿರುವ ಕೃಷಿ ರಂಗವನ್ನು ಅಭಿವೃದ್ಧಿ ಮಾಡಲು ಸರ್ಕಾರಗಳಿಗೆ ಮನಸ್ಸಿಲ್ಲ. ರಾಜ್ಯದಲ್ಲಿನ ಶಾಶ್ವತ ನೀರಾವರಿ ವ್ಯವಸ್ಥೆಗಳ ಸ್ಥಿತಿಯೂ ಇದೇ ರೀತಿ ಆಗಿದೆ. ಪಶ್ಚಿಮ ಘಟ್ಟಗಳ ಮಳೆ ನೀರನ್ನು ಗಾರ್ಲೆಂಡ್ ಕೆನಾಲ್‌ಗಳ ಮೂಲಕ ಬಯಲು ಸಿಮೆಯ ಜಿಲ್ಲೆಗಳಿಗೆ ತರುವುದು ಬಿಟ್ಟು, ಎತ್ತಿನಹೊಳೆ ಎಂಬ ಭ್ರಮೆಯನ್ನು ಭಿತ್ತಲಾಗುತ್ತಿದೆ. ಎತ್ತಿನಹೊಳೆಯಲ್ಲಿ ನೀರೂ ಇಲ್ಲ, ಅದು ಇಲ್ಲಿಗೆ ಬರುವುದೂ ಇಲ್ಲ ಎಂದರು ಶ್ರೀರಾಮರೆಡ್ಡಿ.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ.ವೈ.ನಾರಾಯಣ ಮಾತನಾಡಿ; ಕಾಲೇಜಿನಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕೆ ಅನೇಕ ಯೋಜನೆಗಳನ್ನು ರೂಪಿಸಲಾಗಿದೆ. ಗ್ರಾಮೀಣ ಭಾಗದ ಈ ಕಾಲೇಜಿನ ವಿದ್ಯಾರ್ಥಿಗಳು ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಇಂದು ಉನ್ನತ ಸ್ಥಾನಮಾನ ಪಡೆದುಕೊಂಡಿರುವುದು ಹೆಮ್ಮೆಯ ವಿಷಯ ಎಂದರು.

ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕ ಡಾ.ಕೆ.ಎಂ.ನಯಾಜ್ ಅಹ್ಮದ್ ಪ್ರಾಸ್ತಾವಿಕ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಗ್ರಂಥಪಾಲಕ ಡಾ.ಸಿ.ಎಸ್.ವೆಂಕಟರಾಮರೆಡ್ಡಿ, ಪ್ರಾಧ್ಯಾಪಕರಾದ ಡಾ.ಬಿ.ಎನ್.ಪ್ರಭಾಕರ್, ಡಾ.ಸಿ.ಈರಣ್ಣ, ಎಲ್.ಶ್ರೀನಿವಾಸ್, ನಂದನಾ, ಪೂರ್ಣಂ ಕುವರ್, ಮನೋರಂಜನ್, ಅನಿಲ್, ಮೋಹನ್, ಅನಿತಾ ಹಾಜರಿದ್ದರು.

Tags: bagepallibudget 2021collegegv sreerama reddy
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಕ್ರಮ ಕ್ವಾರಿಗಳ ಮೇಲೆ ಮುಲಾಜಿಲ್ಲದೆ ಕ್ರಿಮಿನಲ್‌ ಕೇಸು ದಾಖಲಿಸಲು ಗಣಿ ಇಲಾಖೆಗೆ ಖಡಕ್ಕಾಗಿ  ಸೂಚಿಸಿದ ಜಿಲ್ಲಾಧಿಕಾರಿ ಆರ್.ಲತಾ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಕ್ರಮ ಕ್ವಾರಿಗಳ ಮೇಲೆ ಮುಲಾಜಿಲ್ಲದೆ ಕ್ರಿಮಿನಲ್‌ ಕೇಸು ದಾಖಲಿಸಲು ಗಣಿ ಇಲಾಖೆಗೆ ಖಡಕ್ಕಾಗಿ ಸೂಚಿಸಿದ ಜಿಲ್ಲಾಧಿಕಾರಿ ಆರ್.ಲತಾ

Leave a Reply Cancel reply

Your email address will not be published. Required fields are marked *

Recommended

ಎತ್ತಿನಹೊಳೆ ಭೂಸ್ವಾಧೀನ ಅಡೆತಡೆ ನಿವಾರಣೆ

ಪಾದಯಾತ್ರೆ ಮಾಡಿ ದೇಹದ ತೂಕ ಇಳಿಸಿಕೊಂಡ ಕಾಂಗ್ರೆಸ್‌ ನಾಯಕರು

4 years ago
REPUBLIC OF CHIKKABALLAPURA: ಪತ್ರಕರ್ತರಿಗೂ ಕಿಮ್ಮತ್ತಿಲ್ಲ, ಅಧಿಕಾರಿಗಳದ್ದೇ ಎಲ್ಲ!!

ರಾಜ್ಯದಲ್ಲಿ 29 ಲಕ್ಷ ವ್ಯಾಕ್ಸಿನ್, ಲಸಿಕೆ ನೀಡಿಕೆಯಲ್ಲಿ ನಾವೇ ನಂ.1

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ