• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಜಿಲ್ಲಾ ಉಸ್ತುವಾರಿ ಸಚಿವ ಡಾ.ಸುಧಾಕರ್‌ ಹುಟ್ಟೂರು ಪೆರೇಸಂದ್ರಕ್ಕೆ ಕೂಗಳತೆ ದೂರದ ಬಿಜೆಪಿ ಲೀಡರ್‌ ಮಾಲೀಕತ್ವದ ಕ್ರಷರ್‌ನಲ್ಲಿ ಭಾರೀ ಸ್ಫೋಟ; 6 ಜನ ಬಲಿ, ದೇಹಗಳು ಛಿದ್ರ

cknewsnow desk by cknewsnow desk
February 23, 2021
in CHIKKABALLAPUR, NATION, STATE
Reading Time: 2 mins read
1
ಜಿಲ್ಲಾ ಉಸ್ತುವಾರಿ ಸಚಿವ ಡಾ.ಸುಧಾಕರ್‌ ಹುಟ್ಟೂರು ಪೆರೇಸಂದ್ರಕ್ಕೆ ಕೂಗಳತೆ ದೂರದ ಬಿಜೆಪಿ ಲೀಡರ್‌ ಮಾಲೀಕತ್ವದ ಕ್ರಷರ್‌ನಲ್ಲಿ ಭಾರೀ ಸ್ಫೋಟ; 6 ಜನ ಬಲಿ, ದೇಹಗಳು ಛಿದ್ರ
937
VIEWS
FacebookTwitterWhatsuplinkedinEmail

M krishnappa Chikkaballapur

ಚಿಕ್ಕಬಳ್ಳಾಪುರ: ಶಿವಮೊಗ್ಗ ಜಿಲ್ಲೆಯ ಹುಣಸೋಡಿಯಲ್ಲಿ ಸಂಭವಿಸಿದ್ದ ಮಾರಕ ಜಿಲೆಟಿನ್ ಸ್ಫೋಟದ ಧಾರುಣ ಪ್ರಕರಣ ಮಾಸುವ ಮೊದಲೇ ಅಷ್ಟೇ ಭೀಕರವಾದ ಇನ್ನೊಂದು ಸ್ಫೋಟ ರಾಜ್ಯವನ್ನು ಬೆಚ್ಚಿಬೀಳಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಅವರ ತವರೂರು ಪೆರೇಸಂದ್ರಕ್ಕೆ ಕೂಗಳತೆ ದೂರದಲ್ಲಿ ಈ ದುರಂತ ನಡೆದುಬಿಟ್ಟಿದೆ.

ದುರಂತದಲ್ಲಿ 6 ಮಂದಿ ಸಾವನ್ನಪ್ಪಿದ್ದು, ಇನ್ನಷ್ಟು ಸತ್ತಿದ್ದು, ಮೃತರ ದೇಹವೆಲ್ಲವೂ ಛಿದ್ರಛಿದ್ರವಾಗಿದ್ದು, ಆ ಚಿತ್ರಗಳನ್ನು ಪ್ರಕಟಿಸಲು ಸಾಧ್ಯವಾಗದಷ್ಟು ಭೀಕರವಾಗಿವೆ. ಇನ್ನೊಂದೆಡೆ ಈ ಘಟನೆಗೆ ಹಾಗೂ ಜಿಲ್ಲೆಯಲ್ಲಿ ನಡೆಯುತ್ತಿರುವ ನಿಯಮಬಾಹಿರ ಕಲ್ಲು ಕ್ರಷರ್‌ಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ನೇರ ಕಾರಣ ಎಂದು ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಸ್ಫೋಟಕ್ಕೆ ಕಾರಣಾದ ಕ್ರಷರ್.

ಯಾರದ್ದು ಈ ಕ್ರಷರ್?

‌ದುರಂತಕ್ಕೆ ಕಾರಣವಾದ ಈ ಕ್ರಷರ್ ಗುಡಿಬಂಡೆಯ ಬಿಜೆಪಿ ಮುಖಂಡ ನಾಗರಾಜ್ ಹಾಗೂ ಆಂಧ್ರ ಪ್ರದೇಶದ ಶಿವಾರೆಡ್ಡಿ, ರಾಘವೇಂದ್ರ ರೆಡ್ಡಿ ಸಂಯುಕ್ತ ಮಾಲೀಕತ್ವದ್ದು ಎಂದು ತಿಳಿದುಬಂದಿದೆ. ಇವರ ಮಾಲೀಕತ್ವದ ಭ್ರಮರವಾಸಿನಿ ಎಂಬ ಕಲ್ಲು ಕ್ವಾರಿಯಲ್ಲಿ ಅನಧಿಕೃತವಾಗಿ ಶೇಖರಿಸಿಟ್ಟಿದ್ದ ಸ್ಪೋಟಕ ಜಿಲೆಟಿನ್ ವಸ್ತುಗಳನ್ನು ಪೊಲೀಸರ ಕಣ್ತಪ್ಪಿಸಿ ನಾಶಪಡಿಸಲು ನಡುರಾತ್ರಿ ಅರಣ್ಯ ಪ್ರದೇಶದತ್ತ ಕೊಂಡೊಯ್ಯುವ ವೇಳೆ ಈ ಸ್ಫೋಟ ಸಂಭವಿಸಿದೆ. ಈ ಕ್ವಾರಿಯಲ್ಲಿ ಕಾರ್ಯನಿರ್ವಹಿಸುತಿದ್ದ ಎಂಜಿನಿಯರ್, ಕಂಪ್ಯೂಟರ್ ಆಪರೇಟರ್ ಸಮೇತವಾಗಿ ಆರು ಮಂದಿ ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿದ್ದಾರೆ.

  • ಗುಡಿಬಂಡೆ ನಾಗರಾಜ್

ಇನ್ನೊಂದೆಡೆ ಕ್ವಾರಿ ಮಾಲೀಕ ನಾಗರಾಜ್‌ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸುಧಾಕರ್‌ ಪರಮಾಪ್ತ ಎಂದು ಗೊತ್ತಾಗಿದ್ದು, ಆ ವ್ಯಕ್ತಿ ನಾಪತ್ತೆಯಾಗಿದ್ದಾನೆ.

ಹಿರೇನಾಗವಲ್ಲಿ ಗ್ರಾಮದ ರಾಮು, ಕಂಪ್ಯೂಟರ್ ಆಪರೇಟರ್, ಗಂಗಾಧರ, ನೇಪಾಳ ಮೂಲದ ಮಹೇಶ, ಎಂಜಿನಿಯರ್ ಉಮಾ ಕಾಂತ್, ಚೇಳೂರಿನ ಅಭಿ ಸಾವನ್ನಪ್ಪಿದ ನತದೃಷ್ಟರು. ಜಿಲೆಟೆನ್ ಸ್ಪೋಟಕಕ್ಕೆ ಆರೂ ದೇಹಗಳು ಛಿದ್ರಛಿದ್ರಗೊಂಡಿದ್ದು, ಮೃತದೇಹಗಳನ್ನು ನೋಡಲಾರದಷ್ಟು ಛಿದ್ರವಾಗಿದ್ದು, ಮೃತರ ಸಂಬಂಧಿಕರ ರೋಧನ ಮುಗಿಲುಮುಟ್ಟಿದೆ.

ಪಾರಾದ ವಾಹನ ಚಾಲಕ

ನಡುರಾತ್ರಿ ಟಾಟಾ ಎಸ್ ವಾಹನದಲ್ಲಿ ಸ್ಫೋಟಕಗಳನ್ನು ಸಾಗಿಸುತಿದ್ದ ಚಾಲಕ ರಿಯಾಜ್ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದು ಸದ್ಯ ಪೊಲೀಸ್ ವಶದಲ್ಲಿದ್ದಾನೆ. ಈತನಿಂದ ಮತ್ತಷ್ಟು ಮಾಹಿತಿ ಪಡೆಯಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಬಂದ ಸಚಿವ ಸುಧಾಕರ್

ಪ್ರಕರಣಕ್ಕೆ ಸಂಭಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಘಟನಾ ಸ್ಥಳಕ್ಕೆ ಭೇಟಿ ನೀಟಿ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.‌

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು; ಈ ಕ್ವಾರಿ ಅಧಿಕೃತವಾಗಿದೆ. ಕಳೆದ ತಿಂಗಳಲ್ಲಿ ರಾಜ್ಯದ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಜಿಲೆಟಿನ್ ಸ್ಪೋಟಕ ಪ್ರಕರಣದ ನಂತರ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸತತವಾಗಿ ಕ್ವಾರಿಗಳ ಮೇಲೆ ದಾಳಿ ಮಾಡಿ ಪರಿಶೀಲಿಸಿ ಕ್ರಮ ಕೈಗೊಂಡಿದ್ದರು ಅದರ ನಂತರ ಇದೀಗ ಈ ದುರ್ಘಟನೆ ನಡೆದಿದೆ ಎಂದರು.

ಈ ಕ್ವಾರಿಯ ಮೇಲೆ ಫೆಬ್ರವರಿ 7ರಂದು ದಾಳಿ ನಡೆಸಿ ಅನಧಿಕೃತವಾಗಿ ಸಂಗ್ರಹಿಸಿಟ್ಟುಕೊಂಡಿದ್ದ ಸ್ಪೊಟಕ ವಸ್ತುಗಳ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿತ್ತು. ಈ ಕ್ವಾರಿ ಮಾಲೀಕರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಕ್ವಾರಿ ಮಾಲೀಕರು ನಾಪತ್ತೆಯಾಗಿದ್ದಾರೆ. ಇಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದ ಸ್ಪೊಟಕ ವಸ್ತುಗಳನ್ನು ಪೊಲೀಸರು ಹಾಗೂ ಗಣಿ ಇಲಾಖೆ ಅಧಿಕಾರಿಗಳ ಭಯದಿಂದಾಗಿ ನಾಶಪಡಿಸಲು ಸಾಗಿಸುವ ವೇಳೆ ಈ ದುರಂತ ನಡೆದಿದೆ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ. ಎಂದರು ಸುಧಾಕರ್.

ಕ್ವಾರಿ ಮಾಲೀಕರು ಎಷ್ಟೇ ಪ್ರಭಾವಿಗಳಾದರೂ ಅವರ ವಿರುದ್ದ ಕ್ರಮ ಜರುಗಿಸಲಾಗುವುದು. ಇವನ್ನು ‌ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದಿರುವ ಸಚಿವರು, ಇನ್ನು ಸ್ಪೋಟದಿಂದ ಮೃತರಾದ ಕಾರ್ಮಿಕರ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು ಅವರು.

ಈ ಸಂದರ್ಭದಲ್ಲಿ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ), ಕೇಂದ್ರ ವಲಯದ ಪ್ರತಾಪ್ ರೆಡ್ಡಿ, ಜಿಲ್ಲಾಧಿಕಾರಿ ಆರ್.ಲತಾ, ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಸೇರಿದಂತೆ ಜಿಲ್ಲೆಯ ಇನ್ನಿತರೆ ಅಧಿಕಾರಿಗಳು ಸ್ಥಳದಲ್ಲಿದ್ದರು.

ಬಂಧನಕ್ಕೆ ಆದೇಶ

ಈ ನಡುವೆ ಭ್ರಮರವಾಸಿನಿ ಕ್ರಷರ್‌ ಮಾಲೀಕರ ಬಂಧನಕ್ಕೆ ಸರಕಾರ ಆದೇಶ ನೀಡಿದ್ದು, ರಾತ್ರಿ ಸ್ಫೋಟದ ವಿಷಯ ತಿಳಿಯುತ್ತಿದ್ದಂತೆ ಮೂವರು ಮಾಲೀಕರು ನಾಪತ್ತೆಯಾಗಿದ್ದಾರೆ. ಗುಡಿಬಂಡೆಯ ಬಿಜೆಪಿ ಮುಖಂಡ ನಾಗರಾಜ್ ಹಾಗೂ ಆಂಧ್ರ ಪ್ರದೇಶದ ಶಿವಾರೆಡ್ಡಿ, ರಾಘವೇಂದ್ರ ರೆಡ್ಡಿ ಸಂಯುಕ್ತ ಮಾಲೀಕತ್ವದ್ದು ಎಂದು ತಿಳಿದುಬಂದಿದೆ. ಪೊಲೀಸರು ಇವರ ಬಂಧನಕ್ಕೆ ಬಲೆ ಬೀಸಿದ್ದು, ವಿವಿಧ ತಂಡಗಳನ್ನು ರಚಿಸಿಕೊಂಡು ಹುಡುಕಾಟ ಆರಂಭಿಸಿದ್ದಾರೆ ಪೊಲೀಸರು.

***

ಹಿರೇನಾಗವೇಲಿ ಬಳಿ ಕ್ರಷರ್‌ಗಳು ಅಕ್ರಮವಾಗಿ ಸ್ಫೋಟಗಳನ್ನು ನಡೆಸುತ್ತಿವೆ ಹಾಗೂ ಸ್ಫೋಟಕಗಳನ್ನು ಅಕ್ರಮವಾಗಿ ಸಂಗ್ರಹ ಮಾಡಿಟ್ಟಿವೆ ಎಂದು ಸಿಕೆನ್ಯೂಸ್‌ ನೌ ಜನವರಿ 28ರಂದೇ ವರದಿ ಮಾಡಿತ್ತು.
ಕಾನೂನಿಗೆ ಕಿಮ್ಮತ್ತಿಲ್ಲ, ಜನರ ಬಗ್ಗೆ ಕಾಳಜಿ ಇಲ್ಲ; ರಾತ್ರಿ ಎಲ್ಲರೂ ಮಲಗಿದ ಮೇಲೆ ಕಲ್ಲು ಕ್ವಾರಿಗಳಲ್ಲಿ ಸ್ಫೋಟ, ಆರೋಗ್ಯ ಸಚಿವರ ಹುಟ್ಟೂರಿಗೆ ಕೂಗಳತೆ ದೂರದಲ್ಲೇ ಕ್ರಷರ್‌ಗಳ ಕರಾಳಲೋಕ‌

Tags: chikkaballapur blastdr k sudhakarhirenagavalliillegal crusherkarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚಿಕ್ಕಬಳ್ಳಾಪುರದ ಕಲ್ಲು ಕ್ವಾರಿ ಸ್ಫೋಟ;  ಸರಕಾರದ ಬೇಜವಾಬ್ದಾರಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು? ಎಂದು ಪ್ರಶ್ನಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಚಿಕ್ಕಬಳ್ಳಾಪುರದ ಕಲ್ಲು ಕ್ವಾರಿ ಸ್ಫೋಟ; ಸರಕಾರದ ಬೇಜವಾಬ್ದಾರಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು? ಎಂದು ಪ್ರಶ್ನಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

Comments 1

  1. Pingback: ಚಿಕ್ಕಬಳ್ಳಾಪುರ ಭೂಕಂಪ ಪೀಡಿತ ಪ್ರದೇಶಗಳಿಗೆ ಕೇಂದ್ರ ತಂಡ ಭೇಟಿ, ಪರಿಶೀಲನೆ - cknewsnow

Leave a Reply Cancel reply

Your email address will not be published. Required fields are marked *

Recommended

ಗುಡಿಬಂಡೆ ತಾಲೂಕಿನಲ್ಲಿ SSLC ಪರೀಕ್ಷೆ ಬರೆಯಲಿದ್ದಾರೆ 742 ವಿದ್ಯಾರ್ಥಿಗಳು

ಗುಡಿಬಂಡೆ ತಾಲೂಕಿನಲ್ಲಿ SSLC ಪರೀಕ್ಷೆ ಬರೆಯಲಿದ್ದಾರೆ 742 ವಿದ್ಯಾರ್ಥಿಗಳು

5 years ago
ಭ್ರಷ್ಟಾಚಾರ & ಕೆಮ್ಮು ಎರಡನ್ನೂ ಮುಚ್ಚಿಡಲಾಗಲ್ಲ!!

ಸಿಬಿಐ ತನಿಖೆಗೆ ತಡೆ: ಡಿಸಿಎಂ ಡಿಕೆಶಿಗೆ ಬಿಗ್ ರಿಲೀಫ್

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ