• About
  • Advertise
  • Careers
  • Contact
Tuesday, May 20, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಕುಡಿಯುವ ನೀರು ಕೊಡದೇ ಅನ್ಯಾಯ ಮಾಡಲೇಬೇಕು ಎಂಬುದೆ ಬಿಜೆಪಿ ಸರಕಾರದ ದುರುದ್ದೇಶ ಎಂದ ಕೃಷ್ಣಭೈರೇಗೌಡ

cknewsnow desk by cknewsnow desk
February 27, 2021
in CHIKKABALLAPUR, NEWS & VIEWS, POLITICS
Reading Time: 2 mins read
0
ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಕುಡಿಯುವ ನೀರು ಕೊಡದೇ ಅನ್ಯಾಯ ಮಾಡಲೇಬೇಕು ಎಂಬುದೆ ಬಿಜೆಪಿ ಸರಕಾರದ ದುರುದ್ದೇಶ ಎಂದ ಕೃಷ್ಣಭೈರೇಗೌಡ
916
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರ: ರಾಷ್ಟ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಪಕ್ಷದ ಮೇಲೆ ಜನರ ನಂಬಿಕೆ ಸಂಪೂರ್ಣ ನಶಿಸಿಹೋಗಿ ಆಕ್ರೋಶ ಬಂದಿದೆ. ಇನ್ನು ಸಮಯಕ್ಕೆ ಒಂದು ಅವತಾರ ಎತ್ತುವ ಮೂಲಕ ಸದಾ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಜೆಡಿಎಸ್‌ ಮೇಲೆ ಜನ ಯಾವತ್ತೋ ನಂಬಿಕೆ ಕಳೆದುಕೊಂಡಿದ್ದಾರೆ. ಅಷ್ಟೋ ಇಷ್ಟೋ ಮಟ್ಟಿಗೆ ಜನರು ನಂಬಿಕೆ ಇಟ್ಟುಕೊಂಡಿರುವ ಪಕ್ಷವೆಂದರೆ ಅದು ಕಾಂಗ್ರೆಸ್‌ ಮಾತ್ರ. ಹೀಗಾಗಿ ನಾವೆಲ್ಲ ಒಟ್ಟಾಗಿ ಕೆಲಸ ಮಾಡೋಣ ಎಂದು ಮಾಜಿ ಸಚಿವ ಕೃಷ್ಣಭೈರೇಗೌಡ ಜಿಲ್ಲೆಯ ಕಾಂಗ್ರೆಸ್‌ ಮುಖಂಡರಿಗೆ ಕಿವಿಮಾತು ಹೇಳಿದರು.

ಚಿಕ್ಕಬಳ್ಳಾಪುರದಲ್ಲಿ ಶನಿವಾರ ಪೆಟ್ರೋಲ್‌-ಡೀಸೆಲ್‌ ಮತ್ತು ಅಡುಗೆ ಅನಿಲ ದರ ಏರಿಕೆ ವಿರೋಧಿ ಪ್ರತಿಭಟನೆ ಹಾಗೂ ಪಾದಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಜಿಲ್ಲಾ ಮುಖಂಡರನ್ನು ಉದ್ದೇಶಿಸಿ ಮಾತನಾಡಿದರು ಅವರು.

ಬೆಲೆ ಸರಕಾರ ಬೆಲೆಗಳನ್ನು ಏರಿಸಲಿಕ್ಕೆ ಬಂದ ಹಾಗಿದೆ. ಬೆಲೆಗಳನ್ನು ನಿರಂತರವಾಗಿ ಏರಿಸುತ್ತಾ ಯಾರ ಖಜಾನೆ ತುಂಬುತ್ತಿದ್ದಾರೆ ಎಂದಬ ಸಂಗತಿ ಜನರಿಗೆ ಗೊತ್ತಾಗಿಬಿಟ್ಟಿದೆ. ಪೆಟ್ರೋಲ್‌, ಡಿಸೆಲ್‌, ಅಡುಗೆ ಅನಿಲದ ಬೆಲೆ ದಿನದಿಂದ ದಿನಕ್ಕೆ ಆಕಾಶದತ್ತ ಹೋಗುತ್ತಿದೆ. ಕೇಂದ್ರ ಸರಕಾರ ಬೆಲೆಗಳನ್ನು ಏರಿಸುತ್ತಿದ್ದರೆ ಬಡವರ ಬದುಕು ಸುಟ್ಟು ಹೋಗುತ್ತಿದೆ ಎಂದು ಅವರು ನುಡಿದರು.

ನೀರು ಕೊಡಬಾರದು ಎನ್ನುವುದೇ ಸರಕಾರದ ಉದ್ದೇಶ

ಅದೆಷ್ಟೋ ವರ್ಷಗಳಿಂದ ಚಿಕ್ಕಬಳ್ಳಾಪುರಕ್ಕೆ ನೀರು ತರಲಾಗದೇ ಇದ್ದ ಸಂದರ್ಭದಲ್ಲಿ ಜಿಲ್ಲೆಗೆ ನೀರನ್ನು ತಂದದ್ದು ಕಾಂಗ್ರೆಸ್‌ ಸರಕಾರ. ಜನಪರ ಕೆಲಸಗಳನ್ನು ಮಾಡಿರುವುದು ಕಾಂಗ್ರೆಸ್‌ ಮಾತ್ರ ಎಂದು ಕೃಷ್ಣಭೈರೇಗೌಡ ಹೇಳಿದರಲ್ಲದೆ; ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಅನ್ಯಾಯ ಮಾಡಲೇಬೇಕು. ಇಲ್ಲಿನ ಜನಗಳನ್ನು ಹೀಗೆಯೇ ಕಷ್ಟದಲ್ಲಿ ಇಡಬೇಕು. ಇವರಿಗೆ ಕುಡಿಯುವ ನೀರು ಕೊಡಬಾರದು. ಎತ್ತಿಹೊಳೆ ಯೋಜನೆ ಸಿದ್ದರಾಮಯ್ಯ ಸರಕಾರ ಇದ್ದಾಗ ಎಲ್ಲಿಗೆ ಬಂದು ನಿಂತಿತ್ತೋ ಈ ಸರಕಾರ ಬಂದ ಮೇಲೂ ಅಲ್ಲಿಯೇ ನಿಂತಿದೆ. ಬಿಜೆಪಿ ಸರಕಾರ ಬಂದ ಮೇಲೆ ನಯಾಪೈಸೆ ಕೆಲಸ ಆಗಿಲ್ಲ. ಯಡಿಯೂರಪ್ಪ ಅವರ ಸರಕಾರ ಉದ್ದೇಶಪೂರ್ವಕವಾಗಿಯೇ ನಮ್ಮೆರಡೂ ಜಿಲ್ಲೆಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ದೂರಿದರು.

ಕುರಿ ಸತ್ರೆ ಪರಿಹಾರವಿಲ್ಲ

ನಮ್ಮ ತಾಯಿ ಸಾಕುತ್ತಿದ್ದ ಕುರಿಗಳಿಗೆ ಶೀಫ್‌ ಫಾಕ್ಸ್‌ ಅಂತ ಕಾಯಿಲೆ ಬಂದು ೬೦ ಕುರಿಗಳು ಸತ್ತು ಹೋದವು. ಕಾಂಗ್ರೆಸ್‌ ಸರಕಾರ ಇದ್ದಾಗ ಒಂದು ಕುರಿ ಹೀಗೆ ಕಾಯಿಲೆ ಬಂದು ಸತ್ತರೆ ೫,೦೦೦ ರೂಪಾಯಿ ಪರಿಹಾರವನ್ನು ರೈತರಿಗೆ ನೀಡಲಾಗುತ್ತಿತ್ತು. ಈಗ ಆ ಪರಿಹಾರವನ್ನೂ ಬಿಜೆಪಿ ಸರಕಾರ ನಿಲ್ಲಿಸಿದೆ. ಮೊದಲೇ ಕಷ್ಟದಲ್ಲಿರುವ ರೈತರಿಗೆ ಒಂದಾದ ಮೇಲೊಂದರಂತೆ ಅನ್ಯಾಯ ಮಾಡುತ್ತಿದೆ ಈ ಸರಕಾರ. ಇಡೀ ರೈತರ ಜುಟ್ಟನ್ನು ತೆಗೆದುಕೊಂಡು ಹೋಗಿ ಅಂಬಾನಿ, ಅದಾನಿಯಂಥ ಉದ್ಯಮಿಗಳಿಗೆ ಕೊಟ್ಟು ಅನ್ನದಾತರು ಹೋಗಿ ಅವರ ಮನೆ ಬಾಗಿಲು ಕಾಯುವ ಪರಿಸ್ಥಿತಿಯನ್ನು ಸೃಷ್ಟಿ ಮಾಡಲು ಹೊರಟಿದ್ದಾರೆ ಎಂದು ಟೀಕಾಪ್ರಹಾರ ನಡೆಸಿದರು ಕೃಷ್ಣಭೈರೇಗೌಡರು.

ಬದುಕಿದ್ದಾಗಲೇ ಹೆಸರಿಟ್ಟಿದ್ದಾರೆ!

ಕಾಂಗ್ರೆಸ್‌ ಸರಕಾರಗಳು ಹಲವಾರು ಯೋಜನೆಗಳಿಗೆ, ಕಾರ್ಯಕ್ರಮಗಳಿಗೆ ಇಂದಿರಾ ಗಾಂಧಿ, ರಾಜೀವ್‌ ಗಾಂಧಿ ಅವರ ಹೆಸರನ್ನಿಟ್ಟಿವೆ. ಇಲ್ಲ ಎಂದು ಹೇಳುವುದಿಲ್ಲ. ಇಂದಿರಾ ಗಾಂಧಿ ಅವರು ದಿಟ್ಟ ಹೆಜ್ಜೆಗಳನ್ನು ಇಡದಿದ್ದರೆ ಈ ದೇಶದ ಸ್ಥಿತಿ ಏನಾಗಿರುತ್ತಿತ್ತು ಎಂಬುದನ್ನು ಓಮ್ಮೆ ಊಹಿಸಿ. ರಾಜೀವ್‌ ಗಾಂದಿ ಅವರ ಹತ್ಯೆಯಾದಾಗ ಅವರ ದೇಹ ಛೀದ್ರಛಿದ್ರವಾಗಿ ಗುರುತು ಹಿಡಿಯಲಾರದಂತೆ ಆಗಿತ್ತು. ಅವರಿಬ್ಬರೂ ತಮ್ಮ ಮನೆಗಾಗಿ ಪ್ರಾಣತ್ಯಾಗ ಮಾಡಿದ್ರಾ? ದೇಶಕ್ಕಾಗಿ ಹುತಾತ್ಮರಾದರು. ಅವರು ಹತಾತ್ಮರಾದ ಮೇಲೆಯೇ ಅವರ ಹೆಸರುಗಳನ್ನು ಇಡಲಾಯಿತು. ಆದರೆ, ಮೋದಿ ಬದುಕಿರುವಾಗಲೇ ತಮ್ಮ ಹೆಸರನ್ನು ಇಟ್ಟಿಸಿಕೊಳ್ಳುತ್ತಿದ್ದಾರೆ. ಗುಜರಾತ್ ಫುಟ್ಬಾಲ್‌ ಕ್ರೀಡಾಂಗಣವನ್ನು ಬಿಜೆಪಿ ಸರಕಾರ ಕಟ್ಟಿದ್ದಲ್ಲ. ಹಿಂದೆ ಯಾರೋ ಮಹಾನುಭಾವರು ಕಟ್ಟಿದ ಕ್ರೀಡಾಂಗಣವನ್ನು ಅಭಿವೃದ್ಧಿ ಮಾಡುತ್ತೇನೆ ಎಂದ್ಹೇಳಿ ಸರ್ದಾರ್‌ ವಲ್ಲಭಬಾಯಿ ಪಟೇಲರ ಹೆಸರನ್ನು ಕಿತ್ತು ಮೋದಿ ಹೆಸರು ಇಡುತ್ತಾರೆ ಎಂದರೆ ಇಂಥ ಕೃತ್ಯಕ್ಕೆ ಏನೆನ್ನಬೇಕು? ಒಂದು ಕಡೆ ಮೋದಿ ಇದ್ದರೆ, ಇನ್ನು ಒಳಗಡೆ ಅಂಬಾನಿ ಮತ್ತು ಅದಾನಿ. ಇದು ನಾವಿಬ್ಬರು, ನಮಗಿಬ್ಬರು ಎನ್ನುವಂಥ ನೈಜಕಥೆ ಎಂದು ವ್ಯಂಗ್ಯವಾಡಿದರು ಅವರು.

ಕಾಂಗ್ರೆಸ್‌ನಲ್ಲಿ ಗುಪುಗಾರಿಕೆ ಇಲ್ಲ

ಬಿಜೆಪಿ ಮತ್ತು ಜೆಡಿಎಸ್‌ಗೆ ಹೋಲಿಸಿದರೆ ಕಾಂಗ್ರೆಸ್‌ನಲ್ಲಿ ಒಳಜಗಳ ಇಲ್ಲ ಅಥವಾ ಕಡಿಮೆ. ನಮ್ಮ ಪಕ್ಷದಲ್ಲಿ ಸಣ್ಣಪುಟ್ಟ ಸಮಸ್ಯೆಗಳಿವೆ. ಅವನ್ನು ಸರಿ ಮಾಡಿಕೊಳ್ಳೋಣ. ಆದರೆ, ಬಿಜೆಪಿಯಲ್ಲಿ ಹಾದಿ ಬೀದಿಲ್ಲಿ ಹೊಡೆದಾಡಿಕೊಳ್ಳುತ್ತಿದ್ದಾರೆ. ಹತ್ತಾರು ಬಣಗಳಿವೆ. ಜೆಡಿಎಸ್‌ನಲ್ಲೂ ಅದೇ ಸ್ಥಿತಿ ಇದೆ. ಸಮಸ್ಯೆಗಳನ್ನು ದೊಡ್ಡದು ಮಾಡುವುದು ಬೇಡ. ಏನೇ ಸಮಸ್ಯೆ ಇದ್ದರೂ ನನ್ನ ಗಮನಕ್ಕೂ ತನ್ನಿ. ಯಾವಾಗ ಬೇಕಾದರೂ ನಾನು ಜಿಲ್ಲೆಗೆ ಬರುತ್ತೇನೆ ಎಂದರು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ.

ಸುಳ್ಳುಗಳನ್ನೇ ಹೇಳುತ್ತಿದೆ ಬಿಜೆಪಿ

ಸಭೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ; “ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದೆ ಜಾಗತಿಕ ಕ್ರೆಡಿಟ್‌ ಸಂಸ್ಥೆಗಳು ಈ ಸಂಗತಿಯನ್ನು ಹೇಳುತ್ತಿವೆ. ಆದರೆ, ಬಿಜೆಪಿಯವರು ಎಲ್ಲವೂ ಚೆನ್ನಾಗಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ಆರ್ಥಿಕ ಪರಿಸ್ಥಿತಿ ಚೆನ್ನಾಗಿದ್ದರೆ ಎಲ್ಲ ಬೆಲೆಗಳನ್ನು ಹೆಚ್ಚಿಸಿ ಜನರ ಮೇಲೆ ಭಾರವನ್ನೇಕೆ ಹಾಕಬೇಕು? ಕಳೆದ ಐವತ್ತು-ಅರವತ್ತು ವರ್ಷಗಳಲ್ಲಿ ದೇಶ ಕಂಡ ಬೆಳವಣಿಗೆ ಇವತ್ತು ಕುಸಿಯುತ್ತಿದೆ. ಆರ್ಥಿಕ ದುರ್ಬಲತೆ ಹೆಚ್ಚುತ್ತಿದೆ” ಎಂದು ಟೀಕಿಸಿದರು.

ಬಿಜೆಪಿ ಸರಕಾರಗಳ ವಿರುದ್ಧ ರಾಜ್ಯ ಮತ್ತು ಕೇಂದ್ರ ಮಟ್ಟದಲ್ಲಿ ಬೃಹತ್‌ ಜನಾಂದೋಲನ ಆರಂಭವಾಗಬೇಕು. ಜನ ವಿರೋಧಿ ನೀತಿಗಳ ಮೂಲಕ ಕೆಲವರಿಗಷ್ಟೇ ಲಾಭ ಮಾಡಿಕೊಡುತ್ತಿರುವ ಈ ಸರಕಾರಗಳು ತೊಲಗಬೇಕು ಎಂದು ಮೊಯಿಲಿ ಹೇಳಿದರು.

ಪಾದಯಾತ್ರೆ ಯಶಸ್ವಿಗೊಳಿಸೋಣ

ಬೆಲೆ ಏರಿಕೆಯಿಂದ ಜನರು ಬಸವಳಿದು ಹೋಗಿದ್ದಾರೆ. ದಿನದಿಂದ ದಿನಕ್ಕೆ ಕಷ್ಟಕ್ಕೆ ಸಿಲುಕಿಕೊಳ್ಳುತ್ತಿದ್ದಾರೆ. ಹೀಗಾಗಿ ಈ ಪಾದಯಾತ್ರೆಯನ್ನು ಯಶಸ್ವಿಗೊಳಿಸಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಆ ಮೂಲಕ ಪಕ್ಷದ ಹಾಗೂ ಜನರ ಶಕ್ತಿ ಏನೆಂಬುದನ್ನು ಸರಕಾರಗಳಿಗೆ ತೋರಿಸಬೇಕು ಎಂದು ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಪ್ರತಿಪಾದಿಸಿದರು.

ಜಿಲ್ಲೆಯನ್ನು ಹಾಳು ಮಾಡಲಾಗುತ್ತಿದೆ. ದೋಚಲಾಗುತ್ತಿದೆ. ಬಿಜೆಪಿ ಸರಕಾರದ ದುರಾಡಳಿತದ ವಿರುದ್ಧ ಪಕ್ಷ ಜಿಲ್ಲೆಯಲ್ಲಿ ಗಟ್ಟಿಯಾಗಿ ದನಿಯೆತ್ತಲೇಬೇಕಿದೆ. ಪಾದಯಾತ್ರೆಯನ್ನು ಎಲ್ಲರೂ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಮುಖಂಡ ನಂದಿ ಆಂಜನಪ್ಪ ಮನವಿ ಮಾಡಿದರು.

ಮಾಜಿ ಸಚಿ ಶಿವಶಂಕರ ರೆಡ್ಡಿ, ಶಿಢ್ಲಘಟ್ಟ ಶಾಸಕ ವಿ.ಮುನಿಯಪ್ಪ, ಸೇರಿದಂತೆ ಹಲವಾರು ಮುಖಂಡರು ಸಭೆಯಲ್ಲಿ ಮಾತನಾಡಿದರು.

Tags: chikkaballapurCongresskrishna bhairegowdapadayatreprice hike protest
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಕೋವಿಡ್ ಕೇಂದ್ರದಲ್ಲಿ ಬರೀ ತೋರಿಕೆ: ಸೋಂಕಿತರತ್ತ ಸುಳಿಯದ ವೈದ್ಯರು

ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜು ಮಾದರಿಯಲ್ಲೇ ಕೃಷಿ ವಿವಿ ಪರಿವರ್ತನೆ; ಸರ್ವ ಸ್ವಾಯತ್ತತೆ ಮೂಲಕ ಬೋರ್ಡ್‌ ಆಫ್‌ ಗವರ್ನೆನ್ಸ್‌ ವ್ಯವಸ್ಥೆಯೇ ಬರಲಿದೆ ಎಂದ ಉಪ ಮುಖ್ಯಮಂತ್ರಿ

Leave a Reply Cancel reply

Your email address will not be published. Required fields are marked *

Recommended

ಜೆಡಿಎಸ್ ಜನತಾ ಜಲಧಾರೆ ಆರಂಭ

ಜೆಡಿಎಸ್ ಜನತಾ ಜಲಧಾರೆ ಆರಂಭ

3 years ago
ಉನ್ನತ ಶಿಕ್ಷಣ ಡಿಜಿಟಲೀಕರಣ; ಜುಲೈ 15ರಿಂದ ಎಲ್ಲ ಆನ್‌ಲೈನ್

ಉನ್ನತ ಶಿಕ್ಷಣ ಡಿಜಿಟಲೀಕರಣ; ಜುಲೈ 15ರಿಂದ ಎಲ್ಲ ಆನ್‌ಲೈನ್

5 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ