• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home GUEST COLUMN

ಹುಸಿಯಾದ ಎಸ್‌ಟಿ ಮೀಸಲು ನಿರೀಕ್ಷೆ, ರಾಜಕಾರಣದಿಂದ ಹೆಚ್ಚಿದ ಗೋಜಲು; ಬಜೆಟ್‌ನಲ್ಲಿ ಹಣ ಹಂಚಿಕೆಯಲ್ಲೂ ಲೆಕ್ಕಾಚಾರ! ವಿಜೃಂಭಿಸಿದ ಹಿತಾಸಕ್ತಿಗಳು!!

cknewsnow desk by cknewsnow desk
March 8, 2021
in GUEST COLUMN, STATE
Reading Time: 1 min read
0
ಹುಸಿಯಾದ ಎಸ್‌ಟಿ ಮೀಸಲು ನಿರೀಕ್ಷೆ, ರಾಜಕಾರಣದಿಂದ ಹೆಚ್ಚಿದ ಗೋಜಲು; ಬಜೆಟ್‌ನಲ್ಲಿ ಹಣ ಹಂಚಿಕೆಯಲ್ಲೂ ಲೆಕ್ಕಾಚಾರ! ವಿಜೃಂಭಿಸಿದ ಹಿತಾಸಕ್ತಿಗಳು!!
912
VIEWS
FacebookTwitterWhatsuplinkedinEmail

ಎಸ್‌ಟಿ ಮೀಸಲು ಹೋರಾಟ ಮುಂದುವರಿದಿರುವ ಹೊತ್ತಿನಲ್ಲೇ ಬಂದ 2021ನೇ ಸಾಲಿನ ಮುಂಗಡ ಪತ್ರ ಆ ಸಮುದಾಯದ ನಿರೀಕ್ಷೆಗಳನ್ನು ಹುಸಿ ಮಾಡಿದೆ ಎಂಬ ವಾದ ಗಟ್ಟಿಯಾಗಿ ಕೇಳಿಬರುತ್ತಿದೆ. ಅದು ಹೇಗೆ? ಯಾವ ರೀತಿ? ಪತ್ರಕರ್ತ ರಮೇಶ್ ಹಿರೇಜಂಬೂರು ಅವರು ಇಲ್ಲಿ ವಿಶ್ಲೇಷಿಸಿದ್ದಾರೆ.


ರಾಜ್ಯ ಸರಕಾರದ ಜಿಡಿಪಿ ಶೇ.2.6ರಷ್ಟು ಕುಸಿತ ಕಂಡಿದ್ದರೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯದಲ್ಲಿ ಈ ಬಾರಿ ಸಾಕಷ್ಟು ನಿರೀಕ್ಷೆ ಇತ್ತು. ಆದರೆ ಅದೆಲ್ಲವನ್ನೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹುಸಿಗೊಳಿಸಿದ್ದಾರೆ.

ಹೌದು, ಕೋವಿಡ್ ಸಮಯದಲ್ಲಿ ರಾಜ್ಯ ಸರಕಾರ ಆರ್ಥಿಕವಾಗಿ ನಷ್ಟ ಅನುಭವಿಸಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ವೇಳೆ ಸರಕಾರ ಪರಿಸ್ಥಿತಿ ಸುಧಾರಿಸಲು ಸಮಾಜ ಕಲ್ಯಾಣ ಇಲಾಖೆಯ ಎಸ್‌ಸಿಎಸ್‌ಪಿ-ಟಿಎಸ್‍ಪಿ ಹಣವನ್ನು ಬಳಸಿಕೊಂಡಿತ್ತು. ಇದಕ್ಕೆ ತೀವ್ರ ವಿರೋಧದ ನಡುವೆಯೂ ಹಣ ಬಳಕೆ ಆಗುತ್ತಿರುವುದು ಪರಿಶಿಷ್ಟರಿಗಾಗಿಯೇ ಎಂದು ಸಬೂಬನ್ನೂ ಹೇಳಿತ್ತು. ಆದರೆ ಈ ಬಾರಿ ಬಜೆಟ್‍ನಲ್ಲಿ ಅದೆಲ್ಲವನ್ನೂ ಸರಕಾರ ಸರಿದೂಗಿಸಲಿದೆ ಎನ್ನುವ ನಿರೀಕ್ಷೆಯಿತ್ತು. ಆದರೆ ಆ ಎಲ್ಲ ನಿರೀಕ್ಷೆಗಳೂ ಹುಸಿಯಾಗಿವೆ.

ಈ ಬಾರಿಯ ಬಜೆಟ್‍ನಲ್ಲಿ ಎಸ್‌ಸಿಎಸ್‌ಪಿ-ಟಿಎಸ್‍ಪಿ ಯೋಜನೆಯಡಿ 26,005 ಕೋಟಿ ರೂ.ಗಳನ್ನು ಹಂಚಿಕೆ ಮಾಡಿದೆ. ಒಟ್ಟಾರೆಯಾಗಿ ಇದು ದೊಡ್ಡ ಮೊತ್ತವೆಂದು ನೋಡುವವರಿಗೆ ಅನಿಸಿದರೂ ಖಂಡಿತಾ ಇತರೆ ಸಮುದಾಯಗಳಿಗೆ ಹೋಲಿಸಿದರೆ ಇದು ಸಣ್ಣ ಮೊತ್ತವೇ ಸರಿ. ಸಮಾಜ ಕಲ್ಯಾಣ ಇಲಾಖೆಯಿಂದ 50 ಕೋಟಿ ರೂ. ವೆಚ್ಚದಲ್ಲಿ 50 ಹೊಸ ಮೆಟ್ರಿಕ್ ನಂತರದ ಹಾಸ್ಟೆಲ್‍ಗಳನ್ನು ಆರಂಭಿಸುವುದಾಗಿ ಹೇಳಿದೆ. ಈ ಹಾಸ್ಟೆಲ್‍ಗಳ ಆರಂಭದಿಂದ ರಾಜ್ಯದ 5 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದೆ.

ಜತೆಗೆ ಎಸ್.ಸಿ/ಎಸ್ಟಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸೌಲಭ್ಯದೊಂದಿಗೆ ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ತರಬೇತಿ ನೀಡಲು 5 ಕೋಟಿ ರೂ.ಗಳ ವೆಚ್ಚದಲ್ಲಿ ಪ್ರತಿ ವಿಭಾಗದಲ್ಲಿ ಕೂಡ ತಲಾ ಒಂದೊಂದು ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಅದ್ವಿತೀಯ ಕ್ರೀಡಾ ಶಾಲೆ ಎಂದು ಉನ್ನತೀಕರಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದೆ. ಜೊತೆಗೆ ಎಸ್.ಸಿ/ಎಸ್ಟಿ ಉದ್ಯಮಿಗಳಿಗೆ ಹಾಳಿ ಜಾರಿಯಲ್ಲಿರುವ ಶೇ.4ರಷ್ಟು ಬಡ್ಡಿ ಸಹಾಯ ಧನ ಯೋಜನೆಯಡಿ ಮಳಿಗೆ/ ಡೀಲರ್‌ಶಿಪ್/ ಪ್ರಾಂಚೈಸಿ ಮತ್ತು ಹೋಟೆಲ್ ಉದ್ಯಮಗಳನ್ನು ಪ್ರಾರಂಭಿಸಲು ಅವಕಾಶ ನೀಡಿದ್ದು, ಗರಿಷ್ಠ 1 ಕೋಟಿ ರೂ.ವರೆಗೆ ಸಾಲ ಪಡೆಯಲು ಅವಕಾಶ ನೀಡಲಿದ್ದೇವೆಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ವಚನ ಪೂರೈಸುವಲ್ಲಿ ವಿಫಲ

ಇನ್ನು ನಗರಸಭೆ, ಪುರಸಭೆ ಹಾಗೂ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳ ಪುನರ್ವಸತಿಗೆ, ಸಂಘಗಳನ್ನು ರಚಿಸಿ ಸಕ್ಕಿಂಗ್ ಮತ್ತು ಜಟ್ಟಿಂಗ್ ಯಂತ್ರಗಳಿಗೆ ಶೇ.75ರಷ್ಟು ಸಹಾಯ ಧನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಅದಕ್ಕಾಗಿ 2 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಹೇಳಿರುವ ಮುಖ್ಯಮಂತ್ರಿಗಳು, ನಿಪ್ಪಾಣಿಯಲ್ಲಿ ಕೊಲ್ಲಾಪುರಿ ಪಾದರಕ್ಷೆಗಳ ಕ್ಲಸ್ಟರ್ ಹಾಗೂ ಚಿತ್ರದುರ್ಗದಲ್ಲಿ ಕೇಂದ್ರ ಪಾದರಕ್ಷಾ ತರಬೇತಿ ಸಂಸ್ಥೆಯ ವಿಸ್ತರಣಾ ಕೇಂದ್ರ ಸ್ಥಾಪನೆ ಮಾಡುವುದಾಗಿ ಹೇಳಿದ್ದಾರೆ.

ಹಾಗೆಯೇ, ಪರಿಶಿಷ್ಟ ಪಂಗಡದ ಆಶ್ರಮ ಶಾಲೆಗಳಿಗೆ ವಾಲ್ಮೀಕಿ ಆಶ್ರಮ ಶಾಲೆ ಎಂದು ಮರುನಾಮಕರಣ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಆದರೆ, ಇಲ್ಲಿ ಪರಿಶಿಷ್ಟ ವರ್ಗಕ್ಕೆ ಶೇ.7.5ರಷ್ಟು ಮೀಸಲಾತಿಯನ್ನು ಮಾರ್ಚ್ 9ರೊಳಗೆ ಘೋಷಣೆ ಮಾಡುವುದಾಗಿ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಹೇಳಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಬೇಕಾದದ್ದನ್ನೇ ಪರಿಶಿಷ್ಟ ವರ್ಗಕ್ಕೆ ಘೋಷಣೆ ಮಾಡದೇ ಜಾಣ ಹೆಜ್ಜೆ ಇಡುವ ಮೂಲಕ ಇಡೀ ಪರಿಶಿಷ್ಟ ವರ್ಗಕ್ಕೆ ನೀಡಿದ್ದ ವಚನವನ್ನು ಪೂರೈಸುವಲ್ಲಿ ವಿಫಲರಾಗಿದ್ದಾರೆ.

ಜಾಣ ನಡೆ

ಇಡೀ ಪರಿಶಿಷ್ಠ ವರ್ಗದ ರಮೇಶ್ ಜಾರಕಿಹೊಳಿಯ ಸಿಡಿ ಪ್ರಕರಣದ ಬಗ್ಗೆ ತಲೆ ಕೆಡಿಸಿಕೊಂಡಿರುವ ಹೊತ್ತಿನಲ್ಲಿ ಆಶ್ರಯ ಶಾಲೆಗಳ ವಾಲ್ಮೀಕಿ ಹೆಸರು ಮರುನಾಮಕರಣ ಮಾಡಿ ಮೂಗಿಗೆ ತುಪ್ಪ ಸವರಿದ್ದಾರೆ. ಆದರೆ, ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆಯ ಹಿಂದೆ ಬಿಜೆಪಿಯ ಕಾಣದ ಕೈಗಳೇ ಕೆಲಸ ಮಾಡಿವೆ ಎಂಬುದನ್ನು ಇಡೀ ರಾಜ್ಯದ ಎಸ್ಟಿ ಸಮುದಾಯ ಹೇಳುತ್ತಿರುವುದನ್ನು ಲೆಕ್ಕಿಸಿಯೇ ಇದ್ದಂತೆ ಕಾಣುತ್ತಿಲ್ಲ. ಮತ್ತೊಂದೆಡೆ ಎಸ್ಸಿ ಸಮುದಾಯ ಮೀಸಲಾತಿ ಒಳ ಮೀಸಲಾತಿಗೆ ಪಟ್ಟು ಹಿಡಿದಿದ್ದರೂ ಅದರ ಬಗ್ಗೆಯೂ ಒಂದಕ್ಷರವೂ ಮಾತನಾಡದೆ ಡಾ.ಬಿ.ಆರ್.ಅಂಬೇಡ್ಕರ್ ಭೇಟಿ ನೀಡಿದ್ದ ಹಾಸನ ನಗರದ ಎಂ.ಕೆ.ಬೋರ್ಡಿಂಗ್ ಹೋಮ್ ಸ್ಥಳದಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಸ್ಮಾರಕ ನಿರ್ಮಾಣ ಮಾಡುವುದಾಗಿ ಹೇಳಿ ಎಲ್ಲವನ್ನೂ ಮರೆಮಾಚುವ ಕೆಲಸ ಮಾಡಿದ್ದಾರೆ.

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಕಾರ್ಯಕ್ರಮಗಳಿಗೆ 50 ಕೋಟಿ ರೂ., ಅಲ್ಪಸಂಖ್ಯಾತರಿಗೆ 1,500 ಕೋಟಿ ರೂ., ಕ್ರಿಶ್ಚಿಯನ್ ಸಮುದಾಯದ ವಿವಿಧ ಕಾರ್ಯಕ್ರಮಗಳಿಗೆ 200 ಕೋಟಿ ರೂ., ವೀರಶೈವ ಲಿಂಗಾಯತ ಸಮಾಜದ ಅಭಿವೃದ್ಧಿಗಾಗಿ 500 ಕೋಟಿ ರೂ., ಒಕ್ಕಲಿಗ ಸಮುದಾಯದ ಅಭಿವೃದ್ಧಿಗೆ 500 ಕೋಟಿ ರೂ. ನೀಡಿದ್ದರ ಜೊತೆಗೆ ವಿವಿಧ ಇತರ ಕಾರ್ಯಕ್ರಮಗಳನ್ನೂ ಘೋಷಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ; ಎಸ್ಸಿ, ಎಸ್ಟಿ ಹಾಗೂ ಒಬಿಸಿ ಸಮುದಾಯಗಳನ್ನೆಲ್ಲ ಸೇರಿಸಿ ಅವುಗಳ ಅಭಿವೃದ್ಧಿಗೆ 500 ಕೋಟಿ ರೂ. ನೀಡಿದ್ದಾರೆ! ಇದನ್ನು ಜಾಣ ನಡೆ ಎನ್ನದೆ ಏನೆನ್ನಬೇಕು!?

ಉಳಿದಿದ್ದು ಗಂಗಾ ಕಲ್ಯಾಣ ಯೋಜನೆ

ರಾಜ್ಯಾದ್ಯಂತ 30 ಕೋಟಿ ರೂ. ವೆಚ್ಚದಲ್ಲಿ ಮೀನು ಮಾರಾಟ ಘಟಕ ಹಾಗೂ ಮತ್ಸ್ಯದರ್ಶಿನಿಗಳ ಸ್ಥಾಪನೆ. ರಾಜ್ಯದ ಆಯ್ದ ಮಹಾನಗರ ಪಾಲಿಕೆ ಹಾಗೂ ನಗರಸಭೆಗಳಲ್ಲಿ ಪ್ರಾಯೋಗಿಕವಾಗಿ ಸಂಜೆ ಕಾಲೇಜು ಪ್ರಾರಂಭ. ಅಪೌಷ್ಟಿಕತೆಯಿಂದ ತಾಯಿ ಮತ್ತು ಮಗುವನ್ನು ರಕ್ಷಿಸಲು 5 ಕೋಟಿ ರೂ. ವೆಚ್ಚದಲ್ಲಿ ಭಾರತೀಯ ವೈದ್ಯ ಪದ್ಧತಿ ಆಧರಿಸಿದ “ಪೋಷಣೆ ಮತ್ತು ಜೀವನೋಪಾಯ ಕಾರ್ಯಕ್ರಮ ಜಾರಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ 11 ಜಿಲ್ಲೆಗಳಲ್ಲಿ 17 ತಾತ್ಕಾಲಿಕ ವಸತಿಗೃಹಗಳ ಸೌಲಭ್ಯಗಳನ್ನು ನೀಡಿದ್ದರಲ್ಲಿ ಅಲ್ಲಲ್ಲಿ ಎಸ್ಸಿ-ಎಸ್ಟಿ ಸಮುದಾಯಕ್ಕೆ ಇವುಗಳ ಉಪಯೋಗ ಇದೆಯಾದರೂ ಹೆಚ್ಚಿನ ಪಾಲು ಬಹುಸಂಖ್ಯಾತರಿಗೇ ಹೋಗುತ್ತದೆ. ಹೀಗಾಗಿ ಅಂತಿಮವಾಗಿ ಉಳಿದಿದ್ದು ಮಾತ್ರ ಗಂಗಾ ಕಲ್ಯಾಣ ಯೋಜನೆ. ಗಂಗಾ ಕಲ್ಯಾಣ ಯೋಜನೆಯ ಪಾರದರ್ಶಕ, ಕಾಲಮಿತಿಯ ಅನುಷ್ಠಾನಕ್ಕಾಗಿ “ಅನುಷ್ಠಾನದ ವಿವೇಚನೆ ಫಲಾನುಭವಿಯ ಕೈಗೆ” ಎಂಬ ನೂತನ ವಿಧಾನ ಜಾರಿಗೆ ತಂದಿರುವುದು ಒಂದು ರೀತಿಯ ಸಮಾಧಾನಕರ ಸಂಗತಿಯಷ್ಟೇ.

ಇಡೀ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯ ಈ ಬಾರಿ ಯಡಿಯೂರಪ್ಪನವರು ಶೇ.7.5ರಷ್ಟು ಮೀಸಲಾತಿ ಘೋಷಣೆ ಮಾಡುತ್ತಾರೆ. ವಿವಿಧ ಅನುಕೂಲಗಳನ್ನು ಮಾಡಿಕೊಡುತ್ತಾರೆ ಎಂದು ನಂಬಿ ಚಾತಕಪಕ್ಷಿಯಂತೆ ಕಾಯುತ್ತಿದ್ದರು. ಆದರೆ ಆ ನಿರೀಕ್ಷೆಯನ್ನು ಅವರು ಹುಸಿಗೊಳಿಸಿದ್ದಾರೆ.


ರಮೇಶ್ ಹಿರೇಜಂಬೂರು
  • ಪ್ರತಿಭಾವಂತ ಪತ್ರಕರ್ತ, ಲೇಖಕ. ನಾಡಿನ ಪ್ರಮುಖ ಪತ್ರಿಕೆಗಳು, ಸುದ್ದಿವಾಹಿನಿಗಳಲ್ಲಿ ಕಾರ್ಯ ನಿರ್ವಹಿಸಿರುವ ಅವರು ಫೊಟೋಗ್ರಫಿಯಲ್ಲೂ ಆಸಕ್ತರು.

Tags: bs yediyurappabudget 2021karnatakast reservation demand in karnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಆದಾಯಕ್ಕೂ ಮೀರಿದ ಆಸ್ತಿ; ಎಸಿಬಿ ಖೆಡ್ಡಕ್ಕೆ ಬಿದ್ದ ಚಿಕ್ಕಬಳ್ಳಾಪುರ ನಿರ್ಮಿತಿ ಕೇಂದ್ರದ ನಿರ್ದೇಶಕ; ಕೋಲಾರದಲ್ಲೂ ಶೋಧ, ರಾಜ್ಯದಲ್ಲಿ 28 ಕಡೆ, 9 ಅಧಿಕಾರಿಗಳ  ಮೇಲೆ ಏಕಕಾಲಕ್ಕೆ ದಾಳಿ

ಆದಾಯಕ್ಕೂ ಮೀರಿದ ಆಸ್ತಿ; ಎಸಿಬಿ ಖೆಡ್ಡಕ್ಕೆ ಬಿದ್ದ ಚಿಕ್ಕಬಳ್ಳಾಪುರ ನಿರ್ಮಿತಿ ಕೇಂದ್ರದ ನಿರ್ದೇಶಕ; ಕೋಲಾರದಲ್ಲೂ ಶೋಧ, ರಾಜ್ಯದಲ್ಲಿ 28 ಕಡೆ, 9 ಅಧಿಕಾರಿಗಳ ಮೇಲೆ ಏಕಕಾಲಕ್ಕೆ ದಾಳಿ

Leave a Reply Cancel reply

Your email address will not be published. Required fields are marked *

Recommended

ಡಿಜಿಟಲ್‌ ಮಾಧ್ಯಮಗಳ ನೋಂದಣಿ ಕಡ್ಡಾಯ

ಡಿಜಿಟಲ್‌ ಮಾಧ್ಯಮಗಳ ನೋಂದಣಿ ಕಡ್ಡಾಯ

3 years ago
ಅಂಗನವಾಡಿ ಹಂತದಿಂದಲೇ ಪುಟಾಣಿ ಮಕ್ಕಳಿಗೆ  ಸಿಗಲಿದೆ ವ್ಯವಸ್ಥಿತ ಶಿಕ್ಷಣ: ಡಿಸಿಎಂ

ಅಂಗನವಾಡಿ ಹಂತದಿಂದಲೇ ಪುಟಾಣಿ ಮಕ್ಕಳಿಗೆ ಸಿಗಲಿದೆ ವ್ಯವಸ್ಥಿತ ಶಿಕ್ಷಣ: ಡಿಸಿಎಂ

5 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ