• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಆದಾಯಕ್ಕೂ ಮೀರಿದ ಆಸ್ತಿ; ಎಸಿಬಿ ಖೆಡ್ಡಕ್ಕೆ ಬಿದ್ದ ಚಿಕ್ಕಬಳ್ಳಾಪುರ ನಿರ್ಮಿತಿ ಕೇಂದ್ರದ ನಿರ್ದೇಶಕ; ಕೋಲಾರದಲ್ಲೂ ಶೋಧ, ರಾಜ್ಯದಲ್ಲಿ 28 ಕಡೆ, 9 ಅಧಿಕಾರಿಗಳ ಮೇಲೆ ಏಕಕಾಲಕ್ಕೆ ದಾಳಿ

cknewsnow desk by cknewsnow desk
March 9, 2021
in CHIKKABALLAPUR, KOLAR, STATE
Reading Time: 1 min read
0
ಆದಾಯಕ್ಕೂ ಮೀರಿದ ಆಸ್ತಿ; ಎಸಿಬಿ ಖೆಡ್ಡಕ್ಕೆ ಬಿದ್ದ ಚಿಕ್ಕಬಳ್ಳಾಪುರ ನಿರ್ಮಿತಿ ಕೇಂದ್ರದ ನಿರ್ದೇಶಕ; ಕೋಲಾರದಲ್ಲೂ ಶೋಧ, ರಾಜ್ಯದಲ್ಲಿ 28 ಕಡೆ, 9 ಅಧಿಕಾರಿಗಳ  ಮೇಲೆ ಏಕಕಾಲಕ್ಕೆ ದಾಳಿ
919
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರ/ಬೆಂಗಳೂರು: ಚಿಕ್ಕಬಳ್ಳಾಪುರ, ಕೋಲಾರ ಸೇರಿ ರಾಜ್ಯದ ಹ್ನನೊಂದು ಕಡೆ ರಾಜ್ಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ನಡೆಸಿದೆ. ಆದಾಯಕ್ಕೂ ಮೀರಿದ ಆಸ್ತಿ ಹೊಂದಿರುವ ಸರಕಾರಿ ಅಧಿಕಾರಿಗಳ ಮೇಲೆ ಈ ದಾಳಿ ನಡೆದಿದೆ.

ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆ ಚಿಕ್ಕಬಳ್ಳಾಪುರ ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಕೃಷ್ಣೇಗೌಡ ಮನೆ ಹಾಗೂ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಚಿಕ್ಕಬಳ್ಳಾಪುರ ನಗರದ ಮುಷ್ಟೂರು ರಸ್ತೆಯ ಕೃಷ್ಣೇಗೌಡರ ವಾಸದ ಮನೆ, ಜಿಲ್ಲಾ ನಿರ್ಮಿತಿ ಕೇಂದ್ರ ಕಚೇರಿ ಹಾಗೂ ಕೋಲಾರ ತಾಲ್ಲೂಕಿನ ಯಲಗಲಬುರ್ರೆ ಗ್ರಾಮದ ಅವರ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು, ಕೆಲ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಗೊತ್ತಾಗಿದೆ.

  • ಚಿಕ್ಕಬಳ್ಳಾಪುರ ಜಿಲ್ಲಾ ನಿರ್ಮಿತಿ ಕೇಂದ್ರ

ಎಸ್ಪಿ ಕಲಾ ಕೃಷ್ಣಸ್ವಾಮಿ ನೇತೃತ್ವ

ಬೆಂಗಳೂರು ವಿಭಾಗದ ಎಸಿಬಿ ಎಸ್ಪಿ ಕಲಾ ಕೃಷ್ಣಸ್ವಾಮಿ ನೇತೃತ್ವದಲ್ಲಿ ಕೃಷ್ಣೇಗೌಡರ ಮನೆ ಮೇಲೆ ದಾಳಿ ನಡೆಸಲಾಗಿದೆ. ಕೃಷ್ಣೇಗೌಡ ಅವರ ಚಿಕ್ಕಬಳ್ಳಾಪುರದ ಮುಸ್ಟೂರು ರಸ್ತೆಯಲ್ಲಿನ ಮನೆ ಶೋಧ ಮಾಡುತಿರುವ ಭ್ರಷ್ಟಾಚಾರ ನಿಗ್ರಹ ದಳದ DYSP ಮಂಜುನಾಥ್ ನೇತೃತ್ವದ ತಂಡದಲ್ಲಿ ಇನಸ್ಪೆಕ್ಟರ್ ರವಿಕುಮಾರ್ ಮತ್ತಿತರೆ ಸಿಬ್ಬಂದಿ ಇದ್ದಾರೆ.

ಇನ್ನೆಲ್ಲಿ ದಾಳಿ ನಡೆದಿದೆ?

ಇದೇ ವೇಳೆ ಮಂಗಳವಾರ ಬೆಳಗ್ಗೆಯೇ ಎಸಿಬಿ ಅಧಿಕಾರಿಗಳು ರಾಜ್ಯದ 11 ಜಿಲ್ಲೆಗಳಲ್ಲಿನ ಸುಮಾರು 28 ಕಡೆಗಳಲ್ಲಿ ಕಡೆ ದಾಳಿ ನಡೆಸಿದ್ದಾರೆ. ಕೆಲವಾರು ಇಲಾಖೆಗಳ 9 ಅಧಿಕಾರಿಗಳ ಮನೆಗಳು- ಕಚೇರಿಗಳ ಮೇಲೆ ಎಸಿಬಿ ಮುಗಿಬಿದ್ದಿದೆ.

ಈ ಪೈಕಿ ಚಿಕ್ಕಬಳ್ಳಾಪುರ, ಕೋಲಾರ ಸೇರಿ ರಾಮನಗರ, ಕಾರವಾರ, ಮಂಡ್ಯ, ಉತ್ತರ ಕನ್ನಡ, ಉಡುಪಿ, ಯಾದಗಿರಿ, ಮೈಸೂರು, ದಾವಣಗೆರೆ, ಬೆಳಗಾವಿ ಜಿಲ್ಲೆಗಳಲ್ಲಿ ದಾಳೆ ನಡೆದಿದೆ. ಆದಾಯಕ್ಕೂ ಮೀರಿ ಆಸ್ತಿ ಹೊಂದಿರುವ ಆರೋಪದ ಮೇಲೆ ಒಟ್ಟು ೯ ಅಧಿಕಾರಿಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ.

  • ಚಿಕ್ಕಬಳ್ಳಾಪುರದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಕೃಷ್ಣೇಗೌಡ ಮೇಲೆ ದಾಳಿ ನಡೆಸಿರುವುದು ಜಿಲ್ಲೆಯ ಸರಕಾರಿ ಅಧಿಕಾರಿಗಳ ವಲಯದಲ್ಲಿ ತಲ್ಲಣ ಉಂಟು ಮಾಡಿದೆ. ಅವರ ಮನೆ, ಕಚೇರಿ ಸೇರಿ ಸಹೋದರರ ಮನೆಗಳನ್ನೂ ಎಸಿಬಿ ಜಾಲಾಡಿದೆ.
  • ದಾವಣಗೆರೆಯ ಪ್ಯಾಕ್ಟರಿಸ್ ಆಂಡ್ ಬಾಯ್ಲರೀಸ್ ಸಂಸ್ಥೆಯ ಉಪ ನಿರ್ದೇಶಕ ಕೆ.ಎಂ. ಪ್ರಥಮ್ ಮೇಲೆ ದಾಳಿ ನಡೆದಿದೆ. ಅವರಿಗೆ ಸೇರಿದ್ದೆನ್ನಲಾದ ಬೆಂಗಳೂರಿನ ಸಂಜಯನಗರ ಬಳಿಯ ನಾಗಶೆಟ್ಟಿಹಳ್ಳಿಯ ಮನೆ, ಅದೇ ಸಂಜಯನಗರದಲ್ಲಿರುವ ಅವರ ಸಹೋದರನ ಮನೆ ಹಾಗೂ ದಾವಣಗೆರೆಯ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
  • ಮೈಸೂರಿನ ಬೆಸ್ಕಾಂ ಸೂಪರಿಂಟೆಂಡೆಂಟ್ ಎಂಜಿನಿಯರ್ ಮುನಿ ಗೋಪಾಲರಾಜು ಅವರ ಮೈಸೂರು ಕಚೇರಿ, ಮೈಸೂರಿನಲ್ಲಿನ ಗೋಕುಲಂನಲ್ಲಿನ ನಿವಾಸ, ಕನಕಪುರದ ಮನೆ ಮೇಲೆ ದಾಳಿ ನಡೆಸಲಾಗಿದೆ.
  • ಬೆಳಗಾವಿಯ ಡೆಪ್ಯುಟಿ ಚೀಫ್ ಎಲೆಕ್ಟ್ರಿಕಲ್ ಇನ್ಸ್‌ಪೆಕ್ಟರ್ ಹನಮಂತ ಶಿವಪ್ಪ ಚಿಕ್ಕಣ್ಣನವರ ಮನೆ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿನ ಮನೆ, ಬೆಳಗಾವಿಯ ಕಚೇರಿ, ಅವರ ಹುಟ್ಟೂರು ಜಮಖಂಡಿಯಲ್ಲಿನ ಮನೆ, ಬೆಳಗಾವಿಯ ಫ್ಲಾಟ್ ಮೇಲೆ ದಾಳಿ ನಡೆದಿದೆ.
  • ಬಿಬಿಎಂಪಿಯ ಟೌನ್ ಫ್ಲಾನಿಂಗ್ ವಿಭಾಗದ ಕಿರಿಯ ಸಹಾಯಕ ಎಂಜಿನಿಯರ್ ಕೆ.ಸುಬ್ರಹ್ಮಣ್ಯಂ ಮೇಲೆ ಕೂಡ ದಾಳಿ ನಡೆದಿದ್ದು, ಬೆಂಗಳೂರಿನ ಸಹಕಾರ ನಗರದ್ಲಲಿರುವ ಅವರ ಮನೆ, ಯಲಹಂಕದಲ್ಲಿರುವ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
  • ಮೈಸೂರಿನ ಟೌನ್ ಆಂಡ್ ಕಂಟ್ರಿ ಫ್ಲಾನಿಂಗ್ ಇಲಾಖೆಯ ಜಂಟಿ ನಿರ್ದೇಶಕ ಸುಬ್ರಹ್ಮಣ್ಯ ಕೆ.ವಡ್ಡರ್ ಅವರ
  • ಉಡುಪಿಯಲ್ಲಿನ ಮನೆ, ಕಾರವಾರದಲ್ಲಿರುವ ತಾಯಿಯ ಮನೆ, ಮೈಸೂರಿನಲ್ಲಿರುವ ಬಾಡಿಗೆ ಮನೆ ಹಾಗೂ ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.
  • ಹಾಗೆಯೇ ಮೈಸೂರಿನ ಆರ್ಟಿಓ ಕಚೇರಿಯ ಪ್ರಥಮ ದರ್ಜೆ ಸಹಾಯಕ ಚನ್ನವೀರಪ್ಪ ಅವರೂ ಎಸಿಬಿ ಬಲೆಗೆ ಬಿದ್ದಿದ್ದು, ಅವರಿಗೆ ಸೇರಿದ ಮಂಡ್ಯದ ಕುವೆಂಪು ನಗರದ ಮನೆ, ಹುಟ್ಟೂರು ಹಲಕೆರೆಯಲ್ಲಿನ ಮನೆ ಹಾಗೂ ಮೈಸೂರಿನ ಲಕ್ಷ್ಮೀಪುರಂನಲ್ಲಿರುವ ಕಚೇರಿ ಮೇಲೆ ದಾಳಿ ಮಾಡಲಾಗಿದೆ.
  • ಯಾದಗಿರಿಯ ಬೆಸ್ಕಾಂ ಲೆಕ್ಕಾಧಿಕಾರಿ ರಾಜು ಫತ್ತರ್ ಕೂಡ ಖೆಡ್ಡ್ಕಕೆ ಬಿದ್ದಿದ್ದು, ಯಾದಗಿರಿಯಲ್ಲಿನ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
  • ಬಿಎಂಟಿಎಫ್ ಪೊಲೀಸ್ ಇನ್ಸ್‌ಪೆಕ್ಟರ್ ವಿಕ್ಟರ್ ಸೈಮನ್ ಅವರ ಮೇಲೂ ದಾಳಿ ನಡೆದಿದ್ದು, ಅವರಿಗೆ ಸೇರಿದ ಬೆಂಗಳೂರಿನ ಕಸವನಹಳ್ಳಿಯಲ್ಲಿನ ಮನೆ, ಮೈಸೂರಿನ ಎರಡು ಮನೆ, ಮತ್ತು ಬೆಂಗಳೂರಿನ ಕಚೇರಿ ಮೇಲೆ ದಾಳಿ ನಡೆದಿದೆ.

  • Lead photo: ಕೋಲಾರ ತಾಲ್ಲೂಕಿನ ಯಲಗಲಬುರ್ರೆ ಗ್ರಾಮದಲ್ಲಿನ ಕೃಷ್ಣೇಗೌಡರ ಮನೆ.

Tags: acb raids in karnatakaBengaluruchikkaballapurcorruption in karnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ತಿಮಿಂಗಿಲಗಳನ್ನು ಬಿಟ್ಟು ಸಣ್ಣ ಮೀನುಗಳಿಗೆ ಗಾಳ ಹಾಕಲು ಕುಮ್ಮಕ್ಕು ನೀಡುತ್ತಿರುವ ಪಟ್ಟಭದ್ರರು; ಪ್ರಭಾವಿಗಳಿಗೆ ರಕ್ಷಣೆ, ಗುಡಿಬಂಡೆ ಪೊಲೀಸರನ್ನು ಸಿಕ್ಕಿಸಲು ಷಡ್ಯಂತ್ರ?

ಕಲ್ಲು ಕ್ವಾರಿಯ ಹೊಂಡದಲ್ಲಿ ಬಟ್ಟೆ ಒಗೆಯಲು ಹೋಗಿ ಜೀವ ಕಳೆದುಕೊಂಡ ತಾಯಿ-ಮಗಳು; ಚಿಕ್ಕಬಳ್ಳಾಪುರ ಬಳಿ ದುರಂತ

Leave a Reply Cancel reply

Your email address will not be published. Required fields are marked *

Recommended

ಸಿದ್ದರಾಮಯ್ಯ ʼಗೊಬೆಲಪ್ಪʼ, ʼಬ್ರೋಕರಪ್ಪʼ ಎಂದ ಮಾಜಿ ಸಿಎಂ

ಆಪರೇಷನ್ ಕಮಲವೆಂಬ ಅನೈತಿಕ ಕೂಸಿನ ಬೇನಾಮಿ ಅಪ್ಪ ಯಾರು?

4 years ago
ಚಿಕ್ಕಬಳ್ಳಾಪುರ: ಶ್ರೀಗಂಧ ಚೋರರ ಸೆರೆ

ಚಿಕ್ಕಬಳ್ಳಾಪುರ: ಶ್ರೀಗಂಧ ಚೋರರ ಸೆರೆ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ