• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಸರಕಾರಿ ಶಾಲೆ ಮಕ್ಕಳಿಗೆ ಬೆಳಕು; ವಿದ್ಯಾರ್ಥಿನಿಯರಿಗೆ ಸೋಲಾರ್‌ ದೀಪಗಳನ್ನು ನೀಡಿದ ದಾನಿ ಸಂದೀಪ್ ಬಿ.ರೆಡ್ಡಿ

cknewsnow desk by cknewsnow desk
March 27, 2021
in CHIKKABALLAPUR, NEWS IN USE
Reading Time: 1 min read
0
ಸರಕಾರಿ ಶಾಲೆ ಮಕ್ಕಳಿಗೆ ಬೆಳಕು; ವಿದ್ಯಾರ್ಥಿನಿಯರಿಗೆ ಸೋಲಾರ್‌ ದೀಪಗಳನ್ನು ನೀಡಿದ ದಾನಿ ಸಂದೀಪ್ ಬಿ.ರೆಡ್ಡಿ
920
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರ: ಶಿಕ್ಷಣವು ಮಕ್ಕಳ ಜೀವನದಲ್ಲಿ ಅವರ ಮೌಲ್ಯವನ್ನು ಹೆಚ್ಚು ಮಾಡಲಿದೆ ಹಾಗೂ ದೇಶದ ಅಭಿವೃದ್ದಿಗೂ ಸಹಕಾರಿಯಾಗಲಿದೆ ಎಂದು ಭಗತ್‌ಸಿಂಗ್ ಚಾರಿಟಬಲ್ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಹಾಗೂ ವಾಪಸಂದ್ರ ಸರಕಾರಿ ಬಾಲಕಿಯರ ಪ್ರೌಢಶಾಲೆಯನ್ನು ದತ್ತು ಪಡೆದ ಯುವ ನಾಯಕ ಸಂದೀಪ್ ಬಿ.ರೆಡ್ಡಿ ಹೇಳಿದರು.

ಅವರು ಶನಿವಾರ ನಗರದ ವಾಪಸಂದ್ರ ಸರಕಾರಿ ಬಾಲಕಿಯರ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ಹಾಗೂ ಸೊಲಾರ್ ದೀಪಗಳನ್ನು ವಿತರಣೆ ಮಾಡಿ ಮಾತನಾಡಿದರು.

ಗುಣಾತ್ಮಕ ಶಿಕ್ಷಣದಿಂದ ಮಕ್ಕಳ ಶೈಕ್ಷಣಿಕ ಮೌಲ್ಯಗಳು ಬಲಿಷ್ಠಗೊಳ್ಳಲಿವೆ, ಅದಕ್ಕೆ ಪೂರಕವಾಗಿ ಶಿಕ್ಷಕರು ಕ್ರಮಬದ್ದವಾದ ಭೋಧನೆ ಮಾಡಬೇಕು. ಪ್ರಾಥಮಿಕ ಹಾಗೂ ಪ್ರೌಢ ಹಂತದಿಂದಲೇ ಶಿಕ್ಷಣದ ಮೌಲ್ಯ ಅರಿಯುವುದಲ್ಲದೆ, ಅದರ ಲಾಭ ಪಡೆದು ಉನ್ನತ ಮಟ್ಟದಲ್ಲಿ ಅವಕಾಶ ಸಿಕ್ಕಾಗ ಸಮಾಜದ ಅಭಿವೃದ್ಧಿಗೆ ಕಿಂಚಿತ್ತಾದರೂ ಸೇವೆ ಮಾಡುವ ಗುಣವನ್ನು ರೂಢಿಸಿಕೊಳ್ಳಬೇಕು. ನಮ್ಮ ಸ್ವಶ್ರಮದಿಂದ ಇನ್ನಿತರೆ ಬಡ ಮಕ್ಕಳಿಗೆ ನೆರವಾಗಿ ಸಮಸಮಾಜ ನಿರ್ಮಾಣದತ್ತ ನಮ್ಮ ಚಿತ್ತ ಹರಿಸಬೇಕು ಎಂದು ಅವರು ನುಡಿದರು.

ನಮ್ಮ ಜನ, ನಮ್ಮ ನಾಡು ನಮ್ಮ ದೇಶದ ಹಸನು ಮಾಡುವ ಸಂಕಲ್ಪವನ್ನು ತೊಡಬೇಕು. ನಾನು ನನ್ನ ಕರ್ತವ್ಯ ಎಂದು ತಿಳಿದು ವಿದ್ಯಾರ್ಥಿಗಳಾದ ನಿಮ್ಮ ಜತೆಗಿದ್ದು ಶಾಲಾ ಅಭಿವೃದ್ದಿಗೆ ಪೂರಕ ವಾತಾವರಣ ಕಲ್ಪಿಸಲು ಪಣ ತೊಟ್ಟಿದ್ದೇನೆ. ಶಾಲೆ ಮತ್ತು ಶಾಲೆಯ ವಿದ್ಯಾರ್ಥಿಗಳು ಸಮಸಮಾಜ ನಿರ್ಮಾಣ ಮಾಡುವತ್ತ ಒಂದಷ್ಡು ಬದಲಾವಣೆಯಾದರೆ ಸಾಕೆಂಬುದು ನನ್ನ ಭಾವನೆ ಅದಕ್ಜೆ ಅನುಗುಣವಾಗಿ ನನ್ನ ಶ್ರಮದ ಅಲ್ಪ ಲಾಭವನ್ನು ಸಮಾಜದ ಒಳಿತಿಗೆ ವಿನಿಯೋಗಿಸುತಿದ್ದೆನೆ ಎಂದು ಅವರ ಹೇಳಿದರು.

ವಾಪಸಂದ್ರ ಸರಕಾರಿ ಪ್ರೌಢಶಾಲೆ ದತ್ತು

ಇನ್ನು ಸರಕಾರಿ ಶಾಲೆಗಳು ಖಾಸಗಿ ಶಾಲೆಗಳಿಗಿಂತ‌ ವಿಭಿನ್ನವಾಗಿ ಕಾಣಬೇಕು ಎಂಬುದು ನನ್ನ ಆಸೆ. ಆ‌ ನಿಟ್ಟಿನಲ್ಲಿ ವಾಪಸಂದ್ರ ಸರಕಾರಿ ಪ್ರೌಢಶಾಲೆಯನ್ನು ದತ್ತು ಪಡೆದಿದ್ದೆನೆ. ಕೇವಲ ಇದೊಂದು ಶಾಲೆ ಮಾತ್ರವಲ್ಲ, ಇಡೀ ತಾಲ್ಲೂಕಿನ ಸರಕಾರಿ ಶಾಲೆಗಳು ಎಲ್ಲಾ ವ್ಯವಸ್ಥಿತ ರೀತಿಯಲ್ಲಿ ಬದಲಾವಣೆಯಾಗಿ ಮೇಲ್ಪಂಕ್ತಿಯಲ್ಲಿ ಕಾಣಬೇಕು. ಆಗ ತಂತಾನೆ ವಿದ್ಯಾರ್ಥಿಗಳು ಸರಕಾರಿ ಶಾಲೆಗಳತ್ತ ಮುಖ ಮಾಡಲಿವೆ. ಎಲ್ಲವನ್ನು ಸರಕಾರ ಮಾಡಲಾಗದು. ಹಾಗಂತ ಎಲ್ಲವನ್ನು ನಾವೊಬ್ಬರೇ ಮಾಡಲು ಸಾದ್ಯವಿಲ್ಲ. ಇದಕ್ಕೆ ಸಹಭಾಗಿತ್ವಗಳು ಅತಿ ಮುಖ್ಯ ಹೀಗಾದಾಗ ಗ್ರಾಮೀಣ ಮಕ್ಕಳ ಅದರಲ್ಲೂ ಇಂಥಹ ಶಾಲೆಗಳಲ್ಲಿ ಕ್ರಮಬದ್ದವಾದ ಶಿಕ್ಷಣ ಸಿಗಲು ಸಾಧ್ಯವಾಗಿರಲಿದೆ ಎಂದರು ಅವರು.

ಇನ್ನು ನಾನು ದತ್ತು ಪಡೆದಿರುವ ಈ ಶಾಲೆಯಲ್ಲಿ ಮುಖ್ಯಶಿಕ್ಷಕರ ಹಾದಿಯಾಗಿ ಎಲ್ಲಾ ಶಿಕ್ಷಕರ ಬದ್ಧತೆ ನನಗೆ ಇಷ್ಟವಾಗಿದೆ. ಇದು ಮಕ್ಕಳ ಕಲಿಕೆಗೆ ಪರಿಣಾಮಕಾರಿಯಾಗಿ ನೆರವಾಗಲಿದೆ. ದತ್ತು ಪಡೆದ ಈ ಶಾಲೆಯ ಅಭಿವೃದ್ದಿಯ ಮೇಲೆ ನಾನು ಸಾಕಷ್ಟು ಕನಸು ಇಟ್ಟುಕೊಂಡು ಅಭಿವೃದ್ಧಿಗೆ ಮುಂದಾಗಿದ್ದೇನೆ. ಇವೆಲ್ಲವು ಮಕ್ಕಳ ಕಲಿಕೆಗಷ್ಟೇ ಸೀಮಿತವಾಗಬೇಕು. ಅವರು ಸತ್ಪ್ರಜೆಗಳಾಗಿ ಶಿಕ್ಷಣದಲ್ಲಿ ಹೊರಹೊಮ್ಮಬೇಕು ಎಂದು ಸಂದೀಪ್‌ ರೆಡ್ಡಿ ಹೇಳಿದರು.

ಇನ್ನು ಮಕ್ಕಳ ಬಗ್ಗೆ ಕೆಲ ನೀತಿ ಮಾತುಗಳನ್ನು ತಿಳಿಹೇಳಿದ ಸಂದೀಪ್ ರೆಡ್ಡಿ; ಶಿಕ್ಷಣ ಪಡೆಯುವ ಹಂತದಲ್ಲಿ ಕಲಿಕೆಗೆ ಯಾವುದರಲ್ಲೂ ಕೊರತೆ ಎಂದು ಭಾವಿಸಬೇಡಿ. ಅದನ್ನು ಪೂರ್ಣಗೊಳಿಸಲು ನಾನಿದ್ದೇನೆ. ಶ್ರದ್ಧೆ ಹಾಗೂ ಶಿಸ್ತು ಮೈಗೂಡಿಸಿಕೊಂಡು ಮೊಬೈಲ್ ಗೀಳಿಗೆ ಒಳಗಾಗದೆ ಕಲಿಯಬೇಕೆಂದು ಕಿವಿಮಾತು ಹೇಳಿದರು.

ಸರಕಾರಿ ಬಾಲಕಿಯರ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಕೃಷ್ಣಕುಮಾರಿ ಮಾತನಾಡಿ; ಜೀವನದ ಭದ್ರ ಬುನಾದಿಯು ಒಳ್ಳೆಯ ಶಿಕ್ಷಣದ ಮೇಲೆ ಅಡಗಿದೆ. ಅಂಥಹ ಶಿಕ್ಷಣ ನೀಡಲು ಶಿಕ್ಷಕರಾಗಿ ನಾವಿದ್ದೇವೆ. ಸರಕಾರ ಶಿಕ್ಷಣಕ್ಕೆ ಸಾಕಷ್ಟು ಹಣ ವಿನಿಯೊಗಿಸುತ್ತಿದೆ. ಅದಕ್ಕೆ ಪೂರಕವಾಗಿ ಆಗಬೇಕಿರುವ ಇನ್ನಷ್ಟು ಕೊರತೆ ನೀಗಿಸಲು ಸಂದೀಪ್ ಬಿ. ರೆಡ್ಡಿ ಅವರಂಥ ದಾನಿಗಳು ನಮ್ಮ ಶಾಲೆಗೆ ಸಿಕ್ಕಿರುವುದು ಸಂತೋಷದ ಸಂಗತಿ ಎಂದರು.

ಇದೇ ವೇಳೆ ಸಂದೀಪ್ ರೆಡ್ಡಿ ಅವರು ಎಲ್ಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳು ಹಾಗೂ ವಿದ್ಯುತ್‌ ದೀಪ ವಂಚಿತ ವಿದ್ಯಾರ್ಥಿನಿಯರಿಗೆ ಸೊಲಾರ್ ದೀಪವನ್ನು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ಸದಸ್ಯರುಗಳಾದ ಹೆಚ್.ಕೆ. ದೇವರಾಜ್, ಮಲ್ಲಿಕಾ, ಪವನ್, ಮಂಜುನಾಥ್, ಯುವ ಮುಖಂಡ ಕಿರಣ್, ಶಾಲಾ ಸಹ ಶಿಕ್ಷಕರಾದ ನರಸಿಂಹಮೂರ್ತಿ, ಮುನಿ ನಾರಾಯಣಸ್ವಾಮಿ, ಚಿಕ್ಕನರಸರೆಡ್ಡಿ, ಎನ್.ಶಿವಣ್ಣ, ಆರ್.ಟಿ.ಮಹಾಂತೇಶ್, ನಾಜೀಮಾ, ಸಂಗೀತ ಶಿಕ್ಷಕ ಮಹಾಲಿಂಗಯ್ಯ, ಕ್ರೀಡಾ ಶಿಕ್ಷಕಿ ರಾಧಾಮಣಿ ಸೇರಿದಂತೆ ಇನ್ನಿತರ ಭೋಧಕೇತರ ಸಿಬ್ಬಂದಿ ಹಾಜರಿದ್ದರು.

Tags: chikkaballapurgovernment girls high schoolnote booksandeep redyysolar light
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಮಾರ್ಚ್‌ 1ರಿಂದ ದ್ವಿತೀಯ ಪಿಯು, 20ರಿಂದ sslc ಪರೀಕ್ಷೆ

by cknewsnow desk
December 3, 2024
0

ಎಲ್ಲ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

by cknewsnow desk
August 12, 2024
0

1,000 ಗ್ರಾಮ ಲೆಕ್ಕಿಗರು, 750 ಸರ್ವೇಯರ‍್ಸ್, 36 ಎಡಿಎಲ್‌ಆರ್‌ಗಳ ನೇಮಕ

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

kptclನಲ್ಲಿ 902 ಹುದ್ದೆಗೆ ನೇಮಕ

kptclನಲ್ಲಿ 902 ಹುದ್ದೆಗೆ ನೇಮಕ

by cknewsnow desk
May 24, 2024
0

ನೇಮಕಾತಿ ಆದೇಶ ನೀಡಿದ ಸರಕಾರ

ಕೆಸಿಇಟಿ-24 ಪರೀಕ್ಷೆ: ಜನವರಿ 10ರಿಂದ online ಅರ್ಜಿ ಸಲ್ಲಿಕೆಗೆ ಅವಕಾಶ

CET EXAM; ಔಟ್ ಆಫ್ ಸಿಲೆಬಸ್ ಪ್ರಶ್ನೆ ಕೈಬಿಟ್ಟು ಮೌಲ್ಯಮಾಪನ; ವಿದ್ಯಾರ್ಥಿಗಳಿಗೆ ನಿರಾಳ

by cknewsnow desk
April 28, 2024
0

ತಜ್ಞರ ಶಿಫಾರಸು ಒಪ್ಪಿಕೊಂಡ ರಾಜ್ಯ ಸರಕಾರ

Next Post
ಶಿರಾ ಗೆದ್ದು ರಾಜ್ಯವನ್ನು ಗೆಲ್ಲುತ್ತೇವೆ; ಆದರೆ, ಉಪ ಚುನಾವಣೆಯಿಂದ ಸರಕಾರ ಬೀಳಲ್ಲ ಎಂದ ಡಿಕೆಶಿ

ರಮೇಶ್‌ ಜಾರಕಿಹೊಳಿ V/S ಡಿ.ಕೆ.ಶಿವಕುಮಾರ್‌; ಸಾಹುಕಾರನನ್ನು ಬಿಜೆಪಿ ದೂರ ಇಟ್ಟಿದ್ದಾಯಿತು! ಇನ್ನು ಕನಕಪುರ ಬಂಡೆಗೆ ಕಾದಿದೆಯಾ ಕಾಂಗ್ರೆಸ್‌ ಪಕ್ಷದಲ್ಲಿನ ಟ್ರಬಲ್‌

Leave a Reply Cancel reply

Your email address will not be published. Required fields are marked *

Recommended

ಜನರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಕೊನೆಗೂ ನೈಟ್‌ ಕರ್ಫ್ಯೂ ವಾಪಸ್‌; ಆ ವೈಕುಂಠಾಧಿಪತಿಗೆ ಮಣಿಯಿತಾ ಯಡಿಯೂರಪ್ಪ ಸರಕಾರ

ಜನರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಕೊನೆಗೂ ನೈಟ್‌ ಕರ್ಫ್ಯೂ ವಾಪಸ್‌; ಆ ವೈಕುಂಠಾಧಿಪತಿಗೆ ಮಣಿಯಿತಾ ಯಡಿಯೂರಪ್ಪ ಸರಕಾರ

4 years ago
ಹಣ ವಸೂಲಿ: ಸಚಿವ ಚೆಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟ ಕೃಷಿ ಅಧಿಕಾರಿಗಳು

ಚಲುವರಾಯಸ್ವಾಮಿ ಜನ್ಮ ಜಾಲಾಡಿದ ಸುರೇಶ್‌ ಗೌಡ

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ