• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ 50 ಹಾಸಿಗೆಗಳ ಘಟಕ ಅಗಸ್ಟ್‌ಗೆ ಆರಂಭ: ಒಪ್ಪಂದಕ್ಕೆ ಸಹಿ ಹಾಕಿದ ಎರಡೂ ಆಸ್ಪತ್ರೆಗಳ ಮುಖ್ಯಸ್ಥರು 

cknewsnow desk by cknewsnow desk
March 31, 2021
in NEWS IN USE
Reading Time: 1 min read
0
ಕಮ್ಯುನಿಸ್ಟರು ಮತ್ತು ಕಾಂಗ್ರೆಸ್‌ 7 ದಶಕದ ಆಡಳಿತದಿಂದ  ಭ್ರಮನಿರಸನಗೊಂಡ ಕೇರಳದಲ್ಲಿ ಬಿಜೆಪಿಯತ್ತ ಒಲವು; ದೇವರ ನಾಡಿನಲ್ಲಿ ಬದಲಾವಣೆಯ ಗಾಳಿ ಎಂದ ಡಿಸಿಎಂ
915
VIEWS
FacebookTwitterWhatsuplinkedinEmail

ಬೆಂಗಳೂರು: ಪ್ರತಿಷ್ಟಿತ ಜಯದೇವ ಹೃದ್ರೋಗ ಆಸ್ಪತ್ರೆಯ ಇನ್ನೊಂದು ಘಟಕ ಮಲ್ಲೇಶ್ವರದ ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಸ್ಥಾಪನೆಯಾಗಲಿದ್ದು, ಈ ಸಂಬಂಧ ಎರಡೂ ಸಂಸ್ಥೆಗಳ ನಡುವೆ ಮಂಗಳವಾರ ಒಪ್ಪಂದ ಆಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ತಿಳಿಸಿದರು.

ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್‌ ಹಾಗೂ ಕೆ.ಸಿ.ಜನರಲ್‌ ಆಸ್ಪತ್ರೆ ಅಧೀಕ್ಷಕ ಡಾ.ವೆಂಕಟೇಶಯ್ಯ ಅವರು ಒಪ್ಪಂದಕ್ಕೆ ಅಂಕಿತ ಹಾಕಿದ್ದು, ಇದೇ ಅಗಸ್ಟ್‌ ತಿಂಗಳ ಹೊತ್ತಿಗೆ ಈ ಘಟಕ ಕಾರ್ಯಾರಂಭ ಮಾಡಲಿದೆ ಎಂದು ಡಿಸಿಎಂ ಹೇಳಿದರು.

ಉತ್ಕೃಷ್ಟ ಮಟ್ಟದ ಹೃದ್ರೋಗ ಚಿಕಿತ್ಸೆ, ಆರೋಗ್ಯ ಸೌಲಭ್ಯಗಳಿಗೆ ಹೆಸರಾದ ಜಯದೇವ ಆಸ್ಪತ್ರೆಯ ಘಟಕ, ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ತೆರೆಯಲಿದೆ.

50 ಹಾಸಿಗೆಯ ಸ್ಯಾಟಲೈಟ್ ಸೆಂಟರ್ ಆರಂಭಿಸಲು MoU ಸಹಿ ಹಾಕಲಾಗಿದ್ದು ಬೆಂಗಳೂರು ಉತ್ತರ ಭಾಗದ ಜನತೆಗೆ ಉತ್ತಮ ಆರೋಗ್ಯ ಸೌಲಭ್ಯ ಒದಗಿಸುವ ನನ್ನ ಬಹುದಿನಗಳ ಕನಸು ನನಸಾಗಿದೆ.
1/2 pic.twitter.com/fIKZ2Uf1JH

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) March 30, 2021

ಬೆಂಗಳೂರು ಉತ್ತರದ ಜನರಿಗೆ ಅನುಕೂಲ

ಮಲ್ಲೇಶ್ವರ ಮತ್ತು ಸುತ್ತ ಮುತ್ತಲಿನ ಪ್ರದೇಶಗಳೂ ಸೇರಿದಂತೆ ಬೆಂಗಳೂರು ಉತ್ತರ ಭಾಗದ ಜನರಿಗೆ ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಸ್ಥಾಪನೆ ಆಗುತ್ತಿರುವ ಹೃದ್ರೋಗ ಘಟಕ ಹೆಚ್ಚು ಉಪಯುಕ್ತವಾಗುತ್ತಿದೆ. ಜಯದೇವ ಹೃದ್ರೋಗ ಘಟಕದಲ್ಲಿ ಸಿಗುವ ಎಲ್ಲ ಸೌಲಭ್ಯಗಳು ಇಲ್ಲಿಯೂ ಲಭ್ಯ ಇರುತ್ತವೆ ಎಂದು ಅವರು ಮಾಹಿತಿ ನೀಡಿದರು.

ಕೆ.ಸಿ.ಜನರಲ್‌ ಆಸ್ಪತ್ರೆಯ ಎರಡನೇ ಮಹಡಿಯಲ್ಲಿ 20,000 ಚದರ ಅಡಿ ಜಾಗದಲ್ಲಿ ತಲೆ ಎತ್ತಲಿರುವ ಈ ಘಟಕದಲ್ಲಿ 50  ಸುಸಜ್ಜಿತ ಬೆಡ್‌ಗಳಿರುತ್ತವೆ. ಹೃದಯದ ಸಮಸ್ಯೆ ಕಂಡುಬಂದಾಗ ಈ ಭಾಗದ ಜನರು ಜಯದೇವ ಆಸ್ಪತ್ರೆಗೆ ಹೋಗುವ ಅಗತ್ಯವಿಲ್ಲ. ಟ್ರಾಫಿಕ್‌ ಮತ್ತಿತರೆ ಸಮಸ್ಯೆಗಳನ್ನು ಎದುರಿಸುವ ಅಗತ್ಯವಿಲ್ಲ. ಮಲ್ಲೇಶ್ವರದಲ್ಲಿ ಜಯದೇವ ಆಸ್ಪತ್ರೆಯ ಘಟಕವನ್ನು ಸ್ಥಾಪಿಸಬೇಕು ಎಂಬುದು ನನ್ನ ಬಹುದಿನಗಳ ಕನಸಾಗಿತ್ತು. ಈ ಘಟಕ ಸ್ಥಾಪಿಸಲು ಒಪ್ಪಿಗೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ, ಸೂಕ್ತ ಸಹಕಾರ ನೀಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರಿಗೂ ನನ್ನ ಕೃತಜ್ಞತೆಗಳು ಎಂದು ಡಿಸಿಎಂ ಹೇಳಿದರು.

ಒಪ್ಪಂದದ ಪ್ರಕಾರ, ಜಯದೇವ ಹೃದ್ರೋಗ ಘಟಕಕ್ಕೆ ಅಗತ್ಯವಾದ ಜಾಗ, ನೀರು ಮತ್ತಿತರೆ ಮೂಲಸೌಕರ್ಯಗಳನ್ನು ಕೆ.ಸಿ.ಜನರಲ್‌ ಆಸ್ಪತ್ರೆ ಒದಗಿಸುತ್ತದೆ. ಉಳಿದಂತೆ ವೈದ್ಯಕೀಯ ಪರಿಕರಗಳು, ಯಂತ್ರೋಪಕರಣಗಳು, ಸಿಬ್ಬಂದಿ ಇತ್ಯಾದಿಗಳನ್ನು ಜಯದೇವ ಆಸ್ಪತ್ರೆ ವ್ಯವಸ್ಥೆ ಮಾಡಿಕೊಳ್ಳಲಿದೆ ಎಂದು ಅವರು ತಿಳಿಸಿದರು.

ಕೆಸಿಜೆಯಲ್ಲಿ ಇನ್ನಷ್ಟು ಸೌಲಭ್ಯ

ಈಗಾಗಲೇ ಆಸ್ಪತ್ರೆಯಲ್ಲಿ 100 ಹಾಸಿಗೆಗಳ ಸುಸಜ್ಜಿತ ಮಾಡ್ಯುಲರ್  ತುರ್ತು ನಿಗಾ ಘಟಕವನ್ನು ಸ್ಥಾಪನೆ ಮಾಡಲಾಗಿದೆ. ಇದರ ಜತೆಗೆ, ಟ್ರಾಮಾ ಕೇಂದ್ರವನ್ನು ಸ್ಥಾಪನೆ ಮಾಡುವ ಉದ್ದೇಶವೂ ಇದೆ. ಇವುಗಳ ಜತೆಗೆ, ಕೆಸಿ ಜನರಲ್‌ ಆಸ್ಪತ್ರೆಯನ್ನು ಇನ್ನೂ ಅತ್ಯುತ್ತಮವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

Tags: heartjayadeva hospital bangalorejayadeva satellite centerkc general hospital
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಮಾರ್ಚ್‌ 1ರಿಂದ ದ್ವಿತೀಯ ಪಿಯು, 20ರಿಂದ sslc ಪರೀಕ್ಷೆ

by cknewsnow desk
December 3, 2024
0

ಎಲ್ಲ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

by cknewsnow desk
August 12, 2024
0

1,000 ಗ್ರಾಮ ಲೆಕ್ಕಿಗರು, 750 ಸರ್ವೇಯರ‍್ಸ್, 36 ಎಡಿಎಲ್‌ಆರ್‌ಗಳ ನೇಮಕ

kptclನಲ್ಲಿ 902 ಹುದ್ದೆಗೆ ನೇಮಕ

kptclನಲ್ಲಿ 902 ಹುದ್ದೆಗೆ ನೇಮಕ

by cknewsnow desk
May 24, 2024
0

ನೇಮಕಾತಿ ಆದೇಶ ನೀಡಿದ ಸರಕಾರ

ಕೆಸಿಇಟಿ-24 ಪರೀಕ್ಷೆ: ಜನವರಿ 10ರಿಂದ online ಅರ್ಜಿ ಸಲ್ಲಿಕೆಗೆ ಅವಕಾಶ

CET EXAM; ಔಟ್ ಆಫ್ ಸಿಲೆಬಸ್ ಪ್ರಶ್ನೆ ಕೈಬಿಟ್ಟು ಮೌಲ್ಯಮಾಪನ; ವಿದ್ಯಾರ್ಥಿಗಳಿಗೆ ನಿರಾಳ

by cknewsnow desk
April 28, 2024
0

ತಜ್ಞರ ಶಿಫಾರಸು ಒಪ್ಪಿಕೊಂಡ ರಾಜ್ಯ ಸರಕಾರ

ದ್ವಿತೀಯ ಪಿಯುಸಿ ಫಲಿತಾಂಶ: ಧೂಳೆಬ್ಬಿಸಿದ ಬಾಲಕಿಯರು

ದ್ವಿತೀಯ ಪಿಯುಸಿ ಫಲಿತಾಂಶ: ಧೂಳೆಬ್ಬಿಸಿದ ಬಾಲಕಿಯರು

by cknewsnow desk
April 11, 2024
0

ವಿಜ್ಞಾನದಲ್ಲಿ ವಿದ್ಯಾಲಕ್ಷ್ಮಿ ಪ್ರಥಮ

ಬೆಳಗ್ಗೆ 10.15 ಗಂಟೆಗೆ ದ್ವಿತೀಯ PUC ಪರೀಕ್ಷೆ; ಶುಭವಾಗಲಿ ವಿದ್ಯಾರ್ಥಿಗಳೇ

ನಾಳೆ ಬೆಳಗ್ಗೆ 10 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ

by cknewsnow desk
April 9, 2024
0

11 ಗಂಟೆ ನಂತರ ಅಂತರ್ಜಾಲದಲ್ಲಿ ಫಲಿತಾಂಶ ನೋಡಬಹುದು

Next Post
ವಿಮೆ ಕಂಪನಿಗಳನ್ನು ವಿನಾಕಾರಣ ಉದ್ಧಾರ ಮಾಡುತ್ತಿದ್ದೇವೆ ಎಂದು ಕಿಡಿಕಿಡಿಯಾದ ಸಚಿವರು; ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಟ್ಟಿದ ಪ್ರೀಮಿಯಂ ₹40 ಲಕ್ಷ, ಸಿಕ್ಕಿದ ವಿಮೆ ₹19 ಲಕ್ಷ!

ವಿಮೆ ಕಂಪನಿಗಳನ್ನು ವಿನಾಕಾರಣ ಉದ್ಧಾರ ಮಾಡುತ್ತಿದ್ದೇವೆ ಎಂದು ಕಿಡಿಕಿಡಿಯಾದ ಸಚಿವರು; ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಟ್ಟಿದ ಪ್ರೀಮಿಯಂ ₹40 ಲಕ್ಷ, ಸಿಕ್ಕಿದ ವಿಮೆ ₹19 ಲಕ್ಷ!

Leave a Reply Cancel reply

Your email address will not be published. Required fields are marked *

Recommended

ಭ್ರಷ್ಟಾಚಾರ, ಪಕ್ಷಾಂತರ, ಪೆಗಾಸಸ್ ಕದ್ದಾಲಿಕೆಯಿಂದ ರಾಜ್ಯ ಬಿಜೆಪಿ ಸರಕಾರ ರಚನೆ: ಸುರ್ಜೆವಾಲ

ಭ್ರಷ್ಟಾಚಾರ, ಪಕ್ಷಾಂತರ, ಪೆಗಾಸಸ್ ಕದ್ದಾಲಿಕೆಯಿಂದ ರಾಜ್ಯ ಬಿಜೆಪಿ ಸರಕಾರ ರಚನೆ: ಸುರ್ಜೆವಾಲ

5 years ago
ಉಕ್ರೇನ್‌ʼನಿಂದ ಸುರಕ್ಷಿತವಾಗಿ ಮರಳಿದ ಗುಡಿಬಂಡೆ ನವನೀತ್‌, ಗೌರಿಬಿದನೂರಿನ ಗೌತಮ್

ಉಕ್ರೇನ್‌ʼನಿಂದ ಸುರಕ್ಷಿತವಾಗಿ ಮರಳಿದ ಗುಡಿಬಂಡೆ ನವನೀತ್‌, ಗೌರಿಬಿದನೂರಿನ ಗೌತಮ್

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ