• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಸರಕಾರದ ಆಡಳಿತದಲ್ಲಿ ವಿಜಯೇಂದ್ರ ಮತ್ತು ಸಿಎಂ ಕುಟುಂಬದವರ ಹಸ್ತಕ್ಷೇಪ ಇಲ್ಲ ಎಂದು ಮತ್ತೊಮ್ಮೆ ಪುನುರುಚ್ಛರಿಸಿದ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್

cknewsnow desk by cknewsnow desk
April 5, 2021
in POLITICS
Reading Time: 1 min read
0
ಸರಕಾರದ ಆಡಳಿತದಲ್ಲಿ ವಿಜಯೇಂದ್ರ ಮತ್ತು ಸಿಎಂ ಕುಟುಂಬದವರ ಹಸ್ತಕ್ಷೇಪ ಇಲ್ಲ ಎಂದು ಮತ್ತೊಮ್ಮೆ ಪುನುರುಚ್ಛರಿಸಿದ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್
911
VIEWS
FacebookTwitterWhatsuplinkedinEmail

ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಹಿರಿಯ ಸಚಿವ ಈಶ್ವರಪ್ಪ ನಡುವೆ ವಿವಾದ ಉಂಟಾಗಿರುವ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ ವಿಜಯೇಂದ್ರ ಮತ್ತು ಸಿಎಂ ಮನೆ ಪರವಾಗಿ ಬ್ಯಾಟಿಂಗ್‌ ಮಾಡುತ್ತಿರುವ ಸಚಿವ ಸೋಮಶೇಖರ್‌, ಮತ್ತೂ ಅದನ್ನೇ ಮುಂದುವರಿಸಿದ್ದಾರೆ.


ಮೈಸೂರು: ಸರಕಾರದ ಆಡಳಿತದಲ್ಲಿ ಬಿ.ವೈ.ವಿಜಯೇಂದ್ರ ಸೇರಿದಂತೆ ಮುಖ್ಯಮಂತ್ರಿಗಳ ಕುಟುಂಬದವರ ಹಸ್ತಕ್ಷೇಪವಿಲ್ಲ. ಇದು ಸತ್ಯಕ್ಕೆ ದೂರವಾದ ಆರೋಪ ಎಂದು ಸಹಕಾರ ಸಚಿವ ಎಸ್‌.ಟಿ‌.ಸೋಮಶೇಖರ್ ಪುನರುಚ್ಛರಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಹಿರಿಯ ಸಚಿವ ಈಶ್ವರಪ್ಪ ನಡುವೆ ವಿವಾದ ಉಂಟಾಗಿರುವ ಹಿನ್ನೆಲೆಲ್ಲಿ ಕಳೆದೆರಡು ದಿನಗಳಿಂದ ವಿಜಯೇಂದ್ರ ಮತ್ತು ಸಿಎಂ ಮನೆ ಪರವಾಗಿ ಬ್ಯಾಟಿಂಗ್‌ ಮಾಡುತ್ತಿರುವ ಸಚಿವ ಸೋಮಶೇಖರ್‌, ಮತ್ತೂ ಅದನ್ನೇ ಮುಂದುವರಿಸಿದ್ದಾರೆ.

ಸೋಮವಾರ ಮೈಸೂರಿನ ರೈಲ್ವೆ ನಿಲ್ದಾಣದ ಬಳಿ ಮಾಜಿ ಉಪ ಪ್ರಧಾನಿ ದಿವಂಗತ ಡಾ.ಬಾಬು ಜಗಜೀವನರಾಂ ಅವರ ಜನ್ಮದಿನೋತ್ಸವದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರ ಜತೆ ಮಾತನಾಡಿದರು.

ಕೆಲವರು ಮುಖ್ಯಮಂತ್ರಿ ಅವರ ಪುತ್ರ ವಿಜಯೇಂದ್ರ ಅವರ ಹೆಸರೇಳಿ ರಾಜಕೀಯ ಬೇಳೆ ಬೆಯಿಸಿಕೊಳ್ಳುತ್ತಿದ್ದಾರೆ. ಸರಕಾರದಲ್ಲಿ ಮಂತ್ರಿಗಳಿದ್ದೀವಿ, ಜಿಲ್ಲಾಡಳಿತ ಇದೆ, ಶಾಸಕರಿದ್ದಾರೆ, ಆಡಳಿತ ನಡೆಸುವವರಿದ್ದಾರೆ‌. ಆದರೆ ಪದೇಪದೆ ಮುಖ್ಯಮಂತ್ರಿ ಅವರ ಕುಟುಂಬದವರನ್ನು ಎಳೆದು ತರುವುದು ಸರಿಯಲ್ಲ ಎಂದು ಅವರು ತಿಳಿಸಿದರು.

ಮುಖ್ಯಮಂತ್ರಿಗಳು ಮಾಡುವ ಒಳ್ಳೆಯ ಕೆಲಸಗಳನ್ನು ವಿರೋಧ ಪಕ್ಷದವರಿಂದ ಹೇಳಲು ಸಾಧ್ಯವಾಗುತ್ತಿಲ್ಲ. ಕೆಲವರು ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಈ ರೀತಿಯ ಆರೋಪ ಮಾಡುತ್ತಿದ್ದಾರೆ‌. ನಮ್ಮ ಸಹಕಾರ ಇಲಾಖೆಗೂ ಯಾರೂ ಹಸ್ತಕ್ಷೇಪ ಮಾಡಿಲ್ಲ. ಮೈಸೂರು ಉಸ್ತುವಾರಿ ಆಡಳಿತವನ್ನು ಸ್ವತಂತ್ರವಾಗಿ ನಡೆಸಲು ಮುಕ್ತ ಅವಕಾಶವಿದೆ ಎಂದು ಅವರು ಸ್ಪಷ್ಟನೆ ನೀಡಿದರು.

ವಿಜಯೇಂದ್ರ ಪಕ್ಷಕ್ಕೆ ಮಾತ್ರ ಸೀಮಿತ

ವಿಜಯೇಂದ್ರ ಅವರು ಪಕ್ಷದಲ್ಲಿ ಉಪಾಧ್ಯಕ್ಷರಾಗಿದ್ದಾರೆ. ಅವರ ಸಲಹೆ ಪಕ್ಷಕ್ಕೆ ಮಾತ್ರ ಸೀಮಿತ. ಸರ್ಕಾರ ನಡೆಸಲು ಮುಖ್ಯಮಂತ್ರಿಗಳು ಸಮರ್ಥರಿದ್ದಾರೆ‌. ನಾಲ್ಕು ಭಾರಿ ಮುಖ್ಯಮಂತ್ರಿಗಳಾಗಿ ಕೆಲಸ ಮಾಡಿದ ಅನುಭವ ಅವರಿಗಿದೆ. ಅವರಿಗೆ ಎಲ್ಲಾ ರೀತಿಯ ನಿರ್ಧಾರ ಕೈಗೊಳ್ಳುವ ಪರಮಾಧಿಕಾರವಿದೆ ಎಂದು ಸಚಿವ ಸೋಮಶೇಖರ್‌ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸರಕಾರದ ಆಡಳಿತದಲ್ಲಿ ಹಸ್ತಕ್ಷೇಪ ಎಂಬುದು ವಿರೋಧ ಪಕ್ಷದವರಿಂದ ಮಾತ್ರ ಇದೆ. ರಾಜ್ಯದಲ್ಲಿ ಯಾವಾವ ಮುಖ್ಯಮಂತ್ರಿಗಳ ಕಾಲದಲ್ಲಿ ಯಾರಾರು ಅಧಿಕಾರ ನಡೆಸಿದ್ದಾರೆ ಎಂಬುದು ಕರ್ನಾಟಕದ ಜನತೆಗೂ ಗೊತ್ತಿದೆ. ಸೂಕ್ತ ಸಮಯ ಬಂದಾಗ ನಾವೂ ಕೂಡ ಅದನ್ನೆಲ್ಲ ತಿಳಿಸಲಾಗುವುದು ಎಂದು ಅವರು ಹೇಳಿದರು.

ವಿಧಾನಸಭೆ ಕಲಾಪ ನಡೆಯುವ ಸಂದರ್ಭದಲ್ಲಿ ಯಾವತ್ತಾದರೂ ಒಂದು ದಿವಸ ವಿರೋಧ ಪಕ್ಷದವರು ರಾಜ್ಯದ ಅಭಿವೃದ್ಧಿ ವಿಚಾರವಾಗಿ ಚರ್ಚಿಸಲಿಲ್ಲ. ಜನರ ಸಮಸ್ಯೆಗಳನ್ನು ಪ್ರಸ್ತಾಪಿಸಲಿಲ್ಲ. ಸೀಡಿ ಪ್ರಕರಣವನ್ನು ಮುಂದಿಟ್ಟುಕೊಂಡು ಕಾಲಹರಣ ಮಾಡಿದರು. ವಿಧಾನಸಭೆಯಲ್ಲಿ ನಡೆಯುವ ಚರ್ಚೆಯನ್ನು ರಾಜ್ಯದ ಜನರೆಲ್ಲಾ ವೀಕ್ಷಿಸುತ್ತಿರುತ್ತಾರೆ. ಜನರ ಕಷ್ಟ ಸುಖದ ಬಗ್ಗೆ ಮಾತನಾಡದೆ ಪ್ರತಿಭಟನೆ ನಡೆಸಿದರು ಎಂದರು ಸಚಿವರು‌.

ಅನುದಾರ ತಾರತಮ್ಮ ಆರೋಪ ಸುಳ್ಳು

ಕಾಂಗ್ರೆಸ್ ಶಾಸಕರ ಕ್ಷೇತ್ರಗಳು ಅನುದಾನ ಕೊರತೆ ಮಾಡಲಾಗುತ್ತಿದೆ ಎಂಬ ವಿಷಯ ಕುರಿತು ಮಾತನಾಡಿದ ಸಚಿವರು, ಈ ಆರೋಪದಲ್ಲಿ ಹುರುಳಿಲ್ಲ. ಮುಖ್ಯಮಂತ್ರಿಗಳಿಗೆ ರಾಜ್ಯದ 224 ಕ್ಷೇತ್ರಗಳು ಕೂಡ ಒಂದೇ. ಇದರಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಎಂದು ತಾರತಮ್ಯ ಮಾಡುತ್ತಿಲ್ಲ. ಮುಖ್ಯಮಂತ್ರಿಗಳು ಎಲ್ಲಾ ಕ್ಷೇತ್ರಗಳಿಗೂ ಅನುದಾನ ನೀಡುತ್ತಿದ್ದಾರೆ ಎಂದರು.

ಇತ್ತೀಚಿಗೆ ಮೈಸೂರಿನಲ್ಲಿ ಕೊರೊನಾ ಹೆಚ್ಚು ಹರಡುತ್ತಿರುವ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದೇನೆ. ಕಳೆದ ಬಾರಿಯೂ ಅಧಿಕಾರಿ ಸಭೆ ನಡೆಸಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳನ್ನು ಸೂಚಿಸಲಾಗಿತ್ತು. ಈಗಲೂ ಕೂಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಹಾಗೂ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

ತಮಿಳುನಾಡಿನ ಚುನಾವಣೆಯಲ್ಲಿ ನನಗೆ ಒಂದು ಕ್ಷೇತ್ರಕ್ಕೆ ಉಸ್ತುವಾರಿ ನೀಡಲಾಗಿತ್ತು. ಅಲ್ಲಿ ಸ್ಪರ್ಧಿಸುತ್ತಿರುವ ಭೋಜರಾಜನ್ ಅವರು ಬಿಜೆಪಿ ಪಕ್ಷದ ಆಕಾಂಕ್ಷೆಯಾಗಿರಲಿಲ್ಲ. ಅಲ್ಲಿನ ಸ್ಥಳೀಯರು, ಎಲ್ಲಾ ಸಮುದಾಯದವರು ಹಾಗೂ ಸಂಘಸಂಸ್ಥೆಗಳು ಸೇರಿ ಅವರನ್ನು ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಲು ಒತ್ತಾಯಿಸಿದರು. ಅಲ್ಲಿನ ಮತದಾರರ ಸಂಪೂರ್ಣ ಬೆಂಬಲವಿದ್ದು, ನೂರಕ್ಕೆ ನೂರು ಭೋಜರಾಜನ್ ಅವರು 20 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಊಟಿಯಲ್ಲಿ ಬಹುತೇಕ ಮಂದಿ ಕರ್ನಾಟಕದಿಂದ ವಲಸೆ ಹೋದವರಿದ್ದಾರೆ. ಹಾಸನ, ಮಂಡ್ಯ, ಕೊಲಾರ, ನಾಗಮಂಗಲದವರಿದ್ದು, ಕನ್ನಡದವರೇ ಆಗಿದ್ದಾರೆ. ಅಲ್ಲಿರುವ ಕನ್ನಡಿಗರು ಸಂತೋಷವಾಗಿ ವ್ಯವಸ್ಥಿತ ಬದುಕನ್ನು ನಡೆಸುತ್ತಿದ್ದಾರೆ. ಯಾರೂ ಕೂಡ ತೊಂದರೆ ಅನುಭವಿಸುತ್ತಿದ್ದಾರೆ ಎಂಬ ನಿದರ್ಶನೆವೇ ಇಲ್ಲ ಎಂದು ಮಾಹಿತಿ ನೀಡಿದರು.

ಸಿಡಿ ಪ್ರಕರಣದ ತನಿಖೆ ಮಾಡುತ್ತಿರುವ ಎಸ್‌ಐಟಿ ತಂಡದಲ್ಲಿ ಸಮರ್ಥ ಅಧಿಕಾರಿಗಳಿದ್ದಾರೆ. ಮುಖ್ಯಮಂತ್ರಿಗಳಾಗಲಿ, ಗೃಹಮಂತ್ರಿಗಳಾಗಲೀ ಯಾರೂ ಕೂಡ ಹಸ್ತಕ್ಷೇಪ ಮಾಡುತ್ತಿಲ್ಲ. ಅಧಿಕಾರಿಗಳು ಯಾರ ಹಸ್ತಕ್ಷೇಪಕ್ಕೆ ಒಳಗಾಗದೆ, ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

  • ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ದುಡ್ಡು ಖರ್ಚು ಮಾಡಿ ಚುನಾವಣೆಗಳನ್ನು ಗೆಲ್ಲುತ್ತಿಲ್ಲ ಎಂದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್
Tags: bjpCongresskarnatakaPoliticssiddaramaiahstsomashekarvijayendrayeddyurappa
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

ನೀಲಂ ಸಂಜೀವ ರೆಡ್ಡಿ ಅವರನ್ನು ಸೋಲಿಸಿ ವಿ.ವಿ.ಗಿರಿ ಅವರನ್ನು ಗೆಲ್ಲಿಸಿದ ಆತ್ಮಸಾಕ್ಷಿ ಮತ

ಜನರ ತೆರಿಗೆ ದುಡ್ಡಿನಲ್ಲಿ ಬೆಳಗಾವಿಯಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ

by cknewsnow desk
December 26, 2024
0

ಇದು ಗಾಂಧಿ ಕಾಂಗ್ರೆಸ್ ಅಲ್ಲ, ಅಲಿಬಾಬಾ ನಲವತ್ತು ಕಳ್ಳರ ಕಾಂಗ್ರೆಸ್!!; ಬೆಳಗಾವಿ ಸಮಾವೇಶದಲ್ಲಿ ಮಹಾತ್ಮ ಗಾಂಧಿ ನಿರ್ಲಕ್ಷ್ಯ

ಹೆಚ್.ಡಿ.ಕುಮಾರಸ್ವಾಮಿ ಬೀಸಿದ ಚಾಟಿಯಿಂದ ಎಚ್ಚೆತ್ತ ಸರಕಾರ

ಮೂಡಾದಲ್ಲಿ ಕುಮಾರಸ್ವಾಮಿಯದ್ದೂ ಸೈಟಿದೆ ಎಂದ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟ HDK

by cknewsnow desk
July 26, 2024
0

ಹಣ ಕಟ್ಟಿ 40 ವರ್ಷ ಆಗಿದೆ, ನನಗಿನ್ನೂ ನಿವೇಶನವನ್ನೇ ಕೊಟ್ಟಿಲ್ಲ ಎಂದ ಕೇಂದ್ರ ಸಚಿವರು

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

ರಾಮನಗರದಿಂದ ರಾಮನ ಹೆಸರು ಬೇರ್ಪಡಿಸಿದವರು ಸರ್ವನಾಶ ಆಗಲಿದ್ದಾರೆ!

by cknewsnow desk
July 26, 2024
0

ಹೆಸರು ಬದಲಿಸಿದರೆ ಭೂಮಿ ಬೆಲೆ ಹೆಚ್ಚಾಗುವುದಿಲ್ಲ; ಹೆಚ್.ಡಿ.ಕುಮಾರಸ್ವಾಮಿ ಕಿಡಿ

Next Post
ನಿಡುಮಾಮಿಡಿ ಪೀಠಕ್ಕೆ ಮಂಜೂರಾದ ₹30.57 ಲಕ್ಷವನ್ನುಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಏನು ಮಾಡಿತು? ಮಮ್ತಾಜ್‌ ಅಲಿಖಾನ್‌ ಕೊಟ್ಟ ಹಣ ಎಲ್ಲಿ? ಗಂಭೀರ ಆರೋಪ ಮಾಡಿದ ಶ್ರೀ ವೀರಭದ್ರ ಚನ್ನಮಲ್ಲ ಸ್ವಾಮೀಜಿ

ನಿಡುಮಾಮಿಡಿ ಪೀಠಕ್ಕೆ ಮಂಜೂರಾದ ₹30.57 ಲಕ್ಷವನ್ನುಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಏನು ಮಾಡಿತು? ಮಮ್ತಾಜ್‌ ಅಲಿಖಾನ್‌ ಕೊಟ್ಟ ಹಣ ಎಲ್ಲಿ? ಗಂಭೀರ ಆರೋಪ ಮಾಡಿದ ಶ್ರೀ ವೀರಭದ್ರ ಚನ್ನಮಲ್ಲ ಸ್ವಾಮೀಜಿ

Leave a Reply Cancel reply

Your email address will not be published. Required fields are marked *

Recommended

ಬರಪೀಡಿತ ಗುಡಿಬಂಡೆ ಈಗ ಜಲಪೀಡಿತ!

ಚಿಕ್ಕಬಳ್ಳಾಪುರ ಜನರಿಗೆ ಎಚ್ಚರಿಕೆ ಕೊಟ್ಟ ಎಸ್ಪಿ

3 years ago
ಓಲೈಕೆ ಪಾಲಿಟಿಕ್ಸ್;‌ ಭಾರತೀಯ ಜನತಾ ಪಕ್ಷಕ್ಕೂ ಅಂಟಿಕೊಂಡ ಕಾಂಗ್ರೆಸ್‌ ಚಾಳಿ !!

ಕ್ಲೈಮ್ಯಾಕ್ಸ್‌‌ಗೆ ಬಂತು ನಾಯಕತ್ವ ಬದಲಾವಣೆ: ವಲಸಿಗರಲ್ಲಿ ಹೆಚ್ಚಿದ ಬವಣೆ; ಪ್ರಮುಖ ಖಾತೆ, ಉಸ್ತುವಾರಿಗೆ ಕತ್ತರಿ ಬೀಳುವ ಆತಂಕ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ