• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ನಿಡುಮಾಮಿಡಿ ಪೀಠಕ್ಕೆ ಮಂಜೂರಾದ ₹30.57 ಲಕ್ಷವನ್ನುಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಏನು ಮಾಡಿತು? ಮಮ್ತಾಜ್‌ ಅಲಿಖಾನ್‌ ಕೊಟ್ಟ ಹಣ ಎಲ್ಲಿ? ಗಂಭೀರ ಆರೋಪ ಮಾಡಿದ ಶ್ರೀ ವೀರಭದ್ರ ಚನ್ನಮಲ್ಲ ಸ್ವಾಮೀಜಿ

cknewsnow desk by cknewsnow desk
April 5, 2021
in CHIKKABALLAPUR, STATE
Reading Time: 1 min read
0
ನಿಡುಮಾಮಿಡಿ ಪೀಠಕ್ಕೆ ಮಂಜೂರಾದ ₹30.57 ಲಕ್ಷವನ್ನುಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಏನು ಮಾಡಿತು? ಮಮ್ತಾಜ್‌ ಅಲಿಖಾನ್‌ ಕೊಟ್ಟ ಹಣ ಎಲ್ಲಿ? ಗಂಭೀರ ಆರೋಪ ಮಾಡಿದ ಶ್ರೀ ವೀರಭದ್ರ ಚನ್ನಮಲ್ಲ ಸ್ವಾಮೀಜಿ
992
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರದ ಏಕೈಕ ಲಿಂಗಾಯತ ಪೀಠದ ಅಭಿವೃದ್ಧಿಗೆ ಪಟ್ಟಭದ್ರ ರಾಜಕೀಯ, ಅಧಿಕಾರಿಗಳ ಅಡ್ಡಿ; ಜಿಲ್ಲಾಡಳಿತದಿಂದ ನಿರಂತರ ಅನ್ಯಾಯ ಆಗಿದೆ ಎಂದ ನಿಡುಮಾಮಿಡಿ ಶ್ರೀಗಳು

ಚಿಕ್ಕಬಳ್ಳಾಪುರ: ಶತಶತಮಾನಗಳ ಇತಿಹಾಸವುಳ್ಳ, ಸಾಮಾಜಿಕ ಸಾಮರಸ್ಯಕ್ಕೆ ಹೆಸರಾಗಿರುವ ನಿಡುಮಾಮಿಡಿ ಪೀಠದ ಬೆಳವಣಿಗೆಯಾಗದಂತೆ ಕಳೆದ ಮೂರು ದಶಕಗಳಿಂದ ಕೆಲ ರಾಜಕೀಯ ಮತು ಆಧಿಕಾರಶಾಹಿ ಪಟ್ಟಭದ್ರ ಹಿತಾಸಕ್ತಿಗಳು ವ್ಯವಸ್ಥಿತವಾಗಿ ತಡೆಯುತ್ತಿವೆ ಎಂದು ನಿಡುಮಾಮಿಡಿ ಪೀಠಾಧ್ಯಕ್ಷರಾದ ಶ್ರೀ ವೀರಭದ್ರ ಚನ್ನಮಲ್ಲ ದೇಶಿಕೇಂದ್ರ ಮಹಾಸ್ವಾಮೀಜಿ ಅವರು ನೇರ ಆರೋಪ ಮಾಡಿದರು.

ಚಿಕ್ಕಬಳ್ಳಾಪುರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು; “ಮಠದ ಸೇವೆ ಹಾಗೂ ಬೆಳವಣಿಗೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ರಾಜ್ಯ ಸರಕಾರ ಅನೇಕ ಸಲ ಮಠಕ್ಕೆ ನೆರವಿನ ಹಸ್ತ ಚಾಚುತ್ತಿದ್ದರೂ ಈ ಪಟ್ಟಭದ್ರ ಹಿತಾಸಕ್ತಿಗಳು ಅಡ್ಡಿ ಉಂಟು ಮಾಡುತ್ತಿವೆ. ಅವಿಭಜಿತ ಕೋಲಾರ ಜಿಲ್ಲೆಯ ಕಾಲದಿಂದ ಮಾತ್ರವಲ್ಲದೆ ಚಿಕ್ಕಬಳ್ಳಾಪುರ ಪ್ರತ್ಯೇಕ ಜಿಲ್ಲೆಯಾದ ಮೇಲೂ ಈ ಅನ್ಯಾಯ ಮುಂದುವರಿದಿದೆ” ಎಂದರು.

ಅವಿಭಜಿತ ಕೋಲಾರ ಜಿಲ್ಲಾಡಳಿತ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾಡಳಿತದಿಂದಲೂ ಮಠಕ್ಕೆ ಅನ್ಯಾಯವಾಗಿದೆ ಎಂದು ದೂರಿದ ಶ್ರೀಗಳು; ಮೂರು ದಶಕಗಳಿಂದ ಆಗಿರುವ ಅನ್ಯಾಯವನ್ನು ಸರಿಪಡಿಸದಿದ್ದರೆ ನೇರವಾಗಿ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ಬಳಿಯೇ ಹೋಗಬೇಕಾಗುತ್ತದೆ ಎಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದರು.

ಮಠಕ್ಕೆ ಆಗತ್ತಿರುವ ಅನ್ಯಾಯಗಳ ಬಗ್ಗೆ ಸ್ವಾಮೀಜಿ ಅವರು ದಾಖಲೆಗಳ ಸಮೇತ ಮಾಹಿತಿ ನೀಡಿದರು. 90 ಪುಟಗಳಷ್ಟು ದಾಖಲೆಗಳನ್ನು ಅವರು ಬಿಡುಗಡೆ ಮಾಡಿದರು.

ಮಠದ ವಿರುದ್ಧ ನಿರಂತರ ಷಡ್ಯಂತ್ರ

ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯ ಪ್ರದೇಶದಲ್ಲಿ ನಿಡುಮಾಮಿಡಿ ಪೀಠವು ಏಕೈಕ ಲಿಂಗಾಯತರ ಮಠವಾಗಿದ್ದು, ದಲಿತ ಪರ ದೋರಣೆ ಹೊಂದಿದೆ. ಇದರಿಂದ ಪ್ರಬಲ ಸಮುದಾಯದ ಕೆಲ ರಾಜಕಾರಣಿಗಳು, ಅಧಿಕಾರಿಗಳಿಗೆ ಈ ಮಠದ ಏಳಿಗೆ ಸಹಿಸಲಾಗುತ್ತಿಲ್ಲ. ಲಿಂಗಾಯತರ ಮಠವೊಂದು ಈ ಪ್ರದೇಶದಲ್ಲಿ ಬೆಳೆಯಬಾರದು ಎಂದು ಕೆಲವರು ಮೊದಲಿನಿಂದಲೂ ಷಡ್ಯಂತ್ರ ಮಾಡುತ್ತಲೇ ಇದ್ದಾರೆ. ಅವಕಾಶ ಸಿಕ್ಕಾಗಲೆಲ್ಲ ತೊಂದರೆ ಮಾಡುತ್ತಿದ್ದಾರೆ ಎಂದು ಸ್ವಾಮೀಜಿ ಅವರು ದೂರಿದರು.

ಮಠವು ಸಾಂಸ್ಥಿಕವಾಗಿ ಬೆಳೆಯದಂತೆ ಮಾಡುವುದು, ಮಠ ನಡೆಸುತ್ತಿರುವ ಶಾಲಾ-ಕಾಲೇಜುಗಳ ಅಭಿವೃದ್ಧಿಗೆ ಅಡ್ಡಿ ಉಂಟು ಮಾಡುವುದು ಮುಂದುವರಿದಿದೆ. ಮಠದ ವಿರುದ್ಧ ದಮನಕಾರಿ ಕೆಲಸ ಮಾಡಲಾಗುತ್ತಿದೆ. ಹಾಗೆಯೇ ಮಠಕ್ಕೆ ನ್ಯಾಯಯುತವಾಗಿ ಸಿಗಬೇಕಾದ ಸೌಲಭ್ಯಗಳ ವಿಷಯದಲ್ಲಿ ಜಿಲ್ಲಾಡಳಿತ ಅನ್ಯಾಯ ಮಾಡುತ್ತಿದೆ ಎಂದು ಶ್ರೀಗಳು ನೋವು ವ್ಯಕ್ತಪಡಿಸಿದರು.

ಮಠವು ಎಲ್ಲ ಸಮುದಾಯಗಳನ್ನು ಒಳಗೊಳ್ಳುವ, ಸಾಮಾಜಿಕ ಸಾಮರಸ್ಯವನ್ನು ಎತ್ತಿಹಿಡಿಯುವ ಉದಾತ್ತ ಧ್ಯೇಯದೊಂದಿಗೆ ಕೆಲಸ ಮಾಡಿಕೊಂಡು ಬಂದಿದೆ. ಯಾರಿಗೂ, ಯಾವ ಸಮುದಾಯಕ್ಕೂ ಹಾನಿ ಉಂಟು ಮಾಡುವಂಥ ಕೆಲಸವನ್ನು ಮಾಡಿಲ್ಲ. ಹೀಗಿದ್ದರೂ ಮಠವನ್ನು ತುಳಿಯುವ ಪ್ರಯತ್ನ ನಡೆಯುತ್ತಿದೆ ಎಂದು ನಿಡುಮಾಮಿಡಿ ಶ್ರೀಗಳು ಬೇಸರ ವ್ಯಕ್ತಪಡಿಸಿದರು.


ಮಠಕ್ಕೆ ಬರುತ್ತಿರುವ ಹಣಕ್ಕೆ ತಡೆಯೊಡ್ಡುವುದು, ಸರಕಾರದಿಂದ ಸೌಲಭ್ಯಗಳು ದೊರೆಯದಂತೆ ಮಾಡುವುದು ನಡೆದಿದೆ. ಅಪ್ರಾಮಾಣಿಕ ಮತ್ತು ಸ್ವಾರ್ಥ ಅಧಿಕಾರಿಶಾಹಿಯಿಂದ ಮಠದ ಸೇವಾ ಕಾರ್ಯಗಳಿಗೆ ತೊಂದರೆ ಆಗುತ್ತಿದೆ. ಶೋಷಿತರ ಪರವಾಗಿ ಹೋರಾಟ ಮಾಡಿದ ಮಠವನೇ ಶೋಷಣೆ ಮಾಡಲಾಗುತ್ತಿದೆ. ಇನ್ನೂ ಈ ದಬ್ಬಾಳಿಕೆಯನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಹೋರಾಟದ ಹಾದಿ ಹಿಡಿಯುತ್ತೇವೆ.

-ಶ್ರೀ ವೀರಭದ್ರ ಚನ್ನಮಲ್ಲ ದೇಶಿಕೇಂದ್ರ ಮಹಾಸ್ವಾಮೀಜಿ

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಮುಖ್ಯಮಂತ್ರಿಗಳಿಗಿಂತ ದೊಡ್ಡದೆ? ಅವರ ಆದೇಶಕ್ಕೆ ಬೆಲೆ ಇಲ್ಲವೇ? ಕಂದಾಯ ಸಚಿವರು ಕೊಟ್ಟ ಪತ್ರಗಳಿಗೆ ಜಿಲ್ಲಾಡಳಿತ ಕಿಮ್ಮತ್ತು ಕೊಡುತ್ತಿಲ್ಲ ಎಂದರೆ ಹೇಗೆ? ಎಂದು ಪ್ರಶ್ನಿಸಿದ ಸ್ವಾಮೀಜಿ ಅವರು; ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಗೂಳೂರಿನ ವಿದ್ಯಾರ್ಥಿ ನಿಲಯಕ್ಕೆ ಅನುದಾನ ಬಿಡುಗಡೆ ಆಗುತ್ತದೆ. ಆದರೆ, ಆ ಅನುದಾನದ ಒಂದು ಪಾಲನ್ನು ಜಿಲ್ಲಾಧಿಕಾರಿಗ ಕಚೇರಿ ಅನ್ಯ ಉದ್ದೇಶಕ್ಕೆ ಬಳಕೆ ಮಾಡಿಕೊಂಡಿದೆ. ಮಠಕ್ಕೆ ಸೇರಬೇಕಾದ ₹30.57 ಲಕ್ಷವನ್ನು ಜಿಲ್ಲಾಧಿಕಾರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಉದ್ದೇಶಕ್ಕೆ ಬಳಸಿ ಮಠಕ್ಕೆ ಅನ್ಯಾಯವೆಸಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಹಿಂದೆ ಮಮ್ತಾಜ್‌ ಅಲಿ ಖಾನ್‌ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಅವರು ಮಠದ ಶಾಲೆ ಮತ್ತು ಕಾಲೇಜು ಕಟ್ಟಡಕ್ಕೆ ₹10 ಲಕ್ಷ ನೀಡಿದರೆ ಜಿಲ್ಲಾಡಳಿತ ಆ ಹಣವನ್ನು ಮಠಕ್ಕೆ ಕೊಡಲೇ ಇಲ್ಲ. ಅದನ್ನೂ ಮತ್ತೊಂದು ಉದ್ದೇಶಕ್ಕೆ ಬಳಸ್ತಾರೆ. ಚಿಕ್ಕಬಳ್ಳಾಪುರ 2007ರಲ್ಲಿ ಸ್ವತಂತ್ರ ಜಿಲ್ಲೆಯಾದ ಮೇಲೆ ಮಠಕ್ಕೆ ಸಂಪೂರ್ಣ ಅಸಹಕಾರ, ಅನ್ಯಾಯ ಇನ್ನೂ ಹೆಚ್ಚಾಗಿದೆ. ನಾಲ್ಕೈದು ಇಲಾಖೆಗಳಿಂದ ನಿರಂತರ ಅನ್ಯಾಯ ಆಗುತ್ತಿದೆ. ಈ ನಡುವೆಯೂ ಸುಬೋಧ್‌ ಯಾದವ್‌ ಅವರಂಥ ಒಳ್ಳೆಯ ಅಧಿಕಾರಿಗಳಿಂದ ಮಠದ ಸೇವಾ ಕಾರ್ಯಗಳಿಗೆ ಸಹಕಾರ ಸಿಕ್ಕಿದೆ ಎಂದರು ಸ್ವಾಮೀಜಿ ಅವರು.

ಮಠದ ದೇವಗುಲದ ಅರ್ಚಕರಿಗೆ ನೀಡಲಾಗುತ್ತಿದ್ದ ತಹಸೀಲ್‌ 12 ವರ್ಷದಿಂದ ನಿಂತುಹೋಗಿದೆ. ಮನವಿ ಮಾಡಿ ಮಾಡಿ ಸಾಕಾಗಿ ಹೋಗಿದೆ. ಭೂಮಿಗಾಗಿ ಒಂದೂವರೆ ದಶಕದಿಂದ ಮನವಿ ಮಾಡುತ್ತಿದ್ದೇವೆ. ಆ ಕೆಲಸವನ್ನೂ ಜಿಲ್ಲಾಡಳಿತ ಮಾಡಿಕೊಟ್ಟಿಲ್ಲ. ನಮ್ಮದೇ ಬಿ ಖರಾಬ್‌ ಭೂಮಿಯನ್ನು ನಮಗೆ ಮಾಡಿಕೊಡಲು ಮೀನಾ-ಮೇಷ ಎಣಿಸುತ್ತಿದೆ. ಅತ್ಯಂತ ಪ್ರಾಚೀನವಾದ ಮಠವನ್ನು ಜಿಲ್ಲಾಡಳಿತ ನಡೆಸಿಕೊಳ್ಳುವ ರೀತಿ ಇದಲ್ಲ ಎಂದು ಶ್ರೀಗಳು ನೊಂದು ಹೇಳಿದರು.

28 ವರ್ಷಗಳಿಂದ ಮಠಕ್ಕೆ ವರ್ಷಾಸನವನ್ನು ನಿಗದಿ ಮಾಡಿ ಎಂದು ಕೇಳುತ್ತಲೇ ಇದ್ದೇವೆ. ಆದರೂ ಮಾಡಿಲ್ಲವೆಂದರೆ ಈ ಜಿಲ್ಲಾಡಳಿತಕ್ಕೆ ಮಠದ ಬಗ್ಗೆ ಅದೆಷ್ಟು ಪೂರ್ವಗ್ರಹ ಇರಬೇಕು ಎಂದ ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಠದ ಧರ್ಮದರ್ಶಿಗಳು ಕೂಡ ಹಾಜರಿದ್ದರು.

Tags: bagepallicharges aginist chikkaballapur dc officechikkaballapurafunds misuse by dc officesri nidumamidi mahasamsthana mathaSri Veerabhadra Chennamalla Swamiji
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ವಿದುರಾಶ್ವತ್ಥವನ್ನು ಅಂತಾರಾಷ್ಟ್ರೀಯ ಸ್ಮಾರಕ ಕೇಂದ್ರ ಮಾಡುವುದರ ಜತೆಗೆ ಚಿಕ್ಕಬಳ್ಳಾಪುರ, ಕೋಲಾರಕ್ಕೆ ಕೃಷ್ಣಾ ನದಿ ನೀರು ತರಬೇಕು: ಸಿಎಂಗೆ ಸಚಿವ ಡಾ.ಕೆ.ಸುಧಾಕರ್ ಮನವಿ

ಕರ್ನಾಟಕಕ್ಕೆ ಬಂದು ತಲುಪಿದ ಕೋವಿಡ್ ವ್ಯಾಕ್ಸಿನ್ 15 ಲಕ್ಷ ಡೋಸ್; ಬೆಂಗಳೂರು ನಗರಕ್ಕೆ 10 ಲಕ್ಷ & ಬೆಳಗಾವಿಗೆ 5 ಲಕ್ಷ ಡೋಸ್ ಕಳಿಸಲಾಗಿದೆ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌

Leave a Reply Cancel reply

Your email address will not be published. Required fields are marked *

Recommended

ಕಾಂಗ್ರೆಸ್ ವಶಕ್ಕೆ ಗುಡಿಬಂಡೆ ಪಟ್ಟಣ ಪಂಚಾಯತಿ: ಸಿಪಿಎಂ-ಬಿಜೆಪಿಗೆ ಭಾರೀ ಮುಖಭಂಗ! ಒಂದು ಮತದಲ್ಲಿ ಗೆದ್ದ ಹಸ್ತ ಅಭ್ಯರ್ಥಿ!! ಹೊಸ ಅಭ್ಯರ್ಥಿಗಳ ಕೈಹಿಡಿದ ಮತದಾರರು

ಗುಡಿಬಂಡೆ ಪಟ್ಟಣ ಪಂಚಾಯತಿಗೆ 3 ನಾಮನಿರ್ದೇಶನ ಸದಸ್ಯರು

4 years ago
ಅನ್‌ಲಾಕ್‌ ಆದ ಮೇಲೆ ಹೆಚ್ಚುತ್ತಿದೆ ಅಪರಾಧ: ಗೃಹ ಸಚಿವ ಬೊಮ್ಮಾಯಿ

ಬೊಮ್ಮಾಯಿಗಿಲ್ಲ ಆನಂದ!!

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ