• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಬೆಂಗಳೂರಿನಲ್ಲಿ ಅಬ್ಬರಿಸುತ್ತಿರುವ ಕೋವಿಡ್‌ ಎರಡನೇ ಅಲೆ, ಒಕ್ಕಲಿಗರ ಸಂಘ ಚುನಾವಣೆ ಮೇಲೆ ವೈರಸ್‌ ಕರಿನೆರಳು; ಎಲೆಕ್ಷನ್‌ ಮುಂದೂಡಿಕೆ ಸಂಭವ

P K Channakrishna by P K Channakrishna
April 17, 2021
in STATE
Reading Time: 1 min read
0
ಬೆಂಗಳೂರಿನಲ್ಲಿ ಅಬ್ಬರಿಸುತ್ತಿರುವ ಕೋವಿಡ್‌ ಎರಡನೇ ಅಲೆ, ಒಕ್ಕಲಿಗರ ಸಂಘ ಚುನಾವಣೆ ಮೇಲೆ ವೈರಸ್‌ ಕರಿನೆರಳು; ಎಲೆಕ್ಷನ್‌ ಮುಂದೂಡಿಕೆ ಸಂಭವ
917
VIEWS
FacebookTwitterWhatsuplinkedinEmail

ರಾಜ್ಯದಲ್ಲಿ ಕೋವಿಡ್‌ ಎರಡನೇ ಅಲೆ ತೀವ್ರವಾಗಿರುವ ಕಾರಣ ಪ್ರತಿಷ್ಠಿತ ಒಕ್ಕಲಿಗರ ಸಂಘದ ಚುನಾವಣೆ ಮೇಲೆ ಕಾರ್ಮೋಡ ಕವಿದಿದೆ. ಸಂಭಾವ್ಯ ಅಭ್ಯರ್ಥಿಗಳು ಈಗಾಗಲೇ ಕಣಕ್ಕೀಯಲು ಎಲ್ಲ ಸಿದ್ಧತೆ ಮಾಡಿಕೊಂಡಿದ್ದರೆ, ಸರಕಾರ ಮಾತ್ರ ಬೇರೆಯದ್ದೇ ಆಲೋಚನೆ ಮಾಡುತ್ತಿದೆ.


ಬೆಂಗಳೂರು: ಮೇ 16ರಂದು ನಡೆಲಿರುವ ಒಕ್ಕಲಿಗರ ಸಂಘದ ಚುನಾವಣೆ ಮೇಲೆ ಕೋವಿಡ್‌ ಕರಿನೆರಳು ಬಿದ್ದಿದೆ. ಎರಡನೇ ಅಲೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆ ಮುಂದಕ್ಕೆ ಹೋಗುವ ಸಾಧ್ಯತೆ ದಟ್ಟವಾಗಿದೆ.

ಬಹಳ ಪ್ರತಿಷ್ಠೆಯ ಚುನಾವಣೆ ಆಗಿರುವ ಒಕ್ಕಲಿಗರ ಸಂಘದ ಹಣಾಹಣಿಗೆ ಈಗಾಗಲೇ ಚುನಾವಣಾ ಕ್ಯಾಲೆಂಡರ್‌ ಪ್ರಕಟವಾಗಿದೆಯಾದರೂ ಸರಕಾರ ಮಾತ್ರ ಕೋವಿಡ್‌ ಸೋಂಕಿನ ಕಾರಣ ಕೊಟ್ಟು ಚುನಾವಣೆಯನ್ನು ಮುಂದಕ್ಕೆ ಹಾಕುವ ಮನಸ್ಸು ಮಾಡಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಸಹಕಾರ ಕಾಯ್ದೆಯಡಿ ರಾಜ್ಯದ ವಿವಿಧ ಸಂಘ ಸಂಸ್ಥೆಗಳ ಚುನಾವಣೆ ನಡೆಯಬೇಕಾಗಿದ್ದು ಅದರಂತೆ ಒಕ್ಕಲಿಗರ ಸಂಘದ ಚುನಾವಣೆಯೂ ಘೋಷಣೆ ಆಗಿದೆ. ಚುನಾವಣಾಧಿಕಾರಿ ಪಿ.ಎನ್.‌ರವೀಂದ್ರ ಅವರು ಮೇ 16ರಂದು ಚುಣಾವಣೆ ನಡೆಯಲಿದೆ ಎಂದು ಘೋಷಿಸಿದ್ದು, ಮೇ 18ರಂದು ಫಲಿತಾಂಶ ಪ್ರಕಟವಾಗಲಿದೆ ಎಂದಿದ್ದಾರೆ. ಆದರೆ ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ತೀವ್ರ ಸ್ವರೂಪದಲ್ಲಿ ವ್ಯಾಪಿಸುತ್ತಿರುವುದರಿಂದ ಎಲ್ಲ ಸಹಕಾರ ಸಂಘಗಳು ಹಾಗೂ ಸಂಘ ಸಂಸ್ಥೆಗಳ ಚುನಾವಣೆಗಳನ್ನು ಮುಂದೂಡಲು ಸರಕಾರ ನಿರ್ಧರಿಸಿದೆ ಎಂದು ಗೊತ್ತಾಗಿದೆ.

ಶುಕ್ರವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವರದಿ ನೀಡಿರುವ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಕೂಡ ʼಅತ್ಯಗತ್ಯವಲ್ಲದʼ ಎಲ್ಲ ಚಟುವಟಿಕೆಗಳನ್ನು ಮುಲಾಜಿಲ್ಲದೆ ಸ್ಥಗಿತ ಮಾಡಬೇಕು ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ಒಕ್ಕಲಿಗರ ಸಂಘದ ಚುನಾವಣೆ ಮೇಲೆ ವೈರಸ್‌ ಕರಿನೆರಳು ಬಿದ್ದಿದೆ.

ಚುನಾವಣೆ ನೆಪದಲ್ಲಿ ದೊಡ್ಡ ದೊಡ್ಡ ಸಭೆಗಳನ್ನು ಮಾಡುವುದು, ರಾತ್ರಿ ಔತಣಕೂಟಗಳನ್ನು ನಡೆಸುವುದು ಈಗಾಗಲೇ ಆರಂಭವಾಗಿದೆ. ಚುನಾವಣೆ ಕಣದಲ್ಲಿ ಹಣದ ಹೊಳೆ ಹರಿಯುತ್ತಿದೆ. ಕೆಲ ದಿನಗಳ ಹಿಂದೆ ಚನ್ನಪಟ್ಟಣದಲ್ಲಿ ಸಂಭಾವ್ಯ ಅಭ್ಯರ್ಥಿಯೊಬ್ಬರು ಏರ್ಪಡಿಸಿದ್ದ ಬಾಡೂಟ ಔತಣದಲ್ಲಿ ಸುಮಾರು ಸಾವಿರಾರು ಮತದಾರರು ಪಾಲ್ಗೊಂಡಿದ್ದರು. ಮತದಾರರಿಗೆ ಹಣದ ಆಮಿಷದ ಜತೆಗೆ ಹಣ-ಹೆಂಡದ ಸಮಾರಾಧನೆ ನಡೆದಿತ್ತು ಎಂಬ ಮಾಹಿತಿ ಸಿಕ್ಕಿದೆ. ಅದೇ ರೀತಿ ಬೆಂಗಳೂರು ಗ್ರಾಮಾಂತರ, ಕೋಲಾರ-ಚಿಕ್ಕಬಳ್ಳಾಪುರ, ರಾಮನಗರ ಮುಂತಾದ ಜಿಲ್ಲೆಗಲ್ಲಿ ಕಣಕ್ಕೆ ಇಳಿಯಲಿರುವ ಹುರಿಯಾಳುಗಳು ಮತದಾರರನ್ನು ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರುವಾಗುವುದಕ್ಕೆ ಮುನ್ನವೇ ಚುನಾವಣೆಯ ಕಾವು ಸಿಕ್ಕಾಪಟ್ಟೆ ಏರಿದೆ.

ರಾಜ್ಯದ 11 ಜಿಲ್ಲೆಗಳಿಂದ ೩೫ ಸ್ಥಾನಗಳಿರುವ ಕಾರ್ಯಕಾರಿ ಸಮಿತಿಗೆ ನಡೆಯುವ ಈ ಚುನಾವಣೆಯಲ್ಲಿ ೩೦೦ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣಕ್ಕಿಳಿಯುವ ನಿರೀಕ್ಷೆ ಇದೆ. 3 ಲಕ್ಷಕ್ಕೂ ಅಧಿಕ ಮತದಾರರು ಇದ್ದಾರೆ. ಮೆಡಿಕಲ್‌ ಕಾಲೇಜ್‌ ಸೇರಿದಂತೆ ಅನೇಕ ಸಂಸ್ಥೆಗಳನ್ನು ಹೊಂದಿರುವ ಒಕ್ಕಲಿಗರ ಸಂಘದಲ್ಲಿ ಕೋಟ್ಯಂತರ ರೂಪಾಯಿ ವ್ಯವಹಾರ ನಡೆಯುತ್ತದೆ. ಈ ಹಿನ್ನೆಲೆಯಲ್ಲಿ ಹಿಂದೆಂದಿಗಿಂತಲೂ ಈ ಬಾರಿ ಬಿರುಸಿನ ಪೈಪೋಟಿ ನಡೆಯುವುದು ಪಕ್ಕಾ.

ಸಮುದಾಯದ ಸಚಿವರಿಗೆ ಬೇಡದ ಚುನಾವಣೆ

ಒಕ್ಕಲಿಗರ ಸಂಘ ಆರಂಭದಿಂದಲೂ ಒಂದಿಲ್ಲ ಒಂದು ವಿವಾದದಿಂದ ಬಸವಳಿಯುತ್ತಲೇ ಇದೆ. ಸಂಘದಲ್ಲಿ ಅನೇಕ ಅವ್ಯವಹಾರಗಳು ನಡೆದ ಆರೋಪಗಳು ಸಾಕಷ್ಟು ಕೇಳಿಬರುತ್ತಿವೆ. ಇದರ ಹೊರತಾಗಿಯೂ ಸಂಘಕ್ಕೆ ಸರಕಾರ ಆಡಳಿತಾಧಿಕಾರಿನ್ನು ನೇಮಕ ಮಾಡಿತ್ತು.

ಈ ಎಲ್ಲ ಕಾರಣಗಳಿಂದ ಒಕ್ಕಲಿಗ ಸಮುದಾಯಕ್ಕೆ ಸೇರಿದ ಬಹುತೇಕ ಸಚಿವರಿಗೆ ಈ ಚುನಾವಣೆ ಬೇಡವಾಗಿದೆ. ಇತ್ತೀಚೆಗೆ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ್ದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರು ಸಂಘದಲ್ಲಿ ನಡೆಯುತ್ತಿರವ ಚಟುವಟಿಕೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಚುನಾವಣೆ ಬಗ್ಗೆ, ಹಿಂದಿನ ಆಡಳಿತ ಮಂಡಳಿ ಕಾರ್ಯವೈಖರಿ ಇತ್ಯಾದಿಗಳ ಬಗ್ಗೆ ಅವರು ಒಕ್ಕಲಿಗರ ಸಂಘದ ಚುನಾವಣೆಯ ಪೂರ್ವಭಾವಿ ಸಭೆಯಲಿ ಬೇಸರ ಹೊರಹಾಕಿದ್ದರು.

ಇನ್ನು ಸಂಘದ ಚುನಾವಣೆಯ ಬಗ್ಗೆ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಕೂಡ ಅಷ್ಟೇನೂ ಸಕಾರಾತ್ಮಕ ನಿಲುವು ಹೊಂದಿಲ್ಲ ಎಂಬ ಮಾಹಿತಿ ಸಿಕ್ಕಿದೆ. ಇನ್ನೊಂದೆಡೆ ಸಂಘದ ಚುನಾವಣೆ ಬೇಡವೆಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯೂ ಶುರುವಾಗಿದೆ.

ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ-ಬಸವ ಕಲ್ಯಾಣದ ಉಪ ಚುನಾವಣೆ ಬಹಿರಂಗ ಪ್ರಚಾರ ಅಂತ್ಯವಾಗಿದ್ದು, ಶನಿವಾರ ಚುನಾವಣೆ ನಡೆಯಲಿದೆ. ಉಪ ಚುನಾವಣೆವರೆಗೂ ಸುಮ್ಮನಿದ್ದ ಸರಕಾರ ಇದೀಗ ಸಂಘ ಸಂಸ್ಥೆಗಳ ಚುನಾವಣೆಗಳನ್ನು ಸಾಧ್ಯವಾದಷ್ಟು ಮುಂದಕ್ಕೆ ಹಾಕಲು ಮನಸ್ಸು ಮಾಡಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೋವಿಡ್‌ ಪಾಸಿಟೀವ್‌ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದು, ಭಾನುವಾರ ಕರೆದಿದ್ದ ಸರ್ವಪಕ್ಷ ಸಭೆ ಮುಂದಕ್ಕೆ ಹೋಗಿದೆ.

ಬೆಂಗಳೂರಿನಲ್ಲಿ ಮತ್ತಷ್ಟು ಬಿಗಿ

ಸೋಮವಾರದಿಂದ ಬೆಂಗಳೂರಿನಲ್ಲಿ ಕೋವಿಡ್‌ ನಿಯಮಗಳು ಇನ್ನಷ್ಟು ಬಿಗಿಯಾಗುವ ಸಾಧ್ಯತೆ ಇದೆ. ಅಲ್ಲದೆ, ಒಕ್ಕಲಿಗರ ಸಂಘದ ಒಟ್ಟು ಮತದಾರರಲ್ಲಿ ಅರ್ಧದಷ್ಟು ಬೆಂಗಳೂರು ನಗರ, ಗ್ರಾಮಾಂತರದಲ್ಲೇ ಇದ್ದಾರೆ. ಶುಕ್ರವಾರ ಒಂದೇ ದಿನ ರಾಜ್ಯದಲ್ಲಿ 14,859 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ನಗರದಲ್ಲಿನ ಸೋಂಕಿತರ ಸಂಖ್ಯೆ 5,22,438ಕ್ಕೆ ಏರಿಕೆಯಾಗಿದೆ. ಅಲ್ಲದೆ, ನಗರದಲ್ಲಿ 57 ಜನರು ಮೃತಪಟ್ಟಿದ್ದಾರೆ. ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಮತ್ತಷ್ಟು ನಿರ್ಬಂಧಗಳನ್ನು ಹೇರಲು ಸರಕಾರ ಚಿಂತಿಸುತ್ತಿದೆ.

ಹೀಗಾಗಿ ಒಕ್ಕಲಿಗರ ಸಂಘದ ಚುನಾವಣೆ ಮುಂದೂಡಿಕೆ ನಿರ್ಧಾರ ಸೋಮವಾರದ ನಂತರ ಹೊರಬೀಳಬಹುದು ಎನ್ನಲಾಗಿದೆ.

ಚುನಾವಣೆ ವೇಳಾಪಟ್ಟಿ ಹೀಗಿದೆ

ಇದೇ ಏಪ್ರಿಲ್‌ 21ರಿಂದ 28ರವರೆಗೆ ನಾಮಪತ್ರ ಸಲ್ಲಿಕೆ ಮಾಡಬಹುದು. ಏಪ್ರಿಲ್‌ 30 ನಾಮಪತ್ರ ವಾಪಸ್‌ ಪಡೆಯಲು ಕೊನೆಯ ದಿನವಾಗಿದ್ದು, ಅಂದು ಮಧ್ಯಾಹ್ನ 3 ಗಂಟೆಗೆ ನಾಮಪತ್ರ ಪರಿಶೀಲನೆ ನಡೆದು ಸಂಜೆ ಹೊತ್ತಿಗೆ ಅಂತಿಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ಮೇ 3ರಂದು ಅಭ್ಯರ್ಥಿಗಳಿಗೆ ಚಿಹ್ನೆಗಳನ್ನು ನೀಡಲಾಗುವುದು, ಮೇ 16ರಂದು ಆಯಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬೆಳಗ್ಗೆ 7ರಿಂದ ಸಂಜೆ 5 ಗಂಟೆವರೆಗೂ ಮತದಾನ ನಡೆಯಲಿದೆ. ಮೇ 18ರಂದು ಬೆಳಗ್ಗೆ 9 ಗಂಟೆಯಿಂದ ಮತ ಎಣಿಕೆ ನಡೆಯಲಿದೆ.

ಒಟ್ಟು ಹನ್ನೊಂದು ಮತಕ್ಷೇತ್ರಗಳು

1.ಬೆಂಗಳೂರು ನಗರ, ಹೊಸೂರು (ತಮಿಳುನಾಡು), ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ
2.ಮೈಸೂರು, ಚಾಮರಾಜನಗರ, ಊಟಿ (ತಮಿಳುನಾಡು)
3.ಮಂಡ್ಯ
4.ಹಾಸನ
5.ತುಮಕೂರು
6.ಚಿತ್ರದುರ್ಗ (ದಾವಣಗೆರೆ, ಗದಗ, ಹುಬ್ಬಳ್ಳಿ)
7.ಕೋಲಾರ ಮತ್ತು ಚಿಕ್ಕಬಳ್ಳಾಪುರ (ಆಂಧ್ರ ಪ್ರದೇಶ ಸೇರಿ)
8.ದಕ್ಷಿಣ ಕನ್ನಡ, ಉಡುಪಿ (ಕಾಸರಗೋಡು ಸೇರಿ)
9.ಕೊಡಗು
10.ಶಿವಮೊಗ್ಗ ಮತ್ತು ಉತ್ತರ ಕನ್ನಡ
11.ಚಿಕ್ಕಮಗಳೂರು

***

lead photo by CKPhotography ಸಿಕೆಪಿ@ckphotographi / ಒಕ್ಕಲಿಗರ ಸಂಘದ ಕಿಮ್ಸ್‌ ಆಸ್ಪತ್ರೆ

Tags: covid19election postponekarnatakavokkaligara sanghavokkaligara sangha election 2021
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬಿಜೆಪಿ ಆಡಳಿತದ ಕಾಲದಲ್ಲಿ ಯುವ ಜನತೆಯ ಜೀವನ ಅಭದ್ರತೆಯಲ್ಲಿ ಸಾಗುತ್ತಿದೆ ಎಂದು ಆರೋಪಿಸಿದ ಎಂ.ಪಿ.ಮುನಿವೆಂಕಟಪ್ಪ

ಬಿಜೆಪಿ ಆಡಳಿತದ ಕಾಲದಲ್ಲಿ ಯುವ ಜನತೆಯ ಜೀವನ ಅಭದ್ರತೆಯಲ್ಲಿ ಸಾಗುತ್ತಿದೆ ಎಂದು ಆರೋಪಿಸಿದ ಎಂ.ಪಿ.ಮುನಿವೆಂಕಟಪ್ಪ

Leave a Reply Cancel reply

Your email address will not be published. Required fields are marked *

Recommended

ತಮಿಳುನಾಡು ಗೆಲ್ಲಲು ಬಿಜೆಪಿ ಗೇಮ್‌ಪ್ಲ್ಯಾನ್;‌ ವೇಲ್‌ ಹಿಡಿದ ಸೈಲಂಟ್‌ ಟ್ರಬಲ್‌ಶೂಟರ್

ತಮಿಳುನಾಡು ಗೆಲ್ಲಲು ಬಿಜೆಪಿ ಗೇಮ್‌ಪ್ಲ್ಯಾನ್;‌ ವೇಲ್‌ ಹಿಡಿದ ಸೈಲಂಟ್‌ ಟ್ರಬಲ್‌ಶೂಟರ್

5 years ago
ರಾಜಕೀಯದಿಂದ ದೂರವಿರಲು ಶಿಕ್ಷಕರಿಗೆ ಕಿವಿಮಾತು ಹೇಳಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ರಾಜಕೀಯದಿಂದ ದೂರವಿರಲು ಶಿಕ್ಷಕರಿಗೆ ಕಿವಿಮಾತು ಹೇಳಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ