• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಸಾವಿನ ಮನೆಯಲ್ಲಿ ಪ್ರಧಾನಿಮಂತ್ರಿ ನಗುಮೊಗದ ಜಾಹೀರಾತು!! ಸರಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ಆಕ್ರೋಶ, ಬಿಜೆಪಿಗೆ ಪ್ರಚಾರದ ಹುಚ್ಚು ಹಿಡಿದಿದೆ ಎಂದ ಮಾಜಿ ಮುಖ್ಯಮಂತ್ರಿ

cknewsnow desk by cknewsnow desk
April 23, 2021
in COVID-19, NATION, STATE
Reading Time: 2 mins read
0
ಕೋಲಾರದಲ್ಲಿ ನಿಂತು ಕೋಡಿಹಳ್ಳಿ ಚಳಿಬಿಡಿಸಿದ ಕುಮಾರಸ್ವಾಮಿ; ಡೋಂಗಿಗಳಿಂದ ಪಾಠ ಕಲಿಯಬೇಕಿಲ್ಲ ಎಂದ ದಳಪತಿ
910
VIEWS
FacebookTwitterWhatsuplinkedinEmail

ಇಡೀ ರಾಜ್ಯ ಕೋವಿಡ್‌ನಿಂದ ತತ್ತರಿಸಿದೆ. ಬೆಂಗಳೂರು ಸಾವಿನ ಮನೆಯಾಗಿದೆ. ಆದರೆ, ಬೆಂಗಳೂರು ನಗರದಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಮಾರ್ಗಕ್ಕೆ ಕೇಂದ್ರ ಸಚಿವ ಸಂಪುಟ ಇತ್ತೀಚೆಗೆ ಒಪ್ಪಿಗೆ ನೀಡಿದ್ದನ್ನೇ ನೆಪ ಮಾಡಿಕೊಂಡು ಪ್ರಧಾನಿಯನ್ನು ಅಭಿನಂದಿಸುವುದಕ್ಕಾಗಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಪತ್ರಿಕೆಗಳಿಗೆ ಮುಖಪುಟದ ಜಾಹೀರಾತು ನೀಡಲಾಗಿದೆ. ಇದರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರು ಸಾವಿನ ಮನೆಯಾಗಿದೆ. ಇಡೀ ರಾಜ್ಯ ಕೋವಿಡ್‌ ಸೋಂಕಿನಿಂದ ತತ್ತರಿಸಿದೆ. ಆದರೆ, ರಾಜ್ಯ ಸರಕಾರ ಪ್ರಚಾರ ಮತ್ತು ಹಣದ ದುಂದುವೆಚ್ಛದಲ್ಲಿ ತೊಡಗಿದೆ ಎಂದು ಮಾಜಿ ಮುಖ್ಯಮಂತ್ರಿ ಟೀಕಾಪ್ರಹಾರ ನಡೆಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ರಾಜ್ಯ ಸರಕಾರವು ಇಂಥ ಕೃತ್ಯಗಳ ಮೂಲಕ ರಾಜ್ಯದ ಜನರನ್ನು ಅಪಹಾಸ್ಯ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ಅವರ ಟ್ವೀಟ್‌ ಮಾಡಿರುವ ಅಂಶಗಳು ಹೀಗಿವೆ;

ಆತ್ಮಸಾಕ್ಷಿಯ ನಡೆಯಲ್ಲ!

“ಕೊರೊನಾ ವೈರಸ್‌ ಹೊಡೆತಕ್ಕೆ ರಾಷ್ಟ್ರವೇ ತತ್ತರಿಸಿದೆ. ಜನ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಇಂಥ ಸೂತಕದ ಸಂದರ್ಭದಲ್ಲಿ ರಾಜ್ಯ ಸರಕಾರ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಎಲ್ಲ ಪತ್ರಿಕೆಗಳ ಮುಖಪುಟದಲ್ಲಿ ಪ್ರಧಾನಿ ನಗುಮೊಗದ ಜಾಹೀರಾತೊಂದನ್ನು ನೀಡಿದೆ. ಈ ಮೂಲಕ ಜನರ ನೋವನ್ನು ಗೇಲಿ ಮಾಡಿದೆ. ಇದು ನಿಜಕ್ಕೂ ಆತ್ಮಸಾಕ್ಷಿಯ ನಡೆಯಲ್ಲ!”

ಪ್ರಚಾರಪ್ರಿಯತೆ ಸಹಿಸಲಾಗದು

“ಸರಕಾರ ಕೋವಿಡ್‌ ಅನ್ನು ನಿಭಾಯಿಸಿದ ರೀತಿ ಮತ್ತು ಅದರಲ್ಲಿ ನಡೆದಿರಬಹುದಾದ ಭ್ರಷ್ಟಾಚಾರದ ಬಗ್ಗೆ ಆರೋಪಗಳು ಬಂದವು. ಆದರೆ, ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಸರಕಾರ ನೈತಿಕತೆ ಪ್ರಶ್ನೆ ಎದುರಿಸಬಾರದು ಎಂಬ ಕಾರಣಕ್ಕೆ ನಾವೆಲ್ಲರೂ ಸುಮ್ಮನಿದ್ದೆವು. ಆದರೆ, ಕಣ್ಣ ಮುಂದಿನ ಇಂಥ ಬೇಜವಾಬ್ದಾರಿತನ, ಪ್ರಚಾರಪ್ರಿಯತೆಯನ್ನು ಸಹಿಸಲಾಗದು.”

ಕೊರೊನಾ ವೈರಸ್‌ ಹೊಡೆತಕ್ಕೆ ರಾಷ್ಟ್ರವೇ ತತ್ತರಿಸಿದೆ. ಜನ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಇಂಥ ಸೂತಕದ ಸಂದರ್ಭದಲ್ಲಿ ರಾಜ್ಯಸರ್ಕಾರ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಎಲ್ಲ ಪತ್ರಿಕೆಗಳ ಮುಖಪುಟದಲ್ಲಿ ಪ್ರಧಾನಿ ನಗುಮೊಗದ ಜಾಹೀರಾತೊಂದನ್ನು ನೀಡಿದೆ. ಈ ಮೂಲಕ ಜನರ ನೋವನ್ನು ಗೇಲಿ ಮಾಡಿದೆ. ಇದು ನಿಜಕ್ಕೂ ಆತ್ಮಸಾಕ್ಷಿಯ ನಡೆಯಲ್ಲ!
1/5

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 22, 2021

ಜನರ ಪ್ರಾಣ ರಕ್ಷಿಸಬೇಕು

“ಈ ದುರಂತ ಕಾಲದಲ್ಲಿ ಸರಕಾರ ಜನರ ಪ್ರಾಣ ರಕ್ಷಣೆಗಾಗಿ ಪಣತೊಡಬೇಕೆ ಹೊರತು, ಪ್ರಚಾರದಲ್ಲಿ ತೊಡಗಬಾರದಿತ್ತು. ಬಿಜೆಪಿಯ ಪ್ರಚಾರಪ್ರಿಯತೆ ಎಲ್ಲರಿಗೂ ತಿಳಿದಿರುವ ವಿಚಾರವೇ. ಆದರೆ, ಈ ಸನ್ನಿವೇಶದಲ್ಲಾದರೂ ಅದನ್ನು ನಿಲ್ಲಿಸಿ ಮಾದರಿ ನಡೆ ಅನುಸರಿಸಬೇಕಿತ್ತು. ಜನರ ವಿಶ್ವಾಸ ಗೆಲ್ಲಿ, ಇಲ್ಲದೇ ಹೋದರೆ, ನಿಮ್ಮ ಪ್ರಚಾರಗಳೆಲ್ಲವೂ ಋಣವಾಗುತ್ತದೆ.”

ಬರೀ ಮ್ಯಾರಥಾನ್‌ ಸಭೆಗಳಷ್ಟೇ

“ಕೋವಿಡ್‌ ತಡೆಯುವ ಕುರಿತು ಸರ್ಕಾರ ಮ್ಯಾರಥಾನ್‌ ಸಭೆಗಳನ್ನು ಮಾಡಿದೆ, ವಿರೋಧ ಪಕ್ಷದ ನಾಯಕರ ಸಲಹೆ ಪಡೆದಿದೆ. ಜನರನ್ನು ಸೋಂಕಿನಿಂದ ದೂರವಿಡಲು ಮಾರ್ಗಸೂಚಿಗಳನ್ನು ಮಂಗಳವಾರ ಪ್ರಕಟಿಸಿದೆ. ಆದರೆ, ಈಗಾಗಲೇ ಸೋಂಕಿಗೆ ತುತ್ತಾಗಿರುವ ಜನರನ್ನು ರಕ್ಷಿಸಲು, ಅವರ ಜೀವ ಉಳಿಸಲು ಏನು ಕ್ರಮ ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ಸರಕಾರ ಮಾತಾಡಬೇಕು.”

ಸರಕಾರದ ದೈನೇಸಿ ಸ್ಥಿತಿ

“ಒಂದೆಡೆ ಸೂಕ್ತ ಚಿಕಿತ್ಸೆ ಸಿಗದೇ ಸೋಂಕಿತರು ಪರದಾಡುತ್ತಿದ್ದಾರೆ. ಆರೋಗ್ಯ ಸೇವೆ ಒದಗಿಸಲಾಗದ ಸರಕಾರದ ದೈನೇಸಿ ಸ್ಥಿತಿಯ ಬಗ್ಗೆ ಜನರು ಆತಂಕಗೊಂಡಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಜನರಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸವನ್ನು ಸರ್ಕಾರ ಮಾಡಬೇಕಲ್ಲವೇ? ಜನರ ರಕ್ಷಣೆಗಾಗಿ ಮಾಡಿಕೊಂಡಿರುವ ಆರೋಗ್ಯ ವ್ಯವಸ್ಥೆಯ ಬಗ್ಗೆ ಸರಕಾರ ಹೇಳಬೇಕಲ್ಲವೇ?”

“ಜನರನ್ನು ಯಾವುದೇ ಹಂತದಲ್ಲಿ ಸರ್ಕಾರ ರಕ್ಷಣೆ ಮಾಡುತ್ತದೆ. ಅವರ ಜೀವಕ್ಕೆ ಆಧಾರವಾಗಿರುತ್ತದೆ ಎಂಬ ವಿಶ್ವಾಸವನ್ನು ತುಂಬುವುದು ಅಗತ್ಯ. ಅದು ಬಿಟ್ಟು ಯಾವುದೇ ಕಠಿಣ ಕ್ರಮಗಳನ್ನು ಕೈಗೊಂಡರೂ ಅದು ನಗಣ್ಯ. ಈ ವಿಷಯವನ್ನು ಸರಕಾರ ಗಮನದಲ್ಲಿಟ್ಟುಕೊಳ್ಳಬೇಕು. ಆರೋಗ್ಯ ವ್ಯವಸ್ಥೆಯ ಕೊರತೆ ನೀಗಿಸುವ ಕ್ರಮಗಳ ಬಗ್ಗೆ ಸರಕಾರ ಮಾತಾಡಬೇಕು.”

https://www.youtube.com/watch?v=va4fuO6N4p0

ಹೀಗೆ ಟ್ವೀಟ್‌ ಮಾಡಿರುವ ಎಚ್‌ ಡಿ ಕುಮಾರಸ್ವಾಮಿ ಅವರು ತಾವು ಚಿಕಿತ್ಸೆ ಪಡೆಯುತ್ತಿರುವ ಕೋವಿಡ್‌ ಆಸ್ಪತ್ರೆಯಿಂದಲೇ ವಿಡಿಯೋ ಒಂದನ್ನು ಬಿಡುಗಡೆ ಮಾಡಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಕಾರ ಬೇಜವಾಬ್ದಾರಿ ನಡವಳಿಕೆ ಬಿಡದಿದ್ದರೆ ಜನರೇ ರೊಚ್ಚಿಗೇಳಲಿದ್ದಾರೆಂದು ಅವರು ಎಚ್ಚರಿಕೆ ನೀಡಿದ್ದಾರೆ.

ದಿಲ್ಲಿ ಪತ್ರಿಕೆಗಳಲ್ಲೂ ಮೋದಿ ಜಾಹೀರಾತು

ಕರ್ನಾಟಕದ ಕನ್ನಡ ಮತ್ತು ಇಂಗ್ಲೀಷ್‌ ಪತ್ರಿಕೆಗಳಲ್ಲಿ ಮಾತ್ರ ಮೋದಿ ಜಾಹೀರಾತು ನೀಡಿರುವುದಷ್ಟೇ ಅಲ್ಲ, ದೆಹಲಿಯ ಎಲ್ಲ ಇಂಗ್ಲೀಷ್‌ ಮತ್ತು ಹಿಂದಿ ಪತ್ರಿಕೆಗಳಿಗೂ ಈ ಜಾಹೀರಾತು ಕೊಡಲಾಗಿದೆ. ಮೋದಿ ಅವರನ್ನು ಓಲೈಸಿ ಖುಷಿಪಡಿಸಬೇಕು ಎಂಬುದನ್ನು ಬಿಟ್ಟರೆ ಮುಖ್ಯಮಂತ್ರಿಗೆ ಬೇರೆ ಉದ್ದೇಶ ಇಲ್ಲ. ಜನರ ದುಡ್ಡನ್ನು ಹೀಗೆ ಪೋಲು ಮಾಡುವುದು ಅಕ್ಷಮ್ಯ ಎಂದು ಎಚ್‌ಡಿಕೆ ಟೀಕಿಸಿದ್ದಾರೆ.

ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳಲ್ಲೂ ಈ ಜಾಹೀರಾತು ಹೆಚ್ಚು ಸದ್ದು ಮಾಡುತ್ತಿದೆ.

PM shining. For the rest of India, blood, sweat and tears. The horror! The horror! pic.twitter.com/e5lHLGTT4g

— Karthika V.K. (@karthikavk) April 22, 2021
  • ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ಕೋವಿಡ್‌ ನಡುವೆಯೂ ಸಿಲಿಕಾನ್‌ ಸಿಟಿಗೆ ಗುಡ್‌ ನ್ಯೂಸ್‌! ₹14,788 ಕೋಟಿ ವೆಚ್ಚದ ಬೆಂಗಳೂರು ನಗರ & ಏರ್‌ಪೋರ್ಟ್ ಮೆಟ್ರೋ ಯೋಜನೆಗೆ ಗ್ರೀನ್‌ ಸಿಗ್ನಲ್ ‌ಕೊಟ್ಟ ಕೇಂದ್ರ ಸರಕಾರ

Tags: advertisementhd kumaraswamykarnatakamodi advertisement controversynamma metronarendra modi
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಲಾಕ್‌ಡೌನ್‌ ರೀತಿಯಲ್ಲೇ ವೀಕೆಂಡ್‌ ಕರ್ಫ್ಯೂ; ಅನವಶ್ಯಕವಾಗಿ ಹೊರಗಿನಿಂದ  ಬೆಂಗಳೂರಿಗೆ ಬರುವವರನ್ನು ನಿರ್ಬಂಧಿಸಲು  ಪೊಲೀಸರಿಗೆ ಸೂಚನೆ ಕೊಟ್ಟ ಬೊಮ್ಮಾಯಿ

ಲಾಕ್‌ಡೌನ್‌ ರೀತಿಯಲ್ಲೇ ವೀಕೆಂಡ್‌ ಕರ್ಫ್ಯೂ; ಅನವಶ್ಯಕವಾಗಿ ಹೊರಗಿನಿಂದ ಬೆಂಗಳೂರಿಗೆ ಬರುವವರನ್ನು ನಿರ್ಬಂಧಿಸಲು ಪೊಲೀಸರಿಗೆ ಸೂಚನೆ ಕೊಟ್ಟ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

Recommended

ಕೃಷಿ ಅಧಿಕಾರಿಗಳ ಬಂಧನದಿಂದ ವರ್ಗಾವಣೆ ದಂಧೆ, ಮಂತ್ರಿಗಳಿಂದ ಸುಲಿಗೆ ‘ ಅಸಲಿ ‘ ಎನ್ನುವುದು ಸಾಬೀತು

ಕೃಷಿ ಅಧಿಕಾರಿಗಳ ಬಂಧನದಿಂದ ವರ್ಗಾವಣೆ ದಂಧೆ, ಮಂತ್ರಿಗಳಿಂದ ಸುಲಿಗೆ ‘ ಅಸಲಿ ‘ ಎನ್ನುವುದು ಸಾಬೀತು

3 years ago
ಹೊಸ ವರ್ಷಕ್ಕೆ ಕೋವಿಡ್‌ ವ್ಯಾಕ್ಸಿನ್

ಸಮಾಧಾನದ ಸುದ್ದಿ!; ಸೇರೊ ಸಮೀಕ್ಷೆಯಲ್ಲಿ ರಾಜ್ಯದ 16% ಜನರಲ್ಲಿ ಕೋವಿಡ್ ಪ್ರತಿಕಾಯ: ಡಾ.ಕೆ.ಸುಧಾಕರ್‌

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ