• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ದಿಲ್ಲಿಗಿಂತ ಕರಾಬ್‌ ಆಯಿತಾ ಕರ್ನಾಟಕ? ಕೋಲಾರದ ನಂತರ ಚಾಮರಾಜನಗರ ಆಸ್ಪತ್ರೆಯಲ್ಲೂ ಆಕ್ಸಿಜನ್‌ ಘೋರ ವೈಫಲ್ಯ; ನರಳಿ ನರಳಿ ಜೀವಬಿಟ್ಟ 24 ಕೋವಿಡ್‌ ಸೋಂಕಿತರು

cknewsnow desk by cknewsnow desk
May 3, 2021
in COVID-19, NATION, STATE
Reading Time: 2 mins read
0
ದಿಲ್ಲಿಗಿಂತ ಕರಾಬ್‌ ಆಯಿತಾ ಕರ್ನಾಟಕ? ಕೋಲಾರದ ನಂತರ ಚಾಮರಾಜನಗರ ಆಸ್ಪತ್ರೆಯಲ್ಲೂ ಆಕ್ಸಿಜನ್‌ ಘೋರ ವೈಫಲ್ಯ; ನರಳಿ ನರಳಿ ಜೀವಬಿಟ್ಟ 24 ಕೋವಿಡ್‌ ಸೋಂಕಿತರು
913
VIEWS
FacebookTwitterWhatsuplinkedinEmail

ಪಾಠ ಕಲಿಯದ ಸರಕಾರ I ಮೃತರ ಸಂಬಂಧಿಕರ ಹಾಹಾಕಾರ I ರಾಜ್ಯದ ಉದ್ದಗಲಕ್ಕೂ ಭುಗಿಲೆದ್ದ ಆಕ್ರೋಶ I ತನಿಖೆಗೆ ಸರಕಾರ ಆದೇಶ I ನ್ಯಾಯಾಂಗ ತನಿಖೆಗೆ ಆಗ್ರಹ

ಚಾಮರಾಜನಗರ: ಕೋಲಾರದಲ್ಲಿ ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಕೋಲಾರದ ಜಿಲ್ಲಾಸ್ಪತ್ರೆಯಲ್ಲಿ ಐವರು ಸೋಂಕಿತರು ಸಾವನ್ನಪ್ಪಿದ ಧಾರುಣ ಘಟನೆ ಮರೆಯುವ ಮುನ್ನವೇ ಚಾಮರಾಜನಗರ ಜಿಲ್ಲೆಯ ಜಿಲ್ಲಾಸ್ಪತ್ರೆಯಲ್ಲಿ ಇದೇ ರೀತಿಯ ಘಟನೆ ಸಂಭವಿಸಿ 24ಕ್ಕೂ ಹೆಚ್ಚು ಕೋವಿಡ್‌ ಸೋಂಕಿತರು ಬಲಿಯಾಗಿದ್ದಾರೆ.

ದಿಲ್ಲಿ ನಂತರ ದೇಶದಲ್ಲಿ ಕೋವಿಡ್‌ ಪರಿಸ್ಥಿತಿ ವಿಷಮ ಸ್ಥಿತಿಗೆ ಹೋಗಿರುವ ರಾಜ್ಯ ಕರ್ನಾಟವೇ ಆಗಿದ್ದು, 24 ಸೋಂಕಿತರ ಸಾವು ಇಡೀ ರಾಜ್ಯ ಮತ್ತು ದೇಶವನ್ನು ಕಂಪಿಸುವಂತೆ ಮಾಡಿದೆ. ಜನರು ಸರಕಾರಕ್ಕೆ ಹಿಡಿಶಾಪ ಹಾಕುತ್ತಿದ್ದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ರಾತ್ರೋರಾತ್ರಿ ಖಾಲಿಯಾದ ಆಕ್ಸಿಜನ್ ಗೊ ಅಥವಾ ಸರಬರಾಜಿನಲ್ಲಿ ಆದ ತಾಂತ್ರಿಕ ತೊಂದರೆಯಿಂದಲೇ 24ಕ್ಕೂ ಹೆಚ್ಚು ಕೋವಿಡ್‌ ರೋಗಿಗಳು ಸಾವನ್ನಪ್ಪಿರುವ ಸಾಧ್ಯತೆ ಎಂದು ಮೂಲಗಳು ತಿಳಿಸಿವೆ.

ಇನ್ನೊಂದೆಡೆ ಜಿಲ್ಲಾಧಿಕಾರಿ ಎಂ.ಆರ್.ರವಿ ಹೇಳಿಕೆ ನೀಡಿದ್ದು, ಮೈಸೂರಿನಿಂದ ಸರಿಯಾದ ಸಮಯಕ್ಕೆ ಆಕ್ಸಿಜನ್ ಪೂರೈಕೆಯಾಗಲಿಲ್ಲ, ಈ ಕಾರಣಕ್ಕೆ ರೋಗಿಗಳು ಮೃತಪಟ್ಟಿದ್ದಾರೆ ಎಂದಿದ್ದಾರೆ.

ಚಾಮರಾಜನಗರ ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ಸುಮಾರು ಕಳೆದ ರಾತ್ರಿ 11.40ರಿಂದ 12-20ರ ಸರಿಸುಮಾರಿನಲ್ಲಿ ಆಕ್ಸಿಜನ್ ಖಾಲಿಯಾಗಿದೆ ಎಂಬ ನಿಖರ ಮಾಹಿತಿ ಸಿಕ್ಕಿದೆ.

ಕಳೆದ ರಾತ್ರಿ 16 ಸೋಂಕಿತರು ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು, ಸೋಮವಾರ ಬೆಳಗಿನಜಾವ ನಾಲ್ವರಿಗಿಂತ ಹೆಚ್ಚು ಕೋವಿಡ್ ಸೋಂಕಿತರು ಆಮ್ಲಜನಕ ಇಲ್ಲದೆ ನರಕಯಾತನೆ ಅನುಭವಿಸಿ ಪ್ರಾಣ ಬಿಟ್ಟಿದ್ದಾರೆ ಎಂದು ಗೊತ್ತಾಗಿದೆ. ಮೈಸೂರಿನಿಂದ ಆಕ್ಷಿಜನ್‌ ಬರುವ ಹೊತ್ತಿಗೆ ಬಹತೇಕರ ಜೀವ ಹೋಗಿತ್ತು ಎಂದು ಮೂಲಗಳು ತಿಳಿಸಿವೆ.

ಜಿಲ್ಲಾಡಳಿತ ಮಾತ್ರ ಸಮಸ್ಯೆ ಉಂಟಾಗಿಲ್ಲ ಎಂದು ಸರಕಾರದ ಪರವಾಗಿ ಬ್ಯಾಟಿಂಗ್ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಮೃತರ ಸಂಬಂಧಿಕರ ಆಕ್ರೋಶ ಕಟ್ಟೆಯೊಡೆದಿದೆ.

ಸ್ಥಳೀಯ ಶಾಸಕ ಪುಟ್ಟರಂಗಶೆಟ್ಟಿ ಅವರು ಹೇಳಿರುವಂತೆ, “ಆಕ್ಸಿಜನ್ ಸಮಸ್ಯೆ ಉಂಟಾಗಿರುವುದರಿಂದಲೇ ಈ ಸಾವುಗಳು ಆಗಿವೆ ಎಂದು ತಿಳಿಸಿದ್ದಾರೆ. ರೋಗಿಗಳ ಕುಟುಂಬದವರು ರಾತ್ರಿ ಆದ ಸಮಸ್ಯೆಗೆ ಪೂರಕ ಎಂಬಂತೆ ಟವಲ್, ಪೇಪರ್ʼಗಳಲ್ಲಿ ರೋಗಿಗಳಿಗೆ ಗಾಳಿ ಬೀಸಿತ್ತಿರುವ ವಿಡಿಯೋ ಕೂಡ ವೈರಲ್ ಆಗಿದ್ದು ಶಾಸಕರ ಹೇಳಿಕೆಗೆ ಪೂರಕವಾಗಿದೆ.

Karnataka | 24 patients, including COVID-19 patients, died at Chamarajanagar District Hospital due to oxygen shortage & others reasons in last 24 hours. We are waiting for the death audit report: District Incharge Minister Suresh Kumar

(Visuals from outside the hospital) pic.twitter.com/8wEOkEEBvm

— ANI (@ANI) May 3, 2021

ನ್ಯಾಯಾಂಗ ತನಿಖೆಯಾಗಲಿ

ಒಂದೆಡೆ ಆಕ್ಸಿಜನ್ ಖಾಲಿಯಾಗಿಲ್ಲ ಎಂದು ಜಿಲ್ಲಾಡಳಿತ ಹೇಳಿಕೆ ನೀಡಿ ಜಾರಿಕೊಂಡಿದ್ದು, .
ಮೃತರ ಸಂಬಂಧಿಕರು ಆಕ್ಸಿಜನ್ ಕೊರತೆಯಿಂದಲೇ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿದ್ದಾರೆ. ಹೀಗಾಗಿ ಇಡೀ ಘಟನೆಯನ್ನು ನ್ಯಾಯಾಂಗ ತನಿಖೆ ಮಾಡಿಸಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ.

ನ್ಯಾಯಾಂಗ ವ್ಯವಸ್ಥೆ ತನಿಖೆ ನಡೆಸಿ, ಆಕ್ಸಿಜನ್ ಪ್ರಮಾಣ ಯಾವಾಗ ಖಾಲಿಯಾಯಿತು? ಅದು ಎಷ್ಟು ರೋಗಿಗಳಿಗೆ ಸರಬರಾಜಾಗಿದೆ? ಆ ಸಾವಿಗೆ ನಿಖರ ಮಾಹಿತಿ ಎಲ್ಲವನ್ನೂ ಕಲೆಹಾಕಿ ಕರ್ತವ್ಯಲೋಪ ಮಾಡಿದ ಆಸ್ಪತ್ರೆ ಸಿಬ್ಬಂದಿಗೆ ಶಿಕ್ಷೆ ನೀಡಬೇಕಾಗಿದೆ ಎಂದು ಅವರು ಆಗ್ರಹಪಡಿಸಿದ್ದಾರೆ.

ಸಿಎಂ ದಿಗ್ಭ್ರಮೆ, ಆರೋಗ್ಯ ಸಚಿವರಿಗೆ ಕ್ಲಾಸ್‌

ಚಾಮರಾಜನಗರ ದುರಂತದ ಸುದ್ದಿ ತಿಳಿದ ಕೂಡಲೇ ತೀವ್ರ ಶಾಕ್‌ಗೆ ಗುರಿಯಾದ ಮುಖ್ಯಮಂತ್ರಿ ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.‌ಸುರೇಶ್‌ ಕುಮಾರ್‌ ಅವರಿಬ್ಬರನ್ನು ತರಾಟೆಗೆ ತೆಗೆದುಕೊಂಡಿದ್ದಾರೆಂದು ಗೊತ್ತಾಗಿದೆ. ಕೂಡಲೇ ಚಾಮರಾಜನಗರಕ್ಕೆ ತೆರಳುವಂತೆ ಆರೋಗ್ಯ ಸಚಿವರಿಗೆ ಸಿಎಂ ಸೂಚಿಸಿದ್ದಾರಲ್ಲದೆ, ಈ ಬಗ್ಗೆ ಪೂರ್ಣ ವರದಿ ನೀಡುವಂತೆ ಆದೇಶ ನೀಡಿದ್ದಾರೆ.

ಈ ದುರ್ಘಟನೆ ಹಿನ್ನೆಲೆಯಲ್ಲಿ ಜನರ ಆಕ್ರೋಶ ತೀವ್ರವಾಗುತ್ತಿದ್ದು, ಮುಖ್ಯಮಂತ್ರಿ ಅವರು ನಾಳೆ ಸಚಿವ ಸಂಪುಟದ ತುರ್ತುಸಭೆ ಕರೆದಿದ್ದಾರೆ. ಅಲ್ಲದೆ, ಚಾಮರಾಜನಗರ ಜಿಲ್ಲಾಧಿಕಾರಿ ಜತೆ ಮೊಬೈಲ್‌ನಲ್ಲಿ ಮಾತನಾಡಿದ್ದಾರೆ!

ಇನ್ನೊಂದೆಡೆ ಚಾಮರಾಜನಗರ ಜಿಲ್ಲಾಸ್ಪತ್ರೆ ಮುಂದೆ ಜನರು ಜಿಲ್ಲಾಡಳಿತ ಮತ್ತು ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ತನಿಖೆಗೆ ಸರಕಾರ ಆದೇಶ

ಈ ದುರಂತದ ತನಿಖೆಗೆ ಸರಕಾರ ಆದೇಶ ನೀಡಿದೆ. ಆಮ್ಲಜನಕದ ಕೊರತೆಯಿಂದಲೇ ಸೋಂಕಿತರು ಸಾವನ್ನಪ್ಪಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಆದರೂ ಸಮಗ್ರ ತನಿಖೆ ನಡೆಸಲು ಐಎಎಸ್ ಅಧಿಕಾರಿ ಶಿವಯೋಗಿ ಕಳಸದ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ಮೂರು ದಿನಗಳ ಒಳಗೆ ವರದಿ ಸಲ್ಲಿಸುವಂತೆ ಅವರಿಗೆ ನಿರ್ದೇಶನ ನೀಡಲಾಗಿದೆ. 

Tags: chamarajanagar district hospitalcovid19karnatakamedical oxygen tragedymysore
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಆಮ್ಲಜನಕ, ರೆಮಿಡಿಸ್ವೀರ್‌ ಕೃತಕ ಅಭಾವ ಸೃಷ್ಟಿ!! ಸೋಂಕಿತರ ಸಂಖ್ಯೆಗೂ-ಬೇಡಿಕೆಗೂ ತಾಳ-ಮೇಳವಿಲ್ಲ, ಸಪ್ಲೈ ಆಗುತ್ತಿರುವುದೆಲ್ಲ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ ಡಿಸಿಎಂ

ಎರಡನೇ ಅಲೆಯ ಅಬ್ಬರ: ಕೋವಿಡ್‌ ಕಾರ್ಯಪಡೆಗೆ ಮುಖ್ಯಮಂತ್ರಿ #BSY ಟ್ರೀಟ್‌ಮೆಂಟ್; ಗೋವಿಂದ ಕಾರಜೋಳ ಬದಲಿಗೆ ಡಿಸಿಎಂ ಡಾ.ಅಶ್ವತ್ಥನಾರಾಯಣ ನೇತೃತ್ವ

Leave a Reply Cancel reply

Your email address will not be published. Required fields are marked *

Recommended

ಹೆಚ್.ಡಿ.ಕುಮಾರಸ್ವಾಮಿ ಬೀಸಿದ ಚಾಟಿಯಿಂದ ಎಚ್ಚೆತ್ತ ಸರಕಾರ

ಜಾತಿ ಗಣತಿಯಿಂದ ಜಾತಿ ದ್ವೇಷ

3 years ago
ಮುಂದಿನ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಗುಟ್ಟುಬಿಟ್ಟುಕೊಟ್ಟ ಬಂಗಾರಪೇಟೆ ಶಾಸಕ ಎಸ್.ಎನ್‌.ನಾರಾಯಣಸ್ವಾಮಿ

ತೆರಿಗೆ ಹೂವಿನಿಂದ ಮಕರಂದ ತೆಗೆದಂತಿರಬೇಕು, ಜನರಿಗೆ ಹಿಂಸೆ ಕೊಡಬಾರದು: ಸಿದ್ದು

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ