• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತವರು ಜಿಲ್ಲೆಯಲ್ಲೇ ಕಂಟ್ರೋಲ್‌ಗೆ ಬರುತ್ತಿಲ್ಲ ಮಹಾಮಾರಿ ಕೊರೋನ!!, ಚಿಕ್ಕಬಳ್ಳಾಪುರ ಜಿಲ್ಲೆ 4 ದಿನ ಕಂಪ್ಲೀಟ್ ಲಾಕ್‌ಡೌನ್‌

cknewsnow desk by cknewsnow desk
May 17, 2021
in CHIKKABALLAPUR, COVID-19, STATE
Reading Time: 2 mins read
0
ಬಾಗೇಪಲ್ಲಿಯಲ್ಲಿ ವೀಕೆಂಡ್‌ ಲಾಕ್‌ಡೌನ್‌ ಸಕ್ಸಸ್;‌ ಪಟ್ಟಣ ಸೇರಿ ತಾಲೂಕಿನಾದ್ಯಂತ ಜನಜೀವನ ಬಹತೇಕ ಸ್ತಬ್ಧ
917
VIEWS
FacebookTwitterWhatsuplinkedinEmail
ಮೇಲಿನ ಚಿತ್ರ: ಬಾಗೇಪಲ್ಲಿ ವೀಕೆಂಡ್‌ ಲಾಕ್‌ಡೌನ್‌ ಸಾಂದರ್ಭಿಕ ಚಿತ್ರ.

ಮೇ 20ರಿಂದ 4 ದಿನ ಇಡೀ ಜಿಲ್ಲೆ ಸಂಪೂರ್ಣ ಬಂದ್‌; ಏನಿರುತ್ತದೆ? ಏನಿರಲ್ಲ? ಇಲ್ಲಿದೆ ಪೂರ್ಣ ಮಾಹಿತಿ

ಸೋಂಕು ನಿರ್ವಹಣೆಯಲ್ಲಿ ಇಡೀ ರಾಜ್ಯಕ್ಕೆ ಮಾದರಿ ಜಿಲ್ಲೆ ಎಂದು ಉಸ್ತುವಾರಿ ಸಚಿವರು ಬೆನ್ನುತಟ್ಟಿದ ಬರೀ ನಾಲ್ಕೇ ದಿನದಲ್ಲಿ ಲಾಕ್‌ಡೌನ್‌ ಘೋಷಣೆ ಮಾಡಿದ ಜಿಲ್ಲಾಧಿಕಾರಿ!!

ಚಿಕ್ಕಬಳ್ಳಾಪುರ: ನಿಯಂತ್ರಣಕ್ಕೆ ಬಾರದೆ ತೀವ್ರವಾಗಿ ಹರಡುತ್ತಿರುವ ಕೋವಿಡ್ ಸೋಂಕನ್ನು ಕಟ್ಟಿ ಹಾಕಲು ಆರೋಗ್ಯ ಸಚಿವರ ತವರು ಚಿಕ್ಕಬಳ್ಳಾಪುರ ಜಿಲ್ಲೆ ಲಾಕ್‌ಡೌನ್‌ಗೆ ಶರಣಾಗಿದೆ.

ಇಡೀ ರಾಜ್ಯದಲ್ಲೇ ಕೋವಿಡ್‌ ನಿರ್ವಹಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಮಾದರಿ ಎಂದು ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಬೆನ್ನು ತಟ್ಟಿದ ನಾಲ್ಕೇ ದಿನಗಳಲ್ಲೇ ಜಿಲ್ಲಾಧಿಕಾರಿ ಆರ್.ಲತಾ ವಾರು ನಾಲ್ಕು ದಿನಗಳ ಲಾಕ್‌ಡೌನ್‌ ಘೋಷಣೆ ಮಾಡಿದ್ದಾರೆ.

ಮೇ 20ರಿಂದ 23ರವರೆಗೆ (ಗುರುವಾರದಿಂದ ಭಾನುವಾರ ವರೆಗೆ) ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲಾಗುತ್ತದೆ. ವೈದ್ಯ ಸೇವೆ, ಹಾಲು, ಪತ್ರಿಕೆ, ಆಸ್ಪತ್ರೆ ಇನ್ನಿತರೆ ಅತ್ಯಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಚಟುವಟಿಕೆಗಳ ಮೇಲೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯ ಸರಕಾರವು ಕೋವಿಡ್‌ ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್‌ಡೌನ್ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ವಿವೇಚನಾಧಿಕಾರ ಹೊಂದಿರುತ್ತಾರೆ ಎಂದು ನಿರ್ದೇಶನ ನೀಡಿದ ಬೆನ್ನಲ್ಲೇ ಚಿಕ್ಕಬಳ್ಳಾಪುರ ಲಾಕ್‌ಡೌನ್‌ ನಿರ್ಧಾರ ಕೈಗೊಳ್ಳಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರ ಜತೆ ಚರ್ಚಿಸಿದ ಬಳಿಕ ಸಚಿವರ ಸೂಚನೆಯಂತೆ ಜಿಲ್ಲೆಯಲ್ಲಿ ನಾಲ್ಕು ದಿನಗಳ ಸಂಪೂರ್ಣ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಜನರ ಒಳಿತಿಗಾಗಿಯೇ ಮಾಡಲಾಗುತ್ತಿರುವ ಈ ನಾಲ್ಕು ದಿನಗಳ ಲಾಕ್‌ಡೌನ್‌ಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಡಿಸಿ ಮನವಿ ಮಾಡಿದರು.

ಹೋಮ್‌ ಐಸೋಲೇಷನ್‌ಗೆ ಅವಕಾಶ ಇಲ್ಲ

ಪ್ರಸ್ತುತ ಜಿಲ್ಲೆಯಲ್ಲಿನ 8 ಕೋವಿಡ್ ಕೇರ್ ಸೆಂಟರ್‌ಗಳಲ್ಲಿ 9,144 ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ಈ ಕೇಂದ್ರಗಳಲ್ಲಿ 382 ಜನ ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕು ಹೆಚ್ಚುತ್ತಿರುವ ಕಾರಣ ಸೋಂಕಿತರ ಮನೆಯವರಿಗೆ ಹಾಗೂ ಅಕ್ಕಪಕ್ಕದವರಿಗೆ ಸೋಂಕು ಹರಡಬಾರದು ಎಂಬ ಉದ್ದೇಶದಿಂದ ಮನೆಯವರನ್ನು ಹೊರತುಪಡಿಸಿ ಪ್ರತ್ಯೇಕವಾಗಿ ವಾಸಿಸಲು ಕೊಠಡಿ, ಶೌಚಾಲಯ ವ್ಯವಸ್ಥೆ ಇಲ್ಲದಿರುವ ಪ್ರತಿಯೊಬ್ಬರನ್ನು ನಮ್ಮ ಸ್ಥಳೀಯ ಮಟ್ಟದ ಅಧಿಕಾರಿಗಳು ಹಾಗೂ ಮೆಡಿಕಲ್ ಆಫೀಸರ್ʼಗಳು ಗುರುತಿಸಿದ ಸೋಂಕಿತರನ್ನು ಕೋವಿಡ್ ಆರೈಕೆ ಕೇಂದ್ರಗಳಿಗೆ ಸ್ಥಳಾಂತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿನ 22 ವಸತಿ ನಿಲಯಗಳು ಹಾಗೂ 46 ಸಮುದಾಯ ಭವನಗಳನ್ನು ಬಳಸಿಕೊಂಡು 9,144 ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ಬಾಣಸಿಗರಿಂದ ಹಿಡಿದು ಗುಣಮಟ್ಟದ ಆಹಾರ, ಸ್ವಚ್ಛತೆ, ಬಿಸಿ ನೀರು, ಶುದ್ಧ ಕುಡಿಯುವ ನೀರು ಸೇರಿದಂತೆ ಕೋವಿಡ್ ಕೇರ್ ಸೆಂಟರ್‌ಗಳಿಗೆ ಬೇಕಾದ ಎಲ್ಲ ರೀತಿಯ ಮೂಲ ಸೌಕರ್ಯಗಳನ್ನು ಒದಗಿಸಲು ನೋಡೆಲ್ ಅಧಿಕಾರಿಗಳನ್ನು ವಿವಿಧ ತಂಡಗಳಾಗಿ ರಚಿಸಲಾಗಿ ಉಸ್ತುವಾರಿ ವಹಿಸಲಾಗಿದೆ ಎಂದರು ಜಿಲ್ಲಾಧಿಕಾರಿ.

ಏನಿರುವುದಿಲ್ಲ?

  • ಎಲ್ಲ ರೀತಿಯ ಮದ್ಯದಂಗಡಿಗಳು ಬಂದ್
  • ಚಿಂತಾಮಣಿ ಎಪಿಎಂಸಿಯ ಗುರುವಾರ & ಶನಿವಾರದ ಮಾರುಕಟ್ಟೆ ಹೊರತುಪಡಿಸಿ
  • 4 ದಿನ ಉಳಿದೆಲ್ಲ ಎಪಿಎಂಸಿ ಮಾರುಕಟ್ಟೆಗಳು ಸಂಪೂರ್ಣ ಬಂದ್
  • ಕೋವಿಡ್ ಆಸ್ಪತ್ರೆಗಳ ಹತ್ತಿರದ ಹೋಟೆಲ್‌ಗಳು ಹೊರತುಪಡಿಸಿ ಉಳಿದ ಹೋಟೆಲ್‌ಗಳು ಇರುವುದಿಲ್ಲ
  • ಅಂತರ ಜಿಲ್ಲೆ, ಅಂತಾರಾಜ್ಯ ವಾಹನಗಳಿಗೆ ನಿರ್ಬಂಧ
  • ಎಟಿಎಂ ಹೊರತುಪಡಿಸಿ ಎಲ್ಲಾ ಬ್ಯಾಂಕುಗಳು ಕೂಡ ಸಂಪೂರ್ಣ ಬಂದ್
  • ಹಾಲು ಖರೀದಿಗೆ ವಾಹನಗಳ ಬಳಕೆ ಮಾಡುವಂತಿಲ್ಲ
  • ನಗರ & ಪಟ್ಟಣಗಳಲ್ಲಿರುವ ಪೆಟ್ರೋಲ್‌ ಬಂಕ್‌ಗಳು ಇರಲ್ಲ

ಏನಿರುತ್ತದೆ?

  • ಬೆಳಗ್ಗೆ 6ರಿಂದ 10ವರೆಗೂ ಹಾಲು ಖರೀದಿಗೆ ಅವಕಾಶ
  • ಮೆಡಿಕಲ್ ಶಾಪ್, ಆಸ್ಪತ್ರೆಗಳು ಎಂದಿನಂತೆ ತೆರೆದಿರುತ್ತವೆ
  • ಗುರುವಾರ, ಶನಿವಾರ ಚಿಂತಾಮಣಿ ಎಪಿಎಂಸಿ ಮಾರುಕಟ್ಟೆ
  • ಎಟಿಎಂ ಕೇಂದ್ರಗಳು ಇರುತ್ತವೆ
  • ಹೆದ್ದಾರಿಗಳಲ್ಲಿರುವ ಪೆಟ್ರೋಲ್ ಬಂಕ್‌ಗಳು
  • ಆಸ್ಪತ್ರೆಗಳ ಹತ್ತಿರದ ಹೋಟೆಲ್‌ಗಳಲ್ಲಿ ಪಾರ್ಸೆಲ್‌ಗೆ ಅವಕಾಶ
  • ಕೃಷಿ ಆಧಾರಿತ ಕೈಗಾರಿಕೆಗಳಿಗೆ ಅವಕಾಶ
  • ಫಾರ್ಮಾ ಆಧಾರಿತ ಕೈಗಾರಿಕೆಗಳಿಗೆ ನಿರ್ಬಂಧ ಇಲ್ಲ
  • ಆಹಾರ ಸಂಸ್ಕರಣೆ ಘಟಕಗಳಿಗೆ ಅವಕಾಶ
  • ಸರಕು ಸಾಗಾಟ ವಾಹನಗಳಿಗೆ ಮುಕ್ತ ಅವಕಾಶ
  • ವೈದ್ಯಕೀಯ ಉದ್ದೇಶಕ್ಕಾಗಿ ಹಾಗೂ ಅನಿವಾರ್ಯ ತುರ್ತು ಸಂದರ್ಭಗಳಲ್ಲಿ ಸೂಕ್ತ ದಾಖಲೆ ತೋರಿಸಿದರೆ ಸಂಚಾರಕ್ಕೆ ಅವಕಾಶ

ಅನಗತ್ಯ ಸಂಚರಿಸಿದರೆ ಕೇಸ್:‌ ಎಸ್‌ಪಿ ಮಿಥುನ್‌

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಅಂತಾರಾಜ್ಯ ಮತ್ತು ಅಂತರ ಜಿಲ್ಲಾ ಸಂಚಾರವನ್ನು ಈಗಾಗಲೇ ನಿರ್ಬಂಧಿಸಲಾಗಿದೆ. ಆದರೆ ಗೂಡ್ಸ್ ವಾಹನಗಳಿಗೆ ಮಾತ್ರ ಅವಕಾಶವಿರುತ್ತದೆ. ಈ ಹಿನ್ನೆಲೆಯಲ್ಲಿ ಈಗಾಗಲೇ 27 ಪೋಸ್ಟ್‌ಗಳನ್ನು ಹಾಕಲಾಗಿದ್ದು ಲಾಕ್‌ಡೌನ್ ಅವಧಿಯಲ್ಲಿ ಇನ್ನೂ ಹೆಚ್ಚಿನ ಚೆಕ್ ಪೋಸ್ಟ್‌ಗಳನ್ನು ಹಾಕಲಾಗುವುದು. ಅನವಶ್ಯಕವಾಗಿ ಸಂಚಾರ ಮಾಡುವ ವಾಹನಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಲಾಗುವುದು ಎಂದರು.

  • ಲಾಕ್‌ಡೌನ್‌ ಬಗ್ಗೆ ಜಿಲ್ಲಾಧಿಕಾರಿ ಹೇಳಿದ್ದೇನು? ಕೇಳಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
https://www.youtube.com/watch?v=3PwoSmvYMCQ

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಇಂದಿರಾ ಆರ್. ಕಬಾಡೆ, ಆಹಾರ ಇಲಾಖೆಯ ಉಪ ನಿರ್ದೇಶಕಿ ಸವಿತಾ ಮುಂತಾದವರು ಉಪಸ್ಥಿತರಿದ್ದರು.

Tags: chikkaballapura lockdowncovid19dr k sudhakarfour days lockdownlr latha ias
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಅಧಿಕಾರದ ಕುರ್ಚಿಗೆ ವಿದಾಯ ಹೇಳಲು ಸಿದ್ಧರಾದರಾ ʼಬಲಶಾಲಿʼ ಯಡಿಯೂರಪ್ಪ! ಟೆಂಪಲ್‌ ರನ್‌ ಶುರುವಿಟ್ಟುಕೊಂಡ ಪುತ್ರ ವಿಜಯೇಂದ್ರ: ಹಾಗಾದರೆ, NEXT ಸಿಎಂ ಯಾರಪ್ಪ?

ಅಧಿಕಾರದ ಕುರ್ಚಿಗೆ ವಿದಾಯ ಹೇಳಲು ಸಿದ್ಧರಾದರಾ ʼಬಲಶಾಲಿʼ ಯಡಿಯೂರಪ್ಪ! ಟೆಂಪಲ್‌ ರನ್‌ ಶುರುವಿಟ್ಟುಕೊಂಡ ಪುತ್ರ ವಿಜಯೇಂದ್ರ: ಹಾಗಾದರೆ, NEXT ಸಿಎಂ ಯಾರಪ್ಪ?

Leave a Reply Cancel reply

Your email address will not be published. Required fields are marked *

Recommended

ಸಚಿವರಿಗೆ ಝೀರೋ ಟ್ರಾಫಿಕ್‌ ಸೇವೆ! ಸಿಡಿದೆದ್ದ ಕಾಂಗ್ರೆಸ್‌

ಸಚಿವರಿಗೆ ಝೀರೋ ಟ್ರಾಫಿಕ್‌ ಸೇವೆ! ಸಿಡಿದೆದ್ದ ಕಾಂಗ್ರೆಸ್‌

3 years ago
ರಥಸಪ್ತಮಿ: ಸಕಲ ಜೀವರಾಶಿಗಳನ್ನೂ ಪೊರೆಯುತ್ತಿರುವ ಸಪ್ತಾಶ್ವರಥಾರೋಹಣ ಸೂರ್ಯ ದೇವನ ಆರಾಧನೆ, ಕಣ್ಣಿಗೆ ಕಾಣುವ ದೈವಕ್ಕೆ ಶ್ರದ್ಧೆ-ಭಕ್ತಿಯ ನಮನ

ರಥಸಪ್ತಮಿ: ಸಕಲ ಜೀವರಾಶಿಗಳನ್ನೂ ಪೊರೆಯುತ್ತಿರುವ ಸಪ್ತಾಶ್ವರಥಾರೋಹಣ ಸೂರ್ಯ ದೇವನ ಆರಾಧನೆ, ಕಣ್ಣಿಗೆ ಕಾಣುವ ದೈವಕ್ಕೆ ಶ್ರದ್ಧೆ-ಭಕ್ತಿಯ ನಮನ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ