• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಜೀರ್ಣೋದ್ಧಾರಗೊಂಡ 140 ವರ್ಷಗಳ KGF ಐತಿಹಾಸಿಕ ಬಿಜಿಎಂಎಲ್‌ ಆಸ್ಪತ್ರೆ ಲೋಕಾರ್ಪಣೆ; 20 ಲಕ್ಷ ಅನುದಾನ ಜತೆಗೆ 1,000 KL ಆಕ್ಸಿಜನ್‌ ಘಟಕ ಮಂಜೂರು ಮಾಡಿದ ಕೇಂದ್ರ

cknewsnow desk by cknewsnow desk
May 20, 2021
in COVID-19, KOLAR, STATE
Reading Time: 1 min read
0
ಜೀರ್ಣೋದ್ಧಾರಗೊಂಡ 140 ವರ್ಷಗಳ KGF  ಐತಿಹಾಸಿಕ ಬಿಜಿಎಂಎಲ್‌ ಆಸ್ಪತ್ರೆ ಲೋಕಾರ್ಪಣೆ; 20 ಲಕ್ಷ ಅನುದಾನ ಜತೆಗೆ 1,000 KL ಆಕ್ಸಿಜನ್‌ ಘಟಕ ಮಂಜೂರು ಮಾಡಿದ ಕೇಂದ್ರ
916
VIEWS
FacebookTwitterWhatsuplinkedinEmail

ರೆಡ್‌ ಝೊನ್‌ನಲ್ಲಿರುವ ಕೋಲಾರ ಜಿಲ್ಲೆಗೆ 20 ಆಮ್ಲಜನಕ ಸಾಂದ್ರಕ

ಕೋಲಾರ ಜಿಲ್ಲೆಯ ಕೆಜಿಎಫ್ ನಲ್ಲಿರುವ ಐತಿಹಾಸಿಕ ಬಿಜಿಎಂಲ್ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸಿದ್ದು, ಕೇಂದ್ರ ಸಚಿವ ಶ್ರೇ @JoshiPralhad ಅವರು ಇಂದು ಅದನ್ನು ಲೋಕಾರ್ಪಣೆ ಮಾಡಿದರು. ಅತ್ಯಂತ ಕಡಿಮೆ ಸಮಯದಲ್ಲಿ ಈ ಕೋವಿಡ್ ಆಸ್ಪತ್ರೆ ಸ್ಥಾಪಿಸಲು ಶ್ರಮಿಸಿದ ಎಲ್ಲ ಸ್ವಯಂಸೇವಕರು ಮತ್ತು ಸಿಬ್ಬಂದಿಗಳಿಗೆ ಅಭಿನಂದನೆಗಳು.

1/2 pic.twitter.com/Bqzx6umHW8

— Dr Sudhakar K (Modi ka Parivar) (@DrSudhakar_) May 19, 2021

ಕೆಜಿಎಫ್/ಬೆಂಗಳೂರು: ಪಾಳುಬಿದ್ದು ಅನೈತಿಕ ಚಟುವಟಿಕೆಗಳ ತಾಣವಾಗಿದ್ದ ಕೆಜಿಎಫ್‌ನ ಬಿಜಿಎಂಎಲ್‌ ಆಸ್ಪತ್ರೆಗೆ ಇದೀಗ ಪೂರ್ವವೈಭವ ಮರುಕಳಿಸಿದ್ದು, ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಕಾರ್ಯಕರ್ತರ ಪರಿಶ್ರಮದಿಂದ ಜೀರ್ಣೋದ್ಧಾರವಾಗಿದೆ.

ಹೊಸರೂಪ ಪಡೆದು ನಳನಳಿಸುತ್ತಿರುವ ಈ ಆಸ್ಪತ್ರೆಯನ್ನು ಕೋವಿಡ್‌ ಕೇರ್‌ ಸೆಂಟರ್‌ ಆಗಿ ಬದಲಿಸಲಾಗಿದ್ದು, ಬುಧವಾರ ಕೇಂದ್ರದ ಸಂಸದೀಯ ವ್ಯವಹಾರ ಹಾಗೂ ಗಣಿ ಸಚಿವ ಪ್ರಹ್ಲಾದ ಜೋಶಿ ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಹ್ಲಾದ್‌ ಜೋಶಿ, ಶೀಘ್ರದಲ್ಲೇ ಈ ಆಸ್ಪತ್ರೆಗೆ 1,000 ಲೀಟರ್ ಆ್ಯಕ್ಸಿಜನ್ ಪ್ಲಾಂಟ್ ಮತ್ತು ಆಸ್ಪತ್ರೆಯನ್ನು ಮೇಲ್ದರ್ಜೆಗೆರಿಸಲು 20 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಪ್ರಕಟಿಸಿದರು.

ಕೋಲಾರ ರೆಡ್‌ ಝೊನ್‌ನಲ್ಲಿದೆ

ನಂತರ ಮಾತನಾಡಿದ ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು, ಕೋವಿಡ್‌ ವಿಷಯದಲ್ಲಿ ಕೋಲಾರ ಜಿಲ್ಲೆಯು ಈಗ ರೆಡ್‌ ಝೋನ್‌ನಲ್ಲಿದೆ. ಸೋಂಕು ತಡೆಗೆ ಇನ್ನೂ ಹೆಚ್ಚಿನ ಕ್ರಮ ವಹಿಸಬೇಕಿದೆ. ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡದಂತೆ ಎಚ್ಚರಿಕೆ ವಹಿಸಬೇಕಿದೆ. ಸ್ಥಳೀಯ ಮಟ್ಟದಲ್ಲೇ ಟಾಸ್ಕ್‌ಪೋರ್ಸ್‌ಗಳನ್ನು ರಚನೆ ಮಾಡಿ ಮನೆಮನೆಗೂ ಹೋಗಿ ಸೋಂಕಿತರನ್ನು ಪತ್ತೆ ಮಾಡಬೇಕು. ಟೆಲಿ ಟ್ರಾಯಾಜಿಂಗ್‌ & ಭೌತಿಕ ಟ್ರಾಯಾಂಜಿಂಗ್‌ ಹೆಚ್ಚಿಸಬೇಕು. ಮನೆ ಮನೆಯನ್ನೂ ಸಮೀಕ್ಷೆ ಮಾಡಬೇಕು ಎಂದು ಸಭೆಯಲ್ಲಿ ಹಾಜರಿದ್ದ ಜಿಲ್ಲಾಧಿಕಾರಿಗಳಿಗೆ ಡಿಸಿಎಂ ಸೂಚಿಸಿದರು.

ಸೋಂಕಿತರ ಸಂಪರ್ಕಿತರನ್ನು ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಪತ್ತೆ ಹಚ್ಚಲಾಗುತ್ತಿದೆ. ಆದರೆ, ಕೋವಿಡ್‌ ಪರೀಕ್ಷೆ ರಿಸಲ್ಟ್‌ ಕೊಡಲು ಎರಡು ದಿನಕ್ಕೂ ಹೆಚ್ಚಿನ ಸಮಯ ಆಗುತ್ತಿದೆ. 24 ಗಂಟೆಯೊಳಗೆ ಅಥವಾ ಅದಕ್ಕೂ ಮುನ್ನವೇ ರಿಸಲ್ಟ್ ಕೊಡುವ ವ್ಯವಸ್ಥೆ ಮಾಡಿ. ಇನ್ನು ಮುಂದೆ ಗ್ರಾಮೀಣ ಪ್ರದೇಶದಲ್ಲಿ ಯಾರನ್ನೂ ಹೋಮ್‌ ಐಸೋಲೇಶನ್‌ ಮಾಡಬೇಡಿ. ಎಲ್ಲರನ್ನು ಕಡ್ಡಾಯವಾಗಿ ಕೋವಿಡ್‌ ಕೇರ್‌ಗೆ ಶಿಫ್ಟ್‌ ಮಾಡಿ ಚಿಕಿತ್ಸೆ ಕೊಡಿ ಎಂದು ಡೀಸಿಗೆ ಡಿಸಿಎಂ ಸೂಚಿಸಿದರು.

ಕೋಲಾರಕ್ಕೆ 20 ಆಮ್ಲಜನಕ ಸಾಂದ್ರಕ

ಖಾಸಗಿ ಕಂಪನಿಯೊಂದು ರಾಜ್ಯಕ್ಕೆ ಉಚಿತವಾಗಿ 10 ಕೆ.ಎಲ್.‌ ಸಾಮರ್ಥ್ಯದ 20 ಆಮ್ಲಜನಕ ಸಾಂದ್ರಕಗಳನ್ನು ನೀಡಿದ್ದು, ಇವುಗಳಲ್ಲಿ ಕೋಲಾರ ಜಿಲ್ಲೆಗೆ 20 ಕೊಡಲಾಗುತ್ತಿದೆ. ಇವತ್ತೇ ಕಳಿಸುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ ಎಂದು ಈ ಇದೇ ವೇಳೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ಕೋಲಾರ ಜಿಲ್ಲೆಯಲ್ಲಿ ಕೋವಿಡ್‌ ನಿರ್ವಹಣೆ ವಿಚಾರದಲ್ಲಿ ಜಿಲ್ಲಾಸ್ಪತ್ರೆಯಷ್ಟೇ ಆಸರೆಯಾಗಿದೆ. ದೇವರಾಜ ಅರಸು ಮೆಡಿಕಲ್‌ ಕಾಲೇಜು ಹಾಗೂ ಕೆಜಿಎಫ್‌ನ ಸಂಭ್ರಮ್‌ ಕಾಲೇಜುಗಳಿಂದ ಸಹಕಾರ ಸಿಗುತ್ತಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಗಳು ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ಸಂಸದ ಮುನಿಸ್ವಾಮಿ ನೇತೃತ್ವದಲ್ಲಿ ಈ ಆಸ್ಪತ್ರೆ ಜೀರ್ಣೋದ್ಧಾರವಾಗಿದ್ದು, ಈಗ ಜನರ ಸೇವಗೆ ಸಜ್ಜಾಗಿದೆ. ಕೆಜಿಎಫ್‌ ಜನರಿಗೆ ಹೆಚ್ಚು ಪ್ರಯೋಜನವಾಗಲಿದೆ. ಇಲ್ಲಿಗೆ ಅಗತ್ಯವಾದ ಎಲ್ಲ ವೈದ್ಯಕೀಯ ಸಾಮಗ್ರಿ ಸರಂಜಾಮುಗಳನ್ನು ಕೊಡುತ್ತೇವೆ. ಸಕಾಲಕ್ಕೆ ಎಲ್ಲ ಔಷಧಗಳನ್ನೂ ಪೂರೈಸುತ್ತೇವೆ ಎಂದು ಡಾ.ಸುಧಾಕರ್‌ ಭರವಸೆ ನೀಡಿದರು.

ಜಿಲ್ಲಾಧಿಕಾರಿ ಆರ್.ಸೆಲ್ವಮಣಿ, ಜಿಪಂ ಸಿಇಒ ನಾಗರಾಜ್, ಉಪ ವಿಭಾಗಾಧಿಕಾರಿ ಸೋಮಶೇಖರ್, ತಹಶಿಲ್ದಾರ್ ಸುಜಾತಾ, ಡಿ.ವೈ.ಎಸ್.ಪಿ ಉಮೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ. ವೇಣುಗೋಪಾಲ್, ಜಿಲ್ಲಾ ವಿಭಾಗ ಪ್ರಭಾರಿ ಕೇಶವ ಪ್ರಸಾದ್, ಕೋಲಾರ ಆರ್.ಎಸ್.ಎಸ್ ಹಿರಿಯ ಮುಖಂಡರಾದ ಶಂಕರ್ ನಾಯಕ್, ಕೆಜಿಎಫ್ ನಗರ ಅಧ್ಯಕ್ಷ ಕಮಲ್ ನಾಥ್ ಮುಂತಾದವರು ಉಪಸ್ಥಿತರಿದ್ದರು.

Tags: bharath gold minescovid19indiakarnatakakgfkgf bgml hospitalkolarPrahlad joshi
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ರಂಗಸ್ಥಳದ ಶ್ರೀ ರಂಗನಾಥ ಸ್ವಾಮಿ ಸನ್ನಿಧಿಯಲ್ಲಿ ಚೋಳರು ಕಟ್ಟಿಸಿದ ಪವಿತ್ರ ರಂಗಧಾಮ ಕೆರೆಗೆ ಬೆಂಗಳೂರು ತ್ಯಾಜ್ಯ  ತುಂಬಿಸುತ್ತಿದೆ ಸರಕಾರ! ಜಿಲ್ಲಾಡಳಿತ ಸೈಲಂಟ್!!‌  ಧರ್ಮದ ಜತೆಗೆ ಪರಿಸರಕ್ಕೂ ಎಫೆಕ್ಟ್!!!

ರಂಗಸ್ಥಳದ ಶ್ರೀ ರಂಗನಾಥ ಸ್ವಾಮಿ ಸನ್ನಿಧಿಯಲ್ಲಿ ಚೋಳರು ಕಟ್ಟಿಸಿದ ಪವಿತ್ರ ರಂಗಧಾಮ ಕೆರೆಗೆ ಬೆಂಗಳೂರು ತ್ಯಾಜ್ಯ ತುಂಬಿಸುತ್ತಿದೆ ಸರಕಾರ! ಜಿಲ್ಲಾಡಳಿತ ಸೈಲಂಟ್!!‌ ಧರ್ಮದ ಜತೆಗೆ ಪರಿಸರಕ್ಕೂ ಎಫೆಕ್ಟ್!!!

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರದಲ್ಲಿ ಜವಳಿ & ಫಾರ್ಮಾ ಉದ್ಯಮಗಳ ಸ್ಥಾಪನೆ

ಚಿಕ್ಕಬಳ್ಳಾಪುರದಲ್ಲಿ ಜವಳಿ & ಫಾರ್ಮಾ ಉದ್ಯಮಗಳ ಸ್ಥಾಪನೆ

5 years ago
ಕಾಂಗ್ರೆಸ್ ವಶಕ್ಕೆ ಗುಡಿಬಂಡೆ ಪಟ್ಟಣ ಪಂಚಾಯತಿ: ಸಿಪಿಎಂ-ಬಿಜೆಪಿಗೆ ಭಾರೀ ಮುಖಭಂಗ! ಒಂದು ಮತದಲ್ಲಿ ಗೆದ್ದ ಹಸ್ತ ಅಭ್ಯರ್ಥಿ!! ಹೊಸ ಅಭ್ಯರ್ಥಿಗಳ ಕೈಹಿಡಿದ ಮತದಾರರು

ಡಿಸೆಂಬರ್ 27ಕ್ಕೆ ಗುಡಿಬಂಡೆ ಪಟ್ಟಣ ಪಂಚಾಯಿತಿ ಉಪ ಚುನಾವಣೆ

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ