• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಬ್ಲ್ಯಾಕ್ ಫಂಗಸ್ ಪೀಡಿತರಿಗೆ ಆಸ್ಪತ್ರೆಗಳು ರಹಸ್ಯ ಚಿಕಿತ್ಸೆ ನೀಡುವಂತಿಲ್ಲ, ಮಾಹಿತಿ ಮುಚ್ಚಿಟ್ಟರೆ ಕಠಿಣ ಕ್ರಮ I ಶೀಘ್ರದಲ್ಲಿಯೇ 1 ಕೋಟಿ RAT & RTPCR ಕಿಟ್ ಖರೀದಿ ಎಂದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ

cknewsnow desk by cknewsnow desk
May 20, 2021
in COVID-19, STATE
Reading Time: 1 min read
0
ಬ್ಲ್ಯಾಕ್ ಫಂಗಸ್ ಪೀಡಿತರಿಗೆ ಆಸ್ಪತ್ರೆಗಳು ರಹಸ್ಯ ಚಿಕಿತ್ಸೆ ನೀಡುವಂತಿಲ್ಲ, ಮಾಹಿತಿ ಮುಚ್ಚಿಟ್ಟರೆ ಕಠಿಣ ಕ್ರಮ I ಶೀಘ್ರದಲ್ಲಿಯೇ 1 ಕೋಟಿ RAT & RTPCR ಕಿಟ್ ಖರೀದಿ ಎಂದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ
925
VIEWS
FacebookTwitterWhatsuplinkedinEmail

ಬ್ಲ್ಯಾಕ್ ಫಂಗಸ್‌ನಿಂದ ರಾಜ್ಯದಲ್ಲಿ ಸಾವುಗಳು ಆಗಿರುವ ಬಗ್ಗೆ ಅಧಿಕೃತ ಮಾಹಿತಿ ಇಲ್ಲ. ಆದರೆ, ಸುಮಾರು ನೂರಕ್ಕೂ ಹೆಚ್ಚು ಜನ ಈ ಕಾಯಿಲೆಗೆ ತುತ್ತಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಎಂದಿದ್ದಾರೆ ಡಿಸಿಎಂ.

ಮೈಸೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್’ಗೆ ತುತ್ತಾಗುವವರಿಗೆ ಆಸ್ಪತ್ರೆಗಳು ಗುಪ್ತವಾಗಿ ಚಿಕಿತ್ಸೆ ನೀಡುವಂತಿಲ್ಲ ಹಾಗೂ ಈ ಕಾಯಿಲೆಗೆ ತುತ್ತಾದವರು ಕೂಡಲೇ ಸರಕಾರಕ್ಕೆ ಮಾಹಿತಿ ನೀಡಲೇಬೇಕು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಗುರುವಾರದಂದು ಸುತ್ತೂರು ಮಹಾ ಸಂಸ್ಥಾನಕ್ಕೆ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆದ ನಂತರ ಡಿಸಿಎಂ ಮಾಧ್ಯಮಗಳ ಜತೆ ಮಾತನಾಡಿದರು.

ಕೋವಿಡ್ ಚಿಕಿತ್ಸೆ ಪಡೆದ ನಂತರ ಬರುತ್ತಿರುವ ಈ ಕಾಯಿಲೆ ಬಗ್ಗೆ ಸರಕಾರ ಹೆಚ್ಚು ನಿಗಾ ಇಟ್ಟಿದೆ. ಇದನ್ನು ʼಗಮನಕ್ಕೆ ತರಬೇಕಾದ ಕಾಯಿಲೆʼ ಎಂದು ಈಗಾಗಲೇ ಸರಕಾರ ಸ್ಪಷ್ಟ ಸೂಚನೆ ನೀಡಿದೆ. ಯಾವುದೇ ಖಾಸಗಿ ಆಸ್ಪತ್ರೆ ಯಾರಿಗೂ ತಿಳಿಯದಂತೆ ಚಿಕಿತ್ಸೆ ನೀಡುವುದು ಅಪರಾಧ. ಅದೇ ರೀತಿ ಈ ಕಾಯಿಲೆಗೆ ತುತ್ತಾದವರು ಸಹ ರಹಸ್ಯವಾಗಿ ಟ್ರೀಟ್ಮೆಂಟ್ ಪಡೆಯುವುದು ಕೂಡ ತಪ್ಪಾಗುತ್ತದೆ. ಮಾಹಿತಿ ಮುಚ್ಚಿಟ್ಟರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಬ್ಲ್ಯಾಕ್ ಫಂಗಸ್‌ನಿಂದ ರಾಜ್ಯದಲ್ಲಿ ಸಾವುಗಳು ಆಗಿರುವ ಬಗ್ಗೆ ಅಧಿಕೃತ ಮಾಹಿತಿ ಇಲ್ಲ. ಆದರೆ, ಸುಮಾರು ನೂರಕ್ಕೂ ಹೆಚ್ಚು ಜನ ಈ ಕಾಯಿಲೆಗೆ ತುತ್ತಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಅವರು ತಿಳಿಸಿದರು.

ಆರೂ ವಿಭಾಗಗಳಲ್ಲೂ ಉಚಿತ ಚಿಕಿತ್ಸೆ

ಮೈಸೂರು, ಬೆಂಗಳೂರು. ಹುಬ್ಬಳ್ಳಿ, ಕಲಬುರಗಿ, ಮಂಗಳೂರು ಮತ್ತು ಶಿವಮೊಗ್ಗ ವಿಭಾಗಗಳಲ್ಲಿ ಈ ಕಾಯಿಲೆಗೆ ಉಚಿತವಾಗಿ ಚಿಕಿತ್ಸೆ ಕೊಡಲಾಗುತ್ತಿದೆ. ಜತೆಗೆ, ಇದಕ್ಕೆ ಅಗತ್ಯವಾದ ʼಲೈಸೋಸೋಮಲ್ ಅಮಪೋಟೆರಿಸನ್ʼ (liposomal amphotericin) ಔಷಧಿ ನಮ್ಮ ದೇಶದಲ್ಲಿ ತಯಾರಾಗುತ್ತಿರಲಿಲ್ಲ. ಈಗ ನಮ್ಮಲ್ಲೇ ತಯಾರಿಕೆ ಮಾಡುವ ವ್ಯವಸ್ಥೆ ಮಾಡಲಾಗುತ್ತಿದ್ದು, ಇನ್ನು ಕೆಲ ದಿನಗಳಲ್ಲಿಯೇ ಹೆಚ್ಚಿನ ಪ್ರಮಾಣದ ಔಷಧಿ ರಾಜ್ಯಕ್ಕೆ ಲಭ್ಯವಾಗಲಿದೆ. ಸದ್ಯಕ್ಕೆ ಕೇಂದ್ರ ಸರಕಾರ ವಿವಿಧ ದೇಶಗಳಿಂದ ಆಮದು ಮಾಡಿಕೊಂಡು ಅಗತ್ಯಕ್ಕೆ ಅನುಸಾರವಾಗಿ ಆಯಾ ರಾಜ್ಯಗಳಿಗೆ ಹಂಚಿಕೆ ಮಾಡುತ್ತಿದೆ. ಕೆಲ ವಾರಗಳಲ್ಲಿಯೇ ಈ ಔಷಧಿಯ ಕೊರತೆಯನ್ನು ನೀಗಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

RAT & RTPCR ಒಂದು ಕೋಟಿ ಕಿಟ್ ಖರೀದಿ

ಯಾವುದೇ ಕಾರಣಕ್ಕೂ ಕೋವಿಡ್ ಪರೀಕ್ಷೆಗಳ ಪ್ರಮಾಣವನ್ನು ಕಡಿಮೆ ಮಾಡಿಲ್ಲ. ನಿಗದಿತ ಗುರಿಗಿಂತ ಹೆಚ್ಚೇ ಮಾಡಲಾಗುತ್ತಿದೆ. ಅದಕ್ಕಾಗಿ ಕೆಲ ಸುಧಾರಣೆಗಳನ್ನು ತರಲಾಗಿದೆ. ಸರಕಾರಿ ಲ್ಯಾಬುಗಳಲ್ಲಿ ಒಂದು ಲಕ್ಷ ಸಿಂಗಲ್ ಟೆಸ್ಟ್ ಮಾಡುವ ವ್ಯವಸ್ಥೆ ಇದ್ದು,  ಖಾಸಗಿ ಲ್ಯಾಬುಗಳಲ್ಲಿ 75,000 RTPCR ಟೆಸ್ಟ್ ಮಾಡುವ ವ್ಯವಸ್ಥೆ ಮಾಡಲಾಗಿದೆ. ಪ್ರತಿದಿನ 50,000 RAT ಟೆಸ್ಟ್ ಮಾಡಲಾಗುತ್ತಿದೆ. ಈಗಾಗಲೇ 30 ಲಕ್ಷ RAT ಕಿಟ್ ಗಳನ್ನು ಖರೀದಿ ಮಾಡಲಾಗಿದ್ದು, ಇನ್ನೂ ತಲಾ ಒಂದು ಕೋಟಿ RAT & RTPCR  ಕಿಟ್ ಗಳನ್ನು ಕೊಂಡುಕೊಳ್ಳಲು ಸರಕಾರ ನಿರ್ಧರಿಸಿದೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

ವೈದ್ಯಕೀಯ ಬಳಕೆ ಸಾಮಗ್ರಿ ಹಾಗೂ ಔಷಧಿ ಖರೀದಿಗೆ ನಿರ್ಬಂಧವೇ ಇಲ್ಲ. ಎಷ್ಟು ಬೇಕಾದರೂ ಖರೀದಿ ಮಾಡಲು ಇಲಾಖೆಗೆ ಸರಕಾರ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.

ಕಳೆದ ಒಂದು ವರ್ಷದಲ್ಲಿ 30,000 ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಲಾಗಿದೆ, 3,000ಕ್ಕೂ ಹೆಚ್ಚು ವೆಂಟಿಲೇಟರ್ ಗಳನ್ನು ಹಾಕಲಾಗಿದೆ. ಅಗತ್ಯ ಸಿಬ್ಬಂದಿಯನ್ನೂ ನೇಮಕ ಮಾಡಿದ್ದೇವೆ. 7ನೇ ವೇತನ ಆಯೋಗದ ಶಿಫಾರಸುಗಳನ್ನೂ ಜಾರಿ ಮಾಡಿದ್ದೇವೆ ಎಂದರು ಡಿಸಿಎಂ.

ಮಹಾರಾಷ್ಟ್ರ ಬಿಟ್ಟರೆ ಅತಿ ಹೆಚ್ಚು ರೆಮಿಡಿಸಿವರ್ ಪಡೆದಿರುವ ರಾಜ್ಯ ಕರ್ನಾಟಕ. ಸರಕಾರಿ ಆಸ್ಪತ್ರೆಗಳಲ್ಲಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿನ ಸರಕಾರಿ ಕೋಟಾದಡಿ ಚಿಕಿತ್ಸೆ ಪಡೆದಿರವ ಎಲ್ಲರಿಗೂ ಉಚಿತವಾಗಿ ಈ ಔಷಧಿಯನ್ನು ಕೊಡಲಾಗಿದೆ. 35ರಿಂದ 40 ಲಕ್ಷ ಜನರಿಗೆ ಔಷಧಿ ಒದಗಿಸುವ ಕೆಲಸವನ್ನು ಸರಕಾರ ಮಾಡಿದೆ. ಮೊದಲು ಜಿಲ್ಲಾ ಮಟ್ಟದಲ್ಲಿ ಪ್ರಮುಖ ಔಷಧಿಗಳನ್ನು ಸಂಗ್ರಹ ಮಾಡುವ ವ್ಯವಸ್ಥೆ ಇತ್ತು. ಇದ್ದಕ್ಕಿದ್ದ ಹಾಗೆ ದೇಶದಲ್ಲಿ ಔಷಧಿಗಳ ಬೇಡಿಕೆ ಹೆಚ್ಚಿದಾಗ ಜಿಲ್ಲಾ ಮಟ್ಟದಲ್ಲಿ ಅದನ್ನು ಸಂಗ್ರಹ ಮಾಡುವುದು ಕಷ್ಟವಾಯಿತು. ಈ ಹಿನ್ನೆಲೆಯಲ್ಲಿ ಅದಕ್ಕೊಂದು ಪ್ರತ್ಯೇಕ ವ್ಯವಸ್ಥೆ ಮಾಡಲಾಯಿತು. ಈಗ ಎಲ್ಲವೂ ಸರಿ ಹೋಗಿದೆ ಎಂದು ಅವರು ತಿಳಿಸಿದರು.

Tags: Bengalurublack funguscovid19karnatakakarnataka fighs coronamysoreratrtpcr
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ತವರು ಜಿಲ್ಲೆ ಉಸ್ತುವಾರಿ ‌ಆಪರೇಷನ್: ಸಚಿವ ಡಾ.ಕೆ.ಸುಧಾಕರ್‌ ಕೈತಪ್ಪುತ್ತಾ ಚಿಕ್ಕಬಳ್ಳಾಪುರ ಜಿಲ್ಲಾ ಹೊಣೆಗಾರಿಕೆ

ಸೋಂಕು ನಿಯಂತ್ರಣದಲ್ಲಿ ಮಾರ್ಗಸೂಚನೆ ನಿರ್ಲಕ್ಷ್ಯ I ಕೋವಿಡ್‌ ಕೇರ್‌ ಸೆಂಟರ್‌, ಆಕ್ಸಿಜನ್‌ ಬಳಕೆ, ಔಷಧ ನಿರ್ವಹಣೆಯಲ್ಲಿ ವಿಫಲ I ಚಿತ್ರದುರ್ಗ ಜಿಲ್ಲಾಡಳಿತದ ಮೇಲೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕೆಂಡಾಮಂಡಲ

Leave a Reply Cancel reply

Your email address will not be published. Required fields are marked *

Recommended

ಹೊರಗೆ ರೈತರ ಹೋರಾಟ; ನಡುವೆಯೇ ಜೆಡಿಎಸ್‌ ಬೆಂಬಲದಿಂದ ಸದನದೊಳಗೆ ಭೂ ಸುಧಾರಣೆ ತಿದ್ದುಪಡಿ ಮಸೂದೆಗೆ ಅಂಗೀಕಾರ

ಅನ್ನದಾತನಿಗೆ ಆನಂದ ಸುದ್ದಿ: ಮುಂದಿನ ವಾರದಿಂದ ರಾಜ್ಯದ 30 ಲಕ್ಷ ರೈತರಿಗೆ 20,810 ಕೋಟಿ ರೂ. ಬೆಳೆ ಸಾಲ

4 years ago
ಕರಾಳ ಕಾಲಾಪಾನಿ ಮತ್ತು ವೀರ ಸಾವರ್ಕರ್‌ ಪುಟಗಳಲ್ಲಿ ತೆರೆದುಕೊಂಡ ಸೆಲ್ಯುಲರ್‌ ಜೈಲ್‌

ಕರಾಳ ಕಾಲಾಪಾನಿ ಮತ್ತು ವೀರ ಸಾವರ್ಕರ್‌ ಪುಟಗಳಲ್ಲಿ ತೆರೆದುಕೊಂಡ ಸೆಲ್ಯುಲರ್‌ ಜೈಲ್‌

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ