• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ತಾಂತ್ರಿಕ ಸಲಹಾ ಸಮಿತಿ 15 ಪುಟಗಳ ವರದಿ: ಲಾಕ್‌ಡೌನ್‌ ಬಗ್ಗೆ ನಾಳೆ ಸಂಪುಟ ನಿರ್ಧಾರ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

cknewsnow desk by cknewsnow desk
May 31, 2021
in CHIKKABALLAPUR, COVID-19, STATE
Reading Time: 1 min read
0
ಚಿಕ್ಕಬಳ್ಳಾಪುರಕ್ಕೆ ಚೀಯರ್ಸ್ ;‌ ಡಾ.ಸುಧಾಕರ್ʼಗೆ ವೈದ್ಯಶಿಕ್ಷಣ ಜತೆಗೆ ಆರೋಗ್ಯ ಖಾತೆ
913
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರದಲ್ಲಿ ಹೆಲ್ತ್‌ ಮಿನಿಸ್ಟರ್‌ ರೌಂಡ್ಸ್;‌ ಕೋವಿಡ್‌ ಕೇರ್‌ ಸೆಂಟರ್‌ಗಳ ಪರಿಶೀಲನೆ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಲಾಕ್‌ಡೌನ್‌ ವಿಸ್ತರಣೆ ಮಾಡಬೇಕೋ, ಬೇಡವೋ ಅನ್ನುವುದರ ಬಗ್ಗೆ ತಜ್ಞರ ತಾಂತ್ರಿಕ ಸಲಹಾ ಸಮಿತಿಯು ಸೋಮವಾರ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಿದೆ. ಈ ಬಗ್ಗೆ ಕೂಲಂಕಷವಾಗಿ ಚರ್ಚಿಸಲು ಮಂಗಳವಾರ ಸಚಿವ ಸಂಪುಟ ಸಭೆ ನಡೆಯಲಿದೆ. ಮುಖ್ಯಮಂತ್ರಿಗಳು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿಐಊ ಆಗಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ತಾಲೂಕಿನ ಆವಲಗುರ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂಲಕುಂಟೆ ಗ್ರಾಮದಲ್ಲಿ ಅಲೆಮಾರಿ-ಮತ್ತು ಅರೆ ಅಲೆಮಾರಿ ಜನಾಂಗ ಕುಟುಂಬಗಳಿಗೆ ಜಿಲ್ಲಾಡಳಿತ ಮತ್ತು ಇಷಾ ಪ್ರತಿಷ್ಠಾನ (ಫೌಂಡೇಷನ್) ವತಿಯಿಂದ ಉಚಿತ ಆಹಾರ ಧಾನ್ಯಗಳ ಕಿಟ್ ವಿತರಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ತಾಂತ್ರಿಕ ಸಲಹಾ ಸಮಿತಿಯು 15 ಪುಟಗಳ ವರದಿಯನ್ನು ಮುಖ್ಯಮಂತ್ರಿಗಳಿಗೆ ನೀಡಿದೆ. ಮಂಗಳವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಲಾಕ್‌ಡೌನ್‌ ವಿಸ್ತರಿಸಬೇಕೋ, ಬೇಡವೋ ಎಂಬುದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಈ ವಿಷಯದಲ್ಲಿ ನಾನು ಅಥವಾ ಇತರೆ ಶಾಸಕರ ಅಭಿಪ್ರಾಯಕ್ಕಿಂತ ವೈಜ್ಞಾನಿಕ ನೆಲೆಗಟ್ಟಿನಲ್ಲಿ ಎಲ್ಲಾ ರೀತಿಯಲ್ಲೂ ಕೂಲಂಕಷವಾಗಿ ಅಧ್ಯಯನ ನಡೆಸಿ ನೀಡಿರುವ ತಾಂತ್ರಿಕ ಸಲಹಾ ಸಮಿತಿಯ ವರದಿಗೆ ಹೆಚ್ಚಿನ ಮಹತ್ತ್ವ ಇರುತ್ತದೆ. ಹಾಗಾಗಿ ವರದಿ ಆಧರಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು ಸಚಿವರು.

ಲಾಕ್‌ಡೌನ್‌ʼನಿಂದ ಸಾಕಷ್ಟು ಅನುಕೂಲವಾಗಿದೆ. 2ನೇ ಅಲೆ ಆರಂಭದ ಸಂದರ್ಭದಲ್ಲಿ ಶೇ.40ರ ಆಸುಪಾಸಿನಲ್ಲಿದ್ದ ಪಾಸಿಟೀವ್ ದರದ ಪ್ರಮಾಣ ಈಗ ಶೇ.14-15ಕ್ಕೆ ಇಳಿದಿದೆ. ಮೈಸೂರು ಸೇರಿದಂತೆ ಏಳೆಂಟು ಜಿಲ್ಲೆಗಳಲ್ಲಿ ಮಾತ್ರ ಶೇ.20-30ರಷ್ಟು ಇದ್ದು, ಉಳಿದ ಜಿಲ್ಲೆಗಳಲ್ಲಿ ಶೇ.12, 14ಕ್ಕೆ ಕಡಿಮೆಯಾಗಿದೆ. ಈ ದಿಸೆಯಲ್ಲಿ ಲಾಕ್‌ಡೌನ್‌ʼನಿಂದ ಸಾಕಷ್ಟು ಅನುಕೂಲವಾಗಿದೆ. ಮುಂದಿನ ದಿನಗಳಲ್ಲೂ ಇದು ಮತ್ತಷ್ಟು ಕಡಿಮೆ ಆಗಲಿದೆ. ಜನರೂ ಕೂಡ ಎರಡು ಡೋಸ್ ಲಸಿಕೆ ಹಾಕಿಕೊಳ್ಳುವವರೆಗೂ ಮುಂಜಾಗ್ರತೆ ವಹಿಸಬೇಕು. ಲಾಕ್‌ಡೌನ್‌ ತೆರವು ಮಾಡಿದ ಕೂಡಲೇ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಮೀರಿ ನಡೆದರೆ ಮತ್ತೆ ಎರಡನೇ ಅಲೆ ಹಾಗೆಯೇ ಮುಂದುವರಿಯುತ್ತದೆ. ಹಾಗಾಗಿ ನಮ್ಮ ಜಾಗ್ರತೆಯಲ್ಲಿ ನಾವು ಇರಬೇಕು ಎಂದು ಡಾ.ಸುಧಾಕರ್‌ ಸಲಹೆ ನೀಡಿದರು.

ಇಶಾ ಫೌಂಡೇಶನ್ ವತಿಯಿಂದ ನೀಡಲಾಗಿರುವ ಆಹಾರ ಧಾನ್ಯ ಕಿಟ್ ಗಳನ್ನು ಚಿಕ್ಕಬಳ್ಳಾಪುರ ಜಿಲ್ಲೆ ಅವಲಗುರ್ಕಿ ಗ್ರಾಮ ಪಂಚಾಯಿತಿಯ ಸೋಲಕುಂಟೆ ಗ್ರಾಮದ ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯದ ಕುಟುಂಬಗಳಿಗೆ ವಿತರಿಸಲಾಯಿತು.@ishafoundation @SadhguruJV pic.twitter.com/XntkocJfSt

— Dr Sudhakar K (Modi ka Parivar) (@DrSudhakar_) May 31, 2021

ಬ್ಲಾಕ್ ಫಂಗಸ್ʼಗೆ ಚಿಕಿತ್ಸೆ ಪ್ರಾರಂಭ

ರಾಜ್ಯದಲ್ಲಿ ಈವರೆಗೆ 1,250 ಬ್ಲಾಕ್ ಫಂಗಸ್ ಸೋಂಕಿತರು ಪತ್ತೆಯಾಗಿದ್ದಾರೆ. ಇವರಿಗೆ ಈಗಾಗಲೇ ಚಿಕಿತ್ಸೆ ಪ್ರಾರಂಭಿಸಿದ್ದೇವೆ. ಆದರೆ, ಇದಕ್ಕೆ ಸಂಬಂಧಿಸಿದಂತೆ ಔಷಧಿ ಸಿಗಬೇಕಾದಷ್ಟು ಸಿಗುತ್ತಿಲ್ಲ. ಆದರೂ ಕೇಂದ್ರ ಸರಕಾರ ಎಲ್ಲಾ ರೀತಿಯಲ್ಲೂ ಪ್ರಯತ್ನ ಮಾಡಿ ಕೇಂದ್ರ ಸಚಿವ ಸದಾನಂದಗೌಡ ಅವರು ಕಳುಹಿಸಿ ಕೊಡುತ್ತಿದ್ದಾರೆ. ಇನ್ನೂ ಹೆಚ್ಚಿನ ಬೇಡಿಕೆ ಇಟ್ಟಿದ್ದೇವೆ. ನಮಗೆ ಪ್ರತಿದಿನ ಕನಿಷ್ಠ ಅಂದರೂ 8,000-10,000 ಬಂದರೆ ಒಬ್ಬೊಬ್ಬರಿಗೆ 6 ವಯಲ್ಸ್ ಕೊಡಬಹುದು. ಆದರೂ ನಿರ್ವಹಣೆ ಮಾಡಲಾಗುತ್ತಿದೆ ಎಂದ ಅವರು, ಹೆಚ್ಚಿನ ಸ್ಟೀರಾಯ್ಡ್ ಬಳಕೆ, ದೀರ್ಘಾವಧಿ ಕಾಲ ಆಮ್ಲಜನಕ ಬಳಕೆ ಹಾಗೂ ಇನ್ನಿತರೆ ಕಾರಣಗಳಿಂದ ಬ್ಲಾಕ್ ಫಂಗಸ್ ಬರಬಹುದು. ಆದರೆ, ಯಾವ ಕಾರಣಕ್ಕೆ ಫಂಗಸ್ ಬರುತ್ತದೆ ಎಂಬುದರ ಬಗ್ಗೆ ಅಧ್ಯಯನಗಳು ನಡೆಯುತ್ತಿವೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಸದ್ಯ ಆಕ್ಸಿಜನ್ ಸಮಸ್ಯೆ ಏನೂ ಇಲ್ಲ. ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿರುವಂತೆ ಐಸಿಯು, ವೆಂಟಿಲೇಟರ್ ಹಾಗೂ ಆಕ್ಸಿಜನ್ ಮೇಲೆ ಬೇಡಿಕೆ ಕಡಿಮೆಯಾಗಿದೆ. ಎಲ್ಲೂ ಕೂಡ ಆಕ್ಸಿಜನ್ ಸಮಸ್ಯೆ ಕಂಡುಬರುತ್ತಿಲ್ಲ ಎಂದು ಸಚಿವರು ಹೇಳಿದರು.

ಕೋವಿಡ್ ಆರೈಕೆ ಕೇಂದ್ರಕ್ಕೆ ಭೇಟಿ

ಆಹಾರ ಕಿಟ್ ವಿತರಣೆಯ ನಂತರ ತಾಲೂಕಿನ ಕುಲುಮೇನಹಳ್ಳಿ ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ತೆರೆದಿರುವ ಕೋವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ಕೊಟ್ಟು, ಅಲ್ಲಿನ ಸೋಂಕಿತರ ಯೋಗಕ್ಷೇಮವನ್ನು ವಿಚಾರಿಸಿದರು. ನಂತರ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ” ವೈದ್ಯರ ನಡೆ ಹಳ್ಳಿಯ ಕಡೆ “ಕಾರ್ಯಕ್ರಮದ ಅಂಗವಾಗಿ ಮೊಬೈಲ್ ಕ್ಲಿನಿಕ್ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಈ ವಾಹನದಲ್ಲಿ ವೈದ್ಯರು ಹಾಗೂ ಸಹಾಯಕ ಸಿಬ್ಬಂದಿ ತಂಡ ತಮ್ಮ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ಕೊಟ್ಟು ಅಲ್ಲಿನ ಸಾರ್ವಜನಿಕರಿಗೆ ರ್ಯಾಫಿಡ್ ಆಂಟಿಜನ್(RAT) ಕರೋನಾ ಪರೀಕ್ಷೆ ಮಾಡಿ ಸೋಂಕು ದೃಢಪಟ್ಟವರಿಗೆ ಸೂಕ್ತ ಚಿಕಿತ್ಸೆ ಮಾಡಿ ಅಗತ್ಯವಿರುವರಿಗೆ ಆರೋಗ್ಯ ಕಿಟ್ ಗಳನ್ನು ಸ್ಥಳದಲ್ಲಿಯೇ ವಿತರಿಸುವ ವ್ಯವಸ್ಥೆಯನ್ನು ಹೊಂದಿರುತ್ತದೆ. ವ್ಯಾಪಕವಾಗಿ ಸೋಂಕು ಪ್ರಸರಿಸುತ್ತಿರುವ ಹಳ್ಳಿಗಳಲ್ಲಿ ಪರೀಕ್ಷೆ ಮಾಡಿ ಸೂಕ್ತ ಮುನ್ನೆಚ್ಚರಿಕಾ ಕ್ರಮ ವಹಿಸುವುದರಿಂದ ಮತ್ತಷ್ಟು ಸೋಂಕು ಹರಡುವುದನ್ನು ಕೂಡಲೇ ತಪ್ಪಿಸಬಹುದು. ಕೋವಿಡ್ ಸೋಂಕಿನ ಸರಪಳಿಯನ್ನು ತುಂಡರಿಸಲು ಈ ಕಾರ್ಯಕ್ರಮ ಪರಿಣಾಮಕಾರಿಯಾಗಿ ಅನುಕೂಲವಾಗಲಿದೆ. ರೋಗ ಲಕ್ಷಣಗಳಿದ್ದು RAT ಪರೀಕ್ಷೆಯಲ್ಲಿ ನೆಗೆಟೀವ್ ವರದಿ ಬಂದ ಪಕ್ಷದಲ್ಲಿ ಗಂಟಲು ಮತ್ತು ಮೂಗಿನ ದ್ರವ ಸಂಗ್ರಹಿಸಿ ಆರ್ ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಲು ಸಹಾ ಕ್ರಮ ತೆಗೆದುಕೊಳ್ಳಲಾಗುತ್ತದೆ. ಈ ಸೌಲಭ್ಯವನ್ನು ಜನರು ಸದುಪಯೋಗ ಪಡಿಸಿಕೊಳ್ಳುವಂತೆ ಸಚಿವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯಿತಿ ಸಿಇಒ ಪಿ.ಶಿವಶಂಕರ್, ನಗರಸಭೆ ಅಧ್ಯಕ್ಷ ಆನಂದರೆಡ್ಡಿ, ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್, ತಹಸೀಲ್ದಾರ್ ಗಣಪತಿಶಾಸ್ತ್ರಿ, ತಾಲೂಕು ಪಂಚಾಯಿತಿ ಇಒ ಹರ್ಷವರ್ದನ್, ಪೌರಾಯುಕ್ತ ಲೋಹಿತ್ ಕುಮಾರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags: cabinet meetingchikkaballapuracovid19covid19 technical expert committee reportkarnatakalockdown
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
“ಒತ್ತೆ ಇಟ್ಟುಕೊಳ್ಳೋಕೆ ಕರ್ನಾಟಕವೇನು ಅವರಪ್ಪಂದಾ?” ಎಂದು ಕೋಲಾರದಲ್ಲಿ ಕಾಮ್ರೇಡ್‌ ಮೇಲೆ ಗುಡುಗಿದ್ದರು ಸಿಎಂ ಎಚ್.ಡಿ.ದೇವೇಗೌಡರು!!

"ಒತ್ತೆ ಇಟ್ಟುಕೊಳ್ಳೋಕೆ ಕರ್ನಾಟಕವೇನು ಅವರಪ್ಪಂದಾ?" ಎಂದು ಕೋಲಾರದಲ್ಲಿ ಕಾಮ್ರೇಡ್‌ ಮೇಲೆ ಗುಡುಗಿದ್ದರು ಸಿಎಂ ಎಚ್.ಡಿ.ದೇವೇಗೌಡರು!!

Leave a Reply Cancel reply

Your email address will not be published. Required fields are marked *

Recommended

ಭಜರಂಗದಳ ಕಾರ್ಯಕರ್ತನ ಕೊಲೆ; ಗುಡಿಬಂಡೆಯಲ್ಲಿ ಹಿಂದೂಪರ ಸಂಘಟನೆಗಳ ಪ್ರತಿಭಟನೆ

ಭಜರಂಗದಳ ಕಾರ್ಯಕರ್ತನ ಕೊಲೆ; ಗುಡಿಬಂಡೆಯಲ್ಲಿ ಹಿಂದೂಪರ ಸಂಘಟನೆಗಳ ಪ್ರತಿಭಟನೆ

4 years ago
ಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ; ಆಂಧ್ರದ ಗೊರಂಟ್ಲದ 13 ಜನರ ದುರ್ಮರಣ

ಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ; ಆಂಧ್ರದ ಗೊರಂಟ್ಲದ 13 ಜನರ ದುರ್ಮರಣ

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ