• About
  • Advertise
  • Careers
  • Contact
Thursday, May 7, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home ET CINEMA

ಬಾಲಿವುಡ್‌ ʼದೇವದಾಸʼ ದಿಲೀಪ್ ಕುಮಾರ್ ಇನ್ನಿಲ್ಲ

cknewsnow desk by cknewsnow desk
July 7, 2021
in ET CINEMA, NATION, STATE
Reading Time: 1 min read
0
ಬಾಲಿವುಡ್‌ ʼದೇವದಾಸʼ ದಿಲೀಪ್ ಕುಮಾರ್ ಇನ್ನಿಲ್ಲ
956
VIEWS
FacebookTwitterWhatsuplinkedinEmail

ಮುಂಬಯಿ: ಹಿಂದೀ ಚಿತ್ರರಂಗದ ಖ್ಯಾತ ಕಲಾವಿದ ದಿಲೀಪ್ ಕುಮಾರ್ ಅವರು ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಕಳೆದ ವಾರ ಇಲ್ಲಿನ ಹಿಂದೂಜಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ.

ಕಳೆದ ಎರಡು ತಿಂಗಳಿಂದ ಅವರು ಆಸ್ಪತ್ರೆ ಸೇರುವುದು ನಂತರ ಸುಧಾರಿಸಿಕೊಂಡು ಮನೆಗೆ ವಾಪಸ್ಸು ಬರುವುದು ನಡೆದಿತ್ತು. ಆದರೆ ಈ ಬಾರಿ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಅವರಿಗೆ 98 ವರ್ಷ ವಯಸ್ಸಾಗಿತ್ತು.

ಹಿಂದಿ ಚಲನಚಿತ್ರ ರಂಗದ ತಮ್ಮ ಕಾಲದ ಅತಿ ಶ್ರೇಷ್ಠ ನಟರಲ್ಲಿ ಒಬ್ಬರೆಂದು ಅವರನ್ನು ಪರಿಗಣಿಸಲಾಗುತ್ತದೆ. 1944ರಿಂದ 1966 ರವರೆಗೆ ಸುಮಾರು 62 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಶೋಕರಸ ಪ್ರಧಾನ ಭೂಮಿಕೆಗಳಲ್ಲಿ ಪ್ರಸಿದ್ಧರಾದ ಕಾರಣ ಅವರನ್ನು ದುರಂತ ನಾಯಕನೆಂದೂ ಕರೆಯುತ್ತಾರೆ. ಅನೇಕ ಪ್ರಶಸ್ತಿಗಳಿಂದ ಮಾನಿತರಾದ ಇವರು ಭಾರತೀಯ ಚಲನಚಿತ್ರ ರಂಗದ ಸರ್ವೋಚ್ಚ ಸನ್ಮಾನವಾದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತರು ಆಗಿದ್ದಾರೆ. ಅವರು ರಾಜ್ಯಸಭೆಯ ಸದಸ್ಯರೂ ಆಗಿದ್ದರು.

ಪ್ರಧಾನಿ ಶೋಕ

ದಿಲೀಪ್ ಕುಮಾರ್ ಅವರ ನಿಧನ ನಮ್ಮ ಸಾಂಸ್ಕೃತಿಕ ಅತಿ ದೊಡ್ಡ ನಷ್ಟ. ಅವರು ಸರಿಸಾಟಿ ಇಲ್ಲ ನಟ ಹಾಗೂ ಸಿನಿಮಾ ಜಗತ್ತಿನ ದಂತಕಥೆಯಾಗಿದ್ದರು ಎಂದುಪ್ರಧಾನಿ ನರೇಂದ್ರ ಮೋದಿ ಶೋಕ ವ್ಯಕ್ತಪಡಿಸಿದ್ದಾರೆ.

ದಿಲೀಪ್ ಕುಮಾರ್ ಚಿತ್ರ ಜೀವನ

ದಿಲೀಪ್ ಕುಮಾರ್‌ ಅವರ ಹುಟ್ಟು ಹೆಸರು ಮಹಮ್ಮದ್ ಯೂಸುಫ್ ಖಾನ್. ಅಂದಿನ ಹಿಂದಿ ಚಿತ್ರರಂಗದ ಖ್ಯಾತ ನಿರ್ಮಾಪಕರೂ ಬಾಂಬೇ ಟಾಕೀಸ್ ಸ್ಟೂಡಿಯೊ ಮಾಲಿಕರೂ ಆಗಿದ್ದ ಹಿಮಾಂಶು ರಾಯ್ ಅವರ ಪತ್ನಿ ದೇವಿಕಾ ರಾಣಿಯವರು ಹಿಂದಿ ಚಿತ್ರರಂಗವನ್ನು ಪ್ರವೇಶಿಸಲು ಯೂಸುಫ್ ಖಾನರಿಗೆ ಸಹಾಯ ಮಾಡಿದರು. 1944ರಲ್ಲಿ ಭಗವತೀ ಚರಣ ವರ್ಮಾರವರು ತಮ್ಮ ಜ್ವಾರ್ ಭಾಟಾ ಚಿತ್ರದ ನಾಯಕನ ಪಾತ್ರವನ್ನಿತ್ತು ದಿಲೀಪ್ ಕುಮಾರ್ ಎಂದು ಹೆಸರಿಟ್ಟರು. ಅಮಿಯಾ ಚಕ್ರವರ್ತಿಯವರ ನಿರ್ದೇಶನದ ಈ ಚಿತ್ರದ ಪಾತ್ರವರ್ಗದಲ್ಲಿ ಮೃದುಲಾ, ಶಮೀಮ್, ಆಗಾ, ಕೆ.ಎನ್.ಸಿಂಘ್, ಮುಮ್ತಾಜ್ ಅಲಿ, ಮೊದಲಾದವರಿದ್ದ ಈ ಚಿತ್ರದ ಸಂಗೀತ ನಿರ್ದೇಶಕರು ಅನಿಲ್ ಬಿಸ್ವಾಸ್ ಆಗಿದ್ದರು. ಆದರೂ ಚಿತ್ರ ಅಷ್ಟೇನೂ ಜನಪ್ರಿಯವಾಗಲಿಲ್ಲ.

1947ರಲ್ಲಿ ಬಿಡುಗಡೆಯಾದ ಜುಗ್ನು ಚಿತ್ರ ಜಯಪ್ರದವಾಯಿತು. ಬಳಿಕ ಅಂದಾಜ್ (1949), ದೀವಾರ್ (1951), ಆಗ್ (1952), ಅಮರ್ (1954), ಆಜಾದ್ (1955), ದೇವದಾಸ್ (1955), ಮುಸಾಫಿರ್ (1957), ಮಧುಮತಿ (1958) ಮತ್ತು ಮುಘಲ್ ಎ ಆಜಮ್ (1960) ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಗೆಲುವನ್ನು ಪಡೆಯಿತಲ್ಲದೆ, ದಿಲೀಪ್ ಕುಮಾರರೂ ಚಿತ್ರರಂಗದಲ್ಲಿ ಅಮೋಘ ಖ್ಯಾತಿಯನ್ನು ಪಡೆದರು. ಅಂದಾಜ್, ದೀದಾರ್ , ಅಮರ್ , ದೇವದಾಸ್, ಮಧುಮತಿ, ಇತ್ಯಾದಿ ಚಿತ್ರಗಳು ಶೋಕರಸಭರಿತ ಚಿತ್ರಗಳಾಗಿದ್ದು, ದಿಲೀಪ್ ಕುಮಾರರು ದುರಂತ ನಾಯಕನೆಂಬ ಬಿರುದನ್ನು ಪಡೆದರು.

ಭಾರತದ ಮುಘಲ್ ಇತಿಹಾಸದಿಂದಾಯ್ದ ಕತೆಯಿರುವ ಮುಘಲ್ ಎ ಆಜಮ್ ಆಗಿನ ಕಾಲದ ಶ್ರೀಮಂತ ಚಿತ್ರವಾಗಿದ್ದು, ಭಾರೀ ಜಯಗಳಿಸಿತ್ತು. ಉತ್ತರಾರ್ಧ ವರ್ಣದಲ್ಲಿದ್ದು ಕಪ್ಪು-ಬಿಳುಪಿನ ಈ ಚಿತ್ರ ೨೦೦೮ರಲ್ಲಿ ಕಂಪ್ಯೂಟರ್ ಸಹಾಯದಿಂದ ವರ್ಣರಂಜಿತಗೊಂಡು ಪ್ರದರ್ಶನಗೊಂಡಾಗ ಮತ್ತೆ ಆಗಿನಷ್ಟೇ ಜನಮೆಚ್ಚುಗೆಯನ್ನು ಪಡೆಯಿತು. 1961ರಲ್ಲಿ ಬಿಡುಗಡೆಯಾದ ಗಂಗಾ ಜಮುನಾ ದಿಲೀಪ್ ಕುಮಾರರ ಮೊದಲ ಪೂರ್ಣ ವರ್ಣ ಚಿತ್ರ. ಇದು ಅವರ ಸ್ವಂತ ನಿರ್ಮಾಣದ ಚಿತ್ರವೂ ಆಗಿತ್ತು. ಇದರಲ್ಲಿ ಅವರ ನಿಜ ಜೀವನದ ತಮ್ಮ ನಾಸಿರ್ ಖಾನ್ ತಮ್ಮನಾಗಿಯೇ ಅಭಿನಯಿಸಿದ್ದಾರೆ.

1976ರವರೆಗೆ ಹಲವಾರು ಜನಪ್ರಿಯ ಚಿತ್ರಗಳಲ್ಲಿ ಅಭಿನಯಿಸಿದ ಬಳಿಕ 1981 ರವರೆಗೆ ಚಿತ್ರರಂಗದಿಂದ ದೂರವಿದ್ದರು. ಆ ನಂತರ ಪೋಷಕ ಪಾತ್ರಗಳಲ್ಲಿ ಅಭಿನಯಿಸಲಾರಂಭಿಸಿದರು. ಕ್ರಾಂತಿ (1981), ಶಕ್ತಿ (1982), ವಿಧಾತಾ (1982), ಮಶಾಲ್ (1984), ಕರ್ಮ (1986), ಸೌದಾಗರ್ (1991), ಇತ್ಯಾದಿ ಚಿತ್ರಗಳೂ ಜನಪ್ರಿಯವಾದವು. ಅವರ ಕೊನೆಯ ಚಿತ್ರ ಕಿಲಾ 1996) ಅಷ್ಟೇನೂ ಜನ ಮೆಚ್ಚುಗೆಯನ್ನು ಪಡೆಯಲಿಲ್ಲ.

1966ರಲ್ಲಿ ಅಂದಿನ ಚಿತ್ರರಂಗದ ಸುಂದರಿ ಸಾಯಿರಾ ಬಾನುವನ್ನು ಮದುವೆಯಾದಾಗ ದಿಲೀಪ್ ಕುಮಾರರ ವಯಸ್ಸು 44 ಹಾಗೂ ಸಾಯಿರಾ ಬಾನುವಿನ ವಯಸ್ಸು22. 1980ರಲ್ಲಿ ಆಸ್ಮಾ ಜತೆ ಎರಡನೆ ಮದುವೆಯಾದರೂ ಅದು ಬಹು ಬೇಗನೇ ವಿಚ್ಛೇದನಗೊಂಡಿತು.

Lead photo courtesy: Wikipedia

Tags: bollywood legenddilip kumardilip kumar no moreindian cinema
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮೋದಿ ಸಂಪುಟದ ಸಂಭಾವ್ಯ ಸಚಿವರ ಪಟ್ಟಿ

ಮೋದಿ ಸಂಪುಟದ ಸಂಭಾವ್ಯ ಸಚಿವರ ಪಟ್ಟಿ

Leave a Reply Cancel reply

Your email address will not be published. Required fields are marked *

Recommended

ಭ್ರಷ್ಟಾಚಾರ & ಕೆಮ್ಮು ಎರಡನ್ನೂ ಮುಚ್ಚಿಡಲಾಗಲ್ಲ!!

ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ತಡೆಯಲು ಆಗುವುದಿಲ್ಲ

3 years ago
ಹೈವೋಲ್ಟೇಜ್ ಅಧಿವೇಶನ

ಕಾಂತರಾಜ್‌ ವರದಿ ಮೂಲ ಪ್ರತಿಯೇ ಕಣ್ಮರೆ!; ಆದರೂ ನ.24ಕ್ಕೆ ವರದಿ ಸ್ವೀಕರಿಸಲು ಸರಕಾರದ ತರಾತುರಿ

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ