• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಗುಡಿಬಂಡೆ ವಿಧಾನಸಭೆ ಕ್ಷೇತ್ರವಾಗಲಿ ಎಂಬ ಕೂಗಿಗೆ 25 ವರ್ಷ

cknewsnow desk by cknewsnow desk
July 10, 2021
in STATE
Reading Time: 3 mins read
0
ಗುಡಿಬಂಡೆ ವಿಧಾನಸಭೆ ಕ್ಷೇತ್ರವಾಗಲಿ ಎಂಬ ಕೂಗಿಗೆ 25 ವರ್ಷ
1.4k
VIEWS
FacebookTwitterWhatsuplinkedinEmail

ಈ ಬೇಡಿಕೆಗೆ ರಜತ ಮಹೋತ್ಸವ ಸಂದರ್ಭ ಬಂದರೂ ಗುಡಿಬಂಡೆಯತ್ತ ಗಮನ ಕೊಡದ ರಾಜ್ಯ ಸರಕಾರ

by GS Bharath Gudibande

ಗುಡಿಬಂಡೆ: ಪ್ರತ್ಯೇಕ ವಿಧಾನಸಭೆ ಕ್ಷೇತ್ರವಾಗಬೇಕು ಎಂಬ ಗುಡಿಬಂಡೆ ಕೂಗಿಗೆ ಕಾಲು ಶತಮಾನ ಕಳೆದರೂ ಆ ಕನಸು ಇನ್ನೂ ನನಸಾಗಿಲ್ಲ. ಮತ್ತೆ ಆ ಬೇಡಿಕೆಗೆ ಜೀವ ಬಂದಿದೆ.

ಸುಮಾರು 25 ವರ್ಷಕ್ಕೂ ಹೆಚ್ಚು ಕಾಲದ ಈ ಹೋರಾಟವು ಫಲ ಕೊಟ್ಟಿಲ್ಲವಾದರೂ ಅದರ ಕಾವು ಮಾತ್ರ ಹಾಗೆಯೇ ಇದೆ. ಜನಸಂಖ್ಯೆಯ ಕಾರಣವೋ, ಸರಕಾರದ ನಿರ್ಲಕ್ಷ್ಯವೋ, ಸ್ಥಳೀಯ ನಾಯಕತ್ವದ ಕೊರತೆಯೋ ಇಂದಿಗೂ ಗುಡಿಬಂಡೆ ತಾಲೂಕು ಪ್ರತ್ಯೇಕ ವಿಧಾನಸಭೆ ಕ್ಷೇತ್ರವಾಗಿ ಹೊರಹೊಮ್ಮಿಲ್ಲ. ಬದಲಿಗೆ ಬಾಗೇಪಲ್ಲಿ ಕ್ಷೇತ್ರದ ಒಂದು ಭಾಗವಾಗಿ ಉಳಿದುಕೊಂಡುಬಿಟ್ಟಿದೆ.

ಕರ್ನಾಟಕದ ಕಟ್ಟಕಡೆಯ ಹಾಗೂ ಗಡಿ ತಾಲೂಕು ಆಗಿರುವ ಗುಡಿಬಂಡೆ ಅತ್ಯಂತ ಹಿಂದುಳಿದ ಪ್ರದೇಶವೂ ಹೌದು. ಅಭಿವೃದ್ಧಿಯಿಂದ ಸಂಪೂರ್ಣ ವಂಚಿತವಾಗಿದೆ. ಸ್ವಾತಂತ್ರ್ಯ ಬಂದು ಏಳೂವರೆ ದಶಕವಾದರೂ ಬಡತನ ತಾಂಡವಾಡುತ್ತಿದೆ. ಅನೇಕ ಕಡೆ ಕಡುಬಡತನವಿದೆ. ಬೇಸಾಯಕ್ಕೆ ಮತ್ತು ಜನರಿಗೆ ಶುದ್ಧ ನೀರಿಲ್ಲದ ದುಃಸ್ಥಿತಿಯಲ್ಲಿದೆ ಈ ಪ್ರದೇಶ. ಹೀಗೆ ಅನೇಕ ಸಮಸ್ಯೆಗಳ ನಡುವೆಯೂ ತಾಲೂಕಿನ ಜನರು ಪ್ರತ್ಯೇಕ ವಿಧಾನಸಭೆ ಕ್ಷೇತ್ರಕ್ಕಾಗಿ, ವಿಧಾನಸಭೆಯಲ್ಲಿ ತಮ್ಮ ಪಾಲಿಗೆ ದನಿಯೆತ್ತುವ ಪ್ರತ್ಯೇಕ ಶಾಸಕರಿಗಾಗಿ ನಿರಂತರ ಹೋರಾಟ ನಡೆಸುತ್ತಲೇ ಬಂದಿದ್ದಾರೆ.

25 ವರ್ಷಗಳ ಹೋರಾಟಕ್ಕೆ ಸಿಗುವುದೇ ಫಲ?

1996ರಲ್ಲಿ ತಾಲೂಕಿನ ಕೆಲವು ವ್ಯಕ್ತಿಗಳು ಸೇರಿ ʼಗುಡಿಬಂಡೆ ಪ್ರತ್ಯೇಕ ವಿಧಾನಸಭಾ ಕ್ಷೇತ್ರ ಹೋರಾಟ ಸಮಿತಿʼ ರಚಿಸಿಕೊಂಡು ಅಂದಿನ ಜನತಾದಳ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದರು. ಅಲ್ಲದೆ, ಕಾನೂನುಬದ್ಧ ಹೋರಾಟ ನಡೆಸಿ ಸರಕಾರದ ಗಮನ ಸೆಳೆದು ಇಂದಿಗೆ (ಜೂನ್‌ ೯) 25 ವರ್ಷವಾಗಿದೆ. ಇನ್ನಾದರೂ ಗುಡಿಬಂಡೆ ಪ್ರತ್ಯೇಕ ವಿಧಾನಸಭೆ ಕ್ಷೇತ್ರವಾಗುತ್ತಾ? ಎಂಬ ನಿರೀಕ್ಷೆಯಲ್ಲಿ ಜನರಿದ್ದಾರೆ.

ತಾಲೂಕಿನಲ್ಲಿ ನಾಯಕತ್ವದ ಕೊರತೆ

ಎರಡೂವರೆ ದಶಕದಿಂದ ಪ್ರತ್ಯೇಕ ವಿಧಾನಸಭಾ ಕ್ಷೇತ್ರಕ್ಕಾಗಿ ಹೋರಾಟ ಮಾಡಿದರೂ ಅದಕ್ಕೆ ಫಲ ಸಿಗದಿರುವುದಕ್ಕೆ ನಾಯಕತ್ವದ ಕೊರತೆ ಕಾರಣವಾ? ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಎಲ್ಲರನ್ನೂ ಒಟ್ಟಾಗಿ ಸೇರಿಸಿಕೊಂಡ ಹೋರಾಟ ನಡೆಸಲು ಸೂಕ್ತ, ಸಮರ್ಥ ನಾಯಕ ಯಾರು? ಎಂದು ಜನರು ಆಸೆ ಕಂಗಳಿಂದ ಎದುರು ನೋಡುತ್ತಿದ್ದಾರೆ. ಒಂದು ವೇಳೆ ಪ್ರತ್ಯೇಕ ಕ್ಷೇತ್ರವಾಗದೇ ಗುಡಿಬಂಡೆ ಸಮಗ್ರ ಅಭಿವೃದ್ಧಿ ಆಗುವುದಿಲ್ಲ ಎಂಬ ಭಾವನೆ ಜನರಲ್ಲಿ ಈಗೀಗ ಗಟ್ಟಿಯಾಗಿ ಬೇರೂರುತ್ತಿದೆ.

ವರ್ಷಗಳ ಹಿಂದೆ ಬಾಗೇಪಲ್ಲಿ ತಾಲೂಕು ಗುಡಿಬಂಡೆ ತಾಲೂಕಿಗೇ ಸೇರಿಕೊಂಡಿತ್ತು. ಅಂಥ ಇತಿಹಾಸವಿರುವ ಗುಡಿಬಂಡೆ ತಾಲೂಕು ಇಂದು ಬಾಗೇಪಲ್ಲಿ ಕ್ಷೇತ್ರದ ಭಾಗವಾಗಿ ಅಲ್ಲ ರಂಗಳಲ್ಲೂ ಹಿಂದೆ ಬಿದ್ದಿದೆ. ಉದ್ಯೋಗಕ್ಕಾಗಿ, ಜೀವನಕ್ಕಾಗಿ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು, ಆಯೋಗಗಳು ಗುಡಿಬಂಡೆಯನ್ನು ವಿಧಾನಸಭೆ ಕ್ಷೇತ್ರವನ್ನಾಗಿ ರೂಪಿಸುವತ್ತ ಯೋಚನೆ ಮಾಡಬೇಕಿದೆ.

ಗುಡಿಬಂಡೆ ವಿಧಾನಸಭೆ ಕ್ಷೇತ್ರದ ಸ್ವರೂಪ

ಗುಡಿಬಂಡೆ ಕೇಂದ್ರ ಸ್ಥಾನವಾಗಿ ವಿಧಾನಸಭೆ ರಚನೆಗೆ ಭೌಗೋಳಿಕ ನೀಲನಕ್ಷೆ ಸಿದ್ಧವಾಗಿದೆ. ತಾಲೂಕಿನ ಎಲ್ಲ ಹೋಬಳಿಗಳು ಹಾಗೂ ನೆರೆಯ ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದ ಮಂಡಿಕಲ್ಲು, ಗೌರಿಬಿದನೂರು ವಿಧಾನಸಭೆ ಕ್ಷೇತ್ರದ ನಗರಗೆರೆ ಹೋಬಳಿಗಳನ್ನು ಗುಡಿಬಂಡೆ ತಾಲೂಕಿಗೆ ಸೇರಿಸಿದರೆ ಜನಸಂಖ್ಯೆ ಆಧಾರಿತವಾಗಿ ಪ್ರತ್ಯೇಕವಾಗಿ ವಿಧಾನಸಭೆ ಕ್ಷೇತ್ರವನ್ನು ರಚನೆ ಮಾಡಬೇಕು ಎನ್ನುತ್ತಾರೆ ಜಿ.ಎನ್.ರಾಜಶೇಖರ್ ನಾಯ್ಡು. ಇವರು 1996ರಲ್ಲಿ ರಚನೆಯಾಗಿದ್ದ ಗುಡಿಬಂಡೆ ಪ್ರತ್ಯೇಕ ವಿಧಾನಸಭಾ ಕ್ಷೇತ್ರ ಹೋರಾಟ ಸಮಿತಿ ಮುಖಂಡರು ಹೌದು.

ರಾಜಕೀಯ ಇಚ್ಛಾಶಕ್ತಿ ಹಾಗೂ ಗುಡಿಬಂಡೆಯೂ ಇತರೆ ತಾಲೂಕುಗಳಂತೆ ಸಮಾನಾಂತರವಾಗಗಿ ಅಭಿವೃದ್ಧಿಯಾಗಲಿ ಎಂಬ ಸದುದ್ದೇಶವಿದ್ದರೆ ಪ್ರತ್ಯೇಕ ವಿಧಾನಸಭೆ ಕ್ಷೇತ್ರ ಬರುವುದು ಕಷ್ಟವೇನೂ ಅಲ್ಲ ಎನ್ನುತ್ತಾರೆ ಅವರು.

ಯಾರು ಏನಂತಾರೆ?

ಜನಸಂಖ್ಯೆ ಆಧಾರಿತ ಕ್ಷೇತ್ರ ಮಾಡಲು ಇದು ಸೂಕ್ತ ಸಮಯ, ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದ ಮಂಡಿಕಲ್ಲು, ಗೌರಿಬಿದನೂರು ವಿಧಾನಸಭೆ ಕ್ಷೇತ್ರದ ನಗರಗೆರೆ ಹೋಬಳಿಗಳನ್ನು ಗುಡಿಬಂಡೆ ತಾಲೂಕಿಗೆ ಸೇರಿಸಿದರೆ ಜನಸಂಖ್ಯೆ ಆಧಾರಿತವಾಗಿ ಗುಡಿಬಂಡೆ ಪ್ರತ್ಯೇಕ ವಿಧಾನಸಭಾ ಕ್ಷೇತ್ರವಾಗಿ ಸರಕಾರ ಶಿಫಾರಸ್ಸು ಮಾಡುವ ಮೂಲಕ ಅಧಿಕೃತವಾಗಿ ಆದೇಶ ಹೊರಡಿಸಬಹುದು. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಗುಡಿಬಂಡೆ ಸ್ವತಂತ್ರ ಕ್ಷೇತ್ರವಾಗಿ ರೂಪುಗೊಳ್ಳಲಿ ಎಂಬುದೇ ನಮ್ಮೆಲ್ಲರ ಆಶಯ.

ಜಿ.ಎನ್.ರಾಜಶೇಖರ್ ನಾಯ್ಡು / 1996ರಲ್ಲಿ ರಚನೆಯಾಗಿದ್ದ ಗುಡಿಬಂಡೆ ಪ್ರತ್ಯೇಕ ವಿಧಾನಸಭಾ ಕ್ಷೇತ್ರ ಹೋರಾಟ ಸಮಿತಿ ಮುಖಂಡರು

ಪ್ರತ್ಯೇಕ ವಿಧಾನಸಭಾ ಕ್ಷೇತ್ರವಾಗಿ ಗುಡಿಬಂಡೆ ಆಗಲೇಬೇಕು ಹಾಗೂ ನಮ್ಮ ತಾಲೂಕು ಅಭಿವೃದ್ಧಿಯಾಗಬೇಕು. ರೈತರು ವ್ಯವಸಾಯ ಮಾಡಲು ನೀರಿನ ಸೌಕರ್ಯ, ಶಿಕ್ಷಣ, ಉದ್ಯೋಗಕ್ಕಾಗಿ ಕೈಗಾರಿಗಳು ಸೇರಿ ವಿವಿಧ ರಂಗಗಳಲ್ಲಿ ತಾಲೂಕು ಅಭಿವೃದ್ಧಿಯಾಗಬೇಕಾದರೆ ಪ್ರತ್ಯೇಕ ವಿಧಾನಸಭಾ ಕ್ಷೇತ್ರದ ಅಗತ್ಯವಿದೆ.

ಕೆ.ಎನ್.ನವೀನ್ ಕುಮಾರ್‌ / ಕಾಂಗ್ರಸ್ ಮುಖಂಡ ಹಾಗೂ ಆರೋಗ್ಯ ರಕ್ಷಾ ಸಮಿತಿ ಸದಸ್ಯರು

ಗುಡಿಬಂಡೆ ಪ್ರತ್ಯೇಕ ವಿಧಾನಸಭೆ ಕ್ಷೇತ್ರವಾದಾಗ ತಾಲೂಕಿನ ಅಭಿವೃದ್ಧಿ ಸಾಧ್ಯ, ಅಭಿವೃದ್ದಿಗಾಗಿ ಸರಕಾರದಿಂದ ಹೆಚ್ಚು ಹಣ ಬಿಡುಗಡೆ ಆಗುತ್ತದೆ. ಕೆಎಸ್ಆರ್‌ಟಿಸಿ ಘಟಕ ಸೇರಿ ಮುಂತಾದ ಅಭಿವೃದ್ಧಿ ಕೆಲಸಗಳನ್ನು ಮಾಡಬಹುದು.

ಜಿ.ವಿ.ಗಂಗಪ್ಪ / ಜಿಲ್ಲಾ ಸಂಘಟನಾ ಸಂಚಾಲಕರು, ದಲಿತ ಸಂಘರ್ಷ ಸಮಿತಿ, ಗುಡಿಬಂಡೆ

ಜನಸಂಖ್ಯೆ ಆಧಾರಿತ ಪ್ರತ್ಯೇಕ ವಿಧಾನಸಭೆ ಕ್ಷೇತ್ರವಾದಾಗ ತಾಲ್ಲೂಕು ಕೇಂದ್ರಕ್ಕೆ ವಿವಿಧ ಹಳ್ಳಿಗಳಿಂದ ಜನರು ವಿವಿಧ ಕೆಲಸಗಳಿಗೆ ಬಂದಾಗ ಅಭಿವೃದ್ಧಿಯಾಗುತ್ತದೆ, ತಾಲ್ಲೂಕಿಗೆ ಮಿನಿ ಕ್ರೀಡಾಂಗಣ ಸೇರಿದಂತೆ ಮುಂತಾದವುಗಳ ಅವಶ್ಯಕತೆ ಇದೆ.

ನವೀನ್ / ಸದಸ್ಯರು, ಪ್ರತ್ಯೇಕ ವಿಧಾನಸಭೆ ಕ್ಷೇತ್ರ ಹೋರಾಟ ಸಮಿತಿ, ಗುಡಿಬಂಡೆ
Tags: bagepallichikkaballapurademand for separate assembly constituencygudibandegudibande assembly constituencykarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ

Leave a Reply Cancel reply

Your email address will not be published. Required fields are marked *

Recommended

ತಮಿಳುನಾಡಿಗೆ ಕೇರ್‌ ಮಾಡಬೇಡಿ, ಮೊದಲು ಪ್ರಧಾನಿ ಮನವೊಲಿಸಿ

ರಮೇಶ್‌ ಕುಮಾರ್‌ ವಿರುದ್ಧ ಹೆಚ್‌ಡಿಕೆ ಕಿಡಿ

4 years ago
ಸಚಿವ ಈಶ್ವರಪ್ಪ ವಿರುದ್ಧ ಗುಡಿಬಂಡೆಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ

ಸಚಿವ ಈಶ್ವರಪ್ಪ ವಿರುದ್ಧ ಗುಡಿಬಂಡೆಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ