• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಗುಡಿಬಂಡೆಯಲ್ಲಿ ಗ್ರೀನ್ ಪೊಲೀಸ್ ಸ್ಟೇಷನ್!

cknewsnow desk by cknewsnow desk
July 12, 2021
in CHIKKABALLAPUR, EDITORS'S PICKS
Reading Time: 2 mins read
2
ಗುಡಿಬಂಡೆಯಲ್ಲಿ ಗ್ರೀನ್ ಪೊಲೀಸ್ ಸ್ಟೇಷನ್!
2k
VIEWS
FacebookTwitterWhatsuplinkedinEmail

ಆರಕ್ಷಕ ವೃತ್ತ ನಿರೀಕ್ಷಕ ಲಿಂಗರಾಜು ಪರಿಸರ ಪ್ರೇಮ; ಠಾಣೆಯ ಸುತ್ತ ಹಸಿರುಮಯ

by GS Bharath Gudibande

ಗುಡಿಬಂಡೆ: ಪೊಲೀಸ್ ಠಾಣೆ ಎಂದರೆ ಜನರಿಗೆ ಭಯದ ಭಾವನೆ ಸಹಜ. ಆದರೆ, ಖಾಕಿಗಳಲ್ಲೂ ಸರಳತೆ ಇರುತ್ತದೆ ಎನ್ನುವುದು ಕೊಂಚ ವಿರಳ. ಅದರ ಜತೆಗೆ; ಪರಿಸರ ಪ್ರೇಮ, ಜನಸ್ನೇಹಿ ವರ್ತನೆ ಇದ್ದರಂತೂ ಅದಕ್ಕಿಂತ ಮಿಗಿಲಾದ ಸುದ್ದಿ ಬೇರೆ ಇಲ್ಲ ಎನ್ನಬಹುದು.

ಇಂಥ ಹೆಚ್ಚುಗಾರಿಕೆಯ ಸುದ್ದಿಗೆ ಪಾತ್ರರಾಗಿದ್ದಾರೆ ಗುಡಿಬಂಡೆ ಪೊಲೀಸ್ ಠಾಣೆಯ ಆರಕ್ಷಕ ವೃತ್ತ ನಿರೀಕ್ಷಕ ಲಿಂಗರಾಜು ಅವರು.

ಅವರು ಮಾಡಿರುವುದು ಇಷ್ಟೇ. ಅಪರಾಧಿಗಳಿಗೆ ಬೆವರಿಳಿಸುವ ನಿತ್ಯದ ಕರ್ತವ್ಯದ ಜತೆಯಲ್ಲೇ ಜನ ಸಾಮಾನ್ಯರಿಗೆ ನಿಶ್ಚಿಂತೆಯಿಂದ ಉಸಿರಾಡುವ ನಿರ್ಮಲ ಪರಿಸರವನ್ನೂ ಠಾಣೆಯ ಸುತ್ತಲೂ ನಿರ್ಮಿಸಿದ್ದಾರೆ.

ಪೊಲೀಸ್ ಠಾಣೆಯ ಆವರಣದಲ್ಲಿ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಮರ ಗಿಡ, ಅದರ ನಡುವೆ  ನೆಲದಗಲಕ್ಕೂ ಹಾಸಿದಂತಿರುವ ಹಸಿರ ಹುಲ್ಲು, ಜನ ದೂರು ನೀಡಲು ಬಂದರೆ ಹೊರಗೆ ಅವರಿಗೆ ಮರಗಳ ತಂಪಾದ ನೆರಳು, ಶುದ್ಧ ಕುಡಿಯುವ ನೀರು, ನೀಟಾದ ಶೌಚಾಲಯ.. ಪೊಲೀಸ್‌ ಠಾಣೆಯಲ್ಲಿ ಜನರಿಗೆ ಇಷ್ಟೆಲ್ಲ ಸೌಕರ್ಯ ಇರುತ್ತಾ? ಎಂಬ ಪ್ರಶ್ನೆ ಇದ್ದರೆ ಅಂಥವರು ಒಮ್ಮೆ ಗುಡಿಬಂಡೆ ಪೊಲೀಸ್‌ ಠಾಣೆಗೆ ಭೇಟಿ ನೀಡಿ…

ಹಲವು ಕಡೆ ಆರಕ್ಷಕ ವೃತ್ತ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸಿರುವ ಲಿಂಗರಾಜು, ವರ್ಗವಾದ ಕಡೆಯೆಲ್ಲ ಇದನ್ನೇ ಮಾಡಿದ್ದಾರೆ. ಗುಡಿಬಂಡೆಯಲ್ಲೂ ಅದನ್ನೇ ಮಾಡಿದ್ದು, ಠಾಣೆಯ ಸುತ್ತಲು ಹಸಿರ ವಾತಾವರಣದ ಜತೆಗೆ ಶುಚಿತ್ವವನ್ನೂ ಕಾಪಾಡುವಲ್ಲೂ ಕಾಳಜಿ ತೋರಿದ್ದಾರೆ.

ಹಳೆ ಕಟ್ಟಡಕ್ಕೆ ಹೊಸ ಮೆರಗು

ಪೊಲೀಸ್ ಠಾಣೆಯ ಹಳೆ ಕಟ್ಟಡದ ಚಿತ್ರಣವನ್ನು ಬದಲಿಸಿ, ಠಾಣೆಯೊಳಗೆ ಸಿಬ್ಬಂದಿ ಕೆಲಸ ಮಾಡುವ ವ್ಯವಸ್ಥೆ ಮಾಡಲಾಗಿದೆ. ಕೆಲ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ಮಾಡಲು ಹಳೆಯ ಕಟ್ಟಡ ಅನುಕೂಲಕರವಾಗಿದೆ ಎನ್ನುತ್ತಾರೆ ಠಾಣೆಯ ಸಿಬ್ಬಂದಿ. ಒಂದು ವೇಳೆ ಆ ಕಟ್ಟಡವನ್ನು ಹಾಗೆಯೇ ಬಿಟ್ಟಿದ್ದಿದ್ದರೆ ಧೂಳು ತುಂಬಿ ಹಾಳು ಕೊಂಪೆಯಾಗುತ್ತಿತ್ತು.

ಸುತ್ತ ಹಚ್ಚ ಹಸಿರಿನ ಒಂದು ಗಾರ್ಡನ್ ನಿರ್ಮಾಣ ಮಾಡಲಾಗಿದ್ದು, ದೂರುದಾರರು ಇಲ್ಲಿ ಕುಳಿತು ತಮ್ಮ ಮಾನಸಿಕ ಒತ್ತಡ ಕಡಿಮೆ ಮಾಡಿಕೊಂಡು ಸಮಸ್ಯೆಗಳನ್ನು ಬಗೆಗರಿಸಿಕೊಳ್ಳಲು ಈ ಪರಿಸರ ಪೂರಕವಾಗಿದೆ. ಒಂದು ವೇಳೆ ಕೆಲವೊತ್ತು ಕಾಯಬೇಕಾದ ಸಂದರ್ಭ ಬಂದರೂ ಗಾರ್ಡನ್‌ನಲ್ಲಿ ನಿಶ್ಚಿಂತೆಯಿಂದ ಕೂರಬಹುದು.

ಇನ್ನು ದೂರುದಾರರು ಬಂದರೆ ಅವರಿಗೆ ಆತ್ಮೀಯ ಸ್ವಾಗತವಿದೆ. ಅವರ ಸಮಸ್ಯೆ ಹಾಗೂ ದೂರಿನ ಬಗ್ಗೆ ಎಲ್ಲಾ ರೀತಿಯ ಮಾಹಿತಿ ಪಡೆದು ಕ್ಷಿಪ್ರಗತಿಯಲ್ಲಿ ಅವರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನ ಮಾಡುತ್ತಿದ್ದೇವೆ ಎನ್ನುತ್ತಾರೆ ಲಿಂಗರಾಜು.

ಪೊಲೀಸ್ ಠಾಣೆಗೆ ದೂರು ನೀಡಲು ಬಂದವರು ಮಾನಸಿಕವಾಗಿ ನೊಂದಿರುತ್ತಾರೆ. ಹಾಗಾಗಿ ಉತ್ತಮ ಪರಿಸರ ಇರುವ ವಾತವರಣಕ್ಕೆ ಬಂದಾಗ ದೂರುದಾರರ ಒತ್ತಡ ಸ್ವಲ್ಪವಾದರೂ ಕಡಿಮೆಯಾಗುತ್ತದೆ. ನಮ್ಮ ಠಾಣೆಯ ಸಿಬ್ಬಂದಿಯ ಆರೋಗ್ಯ ಹಿತದೃಷ್ಟಿಯಿಂದಲೂ ಇಲ್ಲಿ ಸದಾ ಹಸಿರು ಇರುವಂತೆ ಮಾಡಿದ್ದೇವೆ. ನಾವು ಕರ್ತವ್ಯ ನಿರ್ವಹಿಸುವ ಸ್ಥಳ ಸ್ವಚ್ಚವಾಗಿರಬೇಕು. ಬರುವ ನಾಗರೀಕರಿಗೂ ಬೇಸರ ಎನಿಸಬಾರದು. ಆಹ್ಲಾದಕರ ವಾತಾವರಣ ಸಮಸ್ಯೆಗಳನ್ನೂ ಪರಿಹರಿಸಲು ಪೂರಕವಾಗಿರುತ್ತದೆ.

ಲಿಂಗರಾಜು / ಆರಕ್ಷಕ ವೃತ್ತ ನಿರೀಕ್ಷಕ, ಗುಡಿಬಂಡೆ

ಗುಡಿಬಂಡೆ ಪೊಲೀಸ್ ಠಾಣೆಗೆ ದೂರು ದಾಖಲು ಮಾಡುಲು ಬರುವ ಸಾರ್ವಜನಿಕರಿಗೆ ಒಳ್ಳೆಯ ವಾತಾವರಣವನ್ನು ನಿರ್ಮಾಣ ಮಾಡಿದ್ದಾರೆ ಪೊಲೀಸರು. ಕುಡಿಯುವ ನೀರು, ಸ್ಯಾನಿಟೈಸರ್, ಸ್ವಲ್ಪ ಸಮಯ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಕಲ್ಪಿಸಿದ್ದಾರೆ. ದೂರುದಾರರಿಗೆ ಜರೂರಾಗಿ ಸ್ಪಂದಿಸಿ ಅವರ ಸಮಸ್ಯೆಗಳನ್ನು  ಇತ್ಯರ್ಥ ಮಾಡುತ್ತಿದ್ದಾರೆ.

ರಿಜ್ವಾನ್ ಪಾಷಾ / ಕಾಂಗ್ರಸ್ ಮುಖಂಡ, ಗುಡಿಬಂಡೆ
Tags: chikkaballapuragreen police stationgudibande police stationkarnatakaKarnataka police
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಜೈಲಿನಿಂದ ಹೊರಬಂದ ಕೂಡಲೇ ಮೀಡಿಯಾ ಮುಂದೆ ಕುಳಿತ ಅಲ್ಲು ಅರ್ಜುನ್‌

ಜೈಲಿನಿಂದ ಹೊರಬಂದ ಕೂಡಲೇ ಮೀಡಿಯಾ ಮುಂದೆ ಕುಳಿತ ಅಲ್ಲು ಅರ್ಜುನ್‌

by cknewsnow desk
December 14, 2024
0

ಅರೆಸ್ಟ್ ಆದ 24 ಗಂಟೆಗಳಲ್ಲೇ ಜೈಲಿನಿಂದ ರಿಲೀಸ್; ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸುತ್ತಿದೆ ಪುಷ್ಪಾ - 2

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

ಉದ್ಯೋಗ & ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಸ

ಉದ್ಯೋಗ & ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಸ

by cknewsnow desk
July 23, 2024
0

ಪ್ರಧಾನಿ ಕನಸಿನ 'ವಿಕಸಿತ ಭಾರತ' ನಿರ್ಮಾಣಕ್ಕೆ ಶಕ್ತಿ ತುಂಬುವ ಬಜೆಟ್

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

by cknewsnow desk
May 6, 2024
0

ನಾಗಮಂಗಲದ ಎಲ್.‌ಆರ್.‌ಶಿವರಾಮೇಗೌಡ ಮಧ್ಯಸ್ಥಿಕೆ; ಮೊಬೈಲ್‌ ಸಂಭಾಷಣೆ ಆಡಿಯೋ ಬಿಡುಗಡೆ

Next Post
ಕರ್ನಾಟಕದ 19ನೇ ರಾಜ್ಯಪಾಲರಾಗಿ ಥಾವರ್‌ಚಂದ್ ಗೆಹಲೋತ್  ಪ್ರಮಾಣ

ಕರ್ನಾಟಕದ 19ನೇ ರಾಜ್ಯಪಾಲರಾಗಿ ಥಾವರ್‌ಚಂದ್ ಗೆಹಲೋತ್ ಪ್ರಮಾಣ

Comments 2

  1. Pingback: ಗುಡಿಬಂಡೆ ಸಿಪಿಐ ಲಿಂಗರಾಜು ಸಮಾಜಮುಖಿ ಕೆಲಸಕ್ಕೆ ಚಿಕ್ಕಬಳ್ಳಾಪುರ ಎಸ್‌ಪಿ ಪ್ರಶಂಸೆ - cknewsnow
  2. Pingback: ಗ್ರೀನ್‌ ಪೊಲೀಸ್ ಠಾಣೆ; ಸಿಪಿಐ ಲಿಂಗರಾಜು ಕಾರ್ಯ ಶ್ಲಾಘನೀಯ ಎಂದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ - cknewsnow

Leave a Reply Cancel reply

Your email address will not be published. Required fields are marked *

Recommended

ಪ್ರಜಾವೈದ್ಯ ಡಾ.ಅನಿಲ್ ಕುಮಾರ್ ಅವರಿಗೆ ಚಾಣಕ್ಯ ಪ್ರಶಸ್ತಿ

ಪ್ರಜಾವೈದ್ಯ ಡಾ.ಅನಿಲ್ ಕುಮಾರ್ ಅವರಿಗೆ ಚಾಣಕ್ಯ ಪ್ರಶಸ್ತಿ

4 years ago
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ಅಂತೂ ಕೊರೊನಾಕ್ಕೆ ಕೊನೆಗಾಲ!

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ