• About
  • Advertise
  • Careers
  • Contact
Tuesday, May 20, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home GUEST COLUMN

ಬಸವರಾಜ ಬೊಮ್ಮಾಯಿ s/o ಸೋಮಪ್ಪ ರಾಯಪ್ಪ & ಬೊಮ್ಮಾಯಿ c/o ಸರಳತೆ-ಸಜ್ಜನಿಕೆ

cknewsnow desk by cknewsnow desk
August 30, 2021
in GUEST COLUMN, STATE
Reading Time: 2 mins read
0
ಬಸವರಾಜ ಬೊಮ್ಮಾಯಿ s/o ಸೋಮಪ್ಪ ರಾಯಪ್ಪ & ಬೊಮ್ಮಾಯಿ c/o ಸರಳತೆ-ಸಜ್ಜನಿಕೆ
1k
VIEWS
FacebookTwitterWhatsuplinkedinEmail

ಆಟವೆಂದರೆ ಪ್ರೀತಿ, ಮಿತಭಾಷಿ, ನೇರ-ನುಡಿಯ ಸರಳಜೀವಿ

ಕರ್ನಾಟಕ ಕಠಿಣ ಸವಾಲುಗಳಲ್ಲಿ ಸಿಕ್ಕಿಕೊಂಡಿರುವ ಹೊತ್ತಿನಲ್ಲಿಯೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಾರೆ ಬಸವರಾಜ ಬೊಮ್ಮಾಯಿ. ಸಾಮಾನ್ಯರಲ್ಲಿ ಸಾಮಾನ್ಯರಂತೆ ಇದ್ದುಬಿಡುವ, ಯಾವ ಹಮ್ಮು-ಬಿಮ್ಮು ಇಲ್ಲದ ಅವರ ಸರಳ ವ್ಯಕ್ತಿತ್ವವನ್ನು ಸೊಗಸಾಗಿ ಕಟ್ಟಿಕೊಟ್ಟಿದ್ದಾರೆ ನಮ್ಮ ಅಂಕಣಕಾರ ಡಾ.ಗುರುಪ್ರಸಾದ್‌ ರಾವ್‌ ಹವಲ್ದಾರ್.

ಜನತಾದಳದಿಂದ ಸೋಮಪ್ಪ ರಾಯಪ್ಪ ಬೊಮ್ಮಾಯಿ (ಎಸ್.ಆರ್.ಬೊಮ್ಮಾಯಿ) ಅವರು ಮುಖ್ಯಮಂತ್ರಿಯಾಗಿದ್ದ (1988-89) 32-33 ವರ್ಷಗಳ ನಂತರ ಅವರ ಪುತ್ರ ಬಸವರಾಜ ಬೊಮ್ಮಾಯಿ ಅವರು ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಿದ್ದಾರೆ. 61 ವರ್ಷದ ಜ್ಯೂನಿಯರ್‌ ಬೊಮ್ಮಾಯಿ ಅವರು ಈಗ ಕರ್ನಾಟಕದ ೩0ನೇ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

  • ಎಸ್.ಆರ್.ಬೊಮ್ಮಾಯಿ

ಉತ್ತರ ಕರ್ನಾಟಕದ ಲಿಂಗಾಯತ ಸಮುದಾಯಕ್ಕೆ ಸೇರಿದ ಸೋಮಪ್ಪ ರಾಯಪ್ಪ ಬೊಮ್ಮಾಯಿ (ಎಸ್‌.ಆರ್‌.ಬೊಮ್ಮಾಯಿ) -ಗಂಗಮ್ಮ ದಂಪತಿಗಳ ನಾಲ್ಕು ಮಕ್ಕಳಲ್ಲಿ (ಇಬ್ಬರು ಗಂಡು, ಇಬ್ಬರು ಹೆಣ್ಣು) ಹಿರಿಯ ಪುತ್ರರೇ ಬಸವರಾಜ ಬೊಮ್ಮಾಯಿ. ಅವರ ಧರ್ಮಪತ್ನಿ ಹೆಸರು ಚೆನ್ನಮ್ಮ ಹಾಗೂ ಮಕ್ಕಳು ಭರತ, ಆದಿತಿ.

ಬೊಮ್ಮಾಯಿ ಅವರ ಆರಂಭಿಕ ವಿದ್ಯಾಭ್ಯಾಸವು ಹುಬ್ಬಳ್ಳಿಯ ದೇಶಪಾಂಡೆ ನಗರದ ರೋಟರಿ ಇಂಗ್ಲೀಷ್ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಪಿಯುಸಿ ಕೂಡ ಹುಬ್ಬಳ್ಳಿಯಲ್ಲೇ ಆಗಿ ಬಿ.ವಿ.ಬೊಮ್ಮರೆಡ್ಡಿ ಎಂಜಿನಿಯರಿಂಗ್ ಕಾಲೇಜ್‌ನಲ್ಲಿ ಮೆಕಾನಿಕಲ್ ಎಂಜಿನಿಯರಿಂಗ್ ವ್ಯಾಸಂಗ ಪೂರೈಸಿದರು. ತದ ನಂತರ 1983ರಿಂದ 1985 ರವರೆಗೆ ಪುಣೆ ಟೆಲ್ಕೋ ಕಂಪನಿಯಲ್ಲಿ ಎರಡು ವರ್ಷ ತಾಂತ್ರಿಕ ತರಬೇತಿ ಪಡೆದು ಉದ್ಯಮಿಯೂ ಆದರು. ಹಾಗೆ ನೋಡಿದರೆ ಅವರದ್ದು ಮೂಲತಃ ಕೃಷಿ ಕುಟುಂಬ.

ಆರಂಭದಿಂದಲೂ ರಾಜಕೀಯ ಸೆಳೆತ

ಸಾಮಾಜಿಕ ಹಾಗೂ ರಾಜಕೀಯ ಸೇವೆಯನ್ನು ಕಾಲೇಜು ವಿದ್ಯಾಭ್ಯಾಸ ಕಾಲದಿಂದಲೇ ರೂಢಿಸಿಕೊಂಡಿದ್ದ ಬೊಮ್ಮಾಯಿ ಅವರು, ಪಠ್ಯೇತರ ಚಟುವಟಿಕೆ ಹಾಗೂ ಸಂಘಟನೆಗಳಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದರು. ಅವರ ತಂದೆಯವರು ರಾಜಕಾರಣದಲ್ಲಿದ್ದ ಕಾರಣಕ್ಕೆ ಸಹಜವಾಗಿಯೇ ಅವರಿಗೆ ಅದರ ಸೆಳೆತ ಇದ್ದೇ ಇತ್ತು.

ಬೊಮ್ಮಾಯಿ ಅವರು ತಮ್ಮ ರಾಜಕೀಯ ಜೀವನ ಪ್ರಾರಂಭಿಸಿದ್ದು ಜನತಾದಳದಿಂದ. 1993ರಲ್ಲಿ ಹುಬ್ಬಳ್ಳಿಯಲ್ಲಿ ನಡೆದ ರಾಜ್ಯ ಯುವ ಜನತಾದಳದ ಐತಿಹಾಸಿಕ ಬೃಹತ್ ರ್ಯಾಲಿಯ ಸಂಘಟನೆಯ ನೇತೃತ್ವ ವಹಿಸಿದ್ದರು. 1995ರಲ್ಲಿ ಹುಬ್ಬಳ್ಳಿ ನಗರದ ಈದ್ಗಾ ಮೈದಾನದ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಪ್ರಯತ್ನ ಮಾಡಿದ್ದರು. ಅಲ್ಲಿಂದ ಗಾಢವಾಗುತ್ತಾ ಹೋದ ಅವರ ರಾಜಕೀಯ ಹೆಜ್ಜೆಗಳು, 1995ರಿಂದ 1997 ರವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಜೆ.ಎಚ್.ಪಟೇಲರಿಗೆ ರಾಜಕೀಯ ಕಾರ್ಯದರ್ಶಿಯಾಗಿ ನೇಮಕವಾಗುವ ತನಕ ಮುಂದುವರಿದವು.

ಹೀಗಿರಬೇಕಾದರೆ, 1997 ಹಾಗೂ 2003ರಲ್ಲಿ ರಾಜ್ಯ ವಿಧಾನ ಪರಿಷತ್ತಿಗೆ ಸ್ಥಳೀಯ ಸಂಸ್ಥೆಗಳಿಂದ (ಧಾರವಾಡ-ಹಾವೇರಿ-ಗದಗ) ನಡೆದ ಚುನಾವಣೆಯಲ್ಲಿ ಸತತ ಎರಡು ಬಾರಿ ವಿಧಾನ ಪರಿಷತ್ತಿನ ಸದಸ್ಯರಾಗಿ ಆಯ್ಕೆಯಾದರು. 2007ರಲ್ಲಿ ಜುಲೈನಲ್ಲಿ ಧಾರವಾಡದಿಂದ ನರಗುಂದವರೆಗೆ 232 ಕಿ.ಮೀ ದೂರ 21 ದಿನಗಳ ಕಾಲ ರೈತರೊಂದಿಗೆ ಬೃಹತ್ ಪಾದಯಾತ್ರೆ ಮಾಡಿ ಜನಮನ್ನಣೆ ಗಳಿಸಿದರು. ನಂತರ 2008ರಲ್ಲಿ ಸಂಯುಕ್ತ ಜನತಾದಳ ತೊರೆದು ಬಿಜೆಪಿ ಸೇರ್ಪಡೆಯಾಗಿ 2008ರ ವಿಧಾನಸಭೆ ಚುನಾವಣೆಯಲ್ಲಿ ಶಿಗ್ಗಾಂವ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಬೊಮ್ಮಾಯಿ ಆಯ್ಕೆಗೊಂಡಿದ್ದರು. 

ಇದಾದ ಮೇಲೆ ವಿರೋಧಪಕ್ಷದ ಉಪ ನಾಯಕ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಕಾನೂನು ಮತ್ತು ಸಂಸದೀಯ ಸಚಿವರಾಗಿ, ಸಹಕಾರ ಸಚಿವರಾಗಿ ಕಾರ್ಯ ನಿರ್ವಹಣೆ, ಹಿಂದಿನ ಬಿಜೆಪಿ ಸರಕಾರದಲ್ಲಿ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ ಹಾಗೂ ಜಗದೀಶ ಶೆಟ್ಟರ್ ಅವರ ಸಂಪುಟದಲ್ಲಿ ಸತತ ಐದು ವರ್ಷ ಜಲ ಸಂಪನ್ಮೂಲ ಸಚಿವರಾಗಿ ಅವರು ದಕ್ಷತೆಯಿಂದ ಕೆಲಸ ಮಾಡಿದ್ದರು. ಯಡಿಯೂರಪ್ಪ ಅವರ ಕಳೆದೆರಡು ವರ್ಷದ ಸಂಪುಟದಲ್ಲಿ ಗೃಹ, ಸಂಸದೀಯ ವ್ಯವಹಾರ, ಕಾನೂನು ಖಾತೆಗಳನ್ನು ಅವರು ಯಶಸ್ವಿಯಾಗಿ ನಿಭಾಯಿಸಿದ್ದರು.

ಹಾವೇರಿ ಜಿಲ್ಲೆಯ ಶಿಗ್ಗಾಂವದಲ್ಲಿ ಭಾರತದಲ್ಲೇ ಮೊದಲ ಶೇ.100ರಷ್ಟು ಕೊಳವೆ ನೀರಾವರಿ ಯೋಜನೆಯನ್ನು ಜಾರಿಗೆ ತರುವುದು ಸೇರಿದಂತೆ ಕಾವೇರಿ, ಇತರೆ ನದಿಗಳ ಅನ್ಯ ರಾಜ್ಯಗಳ ಜತೆಗಿನ ತಕರಾರು, ವ್ಯಾಜ್ಯಗಳ ಬಗ್ಗೆ, ಹೋರಾಟಗಳ ಬಗ್ಗೆ, ನೀರಾವರಿ ಯೋಜನೆಗಳಲ್ಲಿ ಹಾಗೂ ನೀರಾವರಿ ವಿಷಯಗಳಲ್ಲಿ ಆಳವಾದ ಜ್ಞಾನ ಹೊಂದಿದವರು ಬೊಮ್ಮಾಯಿ.

ಜತೆಗೆ, ಅವರಿಗೆ ಕ್ರೀಡೆ ಎಂದರೂ ಬಹಳ ಒಲವು. ಈ ಹಿಂದೆ ಧಾರವಾಡದ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ ಅಧ್ಯಕ್ಷರೂ ಅವರಾಗಿದ್ದರು. ಕ್ರಿಕೆಟ್‌, ಗಾಲ್ಫ್‌ ಎಂದರೆ ಬೊಮ್ಮಾಯಿ ಅವರಿಗೆ ಬಹಳ ಆಸಕ್ತಿ. ಮಿತಭಾಷಿ, ನೇರ ನುಡಿಯ ಸರಳ ವ್ಯಕ್ತಿತ್ವದವರು ಅವರು. ಅಷ್ಟೇ ಅಲ್ಲ ಅಂತಃಕರಣವುಳ್ಳ ವ್ಯಕ್ತಿ. ಕೆಲ ದಿನಗಳ ಹಿಂದೆ ಅವರ ಸಾಕು ನಾಯಿ ತೀರಿಕೊಂಡಾಗ ಕಣ್ಣಿರಿಟ್ಟ ಸಹೃದಯಿ. ಪ್ರಾಣಿಗಳನ್ನು ಮಕ್ಕಳಂತೆ ಪ್ರೀತಿಸುವ ಮಮತಾಮಯಿ.

ಕರ್ನಾಟಕದ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಮೂಲಕ ಅಪ್ಪ-ಮಗ ಇಬ್ಬರೂ ಮುಖ್ಯಮಂತ್ರಿಗಳಾದ ಆದ ಎರಡನೇ ಜೋಡಿ ಎಂಬ ಹೆಗ್ಗಳಿಗೂ ಬಸವರಾಜ ಬೊಮ್ಮಾಯಿ ಪಾತ್ರರಾಗಿದ್ದಾರೆ.

ಯಡಿಯೂರಪ್ಪ ಅವರು ವರಿಷ್ಠರ ಮಾತಿನಂತೆ ರಾಜೀನಾಮೆ ನೀಡಿ ತಮ್ಮ ಅಪ್ತರಾದ ಬೊಮ್ಮಾಯಿ ಅವರಿಗೆ ಸಿಎಂ ಗಾದಿಗೆ ಸಿಗುವಂತೆ ಮತ್ತೂ ಮುಂದೆ ಆಡಳಿತ ನಡೆಸುವ ಸರಕಾರದ ಹಿಡಿತ ತಮ್ಮ ಕೈಯಲ್ಲೇ ಇದೆ ಎಂಬ ಸಂದೇಶವನ್ನು ರವಾನಿಸಿದ್ದಾರೆ. ಒಂದು ಅರ್ಥದಲ್ಲಿ ಇದರ ಪರಿಣಾಮಗಳಿಗೆ ಮುಂದಿನ ದಿನಗಳಲ್ಲಿ ರಾಜ್ಯದ ಜನತೆ ಸಾಕ್ಷಿಯಾಗಲಿದ್ದಾರೆ. ಒಂದು ವೇಳೆ ತಮ್ಮ ರಾಜಕೀಯ ಗುರು ಯಡಿಯೂರಪ್ಪ ಅವರ ಹಸ್ತಕ್ಷೇಪವನ್ನು ಒಪ್ಪಿಕೊಂಡು ಅವರು ಆಡಳಿತ ನಡೆಸುವರೋ ಅಥವಾ ತಮ್ಮದೇ ಸ್ವಯಂ ಶಕ್ತಿಯ ಬಳಸಿ ಸುಸೂತ್ರವಾಗಿ ಸರಕಾರ ನಡೆಸುವರೋ ಕಾದು ನೋಡಬೇಕಿದೆ.

ಈಗಾಗಲೇ ರಾಜ್ಯದ ಜನರು ಕೋವಿಡ್‌ ಕಾರಣಕ್ಕೆ ಆರ್ಥಿಕವಾಗಿ ತತ್ತರಿಸಿ ಹೋಗಿದ್ದಾರೆ. ಕಳೆದ ಕೆಲ ವರ್ಷಗಳ ರಾಜಕೀಯ ಅಸ್ಥಿರತೆ, ಸ್ಥಿತ್ಯಂತರದಿಂದ ಬೇಸತ್ತು ಹೋಗಿದ್ದಾರೆ. ರಾಜ್ಯದಲ್ಲಿ ಮಳೆ ಪ್ರವಾಹದಿಂದ ಜನ ಮನೆಮಠ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಅದಕ್ಕೆ ಸಂಬಂಧಿಸಿದ ಪರಿಹಾರ ನೀಡುವ ಕಾರ್ಯ, ಮೇಕೆದಾಟು ಯೋಜನೆ ಆರಂಭ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ, ಕಲ್ಯಾಣ ಕರ್ನಾಟಕ ಅಭಿವೃದ್ಧಿ, ಬೆಳಗಾವಿಯಲ್ಲಿ ಗಡಿ ತಕರಾರು, ರಾಜ್ಯದ ಆರ್ಥಿಕ ಪರಿಸ್ಥಿತಿ ಹಳಿಗೆ ತರುವುದು, ಪಕ್ಷದ ಅಂತರಿಕ ಕಚ್ಚಾಟ, ಭಿನ್ನಮತೀಯ ಚಟುವಟಿಕೆ ತಡೆದು ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಿ ಆಡಳಿತ ನಡೆಸುವ ಮತ್ತು ವಿರೋಧ ಪಕ್ಷಗಳ ಸವಾಲುಗಳನ್ನು ಸದನದಲ್ಲಿ ಸಮರ್ಥವಾಗಿ ಎದುರಿಸಬೇಕಾದ ಅನೇಕ ಸವಾಲುಗಳು ಬೊಮ್ಮಾಯಿ ಅವರ ಮುಂದಿವೆ.

ಇಂತಹ ಕಾಲಘಟ್ಟದಲ್ಲಿ ಹಲವು ವರ್ಷದ ನಂತರ ಉತ್ತರ ಕರ್ನಾಟಕದವರಾದ ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪಾರದರ್ಶಕ ಜನಪರ ಆಡಳಿತ ನೀಡಲಿ, ಯಾರಿಗೂ ರಬ್ಬರ್ ಸ್ಟ್ಯಾಂಪ್ ಆಗದೇ ಅತ್ಯುತ್ತಮ ಆಡಳಿತ ನೀಡಲಿ ಎಂಬುದೇ ಎಲ್ಲರ ಆಶಯ.


ಡಾ.ಗುರುಪ್ರಸಾದ ಹವಲ್ದಾರ್

ಮೂಲತಃ ಉಪನ್ಯಾಸಕರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನ ಹಳ್ಳಿಯವರು. ಪ್ರಸ್ತುತ ಹಗರಿಬೊಮ್ಮನಹಳ್ಳಿ ಜಿವಿಪಿಪಿ ಪದವಿ ಕಾಲೇಜನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತ ಜೊತೆಗೆ ಪತ್ರಿಕೆಗಳಿಗೆ ವೆಬ್ ನ್ಯೂಸ್ ಪೋಟ್೯ಲ್ ಗಳಿಗೆ ಲೇಖನ ಬರೆಯುತ್ತಿದ್ದಾರೆ.
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ದೇವರ ಹೆಸರಿನಲ್ಲಿ ಬೊಮ್ಮಾಯಿ ಪ್ರಮಾಣ

ದೇವರ ಹೆಸರಿನಲ್ಲಿ ಬೊಮ್ಮಾಯಿ ಪ್ರಮಾಣ

Leave a Reply Cancel reply

Your email address will not be published. Required fields are marked *

Recommended

ಕೋಲಾರದ ವಿಸ್ಟ್ರಾನ್‌ ಐಫೋನ್‌ ಘಟಕದ ಮೇಲೆ ದಾಳಿ; ಪ್ರಧಾನಮಂತ್ರಿ ನರೇಂದ್ರ ಮೋದಿ ಕಳವಳಕ್ಕೆ ಕಾರಣವೇನು?

ರಾಜ್ಯದಲ್ಲಿ ನೀಗಲಿದೆ ಲಸಿಕೆ ಹಾಹಾಕಾರ, ಮೋದಿ ಕೊಟ್ಟರು ಪರಿಹಾರ: ಕುಣಿದು ಕುಪ್ಪಳಿಸಿದ ಯಡಿಯೂರಪ್ಪ ಸರಕಾರ

4 years ago
ಬನ್ನೇರುಘಟ್ಟ ರಾಷ್ಟ್ರೀಯ ಜೈವಿನ ಉದ್ಯಾನವನದಲ್ಲಿ ಸಿಂಹದ ಮರಿ ದತ್ತು ಪಡೆದು ಅದಕ್ಕೆ ತಂದೆ ಹೆಸರಿಟ್ಟ ನಟ ವಸಿಷ್ಠ ಸಿಂಹ

ಬನ್ನೇರುಘಟ್ಟ ರಾಷ್ಟ್ರೀಯ ಜೈವಿನ ಉದ್ಯಾನವನದಲ್ಲಿ ಸಿಂಹದ ಮರಿ ದತ್ತು ಪಡೆದು ಅದಕ್ಕೆ ತಂದೆ ಹೆಸರಿಟ್ಟ ನಟ ವಸಿಷ್ಠ ಸಿಂಹ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ