• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಮಾಜಿ ಸಚಿವ ಸುರೇಶ್‌ ಕುಮಾರ್‌ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಅಕೌಂಟ್‌

cknewsnow desk by cknewsnow desk
July 29, 2021
in STATE
Reading Time: 1 min read
0
‌ರಾಜ್ಯದಲ್ಲಿ ಖಾಸಗಿ ಶಾಲೆ ಮತ್ತು ಪೋಷಕರ ನಡುವೆ ʼಫೀಸ್ ಫೈಟ್ʼ ಖಂಡಿತಾ ಒಳ್ಳೆಯದಲ್ಲ ಎಂದ ಸಚಿವ‌ ಎಸ್.ಸುರೇಶ್ ಕುಮಾರ್
1k
VIEWS
FacebookTwitterWhatsuplinkedinEmail

ಶಾಲೆಗಳ ಬಗ್ಗೆ ಮಾಹಿತಿ ಕೇಳಿದ ಆನ್‌ಲೈನ್‌ ಖದೀಮರು; ಪೊಲೀಸರಿಗೆ ದೂರು ಸಲ್ಲಿಸುವೆ ಎಂದ ಸುರೇಶ್

by GS Bharath Gudibande

ಬೆಂಗಳೂರು: ಪ್ರಾಥಮಿಕ ಮತ್ತಯ ಪ್ರೌಢಶಿಕ್ಷಣ ಖಾತೆಯ ಮಾಜಿ ಸಚಿವ ಎಸ್.‌ಸುರೇಶ್‌ ಕುಮಾರ್‌ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಅಕೌಂಟ್ ಕ್ರಿಯೇಟ್ ಮಾಡಿ ಅನೇಕರಿಗೆ ಫ್ರೆಂಡ್ ರಿಕ್ವೆಸ್ಟ್ ಕಳಿಸಿ ಹಾಗೂ ರಾಜ್ಯದ ವಿವಿಧ ಶಾಲೆಗಳ ಬಗ್ಗೆ ಮಾಹಿತಿ ಕೇಳಿ ಮೋಸ ಮಾಡಲು ಆನ್‌ಲೈನ್‌ ಕಿರಾತಕರು ಪ್ರಯತ್ನಿಸಿದ್ದಾರೆ.

“ನನ್ನ ಹೆಸರಿನಲ್ಲಿ ಯಾರೋ ನಕಲಿ ಖಾತೆ ಸೃಷ್ಟಿಸಿ ಎಲ್ಲಿರಿಗೂ ರಿಕ್ವೆಸ್ಟ್ ಕಳುಹಿಸುತ್ತಿದ್ದಾರೆ. ಅದಕ್ಕೆ ಯಾರೂ ಪ್ರತಿಕ್ರಿಯೆ ನೀಡಬೇಡಿ” ಎಂದು ಸ್ವತಃ ಮಾಜಿ ಸಚಿವರೇ ತಮ್ಮ ಫೇಸ್‌ಬುಕ್‌ ಅಕೌಂಟ್ʼನಲ್ಲಿ ಬರೆದುಕೊಂಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸೈಬರ್ ಖದೀಮರ ಉಪಟಳ ಹೆಚ್ಚಾಗಿದ್ದು, ಇನ್ನೊಂದು ಕಡೆ ಬ್ಯಾಂಕ್ ಸಿಬ್ಬಂದಿ ಅಂತ ಹೇಳಿ ವಂಚಿಸಲು ಕೇಡಿ ಗ್ಯಾಂಗ್‌ಗಳು ಪ್ರಯತ್ನ ಮಾಡುತ್ತಲೇ ಇವೆ.

ಸಮಾಜದಲ್ಲಿ ಉನ್ನತ ಸ್ಥಾನದಲ್ಲಿರುವವರನ್ನೇ ಗುರಿಯಾಗಿಸಿಕೊಂಡು ಸೈಬರ್ ದಾಳಿ, ನಕಲಿ ಫೇಸ್‌ಬುಕ್‌ ಅಂಕೌಟ್, ನಕಲಿ ವಾಟ್ಸಾಪ್ ಈ ರೀತಿ ಹಣ ಯಾಚನೆ ಮಾಡುವ ಮೂಲಕ ಅವರ ಘನತೆ, ಗೌರವಕ್ಕೆ ಧಕ್ಕೆ ತಂದು ವಂಚಿಸುವ ಪ್ರಕರಣಗಳು ಕಂಡು ಬರುತ್ತಿವೆ.

ಅಧಿಕಾರಿಗಳೂ ಟಾರ್ಗೆಟ್

ಸೈಬರ್ ಖದೀಮರು ಸಮಾಜದಲ್ಲಿ ಯಾರು ಉನ್ನತ ಸ್ಥಾನದಲ್ಲಿದ್ದಾರೋ ಅಂತಹವರ ನಕಲಿ ಅಕೌಂಟ್‌ಗಳ ಖಾತೆ ತೆರೆದು ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಅವರ ಬಳಿ ಹಣ ಯಾಚನೆ ಮಾಡಿ, ವಂಚಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ.

ಕೆಲ ದಿನಗಳ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದಿದ್ದ ಕಿಡಿಗೇಡಿಗಳು, ಅವರ ಹೆಸರಿನಲ್ಲಿ ಮೆಸೆಂಜರ್‌ ಮೂಲಕ ಜಿಲ್ಲಾಧಿಕಾರಿಗಳಿಗೆ ಗೊತ್ತಿದ್ದವರಿಗೆ ಹಣ ಬೇಡಿಕೆಯ ಸಂದೇಶ ಕಳಿದ್ದರು. ಈ ಬಗ್ಗೆ ಕೂಡಲೇ ಎಚ್ಚೆತ್ತಿದ್ದ ಜಿಲ್ಲಾಧಿಕಾರಿಗಳು, ದೂರು ದಾಖಲಿಸಿ ಕ್ರಮ ಕೈಗೊಂಡಿದ್ದರು.

ಸಾಮಾಜಿಕ ಜಾಲಾತಾಣಗಳ ದುರುಪಯೋಗ

ಸೈಬರ್ ಖದೀಮರು ಸಾಮಾಜಿಕ ಜಾಲಾತಾಣಗಳನ್ನೇ ಹೆಚ್ಚಾಗಿ ದುರುಪಯೋಗ ಮಾಡಿಕೊಂಡು ಫೇಸ್‌ಬುಕ್, ಮೆಸೆಂಜರ್, ಬ್ಯಾಂಕ್ ಸಿಬ್ಬಂದಿ ಹೆಸರಲ್ಲಿ ಜನರ ಬಳಿ ಹಣ ಕೀಳುತ್ತಿದ್ದಾರೆ, ಅದಕ್ಕೆ ಬ್ರೇಕ್ ಹಾಕುವವರು ಯಾರು? ಎಂಬ ಪ್ರಶ್ನೆಗಳು ಹೆಚ್ಚಾಗಿವೆ.

ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು, ಯಾರಾದರೂ ಅಪರಿಚಿತರು ಹಣ ಕೇಳಿ ವಂಚಿಸಲು ಪ್ರಯತ್ನಿಸಿದರೆ ಕೂಡಲೇ ಪೋಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಚಿಕ್ಕಬಳ್ಳಾಪುರ ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್‌ ಹೇಳಿದ್ದಾರೆ.

ಇನ್ನೊಂದೆಡೆ ಮಾಜಿ ಸಚಿವ ಸುರೇಶ್‌ ಕುಮಾರ್‌ ಅವರ ಫೇಸ್‌ಬುಕ್‌ನ ನಕಲಿ ಖಾತೆ ಸೃಷ್ಟಿ ಬಗ್ಗೆ ಕೆಲ ನೆಟ್ಟಿಗರು ಕಳವಳ ವ್ಯಕ್ತಪಡಿಸಿದ್ದಾರೆ.

“ನಿಮ್ಮಂತ ಸರಳ ವ್ಯಕ್ತಿಯನ್ನು ಬಿಟ್ಟಿಲ್ವಲ್ಲಾ. ಇವರು ಸಾಮಾನ್ಯದವರಲ್ಲ. ತುಂಬಾ ಕೆಟ್ಟ ವ್ಯಕ್ತಿತ್ವದವರು. ಇಂತಹ ಸಮಾಜಘಾತುಕ ವ್ಯಕ್ತಿಗಳಿಗೆ ತಕ್ಕ ಪಾಠ ಕಲಿಸಬೇಕಿದೆ.. ದಯವಿಟ್ಟು ನಿರ್ದಾಕ್ಷಿಣ್ಯವಾಗಿ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕು. ತಕ್ಷಣ ನೀವು ಸೈಬರ್‌ ಪೊಲೀಸರಿಗೆ ದೂರು ನೀಡಿ” ಎಂದು ಸುರೇಶ್‌ ಕುಮಾರ್‌ ಅವರಿಗೆ ಸಲಹೆ ಮಾಡಿದ್ದಾರೆ.

ಸೈಬರ್ ಕ್ರೈಂನವರಿಗೆ ದೂರು ನೀಡಿದರೂ ಪ್ರಯೋಜನವಿಲ್ಲ

ಕೆಲವರು ಹಣವನ್ನು ಕಳೆದುಕೊಂಡ ಸೈಬರ್ ಕ್ರೈಂ ಪೊಲೀಸರರಿಗೆ ದೂರು ನೀಡಿದರೂ ಏನು ಪ್ರಯೋಜನ ಆಗುತ್ತಿಲ್ಲ. ಐಎಎಸ್‌, ಐಪಿಎಸ್‌ ಅಧಿಕಾರಿಗಳ ಜಾಲತಾಣ ಖಾತೆಗಳನ್ನೇ ಹ್ಯಾಕ್‌ ಮಾಡಿದರೂ ಖದೀಮರನ್ನು ಪತ್ತೆ ಹಚ್ಚುವುದು ಕಷ್ಟವಾಗಿದೆ. ಇನ್ನು, ಸಾಮಾನ್ಯರ ಪರಿಸ್ಥಿತಿ ಏನು? ಎಂದು ಕೆಲವರು ಸಾಮಾಜಿಕ ಜಾಲಾತಾಣದಲ್ಲಿ ತಮ್ಮ ಅನಿಸಿಕೆಗಳನ್ನು ಬರೆದುಕೊಂಡಿದ್ದಾರೆ.

ಇದೊಂದು ಪಿಡುಗಾಗಿ ಬಿಟ್ಟಿದೆ. ಯಾರೋ ಕಿಡಿಗೇಡಿಗಳು ನನ್ನ ಹೆಸರಿನಲ್ಲಿ ಅಸತ್ಯ ಮಾಹಿತಿ ಯನ್ನೊಳಗೊಂಡ ಹುಸಿ ಫೇಸ್ಬುಕ್ ಅಕೌಂಟ್ ತೆರೆದಿರುವುದು ನನ್ನ ಗಮನಕ್ಕೆ ಬಂದಿದೆ. ನಾನು ಯಾರಿಗೂ ಫ್ರೆಂಡ್ ರಿಕ್ವೆಸ್ಟ್ ಕಳಿಸಿಲ್ಲ. ಒಂದೊಮ್ಮೆ ಯಾರಿಗಾದರೂ ಈ ರೀತಿ request ಬಂದರೆ ಒಪ್ಪಿಕೊಳ್ಳಬೇಡಿ. ನಾಳೆ ಈ ಕುರಿತು ದೂರು ಸಲ್ಲಿಸುವೆ.

ಎಸ್.ಸುರೇಶ್‌ ಕುಮಾರ್‌ , ಮಾಜಿ ಸಚಿವರು

ಇತ್ತೀಚಿನ ದಿನಗಳಲ್ಲಿ ನಕಲಿ ಅಕೌಂಟ್ ಕ್ರೀಟ್ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಯಾರಾದರೂ ಈ ರೀತಿ ನಕಲಿ ಅಕೌಂಟ್ ಕ್ರಿಯೇಟ್ ಮಾಡಿ ಹಣ ಯಾಚನೆ ಅಥವಾ ಇತರೆ ಮಾಹಿತಿ ಕೇಳಿದಾಗ ಖಚಿತ ಪಡಿಸಿಕೊಳ್ಳಬೇಕು, ಫೇಸ್‌ಬುಕ್‌ ಬಳಸುವಾಗ ನಿಮ್ಮ ಸ್ನೇಹಿತರಿಗೆ ಬಿಟ್ಟರೆ ಬೇರಿಯವರಿಗೆ ನಿಮ್ಮ ಅಕೌಂಟ್ ಕಾಣದಂತೆ ಸೆಟಿಂಗ್ಸ್ ಲಾಕ್ ಮಾಡಿಕೊಳ್ಳಿ.

ಜಿ.ಕೆ.ಮಿಥುನ್ ಕುಮಾರ್, ಪೊಲೀಸ್ ಅಧೀಕ್ಷಕರು ಚಿಕ್ಕಬಳ್ಳಾಪುರ ಜಿಲ್ಲೆ

Tags: cyber policefacebookfake Facebook accountonline cheatingS Sureshkumarsocial media
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಅಖಿಲ ಭಾರತ ಕೋಟಾ: MBBS ಸೇರಿ ವೈದ್ಯ ಕೋರ್ಸುಗಳಲ್ಲಿ ಒಬಿಸಿಗೆ 27%, ಆರ್ಥಿಕ ದುರ್ಬಲರಿಗೆ 10% ಮೀಸಲು

ಅಖಿಲ ಭಾರತ ಕೋಟಾ: MBBS ಸೇರಿ ವೈದ್ಯ ಕೋರ್ಸುಗಳಲ್ಲಿ ಒಬಿಸಿಗೆ 27%, ಆರ್ಥಿಕ ದುರ್ಬಲರಿಗೆ 10% ಮೀಸಲು

Leave a Reply Cancel reply

Your email address will not be published. Required fields are marked *

Recommended

ಕುವೆಂಪುಗೆ ಅಪಮಾನ; ರಾಜೀನಾಮೆ ಕೊಟ್ಟ ಹಂಪನಾ

ಕುವೆಂಪುಗೆ ಅಪಮಾನ; ರಾಜೀನಾಮೆ ಕೊಟ್ಟ ಹಂಪನಾ

3 years ago
ಸೋಶಿಯಲ್‌ ಮೀಡಿಯಾ ಮೂಲಕ ಜನರಿಗೆ ಇನ್ನಷ್ಟು ಹತ್ತಿರವಾಗಲು ಕಮಲ ಪಾಳೆಯ ಮಾಸ್ಟರ್‌ ಪ್ಲ್ಯಾನ್‌; ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಮೇಲೂ ಕಣ್ಣು

ರಾಜ್ಯ ಬಿಜೆಪಿ ಕೋರ್‌ ಕಮಿಟಿ ಪುನಾರಚನೆ; ನಾಲ್ವರಿಗೆ ಕೊಕ್‌, ಅವರ ಬದಲಿಗೆ ಮೂವರು ಡಿಸಿಎಂಗಳು, ನಿರ್ಮಲಕುಮಾರ್ ಸುರಾನಾಗೆ ಸ್ಥಾನ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ