• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ದೇವನಹಳ್ಳಿ ಏರ್‌ಪೋರ್ಟ್‌ ಬಳಿಯ ಹೆದ್ದಾರಿ ಟೋಲ್‌ನಲ್ಲಿ ಗಾಂಧೀ ಹೇಳಿದ, ಮೋದಿ ಕನಸಿನ ಸ್ವಚ್ಛ ಭಾರತಕ್ಕೆ ಎಳ್ಳುನೀರು

cknewsnow desk by cknewsnow desk
August 1, 2021
in STATE
Reading Time: 1 min read
0
ದೇವನಹಳ್ಳಿ ಏರ್‌ಪೋರ್ಟ್‌ ಬಳಿಯ ಹೆದ್ದಾರಿ ಟೋಲ್‌ನಲ್ಲಿ ಗಾಂಧೀ ಹೇಳಿದ, ಮೋದಿ ಕನಸಿನ ಸ್ವಚ್ಛ ಭಾರತಕ್ಕೆ ಎಳ್ಳುನೀರು
1.1k
VIEWS
FacebookTwitterWhatsuplinkedinEmail

ಕೋಟಿ ಕೋಟಿ ಟೋಲ್ ಸುಲಿಗೆ ಮಾಡಿದರೂ ಪ್ರಯಾಣಿಕರು, ಚಾಲಕರಿಗಿಲ್ಲ ಕನಿಷ್ಠ ಮೂಲಸೌಕರ್ಯ

by GS Bharath Gudibande

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿಯ ದೇವನಹಳ್ಳಿ ಟೋಲ್ ಬಳಿ ಸ್ವಚ್ಛ ಭಾರತ್ ಅಭಿಯಾನದಡಿ ನಿರ್ಮಾಣ ಮಾಡಲಾಗಿರುವ ಶೌಚಾಲಯ ವ್ಯವಸ್ಥೆ ಸಮರ್ಪಕ ನಿರ್ವಹಣೆ ಇಲ್ಲದೆ ಪ್ರಯಾಣಿಕರು, ಚಾಲಕರು ಕಿರಿಕಿರಿ ಅನುಭವಿಸುತ್ತಿದ್ದಾರೆ.

ಹೌದು. ಬೆಂಗಳೂರು ಮತ್ತು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ದೇವನಹಳ್ಳಿ ಟೋಲ್ʼನಲ್ಲಿ ವಾಹನಗಳಿಂದ ಸುಂಕ ವಸೂಲಿ ಮಾಡುತ್ತಿದ್ದಾರಾದರೂ, ಅಲ್ಲಿ ಸರಕಾರದ ನಿಯಮಾವಳಿಗಳ ಪ್ರಕಾರ ವಾಹನ ಚಾಲಕರಿಗೆ ಯಾವುದೇ ಸೌಲಭ್ಯಗಳಿಲ್ಲ. ಮುಖ್ಯವಾಗಿ ಸ್ವಚ್ಛಭಾರತ್ ಅಭಿಯಾನದ ಅಡಿಯಲ್ಲಿ ಶೌಚಾಲಯ ನಿರ್ಮಾಣ ಮಾಡಿದ್ದರೂ ಅದರ ಸಮರ್ಪಕ ನಿರ್ವಹಣೆ ಇಲ್ಲದೆ ಪ್ರಯಾಣಿಕರ ಉಪಯೋಗಕ್ಕೆ ಬಾರದಾಗಿದೆ. ಈ ಬಗ್ಗೆ ಟೋಲ್‌ನ ಅಧಿಕಾರಿಗಳು ತೀವ್ರ ನಿರ್ಲಕ್ಷ್ಯ ತಾಳಿದ್ದಾರೆ.

ಸ್ವಚ್ಛ ಭಾರತ್ ಕಾರ್ಯಕ್ರಮದಡಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ನೈರ್ಮಲ್ಯಕ್ಕೆ ಹೆಚ್ಚು ಒತ್ತು ನೀಡಿವೆ. ಈ ಕಾರ್ಯಕ್ರಮದ ಹಿನ್ನಲೆಯಲ್ಲಿ ಟೋಲ್‌ ಸಂಗ್ರಹ ಕೇಂದ್ರಗಳೂ ಸೇರಿದಂತೆ ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಶೌಚಾಲಯಗಳು ಇರಲೇಬೇಕು ಹಾಗೂ ಅವುಗಳ ನಿರ್ವಹಣೆ ಉತ್ತಮವಾಗಿರಬೇಕು ಎಂಬ ಕಟ್ಟುನಿಟ್ಟಿನ ನಿಯಮ ರೂಪಿಸಿದೆ. ಆದರೆ ದೇವನಹಳ್ಳಿ ವಿಮಾನದ ಬಳಿ ಇರುವ ಟೋಲ್‌ನಲ್ಲಿ ಇವುಗಳ ಸೊಲ್ಲೆ ಇಲ್ಲ. ಬದಲಿಗೆ ಸೂಕ್ತ ಶೌಚಾಲಯ ಇಲ್ಲದೆ ಚಾಲಕರು, ಪ್ರಯಾಣಿಕರು ನೇಚರ್‌ ಕಾಲ್‌ ಬಂದರೆ ಟೋಲ್‌ ಸನಿಹದ ಬಯಲನ್ನೇ ಆಶ್ರಯಿಸಬೇಕಾಗಿದೆ.

ರಾಷ್ಟ್ರೀಯ ಹೆದ್ದಾರಿಲ್ಲಿ ದೇವನಹಳ್ಳಿ ಟೋಲ್ ಮೂಲಕ ಬೆಂಗಳೂರು, ಹೈದರಾಬಾದ್ ಮತ್ತು ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಟೋಲ್ʼನಲ್ಲಿ ಪ್ರತಿದಿನ ಸಾವಿರಾರು ವಾಹನಗಳು ಚಲಿಸುತ್ತವೆ. ಎಲ್ಲಾ ವಾಹನಗಳಿಂದ ಸುಂಕ ವಸೂಲಿ ಮಾಡಲಾಗುತ್ತಿದೆ. ಆದರೆ, ಸರಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸಿ ಪ್ರಯಾಣಿಕರಿಗೆ ಶೌಚಾಲಯ ಸೇರಿ ಯಾವುದೇ ಮೂಲಸೌಕರ್ಯ ಕಲ್ಪಸುವಲ್ಲಿ ಆ ಟೋಲ್‌ ವಿಫಲವಾಗಿದೆ.

ಪ್ರತಿದಿನ ಸಾವಿರಾರು ಚಾಹನಗಳು, ಪ್ರಯಾಣಿಕರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋಗುತ್ತಾರೆ. ಅಲ್ಲದೆ ಏರ್ಪೋರ್ಟ್ ಸಮೀಪದಲ್ಲಿರುವ ಈ ಟೋಲ್ʼನ ಶೌಚಾಲಯದಲ್ಲಿ ನೀರಿಲ್ಲ, ಸ್ವಚ್ಚತೆ ಇಲ್ಲ, ಸರಿಯಾದ ನಿರ್ವಹಣೆ ಇಲ್ಲದೆ ಸಾರ್ವಜನಿಕರಿಂದ ಸಂಗ್ರಹವಾದ ಹಣ ಏನಾಗುತ್ತಿದೆ ಎಂಬ ಆಕ್ರೋಶ ಚಾಲಕರು, ಜನರಿಂದ ವ್ಯಕ್ತವಾಗಿದೆ.

ಟೋಲ್‌ ಶೌಚಾಲಯ ಎಷ್ಟು ಕೊಳಕಾಗಿದೆ ಎಂದರೆ, ಹತ್ತಿರಕ್ಕೆ ಹೋದರೆ ದುರ್ನಾತ ಬಡಿಯುತ್ತದೆ, ಅದರ ಚಿತ್ರಗಳನ್ನು ಪ್ರಕಟಿಸಲಾಗದಷ್ಟು ಗಲೀಜಿನಿಂದ ಕೂಡಿದೆ ಶೌಚಾಲಯ. ಈ ಬಗ್ಗೆ ಅಲ್ಲಿನ ಸಿಬ್ಬಂದಿಯನ್ನು ಪ್ರಶ್ನಿಸಿದರೆ ಹಾರಿಕೆಯ ಉತ್ತರ ನೀಡುತ್ತಾರೆ. ಶೌಚಾಲಯ ಶುಚಿಯಾಗಿಲ್ಲದ ಕಾರಣಕ್ಕೆ ಹಾದು ಹೋಗುವ ಜನ ಅದರ ಪಕ್ಕದ ಮೇಲು ಸೇತುವೆ ಬಳಿ ಮಲಮೂತ್ರಗಳನ್ನು ವಿಸರ್ಜಿಸುವ ದೃಶ್ಯಗಳು ಸಾಮಾನ್ಯವಾಗಿವೆ. ದೇಶದ ಪ್ರಮುಖ ನಗರ, ಭಾರತದ ಸಿಲಿಕಾನ್‌ ವ್ಯಾಲಿ, ಜಗತ್ತಿನ ಇಪ್ಪತ್ತು ಟಾಪ್‌ ನಗರಗಳಲ್ಲಿ ಒಂದಾದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೂಗಳತೆ ದೂರದಲ್ಲಿರುವ ಈ ಶೌಚಾಲಯದ ಸ್ಥಿತಿ ನಮ್ಮ ಆಡಳಿತ ವ್ಯವಸ್ಥೆ ತಲೆತಗ್ಗಿಸುವಂತೆ ಇದೆ.

ಅಲ್ಲದೆ, ದೇಶದ ಎಲ್ಲ ಟೋಲ್‌ಗಳಲ್ಲಿಯೂ ಪ್ರಯಾಣಿಕರು, ಚಾಲಕರ ವಿಶ್ರಾಂತಿಗೆ ಅಗತ್ಯವಾದ ಮೂಲಸೌಕರ್ಯಗಳನ್ನು ಒದಗಿಸುವುದು ಕಡ್ಡಾಯ ಎಂದು ಕೇಂದ್ರದ ಸಾರಿಗೆ ಇಲಾಖೆ ಕಠಿಣ ನಿಯಮಗಳನ್ನೇ ರೂಪಿಸಿದೆ. ಮುಖ್ಯವಾಗಿ ಕುಡಿಯುವ ನೀರು, ಶೌಚಾಲಯದಂಥ ಸೌಲಭ್ಯಗಳನ್ನು ಒದಗಿಸಲೇಬೇಕು ಎಂದು ತಾಕೀತು ಮಾಡಲಾಗಿದೆ.

ಟೋಲ್ ಬಳಿ ಪ್ರಯಾಣಿಕರಿಗಾಗಿ ಶೌಚಾಲಯ ನಿರ್ಮಾಣ ಮಾಡಲಾಗಿದೆ, ಶೌಚಾಲಯ ನಿರ್ವಹಣೆ ಮಾಡುವವರು ಪ್ರತಿದಿನ ತಮ್ಮ ಕೆಲಸ ಮಾಡುತ್ತಿದ್ದಾರೆ. ಆದರೆ ಪ್ರಯಾಣಿಕರು ಸ್ವಚ್ಚತೆ ಕಾಪಾಡದೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಈ ಬಗ್ಗೆ ನಮ್ಮ ಮೇಲಿನ ಅಧಿಕಾರಿಗಳಿಗೆ ಮಾಹಿತಿ ನೀಡುತ್ತೇನೆ.

ಮುರಳಿ ಟೋಲ್ ಇನ್ ಚಾರ್ಜ್ ದೇವನಹಳ್ಳಿ ಟೋಲ್

ರಾಷ್ಟೀಯ ಹೆದ್ದಾರಿ ಮೂಲಕ ಪ್ರಯಾಣ ಮಾಡುವ ಲಕ್ಷಾಂತರ ಜನರಿಗೆ ವಿಶ್ರಾಂತಿ ಪಡೆಯಲು ಹಾಗೂ ಅವಶ್ಯಕವಾಗಿ ಶೌಚಾಲಯ ಉಪಯೋಗಿಸಲು ಸರಿಯಾದ ನಿರ್ವಹಣೆ ಇಲ್ಲ. ಕೋಟಿ ಕೋಟಿ ಹಣ ಸಂಗ್ರಹಿಸಿದರೂ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ವಿಫಲಾಗಿದೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತಿದ್ದೇವೆ.

ಜಿ.ಎನ್.ನವೀನ್ ರಾಜ್ ಕನ್ನಡಿಗ ಜಿಲ್ಲಾ ಯುವ ಘಟಕದ ಅಧ್ಯಕ್ಷ, ಜಯಕರ್ನಾಟಕ, ಚಿಕ್ಕಬಳ್ಳಾಪುರ
Tags: bangalore international airportdevanahalli tollindiakarnatakanarendra modinh7swachh bharattoilet
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಮಾಸ್ಕ್, ದೈಹಿಕ ಅಂತರ ಮರೆತ ಜನ; ಗುಡಿಬಂಡೆಯಲ್ಲಿ ಮತ್ತೆ ರಸ್ತೆಗಿಳಿದ ಅಧಿಕಾರಿಗಳು

ಮಾಸ್ಕ್, ದೈಹಿಕ ಅಂತರ ಮರೆತ ಜನ; ಗುಡಿಬಂಡೆಯಲ್ಲಿ ಮತ್ತೆ ರಸ್ತೆಗಿಳಿದ ಅಧಿಕಾರಿಗಳು

Leave a Reply Cancel reply

Your email address will not be published. Required fields are marked *

Recommended

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ

3 years ago
ಆಸ್ಪತ್ರೆ ಹಾಸಿಗೆಯಲ್ಲಿ ಮಲಗಿರುವ ಗೆಳೆಯ ಜಿ.ಮಾದೇಗೌಡರಿಗೆ ಬರ್ತ್‌ ಡೇ ವಿಶ್‌ ಮಾಡಿ ಪ್ರೀತಿಯ ಪತ್ರ ಬರೆದ ಎಸ್‌.ಎಂ.ಕೃಷ್ಣ

ಆಸ್ಪತ್ರೆ ಹಾಸಿಗೆಯಲ್ಲಿ ಮಲಗಿರುವ ಗೆಳೆಯ ಜಿ.ಮಾದೇಗೌಡರಿಗೆ ಬರ್ತ್‌ ಡೇ ವಿಶ್‌ ಮಾಡಿ ಪ್ರೀತಿಯ ಪತ್ರ ಬರೆದ ಎಸ್‌.ಎಂ.ಕೃಷ್ಣ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ