• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಸಂಪುಟಕ್ಕೆ ಸೇರುವ ತನಕ ಒಂದು ಲೆಕ್ಕ! ಸೇರಿದ ಮೇಲೆ ಇನ್ನೊಂದು ಲೆಕ್ಕ!!

P K Channakrishna by P K Channakrishna
August 6, 2021
in POLITICS, STATE
Reading Time: 1 min read
0
ಡ್ರಗ್ಸ್‌ ತಂದಿಟ್ಟ ಫಜೀತಿ; ಸಿನಿಮಾ ತಾರೆಯರನ್ನು ಎಲೆಕ್ಷನ್‌ ಪ್ರಚಾರದಿಂದ ದೂರವಿಟ್ಟವಾ ಪಕ್ಷಗಳು

CkPhotography ಸಿಕೆಪಿ @ckphotographi

1k
VIEWS
FacebookTwitterWhatsuplinkedinEmail

ಲಾಭದ ಖಾತೆಗಳಿಗೆ ಹಳೆ ಹುಲಿಗಳ ಪಟ್ಟು: ಹಳೆಯ ಖಾತೆಗಳ ಮೇಲೆ ವಲಸಿಗರ ಕಣ್ಣು, ಇಂದು ಖಾತೆ ಹಂಚಿಕೆ ನಿರೀಕ್ಷೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸಂಪುಟದ ಸಚಿವರಿಗೆ ಇಂದು ಖಾತೆಗಳನ್ನು ಹಂಚಿಕೆ ಮಾಡಲಿದ್ದಾರೆ. ಸಂಜೆ ಅಥವಾ ರಾತ್ರಿಯೊಳಗೆ ಖಾತೆ ಹಂಚಿಕೆ ಪಟ್ಟಿ ಹೊರಬೀಳುವ ಸಾಧ್ಯತೆ ಇದೆ.

ವಿಚಿತ್ರವೆಂದರೆ ಸಂಪುಟಕ್ಕೆ ಸೇರಲು ತೀವ್ರ ಒದ್ದಾಟ ನಡೆಸಿ ಕೊನೆಗೂ ಪ್ರಮಾಣ ಸ್ವೀಕಾರ ಮಾಡಿದ್ದ ಸಚಿವರು, ಈಗ ತಮಗೆ ಬೇಕಾದ ಹಾಗೂ ತಮ್ಮ ಹಿತಾಸಕ್ತಿ ಅಡಗಿರುವ ಖಾತೆಗಳನ್ನು ಪಡೆಯಲು ಇನ್ನಿಲ್ಲದ ಪ್ರಭಾವ ಬಳಸುತ್ತಿದ್ದಾರೆ. ಇದನ್ನು ಕಂಡು ಸಿಎಂ ಬೊಮ್ಮಾಯಿ ಅವರಿಗೆ ರೇಜಿಗೆ ಉಂಟಾಗಿದೆ ಎಂದ ಮಾಹಿತಿ ಸಿಕ್ಕಿದೆ.

ಕೆಲ ಸಚಿವರು ತಮಗೆ ಇಂಥದ್ದೇ ನಿರ್ದಿಷ್ಟ ಖಾತೆ ಬೇಕು ಎಂದು ಪಟ್ಟು ಹಾಕಿದರೆ, ಇನ್ನು ಕೆಲವರು ಯಡಿಯೂರಪ್ಪ ಸಂಪುಟದಲ್ಲಿ ನೀಡಲಾಗಿದ್ದ ಖಾತೆಯನ್ನೇ ನೀಡಿ ಎಂದು ಬೊಮ್ಮಾಯಿ ಅವರ ಮೇಲೆ ಒತ್ತಡ ಹೇರುತ್ತಿದ್ದಾರೆ. ಇನ್ನು ಕೆಲವರಂತೂ ಹೈಕಮಾಂಡ್‌ ಬಳಿ, ಅದರಲ್ಲೂ ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಬಳಿ ಲಾಬಿ ಮಾಡುತ್ತಿದ್ದಾರೆಂದು ಗೊತ್ತಾಗಿದೆ.

ʼಸಂಪುಟಕ್ಕೆ ಸೇರುವ ತನಕ ಒಂದು ಲೆಕ್ಕ, ಸಂಪುಟ ಸೇರಿದ ಮೇಲೆ ಇನ್ನೊಂದು ಲೆಕ್ಕʼ ಎನ್ನುವಂತೆ ಪ್ರಭಾವೀ ಹಾಗೂ ಹೆಚ್ಚು ಅನುದಾನವಿರುವ ಖಾತೆಗಳ ಮೇಲೆ ಕಣ್ಣು ಹಾಕಿರುವ ಸಚಿವರು, ಶತಾಯಗತಾಯ ತಮಗೆ ʼಲಾಭʼ ತಂದುಕೊಡುವ ಖಾತೆಗಳನ್ನೇ ಪಡೆಯಲು ಪ್ರಯತ್ನ ಮಾಡುತ್ತಿದ್ದಾರೆ.

ಮುಖ್ಯವಾಗಿ ಬಿಜೆಪಿಯಲ್ಲಿ ಆರಂಭದಿಂದಲೂ ಸಚಿವರಾಗಿದ್ದವರು ಹಾಗೂ ಅನ್ಯ ಪಕ್ಷಗಳಿಂದ ವಲಸೆ ಬಂದು ಸಚಿವರಾದವರು ಮಹತ್ವದ ಖಾತೆಗಳಿಗೆ ಪಟ್ಟು ಹಿಡಿದಿದ್ದು, ಬೊಮ್ಮಾಯಿ ಅವರು ಇವರೆಲ್ಲರಿಗೂ ʼನೋಡೋಣʼ ಎನ್ನುವ ಒಂದು ಪದದ ಭರವಸೆಯನ್ನಷ್ಟೇ ನೀಡಿದ್ದಾರೆ. ಹೀಗಾಗಿ ಪಟ್ಟಿ ಹೊರಬರುವುದನ್ನೇ ಎಲ್ಲರೂ ನೋಡುತ್ತಿದ್ದಾರೆ.

ಇದೇ ವೇಳೆ ಖಾತೆಗಳ ಹಂಚಿಕೆ ಬಗ್ಗೆ ಹೈಕಮಾಂಡ್‌ ಕೆಲ ನಿರ್ದಿಷ್ಟ ಸೂಚನೆಗಳನ್ನು ಬೊಮ್ಮಾಯಿ ಅವರಿಗೆ ನೀಡಿದೆ. ಆ ಮಾರ್ಗಸೂಚಿ ಪ್ರಕಾರವೇ ಸಿಎಂ ಖಾತೆಗಳನ್ನು ಹಂಚಿಕೆ ಮಾಡುವುದು ಖಚಿತ. ಹಿಂದಿನ ಸಂಪುಟದಲ್ಲಿ ಪ್ರಮುಖ ಖಾತೆಗಳನ್ನು ಹೊಂದಿದ್ದ ಕೆಲ ಸಚಿವರ ಮೇಲೆ ಬಂದಿದ್ದ ಆರೋಪಗಳು, ನ್ಯಾಯಾಲಯಗಳಲ್ಲಿ ನಡೆದಿದ್ದ ವಿಚಾರಣೆ ಇತ್ಯಾದಿ ಗಮನದಲ್ಲಿಟ್ಟುಕೊಂಡು ಖಾತೆಗಳನ್ನು ಹಂಚುವಂತೆ ವರಿಷ್ಠರು ಸೂಚಿಸಿದ್ದಾರೆ.

ಸಂಘ ಪರಿವಾರದ ನಾಯಕರು ಕೂಡ ಖಾತೆ ಹಂಚಿಕೆಯ ಬಗ್ಗೆ ಕೆಲ ಸೂಚನೆಗಳನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸಚಿವರ ಒತ್ತಡಕ್ಕೆ ಮಣೆ ಹಾಕುವುದು ಕಡಿಮೆ. ಇದರ ಜತೆಗೆ, ಕೆಲ ಸಚಿವರಂತೂ ಯಡಿಯೂರಪ್ಪ ಅವರ ಮೂಲಕ ಸಿಎಂ ಮೇಲೆ ಒತ್ತಡ ಹಾಕಿಸುತ್ತಿದ್ದಾರೆ ಎಂಬ ಮಾಹಿತಿ ಇದೆ.

ಹೈಪ್ರೊಫೈಲ್‌ ಖಾತೆಗಳು, ಕೆಲ ನೀತಿ ಆಧಾರಿತ ಖಾತೆಗಳನ್ನು ಸಂಘ ಪರಿವಾರದ ಹಿನ್ನೆಲೆಯುಳ್ಳ ಬಿಜೆಪಿ ಮೂಲ ನಿವಾಸಿಗಳಿಗೇ ಕೊಡಬೇಕು ಎನ್ನುವ ಚರ್ಚೆ ನಡೆದಿದೆ.

ಹೈಪ್ರೊಫೈಲ್‌ ಖಾತೆಗಳು

ಗೃಹ, ಹಣಕಾಸು, ಜಲಸಂಪನ್ಮೂಲ, ಲೋಕೋಪಯೋಗಿ, ಕೃಷಿ, ಸಹಕಾರ, ಗ್ರಾಮೀಣಾಭಿವೃದ್ಧಿ, ಇಂಧನ, ಬೃಹತ್‌ ಕೈಗಾರಿಕೆ, ನಗರಾಭಿವೃದ್ಧಿಇಲಾಖೆಗಳೆಲ್ಲ ಮೂಲ ಬಿಜೆಪಿಗರ ಪಾಲಾಗಲಿವೆ. ಅಲ್ಲದೆ, ಸಂಘ ಪರಿವಾರದ ಆಸಕ್ತಿ ಇರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ, ಉನ್ನತ ಶಿಕ್ಷಣ, ಸಮಾಜ ಕಲ್ಯಾಣ, ಮುಜರಾಯಿ ಖಾತೆಗಳು ಕೂಡ ಬಿಜೆಪಿ ಮೂಲ ನಿವಾಸಿಗಳಿಗೇ ಕೊಡುವ ಸಾಧ್ಯತೆ ಇದೆ.

ಯಡಿಯೂರಪ್ಪ ಸಂಪುಟದಲ್ಲಿ ಎಸ್‌.ಟಿ.ಸೋಮಶೇಖರ್‌ ಅವರಿಗೆ ಸಹಕಾರ ಖಾತೆ ನೀಡಲಾಗಿತ್ತು. ಈ ಬಾರಿ ಅವರಿಗೆ ಅದೇ ಖಾತೆ ಸಿಗುವುದು ಅನುಮಾನ. ಕೋವಿಡ್‌ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ವೈದ್ಯಶಿಕ್ಷಣ ಖಾತೆಯನ್ನು ಮೂಲ ಬಿಜೆಪಿಗರಿಗೇ ನೀಡುವಂತೆ ವರಿಷ್ಠರು ಸಿಎಂಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಹಿಂದಿನ ಸಂಪುಟದಲ್ಲಿ ಈ ಖಾತೆಯನ್ನು ಡಾ.ಕೆ.ಸುಧಾಕರ್‌ ಅವರಿಗೆ ನೀಡಲಾಗಿತ್ತು.

ಉಳಿದಂತೆ, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಉನ್ನತ ಶಿಕ್ಷಣ ಖಾತೆಗಳು ಬಿಜೆಪಿ ಮೂಲದವರಿಗೆ ಕೊಡುವ ಉದ್ದೇಶ ಸಿಎಂ ಅವರಿಗಿದೆ ಎನ್ನಲಾಗಿದೆ.

ಅಬಕಾರಿ, ಯುವಜನ ಸಬಲೀಕರಣ, ಸಾರ್ವಜನಕ ಸಂಪರ್ಕ, ವಕ್ಫ್‌, ಹಿಂದುಳಿದ ವರ್ಗಗಳ ಕಲ್ಯಾಣ, ಕಾರ್ಮಿಕ, ಜವಳಿ, ರೇಷ್ಮೆ, ತೋಟಗಾರಿಕೆಯಂಥ ಖಾತೆಗಳನ್ನು ವಲಸಿಗರಿಗೆ ನೀಡಲು ಸಿಎಂ ಉದ್ದೇಶಿಸಿದ್ದಾರೆಂಬ ಮಾಹಿತಿ ಸಿಕ್ಕಿದೆ. ಈ ಮಧ್ಯೆ ಪ್ರಭಾವಿ ಖಾತೆಗಳನ್ನು ಪಡೆಯಲು ವಲಸಿಗ ಸಚಿವರು ನಿನ್ನೆಯಿಂದಲೂ ಮುಖ್ಯಮಂತ್ರಿ ಸುತ್ತಲೇ ಗಿರಕಿ ಹೊಡೆಯುತ್ತಿದ್ದಾರೆ.

ಹಳೆಯ ಖಾತೆಗಳ ಮೇಲೆ ವಲಸಿಗರ ಕಣ್ಣು

ಯಡಿಯೂರಪ್ಪ ಸಂಪುಟದಲ್ಲಿ ಎಸ್‌.ಟಿ.ಸೋಮಶೇಖರ್‌-ಸಹಕಾರ, ಭೈರತಿ ಬಸವರಾಜ್‌-ನಗರಾಭಿವೃದ್ಧಿ (ಬೆಂಗಳೂರು) ಹೊರತುಪಡಿಸಿ, ಡಾ.ಕೆ.ಸುಧಾಕರ್-ಆರೋಗ್ಯ ಮತ್ತು ವೈದ್ಯ ಶಿಕ್ಷಣ, ಬಿ.ಸಿ.ಪಾಟೀಲ್-ಕೃಷಿ, ಎಂಟಿಬಿ ನಾಗರಾಜ್‌-ಪೌರಾಡಳಿತ, ಶಿವರಾಮ್‌ ಹೆಬ್ಬಾರ್-ಕಾರ್ಮಿಕ, ರಮೇಶ್‌ ಜಾರಕಿಹೊಳಿ-ಜಲಸಂಪನ್ಮೂಲ (ಇವರು ರಾಜೀನಾಮೆ ನೀಡಿದ್ದರು.), ಆನಂದ ಸಿಂಗ್-ಪ್ರವಾಸೋದ್ಯಮ, ಕೆ.ಗೋಪಾಲಯ್ಯ-ಅಬಕಾರಿ, ನಾರಾಯಣ ಗೌಡ-ಯುವಜನ ಸಬಲೀಕರಣ ಖಾತೆಗಳನ್ನು ಹೊಂದಿದ್ದರು. ಈ ಸಂಪುಟದಲ್ಲಿಯೂ ಮುಖ್ಯವಾಗಿ ಸೋಮಶೇಖರ್‌, ಭೈರತಿ ಬಸವರಾಜ್‌, ಡಾ.ಸುಧಾಕರ್‌, ಬಿ.ಸಿ.ಪಾಟೀಲ್‌ ಅದೇ ಖಾತೆಗಳನ್ನು ಪಡೆಯಲು ಪ್ರಯತ್ನ ಮಾಡುತ್ತಿದ್ದಾರೆನ್ನಲಾಗಿದೆ.

ಆದರೆ, ಮುಖ್ಯಮಂತ್ರಿ ಬೊಮ್ಮಾಯಿ ಅವರು ಹಿಂದಿನ ಸಂಪುಟದಲ್ಲಿ ಇವರ ಕಾರ್ಯ ನಿರ್ವಹಣೆ ಹಾಗೂ ಇವರಲ್ಲಿ ಕೆಲವರ ಕಾರ್ಯ ನಿರ್ವಹಣೆ ಮೇಲೆ ಬಂದಿದ್ದ ಆರೋಪಗಳನ್ನು ಗಮನದಲ್ಲಿ ಇಟ್ಟುಕೊಂಡು ಖಾತೆ ಹಂಚಿಕೆ ಮಾಡಲಿದ್ದಾರೆ ಎನ್ನಲಾಗಿದೆ.

ಬೆಂಗಳೂರು ಅಭಿವೃದ್ಧಿ ಬೇಕೆಂದ ಅಶೋಕ್

ಹಿಂದೆ ಕಂದಾಯ, ಅದಕ್ಕೂ ಹಿಂದೆ ಗೃಹ ಖಾತೆಗಳನ್ನು ನಿರ್ವಹಿಸಿದ್ದ ಹಿರಿಯ ಸಚಿವ ಆರ್.‌ಅಶೋಕ್‌, ಈ ಬಾರಿ ಬೆಂಗಳೂರು ನಗರಾಭಿವೃದ್ಧಿ ಖಾತೆ ಬೇಕೆಂದು ಪಟ್ಟು ಹಿಡಿದ್ದಾರೆ. ಆದರೆ, ಸಂಘ ಪರಿವಾರ ಈ ಖಾತೆಯನ್ನು ಡಾ.ಅಶ್ವತ್ಥನಾರಾಯಣ ಅವರಿಗೆ ನೀಡಿ ಎಂದು ಮುಖ್ಯಮಂತ್ರಿಗೆ ಸಲಹೆ ಮಾಡಿದೆ ಎನ್ನಲಾಗಿದೆ. ಆದರೆ, ಯಡಿಯೂರಪ್ಪ ಅವರೂ ಅಶೋಕ್‌ಗೆ ಬೆಂಗಳೂರು ನಗರಾಭಿವೃದ್ಧಿ ಕೊಡುವಂತೆ ಒತ್ತಡ ಹೇರಿದ್ದಾರೆನ್ನಲಾಗಿದೆ. ಆದರೆ, ಅಂತಿಮವಾಗಿ ಬೊಮ್ಮಾಯಿ ಅವರು ಸಂಘ ಪರಿವಾರ ಅಥವಾ ಯಡಿಯೂರಪ್ಪ ಇಬ್ಬರಲ್ಲಿ ಯಾರ ಮಾತು ಕೇಳುತ್ತಾರೆ ಎನ್ನುವದನ್ನು ಕಾದು ನೋಡಬೇಕಿದೆ.

ಉಳಿದಂತೆ ಈಶ್ವರಪ್ಪ ಅವರು ಗ್ರಾಮೀಣಾಭಿವೃದ್ಧಿ ಕೇಳಿದ್ದು, ಅದು ತಪ್ಪಿದರೆ ಇಂಧನ ಕೊಡಿ, ಅದೂ ಬಿಟ್ಟರೆ ಜಲಸಂಪನ್ಮೂಲ ಕೊಡಿ ಎಂದು ಕೇಳಿದ್ದಾರೆಂದು ಗೊತ್ತಾಗಿದೆ.

ಡಾ.ಅಶ್ವತ್ಥನಾರಾಯಣ ಅವರು ಖಾತೆ ಕ್ಯಾತೆಯಿಂದ ದೂರ ಉಳಿದಿದ್ದಾರೆ. ನಿರ್ದಿಷ್ಟ ಖಾತೆ ಬೇಕೆಂದು ಅವರು ಒತ್ತಡ ಹಾಕಿಲ್ಲ. ಆದರೆ, ಸಂಘ ಪರಿವಾರದ ಹಿರಿಯರು ಗೃಹ, ಬೆಂಗಳೂರು ನಗರಾಭಿವೃದ್ಧಿ, ಇಂಧನ ಸೇರಿ ಹೈಪ್ರೊಫೈಲ್‌ ಖಾತೆಗಳಲ್ಲಿ ಒಂದನ್ನು ಕೊಡಿ ಎಂದು ಸಿಎಂಗೆ ಸೂಚಿಸಿದ್ದಾರೆ ಎನ್ನಲಾಗಿದೆ.

Tags: basavaraj bommaibjpcabinetkarnatakanew ministersportfolio distridistribution
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬೆರಗು ಮೂಡಿಸುವ ಗೀಜಗನ ಕುಶಲತೆ & ಎಂಜಿನಿಯರಿಂಗ್

ಬೆರಗು ಮೂಡಿಸುವ ಗೀಜಗನ ಕುಶಲತೆ & ಎಂಜಿನಿಯರಿಂಗ್

Leave a Reply Cancel reply

Your email address will not be published. Required fields are marked *

Recommended

ಬೆಂಗಳೂರಿನ 31 ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್

ಬೆಂಗಳೂರಿನ 31 ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್

4 years ago
ಸಚಿವ ಸುರೇಶ್ ಕುಮಾರ್ ಆಶಯದಂತೆ ಚೌಕಾಬಾರ ಬಿಟ್ಟ ಸರಕಾರಿ ಕಾರು ಚಾಲಕರು

ಸಚಿವ ಸುರೇಶ್ ಕುಮಾರ್ ಆಶಯದಂತೆ ಚೌಕಾಬಾರ ಬಿಟ್ಟ ಸರಕಾರಿ ಕಾರು ಚಾಲಕರು

6 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ