• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

23ರಿಂದಲೇ ಪದವಿ ವಿದ್ಯಾರ್ಥಿಗಳ ದಾಖಲಾತಿ

cknewsnow desk by cknewsnow desk
August 9, 2021
in NEWS IN USE, STATE
Reading Time: 1 min read
0
23ರಿಂದಲೇ ಪದವಿ ವಿದ್ಯಾರ್ಥಿಗಳ ದಾಖಲಾತಿ
949
VIEWS
FacebookTwitterWhatsuplinkedinEmail

ರಾಷ್ಟ್ರೀಯ ಶಿಕ್ಷಣ ನೀತಿ: ಪಠ್ಯ ರಚನೆಗೆ ಕುಲಪತಿಗಳೊಂದಿಗೆ ಚರ್ಚೆ; ಕನ್ನಡಕ್ಕೆ ಧಕ್ಕೆ ಇಲ್ಲ & ಯಾವುದೇ ಅನುಮಾನ ಬೇಡ ಎಂದ ಡಾ.ಸಿ.ಎನ್.‌ಅಶ್ವತ್ಥನಾರಾಯಣ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳ ಜತೆ ಸೋಮವಾರ ಮಹತ್ವದ ಮಾತುಕತೆ ನಡೆಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು, ಈ ತಿಂಗಳ 23ರಿಂದಲೇ ಪದವಿ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಘೋಷಿಸಿದರು.

ಉಪ ಕುಲಪತಿಗಳ ಸಭೆ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ಹೊಸದಾಗಿ ರೂಪಿಸಲಾಗಿರುವ ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಮೂಲಕ ದಾಖಲಾತಿ ಪ್ರಕ್ರಿಯೆ ಆರಂಭ ಮಾಡಲಾಗುವುದು. ಅದರ ಮಾದರಿಯನ್ನೂ ಉದ್ಘಾಟಿಸಲಾಗುವುದು ಎಂದು ಅವರು ತಿಳಿಸಿದರು

ಹತ್ತು ವರ್ಷಗಳಲ್ಲೇ ಜಾರಿ

ಶಿಕ್ಷಣ ನೀತಿ ಜಾರಿಗೆ ಕೇಂದ್ರ ಸರಕಾರ 15 ವರ್ಷ ಕಾಲಾವಕಾಶ ನೀಡಿದ್ದು, ರಾಜ್ಯ ಸರಕಾರ ಹತ್ತೇ ವರ್ಷಗಳಲ್ಲಿ ಅನುಷ್ಠಾನಕ್ಕೆ ತರಲು ನಿರ್ಧರಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿ ಮಾಡುವುದಕ್ಕೆ ಅಗಸ್ಟ್‌ 7ರಂದೇ ಆದೇಶ ಹೊರಡಿಸಲಾಗಿದ್ದು, ಅದರ ಮಾರ್ಗಸೂಚಿಯನ್ನೂ ಪ್ರಕಟಿಸಲಾಗಿದೆ ಎಂದರು ಅವರು.

ಈ ಶಿಕ್ಷಣ ನೀತಿಯಲ್ಲಿ ಮಾತೃಭಾಷೆಗೆ ಹೆಚ್ಚು ಒತ್ತು ನೀಡಲಾಗಿದೆ. ಮೊದಲಿಗಿಂತ ಹೆಚ್ಚು ವಿಸ್ತೃತವಾಗಿ ಕನ್ನಡವನ್ನು ಕಲಿಯುವ ಅವಕಾಶ ಕಲ್ಪಿಸಲಾಗಿದೆ. ಯಾವುದೇ ಕಾರಣಕ್ಕೂ ಕನ್ನಡವನ್ನು ಉಪೇಕ್ಷೆ ಮಾಡಿಲ್ಲ. ಎರಡು ವರ್ಷಗಳ ಕನ್ನಡ ಕಲಿಕೆ ಇತ್ತು. ಹಾಗೆ ನೋಡಿದರೆ ಮೊದಲು ಕಡ್ಡಾಯ ಇರಲಿಲ್ಲ. ಈಗ ಕಡ್ಡಾಯ ಮಾಡಲಾಗಿದೆ ಎಂದು ಅವರು ಹೇಳಿದರು.

2021-22ರಿಂದಲೇ ಶಿಕ್ಷಣ ನೀತಿ ಜಾರಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಗಳ‌ ವಿಷಯವಾರು ಮಾದರಿ ಪಠ್ಯಕ್ರಮಗಳನ್ನು ಸಿದ್ಧಪಡಿಸಲು ವಿಷಯ ತಜ್ಞರ 32 ಸಮಿತಿಗಳನ್ನು ರಚಿಸಲಾಗಿದೆ. ಈ ಪ್ರಕಾರವಾಗಿ 3 ವರ್ಷದ ಪದವಿ ಪ್ಲಸ್‌ 2 ವರ್ಷದ ಸ್ನಾತಕೋತ್ತರ ಅಥವಾ 4 ವರ್ಷದ ಆನರ್ಸ್‌ ಪದವಿ ಪ್ಲಸ್‌ 1 ವರ್ಷದ ಸ್ನಾತಕೋತ್ತರ ಪದವಿ ಅಧ್ಯಯನದ ಬಗ್ಗೆ ವಿಷಯವಾರು ಮಾದರಿ ಪಠ್ಯ ತಯಾರಿಸುವಂತೆ ಆಯಾ ಸಮಿತಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

ಈ ಎಲ್ಲ ವಿಷಯವಾರು ಸಮಿತಿಗಳು ಸಲ್ಲಿಸುವ ವರದಿಗಳ ಆಧಾರದ ಆಯಾ ವಿಷಯದ ಪಠ್ಯ ರಚನೆಯಾಗಲಿದ್ದು, ಇದೇ ಅಗಸ್ಟ್‌ 31ರೊಳಗೆ ಪಠ್ಯ ಸಿದ್ಧಪಡಿಸುವಂತೆ ಸೂಚಿಸಲಾಗಿದ್ದು, ಈ ಬಗ್ಗೆ ಉಪ ಕುಲಪತಿಗಳ ಜತೆ ವಿಷದವಾಗಿ ಚರ್ಚೆ ನಡೆಸಿಲಾಗಿದೆ ಎಂದು ಅವರು ಮಾಹಿತಿ ನೀಡಿದರು.

The #NEP2020 ensures all-round development of students and prepares them to compete globally.

Kannada will be compulsory language to learn for two years. Students can opt for an additional language to learn.@CMofKarnataka @KarnatakaVarthe @BJP4Karnataka

3/3 pic.twitter.com/3e2MFhEQEH

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) August 9, 2021

ಅನುಮಾನ, ಗೊಂದಲ ಬೇಡ

ಶಿಕ್ಷಣ ನೀತಿಯ ಬಗ್ಗೆ ಕೆಲವರು ಕೆಲ ಅನುಮಾನ, ಪ್ರಶ್ನೆಗಳನ್ನು ಎತ್ತುತ್ತಿದ್ದು, ಎಲ್ಲಕ್ಕೂ ಈಗಾಗಲೇ ಉತ್ತರ ನೀಡಲಾಗಿದೆ. ಮತ್ತೆ ಬೇಕಿದ್ದರೂ ಸರಕಾರ ಉತ್ತರ ನೀಡಲು ಸಿದ್ಧವಿದೆ ಎಂದ ಅವರು ಪ್ರಧಾನಿ ನರೇಂದ್ರ ಮೋದಿ ಅವರು 38 ವರ್ಷಗಳ ನಂತರ ನೂತನ ಶಿಕ್ಷಣ ನೀತಿಯನ್ನು ಜಾರಿಗೆ ತರುವ ಸಂಕಲ್ಪ ಮಾಡಿದರು. ಈ ನೀತಿಯನ್ನು ರೂಪಿಸುವ ಮುನ್ನ ಎಲ್ಲ ವಿವಿಗಳ ಉಪ ಕುಲಪತಿಗಳು, ವಿಷಯವಾರು ತಜ್ಞರು, ವಿಜ್ಞಾನಿಗಳು, ತಂತ್ರಜ್ಞರು, ಭಾಷಾತಜ್ಞರು ಸೇರಿ ಎಲ್ಲ ಕ್ಷೇತ್ರಗಳ ಮುಂಚೂಣಿ ವ್ಯಕ್ತಿಗಳ ಅಭಿಪ್ರಾಯ ಪಡೆಯಲಾಗಿದೆ. ಐದು ವರ್ಷಗಳ ಕಾಲ ಅಧ್ಯಯನ ನಡೆಸಿದ ಕರಡು ನಂತರ ಕೇಂದ್ರಕ್ಕೆ ಅಂತಿಮ ವರದಿ ಸಲ್ಲಿಸಲಾಯಿತು ಎಂದರು.

ಕೇಂದ್ರವು ಶಿಕ್ಷಣ ನೀತಿಯನ್ನು ಪ್ರಕಟಿಸಿದ ಕೂಡಲೇ ರಾಜ್ಯ ಸರಕಾರ ನೀತಿಯನ್ನು ಅಂಗೀಕರಿಸಿತಲ್ಲದೆ, ಸಂಪುಟದ ಒಪ್ಪಿಗೆ ಸಿಕ್ಕ ಕೂಡಲೇ ಸದನದ ಒಳಗೆ ಹೊರಗೆ ವ್ಯಾಪಕ ಚರ್ಚೆ ನಡೆಸಲಾಯಿತು. ವಿದ್ಯಾರ್ಥಿಗಳು ತಮಗಿಷ್ಟವಾದ ಕೋರ್ಸ್ ಗಳನ್ನು ಮುಕ್ತವಾಗಿ ಆಯ್ಕೆ ಮಾಡಿಕೊಳ್ಳುವ ಬಹುಆಯ್ಕೆಯ ಮತ್ತು ಬಹುಶಿಸ್ತೀಯ ವ್ಯವಸ್ಥೆ ಶಿಕ್ಷಣ ನೀತಿಯಲ್ಲಿದೆ. ಜತೆಗೆ, 40% ಡಿಜಿಟಲ್‌ ಕಲಿಕೆಗೂ ಅವಕಾಶ ಮಾಡಿಕೊಡಲಾಗುತ್ತದೆ. ಡಿಜಿಟಲ್‌ ಕಲಿಕೆ ಅನ್ನುವುದು ಕಡ್ಡಾಯವಲ್ಲ. ಅಗತ್ಯ ಇದ್ದವರು ಮಾತ್ರ ಪಡೆಯಬಹುದು. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಅವರು ಅವರು ವಿವರಿಸಿದರು.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಎತ್ತಿರುವ ಎಲ್ಲ ಪ್ರಶ್ನೆಗಳಿಗೆ ಈಗಾಗಲೇ ಉತ್ತರ ನೀಡಿದ್ದೇವೆ. ಅಗತ್ಯಬಿದ್ದರೆ, ಮತ್ತಷ್ಟು ವಿವರ ನೀಡಲಾಗುವುದು. ಇದರಲ್ಲಿ ಮುಚ್ಚುಮರೆ ಏನಿಲ್ಲ. ಅತ್ಯಂತ ಪಾರದರ್ಶಕವಾಗಿ, ರಾಷ್ಟ್ರದ ಹಿತದೃಷ್ಟಿಯಿಂದ ಜಾರಿಗೆ ಬರುತ್ತಿರುವ ಶಿಕ್ಷಣ ನೀತಿ. ಮುಖ್ಯವಾಗಿ ಕನ್ನಡದ ಕಲಿಕೆಯ ಬಗ್ಗೆ ಸಿದ್ದರಾಮಯ್ಯ ಹೇಳಿರುವ ಮಾತು ಸತ್ಯಕ್ಕೆ ದೂರವಾದದ್ದು  ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು

ಅನುದಾನಕ್ಕೆ ಬೇಡಿಕೆ ಇಡುತ್ತೇವೆ

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಆಗುತ್ತಿರುವ ಹಿನ್ನೆಲೆಯಲ್ಲಿ ಇನ್ನಷ್ಟು ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಬೇಡಿಕೆ ಇಡುತ್ತೇವೆ. ಉನ್ನತ ಶಿಕ್ಷಣ ಸುಧಾರಣೆಗೆ ಕನಿಷ್ಠ 3000 ಕೋಟಿಯಾದರೂ ಬೇಕು. ವರ್ಷಕ್ಕೊಂದು ಸಾವಿರ ಕೋಟಿ ಕೊಟ್ಟರೆ ಒಳ್ಳೆಯದು. ಈ ಬಗ್ಗೆ ಈಗಾಗಲೇ ಮನವಿ ಸಲ್ಲಿಸಲಾಗಿದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಉನ್ನತ ಶಿಕ್ಷಣ ಪರಿಷತ್‌ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್‌, ವಿವಿಧ ವಿವಿಗಳ ಕುಲಪತಿಗಳು ಸಭೆಯಲ್ಲಿ ಹಾಜರಿದ್ದರು.

Tags: degree admissiondr cn ashwathnarayankarnatakanational education policynepvice chancellors meet
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

Leave a Reply Cancel reply

Your email address will not be published. Required fields are marked *

Recommended

At least, ಇವತ್ತಾದರೂ ಪಣ ತೊಡೋಣ

At least, ಇವತ್ತಾದರೂ ಪಣ ತೊಡೋಣ

5 years ago
ಪಕ್ಷಾಂತರಕ್ಕೆ ಬ್ರೇಕ್‌ ಹಾಕಿದ ಪಂಚರಾಜ್ಯ ಫಲಿತಾಂಶ

ಐಟಿ ದಾಳಿ; ಅಡಕತ್ತರಿಯಲ್ಲಿ ಆಪರೇಷನ್‌ ಹಸ್ತ

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ