• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಡಿಪ್ಲೊಮಾಗೆ 8 ಹೊಸ ಕೋರ್ಸ್:‌ ಗೌರಿಬಿದನೂರು ಸೇರಿ 10 ಪಾಲಿಟೆಕ್ನಿಕ್‌ಗಳಲ್ಲಿ ಈ ವರ್ಷದಿಂದಲೇ ಬೋಧನೆ

cknewsnow desk by cknewsnow desk
August 12, 2021
in NEWS IN USE, STATE
Reading Time: 1 min read
0
ಡಿಪ್ಲೊಮಾಗೆ 8 ಹೊಸ ಕೋರ್ಸ್:‌ ಗೌರಿಬಿದನೂರು ಸೇರಿ 10 ಪಾಲಿಟೆಕ್ನಿಕ್‌ಗಳಲ್ಲಿ ಈ ವರ್ಷದಿಂದಲೇ ಬೋಧನೆ
1k
VIEWS
FacebookTwitterWhatsuplinkedinEmail

ತಾಂತ್ರಿಕ ಪಠ್ಯಕ್ರಮದಲ್ಲಿ ಜಾಗತಿಕ ದೃಷ್ಟಿಕೋನ ಎಂದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು: ಉದ್ಯೋಗ ಮಾರುಕಟ್ಟೆ ಹಾಗೂ ಕೈಗಾರಿಕೆಗಳ ಬೇಡಿಕೆಗಳಿಗೆ ತಕ್ಕಂತೆ ಮಾನವ ಸಂಪನ್ಮೂಲವನ್ನು ಒದಗಿಸುವ ಉದ್ದೇಶದಿಂದ ಎಂಟು ಹೊಸ ಡಿಪ್ಲೊಮಾ ಕೋರ್ಸುಗಳಿಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಚಾಲನೆ ನೀಡಿದರು.

ಈ ಎಂಟು ಹೊಸ ಕೋರ್ಸುಗಳು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಸೇರಿ ಹತ್ತು ಪಾಲಿಟೆಕ್ನಿಕ್‌ ಕಾಲೇಜುಗಳಲ್ಲಿ ಬೋಧನೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

ವಿಧಾನಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ನೂತನ ಕೋರ್ಸುಗಳಿಗೆ ಹಸಿರು ನಿಶಾನೆ ತೋರಿದ ನಂತರ ಮಾತನಾಡಿದ ಅವರು, “ರಾಜ್ಯದಲ್ಲಿ ಹೆಚ್ಚೆಚ್ಚು ಉದ್ಯೋಗಾವಕಾಶ ಸೃಷ್ಟಿಸುವುದು, ಕೈಗಾರಿಕೆಗಳಿಗೆ ಉತ್ಕೃಷ್ಟ ಮಾನವ ಸಂಪನ್ಮೂಲ ಒದಗಿಸುವುದೇ ಹೊಸ ಕೋರ್ಸುಗಳ ಗುರಿ” ಎಂದರು.

ಡಿಪ್ಲೊಮಾದಲ್ಲಿ ಸದ್ಯ 33 ಕೋರ್ಸ್ʼಗಳು ಇವೆ. ಇವುಗಳಲ್ಲಿ ಹಳೆಯ, ಅಪ್ರಸ್ತುತ ಕೋರ್ಸುಗಳನ್ನು ಕೈಬಿಡಲಾಗಿದೆ. ಈಗಾಗಲೇ ಹೊಸ ಪಠ್ಯವನ್ನು ಅಳವಡಿಸಲಾಗಿದೆ. ಈಗ 21ನೇ ಶತಮಾನದ ಬೇಡಿಕೆ ಪೂರೈಸುವ ನಿಟ್ಟಿನಲ್ಲಿ ಎಂಟು ಹೊಸ ಕೋರ್ಸ್ʼಗಳನ್ನೂ ಈ ವರ್ಷದಿಂದಲೇ ಆರಂಭಿಸಲಾಗುತ್ತಿದೆ ಎಂದು ಹೇಳಿದರು.

Introduced 8 new courses of global standards in Polytechnic Diploma along with revamped C20 curriculum, focus on employability of students and aligning with NSQF (National Skill Qualification Framework).@CMofKarnataka @MSDESkillIndia @Skill_Karnataka @collegiate_of

1/2 pic.twitter.com/TmfoU99dbS

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) August 12, 2021

ಹೊಸ ಕೊರ್ಸ್ʼಗಳು ಯಾವುವು?

  • ಆಲ್ಟರ್ನೇಟಿವ್ ಎನರ್ಜಿ ಟೆಕ್ನಾಲಜೀಸ್‌ (Alternative Energy Technologies)
  • ಸೈಬರ್ ಭದ್ರತೆ (Cyber security)
  • ಆಹಾರ ಸಂಸ್ಕರಣೆ ಮತ್ತು ಸಂರಕ್ಷಣೆ (Food Processing and Preservation)
  • ಪ್ರವಾಸೋದ್ಯಮ (Travel & Tourism )
  • ಕ್ಲೌಡ್ ಕಂಪ್ಯೂಟಿಂಗ್ (Cloud Computing)
  • ಆಟೋಮೇಷನ್ ಮತ್ತು ರೋಬೋಟಿಕ್ಸ್ (Automation and Robotics)
  • ನಿರ್ದೇಶನ ಮತ್ತು ಚಿತ್ರಕಥೆ ರಚನೆ, ಟೀವಿ ಕಾರ್ಯಕ್ರಮಗಳ ನಿರ್ಮಾಣ (Direction screen play writing and TV production)
  • ಸೈಬರ್ ಭೌತಿಕ ವ್ಯವಸ್ಥೆ ಮತ್ತು ಭದ್ರತೆ (Cyber physical system and security)

ಈ ಕೋರ್ಸುಗಳನ್ನು ಹೊಸದಾಗಿ ಆರಂಭ ಮಾಡಲಾಗುತ್ತಿದೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

ಈ ನೂತನ ಕೋರ್ಸುಗಳನ್ನು ಗೌರಿಬಿದನೂರು, ಶಿರಾಳಕೊಪ್ಪ, ಕೂಡ್ಲಿಗಿ, ರಬಕವಿ ಬನಹಟ್ಟಿ, ಔರಾದ್ ಹಾಗೂ ಬೆಂಗಳೂರಿನ ಎಸ್.ಜೆ.ಪಾಲಿಟೆಕ್ನಿಕ್, ಚನ್ನಗಿರಿ, ಕೊಪ್ಪ, ಹೊನ್ನಾಳಿ, ಕಾಪು ಕಾಲೇಜುಗಳಲ್ಲಿ ಆರಂಭಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ನೂತನ ಕೋರ್ಸುಗಳನ್ನು ತಾಂತ್ರಿಕ ಶಿಕ್ಷಣ ಇಲಾಖೆಯ ಹೊಸ  ಪಠ್ಯಕ್ರಮದ ಪ್ರಕಾರ ಬೋಧನೆ ಮಾಡಲಾಗುವುದು ಹಾಗೂ ಈ ಪಠ್ಯಕ್ರಮವು ರಾಷ್ಟ್ರೀಯ ಕೌಶಲ್ಯ ಅರ್ಹತಾ ಚೌಕಟ್ಟು ಪ್ರಕಾರ ಸಿದ್ಧಪಡಿಸಲಾಗಿದೆ. ಜಾಗತಿಕ ಮಟ್ಟದಲ್ಲಿ ಉದ್ಯೋಗ ಪಡೆಯಲು ಅನುಕೂಲವಾಗಲಿದೆ. ಡಿಪ್ಲೋಮಾ ಪಠ್ಯಕ್ರಮಗಳನ್ನು ಉದ್ಯಮಿಗಳು, ಶಿಕ್ಷಣ ತಜ್ಞರು ಮತ್ತು ಹಳೆಯ ವಿದ್ಯಾರ್ಥಿಗಳೊಂದಿಗೆ ವ್ಯಾಪಕ ಸಮಾಲೋಚನೆಯ ನಂತರ ಅಭಿವೃದ್ಧಿಗೊಳಿಸಲಾಗಿದೆ ಎಂದು ಅವರು ತಿಳಿಸಿದರು.

ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ನೂತನ ಕೋರ್ಸುಗಳಿಗೆ ನೇರ ಪ್ರವೇಶಾತಿ ಸಿಗಲಿದ್ದು, ಮೂರನೇ ವರ್ಷದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಇದೊಂದು ರೀತಿಯಲ್ಲಿ ವಿಶೇಷ ಕಲಿಕಾ ವಿಷಯವಾಗಿರುತ್ತದೆ. ಅಲ್ಲದೆ, ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಎರಡು ವರ್ಷದ ಡಿಪ್ಲೋಮಾ ನಂತರ ಮೂರನೇ ವರ್ಷದಲ್ಲಿ ಹೊಸ ರಾಷ್ಟೀಯ ಶಿಕ್ಷಣ ನೀತಿ ಅನುಸಾರ ತಮ್ಮ ಇಚ್ಛಗೆ ಅನುಗುಣವಾಗಿ ಓದಲು ಡಾಟಾ ಸೈನ್ಸ್, ಎಐ-ಎಂಎಲ್, ಪವರ್ ಎಂಜಿನಿಯರಿಂಗ್, ನವೀಕರಿಸಬಹುದಾದ ಇಂಧನ, ಇಂಡಸ್ಟ್ರಿಯಲ್ ಆಟೋಮ್ಯಾಷನ್ ಹಾಗೂ ಕೈಗಾರಿಕಾ ವಿದ್ಯುತ್ ಎಂಜಿನಿಯರಿಂಗ್, ಸುಸ್ಥಿರ ನಿರ್ಮಿತ ಪರಿಸರ, ಮೂಲಭೂತ ಎಂಜಿನಿಯರಿಂಗ್ ಸೇರಿ ಇನ್ನೂ ಹಲವಾರು ವಿಷಯಗಳನ್ನು ಆಯ್ಕೆಯ ಅನುಸಾರ ಅಧ್ಯಯನ ಮಾಡಬಹುದಾಗಿದೆ ಎಂದು ಅವರು ತಿಳಿಸಿದರು.

ವಿದ್ಯಾರ್ಥಿಗಳ ದಾಖಲಾತಿಗೆ ಚಾಲನೆ

ಇದೇ ಸಂದರ್ಭದಲ್ಲಿ ಸಚಿವರು ರಾಜ್ಯದಲ್ಲಿರುವ ಒಟ್ಟು 87 ಸರಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆಗೆ ಚಾಲನೆ ನೀಡಿದರು. ಇವುಗಳ ಪೈಕಿ 26 ಸರಕಾರಿ ಕಾಲೇಜುಗಳಲ್ಲಿ ಮೆರಿಟ್ ಮೇಲೆ ಪ್ರವೇಶ ನೀಡಲಾಗುವುದು. ಉಳಿದ ಕಾಲೇಜುಗಳಲ್ಲಿ ಮೊದಲು ಬಂದವರಿಗೆ ಮೊದಲ ಆದ್ಯತೆ ಕೊಡಲಾಗುವುದು ಎಂದು ಅವರು ಹೇಳಿದರು.

ಇದೇ ವೇಳೆ ಅವರು ಸರಕಾರಿ ಪಾಲಿಟೆಕ್ನಿಕ್ ಗಳಿಗೆ ಹೊಸ ಲೊಗೊ ಬಿಡುಗಡೆ ಮಾಡಿದರು. ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್, ಕಾಲೇಜು-ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್, ನಿರ್ದೇಶಕ ಮಂಜುನಾಥ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Tags: chikkaballapuradiploma new course launchdr cn ashwathnarayangauribidanurkarnatakatechnical education
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಡೆಡ್‌ಲೈನ್‌ಗೆ ಮುನ್ನವೇ ಸಿಕ್ಕಿಬೀಳುತ್ತಾರಾ ಬೆಂಕಿ ದುಷ್ಕರ್ಮಿಗಳು

ಡೆಡ್‌ಲೈನ್‌ಗೆ ಮುನ್ನವೇ ಸಿಕ್ಕಿಬೀಳುತ್ತಾರಾ ಬೆಂಕಿ ದುಷ್ಕರ್ಮಿಗಳು

Leave a Reply Cancel reply

Your email address will not be published. Required fields are marked *

Recommended

ಕರೆಸ್ಪಾಂಡೆನ್ಸ್‌ಗೆ ಮೈಸೂರು ಮಾತ್ರ, ಇನ್ನು ಮುಂದೆ ದೂರಶಿಕ್ಷಣಕ್ಕೆ ಡಿಮಾಂಡ್‌ ಜಾಸ್ತಿ ಎಂದ ಡಿಸಿಎಂ; ಕರ್ನಾಟಕ ಮುಕ್ತ ವಿಶ್ವವಿದ್ಯಾಲಯಕ್ಕೆ ಬಿಗ್ ಟಾರ್ಗೆಟ್‌ ಫಿಕ್ಸ್‌

ಕರೆಸ್ಪಾಂಡೆನ್ಸ್‌ಗೆ ಮೈಸೂರು ಮಾತ್ರ, ಇನ್ನು ಮುಂದೆ ದೂರಶಿಕ್ಷಣಕ್ಕೆ ಡಿಮಾಂಡ್‌ ಜಾಸ್ತಿ ಎಂದ ಡಿಸಿಎಂ; ಕರ್ನಾಟಕ ಮುಕ್ತ ವಿಶ್ವವಿದ್ಯಾಲಯಕ್ಕೆ ಬಿಗ್ ಟಾರ್ಗೆಟ್‌ ಫಿಕ್ಸ್‌

4 years ago
11 ಸಲ ಕಾಲ್‌ ಮಾಡಿದ  ಮಾಜಿ ಸಿಎಂ! ಜೆಡಿಎಸ್‌ ಶಾಸಕರ ಬ್ರೈನ್‌ವಾಶ್!!

ಮಳೆ & ನೆರೆ ನಿರ್ವಹಣೆ: ಸರಕಾರ-ಅಧಿಕಾರಿಗಳ ನಡುವೆ ಸಮನ್ವಯತೆ ಇಲ್ಲ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ