• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home BUSINESS

walk to work : ಕೋಲಾರ ಜಿಲ್ಲೆಯ ವೇಮಗಲ್‌ನಲ್ಲಿ ಕೈಗಾರಿಕಾ ಟೌನ್‌ಶಿಪ್‌

cknewsnow desk by cknewsnow desk
August 20, 2021
in BUSINESS, EDITORS'S PICKS, STATE
Reading Time: 2 mins read
0
ಕೈಗಾರಿಕೆಗಳಲ್ಲಿ ಹೂಡಿಕೆ; ಕೋಲಾರ, ಚಿಕ್ಕಬಳ್ಳಾಪುರಕ್ಕೆ ಜಾಕ್’ಪಾಟ್

ಕೋಲಾರ ಮತ್ತು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ.

1k
VIEWS
FacebookTwitterWhatsuplinkedinEmail

ಕೈಗಾರಿಕಾ ಪ್ರದೇಶದಲ್ಲಿ ತಲೆ ಎತ್ತಲಿವೆ ರೆಸಿಡೆನ್ಸಿಯಲ್ ಟೌನ್‌ಶಿಪ್‌

ಬೆಂಗಳೂರು: ಇನ್ನು ಮುಂದೆ ಕೈಗಾರಿಕಾ ಪ್ರದೇಶಗಳಲ್ಲಿ ಶೇ.10ರಿಂದ 15ರಷ್ಟು ಜಾಗವನ್ನು ವಸತಿ ಬಡಾವಣೆ (ರೆಸಿಡೆನ್ಸಿಯಲ್ ಟೌನ್‍ಶಿಪ್)ಗಳ ನಿರ್ಮಾಣದ ಉದ್ದೇಶಕ್ಕಾಗಿ ಮೀಸಲಿಡಲು ರಾಜ್ಯ ಸರಕಾರ ನಿರ್ಧರಿಸಿದೆ.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಖಾತೆ ಸಚಿವ ಮುರುಗೇಶ್ ನಿರಾಣಿ ಈ ವಿಷಯ ತಿಳಿಸಿದ್ದಾರೆ.

ಈ ಸಂಬಂಧ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಮುಖ್ಯ ಕಾರ್ಯ ನಿರ್ವಹಣಾಕಾರಿ (ಸಿಇಒ) ಎನ್.ಶಿವಶಂಕರ ಮತ್ತಿತರೆ ಅಧಿಕಾರಿಗಳ ಜತೆ ನಡೆಸಿದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಕೋಲಾರ ಜಿಲ್ಲೆಯ ವೇಮಗಲ್ 2ನೇ ಹಂತದ 511 ಎಕರೆಯಲ್ಲಿ ಟೌನ್‌ಶಿಪ್‌ ನಿರ್ಮಾಣ ಮಾಡಲು ಸರಕಾರ ಉದ್ದೇಶಿಸಿದ್ದು, ಈ ಜಾಗದಲ್ಲಿ ಜಾಗದಲ್ಲಿ ಶಾಲೆ-ಕಾಲೇಜು, ಆರೋಗ್ಯ ಕೇಂದ್ರ, ವಾಣಿಜ್ಯ ಸಂಕೀರ್ಣ, ಉದ್ಯಾನವನ ಸೇರಿ ಸಾರ್ವಜನಿಕರಿಗೆ ಅನುಕೂಲವಾಗುವ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಯೋಜನೆ ರೂಪಿಸಲಾಗವುದು.

ವೇಮಗಲ್‌ ಮಾತ್ರವಲ್ಲದೆ ರಾಜ್ಯದ ಇನ್ನೂ ಹಲವಾರು ಕಡೆ ಇಂಥ ಟೌನ್‌ಶಿಪ್‌ಗಳನ್ನು ನಿರ್ಮಾಣ ಮಾಡಲಾಗುವುದು ಎಂದು ನಿರಾಣಿ ಹೇಳಿದ್ದಾರೆ.

ಸಮಗ್ರ ಕೈಗಾರಿಕಾ ನಿವಾಸಿಗಳ ನಗರ (ಇಂಟಿಗ್ರೇಟೆಡ್ ಇಂಡಸ್ಟ್ರಿಯಲ್ ರೆಸಿಡೆನ್ಸಿಯಲ್ ಟೌನ್‍ಶಿಪ್) ಪರಿಕಲ್ಪನೆಯಲ್ಲಿ ಕೈಗಾರಿಕಾ ಪ್ರದೇಶದಲ್ಲಿನ ಜಾಗವನ್ನು ಶೇ.10ರಿಂದ 15ರಷ್ಟು ವಸತಿ ಬಡಾವಣೆಯ ಉದ್ದೇಶಕ್ಕಾಗಿ ಕಾಯ್ದಿರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ವಾಕ್-ಟು-ವರ್ಕ್ ಎಂಬ ಪರಿಕಲ್ಪನೆಯಡಿ ಕೈಗಾರಿಕಾ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಅಗತ್ಯವಿರುವ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕೆಂಬ ಯೋಜನೆ ಇದಾಗಿದ್ದು, ಅದೇ ದಿಕ್ಕಿನಲ್ಲೇ ಟೌನ್‌ಶಿಪ್‌ಗಳು ನಿರ್ಮಾಣ ಆಗಲಿವೆ.

ಕೈಗಾರಿಕೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ತಾವು ವಾಸಿಸುವ ಪ್ರದೇಶದಿಂದ ಬಂದು ಹೋಗಲು ಸಂಚಾರ ದಟ್ಟಣೆ, ವಾಹನಗಳ ಸಮಸ್ಯೆ, ಸಮಯದ ಅಭಾವ.. ಹೀಗೆ ನಾನಾ ರೀತಿಯ ಸಮಸ್ಯೆಗಳು ಎದುರಾಗುತ್ತಿವೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ವಿನೂತನ ಯೋಜನೆಯನ್ನು ಸರಕಾರ ಹಾಕಿಕೊಂಡಿದೆ.

ಬೆಂಗಳೂರಿನಲ್ಲಿ ಕೈಗಾರಿಕೆಗಳಿದ್ದರೆ, ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಸೇರಿ ದೂರದಿಂದ ಬರಲು ಸಿಬ್ಬಂದಿಗೆ ಅನಾನುಕೂಲವಾಗಲಿದೆ. ಕೈಗಾರಿಕಾ ಪ್ರದೇಶದಲ್ಲೇ ವಸತಿಗಳನ್ನು ನಿರ್ಮಿಸಿಕೊಟ್ಟರೆ ಸಮಯದ ಉಳಿತಾಯ ಹಾಗೂ ದಕ್ಷತೆಯಿಂದ ಕೆಲಸ ಮಾಡಲು ಅನುಕೂಲವಾಗುತ್ತದೆ ಎಂಬ ಅಭಿಪ್ರಾಯ ಸರಕಾರದ್ದು.

ಈ ಪ್ರದೇಶವನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಿ ವಸತಿ ಸಮ್ಮುಚ್ಚಯಗಳು, ಆಸ್ಪತ್ರೆ, ಮಾಲ್‍ಗಳು, ಶಾಲಾ-ಕಾಲೇಜುಗಳು, ನೀರಿನ ಸೌಲಭ್ಯ ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳೂ ಒಂದೇ ಸೂರಿನಲ್ಲಿ ಲಭ್ಯವಾಗಲಿವೆ. ಈ ಬಗ್ಗೆ ವಿಸ್ತೃತವಾಗಿ ಕೈಗಾರಿಕೋದ್ಯಮಿಗಳ ಜತೆ ಚರ್ಚೆ ನಡೆಸಲಾಗುವುದು ಎಂದು ಕೈಗಾರಿಕಾ ಸಚಿವರು ತಿಳಿಸಿದರು.

“ಶೀಘ್ರದಲ್ಲೇ ಉನ್ನತ ಕೈಗಾರಿಕೋದ್ಯಮಿಗಳೊಂದಿಗೆ ಸಭೆ ನಡೆಸಲಾಗುವುದು. ಕೈಗಾರಿಕಾ ಅಭಿವೃದ್ಧಿ ಮತ್ತು ಹೂಡಿಕೆಗಳನ್ನು ಆಕರ್ಷಿಸುವ ವಿಷಯಗಳ ಬಗ್ಗೆ ಚರ್ಚಿಸುಲಾಗುವುದು. ಕೈಗಾರಿಕಾ ವಲಯ ಮತ್ತು ಹೂಡಿಕೆದಾರರ ಸ್ನೇಹಿ ವಾತಾವರಣದಲ್ಲಿ ರಾಜ್ಯವನ್ನು ಮುಂಚೂಣಿಯ ಸ್ಥಾನದಲ್ಲಿ ಕಾಯ್ದುಕೊಳ್ಳುವಲ್ಲಿ ಸರಕಾರ  ಬದ್ದವಾಗಿದೆ” ಎಂದು ಅವರು ಹೇಳಿದರು.

ಸಈ ಸಭೆಯಲ್ಲಿ ಬಾಷ್ ಕಂಪನಿಯ ವ್ಯವಸ್ಥಾಪಕ ನಿದೇರ್ಶಕ ಹಾಗೂ ಭಾರತದ ಬಾಷ್ ಸಮೂಹ ಸಂಸ್ಥೆ  ಅಧ್ಯಕ್ಷ ಸೌಮಿತ್ರ ಭಟ್ಟಾಚಾರ್ಯ ಹಾಗೂ ಬ್ರಿಗೇಡ್ ಎಂಟಪ್ರೈಸಸ್‌ನ ವ್ಯವಸ್ಥಾಪಕ ನಿದೇರ್ಶಕ ಮತ್ತು ಅಧ್ಯಕ್ಷ ಎಂ.ಆರ್.ಜೈ ಶಂಕರ್, ಬಿಸಿಐಸಿ ಅಧ್ಯಕ್ಷ ಟಿ.ಆರ್.ಪರಶುರಾಮನ್ ಉಪಸ್ಥಿತರಿದ್ದರು.

ಕೈಗಾರಿಕೆಗಳ ಉದ್ದೇಶಕ್ಕಾಗಿ ರಾಜ್ಯಾದ್ಯಂತ ಒಟ್ಟು 82 ಸಾವಿರಕ್ಕೂ ಅಧಿಕ ಎಕರೆ ಜಮೀನು ಇದೆ. ಇದರಲ್ಲಿ 188 ಕೈಗಾರಿಕಾ ಘಟಕಗಳಿದ್ದು, 20 ಸಾವಿರಕ್ಕೂ ಅಧಿಕ ಕೈಗಾರಿಕೆಗಳು ಕಾರ್ಯ ನಿರ್ವಹಿಸುತ್ತಿವೆ. ಮುಂದಿನ 2ರಿಂದ 3 ವರ್ಷಗಳಲ್ಲಿ 9 ಸಾವಿರ ಎಕರೆ ಜಮೀನನ್ನು ಅಭಿವೃದ್ಧಿಪಡಿಸಲು ನೀಲನಕ್ಷೆ ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಸ್ವಾಧೀನಪಡಿಸಿಕೊಂಡಿರುವ ಭೂಮಿಯ ವಿವರ

ಒಟ್ಟು ಕೈಗಾರಿಕಾ ಪ್ರದೇಶಗಳು: 188

ಒಟ್ಟು ಎಕರೆ: 81,864

ಘಟಕಗಳು: 20,972

ಭವಿಷ್ಯದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಿರುವ ಭೂಮಿಯ ವಿವರ

ಒಟ್ಟು ಭೂಮಿ: 9010 ಎಕರೆ

ಕೋಲಾರ: ವೇಮಗಲ್ 2ನೇ ಹಂತದಲ್ಲಿ 511 ಎಕರೆ

ರಾಮನಗರ: ಹಾರೋಹಳ್ಳಿ 5ನೇ ಹಂತದಲ್ಲಿ 912 ಎಕರೆ

ಹಾವೇರಿ: ಗಣಚೂರುನಲ್ಲಿ 407 ಎಕರೆ

ಮಂಡ್ಯ: ಕುದುರುಗುಂಡೆಯಲ್ಲಿ 109 ಎಕರೆ

ವಿಜಯಪುರ: ಮುಲವಾಡದಲ್ಲಿ 2500 ಎಕರೆ

ತುಮಕೂರು: ಶಿರಾದ 2ನೇ ಹಂತದಲ್ಲಿ 1200

Tags: industryintegrated industrial residential townshipkarnatakakolarminister murugesh niranivemagalwalk to work
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಉದ್ಯಮ

ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಉದ್ಯಮ

Leave a Reply Cancel reply

Your email address will not be published. Required fields are marked *

Recommended

ಗುಡಿಬಂಡೆ ಚಿಕ್ಕದು! ಗ್ರಂಥಾಲಯವೂ ಸಣ್ಣದು!! ಸರಕಾರದ ನಿರ್ಲಕ್ಷ್ಯ ಅತಿ ದೊಡ್ಡದು!!

ಗುಡಿಬಂಡೆ ಚಿಕ್ಕದು! ಗ್ರಂಥಾಲಯವೂ ಸಣ್ಣದು!! ಸರಕಾರದ ನಿರ್ಲಕ್ಷ್ಯ ಅತಿ ದೊಡ್ಡದು!!

5 years ago
ದಸರಾ: ರಾಷ್ಟ್ರಪತಿಗಳಿಗೆ ಅಧಿಕೃತ ಆಹ್ವಾನ

ದಸರಾ: ರಾಷ್ಟ್ರಪತಿಗಳಿಗೆ ಅಧಿಕೃತ ಆಹ್ವಾನ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ