• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಸೆಪ್ಟೆಂಬರ್ 20ಕ್ಕೆ ಸಿಇಟಿ ಫಲಿತಾಂಶ

cknewsnow desk by cknewsnow desk
September 3, 2021
in NEWS IN USE, STATE
Reading Time: 1 min read
0
ಆಮ್ಲಜನಕ, ರೆಮಿಡಿಸ್ವೀರ್‌ ಕೃತಕ ಅಭಾವ ಸೃಷ್ಟಿ!! ಸೋಂಕಿತರ ಸಂಖ್ಯೆಗೂ-ಬೇಡಿಕೆಗೂ ತಾಳ-ಮೇಳವಿಲ್ಲ, ಸಪ್ಲೈ ಆಗುತ್ತಿರುವುದೆಲ್ಲ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ ಡಿಸಿಎಂ
943
VIEWS
FacebookTwitterWhatsuplinkedinEmail

ನಿಗದಿಯಂತೆ ಎಲ್ಲ ಪ್ರಕ್ರಿಯೆ ಎಂದ ಸಚಿವ ಡಾ.ಸಿ.ಎನ್.‌ಅಶ್ವತ್ಥನಾರಾಯಣ

  • ಎಂನಿಯರಿಂಗ್‌ ಶುಲ್ಕ; ಮುಂದಿನ ವಾರ ನಿರ್ಧಾರ
  • ಹೆಚ್ಚು ಶುಲ್ಕ ವಸೂಲಿ ಮಾಡಿದರೆ ಖಾಸಗಿ ಪದವಿ ಕಾಲೇಜುಗಳ ವಿರುದ್ಧ ಕ್ರಮ
  • ಅಕ್ಟೋಬರ್ 1 ರವರೆಗೂ ಪದವಿಗೆ ಪ್ರವೇಶಾವಕಾಶ
  • ಎನ್‌ಇಪಿ ಬಗ್ಗೆ ಅಪಪ್ರಚಾರ; ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ
  • ಪ್ರತಿಪಕ್ಷ ನಾಯಕರಿಗೆ ಅಧಿವೇಶನದಲ್ಲಿ ಉತ್ತರ ಎಂದ ಸಚಿವರು

ಬೆಂಗಳೂರು: ಇದೇ ಸೆಪ್ಟೆಂಬರ್‌ 20ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕಳೆದ ಅಗಸ್ಟ್ 28-29 ಮತ್ತು 30ರಂದು ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ ಪ್ರಕ್ರಿಯೆಯನ್ನು ಯಾವುದೇ ಗೊಂದಲ-ಸಮಸ್ಯೆ ಇಲ್ಲದೆ ಪೂರ್ಣಗೊಳಿಸಲಾಗುವುದು ಎಂದರು.

ಸಕಾಲಕ್ಕೆ ಫಲಿತಾಂಶ ನೀಡುವುದೂ ಸೇರಿ ನಿಗದಿತ ವೇಳಾಪಟ್ಟಿಯಂತೆ ಕೌನ್ಸಿಲಿಂಗ್‌ ಮುಗಿಸಲಾಗುವುದು. ಯಾವುದೇ ಕಾರಣಕ್ಕೂ ಶೈಕ್ಷಣಿಕ ವರ್ಷ ಹಳಿತಪ್ಪಲು ಬಿಡುವುದಿಲ್ಲ ಎಂದರು ಸಚಿವರು.

ಶುಲ್ಕದ ಬಗ್ಗೆ ಮುಂದಿನ ವಾರ ಸಭೆ

ಎಂಜಿನಿಯರಿಂಗ್‌ ಕಾಲೇಜು ಶುಲ್ಕ ಹೆಚ್ಚಳ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು; ಈ ಬಗ್ಗೆ ಮುಂದಿನ ವಾರ ಸಭೆ ಇದೆ. ಅದರಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಲ್ಲಿಟ್ಟುಕೊಂಡು ಎಲ್ಲ ಅಂಶಗಳ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಹೆಚ್ಚು ಶುಲ್ಕ ವಸೂಲಿ ಮಾಡಿದರೆ ಕ್ರಮ

ಖಾಸಗೀ ಪದವಿ ಕಾಲೇಜುಗಳಲ್ಲಿ ಶುಲ್ಕ ಹೆಚ್ಚಳ ಮಾಡುತ್ತಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಗಮನ ಸೆಳೆದಾಗ ಉತ್ತರಿಸಿದ ಸಚಿವರು, “ರಾಷ್ಟ್ರೀಯ ಶಿಕ್ಷಣ ನೀತಿ ನೆಪದಲ್ಲಿ ಶುಲ್ಕ ಹೆಚ್ಚಳಕ್ಕೆ ಅವಕಾಶವೇ ಇಲ್ಲ. ವಿದ್ಯಾರ್ಥಿಗಳಿಗೆ ದುಬಾರಿ ಶುಲ್ಕ ವಿಧಿಸಿ ಕಾಲೇಜು ನಡೆಸುವುದು ಸರಿಯಲ್ಲ, ಗುಣಮಟ್ಟದ ಶಿಕ್ಷಣ ಕೊಡುವುದಷ್ಟೇ ಸರಕಾರದ ಉದ್ದೇಶ. ಈ ಬಗ್ಗೆ ದೂರುಗಳು ಬಂದರೆ ಗಮನ ಹರಿಸಿ ಆಯಾ ಕಾಲೇಜುಗಳ ವಿರುದ್ಧ ಕ್ರಮ ಜರುಗಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ವಿದ್ಯಾರ್ಥಿಗಳು ಸರಕಾರೀ ಕಾಲೇಜುಗಳಲ್ಲೇ ದಾಖಲಾಗಬೇಕು. ಅಲ್ಲಿ ಕಡಿಮೆ ಶುಲ್ಕದಲ್ಲಿ ಪದವಿ ನೀಡಲಾಗುವುದು. ಅದರಲ್ಲೂ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ಸೌಲಭ್ಯವಿದೆ. ಕೆಲ ಖಾಸಗಿ ಸಂಸ್ಥೆಗಳು ಉದ್ದೇಶಪೂರ್ವಕವಾಗಿ ಹೆಚ್ಚು ಶುಲ್ಕ ವಸೂಲಿ ಮಾಡುತ್ತಿವೆ. ಆ ಬಗ್ಗ ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.

ಪದವಿ ಕಾಲೇಜುಗಳಿಗೆ ಶುಲ್ಕ ನಿಗದಿ ಮಾಡಲು ಸರಕಾರದ ಮಟ್ಟದಲ್ಲಿ ಸಮಿತಿ ಇಲ್ಲ. ಹೀಗಾಗಿ, ಕೆಲ ಕಾಲೇಜುಗಳು ಇದನ್ನೇ ದುರುಪಯೋಗ ಮಾಡಿಕೊಳ್ಳುತ್ತಿವೆ. ಸಮಿತಿ ಇಲ್ಲ ಎಂದ ಮಾತ್ರಕ್ಕೆ ದುಬಾರಿ ಶುಲ್ಕ ವಿಧಿಸುವ ಹಾಗಿಲ್ಲ ಎಂದ ಸಚಿವರು, ಪದವಿ ಕಾಲೇಜುಗಳಿಗೆ ಅಕ್ಟೋಬರ್ 1 ರವರೆಗೂ ದಾಖಲು ಆಗಬಹುದು. ಅದಕ್ಕೆ ಅವಕಾಶ ನೀಡಲಾಗಿದೆ ಎಂದರು.

ಸಿದ್ದರಾಮಯ್ಯ ಅವರಿಗೆ ಅಧಿವೇಶನದಲ್ಲಿ ಉತ್ತರ

ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಈಗಾಗಲೇ ಮಾಧ್ಯಮಗಳ ಮೂಲಕ, ವಿವಿಧ ವೇದಿಕೆಗಳಲ್ಲಿ ಉತ್ತರ ನೀಡಲಾಗಿದೆ. ಇದರ ಜತೆಗೆ ಅವರಿಗೆ ವಿಧಾನಮಂಡಲ ಅಧಿವೇಶನದಲ್ಲೂ ಸಮಗ್ರವಾಗಿ ಉತ್ತರ ಕೊಡಲಾಗುವುದು ಎಂದು ಸಚಿವ ಡಾ.ಅಶ್ವತ್ಥನಾರಾಯಣ ಹೇಳಿದರು.

ಇದೇ ವೇಳೆ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ ಸಚಿವರು, ಕೇವಲ ರಾಜಕೀಯದ ಉದ್ದೇಶ ಇಟ್ಟುಕೊಂಡು ವಿರೋಧ ಮಾಡುವವರಿಗೆ ಏನೂ ಮಾಡಲಾಗದು. ನೀತಿಯ ಬಗ್ಗೆ ಸಮಾಜದಲ್ಲಿ ಅಪನಂಬಿಕೆ ಮೂಡಿಸಲು ವಿರೋಧ ಪಕ್ಷಗಳು ಹೀಗೆ ಆರೋಪ ಮಾಡುತ್ತಿವೆ. ಇದು ಕೇವಲ ಒಂದು ಒಳ್ಳೆಯ ಕಾರ್ಯಕ್ರಮದ ವಿರುದ್ಧ ಅಪಪ್ರಚಾರ ಮಾಡುವ ಹುನ್ನಾರವಷ್ಟೇ ಎಂದು ದೂರಿದರು.

ಹೊಸ ಶಿಕ್ಷಣ ನೀತಿಯ ಪ್ರಕ್ರಿಯೆಗಳು ಪ್ರಾರಂಭವಾಗಿ 7 ವರ್ಷಗಳೇ ಆಗಿದ್ದು, ಪ್ರಸಕ್ತ ವರ್ಷದಿಂದ ಜಾರಿ ಮಾಡಲಾಗುತ್ತಿದೆ. ಶಿಕ್ಷಣದ ವ್ಯವಸ್ಥೆಯಲ್ಲಿ ಇರುವ ನ್ಯೂನತೆಗಳನ್ನು ಸರಿಪಡಿಸಲು ಇದನ್ನು ತರಲಾಗಿದೆ. ಸಾಕಷ್ಟು ಪೂರ್ವಸಿದ್ಧತೆ, ಚರ್ಚೆ, ತಯಾರಿ ಮಾಡಿಕೊಂಡೇ ಶಿಕ್ಷಣ ನೀತಿಯನ್ನು ಜಾರಿ ಮಾಡಲಾಗುತ್ತಿಯೇ ಹೊರತು ಆತುರಾತುರವಾಗಿ ತರುತ್ತಿರುವುದಲ್ಲ ಎಂದು ಡಾ.ಅಶ್ವತ್ಥನಾರಾಯಣ ಸ್ಪಷ್ಟ ಮಾತುಗಳಲ್ಲಿ ತಿಳಿಸಿದರು.

ಸಿದ್ದರಾಮಯ್ಯ ಅವರು ಓರ್ವ ಹಿರಿಯ ರಾಜಕಾರಣಿ. ಇಂಥ ಪ್ರಕ್ರಿಯೆಗಳೆಲ್ಲ ಹೇಗೆ ನಡೆಯುತ್ತವೆ ಎನ್ನುವುದು ಅವರಿಗೆ ಗೊತ್ತಿಲ್ಲದೆ ಇಲ್ಲ. ಕೇವಲ ಅವರು ರಾಜಕಾರಣ ಮಾಡುತ್ತಿದ್ದಾರೆ. ಈ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿದ ಬಳಿಕ ಅನುಷ್ಠಾನ ಮಾಡಲಾಗುತ್ತಿದೆ. ಸಂಪುಟದಲ್ಲೂ ಚರ್ಚಿಸಿ ಒಪ್ಪಿಗೆ ಪಡೆಯಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಸಂಪೂರ್ಣವಾಗಿ ವಿದ್ಯಾರ್ಥಿ ಕೇಂದ್ರಿತ. ಮಕ್ಕಳ ಅಭಿವೃದ್ಧಿಗೆ ಪೂರಕವಾಗಿದೆ. ಈ ಬಗ್ಗೆ ಎಲ್ಲಿ ಬೇಕಾದರೂ ಚರ್ಚೆ ಮಾಡಲು ನಾವು ತಯಾರಿದ್ದೇವೆ ಎಂದು ಸಚಿವರು ತಿಳಿಸಿದರು.

Tags: admissioncet2021degree collegesdr cn ashwathnarayaneducationkarnatakakcettechnical education
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಶಾಸಕರನ್ನೇ ದಿಕ್ಕುತಪ್ಪಿಸಿದ ಕಾಂಗ್ರೆಸ್ ಕಾರ್ಯಕರ್ತರು!

ಶಾಸಕರನ್ನೇ ದಿಕ್ಕುತಪ್ಪಿಸಿದ ಕಾಂಗ್ರೆಸ್ ಕಾರ್ಯಕರ್ತರು!

Leave a Reply Cancel reply

Your email address will not be published. Required fields are marked *

Recommended

ಕೋಡಿ ಹರಿದ ಅಮಾನಿ ಭೈರಸಾಗರ; ಕೆರೆಕಟ್ಟೆಯಲ್ಲಿ ಜನಸಾಗರ

ಕೋಡಿ ಹರಿದ ಅಮಾನಿ ಭೈರಸಾಗರ; ಕೆರೆಕಟ್ಟೆಯಲ್ಲಿ ಜನಸಾಗರ

4 years ago
ಬೆಂಗಳೂರಿಗರಿಗೆ ಲಸಿಕೆ! ಮುಗ್ಧ ಹಳ್ಳಿ ಜನರಿಗೆ ವೈರಸ್‌ ಹಂಚಿಕೆ!!; ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತವರು ಜಿಲ್ಲೆ ಚಿಕ್ಕಬಳ್ಳಾಪುರದಲ್ಲೇ ಹಳ್ಳ ಹಿಡಿಯುತ್ತಿದೆ ಕೋವಿಡ್ ಲಸಿಕೆ ಅಭಿಯಾನ

12,000 ಜನಸಂಖ್ಯೆಗೆ ಒಂದೂ ಸಾರ್ವಜನಿಕ ಶೌಚಾಲಯ ಇಲ್ಲ! ಬಯಲಲ್ಲೇ ಎಲ್ಲ!!

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ