• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ವಿಷ ವಿಲೇವಾರಿಗೆ ಅಡ್ಡಿಪಡಿಸಿದ ಹಳ್ಳಿಗರಿಗೆ ಹಣದ ಆಮಿಷ!

cknewsnow desk by cknewsnow desk
September 7, 2021
in STATE
Reading Time: 2 mins read
0
ವಿಷ ವಿಲೇವಾರಿಗೆ ಅಡ್ಡಿಪಡಿಸಿದ ಹಳ್ಳಿಗರಿಗೆ ಹಣದ ಆಮಿಷ!
1.5k
VIEWS
FacebookTwitterWhatsuplinkedinEmail

ಜನ ಗುಂಪುಗೂಡುತ್ತಿದ್ದಂತೆ ಟ್ಯಾಂಕರ್‌ ಬಿಟ್ಟು ಓಡಿದ ಚಾಲಕ, ಕ್ಲೀನರ್‌
ವಿಷಲಾರಿ ಹಿಂಬಾಲಿಸಿ ಬಂದಿದ್ದ ಖತರ್ನಾಕ್‌ ಕಾರ್ಖಾನೆ ಸಿಬ್ಬಂದಿ


by GS Bharath Gudibande

ಗುಡಿಬಂಡೆ: ಸಮೀಪದ ವಾಟದಹೊಸಹಳ್ಳಿ ಕೆರೆಗೆ ವಿಷಪ್ರಾಷಣ ಮಾಡಿದ ದುರುಳರು, ಅಡ್ಡಿಪಡಿಸಲೆತ್ನಿಸಿದ ಸ್ಥಳೀಯರಿಗೆ ಬೆದರಿಕೆ ಹಾಕುವುದರ ಜತೆಗೆ, ಹಣದ ಆಮಿಷವನ್ನೂ ಒಡ್ಡಿರುವ ಅಂಶವೂ ತಡವಾಗಿ ಬೆಳಕಿಗೆ ಬಂದಿದೆ.

ಕಳೆದ ಅಗಸ್ಟ್ 29 ರಂದು ಕೆಮಿಕಲ್ ಟ್ಯಾಂಕರ್ ತಾಲೂಕು ಮೀಸಲು ಅರಣ್ಯ ವ್ಯಾಪ್ತಿಯ ಚಿಮುಕಲಹಳ್ಳಿಯ ಸಮೀಪದಲ್ಲಿ ವಿನಾಶಕಾರಿ ರಾಸಾಯನಿಕ ತ್ಯಾಜ್ಯ ನೀರನ್ನು ವಿಲೇವಾರಿ ಮಾಡುತ್ತಿದ್ದಾಗ, ಸ್ಥಳೀಯರು ಟ್ಯಾಂಕರ್‌ ಅನ್ನು ಸುತ್ತುವರೆದು ಅಡ್ಡಿಪಡಿಸಿ ತೀವ್ರ ಪ್ರತಿರೋದ ಒಡ್ಡಿದ್ದಾರೆ.

ಕೂಡಲೇ ಕಿರಾತಕ ಬುದ್ಧಿ ಪ್ರಯೋಗಿಸಿರುವ ದುರುಳರು ಮೊದಲು ಬೆದರಿಸುವ ಪ್ರಯತ್ನ ಮಾಡಿದ್ದಾರೆ. ಆದರೆ, ಜನ ಜಗ್ಗದಿದ್ದಾಗ ಹಣದ ಆಮಿಷ ಒಡ್ಡಿ, ʼಇದರ ಬಗ್ಗೆ ಯಾರಿಗೂ ಮಾಹಿತಿ ಕೊಡಬೇಡಿʼ ಎಂದ ಅಂಗಲಾಚಿ ಹಣ ನೀಡಲು ಮುದಾಗಿದ್ದಾರೆ. ಈ ಅಂಶವು ವಿಷಲಾರಿ ಪ್ರಕರಣಕ್ಕೆ ಹೊಸ ತಿರುವು ನೀಡುತ್ತಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಮೀಸಲು ಅರಣ್ಯ ಪ್ರದೇಶ ಹಾಗೂ ವಾಟದಹೊಸಳ್ಳಿ ಕೆರೆಗೆ ಗೌರಿಬಿದನೂರು ಮೂಲದ ಕೈಗಾರಿಕೆಗಳ ರಸಾಯನಿಕ ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದಾಗ ಹತ್ತಿರದಲ್ಲೇ ಇರುವ ಚಿಮುಕಲಹಳ್ಳಿ ಜನರು ಭಾರೀ ವಿರೋಧ ವ್ಯಕ್ತಪಡಿಸಿ, ಆ ಟ್ಯಾಂಕರ್‌ ಅನ್ನು ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದರು.

ಪ್ರತಿ ಮೂರುನಾಲ್ಕು ದಿನಗಳಿಗೆ ಒಮ್ಮೆ ವಿಷ ವಿಲೇವಾರಿ

ಭಯಾನಕ ಸಂಗತಿ ಎಂದರೆ, ವಿಷಲಾರಿ ಕಿರಾತಕರು ಈ ಪ್ರದೇಶದಲ್ಲಿ ರಾಸಾಯನಿಕ ತ್ಯಾಜ್ಯ ವಿಲೇವಾರಿ ಮಾಡಿರುವುದು ಇದೇ ಮೊದಲಲ್ಲ. ಸ್ಥಳೀಯರು ಹೇಳುವಂತೆ, ಹಲವು ದಿನಗಳಿಂದ ಈ ರಸ್ತೆಯಲ್ಲಿ ಹೋಗಿಬರುವಾಗ ಕೆಮಿಕಲ್ʼನ ಕೆಟ್ಟ ವಾಸನೆ ಬರುತ್ತಿತ್ತು, ಇದರ ಬಗ್ಗೆ ಗ್ರಾಮಸ್ಥರು ಅಷ್ಟೊಂದು ತಲೆ ಕೆಡಿಸಿಕೊಂಡಿರಲಿಲ್ಲ. ಆದರೆ ಕಳೆದ ಅಗಸ್ಟ್‌ 29ರಂದು ಹಾಡಹಗಲೇ ಅರಣ್ಯ ಪ್ರದೇಶದಲ್ಲಿ ರಾಸಾಯನಿಕ ತ್ಯಾಜ್ಯವನ್ನು ವಿಲೇವಾರಿ ಮಾಡುತ್ತಿರುವಾಗ ಗ್ರಾಮಸ್ಥರು ರೆಡ್ ಹ್ಯಾಂಡ್ ಆಗಿ ಹಿಡಿದು, ಟ್ಯಾಂಕರ್‌ ಚಾಲಕ ಮತ್ತು ಕ್ಲೀನರ್‌ʼಗೆ ಧರ್ಮದೇಟು ಕೊಡಲು ಮುಂದಾದರು. ಆದರೆ, ಅಪಾಯದ ಮುನ್ನೆಚ್ಚರಿಕೆ ಅವರಿಬ್ಬರೂ ಪರಾರಿಯಾದರು ಎಂದು ಚಿಮುಕಲಹಳ್ಳಿ ಗ್ರಾಮಸ್ಥರು ಸಿಕೆನ್ಯೂಸ್ ನೌ ಜತೆ ಮಾತನಾಡುತ್ತಾ ತಿಳಿಸಿದರು.

ಹಣಕ್ಕಿಂತ ಅರಣ್ಯ ಮುಖ್ಯ ಎಂದ ಹಳ್ಳಿಗರು

ಯಾವಾಗ ಗ್ರಾಮಸ್ಥರು ಟ್ಯಾಂಕರ್‌ ಅನ್ನು ಅಡ್ಡಗಟ್ಟಿ ಚಾಲಕ ಕ್ಲೀನರ್‌ ಮೇಲೆ ದಾಳಿಗೆ ಮುಂದಾದರೋ ಅಲ್ಲೆಲ್ಲೋ ಮರ ಗಿಡಗಳ ಪೊದೆಗಳಲ್ಲಿ ಅಡಗಿದ್ದ ವಿಷಲಾರಿಗೆ ಸಂಬಂಧಿಸಿದ ಇನ್ನಷ್ಟು ಜನರು ಪ್ರತ್ಯಕ್ಷರಾದರು. ಅವರು ಬಂದವರೇ ನಮ್ಮ ಜತೆ ದರ್ಪದಿಂದ ವರ್ತಿಸಿ, ಬೆದರಿಕೆ ಒಡ್ಡುವ ರೀತಿ ಮಾತನಾಡಿದರು. ನಾವು ಜಗ್ಗಲಿಲ್ಲ. ಈ ಸಮಸ್ಯೆಯನ್ನು ಇಲ್ಲಿಗೆ ಬಿಟ್ಟು ಬಿಡಿ, ಯಾರಿಗೂ ದೂರು ನೀಡಬೇಡಿ, ನಿಮಗೆ ಹಣ ಕೊಡುತ್ತೇವೆ ಎಂದು ಹೇಳಿದಾಗ ರೈತರು ಮತ್ತಷ್ಟು ರೊಚ್ಚಿಗೆದ್ದರು ಎಂದು ಚಿಮುಕಲಹಳ್ಳಿ ಗ್ರಾಮದ ಧನಂಜಯ್ ಹೇಳಿದರು.

ವಾರಾಂತ್ಯದಲ್ಲಿ ರಾಜ್ಯದ ವಿವಿಧ ಸ್ಥಳಗಳಿಂದ ಸಾವಿರಾರು ಪ್ರವಾಸಿಗರು ಈ ಭಾಗಕ್ಕೆ ಬರುತ್ತಾರೆ. ಅವರಿಗೆ ತೊಂದರೆ ಆಗದಂತೆ ಎಚ್ಚರ ವಹಸಿ ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ. ಪ್ರವಾಸಿಗರು ಬರುವುದರಿಂದ ನಮ್ಮ ಹಳ್ಳಿಗಳು ಈಗೀಗ ಸ್ವಲ್ಪ ಅಭಿವೃದ್ಧಿ ಕಡೆ ಹೋಗುತ್ತಿವೆ. ಈ ರೀತಿಯ ಪ್ರಕರಣ ಕಂಡು ಬರುವುದರಿಂದ ನಮ್ಮ ಗ್ರಾಮಕ್ಕೆ ಕಟ್ಟ ಹೆಸರು ಬರುತ್ತದೆ ಎಂದು ಅವರು ಅಳಲು ತೋಡಿಕೊಂಡರು.

ವಾಟದಹೊಸಹಳ್ಳಿ ಕೆರೆಯು ಪ್ರಾಕೃತಿಕವಾಗಿ ಅತ್ಯಂತ ಸುಂದರ ಮತ್ತು ಸೂಕ್ಷ್ಮ ತಾಣವಾಗಿದೆ. ಅನೇಕ ವನ್ಯಜೀವಿಗಳ ತಾಣವಾಗಿದೆ. ಅಪರೂಪದ ಮಗ ಗಿಡಗಳ ಆಗರವಾಗಿದೆ. ಹೀಗಾಗಿ ವಾರಾಂತ್ಯದ ವೇಳೆ ಸಾವಿರಾರು ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಒಂದು ವೇಳೆ ಈ ವಿಷತ್ಯಾಜ್ಯ ಕೆರೆ ಸೇರಿದ್ದಿದ್ದರೆ ಅಪಾರ ಮೀನುಗಳ ಮಾರಣಹೋಮವೇ ನಡೆಯುತ್ತಿತ್ತು. ಯಾವುದೇ ಕಾರಣಕ್ಕೂ ಟ್ಯಾಂಕರ್‌ ಅನ್ನು ಬಿಡಬಾರದು. ಅದಕ್ಕೆ ಕಾರಣರಾದ ಎಲ್ಲರನ್ನೂ ಕಾನೂನಿನ ಕಟಕಟೆಗೆ ತಂದು ಶಿಕ್ಷಿಸಬೇಕು ಎಂದು ಧನಂಜಯ ಒತ್ತಾಯ ಮಾಡಿದರು.

ಅಲ್ಲಿಗೆ ವಿಷಲಾರಿಗಳು ವಿಷ ವಿಲೇವಾರಿ ಮಾಡುವ ಸಂದರ್ಭದಲ್ಲಿ ಕೇವಲ ಚಾಲಕ, ಕ್ಲೀನರ್‌ ಮಾತ್ರವೇ ಇರುವುದಿಲ್ಲ. ಅವರ ಜತೆ, ಆ ಕಾರ್ಖಾನೆಗೆ ಸಂಬಂಧಿಸಿದ ಅಧಿಕಾರಿಗಳು, ಸಂಬಂಧಿತ ಸಿಬ್ಬಂದಿಯೂ ಹಿಂಬಾಲಿಸಿ ಮೂರನೇ ಕಣ್ಣಿಗೆ ಗೊತ್ತಾಗದಂತೆ ಕಾರ್ಯ ಮುಗಿಸಿ ಹೋಗುತ್ತಿದ್ದರು ಎಂಬುದು ಇದರಿಂದ ಅರ್ಥವಾಗುತ್ತದೆ. ಅಲ್ಲದೆ, ಇದೇ ಮೊದಲ್ಲದೆ, ಕೆಲ ದಿನಗಳಿಂದ ನಿರಂತರವಾಗಿ ಈ ಅರಣ್ಯದಲ್ಲಿ ವಿಷ ವಿಲೇವಾರಿ ಆಗಿರುವ ಅಂಶವೂ ಬೆಳಕಿಗೆ ಬಂದಿದೆ.

  • ಧನಂಜಯ್, ಚಿಮುಕಲಹಳ್ಳಿ ಗ್ರಾಮಸ್ಥ

ಸುಮಾರು ಮೂರು ನಾಲ್ಕು ದಿನಗಳಿಗೊಮ್ಮೆ ರಾಸಾಯನಿಕ ತ್ಯಾಜ್ಯ ನೀರನ್ನು ಅರಣ್ಯ ಪ್ರದೇಶದಲ್ಲಿ ವಿಲೇವಾರಿ ಮಾಡುತ್ತಿದ್ದಾರೆ. ಈ ರಸ್ತೆಯಲ್ಲಿ ಓಡಾಡುವಾಗ ದುರ್ವಾಸನೆ ಬರುತ್ತಿತ್ತು. ಇವರು ಹಗಲಿನಲ್ಲಿ ಕೈಗಾರಿಕೆಗಳ ವಿಷತ್ಯಾಜ್ಯ ವಿಲೇವಾರಿ ಮಾಡುತ್ತಿರುವಾಗಲೇ ನಮಗೆ ಸಿಕ್ಕಿಬಿದ್ದರು. ಆಗ ಸ್ಥಳೀಯ ಅರಣ್ಯ ಇಲಾಖೆಗೆ ಮಾಹಿತಿ ನೀಡಿ ಟ್ಯಾಂಕರ್‌ ಅನ್ನು ಅರಣ್ಯ ಇಲಾಖೆಗೆ ಒಪ್ಪಿಸಿದೆವು. ನಮ್ಮ ಗ್ರಾಮಸ್ಥರು ಯಾವುದೇ ಆಮಿಷಗಳಿಗೆ ಒಳಗಾಗಿದೆ ಎಲ್ಲರ ಶ್ರೇಯಸ್ಸಿಗಾಗಿ ಹೋರಾಟಕ್ಕೆ ಮುಂದಾಗಿದ್ದೇವೆ. ನಮಗೆ ಸಹಕಾರ ನೀಡಿದ ಅರಣ್ಯಾಧಿಕಾರಿಗಳಿಗೆ, ಪೊಲೀಸ್ ಇಲಾಖೆ ಹಾಗೂ ಎಲ್ಲರಿಗಿಂತ ಮೊದಲೇ ಈ ಭಯಾನಕ ಸುದ್ದಿಯನ್ನು ವರದಿ ಮಾಡಿ ಎಲ್ಲರ ಕಣ್ತೆರೆಸಿದ ಸಿಕೆನ್ಯೂಸ್ ನೌ ವೆಬ್‌ತಾಣಕ್ಕೆ ಧನ್ಯವಾದಗಳು.

ಧನಂಜಯ್, ಚಿಮುಕಲಹಳ್ಳಿ ಗ್ರಾಮಸ್ಥ


ಎಲ್ಲರಿಗಿಂತ ಮೊದಲೇ ಸುದ್ದಿ ಮಾಡಿದ ಸಿಕೆನ್ಯೂಸ್‌ ನೌ!!

ಈ ಸುದ್ದಿಗಳನ್ನು ಓದಲು ಕೆಳಗಿನ ಲಿಂಕ್‌ʼಗಳನ್ನು ಕ್ಲಿಕ್‌ ಮಾಡಿ..

ಅರಣ್ಯದಲ್ಲಿ ತಪ್ಪಿದ ಮಹಾ ದುರಂತ!!

ಕೆರೆಗೆ ವಿಷಪ್ರಾಷಣ ಮಾಡಿದವರ ವಿರುದ್ಧ ಕ್ರಿಮಿನಲ್ ಕೇಸ್
Tags: Chemical wastechikkaballapuragudibandekarnatakakarnataka state pollution control boradPoisoning to the lakevatadahosahalli lakeWater pollution
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಒಂದು ಹಳ್ಳಿಗೆ ಒಬ್ಬನೇ ಗಣೇಶ

ಒಂದು ಹಳ್ಳಿಗೆ ಒಬ್ಬನೇ ಗಣೇಶ

Leave a Reply Cancel reply

Your email address will not be published. Required fields are marked *

Recommended

ಬೆಳಗಾವಿಯಲ್ಲಿ ಯಾವ ಸಮಸ್ಯೆಯೂ ಇಲ್ಲ: ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿಯಲ್ಲಿ ಯಾವ ಸಮಸ್ಯೆಯೂ ಇಲ್ಲ: ಲಕ್ಷ್ಮೀ ಹೆಬ್ಬಾಳಕರ್

2 years ago
ಜೆಡಿಎಸ್ ನಿಂದ ಮಾಜಿ ಸಂಸದ ಎಲ್.ಅರ್. ಶಿವರಾಮೇಗೌಡ ಉಚ್ಚಾಟನೆ

ಜೆಡಿಎಸ್ ನಿಂದ ಮಾಜಿ ಸಂಸದ ಎಲ್.ಅರ್. ಶಿವರಾಮೇಗೌಡ ಉಚ್ಚಾಟನೆ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ