• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಬಾಕಿ ಶುಲ್ಕದ ನೆಪ, ಟೀಸಿ ಸಿಗದೇ ಮಕ್ಕಳ ಸ್ಥಿತಿ ಅಯ್ಯೋ ಪಾಪ!

cknewsnow desk by cknewsnow desk
September 14, 2021
in CHIKKABALLAPUR, STATE
Reading Time: 2 mins read
0
ಬಾಕಿ ಶುಲ್ಕದ ನೆಪ, ಟೀಸಿ ಸಿಗದೇ ಮಕ್ಕಳ ಸ್ಥಿತಿ ಅಯ್ಯೋ ಪಾಪ!
1.2k
VIEWS
FacebookTwitterWhatsuplinkedinEmail

ಬಾಗೇಪಲ್ಲಿ ಶಾಲೆಯಲ್ಲಿ ನಿಲ್ಲದ ಪೋಷಕರು, ಮಕ್ಕಳ ಶೋಷಣೆ

by GS Bharath Gudibande

ಬಾಗೇಪಲ್ಲಿ: ಕೋವಿಡ್ ಮಾರಿಯಿಂದ ಆರ್ಥಿಕವಾಗಿ ಕಂಗೆಟ್ಟಿರುವ ಪೋಷಕರ ಮೇಲೆ ಬರೆಯ ಮೇಲೆ ಬರೆ ಎಳೆಯುತ್ತಿರುವ ಖಾಸಗಿ ಶಾಲೆಗಳು, ಮತ್ತೂ ತಮ್ಮ ಚಾಳಿಯನ್ನು ಮುಂದುವರಿಸಿವೆ.

ಶುಲ್ಕ ಪಾವತಿ ಮಾಡಲಾಗದ ಪೋಷಕರು ಜೀವನ ನಡೆಸುವುದೇ ದುಸ್ತರ ಎನ್ನುವ ದುಃಸ್ಥಿತಿ ಇರುವುದು ಒಂದೆಡೆಯಾದರೆ, ಅವರ ಮಕ್ಕಳನ್ನು ಶುಲ್ಕದ ನೆಪದಲ್ಲಿ ಖಾಸಗಿ ಶಾಲೆಗಳು ಶೋಷಣೆ ಮಾಡಲಾಗುತ್ತಿದೆ.

ಬಾಗೇಪಲ್ಲಿ ತಾಲೂಕಿನ ಮಿಟ್ಟೇಮರಿ ಹೋಬಳಿಯ ಯಲ್ಲಂಪಲ್ಲಿಯ ಶ್ರೀ ಶಾರದ ಮಹಿಳಾ ಇಂಗ್ಲೀಷ್ ವಿದ್ಯಾಸಂಸ್ಥೆ ವಿದ್ಯಾರ್ಥಿಯೊಬ್ಬರಿಗೆ ಬಾಕಿ ಶುಲ್ಕ ಪಾವತಿಸಲು ಸತಾಯಿಸುತ್ತಿದ್ದಾರೆ ಎಂದು ವಿದ್ಯಾರ್ಥಿ ಪೋಷಕರು ಹಾಗೂ ಸಂಬಂಧಿಕರು ಸಿಕೆನ್ಯೂಸ್‌ ನೌ ಬಳಿ ಅಳಲು ತೋಡಿಕೊಂಡಿದ್ದಾರೆ.

ಬಾಕಿ ಶುಲ್ಕ ಕಟ್ಟಿದರೆ ಮಾತ್ರ ಟೀಸಿ

ಉತ್ತಮ ಶಿಕ್ಷಣದ ಆಸೆಯಿಂದ ಪೋಷಕರು ತಮ್ಮ ಮಕ್ಕಳನ್ನು ಆಂಗ್ಲ ಭಾಷೆಯಲ್ಲಿ ವಿದ್ಯಾಭ್ಯಾಸ ಮಾಡಿಸಲು ಖಾಸಗೀ ಶಾಲೆಗಳಲ್ಲಿ ದಾಖಲು ಮಾಡುವುದೇ ತಪ್ಪು ಅನಿಸುತ್ತದೆ. ಶಾಲೆಗೆ ಸೇರಿಸಿಕೊಳ್ಳುವಾಗ ಇರುವ ಮುತುವರ್ಜಿ, ಟೀಸಿ (ವರ್ಗಾವಣೆ ಪತ್ರ) ಕೊಡುವಾಗ ಇರುವುದಿಲ್ಲ ಎಂದು ಆ ವಿದ್ಯಾರ್ಥಿಯ ಪೋಷಕರು ಬೇಸರ ವ್ಯಕ್ತಪಡಿಸಿದ್ದಾರೆ.

  • ಜಿ.ಎನ್.ನವೀನ್

ಈ ದುಬಾರಿ ಶುಲ್ಕ ಪಾವತಿಸಲಾಗದೇ ಖಾಸಗೀ ಶಾಲೆಗಳನ್ನು ತೊರೆದು ಸರಕಾರಿ ಶಾಲೆಗಳಿಗೆ ಸೇರಬಯಸುವ ಮಕ್ಕಳ ಟೀಸಿ ಕೊಡದೇ ಬಾಕಿ ಶುಲ್ಕ ಪಾವತಿಸುವಂತೆ ಪೀಡಿಸುತ್ತಿರುವ ಘಟನೆ ಬಾಗೇಪಲ್ಲಿ ತಾಲೂಕಿನ ಯಲಂಪಲ್ಲಿ ಶಾಲೆಯಲ್ಲಿ ಬೆಳಕಿಗೆ ಬಂದಿದ್ದು, ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಜಯಕರ್ನಾಟಕ ಸಂಘಟನೆಯ ಜಿಲ್ಲಾ ಯುವಾಧ್ಯಕ್ಷ ಜಿ.ಎನ್.ನವೀನ್ ಒತ್ತಾಯ ಮಾಡಿದ್ದಾರೆ.

ಕೋವಿಡ್‌ ಕಾರಣಕ್ಕೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಪೋಷಕರು ಈಗ ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಇದರಿಂದ ಬೆದರಿರುವ  ಖಾಸಗೀ ಶಾಲೆಗಳು ಟೀಸಿ ಕೊಡಲು ಸತಾಯಿಸುತ್ತಿವೆ. ಪೂರ್ಣ ಶುಲ್ಕ ಪಾವತಿ ಮಾಡಿರುವ ಮಕ್ಕಳ ಟೀಸಿಗಳನ್ನೂ ಮೀನಾಮೇಷ ಎಣಿಸಿ ಕೊಡುತ್ತಿರುವ ಖಾಸಗಿ ಶಾಲೆಗಳು, ಇನ್ನು ಕೆಲ ವಿದ್ಯಾರ್ಥಿಗಳು ಶುಲ್ಕ ಬಾಕಿ ಇಟ್ಟುಕೊಂಡಿರುವ ಕಾರಣಕ್ಕೆ ಅವರಿಗಂತೂ ಟೀಸಿ ಕೊಡಲು ನಿರಾಕರಿಸಲಾಗುತ್ತಿದೆ.  ಮಾತ್ರವಲ್ಲದೆ, ಬಾಕಿ ಶುಲ್ಕ ಪಾವತಿ ಮಾಡಿದರೆ ಮಾತ್ರ ಕೊಡ್ತಿವಿ ಎಂದು ಹೇಳುತ್ತಿದ್ದಾರೆಂದು ಅವರು ತಿಳಿಸಿದ್ದಾರೆ.

ಅಧಿಕಾರಿಗಳು ಮೌನ! ಯಾಕೆ..?

ಇಂತಹ ಕಠಿಣ ಸಮಯದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಕಷ್ಟಕ್ಕೆ ಸ್ಪಂದಿಸಬೇಕಾದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಂಬಂಧ ಪಟ್ಟ ಅಧಿಕಾರಿಗಳು ಮೌನವಾಗಿರುವುದು ಯಾಕೆ? ಎಂಬ ಎಲ್ಲರನ್ನೂ ಕಾಡುತ್ತಿದೆ. ಖಾಸಗೀ ಶಾಲೆಗಳು ಹದ್ದುಮೀರಿ ವರ್ತಿಸುತ್ತಿದ್ದರೂ, ಪೋಷಕರು, ವಿವಿಧ ಸಂಘಟನೆಗಳು ಪದೇ ಪದೆ ದೂರು ನೀಡುತ್ತಿದ್ದರೂ ಕ್ರಮ ಕೈಗೊಳ್ಳುತ್ತಿಲ್ಲ, ಯಾಕೆ? ಎಂದು ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ.

  • ಕೆ.ಎಂ. ಜಯರಾಮರೆಡ್ಡಿ

ಇದೇ ವೇಳೆ, ಸಿಕೆನ್ಯೂಸ್‌ ನೌ ಜತೆ ಮಾತನಾಡಿದ ಚಿಕ್ಕಬಳ್ಳಾಪುರ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ (ಆಡಳಿತ) ಕೆ.ಎಂ. ಜಯರಾಮರೆಡ್ಡಿ ಅವರು, ಈ ಬಗ್ಗೆ ತಮಗೂ ಸಾಕಷ್ಟು ದೂರುಗಳು ಬಂದಿದ್ದು, ಪೋಷಕರು ಮತ್ತು ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳ ಮೇಲೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ನಮ್ಮ ತಮ್ಮನ ಮಗ ನಾಗೇಂದ್ರ ಕುಮಾರ್ ಯಲಂಪಲ್ಲಿಯ ಶ್ರೀ ಶಾರದಾ ಮಹಿಳಾ ಇಂಗ್ಲೀಷ್ ವಿದ್ಯಾಸಂಸ್ಥೆಯ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದಾಗ ಶಾಲೆಯ ಬಸ್ಸಿನಲ್ಲಿ ಮನೆಗೆ ಬರುವಾಗ ಬಸ್ಸಿನ ಟೈಯರ್ ಪಂಕ್ಚರ್ ಆದಾಗ ಮೊಳೆಯೊಂದು ಕಾಲಿಗೆ ಚುಚ್ಚಿಕೊಂಡು ದೊಡ್ಡ ಗಾಯವಾಗಿತ್ತು. ಅವನ ಚಿಕಿತ್ಸೆಗೆ ಸುಮಾರು 25 ಸಾವಿರ ರೂ. ಖರ್ಚಾಗಿದೆ. ಶಾಲೆಗೆ ಎರಡು ತಿಂಗಳು ಹೋಗಿಲ್ಲ, ಆದರೂ ಶಾಲೆಯವರು ವಿದ್ಯಾರ್ಥಿ ಏಕೆ ಶಾಲೆ ಬಂದಿಲ್ಲ ಎಂದು  ವಿಚಾರಿಸಿಲ್ಲ. ಬಳಿಕ ಲಾಕ್ ಡೌನ್ ಬಂದ ಕಾರಣಕ್ಕೆ ಬಾಲಕ ಶಾಲೆಗೆ ಹೋಗಿಲ್ಲ, ಈಗ ಟೀಸಿ ಕೇಳಿದ್ರೆ ಬಾಕಿ ಶುಲ್ಕ ಪಾವತಿಸಿ ಅಂತ ನಮ್ಮನ್ನು ಅಲೆದಾಡಿಸಿಕೊಂಡು ಹಣ ಕಟ್ಟುವಂತೆ ಪೀಡಿಸುತ್ತಿದ್ದಾರೆ.

ಕಾಂತಮ್ಮ, ವಿದ್ಯಾರ್ಥಿಯ ಪೋಷಕರು ಹಾಗೂ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯೆ

Tags: bagepallichikkaballapuracovid19gudibandekarnatakaprivate schoolsschool fee
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಎತ್ತಿನಹೊಳೆಯಲ್ಲಿ ಮತ್ತಷ್ಟು ಎತ್ತುವಳಿ! ರಾಷ್ಟ್ರೀಯ ಯೋಜನೆ ಸ್ಟೇಟಸ್ ಎಂಬ ಸ್ಮಾರ್ಟ್ ಐಡಿಯಾ!!

ನೀರಿನ ಗ್ಯಾರಂಟಿಯೇ ಇಲ್ಲದ ಎತ್ತಿಹೊಳೆಗೆ ಹಣದ ಹೊಳೆ

Leave a Reply Cancel reply

Your email address will not be published. Required fields are marked *

Recommended

11 ಸಲ ಕಾಲ್‌ ಮಾಡಿದ  ಮಾಜಿ ಸಿಎಂ! ಜೆಡಿಎಸ್‌ ಶಾಸಕರ ಬ್ರೈನ್‌ವಾಶ್!!

ಇಲ್ಲಿ ಮೇಕೆದಾಟು ಹೋರಾಟ, ತಮಿಳುನಾಡಿನಲ್ಲಿ ಡಿಎಂಕೆ ಜತೆ ಒಡನಾಟ

3 years ago
ನನ್ನ ಹೇಳಿಕೆಯಿಂದ ತಾಯಂದಿರಿಗೆ ನೋವಾಗಿದ್ದರೆ  ವಿಷಾದಿಸುತ್ತೇನೆ ಎಂದ  ಹೆಚ್.ಡಿ.ಕುಮಾರಸ್ವಾಮಿ

ನನ್ನ ಹೇಳಿಕೆಯಿಂದ ತಾಯಂದಿರಿಗೆ ನೋವಾಗಿದ್ದರೆ ವಿಷಾದಿಸುತ್ತೇನೆ ಎಂದ ಹೆಚ್.ಡಿ.ಕುಮಾರಸ್ವಾಮಿ

1 year ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ