• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಇಲ್ಲಿದೆ ನೋಡಿ ಕರ್ನಾಟಕದ ಅತ್ಯಂತ ಹಿಂದುಳಿದ ಹಳ್ಳಿ!

cknewsnow desk by cknewsnow desk
October 2, 2021
in EDITORS'S PICKS, STATE
Reading Time: 2 mins read
0
ಇಲ್ಲಿದೆ ನೋಡಿ ಕರ್ನಾಟಕದ ಅತ್ಯಂತ ಹಿಂದುಳಿದ ಹಳ್ಳಿ!
1.4k
VIEWS
FacebookTwitterWhatsuplinkedinEmail

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದ ಹೊತ್ತಿನಲ್ಲೂ ಗುಡಿಸಲುಗಳ ಹಳ್ಳಿ

  • ಅರಣ್ಯ ಪಕ್ಕದ ಹಳ್ಳಿಗರ ಆರ್ತನಾದ
  • ಗುಡಿಸಲು ಮುಕ್ತ ಭಾರತ ಕಲ್ಪನೆ ಇಲ್ಲಿ ಸುಳ್ಳು
  • ಮನೆಗಳಿಲ್ಲ, ಕುಡಿಯಲು ಶುದ್ಧ ನೀರಿಲ್ಲ
  • ಜನರಿಗೆ ಅರೋಗ್ಯವಿಲ್ಲ, ಕಷ್ಟಗಳೇ ಎಲ್ಲ
  • ಶಾಸಕರು, ಸಂಸದರು, ಉಸ್ತುವಾರಿ ಸಚಿವರ ಸುಳಿವಿಲ್ಲ

by GS Bharath Gudibande

ಗುಡಿಬಂಡೆ: ಹಳ್ಳಿ, ಪಟ್ಟಣ, ರಾಜ್ಯ ಮತ್ತು ದೇಶವನ್ನು ಗುಡಿಸಲು ಮುಕ್ತ ಮಾಡಲು ರಾಜ್ಯ ಹಾಗೂ ಕೇಂದ್ರ ಸರಕಾರಗಳು ಹಲವು ಯೋಜನೆಗಳನ್ನು ಜಾರಿಗೆ ತಂದರೂ ಇಂದಿಗೂ ಗುಡಿಸಲು ನಿರ್ಮೂಲನೆ ಮಾಡಲು ಸಾಧ್ಯವಾಗಿಲ್ಲ. ಬಡತನ, ನಿರುದ್ಯೋಗ ಮುಂತಾದ ಸಮಸ್ಯೆಗಳನ್ನು ಸಾರ್ವಜನಿಕರು ಇಂದಿಗೂ ಎದುರಿಸುತ್ತಿದ್ದಾರೆ.

ಗುಡಿಬಂಡೆ ತಾಲೂಕಿನ ಉಲ್ಲೋಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಸೋಮಲಾಪುರ ಗ್ರಾಮ ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದ ಹಳ್ಳಿ ಎಂಬ ಕುಖ್ಯಾತಿಗೀಡಾಗಿದೆ.

ದೇಶ ಅಭಿವೃದ್ಧಿಯತ್ತ, ಹಳ್ಳಿಗಳು ಅವನತಿಯತ್ತ

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷವಾಗಿದೆ. ಅಮೃತ ಮಹೋತ್ಸವದ ವೇಳೆಯಲ್ಲೂ ನಿರುದ್ಯೋಗ, ಅನಕ್ಷರತೆ, ಬಡತನ, ಗುಡಿಸಲು ಮನೆಗಳು ಹೋಗಿಲ್ಲ. ಒಂದೆಡೆ ದೇಶ ಅಭಿವೃದ್ಧಿಯ ಕಡೆ ಹೋಗುತ್ತಿದ್ದರೆ, ಇನ್ನೊಂದೆಡೆ ರೈತರಿಗೆ ಕನಿಷ್ಠ ಗೌರವವಿಲ್ಲದೆ ಹಳ್ಳಿಗಳು ಅವನತಿಯತ್ತ ಸಾಗುತ್ತಿವೆ ಎಂದು ಸೋಮಲಾಪುರ ಗ್ರಾಮಸ್ಥರು ಅಳಲು ತೋಡಿಕೊಂಡರು.

ಸಿಕೆನ್ಯೂಸ್‌ ನೌ ಜತೆ ತಮ್ಮ ದುಃಖ ತೋಡಿಕೊಂಡ ಸೋಮಲಾಪುರ ಗ್ರಾಮಸ್ಥರು; ನಗರ, ಪಟ್ಟಣಗಳನ್ನು ಸರಕಾರ ಅಭಿವೃದ್ಧಿ ಮಾಡುತ್ತಿದೆ. ಹಳ್ಳಿಗಳ ಬಗ್ಗೆ ಮಾತ್ರ ಅನಾದರ ತೋರುತ್ತಿದೆ. ಇದು ನಿಜಕ್ಕೂ ಅನ್ಯಾಯ. ಮತ ಕೇಳುವ ಸಮಯದಲ್ಲಿ ಮಾತ್ರ ನಮಗೆ ಭರವಸೆಗಳ ಮಹಾಪೂರವೇ ಹರಿಯುತ್ತಿದೆ. ಆದರೆ, ನಮಗೆ ಸಿಗುತ್ತಿರುವುದು ಶೂನ್ಯಫಲ ಎಂದು ಕಂಬನಿ ಮಿಡಿದರು.

ತಾಲೂಕಿನಲ್ಲಿ 100ಕ್ಕೂ ಹೆಚ್ಚು ಗುಡಿಸಲು ಮನೆಗಳು

ತಾಲೂಕಿನಲ್ಲಿ ನೂರಕ್ಕೂ ಹೆಚ್ಚು ಗುಡಿಸಲು ಮನೆಗಳನ್ನು ಈಗಲೂ ಕಾಣಬಹುದು, ಮಳೆ, ಗಾಳಿಗೆ ತಡೆಯದ ಹಾಗೂ ಸರಕಾರದಿಂದ ಕನಿಷ್ಠ ಸೌಲಭ್ಯಗಳನ್ನೂ ಕಾಣದ ನೂರಾರು ಕುಟುಂಬಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಕೇವಲ ಚುನಾವಣೆ ಸಂದರ್ಭ ಹೊರತುಪಡಿಸಿ ಬೇರೆ ಸಮಯದಲ್ಲಿ ಯಾವ ನಾಯಕನೂ ನಮ್ಮ ಹಳ್ಳಿಗೆ ಭೇಟಿ ನೀಡಿ ಕಷ್ಟ-ಸುಖ ವಿಚಾರಿಸುತ್ತಿಲ್ಲ ಎಂದು ಸೋಮಲಾಪುರ  ಗ್ರಾಮಸ್ಥರು ಹೇಳುತ್ತಾರೆ.

ಸಿಗದ ವಸತಿ ಸೌಲಭ್ಯ

ರಾಜ್ಯ, ಕೇಂದ್ರ ಸರಕಾರಗಳು ಗುಡಿಸಲು ಮುಕ್ತ ಮಾಡಲು ಹಲವು ವಸತಿ ಯೋಜನೆಗಳನ್ನು ಜಾರಿ ಮಾಡಿವೆ. ಮುಖ್ಯಮಂತ್ರಿ ಆವಾಸ್‌ ಯೋಜನೆ, ಪ್ರಧಾನಮಂತ್ರಿ ಆವಾಜ್‌ ಯೋಜನೆ ಸೇರಿದಂತೆ ಹತ್ತು ಹಲವು ಯೋಜನೆಗಳು ಇವೆ. ಆದರೆ, ಈ ಯೋಜನೆಗಳಲ್ಲಿ ಯಾವು ಕೂಡ ಸೋಮಲಾಪುರ ತಲುಪಿಲ್ಲ. ನಮ್ಮ ಗ್ರಾಮದ ಮೇಲೆ ಈ ಅನಾದರ ಏಕೆ? ಇದಕ್ಕೆ ಸಂಬಂಧಿತ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉತ್ತರ ನೀಡಬೇಕಿದೆ ಎಂದು ಹಳ್ಳಿಗರು ಒತ್ತಾಯ ಮಾಡುತ್ತಾರೆ.

ಈ ಹಳ್ಳಿಯಲ್ಲಿ 24 ಕುಟುಂಬಗಳಿವೆ. ಆ ಪೈಕಿ ಹತ್ತಕ್ಕೂ ಹೆಚ್ಚು ಕುಟುಂಬಗಳು ಕುಡಿಸಲುಗಳಲ್ಲೇ ವಾಸ ಮಾಡುತ್ತಿವೆ. ಯಾವ ಮೂಲಸೌಕರ್ಯವೂ ಇಲ್ಲ. ಜನರಿಗೆ ಬಯಲೇ ಶೌಚಾಲಯ. ಇನ್ನು ಕೆಲವರಿಗೆ ಕಾಟಾಚರಕ್ಕೆ ಮನೆ ಕಟ್ಟಿಸಿಕೊಡಲಾಗಿದೆ, ಅದರ ಗುಣಮಟ್ಟವಂತೂ ದೇವರಿಗೆ ಪ್ರೀತಿ. ಗುಡಿಸಲಿಗೂ ಅದಕ್ಕೂ ಅಂಥ ವ್ಯತ್ಯಾಸವೇನೂ ಇಲ್ಲ. ಶೌಚಾಲಯ ನಿರ್ಮಾಣವಂತೂ ಪೂರ್ಣ ಅವೈಜ್ಞಾನಿಕ. ಇನ್ನು ಬಯಲು ಶೌಚಕ್ಕೆ ಕಾಡು ಪ್ರಾಣಿಗಳ ಭೀತಿ ಬೇರೆ. ಇಲ್ಲಿನ ಜನರ ಬವಣೆ ಕರುಣಾಜನಕವಾಗಿದೆ.

ಸೋಮಲಾಪುರ ಸಮಸ್ಯೆಗಳ ಆಗರ

ಸೋಮಲಾಪುರ ಗ್ರಾಮದಲ್ಲಿ ಗುಡಿಸಲು ಮನೆಗಳೇ ಹೆಚ್ಚು. ಬಸ್ ಸಂಪರ್ಕ ಇಲ್ಲ. ಯಾವ ಮನೆಗೂ ನೀರಿನ ಸಂಪರ್ಕವೂ ಇಲ್ಲ. ಚರಂಡಿ, ಸ್ವಚ್ಚತೆ ಮರೀಚಿಕೆ. ರೋಗ ರುಜಿನಗಳ ಜತೆ ಜನ ಜೀವನ ಸಾಗಿಸುವಂಥ ಸ್ಥಿತಿ. ಹಳ್ಳಿಗೆ ಹೆಜ್ಜೆ ಇಟ್ಟ ಕೂಡಲೇ ಗುಡಿಸಲು ಮನೆಗಳು ಕಣ್ಣಿಗೆ ರಾಚುತ್ತವೆ. ಅನೇಕ ವರ್ಷಗಳ ಹಿಂದೆ ಹಾಕಿದ ಸಿಮೆಂಟ್‌ ಟ್ಯಾಂಕ್‌ʼನಿಂದ ಮಹಿಳೆಯರು ನೀರು ತುಂಬಿಸಿಕೊಳ್ಳುತ್ತಿದ್ದಾರೆ. ಆ ಟ್ಯಾಂಕ್‌ ಒಳಗೆ, ಹೊರಗೆ ಪಾಚಿ ಕಟ್ಟಿದೆ.

ಜನ ಪ್ರತಿನಿಧಿಗಳ ನಿರ್ಲಕ್ಷ್ಯ

ಇನ್ನು, ಈ ಹಳ್ಳಿಗರಿಂದ ಮತ ಪಡೆದು ಗೆದ್ದ ಸ್ಥಳೀಯ ಜನಪ್ರತಿನಿಧಿಗಳು ಬಿಡಿಗಾಸಿನ ಕೆಲಸ ಮಾಡಿಲ್ಲ. ಶಾಸಕ ಎಸ್.ಎಸ್.‌ಸುಬ್ಬಾರೆಡ್ಡಿ ಅವರು ಸೋಮಲಾಪುರ ಗ್ರಾಮದ ಕಡೆ ಕಣ್ಣೇ ಹಾಕಿಲ್ಲ. ಇನ್ನು, ಚಿಕ್ಕಬಳ್ಳಾಪುರ ಸಂಸದ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎನ್.‌ಬಚ್ಚೇಗೌಡರು ಗೆದ್ದು ಲೋಕಸಭೆಗೆ ಹೋದ ಮೇಲೆ ಸೋಮಲಾಪುರ ಏಕೆ? ಗುಡಿಬಂಡೆಯತ್ತ ಕೂಡ ಸುಳಿದಿಲ್ಲ. ಚಿಕ್ಕಬಳ್ಳಾಪುರಕ್ಕೆ ಬಂದು ಅಲ್ಲಿಂದಲೇ ವಾಪಸ್‌ ಹೋಗುತ್ತಾರೆ. ಈ ಬಗ್ಗೆ ಗುಡಿಬಂಡೆ ತಾಲೂಕಿನಲ್ಲಿ ತೀವ್ರ ಆಕ್ರೋಶವಿದೆ. ಕಾಯಿಲೆ-ಕಸಾಲೆಗಳಿಂದ ಬಳಲುತ್ತಿರುವ ಈ ಹಳ್ಳಿಯ ದುಃಸ್ಥಿತಿ ಜಿಲ್ಲಾ ಉಸ್ತುವಾರಿಯೂ ಆಗಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರ ಗಮನಕ್ಕೂ ಹೋಗಿಲ್ಲ.

ಒಟ್ಟಾರೆ, ಜಾಗತಿಕ ಶಕ್ತಿಯಾಗಿ ವೇಗವಾಗಿ ಬೆಳೆಯುತ್ತಿರುವ ಭಾರತಕ್ಕೆ ಸೋಮಲಾಪುರದ ಕರುಣಾಜನಕ ಕಥೆ ಕಪ್ಪುಚುಕ್ಕೆಯಾಗಿ ಪರಿಣಮಿಸಿದೆ. ಇನ್ನಾದರೂ ಜನ ಪ್ರತಿನಿಧಿಗಳು ಮತ್ತು ಅಧಿಕಾರಿಗಳ ಕಣ್ಣಿಗೆ ಈ ಹಳ್ಳಿ ಬೀಳಲಿ ಎಂಬುದೇ ಸಿಕೆನ್ಯೂಸ್‌ ನೌ ಕಳಕಳಿ.

ಸೋಮಲಾಪುರ ಗ್ರಾಮ ಕರ್ನಾಟಕದ ಅತ್ಯಂತ ಹಿಂದುಳಿದ ಹಳ್ಳಿ ಎಂದರೆ ತಪ್ಪಲ್ಲ. ಮೀಸಲು ಅರಣ್ಯ ಪ್ರದೇಶದ ಪಕ್ಕದಲ್ಲೇ ಇರುವುದರಿಂದ ಜನರು ಕೆಲ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ,  ಕೊರೋನಾ ಸಂದರ್ಭದಲ್ಲಿ ನಾನು ಈ ಗ್ರಾಮದ ಪ್ರತಿ ಮನೆಗೆ ಆಹಾರದ ಕಿಟ್ ತಲುಪಿಸಿದ್ದೇನೆ. ಹಳ್ಳಿಯ ಜನರು ತುಂಬಾ ಕಷ್ಟದ ಜೀವನ ನಡೆಸುತ್ತಿದ್ದಾರೆ. ಇನ್ನಾದರೂ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಈ ಬಗ್ಗೆ ಗಮನಹರಿಸಿ ಗ್ರಾಮಸ್ಥರ ಕಷ್ಟಕ್ಕೆ ಸ್ಪಂದಿಸಬೇಕಾಗಿದೆ.

ಆಶಾ ಜಯಪ್ಪ, ಮಾಜಿ ಅಧ್ಯಕ್ಷೆ, ಗುಡಿಬಂಡೆ ತಾಲೂಕು ಪಂಚಾಯತಿ

ಈ ಕ್ಷೇತ್ರದ ಜನರು ಜನ ಪ್ರತಿನಿಧಿಗಳಿಗೆ ಮತ ಹಾಕಿದ್ದಾರೆ. ಪ್ರಧಾನಿಗಳು ಮಾತಿನಂತೆ ಲೋಕಸಭಾ ಸದಸ್ಯರು ಸೋಮಲಾಪುರ ಗ್ರಾಮವನ್ನು ದತ್ತು ಪಡೆದು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಮುಂದಾಗಬೇಕು. ಕೇವಲ ಚುನಾವಣಾ ಪ್ರಚಾರದಲ್ಲಿ ಮತದಾರರಿಗೆ ಆಮಿಷಗಳನ್ನು ನೀಡುತ್ತಾರೆ.  ಆದರೆ, ಯಾವುದು ಮಾಡದಿರುವುದು ನೋವಿನ ಸಂಗತಿ.

ಸೋಮಲಾಪುರ ಗ್ರಾಮಸ್ಥರು

ತಾಲೂಕಿನ ಸೋಮಲಾಪುರ ಗ್ರಾಮಕ್ಕೆ ಬೇಟಿ ನೀಡಿದ್ದೇನೆ. ಸರಕಾರದಿಂದ ಬಂದಿದ್ದ ಮನೆಗಳನ್ನು ಕಟ್ಟಿಸಿದ್ದೇವೆ ಹಾಗೂ ಅದರಲ್ಲಿ ವಾಸ ಮಾಡುತ್ತಿದ್ದಾರೆ. ಇನ್ನೂ ಕೆಲ ಗುಡಿಸಲು ಮನೆಗಳಿದ್ದು ಅವರಿಗೆ ನರೇಗಾ ಯೋಜನೆಯಡಿ ಮನೆಗಳನ್ನು ನಿರ್ಮಿಸಲು ವ್ಯವಸ್ಥೆ ಮಾಡುತ್ತೇವೆ. ಸ್ವಚ್ಚತೆ ಮತ್ತು ನೀರಿನ ವ್ಯವಸ್ಥೆಯನ್ನು ಮಾಡಲು ಉಲ್ಲೋಡು ಪಿಡಿಓಗೆ ಸೂಚಿಸುತ್ತೇನೆ‌.

ರವೀಂದ್ರ, ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ

Tags: chikkaballapuragudibandeIndia's most backward villageIndian villageskarnatakarural development
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಸಿಂಧಗಿ: 33 ವರ್ಷದ ನಾಜಿಯಾ ಶಕೀಲಾ ಅಂಗಡಿ ಜೆಡಿಎಸ್ ಅಭ್ಯರ್ಥಿ

ಸಿಂಧಗಿ: 33 ವರ್ಷದ ನಾಜಿಯಾ ಶಕೀಲಾ ಅಂಗಡಿ ಜೆಡಿಎಸ್ ಅಭ್ಯರ್ಥಿ

Leave a Reply Cancel reply

Your email address will not be published. Required fields are marked *

Recommended

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ, 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ, ರೋಪ್ ವೇ ಕನಸು ನನಸಾಗಲಿದೆ ಎಂದ ಸಚಿವ ಡಾ.ಕೆ.ಸುಧಾಕರ್

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ, 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ, ರೋಪ್ ವೇ ಕನಸು ನನಸಾಗಲಿದೆ ಎಂದ ಸಚಿವ ಡಾ.ಕೆ.ಸುಧಾಕರ್

4 years ago
ಒಲವಿನ ಅಲೆಗಳು: ಒಲವೇ ಇಲ್ಲದ ಅಲೆಯ ಎದುರು ಕಾವ್ಯ ಹುಟ್ಟುತ್ತದೆಂಬ ಹುಸಿ ನಿರೀಕ್ಷೆ

ಒಲವಿನ ಅಲೆಗಳು: ಒಲವೇ ಇಲ್ಲದ ಅಲೆಯ ಎದುರು ಕಾವ್ಯ ಹುಟ್ಟುತ್ತದೆಂಬ ಹುಸಿ ನಿರೀಕ್ಷೆ

5 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ