• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಅಫ್ಘಾನಿಸ್ತಾನದಿಂದ‌ ಭಾರತಕ್ಕೆ ಡ್ರಗ್ಸ್!

cknewsnow desk by cknewsnow desk
October 1, 2021
in NATION, POLITICS, STATE
Reading Time: 1 min read
0
ಅಫ್ಘಾನಿಸ್ತಾನದಿಂದ‌ ಭಾರತಕ್ಕೆ ಡ್ರಗ್ಸ್!
922
VIEWS
FacebookTwitterWhatsuplinkedinEmail

ಗುಜರಾತಿನ ಅದಾನಿ ಮುಂದ್ರಾ ಬಂದರಿನಲ್ಲಿ ಡ್ರಗ್ಸ್ ಪತ್ತೆ ಪ್ರರಕರಣದಲ್ಲಿ ಸರ್ಕಾರದ ಮೌನ ಏಕೆ?: ಕಾಂಗ್ರೆಸ್

ಬೆಂಗಳೂರು: ‘ಅದಾನಿ ಮುಂದ್ರಾ ಅವರ ಬಂದರಲ್ಲಿ ಡ್ರಗ್ಸ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಬಿಜೆಪಿ ಸರ್ಕಾರ ಮೌನ ವಹಿಸಿರುವುದೇಕೆ? ಇದು ದೇಶದ ಭದ್ರತೆಗೆ ಅಪಾಯ ತರುವ ವಿಚಾರವಾಗಿದ್ದು, ಇದರ ಹಿಂದೆ ಯಾರಿದ್ದಾರೆ ಎಂದು ಪತ್ತೆ ಹಚ್ಚಲು ಹಾಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು’ ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಈ ವಿಚಾರವಾಗಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಎಐಸಿಸಿ ವಕ್ತಾರರಾದ ಸುಪ್ರಿಯಾ ಶ್ರೀನೇಟ್ ಅವರು, ‘ಅದಾನಿ ಮುಂದ್ರಾ ಬಂದರಿನಲ್ಲಿ ಈ ರೀತಿ ಡ್ರಗ್ಸ್ ಪತ್ತೆ ಪ್ರಕರಣ ಇದೇ ಮೊದಲ ಬಾರಿಯಲ್ಲ. ಈ ಹಿಂದೆಯೂ ಡ್ರಗ್ಸ್ ಪತ್ತೆಯಾಗಿದ್ದು, ಆದರೂ ಬಂದರು ನಡೆಸುತ್ತಿರುವ ಅದಾನಿ ಸಮೂಹದ ವಿಚಾರಣೆ ನಡೆಸಿಲ್ಲ ಯಾಕೆ?’ ಎಂದು ಪ್ರಶ್ನಿಸಿದರು.

‘ಕೆಲ ದಿನಗಳ ಹಿಂದೆ ಗುಜರಾತಿನ ಅದಾನಿ ಮುಂದ್ರಾ ಬಂದರಿನಲ್ಲಿ 3,000 ಕೆ.ಜಿ ಅಂದರೆ 21 ಸಾವಿರ ಕೋಟಿ ಮೌಲ್ಯದ ಡ್ರಗ್ಸ್ ಪತ್ತೆಯಾಗಿತ್ತು. ಕಳೆದ ಜೂನ್ ತಿಂಗಳಲ್ಲಿ 25,000 ಕೆ.ಜಿಯಷ್ಟು ಡ್ರಗ್ಸ್ ಬಂದಿದ್ದು, ಅದು ಈಗಾಗಲೇ ಮಾರುಕಟ್ಟೆಯಲ್ಲಿ ಸರಬರಾಜಾಗುತ್ತಿವೆ. ಇದನ್ನು ಸೆಮಿ ಕಟ್ ಟಾಲ್ಕಮ್ ಪೌಡರ್ ಎಂದು ಹೆಸರಿಸಲಾಗಿದ್ದು, ಈ ಡ್ರಗ್ಸ್ ಗಳು ತಾಲಿಬಾನ್ ಹಿಡಿತದಲ್ಲಿರುವ ಅಫ್ಘಾನಿಸ್ತಾನದಿಂದ ಆಶಿ ಟ್ರೇಡಿಂಗ್ ಕಂಪನಿ ಆಮದು ಮಾಡಿಕೊಂಡಿದೆ. ಇದು ದೇಶದ ಯುವಕರ ಭವಿಷ್ಯದ ವಿಷಯವಾಗಿದೆ. ಆದರೂ ಈ ವಿಚಾರವಾಗಿ ನರೇಂದ್ರ ಮೋದಿ ಅವರ ಸರ್ಕಾರವಾಗಲಿ, ದೇಶದ ಪ್ರಮುಖ ಮಾಧ್ಯಮಗಳಾಗಲಿ ಮಾತನಾಡುತ್ತಿಲ್ಲ’ ಎಂದು ತಿಳಿಸಿದರು.

‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಶಿ ಟ್ರೇಡಿಂಗ್ ಕಂಪನಿ ಮಾಲೀಕರಾದ ಸುಧಾಕರ್ ಮಚ್ವರಮ್ ಹಾಗೂ ಅವರ ಪತ್ನಿ ಗವಿಂದ ರಾಜು ವೈಶಾಲಿ ಅವರನ್ನು ಬಂಧಿಸಲಾಗಿದ್ದು, ಇಂತಹ ಸಣ್ಣ ಟ್ರೇಡಿಂಗ್ ಕಂಪನಿ ಇಷ್ಟು ದೊಡ್ಡ ಮೊತ್ತದ ಡ್ರಗ್ಸ್ ಆಮದು ಮಾಡಿಕೊಳ್ಳಲು ಸಾಧ್ಯವಿಲ್ಲ. ಇದರ ಹಿಂದೆ ಪ್ರಭಾವಿಗಳ ಕೈವಾಡದ ಶಂಕೆ ಇದ್ದು, ಅದು ಯಾರು ಎಂಬುದರ ಬಗ್ಗೆ ತನಿಖೆ ನಡೆದಿಲ್ಲ. ಜೂನ್ ತಿಂಗಳಲ್ಲಿ ಅಫ್ಘಾನಿಸ್ತಾನದ ಹಸನ್ ಹುಸೇನ್ ಲಿಮಿಟೆಡ್ ಕಂಪನಿ 25 ಸಾವಿರ ಕೆ.ಜಿ ಅಂದರೆ 1.75 ಲಕ್ಷ ಕೋಟಿಯಷ್ಟು ಮೊತ್ತದ ಹೆರಾಯಿನ್ ರಫ್ತು ಮಾಡಿದ್ದು, ಅದು ದೇಶದ ಮಾರುಕಟ್ಟೆಯಲ್ಲಿ ಸರಬರಾಜಾಗುತ್ತಿದೆ. ಇದು ದೇಶದ ಲಕ್ಷಾಂತರ ಯುವಕರು ಮಾದಕ ವ್ಯಸನಿಗಳಾಗುವ ಸ್ಥಿತಿ ನಿರ್ಮಾಣವಾಗಿದೆ. ಆ ಮೂಲಕ ಇದು ದೇಶದ ಭದ್ರತೆಗೆ ಮಾರಕವಾಗಲಿದೆ’ ಎಂದು ಅಭಿಪ್ರಾಯಪಟ್ಟರು.

‘ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಯುವಕರಿಗೆ ಕಳೆದ 7 ವರ್ಷಗಳಲ್ಲಿ 14 ಕೋಟಿ ಉದ್ಯೋಗ ನೀಡಬೇಕಾಗಿತ್ತು, ಆದರೆ ದೇಶದ ಯುವಕರು ಈ ಡ್ರಗ್ಸ್ ಜಾಲಕ್ಕೆ ಸಿಲುಕುವಂತೆ ಮಾಡಲಾಗಿದೆ. ಕಳೆದ ವರ್ಷ ಕೇವಲ 2 ಗ್ರಾಂ ಡ್ರಗ್ಸ್ ಸಿಕ್ಕ ಪ್ರಕರಣದಲ್ಲಿ ಇಡೀ ಹಿಂದಿ ಚಿತ್ರರಂಗವನ್ನೇ ಜಾಲಾಡಿದ್ದ ಮಾಧ್ಯಮಗಳು, ಈ ವರ್ಷ ದೇಶದ ಇತಿಹಾಸದಲ್ಲಿ ಅತಿ ದೊಡ್ಡ ಪ್ರಮಾಣದ ಡ್ರಗ್ಸ್ ಪತ್ತೆಯಾಗಿದ್ದರೂ ಯಾವುದೇ ಚರ್ಚೆ ನಡೆಸುತ್ತಿಲ್ಲ. ಡ್ರಗ್ಸ್ ನಿಯಂತ್ರಣ ಮಾಡಲು ನೇಮಕಗೊಂಡಿರುವ ಮಾದಕ ವಸ್ತುಗಳ ನಿಯಂತ್ರಣ ಮಂಡಳಿಯಲ್ಲಿ ಕಳೆದ 18 ತಿಂಗಳಿನಿಂದ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಿಸಿಲ್ಲ. ದೇಶಕ್ಕೆ ಡ್ರಗ್ಸ್ ಪ್ರವೇಶಿಸಲು ಗುಜರಾತಿನ ಬಂದರು ರಹದಾರಿಯಾಗಿದ್ದು, ಮೋದಿ ಸರ್ಕಾರ ಈ ವಿಚಾರದಲ್ಲಿ ಮೌನ ವಹಿಸಿದೆ’ ಎಂದು ತಿಳಿಸಿದರು.

Live from KPCC https://t.co/LKnKIanrM2

— Karnataka Congress (@INCKarnataka) October 1, 2021

ಈ ವೇಳೆ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಸುಪ್ರಿಯಾ ಅವರು 10 ಪ್ರಶ್ನೆಗಳನ್ನು ಕೇಳಿದ್ದು ಅವುಗಳು ಹೀಗಿವೆ;

  • 1) ದೇಶದಲ್ಲಿ ಡ್ರಗ್ಸ್ ಜಾಲ ನಿರಾತಂಕವಾಗಿ ಕಾರ್ಯಚಟುವಟಿಕೆ ನಡೆಸುತ್ತಿದ್ದು, 3 ಸಾವಿರ ಕೆ.ಜಿ ಹೆರಾಯಿನ್ ಪತ್ತೆಯಾಗಿರುವುದು ಇದಕ್ಕೆ ಸಾಕ್ಷಿಯಾಗಿದೆ. ಇದು ದೇಶದ ಯುವಕರ ಭವಿಷ್ಯಕ್ಕೆ ಮಾರಕವಲ್ಲವೇ?
  • 2) ಕಳೆದ ಜೂನ್ ನಲ್ಲಿ ಆಮದುಗೊಂಡ 1.75ಲಕ್ಷ ಕೋಟಿ ಮೌಲ್ಯದ 25 ಸಾವಿರ ಕೆ.ಜಿ ಹೆರಾಯಿನ್ ನಾಪತ್ತೆಯಾಗಿದ್ದು, ಇದರ ಬಗ್ಗೆ ಈವರೆಗೂ ತನಿಖೆ ನಡೆಸಿಲ್ಲ ಯಾಕೆ?
  • 3) ಭಾರತದ ಮಾದಕದ್ರವ್ಯ ನಿಯಂತ್ರಣ ಮಂಡಳಿ, ಸಿಬಿಐಐ, ಇಡಿ, ಡಿಆರ್ ಐ ಸಂಸ್ಥೆಗಳು ಏನು ಮಾಡುತ್ತಿವೆ? ಇವು ಕೇವಲ ರಾಜಕೀಯ ಎದುರಾಳಿಗಳ ವಿರುದ್ಧ ಬಳಸುವ ಅಸ್ತ್ರವಾಗಿದೆಯಾ?
  • 4) ತಾಲಿಬಾನ್ ನಿಯಂತ್ರಣದಲ್ಲಿರುವ ಆಫ್ಘಾನಿಸ್ತಾನದಿಂದ ದೇಶಕ್ಕೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಡ್ರಗ್ಸ್ ರವಾನೆಯಾಗುತ್ತಿದ್ದು, ಇದು ದೇಶದ ಭದ್ರತೆಗೆ ಅಪಾಯಕಾರಿಯಲ್ಲವೇ?
  • 5) ಪ್ರಭಾವಿ ವ್ಯಕ್ತಿ ಹೊರತಾಗಿ ಇತರರು ಇಷ್ಟು ದೊಡ್ಡ ಮಟ್ಟದ ಡ್ರಗ್ಸ್ ಆಮದು ಮಾಡಿಕೊಳ್ಳಲು ಸಾಧ್ಯವೇ? ಈ ಬಗ್ಗೆ ಪ್ರಧಾನಮಂತ್ರಿಗಳಾಗಲಿ, ಗೃಹಮಂತ್ರಿಗಳಾಗಲಿ ಅನುಮಾನಾಸ್ಪದ ಮೌನಕ್ಕೆ ಶರಣಾಗಿರುವುದೇಕೆ?
  • 6) ಈ ಪ್ರಕರಣದಲ್ಲಿ ಅದಾನಿ ಮುಂದ್ರಾ ಬಂದರಿನ ವಿಚಾರಣೆ ನಡೆದಿಲ್ಲ ಯಾಕೆ? ಗುಜರಾತಿನಲ್ಲಿರುವ ಈ ಕಂಪನಿ ದೇಶಕ್ಕೆ ಡ್ರಗ್ಸ್ ಸರಬರಾಜು ಮಾಡುವ ರಹದಾರಿಯಾಗಿ ಮಾರ್ಪಟ್ಟಿದೆ?
  • 7) ವಿಶೇಷ ನ್ಯಾಯಾಲಯದ ಅಭಿಪ್ರಾಯದಂತೆ ಮುಂದ್ರಾ ಬಂದರು ನಡೆಸುತ್ತಿರುವ ಅದಾನಿ ಗ್ರೂಪ್ ಈ ಆಮದಿನಿಂದ ಲಾಭ ಪಡೆಯುತ್ತಿಲ್ಲವೇ?
  • 8) ಕಳೆದ 18 ತಿಂಗಳಿನಿಂದ ದೇಶದ ಮಾದಕ ದ್ರವ್ಯ ನಿಯಂತ್ರಣ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರ ಹುದ್ದೆ ಖಾಲಿ ಇರುವುದೇಕೆ?
  • 9) ರಾಷ್ಟ್ರೀಯ ಭದ್ರತೆ ವಿಚಾರವಾಗಿ ಪ್ರಧಾನಮಂತ್ರಿಗಳು ಹಾಗೂ ಕೇಂದ್ರ ಸರ್ಕಾರ ಪದೇ ಪದೆ ವಿಫಲರಾಗುತ್ತಿರುವುದೇಕೆ?
  • 10) ದೇಶದ ಯುವಕರ ಭವಿಷ್ಯಕ್ಕೆ ಮಾರಕವವಾಗಿರುವ ಈ ಡ್ರಗ್ಸ್ ಪ್ರಕರಣದಲ್ಲಿ ಹಾಲಿ ಸುಪ್ರಿಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯುತ್ತಿಲ್ಲ ಯಾಕೆ?

ಈ ಸಂದರ್ಭದಲ್ಲಿ ಕೆಪಿಸಿಸಿ ಮಾಧ್ಯಮ ವಿಭಾಗ ಮುಖ್ಯಸ್ಥರಾದ ಬಿ.ಎಲ್ ಶಂಕರ್, ಎಐಸಿಸಿ ವಕ್ತಾರರಾದ ಭವ್ಯ ನರಸಿಂಹಮೂರ್ತಿ, ಕೆಪಿಸಿಸಿ ಸಂವಹನ ಹಾಗೂ ಮಾಧ್ಯಮ ವಿಭಾಗದ ಸಹ ಸಂಚಾಲಕರಾದ ರಾಮಚಂದ್ರಪ್ಪ ಹಾಗೂ ಸಲೀಂ ಅವರು ಇದ್ದರು.

Tags: adani groupCongressdrugs from Afghanistandrugs smugglingGujratindiakarnatakaSupriya Shrinate
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಬಾಪು ಎಂಬ ಬೆಳಕು

ಬಾಪು ಎಂಬ ಬೆಳಕು

Leave a Reply Cancel reply

Your email address will not be published. Required fields are marked *

Recommended

ಶಿಕ್ಷಣ ನೀತಿ ಬಗ್ಗೆ ಅಲ್ಪಸಂಖ್ಯಾತರಿಗೆ ಅನುಮಾನ ಬೇಡ

ಶಿಕ್ಷಣ ನೀತಿ ಬಗ್ಗೆ ಅಲ್ಪಸಂಖ್ಯಾತರಿಗೆ ಅನುಮಾನ ಬೇಡ

4 years ago
ಕೊನೆಗೂ ಸೂಪರ್‌ಸ್ಟಾರ್‌ ರಜನೀಕಾತ್‌ ಪೊಲಿಟಿಕಲ್‌ ಎಂಟ್ರಿ; ಈ ತಿಂಗಳ 31ರಂದೇ ಹೊಸಪಕ್ಷ, 2021 ಎಲೆಕ್ಷನ್‌ಗೆ ತಯಾರಿ

ಕೊನೆಗೂ ಸೂಪರ್‌ಸ್ಟಾರ್‌ ರಜನೀಕಾತ್‌ ಪೊಲಿಟಿಕಲ್‌ ಎಂಟ್ರಿ; ಈ ತಿಂಗಳ 31ರಂದೇ ಹೊಸಪಕ್ಷ, 2021 ಎಲೆಕ್ಷನ್‌ಗೆ ತಯಾರಿ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ