• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಇಂದಿನ ಹೋರಾಟಗಳು ಪ್ರಚಾರಕ್ಕಾಗಿ, ಸುದ್ದಿಗಾಗಿ ಹಾಗೂ ಮನವಿ ಪತ್ರ ನೀಡುವುದಕ್ಕೆ ಸೀಮಿತ: ಜಿ.ವಿ.ಶ್ರೀರಾಮರೆಡ್ಡಿ

cknewsnow desk by cknewsnow desk
October 2, 2021
in STATE
Reading Time: 1 min read
0
ಇಂದಿನ ಹೋರಾಟಗಳು ಪ್ರಚಾರಕ್ಕಾಗಿ, ಸುದ್ದಿಗಾಗಿ ಹಾಗೂ ಮನವಿ ಪತ್ರ ನೀಡುವುದಕ್ಕೆ ಸೀಮಿತ: ಜಿ.ವಿ.ಶ್ರೀರಾಮರೆಡ್ಡಿ
1.2k
VIEWS
FacebookTwitterWhatsuplinkedinEmail

ಡಿಗ್ರಿ ಓದುವಾಗಲೇ 76 ಕ್ರಿಮಿನಲ್ ಮೊಕದ್ದಮೆ ಎದುರಿಸಿದ್ದ ಜಿವಿಎಸ್

by Ra Na Gopala Reddy Bagepalli

ಬಾಗೇಪಲ್ಲಿ: ಇತ್ತೀಚಿನ ದಿನಗಳಲ್ಲಿ ಕಾಟಾಚಾರಕ್ಕೆ, ಸುದ್ದಿಗಾಗಿ, ಪ್ರಚಾರಕ್ಕಾಗಿ ಹಾಗೂ ಮನವಿ ಪತ್ರಗಳನ್ನ ನೀಡುವುದಕ್ಕೆ ಮಾತ್ರ ಹೋರಾಟಗಳನ್ನು ಸೀಮಿತಗೊಳಿಸಿರುವ ಪರಿಣಾಮ ಹೋರಾಟಗಳ ಮತ್ತು ಹೋರಾಟಗಾರರ ಬಗ್ಗೆ ಜನರು ನಂಬಿಕೆ ಕಳೆದುಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರಜಾ ಸಂಘರ್ಷ ಸಮಿತಿ ಸಂಸ್ಥಾಪಕ ಹಾಗೂ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದರು.

ಪ್ರಜಾ ಸಂಘರ್ಷ ಸಮಿತಿ ವತಿಯಿಂದ ಶನಿವಾರ ಪಟ್ಟಣದ ರಾಯಲ್ ಫಕ್ಷನ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂ.ಜಿ.ವಿ.ಅಶ್ವತ್ಥನಾರಾಯಣರೆಡ್ಡಿ ಅವರ 11ನೇ ವರ್ಷದ ವರ್ಧಂತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಮುಂದುವರಿದು ಅವರು ಹೇಳಿದ್ದಿಷ್ಟು;

ಕಾಂ.ಜಿ.ವಿ.ಅಶ್ವತ್ಥನಾರಾಯಣರೆಡ್ಡಿ ಅವರು 1972ರಲ್ಲಿ ಭೂಮಿ ಹೋರಾಟ ಪ್ರಾರಂಭ ಮಾಡಿದವರಲ್ಲಿ ಮೊದಲಿಗರು. ಭಂಜರ ಭೂಮಿ ಬಡವರಿಗೆ ಹಂಚಿಕೆ ಮಾಡುವಲ್ಲಿ ಹೋರಾಟ ಮಾಡಿ ಒಂದೇ ತಿಂಗಳಿನಲ್ಲಿ ಇಡೀ ಜಿಲ್ಲೆಯಲ್ಲಿಯೇ ವ್ಯಾಪಿಸಿತು.ಇದರಲ್ಲಿ ಬಾಗೇಪಲ್ಲಿ ತಾಲ್ಲೂಕು ಸೇರಿಕೊಂಡಿತ್ತು. ಈ ಹೋರಾಟದಲ್ಲಿ 3600 ಜನ ಜೈಲು ಸೇರಿದ್ದರು. ಇದರಲ್ಲಿ ಮೂಂಚೂಣಿಯಲ್ಲಿದ್ದ ನಾಯಕರೇ ಅಶ್ವತ್ಥನಾರಾಯಣರೆಡ್ಡಿ .

ಈ ಹೋರಾಟದ ಪ್ರತಿಫಲವಾಗಿ 12 ಲಕ್ಷ ಕುಟುಂಬಗಳಿಗೆ ಸರ್ಕಾರ ಭೂಮಿ ನೀಡಲು ಸಾಧ್ಯವಾಯಿತು. ಈ ಭೂಮಿ ಹೋರಾಟದಲ್ಲಿ ನಾನು ಸಹ ಭಾಗಿಯಾಗಿ ಜೈಲಿಗೆ ಹೋಗಬೇಕಾಯಿತು. ಅಂದು ನಾನು ಪದವಿ ವ್ಯಾಸಂಗ ಮಾಡುತ್ತಿದ್ದ ಸಮಯದಲ್ಲಿ ನನ್ನ ಮೇಲೆ 76 ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಿದ್ದರು. ಅಂದಿನ ಹೋರಾಟಗಳಿಗೂ ಇಂದಿನ ಹೋರಾಟಗಳಿಗೂ ಅಜಗಜಾಂತರ ವ್ಯತ್ಯಾಸವಿದೆ. ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಬಡವರಿಗೆ ಭೂಮಿ ಹಂಚಿಕೆ ಮಾಡಬೇಕೆಂದು 1982ರಲ್ಲಿ ಹೋರಾಟ ಪ್ರಾರಂಭವಾಯಿತು. ಈ ಹೋರಾಟದ ಮುಂದಾಳತ್ವವನ್ನು ಕಾಂ.ಜಿ.ವಿ.ಅಶ್ವತ್ಥನಾರಾಯಣರೆಡ್ಡಿ ವಹಿಸಿದ್ದರು.

ಇಂದಿನ ಹೋರಾಟಗಳು ಕೇವಲ ಪ್ರಚಾರಕ್ಕಾಗಿ, ಸುದ್ದಿಗಾಗಿ ಹಾಗೂ ಮನವಿ ಪತ್ರಗಳನ್ನು ನೀಡುವುದಕ್ಕೆ ಸೀಮಿತಗೊಂಡಿವೆ ಕನಿಷ್ಠ ನಮ್ಮ ವಿರೋಧಿಗಳು ಸಹ ಹೋರಾಟಗಳನ್ನು ಗಂಭೀರವಾಗಿ ಪರಿಗಣಿಸದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಹೋರಾಟಗಳು ತ್ರೀವ್ರವಾಗಬೇಕು. ದೀರ್ಘಕಾಲಿಕ ಹೋರಾಟಗಳಾಗಿರಬೇಕು, ಯಾವುದೇ ಸಮಸ್ಯೆಯನ್ನು ತೆಗೆದುಕೊಂಡು ಹೋರಾಟ ಪ್ರಾರಂಭ ಮಾಡಿದರೆ ಅದಕ್ಕೆ ಒಂದು ಅಂತಿಮ ಸ್ವರೂಪವನ್ನು, ಅಂತಿಮ ಫಲಿತಾಂಶವನ್ನು ಪಡೆಯುವ ರೀತಿಯಲ್ಲಿ ಹೋರಾಟಗಳನ್ನು ನಡೆಸಿದರೆ ಮಾತ್ರ ಹಿಂದಿನ ಹೋರಾಟಗಳಿಗೆ ನಾವು ಗೌರವ ನೀಡಿದಂತಾಗುತ್ತದೆ.

ಭೂಮಿ, ಕೂಲಿ,ಮನೆ, ನಿವೇಶನ ಸೇರಿದಂತೆ ಮೂಲಭೂತ ಸಮಸ್ಯೆಗಳ ತೆಗೆದುಕೊಂಡು ಹೋರಾಟ ಮಾಡುತ್ತಿದ್ದರು ಆದರೆ ಉಳುವವನಿಗೆ ಭೂಮಿ ಕೊಡಿ ಎನ್ನುವ ಹೋರಾಟದ ಬದಲಿಗೆ ನಮ್ಮ ಭೂಮಿ ಕಾಯಂ ಮಾಡಿ ಎನ್ನುವ ರೀತಿಯಲ್ಲಿ ಹೋರಾಟಗಳನ್ನು ರೂಪಿಸುವ ಮೂಲಕ ಈ ಹಿಂದಿನ ಹೋರಾಟಗಳ ಸ್ವರೂಪವೇ ಬದಲಿಸಲಾಗಿದೆ.

ರಾಜಕೀಯ ಅಧಿಕಾರ ಇಲ್ಲದೆ ಯಾವುದೇ ಕೆಲಸ ಮಾಡಲು ಸಾಧ್ಯವಿಲ್ಲ ಎನ್ನುವಂಥ ಮನೋಭಾವ ಜನರಲ್ಲಿ ಬಂದಿದೆ. ಆದರೆ ರಾಜಕೀಯ ಅಧಿಕಾರ ಬೇಕು ಎನ್ನುವ ಉದ್ದೇಶ ಅಂದಿನ ದಿನಗಳಲ್ಲಿ ಹೋರಾಟಗಾರರಲ್ಲಿ ಇರಲಿಲ್ಲ, ಕಾಂ.ಜಿ.ವಿ.ಅಶ್ವತ್ಥನಾರಾಯಣರೆಡ್ಡಿ ಅವರು ಯಾವುದೇ ರಾಜಕೀಯ ಅಧಿಕಾರವನ್ನು ಬಯಸದೆ ನಿರಂತರವಾಗಿ ಬಡವರ ಸಮಸ್ಯೆಗಳ ಪರಿಹಾರಕ್ಕಾಗಿ ಇಡೀ ತಮ್ಮ ಜೀವನವನ್ನೇ ಮುಡಪಾಗಿಟ್ಟಂತಹ ಹೋರಾಟಗಾರ ಇಂತಹ ಹೋರಾಟಗಾರರ ಹಾದಿಯಲ್ಲಿ ಮೂಲಭೂತ ಸಮಸ್ಯೆಗಳ ಬಗ್ಗೆ ನಿಸ್ವಾರ್ಥವಾಗಿ ಫಲಿತ ಸಿಗುವವರೆವಿಗೂ ಹೋರಾಟಗಳನ್ನು ಮಾಡುವುದನ್ನು ಹೋರಾಟಗಾರರು ಮೈಗೂಡಿಸಿಕೊಳ್ಳಬೇಕಾಗಿದೆ.

ಈ ಸಂದರ್ಭದಲ್ಲಿ ಪ್ರಜಾ ಸಂಘರ್ಷ ಸಮಿತಿಯ ಚೆನ್ನರಾಯಪ್ಪ, ನಲ್ಲಪರೆಡ್ಡಿಪಲ್ಲಿ ಅರ್.ಎನ್ .ರಾಜು, ಗೋಪಾಲಕೃಷ್ಣ, ಜುಬೇರ್, ಎಲ್.ವೆಂಕಟೇಶ್, ಟಿ.ವೆಂಕಟೇಶ್, ಜಿ.ಎಂ.ರಾಮಕೃಷ್ಣಪ್ಪ ಮತ್ತಿತರರು ಇದ್ದರು.

Tags: bagepallichikkaballapuracknewsnowG V Sreerama Reddynewsprotestpss
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ವನ್ಯಜೀವಿ ಸಪ್ತಾಹ ಕಾರ್ಯಕ್ರಮಕ್ಕೆ ಶಾಲಾ ಮಕ್ಕಳಿಂದ ಚಾಲನೆ

ವನ್ಯಜೀವಿ ಸಪ್ತಾಹ ಕಾರ್ಯಕ್ರಮಕ್ಕೆ ಶಾಲಾ ಮಕ್ಕಳಿಂದ ಚಾಲನೆ

Leave a Reply Cancel reply

Your email address will not be published. Required fields are marked *

Recommended

ಸಿದ್ದರಾಮಯ್ಯ ಅವಧಿಯಲ್ಲಿ 32 ಕೊಲೆಗಳಾಗಿವೆ

ಸಿದ್ದರಾಮಯ್ಯಗೆ ಜೀವ ಬೆದರಿಕೆ

4 years ago
ಚಿಕ್ಕಬಳ್ಳಾಪುರ ಜಿಲ್ಲೆಯ ಇಬ್ಬರು ಶಿಕ್ಷಕರಿಗೆ ಸಾವಿತ್ರಿ ಭಾಯಿ ಪುಲೆ ಪ್ರಶಸ್ತಿ

ಚಿಕ್ಕಬಳ್ಳಾಪುರ ಜಿಲ್ಲೆಯ ಇಬ್ಬರು ಶಿಕ್ಷಕರಿಗೆ ಸಾವಿತ್ರಿ ಭಾಯಿ ಪುಲೆ ಪ್ರಶಸ್ತಿ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ