• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ವರ್ಷಕ್ಕೆ 5 ಲಕ್ಷ ವಿದ್ಯಾರ್ಥಿಗಳಿಗೆ ಕೌಶಲ್ಯ ಗುರಿ

cknewsnow desk by cknewsnow desk
October 12, 2021
in NEWS IN USE, STATE
Reading Time: 1 min read
0
ವರ್ಷಕ್ಕೆ 5 ಲಕ್ಷ ವಿದ್ಯಾರ್ಥಿಗಳಿಗೆ ಕೌಶಲ್ಯ ಗುರಿ
946
VIEWS
FacebookTwitterWhatsuplinkedinEmail

ನಾಸ್ಕಾಂ ಜತೆ ಉನ್ನತ ಶಿಕ್ಷಣ ಪರಿಷತ್ ಒಡಂಬಡಿಕೆ

  • ಡಿಗ್ರಿಯ ಮೂರು ವರ್ಷಗಳಲ್ಲಿ 3 ಕೋರ್ಸ್ ಲಭ್ಯ
  • ಟ್ಯಾಬ್ಲೆಟ್, ಸ್ಮಾರ್ಟ್ ಫೋನ್ ಮೂಲಕವೂ ಕಲಿಕೆಗೆ ಅವಕಾಶ

ಬೆಂಗಳೂರು: ಉದ್ಯಮರಂಗವು ನಿರೀಕ್ಷಿಸುವಂತಹ ಕೌಶಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಮಹತ್ವಾಕಾಂಕ್ಷೆಯಿಂದ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಇಂದು ನಾಸ್ಕಾಂ (ನ್ಯಾಷನಲ್ ಅಸೋಸಿಯೇಷನ್ ಆಫ್ ಸಾಫ್ಟ್ವೇರ್ ಅಂಡ್ ಸರ್ವೀಸ್ ಕಂಪನೀಸ್) ಜೊತೆ ಒಡಂಬಡಿಕೆಗೆ ಸಹಿ ಹಾಕಿತು.

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ವಿಧಾನಸೌಧದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಇದಕ್ಕೆ ಅಂಕಿತ ಹಾಕಲಾಯಿತು.

ಬಳಿಕ ಮಾತನಾಡಿದ ಸಚಿವರು, ಒಡಂಬಡಿಕೆಯು ರಾಜ್ಯದ ಎಲ್ಲ ಸರಕಾರಿ ಮತ್ತು ಖಾಸಗಿ ಕಾಲೇಜು/ ವಿಶ್ವವಿದ್ಯಾಲಯಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ. ಇದರಿಂದ ಪ್ರತೀವರ್ಷ 5 ಲಕ್ಷ ವಿದ್ಯಾರ್ಥಿಗಳಿಗೆ ಮತ್ತು ಬೋಧಕರಿಗೆ ಲಾಭವಾಗಲಿದೆ ಎಂದು ಹೇಳಿದರು.

ಈ ಉಪಕ್ರಮದಿಂದಾಗಿ ನಾಸ್ಕಾಂನ `ಫ್ಯೂಚರ್ ಸ್ಕಿಲ್ಸ್ ಪ್ರೈಮ್’ ವೇದಿಕೆಯಲ್ಲಿರುವ ಕೌಶಲ್ಯಾಭಿವೃದ್ಧಿ ಕೋರ್ಸುಗಳು ರಾಜ್ಯದ ಪದವಿ ವಿದ್ಯಾರ್ಥಿಗಳಿಗೆ ಮತ್ತು ಬೋಧಕರಿಗೆ ಆನ್-ಲೈನ್ ಮೂಲಕ ಸುಲಭವಾಗಿ ಲಭ್ಯವಾಗಲಿವೆ. ಈ ಒಡಂಬಡಿಕೆಯಲ್ಲಿ ಗುಣಮಟ್ಟದಿಂದ ಕೂಡಿರುವ ಕೋರ್ಸುಗಳು, ಬೋಧಕ ಸಿಬ್ಬಂದಿಗೆ ತರಬೇತಿ ಮತ್ತು ಮೂಲಸೌಲಭ್ಯ ಸಂಪನ್ಮೂಲಗಳ ಅಭಿವೃದ್ಧಿಗೆ ಆದ್ಯ ಗಮನ ಕೊಡಲಾಗಿದೆ ಎಂದರು.

Namma Karnataka is at the forefront of implementing the National Education Policy. As part of the implementation of NEP, curriculum design is done by subject experts committees and skill development courses are created in the UG curriculum.#NEP2020 #NEPKarnataka pic.twitter.com/tTMFZ7ODyU

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) October 12, 2021

ಮೂರು ವರ್ಷಕ್ಕೆ ಮೂರು ಕೋರ್ಸ್

ಈ ಒಡಂಬಡಿಕೆಯ ಫಲವಾಗಿ, ಕಂಪ್ಯೂಟರ್ ವಿಜ್ಞಾನವನ್ನು ಹೊರತುಪಡಿಸಿ ಬೇರೆ ವಿಭಾಗಗಳಲ್ಲಿರುವ ವಿದ್ಯಾರ್ಥಿಗಳಿಗೆ ಮತ್ತು ಬೋಧಕರಿಗೆ ಪದವಿಯ ಮೊದಲನೇ ವರ್ಷದಲ್ಲಿ ಡಿಜಿಟಲ್ ಫ್ಲೂಯೆನ್ಸಿ, ಎರಡನೇ ವರ್ಷದಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (ಎಐ) ಮತ್ತು ಮೂರನೇ ವರ್ಷದಲ್ಲಿ ಸೈಬರ್ ಸೆಕ್ಯುರಿಟಿ ಕೋರ್ಸುಗಳು ಲಭ್ಯವಾಗಲಿದ್ದು, ಇವುಗಳ ಕಲಿಕೆ ಕಡ್ಡಾಯವಾಗಿದೆ. ಈ ಕೋರ್ಸುಗಳನ್ನು ಮೈಕ್ರೋಸಾಫ್ಟ್ ಮತ್ತು ಸಿಸ್ಕೋ ಕಂಪನಿಗಳು ರೂಪಿಸಿದ್ದು, ಇವುಗಳ ಮೂಲಕ ವಿದ್ಯಾರ್ಥಿಗಳಿಗೆ ಕೌಶಲ್ಯಗಳನ್ನು ಕಲಿಸಲಾಗುವುದು. ಇದನ್ನು ಕಲಿಯಲು ಯಾವುದೇ ಶುಲ್ಕದ ಹೊರೆ ಇರುವುದಿಲ್ಲ ಎಂದು ಸಚಿವರು ವಿವರಿಸಿದರು.

ವಿದ್ಯಾರ್ಥಿಗಳು ತಮ್ಮ ಬಳಿ ಇರುವ ಟ್ಯಾಬ್ಲೆಟ್ ಮತ್ತು ಸ್ಮಾರ್ಟ್ ಫೋನುಗಳ ಮೂಲಕವೂ ಈ ಆನ್-ಲೈನ್ ಕೋರ್ಸುಗಳನ್ನು ಸುಲಭವಾಗಿ ಕಲಿಯಬಹುದು. ನಾಸ್ಕಾಂನ ಈ ಕೋರ್ಸುಗಳು ಎನ್ಎಸ್ ಕ್ಯೂಎಫ್ (ನ್ಯಾಷನಲ್ ಸ್ಕಿಲ್ಸ್ ಕ್ವಾಲಿಫಿಕೇಶನ್ ಫ್ರೇಂವರ್ಕ್) ರೂಪಿಸಿರುವ ಗುಣಮಟ್ಟ ಮಾನದಂಡಗಳಿಗೆ ಅನುಗುಣವಾಗಿವೆ ಎಂದು ಅಶ್ವತ್ಥ ನಾರಾಯಣ ನುಡಿದರು.

“ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿಗಳಲ್ಲಿ ಉದ್ಯೋಗಕ್ಷೇತ್ರವು ಬೇಡುವಂತಹ ಕೌಶಲ್ಯಗಳನ್ನು ಬೆಳೆಸಲು ಒತ್ತು ಕೊಟ್ಟಿದೆ. ಇದರಂತೆ, ಭಾರತವನ್ನು ಪ್ರವರ್ಧಮಾನಕ್ಕೆ ಬರುತ್ತಿರುವ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಕೌಶಲ್ಯಪೂರ್ಣ ಪ್ರತಿಭೆಗಳ ತೊಟ್ಟಿಲನ್ನಾಗಿ ಮಾಡುವುದು ಕೇಂದ್ರ ಸರಕಾರದ ಆಶಯವಾಗಿದೆ. ಇದಕ್ಕೆ ಪೂರಕವಾಗಿ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಇಡೀ ದೇಶದಲ್ಲಿ ನಾಸ್ಕಾಂ ಜೊತೆ ಸೇರಿಕೊಂಡು ಇಂತಹ ಒಡಂಬಡಿಕೆಗಳಿಗೆ ಅವಕಾಶ ಮಾಡಿಕೊಟ್ಟಿದೆ. ಈ ಮೂಲಕ ರಾಜ್ಯದಲ್ಲೂ ಡಿಜಿಟಲ್ ಯುಗಕ್ಕೆ ಸಮರ್ಥವಾಗಿ ಪರಿವರ್ತನೆ ಹೊಂದಲಾಗುವುದು. ಇದಕ್ಕಾಗಿ ರಾಜ್ಯ ಸರಕಾರವು ಯಾವುದೇ ವೆಚ್ಚವನ್ನು ಮಾಡಬೇಕಾಗಿಲ್ಲ,’’ ಎಂದು ಅವರು ವಿವರಿಸಿದರು.

ದೇಶದ ಐ.ಟಿ. ಸೇವಾ ವಲಯವು ಈಗ ವರ್ಷಕ್ಕೆ 150 ಶತಕೋಟಿ ಡಾಲರ್ ವಹಿವಾಟು ನಡೆಸುತ್ತಿದೆ. ಇದು 2025ರ ಹೊತ್ತಿಗೆ 350 ಶತಕೋಟಿ ಡಾಲರ್ ವಹಿವಾಟು ನಡೆಸುವ ಮಟ್ಟಕ್ಕೆ ಬೆಳೆಯಲಿದೆ. ಈಗ ರಾಷ್ಟ್ರದಲ್ಲಿರುವ ಡಿಜಿಟಲ್ ಪ್ರತಿಭಾವಂತರಿಗಿಂತ ಎಂಟು ಪಟ್ಟು ಹೆಚ್ಚಿನ ಬೇಡಿಕೆ ಇದ್ದು, 2024ರ ಹೊತ್ತಿಗೆ ಇದು 20 ಪಟ್ಟು ಹೆಚ್ಚಾಗಲಿದೆ. ಇದನ್ನೆಲ್ಲ ಗಂಭೀರವಾಗಿ ಪರಿಗಣಿಸಿ, ಹೊಸ ಹೆಜ್ಜೆಗಳನ್ನು ಇಡಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

“ದೇಶದಲ್ಲಿ ಈಗ ಸಾಕಷ್ಟು ಉದ್ಯೋಗಗಳು ಲಭ್ಯವಾಗುತ್ತಿವೆ. ಆದರೆ, ಅದಕ್ಕೆ ಅರ್ಹರಾದ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲ. ಇಂದು ತಂತ್ರಜ್ಞಾನದ ನೆರವಿಲ್ಲದೆ ಯಾವ ವೃತ್ತಿಯನ್ನೂ ಸಮರ್ಥವಾಗಿ ನಿರ್ವಹಿಸಲು ಸಾಧ್ಯವಿಲ್ಲ. ಇದನ್ನು ಮನಗಂಡು, ನಾವು ಸಕಾರಾತ್ಮಕವಾಗಿ ಇಂತಹ ಹೆಜ್ಜೆಗಳನ್ನು ಇಡುತ್ತಿದ್ದೇವೆ. ಎನ್ಇಪಿ ಜಾರಿಯಲ್ಲಿ ಕರ್ನಾಟಕವು ರಾಜ್ಯಗಳಿಗಿಂತ ಮುಂಚೂಣಿಯಲ್ಲಿದೆ’’ ಎಂದು ಅವರು ಹೇಳಿದರು.

ನಾಸ್ಕಾಂ ಪರವಾಗಿ ನವನೀತ್ ಸಮೈಯಾರ್ ಮತ್ತು ದಿನೇಶ್ ಕುಮಾರ್ ಪಾಣಿಗ್ರಾಹಿ ಇದ್ದು, ಒಪ್ಪಂದ ಪತ್ರಗಳನ್ನು ವಿನಿಮಯ ಮಾಡಿಕೊಂಡರು.

ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ಬಿ.ತಿಮ್ಮೇಗೌಡ, ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ. ಗೋಪಾಲಕೃಷ್ಣ ಜೋಶಿ, ಆಡಳಿತಾಧಿಕಾರಿ ಡಾ.ಟಿ.ಎನ್.ತಾಂಡವೇಗೌಡ ಈ ಸಂದರ್ಭದಲ್ಲಿ ಉಪಸ್ಥಿತರಿದರು.

Tags: cknewsnowdr cn ashwath narayankarnatakanep2020newsskillskill development
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಆಡಳಿತದ ಅಸಡ್ಡೆ; ಅಳಿವಿನತ್ತ ಐತಿಹಾಸಿಕ ಸಂಪತ್ತು

ಆಡಳಿತದ ಅಸಡ್ಡೆ; ಅಳಿವಿನತ್ತ ಐತಿಹಾಸಿಕ ಸಂಪತ್ತು

Leave a Reply Cancel reply

Your email address will not be published. Required fields are marked *

Recommended

ಹೊರೆ ಆಗಿರುವ ಸಚಿವರಿಗೆ ಗೇಟ್‌ಪಾಸ್

ಹೊರೆ ಆಗಿರುವ ಸಚಿವರಿಗೆ ಗೇಟ್‌ಪಾಸ್

4 years ago
ಕಮ್ಯುನಿಸ್ಟರು ಮತ್ತು ಕಾಂಗ್ರೆಸ್‌ 7 ದಶಕದ ಆಡಳಿತದಿಂದ  ಭ್ರಮನಿರಸನಗೊಂಡ ಕೇರಳದಲ್ಲಿ ಬಿಜೆಪಿಯತ್ತ ಒಲವು; ದೇವರ ನಾಡಿನಲ್ಲಿ ಬದಲಾವಣೆಯ ಗಾಳಿ ಎಂದ ಡಿಸಿಎಂ

ಈ ವರ್ಷ ಆನ್ಲೈನ್ ಪರೀಕ್ಷೆ ನಡೆಸಲು ಸಾಧ್ಯವಿಲ್ಲ; ಮುಂದಿನ ಶೈಕ್ಷಣಿಕ ವರ್ಷದಲ್ಲಿ ಆನ್ಲೈನ್ ತರಗತಿಗಳು ಖಂಡಿತಾ ಇರುತ್ತವೆ ಎಂದ ಡಿಸಿಎಂ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ