• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಅರ್ಥಪೂರ್ಣ ಚಿತ್ರಾವತಿ ಉತ್ಸವ

cknewsnow desk by cknewsnow desk
October 19, 2021
in STATE
Reading Time: 1 min read
0
ಅರ್ಥಪೂರ್ಣ ಚಿತ್ರಾವತಿ ಉತ್ಸವ
1k
VIEWS
FacebookTwitterWhatsuplinkedinEmail

ತುಂಬಿ ಹರಿದ ಗಂಗೆಗ ಬಾಗೀನ; ನದಿ ಸ್ವಚ್ಛತೆಗೆ ಸಂಕಲ್ಪ

by Ra Na Gopala Reddy Bagepalli

ಬಾಗೇಪಲ್ಲಿ: ಎರಡು ತಾಲೂಕುಗಳ ಜೀವನಾಡಿ ಆಗಿರುವ ಹಾಗೂ ಉತ್ತಮ ಮಳೆಯಿಂದ ತುಂಬಿ ಹರಿಯುತ್ತಿರುವ ಚಿತ್ರಾವತಿ ಅಣೆಕಟ್ಟೆಯ ಬಳಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪರಗೋಡು ಗ್ರಾಮ ಪಂಚಾಯಿತಿ  ವತಿಯಿಂದ ಇದೇ ಮೊದಲ ಬಾರಿಗೆ ʼಚಿತ್ರಾವತಿ ನದಿ ಉತ್ಸವʼವನ್ನು ಸೋಮವಾರ ಏರ್ಪಡಿಸಲಾಗಿತ್ತು.

ಚಿತ್ರಾವತಿ ಬ್ಯಾರೇಜಿನ ಪ್ರವೇಶ ದ್ವಾರದಿಂದ ಅಣೆಕಟ್ಟೆಯವರೆಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಡೊಳ್ಳು ಕುಣಿತ, ತಮಟೆ ವಾದನ, ವೀರಗಾಸೆ ಇತ್ಯಾದಿ ವಿವಿಧ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಲಾಯಿತು. ಸುಗಮ ಸಂಗೀತದ ತಂಡ ಸುಶ್ರಾವ್ಯವಾಗಿ ಗೀತ ಗಾಯನ ಮಾಡಿ ಶೋತೃಗಳನ್ನು ರಂಜಿಸಿದರು.

ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರು ಚಿತ್ರಾವತಿಗೆ ಪುರೋಹಿತರ ವೇದಘೋಷ ಮಂತ್ರಗಳೊಂದಿಗೆ ಸೀರೆ, ಕುಪ್ಪಸ, ಹರಿಷಿನ, ಕುಂಕುಮ, ಹೂವು, ಹಣ್ಣು ಬಳೆ ತುಂಬಿದ ಮರವನ್ನು ನೀರಿಗೆ ಬಿಡುವುದರ ಮೂಲಕ ಗಂಗೆಗೆ ಬಾಗೀನ ಅರ್ಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಸ್.ಎನ್. ಸುಬ್ಬಾರೆಡ್ಡಿ; “ಪಟ್ಟಣದಲ್ಲಿ ಹಲವರು ದುರ್ನಾತ ಬೀರುತ್ತಿರುವ ತ್ಯಾಜ್ಯವನ್ನು ಚಿತ್ರಾವತಿಗೆ ನದಿಗೆ ಹಾಕಿ ಕಲುಷಿತ ಮಾಡುತ್ತಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚೆ ಮಾಡಿ ಕ್ರಮ ಜರುಗಿಸುತ್ತೇನೆ ಮತ್ತು ನಮ್ಮ ನದಿಯಿಂದ ಆಂಧ್ರಪ್ರದೇಶಕ್ಕೆ ಹರಿಯುವ ನೀರನ್ನು ಕೃಷಿ ಚಟುವಟಿಕೆಗಳಿಗೆ ಬಳಕೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಚಿತ್ರಾವತಿ ಜಲಾಶಯದಲ್ಲಿ ಗಿಡಗಂಟೆ ಹೂಳು ತೆಗೆಯುವ ಪ್ರಯತ್ನ ಮಾಡಿದರೆ ಸುಪ್ರಿಂ ಕೋರ್ಟಿನ ಆದೇಶ ಅಡ್ಡಿ ಬರಬಹುದು ಎಂಬ ಆತಂಕದಿಂದ ಹೂಳು ತೆಗೆಯಲು ಸಾಧ್ಯವಾಗಲಿಲ್ಲ. ಒಂದು ವೇಳೆ ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥವಾದರೆ ತಕ್ಷಣ ಚಿತ್ರಾವತಿ ಜಲಾಶಯಲ್ಲಿ ಎಲ್ಲಾ ಗಿಡ ಗಂಟೆಗಳನ್ನು ತೆಗೆಸಿ ಸುಂದರವಾದ ಜಲಾಶಯವನ್ನಾಗಿ ರೂಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ” ಎಂದರು.

ಈ ಜಲಾಶಯದ ಪ್ರಮುಖ ರೂವಾರಿಗಳಾದ ಅಂದಿನ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹಾಗೂ ಅಂದಿನ ಸಂಸದ ಆರ್.ಎಲ್.ಜಾಲಪ್ಪ ಅವರನ್ನು ನೆನಪಿಸಿಕೊಳ್ಳಲೇಬೇಕು. ಮುಂದಿನ ದಿನಗಳಲ್ಲಿ ನೀರಾವರಿ ಯೋಜನೆಗಳು ಶಾಶ್ವತವಾಗಿ ಉಳಿಯುವಂತೆ ಕೆಲಸ ಮಾಡುತ್ತೇನೆ. ಹೆಚ್.ಎನ್.ವ್ಯಾಲಿ ಯೋಜನೆಯ ನೀರನ್ನು ತಾಲೂಕಿನ ಎಲ್ಲಾ ಕೆರೆಗಳಿಗೆ ತ್ವರಿತಗತಿಯಲ್ಲಿ ಹರಿಸುತ್ತೇನೆ ಎಂದರು ಅವರು.

ಕಾರ್ಯಕ್ರಮದ ಪ್ರಾರಂಭದಲ್ಲಿ ಕನ್ನಡ ಪ್ರಾಧ್ಯಾಪಕ ಡಾ.ಕೆ.ಎಂ.ನಯಾಜ್ ಅಹಮದ್ ಪ್ರಾಸ್ತಾವಿಕವಾಗಿ ಮಾತನಾಡಿ; “ನಮ್ಮದು ಗಂಗಾ ಸಂಸ್ಕೃತಿ, ನೀರು ಸಂಸ್ಕೃತಿ, ಜಲ ಸಂಸ್ಕೃತಿ, ದಲಿತ ಸಂಸ್ಕೃತಿ. ಗಂಗೆ ದಲಿತ ಹೆಣ್ಣು ಮಗಳು.  ನಮ್ಮ ಮನೆಗೆ ತಂಗಿಯಾದವಳು ಬಂದರೆ ಅಣ್ಣ ತಂಗಿಗೆ ಸೀರೆ ಕುಪ್ಪಸ ಅರಿಶಿಣ ಕುಂಕುಮ ಬಳೆ, ಹೂವು ಕೊಡುವ ಸಂಪ್ರದಾಯದಂತೆ ಗಂಗೆ ನಮ್ಮೂರಿಗೆ ಹರಿಯುತ್ತಾ ಬಂದರೆ ನಾವು ಕೊಡುವ ಬಾಗೀನ ಅದೇ ಅರ್ಥವನ್ನು ಹೊಂದಿರುತ್ತದೆ ಎಂದರು.

ಈ ಭಾಗದ ಜನತೆಗೆ ನೀರೆಂದರೆ ಬದುಕು. ನೀರೆಂದರೆ ಪ್ರಾಣವೂ ಹೌದು. ನೀರೆಂದರೆ ಎಲ್ಲವೂ ಹೌದು. ಬಿಸಿಲಿನ ಕಾವಿಗೆ ಕಾದ ಕಾವಲಿಯಾಂತಾಗುವ ಇಲ್ಲಿನ ಭೂಮಿಗೆ ಮಳೆಯಂದರೆ ತನ್ನ ಪ್ರಿಯಕರ ಬಂದಷ್ಷೆ ಸಂತೋಷ ಎಂದರು ಅವರು.

ಇಲ್ಲಿನ ನದಿಗೆ ನಮ್ಮ ಪೂರ್ವಿಕರು ದೇವಲೋಕದ ಅಪ್ಸರೆ ಚಿತ್ರಾವತಿಯ ಹೆಸರನ್ನೇ ಇಟ್ಟಿದ್ದಾರೆ. ಚಿತ್ರೆ ತುಂಬ ಸೌಂದರ್ಯವತಿ, ಚಿತ್ರಾವತಿ ನದಿಯ ಉದ್ದಕ್ಕೂ ಇರುವ ದೇಗುಲಗಳನ್ನು ತಾಗಿಕೊಂಡು ಮುಂದಕ್ಕೆ ಪ್ರಯಾಣ ಬೆಳೆಸುತ್ತಾಳೆ. ಆದರೆ ಅಂತಹ ಹೆಸರನ್ನು ಪಡೆದ ನಮ್ಮ ಚಿತ್ರಾವತಿ ನದಿ ಈಗ ಕುರೂಪವಾಗಿದ್ದಾಳೆ. ಪಟ್ಟಣದಲ್ಲಿ ಉತ್ಪತ್ತಿಯಾಗುವ ಕಸಕಡ್ಡಿ ಮತ್ತಿತರೆ ತ್ಯಾಜ್ಯ ತುಂಬಿ ಕುರೂಪವನ್ನುಂಟು ಮಾಡಿದೆ. ಆದ್ದರಿಂದ ನದಿಯನ್ನು ಸ್ವಚ್ಛಗೊಳಿಸಬೇಕು, ನದಿಯ ಒತ್ತುವರಿಯನ್ನು ತೆರವುಗೊಳಿಸಬೇಕು. ನದಿಯ ಉದ್ದಕ್ಕೂ ಚಿಕ್ ಡ್ಯಾಂಗಳನ್ನು ನಿರ್ಮಾಣ ಮಾಡಿ ಆ ನೀರನ್ನು ನಿಲ್ಲಿಸಿಕೊಳ್ಳುವ ಪ್ರಯತ್ನ ಮಾಡಬೇಕು. ಈ ಚಿತ್ರಾವತಿ ನದಿಯ ಮಹತ್ವವನ್ನು ಅರಿವು ಮೂಡಿಸುವುದರ ಹಿನ್ನೆಲೆಯಲ್ಲಿ ಈ ಚಿತ್ರಾವತಿ ಉತ್ಸವವನ್ನು ಮಾಡಲಾಗುತ್ತಿದೆ ಎಂದು ಅವರು ಪ್ರತಿಪಾದಿಸಿದರು.

 ತಹಸೀಲ್ದಾರ್ ಡಿ.ಎ.ದಿವಾಕರ್ ಮಾತನಾಡಿ; ಚಿತ್ರಾವತಿ ನದಿ ಈ ಭಾಗದ ಒಂದು ಮುಖ್ಯ ನದಿಯಾಗಿದ್ದು, ಇದರ ಸುಂದರ ಸೌಂದರ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಆದ್ಯತೆ ನೀಡಲಾಗುವುದು ಎಂದರು.

ಇದಕ್ಕೂ ಮುನ್ನ ರಾಷ್ಟೀಯ ಹೆದ್ದಾರಿ ಮುಖ್ಯರಸ್ತೆಯಿಂದ ಶಾಸಕರನ್ನು ಡೊಳ್ಳು ಕುಣಿತ, ವೀರಗಾಸೆ, ತಮಟೆ ವಾದ್ಯ ಮಂಗಳ ವಾದ್ಯಗಳೊಂದಿಗೆ ಬರಮಾಡಿಕೊಂಡು ಸ್ವಾಗತ ಕೋರಲಾಯಿತು.

ಕಾರ್ಯಕ್ರಮದಲ್ಲಿ ಪುರಸಭೆ ಹಂಗಾಮಿ ಅಧ್ಯಕ್ಷ ಎ.ಶ್ರೀನಿವಾಸ, ಸ್ಥಾಯಿ ಸಮಿತಿ ಅಧ್ಯಕ್ಷ ಎ.ನಂಜುಂಡಪ್ಪ, ಕೆಪಿಸಿಸಿ ಸದಸ್ಯ ಅಮರನಾಥರೆಡ್ಡಿ, ಪೊಲೀಸ್ ವೃತ್ತ ನಿರೀಕ್ಷಕ ನಾಗರಾಜು, ಪರಗೋಡು ಗ್ರಾಪಂ ಅಧ್ಯಕ್ಷೆ ನಾಗಮಣಿ ಸದಾಶಿವರೆಡ್ಡಿ, ಉಪಾಧ್ಯಕ್ಷೆ ಶಾಂತಮ್ಮ ನರಸಿಂಹಪ್ಪ, ಪಿಡಿಒ ರಾಮಕೃಷ್ಣ, ತಾಪಂ ಮಾಜಿ ಅಧ್ಯಕ್ಷರಾದ ಎಸ್.ಎಸ್.ರಮೇಶ್ ಬಾಬು, ಕೆ.ಆರ್.ನರೇಂದ್ರಬಾಬು, ಜಪಂ ಮಾಜಿ ಸದಸ್ಯ ನರಸಿಂಹಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ನರೇಂದ್ರ, ಗ್ರಾಪಂ ಸದಸ್ಯರಾದ ರಾಜಪ್ಪ, ನಾಗರಾಜು, ಸುಬ್ಬಿರೆಡ್ಡಿ, ಶಿವಪ್ಪ ಮುಖಂಡರಾದ ರಾಮಿರೆಡ್ಡಿ, ಶ್ರೀನಿವಾಸರೆಡ್ಡಿ, ಹೆಚ್.ವಿ.ನಾಗರಾಜು, ನಂಜುಂಡಪ್ಪ, ಬಿ.ವಿ.ವೆಂಕಟರವಣ, ಸುಬ್ಬುರಾಯಪ್ಪ ಸೇರಿದಂತೆ ಹಲವಾರು ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹಾಜರಿದ್ದರು.

Tags: bagepallichikkaballapurachitravati riverchitravati utsavkarnatakamla sn subba reddyparagodu
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚಿತ್ರಾವತಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಚ್ಚೇಗೌಡ

ಚಿತ್ರಾವತಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಚ್ಚೇಗೌಡ

Leave a Reply Cancel reply

Your email address will not be published. Required fields are marked *

Recommended

ಕರ್ನಾಟಕದೊಳಗೆ ಆಂಧ್ರ ರಾಜಕೀಯ; ಚಕ್ರ ತಿರುಗಿಸುತ್ತಿದೆ ತೆಲುಗು ವೋಟ್‌ ಬ್ಯಾಂಕ್‌ !

ಶಾಲಾ ಶೌಚಾಲಯ ಶುಚಿಗೆ ವಿದ್ಯಾರ್ಥಿಗಳ ಬಳಕೆ ನಿಷೇಧ

2 years ago
39.45 ಲಕ್ಷ ಕೋಟಿ ರೂ. ವೆಚ್ಚದ ಬಜೆಟ್

ನಿರ್ಮಲಾ ಸೀತಾರಾಮನ್ ತಮಿಳುನಾಡಿನವರಾದ ಕಾರಣಕ್ಕೆ ಕಾವೇರಿ-ಪೆನ್ನಾರ್‌ ನದಿ ಜೋಡಣೆ ಪ್ರಸ್ತಾಪ ಮಾಡಿದ್ದಾರೆ!

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ